Subscribe to Updates
Get the latest creative news from FooBar about art, design and business.
- ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ
- ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!
- ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ
- ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ
- ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
- ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
- ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
- ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
Author: admin
ಈ ವರ್ಷ, ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿಯೂ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ, ವಿಶೇಷವಾಗಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳ ಕರ್ನಾಟಕದಲ್ಲಿ ಹೆಚ್ಚಿನ ಮಳೆಯಾಗಲಿದೆ. ರಾಜ್ಯದಲ್ಲಿ ಈ ಬಾರಿ ಉತ್ತಮ ಮುಂಗಾರು ಆಗಲಿದ್ದು, ಇದು ಕೃಷಿ ಕ್ಷೇತ್ರದ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ. ನೀರಿನ ಕೊರತೆಯನ್ನು ನಿವಾರಿಸಲು ಇದು ಗಮನಾರ್ಹವಾಗಿ ಸಹಾಯ ಮಾಡುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮೇ 31 ರಿಂದ ರಾಜ್ಯದಲ್ಲಿ ಮಾನ್ಸೂನ್ ಪ್ರಾರಂಭವಾಗಿದ್ದು, ಜೂನ್ 5 ರ ಸುಮಾರಿಗೆ ಎಲ್ಲೆಡೆ ಮಳೆ ಆರಂಭವಾಗಲಿದೆ. ಆದಾಗ್ಯೂ, ಚಂಡಮಾರುತಗಳಿಂದ ಬದಲಾವಣೆಗಳಾದರೆ ಮುಂಗಾರು ಇನ್ನೂ ನಾಲ್ಕೈದು ದಿನ ವಿಳಂಬವಾಗುವ ಸಾಧ್ಯತೆಯಿದೆ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕರ್ನಾಟಕ ವಿಧಾನ ಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರ ಹಾಗೂ ಶಿಕ್ಷಕ ಕ್ಷೇತ್ರದ ಚುನಾವಣೆಯಲ್ಲಿ ಮತದಾನವು ಜೂನ್ 3ರಂದು ಪೂರ್ವಾಹ್ನ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ. ಎಲ್ಲಾ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲಿರುವ ಮತದಾರರಿಗೆ ಜೂ.3ರ ಸೋಮವಾರ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದು ಸರಕಾರ ಆದೇಶ ಹೊರಡಿಸಿದೆ. ಮತದಾರರು ಮತಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಆಯಾ ತಾಲೂಕು ಕಚೇರಿಗಳಲ್ಲಿ ಪರಿಶೀಲಿಸಿ ಖಚಿತಪಡಿಸಿ ಕೊಳ್ಳಬಹುದು. ಮತದಾನ ಮಾಡುವ ಸಮಯದಲ್ಲಿ ಮತದಾರರನ್ನು ಗುರುತಿಸಲು ಮತದಾರರ ಭಾವಚಿತ್ರವುಳ್ಳ ಗುರುತಿನ ಚೀಟಿ(ಎಪಿಕ್)ಯನ್ನು ಮುಖ್ಯ ದಾಖಲಾತಿಯಾಗಿ ಹಾಜರು ಪಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಎಪಿಕ್ ಹೊಂದಿಲ್ಲದಿದ್ದಲ್ಲಿ ಅಂತಹವರು ಭಾರತ ಚುನಾವಣಾ ಆಯೋಗವು ನಿರ್ಧರಿಸಿರುವ ಪೂರಕ ದಾಖಲಾತಿಗಳ ಪೈಕಿ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಇಂಡಿಯನ್ ಪಾಸ್ಪೋರ್ಟ್ ಇತ್ಯಾದಿಗಳಲ್ಲಿ ಒಂದನ್ನು ಹಾಜರುಪಡಿಸಿ ಮತದಾನ ಮಾಡಲು ಅವಕಾಶವಿರುತ್ತದೆ ಎಂದು ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.…
ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ 73ನೇ ವಯಸ್ಸಿನಲ್ಲೂ ಸಖತ್ ಆಕ್ಟೀವ್ ಆಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನಿಮಾಗಳಿಗೆ ಬಣ್ಣ ಹಚ್ಚುತ್ತಿರೋ ನಟ ಪ್ರತಿ ಭಾರಿಯೂ ಹೊಸದೇನೋ ಕಲಿಯಬೇಕು ಎಂದು ಉತ್ಸಾಹದಿಂದಿರುತ್ತಾರೆ. ಅಂತೆಯೇ ಈ ಬಾರಿಯೂ ಹೊಸ ಅನುಭವ ಪಡೆಯಬೇಕು ಎಂದು ಹಿಮಾಲಯದ ಗುಹೆಗಳತ್ತ ಹೆಜ್ಜೆ ಹಾಕಿದ್ದಾರೆ. ರಜನಿಕಾಂತ್ ನಟನೆಯ ‘ಕೂಲಿ’ ಸಿನಿಮಾದ ಶೂಟಿಂಗ್ ಆರಂಭಿಸಬೇಕಿದೆ. ಅದಕ್ಕೂ ಮುನ್ನ ಆಧ್ಯಾತ್ಮದ ಅನುಭವ ಪಡೆಯಲು ಅವರು ಕೆಲವು ಸ್ಥಳಗಳಿಗೆ ತೆರಳಲಿದ್ದಾರೆ. ಈಗಾಗಲೇ ಕೇದರನಾಥಕ್ಕೆ ಹೋಗಿರುವ ತಲೈವ ಹಿಮಾಲಯಕ್ಕೂ ಭೇಟಿ ನೀಡಲಿದ್ದಾರೆ. ಅಲ್ಲಿನ ಗುಹೆಗಳಲ್ಲಿ ಅಧ್ಯಾತ್ಮದ ಹೊಸ ಅನುಭವ ಪಡೆಯಲಿದ್ದಾರೆ. ಅಲ್ಲಿಂದ ವಾಪಸ್ ಬಂದ ನಂತರ ‘ಕೂಲಿ’ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿ ಆಗಲಿದ್ದಾರೆ. ರಜನಿಕಾಂತ್ ಗುರುವಾರ ಮುಂಜಾನೆಯೇ ಚೆನ್ನೈನಿಂದ ಡೆಹರಾಡೂನ್ ತಲುಪಿದ್ದಾರೆ. ಡೆಹರಾಡೂನ್ ವಿಮಾನ ನಿಲ್ದಾಣದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿ, ‘ಪ್ರತಿ ವರ್ಷ ನಾನು ಹೊಸ ಅನುಭವ ಪಡೆಯುತ್ತೇನೆ. ಅದರಿಂದ ನನ್ನ ಆಧ್ಯಾತ್ಮದ ಪಯಣ ಮುಂದುವರಿಯುತ್ತದೆ. ಈ ಬಾರಿ ಕೂಡ ನನಗೆ ಹೊಸ ಅನುಭವ…
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಹುಭಾಷಾ ನಟ ಕಿಶೋರ್ ಆಗಾಗ ವಾಗ್ದಾಳಿ ನಡೆಸುತ್ತಲೆ ಇರುತ್ತಾರೆ. ಸೋಷಿಯಲ್ ಮೀಡಿಯಾದಲ್ಲಿ ಮೋದಿ ಬಗ್ಗೆ ಹರಿಹಾಯುವ ನಟ ಇದೀಗ ಮತ್ತೆ ಪ್ರಧಾನಿ ವಿರುದ್ಧ ಕಿಡಿ ಕಾರಿದ್ದಾರೆ. ಇತ್ತೀಚಿನ ಸಂದರ್ಶನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಹಾತ್ಮ ಗಾಂಧಿಬಗ್ಗೆ ಮಾತನಾಡುತ್ತಾ ಗಾಂಧಿ ಕುರಿತಾಗಿ 1982ರಲ್ಲಿ ಸಿನಿಮಾ ಬಂದ ನಂತರವೇ ಅವರ ಬಗ್ಗೆ ವಿಶ್ವದ ಇಂಚಿಂಚಿಗೂ ತಿಳಿಯಿತು ಎಂದು ಹೇಳಿದ್ದರು. ಅವರ ಈ ಕಾಮೆಂಟ್ಅನ್ನು ವಿರೋಧ ಪಕ್ಷಗಳು ಬಲವಾಗಿ ಟೀಕೆ ಮಾಡುತ್ತಿವೆ. ಸೋಶಿಯಲ್ ಮೀಡಿಯಾದಲ್ಲೂ ಈ ಕುರಿತಾಗಿ ಪ್ರಧಾನಿ ಮೋದಿ ಸಾಕಷ್ಟು ಟ್ರೋಲ್ ಗೂ ತುತ್ತಾಗಿದ್ದಾರೆ. ಇದರ ನಡುವೆ ನಟ ಕಿಶೋರ್ ಪ್ರಧಾನಮಂತ್ರಿ ನರೇಂದ್ರ ಮೋದಿ ಆಡಿರುವ ಮಾತನ್ನು ಟೀಕೆ ಮಾಡಿದ್ದು, ಕೆಲಸ ಮಾಡಲಾಗದ ಅಯೋಗ್ಯ ಮೋದಿಗೇನು ಹುಚ್ಚೇ ಎಂದು ಪ್ರಶ್ನೆ ಮಾಡಿದ್ದಾರೆ. ‘ಇದೇನು ಹುಚ್ಚೋ … ಹೊಲಸು ಕುತಂತ್ರವೋ?.. ತನ್ನ ಬೌದ್ಧಿಕ ದಿವಾಳಿತನ ಮತ್ತು ಕೆಲಸ ಮಾಡಲಾಗದ ಅಯೋಗ್ಯತೆಯನ್ನು, ನಿರುದ್ಯೋಗ, ಬೆಲೆಯೇರಿಕೆ, ಬಡತನ, ಮಣಿಪುರ, ಚೀನಾ, ಅಗ್ನಿವೀರ್, ರೈತ…
ಓಸ್ಲೋ: ಭಾರತದ ಚೆಸ್ಟ್ ಗ್ರ್ಯಾಂಡ್ ಮಾಸ್ಟರ್ ಖ್ಯಾತಿಯ ಆರ್. ಪ್ರಜ್ಞಾನಂದ, ವಿಶ್ವದ ನಂ.1 ಚೆಸ್ ಮಾಸ್ಟರ್ ನಾರ್ವೆಯ ಮ್ಯಾಗ್ನಸ್ ಕಾರ್ಲ್ಸನ್ ಗೆ ಸೋಲುಣಿಸಿದ್ದಾರೆ. ನಾರ್ವೆ ಚೆಸ್ ಟೂರ್ನಿಯ 3ನೇ ಸುತ್ತಿನಲ್ಲಿ ಪ್ರಜ್ಞಾನಂದ ಈ ಸಾಧನೆ ಮಾಡಿದ್ದಾರೆ. ಇದು 6 ಬಾರಿ ವಿಶ್ವ ಚೆಸ್ ಚಾಂಪಿಯನ್ ಕಾರ್ಲ್ಸನ್ ವಿರುದ್ಧ ಪ್ರಜ್ಞಾನಂದಗೆ ಒಲಿದ ಮೊದಲ ಗೆಲುವು ಸಹ ಆಗಿದೆ. ಮೂರು ಸುತ್ತಿನ ಬಳಿಕ ಅಂಕಪಟ್ಟಿಯಲ್ಲಿ ಪ್ರಜ್ಞಾನಂದ ಅವರು 5.5 ಪಾಯಿಂಟ್ ಗಳೊಂದಿಗೆ ಮೊದಲ ಸ್ಥಾನ ಪಡೆದರೆ, ಕಾರ್ಲ್ಸನ್ 3 ಪಾಯಿಂಟ್ ಗಳೊಂದಿಗೆ 5ನೇ ಸ್ಥಾನ ಪಡೆದುಕೊಂಡಿದ್ದಾರೆ. ಸೋತು ಗೆದ್ದ ಪ್ರಜ್ಞಾನಂದ: ಕಳೆದ ವರ್ಷ ಅಝರ್ ಬೈಜಾನ್ ನ ಬಾಕುವಿನಲ್ಲಿ ನಡೆದಿದ್ದ ಚೆಸ್ ವಿಶ್ವಕಪ್ ನ ಫೈನಲ್ ಟೈ ಬ್ರೇಕರ್ ಸುತ್ತಿನಲ್ಲಿ ಪ್ರಜ್ಞಾನಂದ ವಿರುದ್ಧವೇ ಗೆಲುವು ಸಾಧಿಸಿ ಮ್ಯಾಗ್ನಸ್ ಕಾರ್ಲ್ಸೆನ್ ಗೆಲುವು ಸಾಧಿಸಿ 6ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ್ದರು. ಭಾರತೀಯ ಚೆಸ್ ಪಟು ಪ್ರಜ್ಞಾನಂದಗೆ ಅಂದು ಸೋಲಾಗಿ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿದ್ದರು. ಇದೀಗ 6…
ಅಂತರ್ಧರ್ಮ ವಿವಾಹ ದಂಪತಿ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೌದು ಮುಸ್ಲಿಂ ಪುರುಷ ಹಾಗೂ ಹಿಂದೂ ಮಹಿಳೆ ವಿವಾಹವನ್ನು ಮುಸ್ಲಿಮ್ ಲಾ ಬೋರ್ಡ್ ಪ್ರಕಾರ ಮಾನ್ಯವಲ್ಲ. ಈ ಮದುವೆಯನ್ನು ಸಿಂಧುಗೊಳಿಸಲು ಸಾಧ್ಯವಿಲ್ಲ ಎಂದು ಮಧ್ಯ ಪ್ರದೇಶ ಹೈಕೋರ್ಟ್ ಹೇಳಿದೆ. ಅಂತರ್ಧರ್ಮ ವಿವಾಹ ದಂಪತಿ ಸಲ್ಲಿಸಿದ್ದ ಅರ್ಜಿಯನ್ನು ಮಧ್ಯಪ್ರದೇಶ ಹೈಕೋರ್ಟ್ ತಿರಸ್ಕರಿಸಿದೆ. ವಿಶೇಷ ವಿವಾಹ ಕಾಯ್ದೆಯಡಿ ಮದುವೆಯಾಗಿದ್ದರೂ ಮುಸ್ಲಿಮ್ ಲಾ ಬೋರ್ಡ್ ಪ್ರಕಾರ ಈ ಮದುವೆಯನ್ನು ಸಿಂಧುಗೊಳಿಸಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ. ಜಸ್ಟೀಸ್ ಗುರುಪಾಲ್ ಸಿಂಗ್ ಅಹ್ಲುವಾಲಿಯಾ ಈ ಕುರಿತು ಮಹತ್ವದ ತೀರ್ಪು ನೀಡಿದ್ದಾರೆ. ಮುಸ್ಲಿಮ್ ಪುರುಷ, ಹಿಂದೂ ಮಹಿಳೆ ನಡುವಿನ ವಿವಾಹಕ್ಕೆ ಮುಸ್ಲಿಮ್ ಕಾನೂನಿನಲ್ಲಿ ಮಾನ್ಯತೆ ಇಲ್ಲ. ಇದನ್ನು ಮಾನ್ಯವಾದ ವಿವಾಹ ಎಂದು ಪರಿಗಣಿಸಲು ಸಾಧ್ಯವಿಲ್ಲ. ಇದಕ್ಕೆ ಕೋರ್ಟ್ ಮುಸ್ಲಿಮ್ ಲಾ ಬೋರ್ಡ್ ನಿಯಮಗಳನ್ನು ಉಲ್ಲೇಖಿಸಿದೆ. ಹಿಂದೂ ಮಹಿಳೆ ಮೂರ್ತಿ ಪೂಜಕರಾಗಿದ್ದಾರೆ. ಇಸ್ಲಾಂನಲ್ಲಿ ಮೂರ್ತಿ ಪೂಜೆಗೆ ಅವಕಾಶವಿಲ್ಲ. ಹಿಂದೂ ಭಕ್ತಿ ಹಾಗೂ ನಂಬಿಕೆ ಇಸ್ಲಾಂಗೆ ತದ್ವಿರುದ್ಧವಾಗಿದೆ.…
ಸಿಂಗಾಪೂರ: ಸಿಂಗಾಪೂರ ಓಪನ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಪಿವಿ ಸಿಂಧು ಎರಡನೇ ಸುತ್ತಿನಲ್ಲೇ ಆಘಾತಕಾರಿ ಸೋಲು ಅನುಭವಿಸುವ ಮೂಲಕ ಹೊರಬಿದ್ದಿದ್ದಾರೆ. ಸ್ಪೇನ್ ನ ಬದ್ದ ಎದುರಾಳಿ ಕರೋಲಿನಾ ಮರೀನ್ ಎದುರು ಸಿಂಧು ಹೋರಾಡಿ ಸೋಲು ಅನುಭವಿಸಿದ್ದಾರೆ. ಮೊದಲ ಸುತ್ತಿನಲ್ಲೇ ಡೆನ್ಮಾರ್ಕ್ನ ಲಿನ್ ಹೊಜ್ಮಾರ್ಕ್ ವಿರುದ್ಧ ಶುಭಾರಂಭ ಮಾಡಿದ್ದ ಸಿಂಧುಗೆ ಎರಡನೇ ಸುತ್ತಿನಲ್ಲೇ ವಿಶ್ವ ನಂ.3 ಶ್ರೇಯಾಂಕಿತೆ ಮರೀನ್ ಎದುರಾದರು. ಸಿಂಧು 21-13, 11-21, 20-22 ಗೇಮ್ ಗಳಲ್ಲಿ ಸಿಂಧು ಸೋಲು ಕಾಣುವ ಮೂಲಕ ಅಭಿಯಾನ ಮುಗಿಸಿದರು. ಮೊದಲ ಗೇಮ್ ನಲ್ಲಿ ಭರ್ಜರಿ ಆಟ ಪ್ರದರ್ಶಿಸುವ ಮೂಲಕ ಶುಭಾರಂಭ ಮಾಡಿದ ಸಿಂಧು, ಆ ಬಳಿಕ ಅದೇ ಹಿಡಿತ ಸಾಧಿಸಲು ವಿಫಲವಾದರು. ಪುರುಷರ ಸಿಂಗಲ್ಸ್ ನಲ್ಲಿ ಪ್ರಣಯ್ ಬೆಲ್ಜಿಯಂನ ಜೂಲಿಯನ್ ಕರಾಗಿ ವಿರುದ್ಧ 21-09, 18-21, 21-19 ಗೇಮ್ಗಳಲ್ಲಿ ಜಯಿಸಿದರು. ಇನ್ನು ಮಹಿಳಾ ಡಬಲ್ಸ್ನಲ್ಲಿ ತ್ರೀಸಾ ಜಾಲಿ- ಗಾಯತ್ರಿ ಗೋಪಿಚಂದ್ ಕೂಡಾ 2ನೇ ಸುತ್ತು ಪ್ರವೇಶಿಸಿದರು. ಆದರೆ ಲಕ್ಷ್ಯ ಸೆನ್, ಡೆನ್ಮಾರ್ಕ್ನ…
ಸರಗೂರು: ಬಿರು ಬಿಸಿಲಿನ ಬೇಸಿಗೆ ರಜೆ ಮಜಾ ಅನುಭವಿಸಿದ್ದ ಮಕ್ಕಳು ಮತ್ತೆ ಶಾಲೆಯತ್ತ ಮರಳುತ್ತಿದ್ದು, ಮೇ 31 ಶುಕ್ರವಾರಂದು ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳನ್ನು ಜೆಎಸ್ಎಸ್ ವಿದ್ಯಾ ಸಂಸ್ಥೆಯ ಮುಖ್ಯೋಪಾಧ್ಯಾಯ ಹಾಗೂ ಶಿಕ್ಷಕರು ಸ್ವಾಗತಿಸಿದರು. ತಾಲ್ಲೂಕಿನ ಪಟ್ಟಣದ ಜೆಎಸ್ಎಸ್ ಶಾಲೆ ಕನ್ನಡ ಮತ್ತು ಆಂಗ್ಲ ಮಾಧ್ಯಮ ಶಾಲೆ ಕಾಲೇಜು ವತಿಯಿಂದ ಶಾಲೆಯನ್ನು ಸಿಂಗಾರಗೊಳಿಸಿ, ಮಕ್ಕಳನ್ನು ಪ್ರೀತಿಯಿಂದ ಬರಮಾಡಿಕೊಂಡರು. ಜೆಎಸ್ಎಸ್ ಶಾಲೆ ಮುಖ್ಯೋಪಾಧ್ಯಾಯ ಮಹಮದ್ ಅಜಂಪಾಷ ಪ್ರತಿ ವರ್ಷದಂತೆ ಶೈಕ್ಷಣಿಕ ವರ್ಷ ಆರಂಭದಲ್ಲಿ ವಿದ್ಯಾರ್ಥಿಗಳನ್ನು ವಿನೂತನವಾಗಿ ಸ್ವಾಗತಿಸುವ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಶಿಕ್ಷಕರು ಶಾಲೆಯನ್ನು ಸಿದ್ಧಗೊಳಿಸಿ, ಶಾಲೆಯನ್ನು ತಳಿರು ತೋರಣಗಳಿಂದ ಅಲಂಕರಿಸಿ, ಮಕ್ಕಳಿಗೆ ಸಿಹಿ ನೀಡಿ ಮುಂದಿನ ತರಗತಿಗೆ ಸ್ವಾಗತಿಸಿದರು. ಪ್ರಾಥಮಿಕ ಮತ್ತು ಪ್ರೌಢ ಸೇರಿದಂತೆ 1500 ಶಾಲೆಯಲ್ಲಿ ಮಕ್ಕಳು ಇದ್ದಾರೆ. ಶಾಲಾ ಪ್ರಾರಂಭೋತ್ಸವದ ಕಾರ್ಯ ಚಟುವಟಿಕೆ ಕುರಿತಂತೆ ಶಿಕ್ಷಕರಿಗೆ ಈಗಾಗಲೇ ಮಾರ್ಗಸೂಚಿ ನೀಡಿದ್ದು, ಮೇ 29ರಂದು ಶಾಲೆಯ ಸ್ವಚ್ಛತೆ, ಮೂಲ ಸೌಲಭ್ಯಗಳ ಪರಿಶೀಲನೆ ನಡೆದಿದ್ದು, ಮೇ 31 ರಂದು ಅದ್ಧೂರಿಯಾಗಿ…
ಕಲಬುರ್ಗಿ: ಹಲ್ಕಾ ಕೆಲಸ ಮಾಡಿರುವ ಆ DCM ಒಕ್ಕಲಿಗರ ನಾಯಕರಾಗಲು ಸಾಧ್ಯವೆ!? ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಯತ್ನಾಳ್, “ಪ್ರಜ್ವಲ್ ಎಸಗಿರುವುದು ಅಕ್ಷಮ್ಯ ಅಪರಾಧ. ಆದರೆ ಪ್ರಕರಣ ಈಗ ನ್ಯಾಯಾಲಯದ ಸುಪರ್ದಿಯಲ್ಲಿದೆ ಮತ್ತು ಎಸ್ಐಟಿ ತನಿಖೆ ನಡೆಸುತ್ತಿದೆ, ತನಿಖೆ ಹೇಗೆ ನಡೆಯುತ್ತಿದೆ ಎಲ್ಲರೂ ನೋಡುತ್ತಿದ್ದೇವೆ. ಪ್ರಜ್ವಲ್ ಡ್ರೈವರ್ ನನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ಅವನನ್ನು ಯಾವ ದೇಶದ ಪಂಚತಾರಾ ಇಟ್ಟಿದ್ದೇನೆ ಅಂತ ಉಪ ಮುಖ್ಯಮಂತ್ರಿ ಹೇಳಬೇಕಲ್ವಾ? ಒಕ್ಕಲಿಗರ ದೊಡ್ಡ ಲೀಡರ್ ಆಗಬೇಕೆನ್ನುವ ಉದ್ದೇಶದಿಂದ ಇಂಥ ಹಲ್ಕಾ ಕೆಲಸ ಡಿಸಿಎಂ ಮಾಡಿದ್ದಾರೆ” ಎಂದರು. “ಪೆನ್ ಡ್ರೈವ್ ಗಳನ್ನು ಹಂಚಿದವರು ಯಾರು? ಅವರನ್ನು ಇದುವರೆಗೆ ಯಾಕೆ ಬಂಧಿಸಿಲ್ಲ? ಹಂಚಿದವರೆಲ್ಲ ಅಪರಾಧಿಗಳು” ಎಂದು ಹೇಳಿಕೆ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ನಗರೀಕರಣದ ಎಫೆಕ್ಟ್ ನಿಂದಾಗಿ ನಗರ ಪ್ರದೇಶಗಳಲ್ಲಿ ಜಾತ್ರೆಯಂತಹ ಧಾರ್ಮಿಕ ಆಚರಣೆಗಳು ಅಪರೂಪ ಎನ್ನುವಂತಾಗಿದೆ. ಆದ್ರೆ ಬೆಂಗಳೂರಿನ ಈವೊಂದು ಗ್ರಾಮದಲ್ಲಿ ಅತ್ಯಂತ ಸಂಭ್ರಮ ಸಡಗರದಿಂದ ಶ್ರೀಸೀತಾರಾಮ ಲಕ್ಷ್ಮಣ ಮತ್ತು ಆಂಜನೇಯ ಸ್ವಾಮಿ ಪರಿವಾರ ಸಮೇತವಾಗಿ ಬ್ರಹ್ಮ ರಥೋತ್ಸವ ಆಚರಿಸಿದ್ದಾರೆ. ಅಷ್ಟಕ್ಕೂ ವಿಜೃಂಭಣೆಯಿಂದ ನಡೆದ ಬ್ರಹ್ಮ ರಥೋತ್ಸವ. ಹೌದು ಬೆಂಗಳೂರು ಹೊರವಲಯ ಬೊಮ್ಮನಹಳ್ಳಿಯ ಹೊಂಗಸಂದ್ರದಲ್ಲಿ ಈ ಬಾರಿ ಬ್ರಹ್ಮ ರಥೋತ್ಸವವನ್ನ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ನೂರಾರು ವರ್ಷಗಳ ಇತಿಹಾಸವಿರುವ ಶ್ರೀ ಸೀತಾರಾಮ ಲಕ್ಷ್ಮಣ ಮತ್ತು ವೀರಾಂಜನೆಯ ಸ್ವಾಮಿ ದೇವಾಲಯವೂ ತನ್ನದೆ ಆದ ವೈಶಿಷ್ಟ್ಯತೆಯನ್ನ ಹೊಂದಿದೆ. ಈ ಬಾರಿ ಪಲ್ಲಕ್ಕಿ ಉತ್ಸವಗಳ ಜೊತೆಗೆ ಮೊದಲನೇ ಬಾರಿಗೆ ಒಂದು ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ರಥದಿಂದ ಅದ್ದೂರಿ ಬ್ರಹ್ಮರಥೋತ್ಸವ ನಡೆಸಲಾಯಿತು. ದೇವಾಲಯದಿಂದ ರಥವನ್ನ ಭಕ್ತರು ಜೈಶ್ರೀರಾಮ್ ಘೋಷಣೆಗಳನ್ನ ಕೂಗುತ್ತ ರಥವನ್ನು ಎಳೆಯುವ ಮೂಲಕ ಸಾವಿರಾರು ಸಂಖ್ಯೆಯ ಭಕ್ತರು ದೇವರ ಕೃಪೆಗೆ ಪಾತ್ರರಾದರು. ಬ್ರಹ್ಮರಥೋತ್ಸವ ಹಿನ್ನೆಲೆ ರಾಜ್ಯದ ವಿವಿಧ ಕಡೆಗಳಿಂದ ಆಗಮಿಸಿದ್ದ ಕಲಾತಂಡಗಳು ಅತ್ಯುತ್ತಮ ಪ್ರದರ್ಶನ…