Author: admin

ತುಮಕೂರು:  ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಹಗಲು ಹೊತ್ತಿನಲ್ಲಿ ರೋಗಗಳನ್ನು ಹರಡುವಂತಹ ಸೊಳ್ಳೆಗಳ ಕಡಿತದಿಂದ ಮಕ್ಕಳಿಗೆ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿರುವ ಕಾರಣ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ–ಕಾಲೇಜುಗಳ ಕೊಠಡಿಗಳನ್ನು ಪರಿಶೀಲಿಸಿ ಸ್ವಚ್ಛತೆ ಹಾಗೂ ಸೊಳ್ಳೆಗಳ ನಿಯಂತ್ರಣಕ್ಕಾಗಿ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ವೀಡಿಯೋ ಕಾನ್ಪೆರೆನ್ಸ್ ಸಭಾಂಗಣದಲ್ಲಿ  ನಡೆದ ‘ಮುಂಗಾರು ಹಾಗೂ ಬರ ನಿರ್ವಹಣೆಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆಸ್ಪತ್ರೆಗಳ ಶಸ್ತ್ರಚಿಕಿತ್ಸೆ ಕೊಠಡಿಗಳು ಸೇರಿದಂತೆ ಆಸ್ಪತ್ರೆ ಆವರಣ ಸ್ವಚ್ಛತೆ ಕುರಿತಂತೆ ಕೈಗೊಂಡ ಕ್ರಮಗಳ ಬಗ್ಗೆ  ಮಾಹಿತಿ ಪಡೆದ ಅವರು, ಪಾವಗಡದಲ್ಲಿ ನಡೆದಂತಹ ಪ್ರಕರಣ ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.  ಜಿಲ್ಲೆಯ ಕುಡಿಯುವ ನೀರಿನ ಮೂಲಗಳ ಪರೀಕ್ಷೆ ನಡೆಸಲಾಗಿದ್ದು, ಕುಡಿಯುವ ನೀರಿನ ಪರೀಕ್ಷೆಯಲ್ಲಿ ನೀರಿನ  ಅಶುದ್ಧತೆ ಬಗ್ಗೆ ವರದಿ ಬಂದ ತಕ್ಷಣ ಸಾರ್ವಜನಿಕರಿಗೆ ಅಶುದ್ಧ ಕುಡಿಯುವ ನೀರು ಪೂರೈಕೆಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಸೂಚಿಸಿದರಲ್ಲದೆ, ಪರ್ಯಾಯವಾಗಿ ಶುದ್ಧ…

Read More

ಈಗ ಎಲ್ಲಿ ನೋಡಿದ್ರೂ ಯುಪಿಐ ಪೇಮೆಂಟ್ ಹೆಚ್ಚು. ಎಲ್ಲರ ಮೊಬೈಲ್‌ ನಲ್ಲಿ ಈ ಗೂಗಲ್‌ ಪೇ (Google Pay) ಇದ್ದೇ ಇರುತ್ತೆ. ಆದರೆ, ನಾಳೆಯಿಂದ ಇಲ್ಲಿ ಈ ಗೂಗಲ್‌ ಪೇ ಕೆಲಸ ಮಾಡಲ್ಲ! ಹೌದಾ ? ಹೌದು, USನಲ್ಲಿ Google Pay ತನ್ನ ಸೇವೆಯನ್ನು ಸ್ಥಗಿತಗೊಳಿಸುತ್ತದೆ. ಟೆಕ್ ದೈತ್ಯ ತನ್ನ ಬ್ಲಾಗ್‌ ನಲ್ಲಿ ಜೂನ್ 4 ರವರೆಗೆ ಅಮೆರಿಕನ್ನರು ಹಣ ವರ್ಗಾವಣೆ ಅಪ್ಲಿಕೇಶನ್ ಅನ್ನು ಬಳಸಲು ಸಾಧ್ಯವಾಗುತ್ತದೆ. ಜೂನ್ 4ರ ನಂತರ Google ತನ್ನ Google Pay ಅಪ್ಲಿಕೇಶನ್‌ನ US ಆವೃತ್ತಿಯನ್ನು ಮುಚ್ಚುತ್ತದೆ. ನಾಳೆಯಿಂದ ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಗೂಗಲ್ ಪೇ ಸೇವೆ ಸ್ಥಗಿತಗೊಳ್ಳುತ್ತಿದೆ. ಇದರ ಬದಲಾಗಿ Google Wallet ಆಯಪ್ ಸೇವೆ ಆರಂಭಗೊಂಡಿದೆ. Google Pay ಬಳಕೆದಾರರು ಗೂಗಲ್ ವಾಲೆಟ್ ಬಳಸುವಂತೆ ಸೂಚಿಸಲಾಗಿದೆ. ಗೂಗಲ್‌ ಪೇ ಆಯಪ್ ಕಾರ್ಯಾಚರಣೆಯಲ್ಲಿ ಇನ್ನಷ್ಟು ಸರಳ ಫೀಚರ್‌ ಗಳನ್ನು ಅಳವಡಿಸುವ ಹಿನ್ನೆಲೆಯಲ್ಲಿ Google Pay ಸ್ಥಗಿತಗೊಳಿಸಲಾಗುತ್ತಿದೆ ಎಂದು ಕಂಪನಿ ಮಾಹಿತಿ ನೀಡಿದೆ. ಗೂಗಲ್‌…

Read More

” ಜೂ.1ರ ನಂತರ ವಾಹನ ಚಾಲನಾ ತರಬೇತಿ ಕೇಂದ್ರಗಳೇ ಡಿ.ಎಲ್‌. ನೀಡುತ್ತವೆ. ಡಿ.ಎಲ್‌ ಗಾಗಿ ಸಾರ್ವಜನಿಕರು ಆರ್‌ ಟಿಒ ಕಚೇರಿಗಳಿಗೆ ಹೋಗಬೇಕಿಲ್ಲಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿಹರಿದಾಡುತ್ತಿದೆ. ಕೆಲ ಮಾಧ್ಯಮಗಳಲ್ಲೂಈ ಸುದ್ದಿ ಪ್ರಕಟವಾಗಿದೆ. ಆದರೆ, ಈ ಬಗ್ಗೆ ಸ್ಪಷ್ಟತೆಯಿಲ್ಲ. ಖಾಸಗಿ ವ್ಯಕ್ತಿಗಳು, ಸ್ವಯಂಸೇವಾ ಸಂಸ್ಥೆಗಳು, ಕಾರ್ಪೊರೇಟ್‌ ಕಂಪನಿಗಳು, ವಾಹನ ಉತ್ಪಾದನಾ ಕಂಪನಿಗಳು ಅಥವಾ ಯಾವುದೇ ಕಂಪನಿಯೂ ವಾಹನ ಚಾಲನಾ ತರಬೇತಿ ಹಾಗೂ ಚಾಲನಾ ಪರೀಕ್ಷಾ ಕೇಂದ್ರವನ್ನು ಆರಂಭಿಸಬಹುದು. ಒಂದು ಕಂಪನಿಯು ರಾಜ್ಯವೊಂದರಲ್ಲಿಗರಿಷ್ಠ ಐದು ಕೇಂದ್ರಗಳನ್ನಷ್ಟೇ ತೆರೆಯಬಹುದು. ಕೇಂದ್ರಗಳನ್ನು ತೆರೆಯಲು ಕಡ್ಡಾಯವಾಗಿ ಕೆಲ ಮೂಲಸೌಕರ್ಯಗಳನ್ನು ಹೊಂದಿರಬೇಕೆಂದು ಸಚಿವಾಲಯ ಷರತ್ತು ವಿಧಿಸಿದೆ. ಚಾಲನಾ ತರಬೇತಿ ಕೇಂದ್ರಗಳು ಚಾಲನಾ ಪರೀಕ್ಷೆಯಲ್ಲಿಉತ್ತೀರ್ಣರಾದವರಿಗೆ ಪ್ರಮಾಣಪತ್ರವನ್ನಷ್ಟೇ ನೀಡುತ್ತವೆ. ಆ ಪ್ರಮಾಣಪತ್ರಗಳ ಆಧಾರದಲ್ಲಿಆರ್‌ ಟಿಒ ಕಚೇರಿಗಳಲ್ಲಿ ಡಿ.ಎಲ್‌. ನೀಡಲಾಗುತ್ತದೆ. ಡಿ.ಎಲ್‌. ನೀಡಿಕೆ ವಿಚಾರದಲ್ಲಿ ಆರ್‌ ಟಿಒಗೆ ಇರುವ ಅಧಿಕಾರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ,” ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಹೊಸ ಆದೇಶದ ಪ್ರಕಾರ, ಮಾನ್ಯತೆ ಪಡೆದ ಚಾಲನಾ ತರಬೇತಿ ಕೇಂದ್ರಗಳೇ ಚಾಲನಾ…

Read More

ಕೊರಟಗೆರೆ: ಸರಳ ಸಜ್ಜನ ರಾಜಕಾರಣಿ, ನೇರವಾದಿ, ಮಾಜಿ ಶಾಸಕ ಆರ್.ನಾರಾಯಣ್ ರವರ ಪರಮಾಪ್ತ ಶಿಷ್ಯ ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರಾದ ಜಿ.ಎಲ್.ಹನುಮಂತರಾಯಪ್ಪ ನವರು ಹೃದಯಘಾತ ದಿಂದ ಇಂದು ಬೆಳಗ್ಗೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೂರು ಬಾರಿ ಬೂದಗವಿ ಗ್ರಾಮ ಪಂಚಾಯಿತಿ ಸದಸ್ಯರಾಗಿ ಸೇವೆ, ಒಂದು ಬಾರಿ ತಾಲ್ಲೂಕು ಪಂಚಾಯಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಬೆಂಡೋಣಿ ವಿ ಎಸ್ ಎಸ್ ಎನ್ ಮಾಜಿ ನಿರ್ದೇಶಕರಾಗಿಯು ಸೇವೆ ಸಲ್ಲಿಸಿದ್ದಾರೆ. ಸುಮಾರು 30 ವರ್ಷಗಳ ಕಾಲ ಕಾಂಗ್ರೆಸ್ ಪಕ್ಕದಲ್ಲಿ ತೊಡಗಿ ಜನರ ಸೇವೆ ಮಾಡಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆ ಆರೋಪ ಹೊತ್ತ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಜುಲೈ 3ರವರೆಗೆ ವಿಸ್ತರಿಸಿದೆ. ಪ್ರಕರಣದ ಕುರಿತು ವಿಚಾರಣೆ ನಡೆಸಿದ ಸಿಬಿಐ ಮತ್ತು ಇ.ಡಿಯ ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು, ವಿಚಾರಣೆಯನ್ನು ಮುಂದೂಡಿದ್ದಾರೆ. ಪ್ರಕರಣ ಸಂಬಂಧ ಸಿಬಿಐ ದಾಖಲಿಸಿರುವ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಕವಿತಾ ಅವರು ಮೇ 15ರಂದು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕವಿತಾ ಅವರ ಜಾಮೀನು ಅರ್ಜಿಯನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇ.ಡಿ) ಈಚೆಗೆ ದೆಹಲಿ ಹೈಕೋರ್ಟ್‌ನಲ್ಲಿ ವಿರೋಧಿಸಿದ್ದವು. ಸಿಬಿಐ ಮತ್ತು ಇಡಿ ‘ಕವಿತಾ ಅವರು ಹೆಚ್ಚು ಪ್ರಭಾವಿ ಮತ್ತು ಶಕ್ತಿಯುತರಾಗಿದ್ದು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು’ ಎಂದು ಹೇಳಿದ್ದವು. ದೆಹಲಿ ಅಬಕಾರಿ ನೀತಿಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಈವರೆಗೆ ದೆಹಲಿ ಮುಖ್ಯಮಂತ್ರಿ…

Read More

ಒಡಿಶಾ: ಮನೆಯಲ್ಲಿ ಒಬ್ಬಳೇ ಇದ್ದ ಏಳು ವರ್ಷದ ಬಾಲಕಿಯ ಮೇಲೆ ದುರ್ಷಕರ್ಮಿಯೊಬ್ಬ ಅತ್ಯಾಚಾರವೆಸಗಿ ಬಳಿಕ ಹತ್ಯೆ ಮಾಡಿರುವ ಘಟನೆ ನಡೆದಿದೆ. ಬಾಲಕಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಹತ್ಯೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರ ನಡೆದ ಕೊನೆ ಹಂತದ ಲೋಕಸಭಾ ಚುನಾವಣೆಗೆ ಮತದಾನ ಮಾಡಲು ಪೋಷಕರು ಮತಗಟ್ಟೆಗೆ ತೆರಳಿದ್ದರು. ಈ ವೇಳೆ ಬಾಲಕಿಯೊಬ್ಬಳೇ ಮನೆಯಿದ್ದ ವಿಷಯ ತಿಳಿದ 23 ವರ್ಷದ ಆರೋಪಿ ಆಕೆಯನ್ನು ನದಿಯೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಬಳಿಕ ಕತ್ತು ಹಿಸುಕಿ ಹತ್ಯೆಗೈದಿದ್ದಾನೆ. ಮನೆಯಲ್ಲಿ ಇಲ್ಲದ ಬಾಲಕಿಗಾಗಿ ಪೋಷಕರು ಹುಡುಕಾಟ ನಡೆಸಿದ್ದಾರೆ. ಭಾನುವಾರ ಬಾಲಕಿಯ ಶವ ನದಿ ಸಮೀಪ ಪತ್ತೆಯಾಗಿದ್ದು ಕೂಡಲೇ ಗ್ರಾಮಸ್ಥರು ಪೊಲೀಸರು ಮಾಹಿತಿ ನೀಡಿದ್ದಾರೆ ಹಾಗೂ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 376ಎಬಿ (ಅತ್ಯಾಚಾರ) ಮತ್ತು 302(ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಬೆಂಗಳೂರು: ನೆಲಮಂಗಲ ತಾಲ್ಲೂಕಿನಲ್ಲಿ ಮಗಳ ಪ್ರೇಮ ವಿವಾಹಕ್ಕೆ ಮನನೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಂಜನಾ ನಗರದ ಲಕ್ಷ್ಮಮ್ಮ(45) ನೇಣಿಗೆ ಶರಣಾದ ಮಹಿಳೆಯಾಗಿದ್ದಾರೆ. ಇತ್ತೀಚೆಗಷ್ಟೇ ತನ್ನ ಮಗಳು ಪ್ರೇಮ ವಿವಾಹವಾಗಿ ಮನೆಬಿಟ್ಟು ಹೋಗಿದ್ದಳು. ಇದರಿಂದ ಮನನೊಂದಿದ್ದ ಲಕ್ಷ್ಮಮ್ಮ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕರ್ನಾಟಕ ಬಿಡಿ. ಇಡೀ ದೇಶದಲ್ಲೇ ವಿದೇಶಿ ನೇರ ಬಂಡವಾಳ ಹೂಡಿಕೆಯು (ಎಫ್‌ಡಿಐ) ಕಳೆದ ಎರಡು – ಮೂರು ವರ್ಷಗಳಿಂದ ಸತತವಾಗಿ ಇಳಿಮುಖ ಆಗಿದೆ. ಹಾಗಾದರೆ ಇದಕ್ಕೆ ಯಾರು ಹೊಣೆʼ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರವೇ ಬಿಡುಗಡೆ ಮಾಡಿರುವ ಅಧಿಕೃತ ಅಂಕಿ ಅಂಶಗಳೇ ದೇಶದಲ್ಲಿನ ಎಫ್‌ ಡಿಐ ಒಳಹರಿವು ಕುಸಿದಿರುವುದರ ವಾಸ್ತವ ಚಿತ್ರಣ ನೀಡುತ್ತವೆ ಎಂದು ಸಚಿವರು ವಿವರಗಳನ್ನು ಹಂಚಿಕೊಂಡಿದ್ದಾರೆ. ʼದೇಶದಲ್ಲಿ ಎಫ್‌ ಡಿಐ ಇಳಿಕೆ ಆಗಲು ಕೇಂದ್ರ ಸರ್ಕಾರದ ದೂರದೃಷ್ಟಿ ಇಲ್ಲದ, ದೋಷಪೂರಿತ ನೀತಿಗಳೇ ಕಾರಣ. ಹಾಗೆಯೇ ಜಾಗತಿಕ ವಿದ್ಯಮಾನಗಳು ಕೂಡ ಸೇರಿರಬಹುದು’ ಎಂದು ಅವರು ತಿಳಿಸಿದರು. ಕುಸಿತದ ವಿವರಗಳು: ʼಹಣಕಾಸು ವರ್ಷ 2023ರಲ್ಲಿ 71 ಶತಕೋಟಿ ಡಾಲರ್‌ಗಳಷ್ಟಿದ್ದ ದೇಶಿ ಎಫ್‌ಡಿಐ, ಹಣಕಾಸು ವರ್ಷ 2024 ರಲ್ಲಿ 70 ಶತಕೋಟಿ ಡಾಲರ್‌ ಗೆ ಕುಸಿದಿದೆ. ʼಹಣಕಾಸು ವರ್ಷ 2020-21ರಲ್ಲಿ ₹ 4.42 ಲಕ್ಷ ಕೋಟಿ,…

Read More

ಟೋಕಿಯೊ: ಜಪಾನ್ ನ ಇಶಿಕವಾ ಪ್ರದೇಶದಲ್ಲಿ ಬೆಳಿಗ್ಗೆ 6.31ರ ಸುಮಾರಿಗೆ 5.9 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜಪಾನ್ ನ ಹವಾಮಾನ ಇಲಾಖೆ ಪ್ರಕಟಿಸಿದೆ. ಈ ಭೂಕಂಪದ ಹಿನ್ನೆಲೆಯಲ್ಲಿ ಯಾವುದೇ ಸುನಾಮಿ ಭೀತಿ ಇಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಸುಮಾರು 10 ಕಿಲೋಮೀಟರ್ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದ್ದು, ವಜೀಮಾ ಮತ್ತು ಸುಝು ನಗರಗಳಲ್ಲಿ ಭಾರಿ ಕಂಪನ ಅನುಭವಕ್ಕೆ ಬಂದಿದೆ. ಜಪಾನ್ ಭೂಕಂಪ ಮಾಪನದಲ್ಲಿ 5ಕ್ಕಿಂತ ಹೆಚ್ಚಿನ ತೀವ್ರತೆ ದಾಖಲಾಗಿದೆ. ನೋಟೊ ಪಟ್ಟಣದಲ್ಲಿ ಕೂಡಾ ಭಾರಿ ಕಂಪನ ಅನುಭವಕ್ಕೆ ಬಂದಿದ್ದರೂ, ತೀವ್ರತೆ 5ಕ್ಕಿಂತ ಕಡಿಮೆ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಶಿಕವಾ ಪ್ರಾಂತ್ಯದ ನನಾವೊ ನಗರ ಮತ್ತು ಅನಮಿಝು ಪಟ್ಟಣಗಳಲ್ಲಿ ಭೂಕಂಪ ಸಂಭವಿಸಿದ್ದು, ನೀಗತ ಪ್ರಾಂತ್ಯದ ಕೆಲ ಭಾಗಗಳಲ್ಲೂ 4 ತೀವ್ರತೆಯ ಕಂಪನ ಸಂಭವಿಸಿದೆ. ಭೂಕಂಪದ ಪರಿಣಾಮ, ಈಸ್ಟ್ ಜಪಾನ್ ರೈಲ್ವೆ ಹೊಕುರಿಕು ಶಿಂಕನ್ಸೆನ್ ಮತ್ತು ಜೊಯೆತ್ಸು ಶಿಂಕನ್ಸೆನ್ ಬುಲೆಟ್ ರೈಲುಮಾರ್ಗದಲ್ಲಿ ವಿದ್ಯುತ್ ಸಂಪರ್ಕ ಕಡಿತದ ಹಿನ್ನೆಲೆಯಲ್ಲಿ ಸೇವೆಗಳನ್ನು ತಾತ್ಕಾಲಿಕವಾಗಿ…

Read More

ಎರಡು ದಿನಗಳಿಂದ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಭಾನುವಾರ ಪ್ರವಾಹ ಪರಿಸ್ಥಿತಿಯಲ್ಲಿ ಅಲ್ಪ ಸುಧಾರಣೆ ಕಂಡುಬಂದಿದೆ. ರಾಜ್ಯದ 14 ಜಿಲ್ಲೆಗಳಲ್ಲಿ ಪ್ರವಾಹದಿಂದ 535246 ಮಂದಿ ಹಾನಿಗೀಡಾಗಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಕೋಪ ನಿರ್ವಹಣಾ ಪ್ರಾಧಿಕಾರ ಪ್ರಕಟಿಸಿದೆ. ಭಾನುವಾರ ಮತ್ತೆ ಮೂರು ಮಳೆ ಸಂಬಂಧಿ ಸಾವುಗಳು ವರದಿಯಾಗಿದ್ದು, ಮೇ 28 ರಿಂದೀಚೆಗೆ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 14ಕ್ಕೇರಿದೆ. ಇನ್ನೂ ಹಲವು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಪ್ರವಾಹ ಬಾಧಿತರಾಗಿರುವವರ ಸಂಖ್ಯೆ ಶನಿವಾರ 6 ಲಕ್ಷಕ್ಕೂ ಅಧಿಕ ಇತ್ತು. ಭಾನುವಾರ ಸ್ವಲ್ಪ ಕಡಿಮೆಯಾಗಿದೆ. ಬ್ರಹ್ಮಪುತ್ರ ಮತ್ತು ಬರಾಕ್ ನದಿಗಳು ಅಪಾಯಕ್ಕಿಂತ ಕೆಳಮಟ್ಟದಲ್ಲಿ ಹರಿಯುತ್ತಿವೆ. ಎಲ್ಲ ಅಣೆಕಟ್ಟುಗಳ ಪ್ರಮುಖ ಗೇಟುಗಳನ್ನು ತೆರೆಯಲಾಗಿದ್ದು, ನಿಂತ ನೀರನ್ನು ಹೊರಬಿಡಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಹೈಲಕಂಡಿ, ಕರೀಂಗಂಜ್, ಹೊಲೈ, ಧೇಮಜಿ, ಕರ್ಮುಪ್, ದಿಬ್ರೂಗಢ, ನಾಗೋನ್, ಮೊರಿಗಾಂವ್, ಕಚಾರ್, ದಕ್ಷಿಣ ಸಾಲ್ಮರ, ಕಬ್ರಿ ಅಂಗ್ಲಾಂಗ್ ಪಶ್ಚಿಮ, ಗೋಲಘಾಟ್ ಮತ್ತು ಡಿಮಾ ಹಸ್ಸಾವೊ ಜಿಲ್ಲೆಗಳು ತೀವ್ರ ಹಾನಿಗೀಡಾಗಿವೆ. ನಾಗಾಂವ್ ಜಿಲ್ಲೆಯೊಂದರಲ್ಲೇ…

Read More