Author: admin

ಆಧಾರ್ ಕಾರ್ಡ್ ಮಾಹಿತಿಯನ್ನು ಉಚಿತವಾಗಿ ಪರಿಷ್ಕರಿಸಲು ನೀಡಿದ್ದ ಗಡುವನ್ನು ಆಧಾರ್ ಪ್ರಾಧಿಕಾರ 2024ರ ಜೂನ್ 14ರವರೆಗೆ ವಿಸ್ತರಿಸಿದ್ದು, ಜೂನ್ 14 ರೊಳಗೆ ಅಪ್ ಡೇಟ್ ಮಾಡಲು ಸೂಚನೆ ನೀಡಿದೆ. ಉಚಿತ ಪರಿಷ್ಕರಣೆ ಸೇವೆಯು ಆನ್ಲೈನ್ ಪೋರ್ಟಲ್ ನಲ್ಲಿ ಮಾತ್ರ ಲಭ್ಯವಿದ್ದು, ಅಲ್ಲಿ ದಾಖಲೆಗಳನ್ನು ಅಪ್ಲೋಡ್ ಮಾಡುವ ಮೂಲಕ ತಿದ್ದುಪಡಿಗೆ ಮನವಿ ಸಲ್ಲಿಸಬಹುದಾಗಿದೆ. ಆಧಾರ್ ಕೇಂದ್ರಕ್ಕೆ ಹೋದರೆ 50 ರೂ. ಪಾವತಿಸುವುದು ಕಡ್ಡಾಯವಾಗಿದೆ. https://myaadhaar.uidai.gov.in/ ವೆಬ್ ಸೈಟ್ ಗೆ ಲಾಗ್ ಇನ್ ಮಾಡಿ. ವಿಳಾಸವನ್ನು ನವೀಕರಿಸಲು ಮುಂದುವರಿಯಿರಿ’ ಆಯ್ಕೆಯನ್ನು ಆರಿಸಿ. ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾದ ಒಟಿಪಿಯನ್ನು ನಮೂದಿಸಿ.’ಡಾಕ್ಯುಮೆಂಟ್ ಅಪ್ಡೇಟ್’ ಆಯ್ಕೆಯ ಮೇಲೆ ಕ್ಲಿಕ್ ಮಾಡಿ; ನಿವಾಸಿಯ ಪ್ರಸ್ತುತ ವಿವರಗಳನ್ನು ಪ್ರದರ್ಶಿಸಲಾಗುತ್ತದೆ. ವಿವರಗಳನ್ನು ಪರಿಶೀಲಿಸಿ ಮತ್ತು ಮುಂದಿನ ಹೈಪರ್ ಲಿಂಕ್ ಕ್ಲಿಕ್ ಮಾಡಿ.ಈಗ ಡ್ರಾಪ್ಡೌನ್ ಪಟ್ಟಿಯಿಂದ ಗುರುತಿನ ಪುರಾವೆ ಮತ್ತು ವಿಳಾಸದ ಪುರಾವೆಯನ್ನು ಆಯ್ಕೆ ಮಾಡಿ.ನಿಮ್ಮ ವಿಳಾಸಕ್ಕೆ ಸಂಬಂಧಿಸಿದ ಪುರಾವೆಗಳನ್ನು ಅಪ್ಲೋಡ್ ಮಾಡಿ ಈಗ ‘ಸಲ್ಲಿಸಿ’ ಬಟನ್ ಕ್ಲಿಕ್ ಮಾಡಿ ಮತ್ತು ನಿರ್ದಿಷ್ಟ…

Read More

ಬೆಂಗಳೂರು: ಎಲೆಕ್ಟ್ರಾನಿಕ್‌ ಸಿಟಿ ಸಮೀಪದ ರಾಯಸಂದ್ರದಲ್ಲಿ ಲೈನ್ ಮ್ಯಾನ್ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ರಾಯಚೂರು ಮೂಲದ ನಾಗರಾಜು ಬಡಿಗೇ‌ರ್ (28) ಮೃತ ಬೆಸ್ಕಾಂ ಸಿಬ್ಬಂದಿಯಾಗಿದ್ದಾರೆ. ಬೆಂಗಳೂರಿನ ವೀರಸಂದ್ರ ಸಬ್ ಡಿವಿಷನ್ ನಲ್ಲಿ ಕಳೆದ ಒಂಬತ್ತು ವರ್ಷಗಳಿಂದ ಬೆಸ್ಕಾಂ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದ ನಾಗರಾಜು ಮಧ್ಯಾಹ್ನ ರಾಯಸಂದ್ರ ಬಳಿ ವಿದ್ಯುತ್ ಲೈನ್ ಸರಿಪಡಿಸುವ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿ ಕಂಬದ ಮೇಲಿಂದ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿದ್ದ ಬೆಸ್ಕಾಂ ಸಿಬ್ಬಂದಿಯನ್ನು ಕೂಡಲೇ ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೂ ಆಸ್ಪತ್ರೆಗೆ ಬರುವ ವೇಳೆಗೆ ನಾಗರಾಜು ಬಡಿಗೇ‌ರ್ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚಂಡೀಗಢ: ಪಂಜಾಬ್ ‌ನಲ್ಲಿ ಸಿರ್ಹಿಂದ್‌ ನ ಮಾಧೋಪುರ ಬಳಿ ಭಾನುವಾರ ಬೆಳಗ್ಗೆ ಸಿರ್ಹಿಂದ್ ರೈಲು ನಿಲ್ದಾಣದಲ್ಲಿ ನಿಂತಿದ್ದ ಸರಕು ಸಾಗಣೆ ರೈಲಿಗೆ ಹಿಂದಿನಿಂದ ಮತ್ತೊಂದು ರೈಲು ಡಿಕ್ಕಿ ಹೊಡೆದು, ಇಬ್ಬರು ಲೋಕೋ ಪೈಲಟ್‌ ಗಳು ಗಾಯಗೊಂಡಿದ್ದಾರೆ. ಗಾಯಗೊಂಡ ಪೈಲಟ್‌ ಗಳನ್ನು ಫತೇಘರ್ ಸಾಹಿಬ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ಗಾಯಗೊಂಡಿರುವ ಲೋಕೋ ಪೈಲಟ್‌ ಗಳನ್ನು ವಿಕಾಸ್ ಕುಮಾರ್ ಮತ್ತು ಹಿಮಾಂಶು ಕುಮಾರ್ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಪಟಿಯಾಲಾದ ರಾಜೀಂದ್ರ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚಿಕ್ಕಬಳ್ಳಾಪುರ: ತಾಲೂಕಿನ ಮಂಚೇನಹಳ್ಳಿ ಬಳಿ ಇರುವ ದಂಡಿಗಾನಹಳ್ಳಿ ಡ್ಯಾಮ್‌ ನಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕಿಯರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಮುಂಬೈ ಮೂಲದ ಆಲಿಯಾ ಪಾಟೀಲ್(17) ಹಾಗೂ ಜೋಯ ಪಾಟೀಲ್(14) ಘಟನೆಯಲ್ಲಿ ಮೃತಪಟ್ಟಿದ್ದಾರೆ. ಬೇಸಿಗೆಯ ರಜೆ ಹಿನ್ನೆಲೆಯಲ್ಲಿ ಮುಂಬೈ ಮೂಲದ ಬಾಲಕಿಯರು ಗೌರಿಬಿದನೂರು ನಗರದ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಇನ್ನೆರಡು ದಿನಗಳ ನಂತರ ಮುಂಬೈಗೆ ವಾಪಸ್ ಆಗಲಿದ್ದರು. ದಂಡಿಗಾನಹಳ್ಳಿ ಜಲಾಶಯವನ್ನು ಕಣ್ತುಂಬಿಕೊಳ್ಳಬೇಕು ಎಂದು ಜಲಾಶಯಕ್ಕೆ ಹೋದವರು ಜಲಾಶಯದ ಬಳಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳೀಯರು ಇಬ್ಬರ ಮೃತದೇಹವನ್ನು ನೀರಿನಿಂದ ಮೇಲೆ ತಂದಿದ್ದಾರೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು. HSRP ಅಳವಡಿಸಲು ಸಾರಿಗೆ ಇಲಾಖೆ ನೀಡಿದ ಗಡುವು ಹೈಕೋರ್ಟ್ ಆದೇಶದ ಅನ್ವಯ ಜೂನ್ 12ರವರೆಗೆ ಇರಲಿದೆ. * https://transport.karnataka.gov.in  ಅಥವಾ www.siam.in  ಜಾಲತಾಣಕ್ಕೆ ಭೇಟಿ ನೀಡಿ, Book HSRP ಕ್ಲಿಕ್ ಮಾಡಿ. * ನಿಮ್ಮವಾಹನ ತಯಾರಕರನ್ನು ಆಯ್ಕೆಮಾಡಿ. * ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ. • HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ. * HSRP ಶುಲ್ಕವನ್ನು ಆನ್‌ ಲೈನ್‌ ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ. * ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ. ರವಾನಿಸಲಾಗುವುದು. * ನಿಮ್ಮಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ. * ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು. * ನಿಮ್ಮವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಮುಟ್ಟಿನ ಸಮಯದಲ್ಲಿ, ಮಹಿಳೆಯು ಅಸ್ವಸ್ಥತೆ, ಭಾರೀ ರಕ್ತಸ್ರಾವ, ಉಬ್ಬುವುದು, ಹಾರ್ಮೋನ್ ಬದಲಾವಣೆಗಳಿಂದಾಗಿ ಏಕಾಗ್ರತೆಗೆ ತೊಂದರೆ ಮತ್ತು ಇತರ ಸಮಸ್ಯೆಗಳನ್ನು ಎದುರಿಸಬಹುದು, ಅದು ಅವಳ ಕೆಲಸದ ಮೇಲೆ ಕೇಂದ್ರೀಕರಿಸಲು ಕಷ್ಟಕರವಾಗಬಹುದು. ಮುಟ್ಟಿನ ರಜೆ ಎಂದರೆ ನೌಕರನು ತನ್ನ ಮುಟ್ಟಿನ ಕಾರಣದಿಂದ ಕೆಲಸ ಮಾಡಲು ಸಾಧ್ಯವಾಗದಿದ್ದರೆ ತನ್ನ ಕೆಲಸದಿಂದ ಪಾವತಿಸಿದ ಅಥವಾ ಪಾವತಿಸದ ರಜೆಯನ್ನು ತೆಗೆದುಕೊಳ್ಳಲು ಆಯ್ಕೆ ಮಾಡುವ ಸಮಯ. ಮುಟ್ಟಿನ ನೋವು ಅಥವಾ ಅಸ್ವಸ್ಥತೆಯನ್ನು ಅನುಭವಿಸುತ್ತಿರುವಾಗ ಕೆಲಸಗಾರರು ಅಥವಾ ವಿದ್ಯಾರ್ಥಿಗಳು ಸಮಯವನ್ನು ತೆಗೆದುಕೊಳ್ಳಲು ಅನುಮತಿಸುವ ನೀತಿಗಳನ್ನು ಮುಟ್ಟಿನ ರಜೆ ಅಥವಾ ಅವಧಿ ರಜೆ ಎಂದು ಉಲ್ಲೇಖಿಸಲಾಗುತ್ತದೆ. ಮುಟ್ಟಿನ ರಜೆಯನ್ನು ಬೆಂಬಲಿಸುವವರು ಮತ್ತು ಬೆಂಬಲಿಸದವರ ನಡುವೆ ನಿರಂತರ ಚರ್ಚೆ ನಡೆಯುತ್ತಿದೆ. ಮುಟ್ಟಿನ ರಜೆಯ ಪ್ರಸ್ತಾಪ ಇಂದು ನಿನ್ನೆಯದಲ್ಲ. ಇತಿಹಾಸದ ಪುಟಗಳನ್ನು ತಿರುವಿದರೆ ಮೊದಲನೇ ಮಹಾಯುದ್ಧದ ಸಂದರ್ಭದಲ್ಲೇ ರಷ್ಯಾದಲ್ಲಿ ಕೂಲಿ ಕಾರ್ಮಿಕ ಮಹಿಳೆಯರಿಗೆ ಮುಟ್ಟಿನ ದಿನ ಕೆಲಸಕ್ಕೆ ವಿನಾಯ್ತಿ ನೀಡಲಾಗುತ್ತಿತ್ತು. ಅಂತೆಯೇ 2ನೇ ಮಹಾಯುದ್ಧದ ಸಂದರ್ಭದಲ್ಲಿ ಜಪಾನ್ ಕೂಡಾ ಇದನ್ನೇ ಅನುಸರಿಸಿತ್ತು. ಇತಿಹಾಸವನ್ನು ಅವಲೋಕಿಸಿದರೆ ಮುಟ್ಟಿನ ರಜೆಯ ಕಲ್ಪನೆ…

Read More

ಸರಗೂರು: ರಾಜ್ಯಾದ್ಯಂತ ಕಳೆದ ಒಂದೂವರೆ ತಿಂಗಳಿಂದ ಬೇಸಿಗೆ ರಜೆಯಲ್ಲಿದ್ದ ಶಾಲೆಗಳು ಪುನರಾಂಭಗೊಂಡಿದ್ದು, ರಜೆಯ ಖುಷಿಯಲ್ಲಿದ್ದ ಮಕ್ಕಳು ಶಾಲೆಯತ್ತ ಹೆಜ್ಜೆ ಹಾಕಿದ್ದಾರೆಂದು ಮುಖ್ಯ ಶಿಕ್ಷಕ ಬಿ.ಕೆ. ನಂಜಯ್ಯ ಹೇಳಿದರು. ತಾಲೂಕಿನ ವಾಲ್ಮೀಕಿ ಆಶ್ರಮ ಶಾಲೆ ಬಿ ಮಟಕೆರೆ, ಗಿರಿಜನ ಆಶ್ರಮ ಶಾಲೆ ಬಸವನಗಿರಿ ಹಾಡಿ, ವಾಲ್ಮೀಕಿ ಆಶ್ರಮ ಶಾಲೆ ಮೇಟಿಕುಪ್ಪೇ ಗ್ರಾಮದ ಸರ್ಕಾರಿ ಆಶ್ರಮ ಶಾಲೆಯಲ್ಲಿ ಮಕ್ಕಳಿಗೆ ಗುಲಾಬಿ ಹೂ ನೀಡಿ, ಪುಸ್ತಕ ವಿತರಿಸಿ ಸಿಹಿ ಹಂಚಿ ಬರಮಾಡಿಕೊಂಡರು. ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಮಕ್ಕಳು ಶಾಲೆಗೆ ಬರುವ ಮೊದಲ ದಿನ ಶಾಲೆಯಲ್ಲಿ ಬಿಸಿಯೂಟ ಸಿದ್ಧಪಡಿಸಿದ್ದು, ಮಧ್ಯಾಹ್ನದ ಬಿಸಿಯೂಟಕ್ಕೆ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಬಿಸಿಯೂಟ ಬಡಿಸಲಾಯಿತು. ಮಕ್ಕಳ ಪೋಷಕರೊಂದಿಗೆ ಸಂವಾದ ನಡೆಸಿ ನಿಮ್ಮ ಮಕ್ಕಳ ಹೆಸರನ್ನು ನೊಂದಾಯಿಸಿಕೊಂಡು ಮಕ್ಕಳನ್ನು ಶಾಲೆಗೆ ಕಳುಹಿಸಿ ಎಂದು ವಿನಂತಿಸಿಕೊಂಡರು. ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕರಾದ ಶ್ರೀ ಬಿಕೆ ನಂಜಯ್ಯ, ಸಹ ಶಿಕ್ಷಕರುಗಳಾದ ನಂದಕುಮಾರ, ಉಮೇಶ್, ಶ್ವೇತಾ ಎನ್, ಸುಮಲತಾ, ಸದಾನಂದ, ಬಿ ಮಟ್ಟಕೆರೆ ಶಾಲೆಯ ಸಹ…

Read More

ಅಮೆರಿಕದ ರಾಷ್ಟ್ರೀಯ ಸ್ಪೆಲ್ಲಿಂಗ್ ಬೀ ಸ್ಪರ್ಧೆಯಲ್ಲಿ ಭಾರತೀಯ ಮೂಲದ 12 ವರ್ಷದ ಬಾಲಕ ಬೃಹತ್ ಸೋಮ ಪ್ರಥಮ ಸ್ಥಾನ ಗೆದ್ದ ಸಾಧನೆ ಮಾಡಿದ್ದಾರೆ. ಮೂರನೇ ಪ್ರಶಸ್ತಿಯೂ ಭಾರತೀಯ ಮೂಲದ ಬಾಲಕನಿಗೆ ಸಿಕ್ಕಿರುವುದು ವಿಶೇಷ. ಫ್ಲೋರಿಡಾದ ವಿದ್ಯಾರ್ಥಿಯಾಗಿರುವ ಸೋಮ 90 ಸೆಕೆಂಡುಗಳಲ್ಲಿ 29 ಪದಗಳನ್ನು ಸರಿಯಾಗಿ ಉಚ್ಚರಿಸಿ ಪ್ರಥಮ ಸ್ಥಾನ ಪಡೆದಿದ್ದರೆ ಫೈನಲ್ ಹಂತದಲ್ಲಿದ್ದ ಫೈಝನ್ ಜಾಕಿ 20 ಪದಗಳನ್ನು ಮಾತ್ರ ಉಚ್ಚರಿಸಲು ಸಾಧ್ಯವಾಗಿ ಎರಡನೇ ಸ್ಥಾನ ಪಡೆದಿದ್ದಾನೆ. ಮೂರನೇ ಸ್ಥಾನವನ್ನು ಭಾರತೀಯ ಮೂಲದವರಾದ ಶ್ರೇಯ್ ಪಾರಿಖ್ ಮತ್ತು ಅನನ್ಯಾ ಪ್ರಸನ್ನ ಜಂಟಿಯಾಗಿ ಪಡೆದಿದ್ದಾರೆ. ಪ್ರಥಮ ಸ್ಥಾನ ಪಡೆದ ಬೃಹತ್ ಸೋಮ 50,000 ಡಾಲರ್(ಸುಮಾರು 41.64 ಲಕ್ಷ ರೂ.) ನಗದು ಬಹುಮಾನದ ಜೊತೆಗೆ ಇತರ ಬಹುಮಾನವನ್ನೂ ಪಡೆದರು. 30 ಪದಗಳಲ್ಲಿ 29ರ ನಿಖರ ಅಕ್ಷರಗಳನ್ನು ಬಿಡಿಸಿ ಹೇಳುವ ಮೂಲಕ ಸ್ಪೆಲ್ಲಿಂಗ್ ಬೀ ಸ್ಪರ್ಧೆಯ ಇತಿಹಾಸದಲ್ಲಿ ಸೋಮ ಹೊಸ ದಾಖಲೆ ಬರೆದಿದ್ದಾನೆ. ಈತನ ತಂದೆ ಶ್ರೀನಿವಾಸ ಸೋಮ ತೆಲಂಗಾಣ ರಾಜ್ಯದ ನಲ್ಗೊಂಡಾ ಜಿಲ್ಲೆಯವರಾಗಿದ್ದಾರೆ. ನಮ್ಮತುಮಕೂರಿನ…

Read More

ಇಂತಹ ಸಮಯದಲ್ಲೇ ಸಾವು ಬರುತ್ತದೆ ಅಂತ ಹೇಳುವುದಕ್ಕೆ ಸಾಧ್ಯವಿಲ್ಲ. ಭೂಮಿಯ ಋಣ ತೀರಿದರೆ ಯಾವುದೇ ಸಂದರ್ಭದಲ್ಲೂ ಕೂಡ ಮನುಷ್ಯನ ಬದುಕು ಕೊನೆಯಾಗಬಹುದು. ಇದಕ್ಕೆ ತಾಜಾ ಉದಾಹರಣೆಯೆಂದರೆ ಡ್ಯಾನ್ಸರ್ ಒಬ್ಬರ ಸಾವು. ಅವರ ಹೆಸರು ಬಲ್ವಿಂದರ್ ಸಿಂಗ್ ಛಾವ್ರಾ ಅಂತ. ಅವರು ಇಂದೋರ್ ನಲ್ಲಿ ದೇಶ ಭಕ್ತಿಗೀತೆ ಹಾಡಿಗೆ ರಾಷ್ಟ್ರ ಧ್ವಜವನ್ನು ಹಿಡಿದು ಡ್ಯಾನ್ಸ್ ಮಾಡುತ್ತಿದ್ದರು. ಈ ವೇಳೆ ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವಿಗೀಡಾಗಿದ್ದಾರೆ. ನಗರದ ಫುಟಿ ಕೋಠಿ ಪ್ರದೇಶದ ಅಗ್ರಸೇನ್ ಧಾಮ್ ‌ನಲ್ಲಿ ಆಸ್ತಾ ಯೋಗ ಕ್ರಾಂತಿ ಅಭಿಯಾನ ಎಂಬ ಗುಂಪಿನಿಂದ ಉಚಿತ ಯೋಗ ಶಿಬಿರ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಬಲ್ವಿಂದರ್ ಅವರನ್ನು ಕರೆಯಲಾಗಿತ್ತು. ಬಲ್ವಿಂದರ್ ಹಲವು ಕಾರ್ಯಕ್ರಮಗಳಿಗೆ ಸಾಂಸ್ಕೃತಿಕವಾಗಿ ಮನರಂಜನೆ ನೀಡಲು ಹೋಗುತ್ತಾರೆ. ಹಾಗಾಗಿ ಈ ಯೋಗ ಶಿಬಿರಕ್ಕೆ ಅವರನ್ನು ಕರೆಯಲಾಗಿತ್ತು ಎಂದು ವರದಿ ತಿಳಿಸಿದೆ. ವೇದಿಕೆಯಲ್ಲಿ ಬಲ್ವಿಂದರ್ ಯೋಧನ ಸಮವಸ್ತ್ರವನ್ನು ಧರಿಸಿ ದೇಶಭಕ್ತಿ ಗೀತೆ ‘ಮಾ ತುಜೆ ಸಲಾಮ್’ ಹಾಡಿಗೆ ರಾಷ್ಟ್ರ ಧ್ವಜವನ್ನು ಹಿಡಿದು ನೆರೆದಿದ್ದ…

Read More

ಲಕ್ನೋ: ಪತಿ ಮತ್ತು ಮಾವ ಸೇರಿ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ಥಳಿಸಿದ್ದಲ್ಲದೇ ಆಕೆಯ ಬಾಯಿಗೆ ಕೀಟನಾಶಕವನ್ನು ಸುರಿದ ಅಮಾನವೀಯ ಘಟನೆಯೊಂದು ಉತ್ತರಪ್ರದೇಶದ ಹಾಪುರ ಜಿಲ್ಲೆಯಲ್ಲಿ ನಡೆದಿದೆ. ಪತಿ ಮತ್ತು ಮಾವ ಮಹಿಳೆಗೆ ಥಳಿಸಿದ್ದಲ್ಲದೆ, ಆಕೆಯನ್ನು ಕೊಲ್ಲುವ ಉದ್ದೇಶದಿಂದ ಬೆಳೆಗೆ ಬಳಸುವ ಕೀಟನಾಶಕವನ್ನು ಆಕೆಯ ಬಾಯಿಗೆ ಸುರಿದಿದ್ದಾರೆ. ಈ ವೇಳೆ ಸಹೋದರ ವಿರೋಧ ವ್ಯಕ್ತಪಡಿಸಿದಾಗ ಆರೋಪಿಗಳು ಆತನಿಗೂ ಥಳಿಸಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆ ವಿವರ: ಹಾಪುರ್ ಜಿಲ್ಲೆಯ ಗರ್ಮುಕ್ತೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಬಗದ್‌ಪುರ ಗ್ರಾಮದ ನಿವಾಸಿ ಶೀಲಾ ಅವರು ಗಜ್ರೌಲಾ ಪೊಲೀಸ್ ಠಾಣಾ ವ್ಯಾಪ್ತಿಯ ಫಿರೋಜ್‌ಪುರ ಗ್ರಾಮದ ಸುರೇಂದ್ರ ಎಂಬಾತನನ್ನು ವಿವಾಹವಾಗಿದ್ದರು. ಮಂಗಳವಾರ ರಾತ್ರಿ 8.30ರ ಸುಮಾರಿಗೆ ಪೋಷಕರಿಗೆ ಶೀಲಾಳ ಮೇಲೆ ನಡೆದ ಹಲ್ಲೆಯ ಬಗ್ಗೆ ಮಾಹಿತಿ ಲಭಿಸಿದೆ. ವಿಚಾರ ಗೊತ್ತಾಗುತ್ತಿದ್ದಂತೆಯೇ ಶೀಲಾಳ ಸಹೋದರ ಜಯಪ್ರಕಾಶ್ ತನ್ನ ಸ್ನೇಹಿತನ ಜೊತೆ ನೇರವಾಗಿ ಆಕೆಯ ಮನೆಗೆ ಬಂದರು. ಈ ವೇಳೆ ಸಹೋದರನ ಮುಂದೆಯೇ ಪತಿ…

Read More