Subscribe to Updates
Get the latest creative news from FooBar about art, design and business.
- ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ
- ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!
- ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ
- ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ
- ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
- ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
- ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
- ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
Author: admin
ತುಮಕೂರು: ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆಯನ್ನು ಸರ್ಕಾರ ಸ್ಥಗಿತಗೊಳಿಸದಿದ್ದರೆ ಮುಂದಿನ ವಿಧಾನಸಭೆ ಅಧಿವೇಶನ ಸಮಯದಲ್ಲಿ, ವಿಧಾನಸೌದ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದು ಹೋರಾಟ ಸಮಿತಿ ನೇತೃತ್ವ ವಹಿಸಿರುವ ಮಾಜಿ ಸಚಿವ ಸೊಗಡು ಶಿವಣ್ಣ ಎಚ್ಚರಿಕೆ ನೀಡಿದ್ದಾರೆ. ಇಂದು ತುಮಕೂರಿನ ಶ್ರೀ ಮುರುಘರಾಜೇಂದ್ರ ಸಭಾ ಭವನದಲ್ಲಿ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರು ಸಭೆ ಸೇರಿ, ಮುಂದಿನ ಹೋರಾಟದ ಬಗ್ಗೆ ವಿಸ್ತೃತವಾಗಿ ಚರ್ಚಿಸದ ಸಂಧರ್ಭದಲ್ಲಿ, ಈ ನಿರ್ಣಯದ ಬಗ್ಗೆ ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು. ಕಳೆದ ಮೇ 30 ರಂದು ನಡೆದ ಗೃಹ ಸಚಿವ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ಮನೆ ಮುಂಭಾಗದ ಧರಣಿಗೆ ಆಗಮಿಸಿ, ಬಂಧನಕ್ಕೆ ಒಳಗಾದವರು ಮತ್ತು ಸಹಕರಿಸಿದ ಎಲ್ಲರಿಗೂ ಮಾಜಿ ಸಚಿವ ಸೊಗಡು ಶಿವಣ್ಣ ಧನ್ಯವಾದಗಳನ್ನು ಅರ್ಪಿಸಿದರು. ಶಾಂತಿಯುತ, ಸಂಘಟಿತ ಹೋರಾಟ: ಬಿ. ಸುರೇಶ್ ಗೌಡ ಮುಂದಿನ ದಿನಗಳಲ್ಲಿ ಹೇಮಾವತಿ ಲಿಂಕ್ ಕೆನಾಲ್ ವಿರುದ್ಧ ಹಂತ ಹಂತವಾಗಿ ಹೋರಾಟಕ್ಕೆ ಜಿಲ್ಲೆಯ…
ಬೆಂಗಳೂರು: ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ತನಿಖೆಯಲ್ಲಿ ತಪ್ಪಿತಸ್ಥರು ಎಂದು ಗೊತ್ತಾದರೆ ಎಲ್ಲರ ವಿರುದ್ದವೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದ ಸಿ.ಎಂ. ಸಿದ್ದರಾಮಯ್ಯ ಅವರು, “ವಾಲ್ಮೀಕಿ ನಿಗಮದ ಪ್ರಕರಣಕ್ಕೆ ಸಂಬಂಧಪಟ್ಟಂತೆ SIT ರಚಿಸಲಾಗಿದ್ದು ತನಿಖೆ ಚುರುಕಾಗಿ ನಡೆಯುತ್ತಿದೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು. ಬಿಜೆಪಿ ಯವರು ದಾಖಲಿಸಿದ್ದ ಖಾಸಗಿ ದೂರಿನ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗಿದ್ದ ಮುಖ್ಯಮಂತ್ರಿಗಳು ಈ ಬಗ್ಗೆ ಪ್ರತಿಕ್ರಿಯಿಸಿ ಸಿವಿಲ್ ಸ್ವರೂಪದ ಪ್ರಕರಣ ಇದಾಗಿದೆ. ನಾವು ಕಾನೂನು ಪಾಲಕರು. ಕಾನೂನು ರಕ್ಷಕರಾಗಿ, ಪಾಲಕರಾಗಿ ನ್ಯಾಯಾಲಯದ ಸೂಚನೆ ಮೇರೆಗೆ ಇಂದು ನಾನು ನ್ಯಾಯಾಧೀಶರ ಮುಂದೆ ಹಾಜರಾಗಿದ್ದೇನೆ. ಜಾಮೀನು ಪಡೆದಿದ್ದೇನೆ” ಎಂದರು. “ನನ್ನ ಹಾಗೂ ಕೆಪಿಸಿಸಿ ಅಧ್ಯಕ್ಷರು ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧವೂ ಖಾಸಗಿ ದೂರು ದಾಖಲಾಗಿತ್ತು. ರಾಹುಲ್ ಗಾಂಧಿಯವರೂ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ” ಎಂದರು. ಈ ಸಂದರ್ಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್,…
ನ್ಯೂಯಾರ್ಕ್: ಇದೇ ಜೂ.9 ರಂದು ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯಕ್ಕೆ ಬೆದರಿಕೆ ಕರೆಗಳು ಬಂದಿದ್ದು, ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ನ್ಯೂಯಾರ್ಕ್ನ ಐಸೆನ್ ಹೋವರ್ ಪಾರ್ಕ್ ಕ್ರೀಡಾಂಗಣದಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಸಾರ್ವಜನಿಕರ ಸುರಕ್ಷತೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ಪಂದ್ಯಗಳು ಸುಗಮವಾಗಿ ನಡೆಯುವುದನ್ನು ಖಚಿತಪಡಿಸಿಕೊಳ್ಳಲು ಕಾನೂನು ಜಾರಿ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದ್ದೇನೆ ಎಂದು ನ್ಯೂಯಾರ್ಕ್ನ ಗವರ್ನರ್ ಕ್ಯಾಥಿ ಹೊಚುಲ್ ತಿಳಿಸಿದ್ದಾರೆ. ಮ್ಯಾನ್ ಹ್ಯಾಟನ್ ನ ಪೂರ್ವಕ್ಕೆ 25 ಮೈಲುಗಳಷ್ಟು ದೂರದಲ್ಲಿರುವ ಐಸೆನ್ ಹೋವರ್ ಪಾರ್ಕ್ ಕ್ರೀಡಾಂಗಣವು ಜೂನ್ 3 ರಿಂದ 12 ರ ವರೆಗೆ ಎಂಟು ICC T20 WC ಪಂದ್ಯಗಳ ಆತಿಥ್ಯ ವಹಿಸುತ್ತದೆ. ಇದರಲ್ಲಿ ಎರಡು ಏಷ್ಯನ್ ಸಾಂಪ್ರದಾಯಿಕ ಎದುರಾಳಿಗಳ ನಡುವಿನ ಹಣಾಹಣಿಯೂ ಸೇರಿದೆ. ಸುಧಾರಿತ ಕಣ್ಗಾವಲು ಮತ್ತು ಸಂಪೂರ್ಣ ಸ್ಕ್ರೀನಿಂಗ್ ಪ್ರಕ್ರಿಯೆಗಳು ಸೇರಿದಂತೆ ಉನ್ನತ ಭದ್ರತಾ ಕ್ರಮಗಳಲ್ಲಿ ತೊಡಗಿಸಿಕೊಳ್ಳಲು ನಾನು ನ್ಯೂಯಾರ್ಕ್ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದ್ದೇನೆ ಎಂದು ಹೊಚುಲ್ ಮಾಹಿತಿ…
ಬಿಹಾರದಲ್ಲಿ ಬಿಸಿಲಿನ ತಾಪಕ್ಕೆ ಒಂದೇ ದಿನದಲ್ಲಿ 10 ಚುನಾವಣಾ ಸಿಬ್ಬಂದಿ ಸೇರಿ 14 ಮಂದಿ ಸಾವನ್ನಪ್ಪಿದ ಘಟನೆ ಜರುಗಿದೆ. ಉತ್ತರ ಭಾರತದಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ಬಿಹಾರದ ಬಹುತೇಕ ಸ್ಥಳಗಳಲ್ಲಿ 44 ಡಿಗ್ರಿ ತಾಪಮಾನ ದಾಖಲಾಗಿದೆ. ಬಕ್ಸಾರ್ನಲ್ಲಿ ಗುರುವಾರ ದಾಖಲೆಯ 47.1 ಡಿಗ್ರಿ ತಾಪಮಾನ ದಾಖಲಾಗಿತ್ತು. ರೋಹ್ಟಾಸ್ನಲ್ಲಿ ಮೂವರು ಚುನಾವಣಾ ಅಧಿಕಾರಿಗಳು ಮತ್ತು ಕೈಮೂರ್ ಮತ್ತು ಔರಂಗಾಬಾದ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದ ವಿವಿಧೆಡೆ ಇನ್ನೂ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಹೇಳಿಕೆ ತಿಳಿಸಿದೆ. ಮೃತರ ಕುಟುಂಬಗಳಿಗೆ ಪರಿಹಾರ ನೀಡುವ ಪ್ರಕ್ರಿಯೆ ಆರಂಭವಾಗಿದೆ. ಬಿಸಿಗಾಳಿಯಿಂದಾಗಿ ಬಿಹಾರದಲ್ಲಿ ಎಲ್ಲಾ ಶಾಲೆಗಳು, ಕೋಚಿಂಗ್ ಸಂಸ್ಥೆಗಳು ಮತ್ತು ಅಂಗನವಾಡಿ ಕೇಂದ್ರಗಳನ್ನು ಜೂನ್ 8ರವರೆಗೆ ಮುಚ್ಚಲಾಗಿದೆ. ಒಂದೇ ದಿನದಲ್ಲಿ 14 ಮಂದಿ ಸಾವನ್ನಪ್ಪುವ ಮೂಲಕ ಬಿಸಿಗಾಳಿಯಿಂದ ಬಿಹಾರದಾದ್ಯಂತ ಇದುವರೆಗೂ ಒಟ್ಟು 24 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ತಾಪಮಾನ 44 ಡಿಗ್ರಿ ಸೆಲ್ಸಿಯಸ್ ಮೀರಿದೆ. ಬಿಹಾರದ ಔರಂಗಾಬಾದ್ ಜಿಲ್ಲೆಯ…
ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಅನುಮತಿ ಹಿಂಪಡೆದ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಸಿಬಿಐ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ. ಪ್ರಕರಣ ಸಂಬಂಧ ಸಲ್ಲಿಕೆಯಾದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಕೆ. ಸೋಮಶೇಖರ್ ಮತ್ತು ಉಮೇಶ್ ಎಂ. ಅಡಿಗ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸಿಬಿಐ ಪರವಾಗಿ ವಾದಿಸಿದ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ. ಪ್ರಸನ್ನ ಕುಮಾರ್ ಸಿಬಿಐ ಒಮ್ಮೆ ನೀಡಿದ ಸಮ್ಮತಿ ಹಿಂಪಡೆಯುವ ಅಧಿಕಾರ ಸರ್ಕಾರಕ್ಕಿಲ್ಲ. ಈಗಾಗಲೇ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಳಿಸಿದೆ. ಸಮ್ಮತಿ ಹಿಂಪಡೆದ ಕಾನೂನುಬಾಹಿರ, ಸರ್ಕಾರದ ಕ್ರಮ ರದ್ದುಪಡಿಸಲು ನ್ಯಾಯಪೀಠವನ್ನು ಮನವಿ ಮಾಡಿದರು. ವಾದ ಆಲಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬಾಲಿವುಡ್ ನಟ ಸನ್ನಿ ಡಿಯೋಲ್ ಮೇಲೆ ಗಂಭೀರ ಆರೋಪಗಳು ಕೇಳಿ ಬಂದಿವೆ. 2023ರಲ್ಲಿ ಬಿಡುಗಡೆ ಆದ ‘ಗದರ್ 2’ ಸಿನಿಮಾದಿಂದ ಅವರ ಬೇಡಿಕೆ ಹೆಚ್ಚಾಗಿದೆ. ಆದರೆ ಅನೇಕ ನಿರ್ಮಾಪಕರಿಗೆ ಸನ್ನಿ ಡಿಯೋಲ್ ಮೋಸ ಮಾಡಿದ್ದಾರೆ ಎನ್ನಲಾಗಿದೆ. ಬಾಲಿವುಡ್ ನಿರ್ಮಾಪಕ ಸೌರವ್ ಗುಪ್ತ ಅವರು ಸುದ್ದಿಗೋಷ್ಠಿ ನಡೆಸಿ ಶಾಕಿಂಗ್ ವಿಚಾರಗಳನ್ನು ಬಯಲು ಮಾಡಿದ್ದಾರೆ. ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಪಳಗಿರುವ ಸೌರವ್ ಗುಪ್ತಾ ಅವರು ಸಿನಿಮಾ ನಿರ್ಮಾಪಕನಾಗಿಯೂ ಗುರುತಿಸಿಕೊಂಡಿದ್ದಾರೆ. ಅವರಿಂದ ಸನ್ನಿ ಡಿಯೋಲ್ ಕೋಟ್ಯಂತರ ರೂಪಾಯಿ ಹಣ ಪಡೆದು ಮೋಸ ಮಾಡಿದ್ದಾರೆ ಎನ್ನಲಾಗಿದೆ. 2016ರಲ್ಲಿಯೇ ಸನ್ನಿ ಡಿಯೋಲ್ ಅವರಿಗೆ ಒಂದು ಸಿನಿಮಾದಲ್ಲಿ ನಟಿಸುವ ಸಲುವಾಗಿ ಸೌರವ್ ಗುಪ್ತಾ ಅವರು 1 ಕೋಟಿ ರೂಪಾಯಿ ಅಡ್ವಾನ್ಸ್ ನೀಡಿದ್ದರು. ಆದರೆ ಈ ಸಿನಿಮಾ ಈವರೆಗೆ ಸೆಟ್ಟೇರಿಲ್ಲ. ನಾವು ಅವರಿಗೆ 1 ಕೋಟಿ ರೂಪಾಯಿ ಅಡ್ವಾನ್ಸ್ ನೀಡಿದ್ದೆವು. ಆದರೆ ನಮ್ಮ ಸಿನಿಮಾ ಮಾಡುವ ಬದಲು ಅವರು ಬೇರೆ ಸಿನಿಮಾದಲ್ಲಿ ನಟಿಸಿದರು. ಅಲ್ಲದೇ ಪದೇ ಪದೇ ನನ್ನಿಂದ ಅವರು…
ಚುನಾವಣಾ ಮತ ಎಣಿಕೆಯ ಸಂಬಂಧ ಇಂದು ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಆವರಣ, ಭದ್ರತಾ ಕೊಠಡಿ, ಮತ ಎಣಿಕೆಯ ಸ್ಥಳಗಳಿಗೆ ಜಿಲ್ಲಾಧಿಕಾರಿಗಳಾದ ಶುಭಕಲ್ಯಾಣ್ ರವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಐಎಎಸ್ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ ಐಪಿಎಸ್, ಮತ್ತು ತುಮಕೂರು ನಗರ ಡಿಎಸ್ಪಿ ಚಂದ್ರಶೇಖರ್, ಯೋಜನಾ ವ್ಯವಸ್ಪಾಪಕರಾದ ರಾಜಶೇಖರ್ ಮತ್ತು ಇತರೆ ಅಧಿಕಾರಿಗಳು ಜೊತೆಯಲ್ಲಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಫೋನ್ ಪೇ ಇದೀಗ ಬಳಕೆದಾರರಿಗೆ ಶುಭ ಸುದ್ದಿಯೊಂದನ್ನು ನೀಡಿದೆ. ಹೊಸ ಸೇವೆಗಳನ್ನು ಒದಗಿಸಲಾಗಿದೆ. ಸಾಲ ಪಡೆಯಲು ಮುಂದಾಗಿರುವವರಿಗೆ ಇದು ಸಮಾಧಾನಕರ ಸುದ್ದಿ ಎನ್ನಬಹುದು. ಫೋನ್ ಪೇ ಮೂಲಕ ಸಾಲಗಳನ್ನು ಪಡೆಯಬಹುದು. ಮ್ಯೂಚುವಲ್ ಫಂಡ್ ಗಳಲ್ಲಿ ಸಾಲ ತೆಗೆದುಕೊಳ್ಳಬಹುದು. ಚಿನ್ನದ ಸಾಲವನ್ನು ಸಹ ಪಡೆಯಬಹುದು. ಬೈಕ್ ಸಾಲಗಳು ಮತ್ತು ಕಾರು ಸಾಲಗಳು ಸಹ ಲಭ್ಯವಿದೆ. ಗೃಹ ಸಾಲವನ್ನೂ ತೆಗೆದುಕೊಳ್ಳಬಹುದು. ಶಿಕ್ಷಣ ಸಾಲ ಹಾಗೂ ಆಸ್ತಿಯ ಮೇಲೆ ಸಾಲವೂ ಲಭ್ಯವಿದೆ. ಸಾಲ ನೀಡುವ ಸಂಸ್ಥೆಗಳೊಂದಿಗೆ ಫೋನ್ ಪೇ ಪಾಲುದಾರಿಕೆ ಹೊಂದಿದೆ. ಹಾಗಾಗಿ ಈಗ ಫೋನ್ ಪೇ ಬಳಕೆದಾರರು ತಮ್ಮ ಆಯ್ಕೆಯ ಸಾಲವನ್ನು ಸುಲಭವಾಗಿ ಪಡೆಯುವ ಸೌಲಭ್ಯವನ್ನು ಹೊಂದಿರುತ್ತಾರೆ. ಸಾಲ ನೀಡುವ ಸಂಸ್ಥೆಗಳು ಡಿಜಿಟಲ್ ಮೂಲಕ ಸಾಲ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಿವೆ. ರೂ. 5 ಲಕ್ಷದವರೆಗಿನ ಸಾಲವನ್ನು ನೀವು ಸುಲಭವಾಗಿ ಪಡೆಯಬಹುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಸರಗೂರು: ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಭಾನ್ ಮಾತನಾಡಿ, “ಮುಖ್ಯಮಂತ್ರಿ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಲು, ಮಾಜಿ ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷರಾದ ಬಿಜೆ ವಿಜಯಕುಮಾರ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಬೇಕು” ಎಂದರು. “ವಿಧಾನಪರಿಷತ್ತಿಗೆ ಜೂನ್ ನಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಇವರುಗಳಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಿ ವಿಧಾನ ಪರಿಷತ್ ಗೆ ಕಳುಹಿಸಿದಲ್ಲಿ, ಈ ಭಾಗದಲ್ಲಿ ಸರ್ಕಾರದ ಯೋಜನೆಗಳು ಯಶಸ್ವಿ ಮುಖಾಂತರ ಜಾರಿಯಾಗಿ, ಪಕ್ಷದ ಕಾರ್ಯಕರ್ತರ ಬೆಳವಣಿಗೆಗೂ ಸಹಕಾರಿಯಾಗಲಿದೆ” ಎಂದರು. “ಯತೀಂದ್ರ ಸಿದ್ದರಾಮಯ್ಯರವರು, ಬಿ.ಜೆ. ವಿಜಯಕುಮಾರ್ ಇವರುಗಳು, ಕೋಟೆ ಸರಗೂರು ನಂಜನಗೂಡು, ಗುಂಡ್ಲುಪೇಟೆ, ನರಸೀಪುರ ಇನ್ನಿತರ ಎಲ್ಲಾ ತಾಲ್ಲೂಕಿನಲ್ಲೂ ಹಗಲು ಇರುಳು ಭರ್ಜರಿ ಮತ ಯಾಚನೆ ಮಾಡಿ ಲೋಕಸಭಾ ಚುನಾವಣೆಯಲ್ಲಿ ವಿವಿಧೆಡೆ ಸಂಚರಿಸಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚನೆ ಮಾಡಿದ್ದಾರೆ. ಜನಪರ ಕೆಲಸ ಮಾಡುವ ಮೂಲಕ ಕಾರ್ಯಕರ್ತರು ಹಾಗೂ…
ಜೂನ್ ತಿಂಗಳಲ್ಲಿ ಬ್ಯಾಂಕ್ ಗಳಿಗೆ ನೇರ ಭೇಟಿ ನೀಡಿ ವಹಿವಾಟು ನಡೆಸಬೇಕಿದ್ದರೆ, ಆ ತಿಂಗಳಲ್ಲಿ ಯಾವೆಲ್ಲಾ ದಿನ ಬ್ಯಾಂಕ್ ಗಳು ಮುಚ್ಚಲ್ಪಟ್ಟಿರುತ್ತವೆ ಅನ್ನೋದನ್ನು ತಿಳಿದುಕೊಂಡಿರಬೇಕು. ಭಾರತೀಯ ರಿಸರ್ವ್ ಬ್ಯಾಂಕ್ (RBI) ಪ್ರತಿ ತಿಂಗಳ ಬ್ಯಾಂಕ್ ರಜೆಗಳ ವಿವರಗಳನ್ನು ಘೋಷಿಸುತ್ತದೆ. ಅದರಂತೆಜೂನ್ ತಿಂಗಳಲ್ಲಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಬ್ಯಾಂಕ್ಗಳು ಕನಿಷ್ಠ 12 ದಿನ ಮುಚ್ಚಲ್ಪಟ್ಟಿರುತ್ತವೆ. ಸಂಪೂರ್ಣ ಪಟ್ಟಿ ಇಲ್ಲಿದೆ. ಜೂನ್ ತಿಂಗಳ ಬ್ಯಾಂಕ್ ರಜೆಗಳ ಸಂಪೂರ್ಣ ಪಟ್ಟಿಯನ್ನು ಕೆಳಗೆ ನೀಡಲಾಗಿದೆ: ಜೂನ್ 02 : ಭಾನುವಾರ ಜೂನ್ 08 : ಎರಡನೇ ಶನಿವಾರ ಜೂನ್ 09 : ಭಾನುವಾರ ಜೂನ್ 15 : ರಾಜ ಸಂಕ್ರಾಂತಿ (ಮಿಜೋರಾಂ ಮತ್ತು ಒರಿಸ್ಸಾ ರಾಜ್ಯಗಳಿಗೆ ರಜೆ) ಜೂನ್ 16: ಭಾನುವಾರ ಜೂನ್ 17 : ಬಕ್ರಿ ಈದ್ (ದೇಶದ ಬಹುತೇಕ ರಾಜ್ಯಗಳಲ್ಲಿ ರಜೆ) ಜೂನ್ 18: ಬಕ್ರಿ ಈದ್ (ಜಮ್ಮುವಿನ ಶ್ರೀನಗರದಲ್ಲಿ ಬ್ಯಾಂಕ್ ರಜೆ) ಜೂನ್ 22: ನಾಲ್ಕನೇ ಶನಿವಾರ ಜೂನ್ 23: ಭಾನುವಾರ…