Author: admin

ವಿಮಾನದ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಿಮಾನ ನಿಲ್ದಾಣವು ತನ್ನ ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿದೆ. 2024 ರ ಹೊಸ ನಿಯಮದಂತೆ ಇನ್ಮುಂದೆ ದುಬೈಗೆ ಪ್ರಯಾಣಿಸುವವರು ವಿಮಾನದಲ್ಲಿ ಕೆಲವು ವಸ್ತುಗಳನ್ನು ಕೊಂಡೊಯ್ಯಲು ಸಾಧ್ಯವಿಲ್ಲ. ದುಬೈ ವಿಮಾನ ಬ್ಯಾಗೇಜ್ ನಿಯಮಗಳಲ್ಲಿ ಬದಲಾವಣೆಯಾಗಿದ್ದು ಕೆಲವು ವಸ್ತುಗಳನ್ನು ವಿಮಾನದಲ್ಲಿ ಸಾಗಿಸಲು ಕಾನೂನು ಅಪರಾಧವೆಂದು ಪರಿಗಣಿಸಲಾಗಿದೆ. ಯಾವುದೇ ಪ್ರಯಾಣಿಕರು ಈ ನಿಷೇಧಿತ ವಸ್ತುಗಳನ್ನು ಸಾಗಿಸುತ್ತಿರುವುದು ಕಂಡುಬಂದಲ್ಲಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬಹುದು. ಈ ಉತ್ಪನ್ನಗಳ ಸಾಗಾಟ ನಿಷಿದ್ಧ: *  ಕೊಕೇನ್, ಹೆರಾಯಿನ್, ಗಸಗಸೆ ಮತ್ತು ತಲೆತಿರುಗುವಿಕೆಗೆ ಕಾರಣವಾಗುವ ಔಷಧಗಳು. *  ವೀಳ್ಯದೆಲೆ ಮತ್ತು ಕೆಲವು ಗಿಡಮೂಲಿಕೆಗಳು *  ಆನೆ ದಂತ ಮತ್ತು ಘೇಂಡಾಮೃಗಗಳ ಕೊಂಬು, ಜೂಜಾಟದ ಉಪಕರಣಗಳು, ಮೂರು ಪದರಗಳ ಮೀನುಗಾರಿಕೆ ಬಲೆಗಳು ಮತ್ತು ಬಹಿಷ್ಕರಿಸಿದ ದೇಶಗಳಿಂದ ಆಮದು ಮಾಡಿಕೊಳ್ಳುವ ಸರಕುಗಳ ಸಾಗಣೆಯೂ ಸಹ ಅಪರಾಧವೆಂದು ಪರಿಗಣನೆ. *  ಮುದ್ರಿತ ವಸ್ತುಗಳು, ತೈಲ ವರ್ಣಚಿತ್ರಗಳು, ಛಾಯಾಚಿತ್ರಗಳು, ಪುಸ್ತಕಗಳು ಮತ್ತು ಕಲ್ಲಿನ ಶಿಲ್ಪಗಳು *  ನಕಲಿ ನೋಟು, ಮನೆಯಲ್ಲಿ ಬೇಯಿಸಿದ…

Read More

ರಾಜ್ಯದಲ್ಲಿ ಉದ್ಯೋಗಗಳನ್ನು ಹುಡುಕುತ್ತಿರುವವರಿಗೆ ಇದು ಗುಡ್ ನ್ಯೂಸ್. ಭಾರತೀಯ ಅಂಚೆ ಇಲಾಖೆಯಲ್ಲಿ (Post office recruitment ) ಒಟ್ಟು 33,000 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಕೆಳಗೆ ನೀಡಿದ ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳ ಭರ್ತಿ ಮಾಡಲು ಅಂಚೆ ಇಲಾಖೆಯು ಅಧಿಸೂಚನೆಯನ್ನು ಹೊರಡಿಸಲಿದೆ. ಪೊಸ್ಟ್ ಮ್ಯಾನ್ ಹುದ್ದೆ ಮೇಲ್ ಗಾರ್ಡ್ ಹುದ್ದೆ ಎಂಟಿಎಸ್ ಹುದ್ದೆ ಚಾಲಕ ಹುದ್ದೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿ 18 ರಿಂದ 27 ವರ್ಷ ಒಳಗಿರಬೇಕು. ಯಾವುದಾದರೂ ಮಾನ್ಯತೆ ಪಡೆದ ಮಂಡಳಿಯಿಂದ 10 ನೆಯ ಅಥವಾ 12 ನೆಯ ತರಗತಿ ಪಾಸಗಿರಬೇಕು. ಈ ಹಿಂದೆ ವಿದ್ಯಾರ್ಥಿಯ ಮೇಲೆ ಯಾವುದೇ ಕ್ರಿಮಿನಲ್ ಮೊಕದ್ದಮೆಗಳು ಇರಬಾರದು. ಅರ್ಜಿಯ ಶುಲ್ಕವನ್ನು 100 ರೂಪಾಯಿ ನೀಡಬೇಕಾಗುತ್ತದೆ. ಈ ಹುದ್ದೆಗೆ ಅರ್ಜಿ ಹಾಕಲು sc/st ವರ್ಗದ ವಿಧ್ಯಾರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ. ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.  https://indiapostgdsonline.gov.in/ ನಮ್ಮತುಮಕೂರಿನ…

Read More

ಯಾದಗಿರಿ: VRL ಬಸ್ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬಳಿ ನಡೆದಿದೆ. ಅಲ್ಲಿನ ಹತ್ತಿಗೂಡುರ ಗ್ರಾಮದ ಬ್ರಿಡ್ಜ್ ಬಳಿ ಬಸ್ ಪಲ್ಟಿ ಹೊಡೆದಿದೆ. 7ಜನ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ. ಸಾವನ್ನಪ್ಪಿದ ಇಬ್ಬರು ನಿವಾಸಿಗಳು ಕಲಬುರ್ಗಿಯ ಮೂಲದವರು ಎಂದು ತಿಳಿದುಬಂದಿದೆ.ವಿಆರ್ಎಲ್ ಬಸ್ ಕಲಬುರ್ಗಿಯಿಂದ ಬೆಂಗಳೂರು ಕಡೆ ತೆರಳುತ್ತಿತ್ತು. ಬಸ್ ನಲ್ಲಿ 37 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ವೇಳೆ ಬಸ್ ಪಲ್ಟಿ ಹೊಡೆದಿದೆ. ಘಟನೆಯಲ್ಲಿ ಹಲವಾರು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಬಳಿಕ ಅವರನ್ನು ಚಿಕಿತ್ಸೆಗಾಗಿ ಶಹಾಪುರ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸುರಪುರ ಡಿವೈಎಸ್ಪಿ ಜಾವೇದ್ ಇನಾಮ್ದಾರ್ ಮೃತಪಟ್ಟ ಪ್ರಯಾಣಿಕರ ಬಗ್ಗೆ ಖಚಿತ ಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಪಲ್ಲಕ್ಕಿ ಟ್ರಾಕ್ಟರ್ ಗೆ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸಮೀಪದ ಗೊಲ್ಲಹಳ್ಳಿ ಬಳಿ ಜರುಗಿದೆ. ವೀರಸಂದ್ರ ವಾಸಿ ರಂಗನಾಥ(33) ಯಾರಂಡಹಳ್ಳಿ ವಾಸಿ, ಹರಿಬಾಬು(25) ಮೃತರು ಎನ್ನಲಾಗಿದೆ. ಗೊಲ್ಲಹಳ್ಳಿ ಗ್ರಾಮದ ಜಾತ್ರೆ ಪಲ್ಲಕಿ ಉತ್ಸವದ ವೇಳೆ ಅವಘಡ ಸಂಭವಿಸಿದೆ. ಪಲ್ಲಕ್ಕಿ ಉತ್ಸವ ಮುಗಿಸಿ ವಾಪಸ್ ಬರುವಾಗಿ ಪಲ್ಲಕ್ಕಿಗೆ ವಿದ್ಯುತ್ ತಂತಿ ತಗುಲಿದೆ. ಈ ವೇಳೆ ಟ್ರಾಕ್ಟರ್ ಚಾಲಕ ಮತ್ತು ಆತನನ್ನು ರಕ್ಷಣೆ ಧಾವಿಸಿದ ವ್ಯಕ್ತಿಗೆ ವಿದ್ಯುತ್ ಶಾಕ್ ದೊರೆತಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಠಾಣೆ ಸಿಬ್ಬಂದಿಯಿಂದ ರಕ್ಷಣೆ ಮಾಡಲಾಗಿದೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಇಬ್ಬರು ಸಾವನ್ನಪ್ಪಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚಾಮರಾಜನಗರ: ಅನೈತಿಕ ಸಂಬಂಧ ಹಿನ್ನಲೆ ಅಣ್ಣನನ್ನು ಚಾಕುವಿನಿಂದ ಇರಿದು ತಮ್ಮ ಕೊಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೌಡಳ್ಳಿ ಗ್ರಾಮದಲ್ಲಿ ಜರುಗಿದೆ. ಚೌಡಳ್ಳಿ ಗ್ರಾಮದ ಪ್ರಸಾದ್( 45) ಮೃತಪಟ್ಟ ದುರ್ದೈವಿ ಎನ್ನಲಾಗಿದೆ. ಚೌಡಳ್ಳಿ ಗ್ರಾಮದ ಅವಿವಾಹಿತ ಕುಮಾರ್ ಅಣ್ಣನ ಕೊಲೆ‌ ಮಾಡಿದ ಆರೋಪಿ ಎನ್ನಲಾಗಿದೆ. ಆರೋಪಿ ಕುಮಾರ ಎಂಬಾತ ಅಣ್ಙ ಪ್ರಸಾದ ಪತ್ನಿ( ಅತ್ತಿಗೆ) ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ. ಅನೈತಿಕ ಸಂಬಂಧಕ್ಕೆ ಅಡ್ಡಿಯಾಗದಿರಲಿ ಎಂದು ಯೋಜನೆ ರೂಪಿಸಿ ಅಣ್ಣನನ್ನು ಆರೋಪಿ ಕುಮಾರ್ ಕೊಲೆ ಮಾಡಿದ್ದಾನೆ. ಶನಿವಾರ ತಡರಾತ್ರಿ ಘಟನೆ ಸಂಭವಿಸಿದೆ. ಕೊಲೆ ಮಾಡಿದ 2 ಗಂಟೆಯಲ್ಲಿಯೇ ಆರೋಪಿಯನ್ನು ಗುಂಡ್ಲುಪೇಟೆ ಪೋಲೀಸರು ಅರೆಸ್ಟ್ ಮಾಡಿದ್ದಾರೆ. ಕೊಲೆ ಮಾಡಿ ಪರಾರಿಯಾಗಲು ಆರೋಪಿ ಕುಮಾರ್ ಯತ್ನಿಸಿದ್ದ. ಗುಂಡ್ಲುಪೇಟೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ದೇಶದ ಜನರಿಗೆ ಅಮುಲ್ ಶಾಕಿಂಗ್ ನ್ಯೂಸ್ ನ್ಯೂಡಿದ್ದು, ಹಾಲಿನ ಬೆಲೆಯಲ್ಲಿ 2 ರೂಪಾಯಿ ಏರಿಕೆ ಮಾಡಿದೆ. ಹಾಲಿನ ನಿರ್ವಹಣೆ ಮತ್ತು ಉತ್ಪಾದನೆ ವೆಚ್ಚ ಹೆಚ್ಚಳ ಆಗುತ್ತಿರುವ ಕಾರಣ ನೀಡಿರುವ ಗುಜರಾತ್ ಸಹಕಾರಿ ಹಾಲು ಮಾರಾಟ ಒಕ್ಕೂಟ (ಜಿಸಿಎಂಎಂಎಫ್), ಅಮುಲ್ ಹಾಲಿನ ಬೆಲೆಯನ್ನು 2 ರೂಪಾಯಿ ಏರಿಕೆ ಮಾಡಲಾಗಿದೆ. ದೇಶದಲ್ಲಿರುವ ಎಲ್ಲಾ ಮಾರುಕಟ್ಟೆಗಳಲ್ಲೂ ಅಮುಲ್ ಹಾಲಿನ ಬೆಲೆಯಲ್ಲಿ ಲೀಟರ್‌ ಗೆ 2 ರೂಪಾಯಿ ಏರಿಕೆ ಆಗಲಿದೆ. ಪರಿಷ್ಕೃತ ದರವು ಇಂದಿನಿಂದಲೇ ಜಾರಿಗೆ ಬರುತ್ತಿದೆ ಎಂದು ಜಿಸಿಎಂಎಂಎಫ್‌ನ ಎಂಡಿ ಜಯನ್ ಮೆಹ್ತಾ ಹೇಳಿದ್ದಾರೆ. GCMMF 2023 ಫೆಬ್ರವರಿಯಲ್ಲಿ ಹಾಲಿನ ದರವನ್ನು ಹೆಚ್ಚಿಸಿತ್ತು. ರೈತರಿಗೆ ಹೆಚ್ಚುತ್ತಿರುವ ಉತ್ಪಾದನಾ ವೆಚ್ಚವನ್ನು ಸರಿದೂಗಿಸುವ ಕಾರಣದಿಂದ ಹಾಲಿನ ದರದಲ್ಲಿ ಏರಿಕೆ ಮಾಡಲಾಗಿತ್ತಿದೆ ಎಂದು ಸಂಸ್ಥೆ ತಿಳಿಸಿದೆ. 500 ml ಅಮುಲ್ ಎಮ್ಮೆ ಹಾಲು 36 ರೂಪಾಯಿ 500 ml ಅಮುಲ್ ಗೋಲ್ಡ್ ಮಿಲ್ಕ್ 33 ರೂಪಾಯಿ 500 ml ಅಮುಲ್ ಶಕ್ತಿ ಮಿಲ್ಕ್ 30 ರೂಪಾಯಿ ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್, ಶಿವಮೊಗ್ಗ ತರಬೇತಿ ಸಂಸ್ಥೆಯಲ್ಲಿ ದಿನಾಂಕ 1/7/2024 ರಿಂದ 6 ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಆಫ್ ಕೋ–ಆಪರೇಟಿವ್ ಮ್ಯಾನೇಜ್ ಮೆಂಟ್ ತರಬೇತಿ ಆಯೋಜಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಆಭ್ಯರ್ಥಿಗಳಿಂದ ಮತ್ತು ಸಹಕಾರ ಸಂಘ ಹಾಗೂ ಬ್ಯಾಂಕ್‍ ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಅರ್ಜಿ ಸಲ್ಲಿಕೆ ಮಾಡಬಹುದು. ತರಬೇತಿ ಪಡೆಯಲು ಕನಿಷ್ಠ ಎಸ್ಎಸ್ಎಲ್‌ಸಿ ವಿದ್ಯಾರ್ಹತೆ ಹೊಂದಿರಬೇಕು. ಖಾಸಗಿ ಅಭ್ಯರ್ಥಿಗಳಿಗೂ ಪ್ರವೇಶಕ್ಕೆ ಅವಕಾಶವಿರುತ್ತದೆ. ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ ರೂ. 500 ಶಿಷ್ಯವೇತನ ನೀಡಲಾಗುತ್ತದೆ ಹಾಗೂ ವಿಶೇಷ ತರಬೇತಿ ಅನ್ವಯ 30 ವರ್ಷದೊಳಗಿನ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾಸಿಕ ರೂ. 600 ಶಿಷ್ಯವೇತನ ನೀಡಲಾಗುತ್ತದೆ. ಅಭ್ಯರ್ಥಿಗಳು ಅರ್ಜಿಗಳನ್ನು ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ ಮೆಂಟ್ ಶಿವಮೊಗ್ಗ, ವಿನೋಬನಗರ 2ನೇ ಹಂತ ಇಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಜೂನ್ 15ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ…

Read More

ಮಡಿಕೇರಿ: ಜಿಲ್ಲೆಯಲ್ಲಿ ಮುಂಗಾರು ಆರಂಭವಾಗುವ ಲಕ್ಷಣಗಳು ಕಾಣುತ್ತಿದ್ದು, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ ಗಮನಹರಿಸುವಂತೆ ಸಗಟು ಹಾಗೂ ಚಿಲ್ಲರೆ ರಸಗೊಬ್ಬರ ಮಾರಾಟಗಾರರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಕೆ, ವಿತರಣೆ, ದಾಸ್ತಾನು ಮತ್ತಿತರ ವಿಷಯ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಂಗಾರು ಸಂದರ್ಭದಲ್ಲಿ ಗುಣಮಟ್ಟದ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಪೂರೈಕೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಕೃಷಿಕರಿಂದ ದೂರು ಕೇಳಿ ಬರದಂತೆ ಎಚ್ಚರವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆ ನಿಟ್ಟಿನಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಅವರು ನುಡಿದರು. ಈ ಬಾರಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಆದ್ದರಿಂದ ಜಿಲ್ಲೆಗೆ ಬೇಕಿರುವ ರಸಗೊಬ್ಬರ ದಾಸ್ತಾನು ಮಾಡಿಕೊಂಡು ಕೃಷಿಕರಿಗೆ ಕಾಲಕಾಲಕ್ಕೆ ಪೂರೈಸಬೇಕು. ರಸಗೊಬ್ಬರ ದಾಸ್ತಾನು, ವಿತರಣೆ ಸಂಬಂಧ ಮಾಹಿತಿಯ ಪಟ್ಟಿಯನ್ನು ಪ್ರತೀ ನಿತ್ಯ ಪ್ರಕಟಿಸುವುದರ ಜೊತೆಗೆ ಮಾಧ್ಯಮಗಳಲ್ಲಿಯೂ ಬಿಡುಗಡೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು. ಜಿ.ಪಂ.ಸಿಇಒ…

Read More

ಧಾರವಾಡ: ಮೇ 7 ರಂದು ಜರುಗಿದ ಧಾರವಾಡ ಲೋಕಸಭಾ ಮತಕ್ಷೇತ್ರದ ಚುನಾವಣೆಯ ಮತ ಏಣಿಕಾ ಕಾರ್ಯಕ್ಕೆ ಧಾರವಾಡ ಜಿಲ್ಲಾಡಳಿತದಿಂದ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಸಿಬ್ಬಂದಿಗಳಿಗೆ ಅಗತ್ಯ ತರಬೇತಿ ನೀಡಲಾಗಿದೆ. ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ ಪ್ರತಿ ವಿಧಾನಸಭಾ ಮತಕ್ಷೇತ್ರಕ್ಕೆ 14 ಟೇಬಲ್ ಗಳಂತೆ ಒಟ್ಟು 112 ಟೇಬಲ್ ಗಳನ್ನು ಮತ ಏಣಿಕೆಗೆ ಸಿದ್ದಗೊಳಿಸಲಾಗಿದ್ದು, ಅಂದಾಜು 20 ಸುತ್ತುಗಳಲ್ಲಿ ಮತ ಏಣಿಕೆ ಕಾರ್ಯ ನಡೆಯಲಿದೆ ಎಂದು ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು. ಅವರು ಇಂದು ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ಲೋಕಸಭಾ ಚುನಾವಣೆಯ ಮತ ಏಣಿಕೆ ಕಾರ್ಯದ ಸಿದ್ದತೆ ಮತ್ತು ಮತ ಏಣಿಕಾ ಕೇಂದ್ರದ ಕುರಿತು ಮಾಹಿತಿ ನೀಡಿ, ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಭಾರತ ಚುನಾವಣಾ ಆಯೋಗದ ಆದೇಶದಂತೆ ಮೊಬೈಲ್ ಹಾಗೂ ಸ್ಮಾರ್ಟ್ ವಾಚ್, ಎಲೆಕ್ಟ್ರಾನಿಕ್ ಡಿವೈಸಿಸ್ ಗಳನ್ನು ತರಲು ಅವಕಾಶವಿಲ್ಲ. ಮತ ಏಣಿಕಾ ಕೇಂದ್ರಕ್ಕೆ ಬರುವ ಅಭ್ಯರ್ಥಿಗಳು, ಮತ ಏಣಿಕಾ ಏಜಂಟರು, ಚುನಾವಣಾ ಏಜಂಟರು ಹಾಗೂ ಇತರರು ತಮ್ಮ…

Read More

ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆಯ ಖಾಸಗಿ ಅಂಗಡಿಯೊಂದರಲ್ಲಿ ಸರ್ಕಾರದ ಕ್ಷೀರಭಾಗ್ಯ ಯೋಜನೆಯ ಹಾಲು ಪಾಕೆಟ್ ಪತ್ತೆಯಾಗಿದೆ. ವೈ.ಎನ್.ಹೊಸಕೋಟೆ ಗ್ರಾಮದ ಎಸ್.ಕೆ.ಪಿ.ಟಿ. ರಸ್ತೆಯ ಅಂಗಡಿಯೊಂದರಲ್ಲಿ ಹಲವಾರು ದಿನಗಳಿಂದ ಈ ಹಾಲು ಪಾಕೆಟ್ ಮಾರಾಟವಾಗುತ್ತಿದೆ. ಖಚಿತ ಮಾಹಿತಿ ಮೇರೆಗೆ ತಾಲ್ಲೂಕು ಸಿಡಿಪಿಓ ಸುನಿತಾ ಈ ಬಗ್ಗೆ ತಪಾಸಣೆ ಮಾಡಿದಾಗ ಅಂಗಡಿಯಲ್ಲಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಅಂಗಡಿ ಮಾಲೀಕರನ್ನು ವಿಚಾರಿಸಿದಾಗ ಯಾರೋ ಗುರುತು ತಿಳಿಯದ ವ್ಯಕ್ತಿಗಳು ನಮಗೆ ಕೊಟ್ಟು ಹೋಗಿದ್ದಾರೆ ಎಂದು ಹಾರಿಕೆಯ ಉತ್ತರವನ್ನು ನೀಡಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲಾಗುತ್ತಿದೆ. ಎಲ್ಲಾ ಅಂಗನವಾಡಿಗಳಲ್ಲಿ ಸ್ಟಾಕ್ ಚೆಕ್ ಮಾಡಲಾಗುವುದು. ಅಕ್ರಮ ಕಂಡುಬಂದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಿಡಿಪಿಓ ತಿಳಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

Read More