Author: admin

ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುತ್ತಾರೆ ಎಂದು ಮೈಸೂರಿನ ಶ್ವಾನವೊಂದು ಭವಿಷ್ಯ ನುಡಿದಿದೆ. ಮೈಸೂರಿನಲ್ಲಿ ಈ ವಿಶೇಷವಾದ ದೇವರ ನಾಯಿ ಮೋದಿ ಮತ್ತೊಂದು ಬಾರಿ ಪ್ರಧಾನಿಯಾಗುತ್ತಾರೆ ಎಂದಿದೆ. ಮೋದಿ ಹಾಗೂ ರಾಹುಲ್ ಗಾಂಧಿ ಫೋಟೋವನ್ನ ಕಾಲಭೈರವೇಶ್ವರ ದೇವರ ಮುಂದೆ ದೇವಾಲಯದ ಅರ್ಚಕ ಇಟ್ಟಿದ್ದಾರೆ. ಈ ಬಾರಿ ಯಾರು ಪ್ರಧಾನಿಯಾಗುತ್ತಾರೆ ಎಂಬುದನ್ನ ನಮ್ಮ ಭೈರವ ತಿಳಿಸ್ತಾನೆ ಎಂದು ಹೇಳಿ ಅರ್ಚಕರು ಪೂಜೆ ಸಲ್ಲಿಸಿದ್ದಾರೆ. ನಂತರ ಅಲ್ಲಿದ್ದ ಫೋಟೊವನ್ನು ಅದಲು ಬದಲು ಮಾಡಿಟ್ಟಿದ್ದಾರೆ. ತಕ್ಷಣ ಭೈರವೇಶ್ವರ ಶ್ವಾನವು ಮೋದಿ ಫೋಟೋವನ್ನು ಹುಡುಕಿ ತೆಗೆದು ಬಾಯಿಯಿಂದ ಕಚ್ಚಿಕೊಂಡು ಬಂದಿದೆ. ಆ ಮೂಲಕ ಶ್ವಾನ ಮೋದಿ ಪ್ರಧಾನಿಯಾಗುತ್ತಾರೆ ಎಂದಿದೆ ಎಂದು ಕಾಲಭೈರವೇಶ್ವರನ ಅರ್ಚಕರು ತಿಳಿಸಿದ್ದಾರೆ. ಈ ಸಂಬಂಧಿ ಇನ್ಸ್ಟಾಗ್ರಾಮ್ ಪೋಸ್ಟ್ ಇದೀಗ ವೈರಲ್ ಆಗಿದೆ. ಇದೇ ಸಂದರ್ಭದಲ್ಲಿ ಮೈಸೂರಿನ ರಾಜ ಮನೆತನದ ಯದುವೀರ್ ಫೋಟೋ ಸೆಲೆಕ್ಟ್ ಮಾಡಿರುವ ಭೈರವೇಶ್ವರ ಶ್ವಾನವು ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಗೆಲ್ಲುತ್ತಾರೆಂದು ಕೂಡ ಭವಿಷ್ಯ ಹೇಳಿದೆ. ಭೈರವೇಶ್ವರ ಶ್ವಾನ ಭವಿಷ್ಯ…

Read More

ಚಪ್ಪಲಿ ಇಲ್ಲದೆ ಮನೆಯಿಂದ ಆಚೆ ಬರೋದು ಸ್ವಲ್ಪ ಕಷ್ಟ. ಇನ್ನು ಜೀವನಪೂರ್ತಿ ಬರಿಗಾಲಿನಲ್ಲಿ ಓಡಾಡಲು ಸಾಧ್ಯವೇ? ಕೆಲವು ಸಾಧು ಮತ್ತು ಸಂತರನ್ನು ಹೊರತುಪಡಿಸಿ, ಎಲ್ಲ ಸಾಮಾನ್ಯ ಜನರು ಚಪ್ಪಲಿಯನ್ನು ಧರಿಸುತ್ತಾರೆ. ವಿಶೇಷ ಅಂದ್ರೆ ಕಾಲಿವುಡ್‌ನ ಖ್ಯಾತ ನಟ ವಿಜಯ್ ಆಂಟೋನಿ ಜೀವನ ಪರ್ಯಂತ ಚಪ್ಪಲಿ ಧರಿಸದೇ ಇರಲು ನಿರ್ಧರಿಸಿದ್ದಾರೆ. ವಿಜಯ್ ಆಂಟೋನಿ ಓರ್ವ ಬಹುಮುಖ ಪ್ರತಿಭೆ. ಮ್ಯೂಸಿಕ್ ಡೈರೆಕ್ಟರ್, ಗಾಯಕ, ನಟ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದಾರೆ. ವಲಂಡಿಲ್ ಪತ್ತೆನೆ, ಡಿಸುಮೆ, ವೆಡೆತ್ತಕಾರನ್ ಮತ್ತು ಅಂಗಡಿತ್‌ ಸ್ಟ್ರೀಟ್ ಸೇರಿದಂತೆ ಅನೇಕ ಸಿನಿಮಾಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ನಾನ್, ಕಲಿ, ಪಿಚೈಕಾರನ್, ಸೈತಾನ್, ಕೊಲೈಗಾರ, ವಿಜಯ್ ರಾಘವನ್, ಪಿಚೈಕಾರನ್ 2 ಮತ್ತು ತಿಮಿರು ಪುಡಿಚವನ್ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಪಿಚೈಕಾರನ್ 1 ಮತ್ತು ಭಾಗ 2ನ್ನು ವಿಜಯ್ ಅವರೇ ನಿರ್ದೇಶನ ಮಾಡಿದ್ದು, ಈ ಎರಡು ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿದೆ. ಇದೀಗ ವಿಜಯ್ ಆಂಟೋನಿ ತುಫಾನ್ ಎಂಬ…

Read More

ಮುಂದಿನ 2-3 ದಿನಗಳಲ್ಲಿ ಮಧ್ಯ ಅರೇಬಿಯನ್ ಸಮುದ್ರ, ಕರ್ನಾಟಕ, ರಾಯಲಸೀಮಾ, ಕರಾವಳಿ ಆಂಧ್ರಪ್ರದೇಶ ಮತ್ತು ವಾಯುವ್ಯ ಬಂಗಾಳ ಕೊಲ್ಲಿಯ ಭಾಗಗಳಲ್ಲಿ ಮಳೆಯಾಗುವ ಎಲ್ಲಾ ಸಂಭವನೀಯತೆ ಇದೆ ಎಂದು IMD ಹೇಳಿದೆ. ಹವಾಮಾನ ಇಲಾಖೆ ಅಧಿಕಾರಿ, ಜೂನ್ 15ರ ವೇಳೆಗೆ ನೈರುತ್ಯ ಮುಂಗಾರು ಮಧ್ಯಪ್ರದೇಶ ತಲುಪುವ ಸಾಧ್ಯತೆ ಇದೆ ಎನ್ನಲಾಗಿದೆ. ನೈಋತ್ಯ ಮಾನ್ಸೂನ್ ಗುರುವಾರ ಕೇರಳ ಮತ್ತು ಈಶಾನ್ಯ ಪ್ರದೇಶದಲ್ಲಿ ಅಕಾಲಿಕವಾಗಿ ಆಗಮಿಸಿದೆ. ಜೂನ್ 02-04 ರಂದು ಅಸ್ಸಾಂ ಮತ್ತು ಮೇಘಾಲಯದಲ್ಲಿ ಭಾರೀ (64.5-115.5 ಮಿಮೀ) ರಿಂದ ಅತಿ ಹೆಚ್ಚು (115.5-204.4 ಮಿಮೀ) ಮಳೆಯಾಗುವ ಸಾಧ್ಯತೆಯಿದೆ ಎಂದು IMD ಹೇಳಿದೆ. ಉಪ-ಹಿಮಾಲಯ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಜೂನ್ 3 ರಿಂದ 6 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನಗಳಲ್ಲಿ ವಾಯುವ್ಯ, ಮಧ್ಯ ಮತ್ತು ಪೂರ್ವ ಭಾರತದಲ್ಲಿ ಬಿಸಿಗಾಳಿ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸೋಮವಾರ (ಜೂನ್ 3), ಪಂಜಾಬ್,…

Read More

ಕಾಡುಗಳ್ಳ ವೀರಪ್ಪನ್ ನನ್ನು ಕೊಂದಿದ್ದ ಎನ್‌ ಕೌಂಟರ್ ಸ್ಪೆಷಲಿಸ್ಟ್ ಅಧಿಕಾರಿ ವೆಲ್ಲಾದುರೈ ಸಸ್ಪೆಂಡ್ ಮಾಡಿರುವ ಮಾಹಿತಿ ಬೆಳಕಿಗೆ ಬಂದಿದೆ. ಹೌದು, ಕಾಡುಗಳ್ಳ ವೀರಪ್ಪನ್ ‌ನನ್ನು ಹೊಡೆದುರುಳಿಸಿದ ವಿಶೇಷ ಕಾರ್ಯಪಡೆಯಲ್ಲಿ ತಮಿಳುನಾಡು ಪೊಲೀಸ್ ಹೆಚ್ಚುವರಿ ಅಧೀಕ್ಷಕ ಎಸ್ ವೆಲ್ಲಾದುರೈ  ಅವರ ನಿವೃತ್ತಿಗೆ ಒಂದು ದಿನ ಮೊದಲು ಅಮಾನತು ಮಾಡಲಾಗಿದೆ. ಈಗಾಗಲೇ ಎನ್‌ ಕೌಂಟರ್ ಸ್ಪೆಷಲಿಸ್ಟ್ ಎಂದೇ ಖ್ಯಾತರಾಗಿದ್ದ ವೆಲ್ಲಾದುರೈ ಅವರನ್ನು ತಮಿಳುನಾಡು ಗೃಹ ಇಲಾಖೆ ಅಮಾನತುಗೊಳಿಸಿದೆ. ಮೂಲಗಳ ಪ್ರಕಾರ, 2013ರಲ್ಲಿ ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ‘ಕೊಕ್ಕಿ’ ಕುಮಾರ್ ಅಲಿಯಾಸ್ ರಾಮು ಎಂಬಾತನ ಲಾಕಪ್ ಡೆತ್ ಪ್ರಕರಣದಲ್ಲಿ ವೆಲ್ಲಾದುರೈ ಭಾಗಿಯಾಗಿದ್ದರು ಎಂದು ಆರೋಪಿಸಿ ಅಮಾನತುಗೊಳಿಸಲಾಗಿತ್ತು. ಆದರೆ, ವೆಲ್ಲಾದುರೈ ಅಮಾನತು ಆಗಿರುವ ಹಿನ್ನೆಲೆ ಅಪಾರ ವಿರೋಧ ವ್ಯಕ್ತವಾದ ಕಾರಣ ಶುಕ್ರವಾರದ ನಂತರದ ಆದೇಶದಲ್ಲಿ ಇಲಾಖೆ ಕೆಲವು ಷರತ್ತುಗಳಿಗೆ ಒಳಪಟ್ಟು ದಂಡ ವಿಧಿಸಿ ನಿವೃತ್ತಿ ಅಮಾನತು ಹಿಂಪಡೆದಿದೆ. ಹೌದು, ವೆಲ್ಲಾದುರೈ ಅವರ ನಿವೃತ್ತಿ ಫಂಡ್‌ ನಲ್ಲಿ 5 ಲಕ್ಷ ರೂ. ಕಡಿತಗೊಳಿಸಿ ಶಿಸ್ತುಕ್ರಮ ಕೈಗೊಳ್ಳಲಾಗಿದೆ. ನಮ್ಮತುಮಕೂರಿನ ಕ್ಷಣ…

Read More

ವಿಷಕಾರಿ ಹಾವು ಕಚ್ಚಿದ ಪರಿಣಾಮ ಸುಬ್ರಹ್ಮಣ್ಯ ಸಮೀಪದ ಹರಿಹರದಲ್ಲಿ ಮಹಿಳೆಯೊಬ್ಬರು ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ. ದೇವಮ್ಮ (60 ವರ್ಷ) ಸಾವಿಗೀಡಾದ ಮಹಿಳೆಯಾಗಿದ್ದಾರೆ. ಅವರು ಭಾನುವಾರ ಬೆಳಗ್ಗೆ 9.45 ರ ಹೊತ್ತಿಗೆ ಮನೆಯಲ್ಲಿದ್ದ ವೇಳೆ ಹಾವು ಕಚ್ಚಿದೆ. ಕೋಳಿ ಮೊಟ್ಟೆಯನ್ನು ತಿನ್ನುವುದಕ್ಕಾಗಿ ಕೋಳಿ ಕಾಪುವಿನ ಜಾಗಕ್ಕೆ ಹಾವು ಬಂದಿತ್ತು. ಈ ಹಾವು ಇರುವುದು ಮಹಿಳೆಯ ಗಮನಕ್ಕೆ ಬಂದಿರುವುದಿಲ್ಲ. ಅರಿವಿಲ್ಲದೆ ಕಾಪಿನತ್ತ ಹೋದಾಗ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಮನೆಯಲ್ಲಿ ಯಾರು ಇರಲಿಲ್ಲ. ಹೀಗಾಗಿ ಮನೆಯವರಿಗೆ ವಿಷಯ ಗೊತ್ತಾಗಲಿಲ್ಲ ಎಂದು ತಿಳಿದು ಬಂದಿದೆ. ಮನೆಯವರಿಗೆ ವಿಷಯ ಗೊತ್ತಾಗಿ ಅವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಸುಳ್ಯದ ಆಸ್ಪತ್ರೆಗೆ ತಲುಪಿದಾಗ ವೈದ್ಯರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಭಾರತೀಯ ರೈಲ್ವೆ ಇಲಾಖೆಯು ಮುಂದಿನ ಜುಲೈ ಹಾಗೂ ಸೆಪ್ಟೆಂಬರ್ ತಿಂಗಳ ನಡುವೆ ಹಲವು ನೇಮಕ ಅಧಿಸೂಚನೆಗಳನ್ನು ಬಿಡುಗಡೆ ಮಾಡಲಿದೆ. ಅವುಗಳ ಪೈಕಿ ದ್ವಿತೀಯ ಪಿಯುಸಿ ಪಾಸಾದವರಿಗೆ ನಾನ್‌ ಟೆಕ್ನಿಕಲ್ ಪಾಪ್ಯುಲರ್ ಕೆಟಗರಿ – ಪದವಿಗಿಂತ ಕೆಳಹಂತದ ಅರ್ಹತೆಯ ಹುದ್ದೆಗಳಿಗೆ ಸಹ ನೇಮಕ ನೋಟಿಫಿಕೇಶನ್‌ ಬಿಡುಗಡೆ ಮಾಡುವ ಕುರಿತು ತನ್ನ ನೇಮಕಾತಿ ಕ್ಯಾಲೆಂಡರ್‌ ನಲ್ಲಿ ಮಾಹಿತಿ ನೀಡಿದೆ. ರೈಲ್ವೆಯಲ್ಲಿ ನಾನ್‌ ಟೆಕ್ನಿಕಲ್ ಪಾಪ್ಯುಲರ್ ಕೆಟಗರಿಯಲ್ಲಿ ಲೆವೆಲ್ 2 ಹಾಗೂ ಲೆವೆಲ್ 3 ಹುದ್ದೆಗಳಾದ – ಜೂನಿಯರ್ ಕ್ಲರ್ಕ್‌ ಕಮ್ ಟೈಪಿಸ್ಟ್‌, ಅಕೌಂಟ್ಸ್‌ ಕ್ಲರ್ಕ್‌ ಕಮ್ ಟೈಪಿಸ್ಟ್‌, ಜೂನಿಯರ್ ಟೈಮ್ ಕೀಪರ್, ಟ್ರೈನ್ಸ್‌ ಕ್ಲರ್ಕ್‌, ಕಮರ್ಷಿಯಲ್ ಕಮ್ ಟಿಕೆಟ್ ಕ್ಲರ್ಕ್‌, ಸೀನಿಯರ್ ಕ್ಲರ್ಕ್‌ ಕಮ್ ಟೈಪಿಸ್ಟ್‌, ಗೂಡ್ಸ್‌ ಗಾರ್ಡ್‌, ಸೀನಿಯರ್ ಟೈಮ್ ಕೀಪರ್ ಹುದ್ದೆಗಳಿವೆ. ಈ ಹುದ್ದೆಗಳಿಗೆ 7ನೇ ವೇತನ ಆಯೋಗದ ಲೆವೆಲ್ 2, 3 ಸಂಭಾವನೆ ಇರುತ್ತದೆ. ಜೂನಿಯರ್ ಕ್ಲರ್ಕ್‌ ಕಮ್ ಟೈಪಿಸ್ಟ್‌ (ಲೆವೆಲ್ 2): Rs.19,900. ಅಕೌಂಟ್ಸ್‌ ಕ್ಲರ್ಕ್‌ ಕಮ್ ಟೈಪಿಸ್ಟ್‌…

Read More

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್ ನಿಂದ ವಾರೆಂಟ್ ಹೊರಡಿಸುವಂತೆ ಮಾಡಿಸಿ ಅದನ್ನು ಜಾರಿ ಮಾಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಪೊಲೀಸ್ ಪೇದೆಯೊಬ್ಬರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಲ್ಲಿನ ಸರಸ್ವತಿ ನಗರದ ನಿವೃತ್ತ ಶಿಕ್ಷಕ ಲಕ್ಕಪ್ಪ ಎಂಬವರು ಸೈಯದ್ ತ್ವಾಹಿರುದ್ದೀನ್ ಎಂಬವರ ವಿರುದ್ದ ಸಿವಿಲ್ ನ್ಯಾಯಾಲಯದಲ್ಲಿ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ನ್ಯಾಯಾಯಲದಿಂದ ವಾರೆಂಟ್ ಹೊರಡಿಸುವಂತೆ ಮಾಡಿಸಿ ಅದನ್ನು ಜಾರಿ ಮಾಡಲು ಪೊಲೀಸ್ ಸಿಬ್ಬಂದಿ ಹನುಮಂತಪ್ಪ 2 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ. ಲಕ್ಕಪ್ಪಈ ಸಂಬಂಧ ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದರು. ಮೇ 31ರಂದು ಆರೋಪಿ ಪೊಲೀಸ್ ಹನುಮಂತಪ್ಪ 2 ಸಾವಿರ ರೂ. ಲಂಚದ ಹಣವನ್ನು ಫೋನ್ ಪೇ ಮಾಡಿಸಿಕೊಂಡು ಸ್ವೀಕರಿಸಿದ ವೇಳೆ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಕಾರ್ಯಾಚರಣೆ ಮಾಡಿದ್ದಾರೆ. ಅದರಂತೆ ಆರೋಪಿ ಹನುಮಂತಪ್ಪರನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ. ಲೋಕಾಯುಕ್ತ ಅಧೀಕ್ಷಕ ಎಂ.ಎಸ್. ಕೌಲಾಪೂರೆ, ಲೋಕಾಯುಕ್ತ ಉಪಾಧೀಕ್ಷಕ ಕಲಾವತಿ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ…

Read More

ಕರ್ನಾಟಕ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ನಡೆಯಲಿರುವ ಚುನಾವಣೆ ಹಿನ್ನೆಲೆಗೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ 8 ಮಂದಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ವಿಧಾನ ಪರಿಷತ್ ಚುನಾವಣೆಗೆ ಸೋಮವಾರ ಕೊನೆಯ ದಿನವಾಗಿದ್ದು, ಈ ಹಿನ್ನೆಯಲ್ಲಿ 8 ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯನಿಗಾಗಿ ವರುಣ ಕ್ಷೇತ್ರ ಬಿಟ್ಟುಕೊಟ್ಟಿದ್ದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯಗೆ, ಈಗ ವಿಧಾನ ಪರಿಷತ್ ಟಿಕೆಟ್ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ, ಎನ್‌.ಎಸ್. ಬೋಸರಾಜು, ವಂಸತ್ ಕುಮಾರ್, ಕೆ. ಗೋವಿಂದ ರಾಜ್, ಐವಾನ್ ಡಿಸೋಜ, ಜಗದೇವ್ ಗುತ್ತೇದಾರ್, ಬಿಲ್ಕಿಸ್ ಬಾನೊ, ಬಸನಗೌಡ ಬಾರ್ದಿಲಿ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಸನಗೌಡ ಬಾರ್ದಿಲಿಗೆ ಟಿಕೆಟ್ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬಾಗಲಕೋಟೆ: ಕಾಂಗ್ರೆಸ್‌ ಮುಖಂಡನೊಬ್ಬರು ತಲ್ವಾರ್ ಹಿಡಿದು ಕೇಕ್ ಕಟ್ ಮಾಡಿರುವ ಘಟನೆ ಬಾಗಲಕೋಟೆ ತಾಲೂಕಿನ ಹವೇಲಿ ಗ್ರಾಮದಲ್ಲಿ ನಡೆದಿದೆ. ಹಳೆ ಹವೇಲಿ ಗ್ರಾಮದ ಕಾಂಗ್ರೆಸ್ ಮುಖಂಡ ರಮೇಶ್ ರಾಠೋಡ ತಲ್ವಾರ್‌ನಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ. ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ಸಾಂಗ್ ಹಾಕಿ ಕಾಂಗ್ರೆಸ್‌ ಮುಖಂಡ ಕೇಕ್ ಕಟ್ ಮಾಡಿದ್ದು, ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ತಲ್ವಾರ್‌ ನಿಂದ ಕೇಕ್ ಕತ್ತರಿಸಿದ ಮುಖಂಡನಿಗೆ ಬೆಂಬಲಿಗರು ಸನ್ಮಾನ ಮಾಡಿದ್ದಾರೆ. ಲೈಸೆನ್ಸ್ ಇಲ್ಲದೇ ಮಾರಕಾಸ್ತ್ರ ಹೊಂದುವುದು, ಸಾರ್ವಜನಿಕವಾಗಿ ಮಾರಕಾಸ್ತ್ರ ಬಳಸುವುದು ಕಾನೂನು ಪ್ರಕಾರ ಅಪರಾಧ. ಹೀಗಾಗಿ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನನ್ನ ಕ್ರಿಕೆಟ್ ಕರಿಯರ್ ಹಾಳಾಗಿದ್ದೆ ಕೊಹ್ಲಿಯಿಂದ ಎಂದು ಹೇಳುವ ಮೂಲಕ 2019ರ ಘಟನೆ ಬಗ್ಗೆ ಅಂಬಾಟಿ ರಾಯುಡು ಸತ್ಯ ಬಿಚ್ಚಿಟ್ಟಿದ್ದಾರೆ. 2019ರ ಏಕದಿನ ವಿಶ್ವಕಪ್ ಟೂರ್ನಿಯ ಭಾರತ ತಂಡದಲ್ಲಿ ಸ್ಥಾನ ಕಳೆದುಕೊಳ್ಳಲು ಕೊಹ್ಲಿಯೇ ಕಾರಣ ಎಂದು ಹೇಳುವ ಮೂಲಕ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ನನಗೂ ಬಿಸಿಸಿಐ ಆಯ್ಕೆ ಸಮಿತಿಯಲ್ಲಿದ್ದ ಒಬ್ಬ ಸದಸ್ಯರಿಗೂ ಒಂದು ಸಮಸ್ಯೆ ಇತ್ತು. ಆಂಧ್ರದ ಪರ ಆಡುತ್ತಿದ್ದಾಗ ನನ್ನ ಕ್ರಿಕೆಟ್‌ ವೃತ್ತಿ ಜೀವನದ ಆರಂಭದಲ್ಲೂ ಇವರಿಂದ ನನಗೆ ಸಮಸ್ಯೆ ಆಗಿತ್ತು. ಆ ಒಬ್ಬ ವ್ಯಕ್ತಿಯಿಂದಲೇ ನಾನು 2019ರ ಏಕದಿನ ವಿಶ್ವಕಪ್‌ ಟೂರ್ನಿಯ ಭಾರತ ತಂಡದಿಂದ ಹೊರಗುಳಿದೆ. ಅಂದು ಕೊಹ್ಲಿ ನನ್ನನ್ನು ಸಪೋರ್ಟ್ ಮಾಡಬಹುದಿತ್ತು. ಕ್ಯಾಪ್ಟನ್ ಆಗಿದ್ದ ಕೊಹ್ಲಿಗೆ ಆ ಹಕ್ಕು ಇತ್ತು. ಆದರೆ, ಅಂದು ನನ್ನ ಪರ ಕೊಹ್ಲಿ ನಿಲ್ಲಲಿಲ್ಲ ಎಂದು ರಾಯುಡು ದೂರಿದ್ದಾರೆ. ಒಂದು ಅರ್ಥದಲ್ಲಿ ನನ್ನ ಕ್ರಿಕೆಟ್ ಕರಿಯರ್ ಹಾಳಾಗಿದ್ದೆ ಕೊಹ್ಲಿಯಿಂದ. 4 ವರ್ಷಗಳ ಕಾಲ ಭಾರತ ತಂಡದ ನಾಲ್ಕನೇ ಕ್ರಮಾಂಕಕ್ಕೆ ನನ್ನನ್ನು ತಯಾರಿ ಮಾಡಲಾಗಿತ್ತು.…

Read More