Author: admin

ಗುರುನಾನಕ ದೇವ ಇಂಜಿಯರಿಂಗ್‌ ಕಾಲೇಜಿನಲ್ಲಿ ʼಜೈಶ್ರೀರಾಮʼ ಗೀತೆ ಹಾಕಿ ನೃತ್ಯ ಮಾಡುವ ವೇಳೆ ಎರಡು ಕೋಮಿನ ವಿದ್ಯಾರ್ಥಿಗಳ ಮಧ್ಯೆ ಗಲಾಟೆ ನಡೆದಿದ್ದು, ಈ ಕುರಿತು ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ 25 ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಘಟನೆಯ ವಿವರ: ಬುಧವಾರ ಮಧ್ಯಾಹ್ನ ಗುರುನಾನಕ ದೇವ ಇಂಜಿಯರಿಂಗ್‌ ಕಾಲೇಜಿನಲ್ಲಿ ಮೇ 30, 31 ರಂದು ಎರಡು ದಿನಗಳ ಕಾಲ ನಡೆಯುವ ತಾಂತ್ರಿಕ ವಾರ್ಷಿಕೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ನಿಮಿತ್ತ ಪೂರ್ವಭಾವಿ ತಯಾರಿ ನಡೆಯುತ್ತಿತ್ತು. ಈ ವೇಳೆ ಕೇಲವು ವಿದ್ಯಾರ್ಥಿಗಳು ʼಜೈಶ್ರೀರಾಮʼ ಹಾಡು ಹಾಕಿ ನೃತ್ಯ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಇನ್ನೊಂದು ಕೋಮಿನ ವಿದ್ಯಾರ್ಥಿಗಳು ಅಡ್ಡಿ ಪಡಿಸಿದರು ಎನ್ನಲಾಗಿದೆ. ಈ ವೇಳೆ ಎರಡು ಕೋಮಿನ ವಿದ್ಯಾರ್ಥಿಗಳ ನಡುವೆ ವಾಗ್ವಾದ ತಾರಕಕ್ಕೇರಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಗಾಂಧಿಗಂಜ್ ಪೊಲೀಸ್ ಠಾಣೆಯ ಪೋಲಿಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಮುಂಜಾಗೃತಾ ಕ್ರಮವಾಗಿ ಎರಡು ಗುಂಪಿನವರ ಮೇಲೆ ಸಿಆರ್‌ ಪಿಸಿ ಕಲಂಗಳ…

Read More

ಹೈಕೋರ್ಟ್ ವಕೀಲೆ ಹಾಗೂ ಕೆಎಎಸ್ ಅಧಿಕಾರಿ ಪತ್ನಿ ಚೈತ್ರಾ ಗೌಡ ಅವರ ಆತ್ಮಹತ್ಯೆ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಸಿಬಿ ವರ್ಗಾಯಿಸಲಾಗಿದೆ. ಮೇ 11ರಂದು ಬೆಂಗಳೂರಿನ ಸಂಜಯನಗರ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿತ್ತು. ಕೆಐಡಿಬಿ ಅಧಿಕಾರಿ ಶಿವಕುಮಾರ್ ಎಂಬುವವರ ಪತ್ನಿಯಾಗಿದ್ದ ಚೈತ್ರಾ ಗೌಡ ಹೈಕೋರ್ಟ್ ವಕೀಲರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದರು. ಚೈತ್ರಾ ಸಾವಿನ ಸುತ್ತ ಹಲವು ಅನುಮಾನಗಳು ಮೂಡಿದ್ದವು. ಸೂಕ್ತ ತನಿಖೆಗೆ ಆಗ್ರಹಿಸಿ ಬೆಂಗಳೂರು ನಗರ ವಕೀಲರ ಸಂಘದಿಂದ ಕೂಡ ಪೊಲೀಸ್ ಆಯುಕ್ತರಿಗೆ ಹಾಗೂ ಉತ್ತರ ವಿಭಾಗದ ಡಿಸಿಪಿಗೆ ಪತ್ರ ಬರೆಯಲಾಗಿತ್ತು. ಚೈತ್ರಾ ಅತ್ಯಂತ ದಿಟ್ಟ ಹಾಗೂ ಧೈರ್ಯವಂತೆ ಆಗಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ ಎಂದು ವಕೀಲರ ಸಂಘ ತಿಳಿಸಿತ್ತು. ಈ ಸಂಬಂಧ ಆರಂಭದಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ಚೈತ್ರಾ ಪತಿ ಶಿವಕುಮಾರ್ ಅವರನ್ನು ಕರೆದು ವಿಚಾರಣೆ ನಡೆಸಿದಾಗ ಪತ್ನಿಯೊಂದಿಗೆ ಯಾವುದೇ ವೈಷ್ಯಮ್ಯ ಇಲ್ಲ, ನಾವು ಅನ್ಯೋನ್ಯವಾಗಿದ್ದೆವು. ಅಲ್ಲದೆ, ವೃತ್ತಿ ವೈಷಮ್ಯ ಹಾಗೂ ಹಣಕಾಸಿನ ವಿಚಾರದಲ್ಲಿಯೂ ಯಾವುದೇ ಕಿರಿಕಿರಿ…

Read More

ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಲಂಚ ಪಡೆಯುವಾಗ ಕುವೆಂಪುನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರಾಧ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಿವಿಲ್ ಕಂಟ್ರ್ಯಾಕ್ಟರ್ ಒಬ್ಬರ ಎರಡು ಕಾರುಗಳನ್ನು ಕುವೆಂಪುನಗರ ಪೊಲೀಸರು ವಶಕ್ಕೆ ಪಡೆದಿದ್ದರು. ಕಾರಿನಲ್ಲಿ ಚಿನ್ನಾಭರಣಗಳು, ಆಸ್ತಿಗೆ ಸಂಬಂಧಿಸಿದ ದಾಖಲಾತಿಗಳು, ಬ್ಯಾಂಕ್ ಪಾಸ್ ಪುಸ್ತಕ, ಎ.ಟಿ.ಎಂ ಕಾರ್ಡ್‌ ಗಳಿದ್ದವು ಎನ್ನಲಾಗಿದೆ. ಅವುಗಳನ್ನು ನೀಡುವಂತೆ ಕಂಟ್ರಾಕ್ಟರ್ ಇನ್ಸ್ ಪೆಕ್ಟರ್ ರಾಧ ಅವರನ್ನು ಕೇಳಿದ್ದಾಗ, ಇನ್ಸ್‌ ಪೆಕ್ಟರ್ ರಾಧಾ ಅವರು 2 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕಂಟ್ರಾಕ್ಟರ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ಗುರುವಾರ ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ 50 ಸಾವಿರ ರೂ. ಹಣ ಪಡೆದುಕೊಳ್ಳುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂಬಂಧ ಇನ್ಸ್ ಪೆಕ್ಟರ್ ರಾಧ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಲೋಕಾಯುಕ್ತ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್‌ ಕುಮಾರ್ ಠಾಕೂರ್ ಮತ್ತು ಪೊಲೀಸ್ ಮಹಾನಿರೀಕ್ಷಕ ಸುಬ್ರಹ್ಮಣೇಶ್ವರರಾವ್ ರವರ ಮಾರ್ಗದರ್ಶನದಲ್ಲಿ,…

Read More

ಔರಾದ್: ಬಿಜೆಪಿಯಿಂದ ದೇಶದ ಉದ್ಧಾರ ಸಾಧ್ಯವಿಲ್ಲ, ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ಬಡವರ ಉದ್ಧಾರ ಆಗಿಲ್ಲ, ಬದಲಿಗೆ ಅಂಬಾನಿ ಮತ್ತು ಅದಾನಿ ಎಂಬ ಇಬ್ಬರು ಉದ್ಯಮಿಗಳು ದೊಡ್ಡ ಶ್ರೀಮಂತರಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ಇಲ್ಲಿಯ ಘೂಳೆ ಕಲ್ಯಾಣ ಮಂಟಪದಲ್ಲಿ ಗುರುವಾರ ನಡೆದ ವಿಧಾನ ಪರಿಷತ್ ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಡಾ. ಚಂದ್ರಶೇಖರ ಪಾಟೀಲ್ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ದುಡಿಯುವ ಕೈಗಳಿಗೆ ಕೆಲಸ ನೀಡುವುದು ಕಾಂಗ್ರೆಸ್ ಸರಕಾರದ ಮೊದಲ ಆದ್ಯತೆಯಾಗಿದೆ. ಆದರೆ ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಆದರೆ ಕಾಂಗ್ರೆಸ್ ರಾಜ್ಯದಲ್ಲಿ ನುಡಿದಂತೆ ಐದು ಗ್ಯಾರಂಟಿಗಳು ಜಾರಿಗೆ ತರುವ ಮೂಲಕ 30 ಸಾವಿರಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಮಾಡಿಕೊಂಡಿದೆ. ಅಲ್ಲದೇ 30—40 ಸಾವಿರಕ್ಕೂ ಹೆಚ್ಚು ಹುದ್ದೆಗಳ ಅಧಿಸೂಚನೆ ಹೊರಡಿಸಿದೆ. ನಿರುದ್ಯೋಗಿಗಳಿಗೆ ಸ್ಪಂದಿಸುವದು ಕಾಂಗ್ರೆಸ್ ಸರಕಾರದಿಂದ ಮಾತ್ರ ಸಾಧ್ಯ…

Read More

ಎಕ್ಕವನ್ನು ಹಿಂದೂಗಳು ದೈವಿಕ ಗಿಡವೆಂದು ಕರೆದರೂ ಅವರಾಗೇ ಬೆಳೆಸುವುದಿಲ್ಲ. ಎಲ್ಲೆಂದರಲ್ಲಿ ತಾನಾಗೇ ಬೆಳೆಯುವ ಅಪಾರ ಔಷಧೀಯ ಗುಣಗಳನ್ನು ಹೊಂದಿರುವ, ಪೂಜೆಗೂ ಉಪಯೋಗಿಸಲ್ಪಡುವ ಈ ಸಸ್ಯದ ಬಗ್ಗೆ ಎಲ್ಲರಿಗೂ ಸಂಪೂರ್ಣ ತಿಳಿವಳಿಕೆ ಇಲ್ಲ. ಆದರೆ ಭಯಭಕ್ತಿ ಇದೆ. ಸೂರ್ಯನು(ಅದಕ್ಕೆ ಅರ್ಕ ಎಂದು ಈ ಗಿಡದ ಇನ್ನೊಂದು ಹೆಸರು) ಈ ಗಿಡದ ಅಧಿಪತಿ. ಇದನ್ನು ತಂತ್ರ ವಿದ್ಯೆ ಕಲಿತವರು ಬಹಳವಾಗಿ ಉಪಯೋಗಿಸುತ್ತಾರೆ. ಹಲವಾರು ನಂಬಿಕೆ, ಮೂಢನಂಬಿಕೆಗಳು ಈ ಗಿಡದ ಬಗ್ಗೆ ಪ್ರಚಲಿತದಲ್ಲಿದ್ದು, ವೈದ್ಯಕೀಯವಾಗಿ ಸರಿಯಾಗಿ ಬಳಸಿದಲ್ಲಿ ಉತ್ತಮ ಫಲಿತಾಂಶ ಕೊಡುವ ರಹಸ್ಯಮಯ ಗಿಡವಾಗಿದೆ. ನಮ್ಮ ಪೂರ್ವಜರು ಹೇಳುವಂತೆ ಬಿಳಿ ಎಕ್ಕದ ಗಿಡ ಒಂದು ಮನೆಯಲ್ಲಿದ್ದರೆ ಆರೋಗ್ಯ, ಐಶ್ವರ್ಯ ಮತ್ತು ಹಣಕಾಸು ಎಲ್ಲ ಸಮಸ್ಯೆಗೂ ಪರಿಹಾರ ದೊರಕುತ್ತದೆ. ಕೇವಲ ಪೂಜೆ ಮತ್ತು ಧಾರ್ಮಿಕವಾಗಿ ಮಾತ್ರವಲ್ಲ ಆಯುರ್ವೇದದಲ್ಲೂ ಎಕ್ಕ ಗಿಡಕ್ಕೆ ಮಹತ್ವದ ಸ್ಥಾನವಿದೆ. ಔಷಧೀಯ ಗುಣಗಳಿಂದ ಎಕ್ಕವೂ ಶ್ರೀಮಂತವಾಗಿದೆ. ಈ ಸಸ್ಯದ ಅಡಕವಾಗಿರುವ ಔಷಧೀಯ ಗುಣಗಳ ಬಗ್ಗೆ ಇಂದಿನವರಿಗೆ ಅಷ್ಟಾಗಿ ಅರಿವಿಲ್ಲ. ಇಂದು ಈ ಲೇಖನದಲ್ಲಿ ಪ್ರಕೃತಿದತ್ತವಾಗಿ…

Read More

ಒಡಿಶಾ, ಬಿಹಾರ ಮತ್ತು ಜಾರ್ಖಂಡ್ ನಲ್ಲಿ ಕನಿಷ್ಠ 22 ಮಂದಿ ಬಿಸಿಲ ಬೇಗೆಯಿಂದ ಜೀವ ಕಳೆದುಕೊಂಡಿದ್ದಾರೆ. ಒಡಿಶಾದಲ್ಲಿ ಗುರುವಾರ ಕೇವಲ ಏಳು ಗಂಟೆ ಅವಧಿಯಲ್ಲಿ ಆರು ಮಹಿಳೆಯರು ಸೇರಿದಂತೆ ಹತ್ತು ಮಂದಿ ಶಾಖದ ಹೊಡೆತಕ್ಕೆ ಬಲಿಯಾಗಿದ್ದರೆ, ಬಿಹಾರದಲ್ಲಿ 24 ಗಂಟೆಗಳಲ್ಲಿ 9 ಮಂದಿ ಹಾಗೂ ಜಾರ್ಖಂಡ್ ನಲ್ಲಿ ಮೂವತ್ತಾರು ಗಂಟೆ ಅವಧಿಯಲ್ಲಿ ಮೂವರು ಕೊನೆಯುಸಿರೆಳೆದಿದ್ದಾರೆ. ನಾಗ್ಪುರದಲ್ಲಿ ಮೇ 24 ರಿಂದ 30ರ ಅವಧಿಯಲ್ಲಿ ಕನಿಷ್ಠ 20 ಮಂದಿ ಅಪರಿಚಿತ ವ್ಯಕ್ತಿಗಳು ಬಿಸಿಲ ಶಾಖದಿಂದ ಮೃತಪಟ್ಟಿದ್ದಾರೆ. ಉಷ್ಣಗಾಳಿಯ ಹೊಡೆತಕ್ಕೆ ಸಿಲುಕಿ ಇವರು ಮೃತಪಟ್ಟಿರಬೇಕು ಎಂದು ಶಂಕಿಸಲಾಗಿದೆ. ಒಡಿಶಾದಲ್ಲಿ ಸಂಭವಿಸಿದ ಎಲ್ಲ ಸಾವುಗಳು ರೂರ್ಕೆಲ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದ್ದು, ಗುರುವಾರ ಮಧ್ಯಾಹ್ನ 1.30ರಿಂದ ರಾತ್ರಿ 8.40ರ ಅವಧಿಯಲ್ಲಿ ಘಟಿಸಿವೆ. ರೂರ್ಕೆಲಾದಲ್ಲಿ ಗುರುವಾರ ಗರಿಷ್ಠ ತಾಪಮಾನ 44.9 ಡಿಗ್ರಿ ಸೆಲ್ಷಿಯಸ್ ದಾಖಲಾಗಿತ್ತು. ಮೃತಪಟ್ಟ ಎಲ್ಲರೂ 23 ರಿಂದ 70 ವರ್ಷ ವಯಸ್ಸಿನವರು. ಜೀವ ಕಳೆದುಕೊಂಡ ಆರು ಮಹಿಳೆಯರು 30 ರಿಂದ 69 ವಯಸ್ಸಿಯವರು ಎಂದು ಹೇಳಲಾಗಿದೆ.…

Read More

ತುಮಕೂರು: ಸಿ.ಇ.ಟಿ. ಪರೀಕ್ಷಾ ಫಲಿತಾಂಶವನ್ನು ಶೀಘ್ರ ಪ್ರಕಟಿಸಲು ಎಐಡಿಎಸ್ ಓ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಸಿ.ಬಿ. ಒತ್ತಾಯಿಸಿದ್ದಾರೆ. ಈ ಬಾರಿ ಸಿ.ಇ.ಟಿ. ಪರೀಕ್ಷೆಯಲ್ಲಿ ಉಂಟಾದ ಗೊಂದಲವು ಇಡೀ ಶೈಕ್ಷಣಿಕ ವರ್ಷ ಪ್ರಾರಂಭಗೊಳ್ಳುವಲ್ಲಿ ಸಮಸ್ಯೆ ಸೃಷ್ಟಿಸಿದೆ. ಕಾಮೆಡ್– ಕೆ ನ ಫಲಿತಾಂಶ ಬಂದಾಗಿಯೂ ಇಂದಿಗೂ ಸಿ.ಇ.ಟಿ. ಫಲಿತಾಂಶ ಪ್ರಕಟಿಸಲಾಗಿಲ್ಲ. ಒಂದೆಡೆ ಸಿ.ಇ.ಟಿ ಪ್ರಶ್ನೆ ಪತ್ರಿಕೆಯಲ್ಲಿ ಪಠ್ಯೇತರ ಪ್ರಶ್ನೆಗಳನ್ನು ಸೇರಿಸಿರುವುದು ವಿದ್ಯಾರ್ಥಿಗಳಲ್ಲಿ ತೀರ್ವ ಆತಂಕ ಸೃಷ್ಟಿಸಿತ್ತು. ಈಗ ಸಿ.ಇ.ಟಿ. ಫಲಿತಾಂಶ ತಡವಾಗುತ್ತಿರುವುದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಮತ್ತಷ್ಟು ಆತಂಕ ಮಡುಗಟ್ಟಿದೆ ಎಂದು ಅವರು ಹೇಳಿದರು. ಕಳೆದ ಎರಡು ವರ್ಷಗಳಿಂದ ಕೋವಿಡ್ ನಿಂದ ತಡವಾಗಿದ್ದ ಶೈಕ್ಷಣಿಕ ಕಾರ್ಯಚಟುವಟಿಕೆಗಳನ್ನು ಪ್ರತಿ ವರ್ಷವೂ ಸರಿದೂಗಿಸುವ ಯತ್ನ ನಡೆದಿತ್ತು. ಆದರೆ ಈ ಬಾರಿ ಕೆ.ಇ.ಎ. ಸೃಷ್ಟಿಸಿದ ಸಮಸ್ಯೆಯಿಂದ ಮತ್ತೇ ಶೈಕ್ಷಣಿಕ ವರ್ಷ ಪ್ರಾರಂಭವಾಗಲು ತಡವಾಗುತ್ತಿದೆ. ವಿದ್ಯಾರ್ಥಿಗಳ ಕಲಿಕೆಯ ಮೇಲೆ ಇದು ದುಷ್ಪರಿಣಾಮ ಬೀರಲಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಈ ಕೂಡಲೇ ಸಿ.ಇ.ಟಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿ, ಪ್ರವೇಶಾತಿ ಪ್ರಕ್ರಿಯೆ…

Read More

ಧಾರವಾಡ: ಮಳೆಗಾಲ ಆರಂಭವಾಗುತ್ತಿದ್ದು, ಆರೋಗ್ಯ ಇಲಾಖೆ ಮತ್ತು ಇತರ ಇಲಾಖೆಗಳು ಸಮನ್ವಯದಿಂದ ಕಾರ್ಯ ಮಾಡಿ, ಸಾಂಕ್ರಾಮಿಕ ರೋಗಗಳ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು, ಸಾರ್ವಜನಿಕ ಆರೋಗ್ಯ ಸುರಕ್ಷತೆಗೆ ಆಧ್ಯತೆ ನೀಡಿ. ಜಲಜನ್ಯ ಮತ್ತು ಕೀಟ ಜನ್ಯ ರೋಗಗಳು ಹರಡದಂತೆ ಮುಂಜಾಗ್ರತೆ ವಹಿಸಿ. ಯಾವುದೇ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೋಗ ರುಜಿನ ಹೆಚ್ಚಿದರೆ ಅಂತವರ ವಿರುದ್ದ ಸಾರ್ವಜನಿಕ ಆರೋಗ್ಯ ರಕ್ಷಣೆ ಕಾಯ್ದೆಯಡಿ, ಕ್ರಿಮಿನಲ್ ಪ್ರಕರಣ ದಾಖಲಿಸಿ, ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಜನವರಿಯಿಂದ ಏಪ್ರಿಲ್ ವರೆಗೆ ಸುಮಾರು 451 ವಾಂತಿಭೇದಿ ಪ್ರಕರಣಗಳು ವರದಿಯಾಗಿವೆ. ಮಳೆಗಾಲದಲ್ಲಿ ಕುಡಿಯುವ ನೀರು ಕಲುಷಿತವಾಗದಂತೆ ಎಚ್ಚರವಹಿಸಿ. ಕಾಲಕಾಲಕ್ಕೆ ಕುಡಿಯುವ ನೀರನ್ನು ಸರಬರಾಜು ಆರಂಭ ಮತ್ತು ಬಳಕೆಯ ಕೊನೆಯ ಸ್ಥಳದಲ್ಲಿ ಪ್ರೋಟೋಕಾಲ್ ಪ್ರಕಾರ ಪರೀಕ್ಷೆ ಮಾಡಬೇಕು. ಇದಕ್ಕೆ ಆರೋಗ್ಯ…

Read More

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿ ಇಲಾಖಾ ಸಚಿವ ನಾಗೇಂದ್ರ ಅವರು ಕೂಡಲೇ ರಾಜೀನಾಮೆ ಕೊಟ್ಟು ನಿಷ್ಪಕ್ಷಪಾತ ತನಿಖೆಗೆ ಅವಕಾಶ ಮಾಡಿಕೊಡಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳಿಂದ ಇದರ ಸಮಗ್ರ ನಿಷ್ಪಕ್ಷಪಾತ ತನಿಖೆ ಮಾಡಲು ಅಸಾಧ್ಯ. ಆದ್ದರಿಂದ ಕೇಂದ್ರ ಸರ್ಕಾರದ ಏಜೆನ್ಸಿಗಳ ಮೂಲಕ ತನಿಖೆ ನಡೆಸಿ ಎಂದು ಒತ್ತಾಯಿಸಿದರು. ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಅವರು ಮಂತ್ರಿಗಳ ಮೌಖಿಕ ಆದೇಶದನ್ವಯ ಹಣ ವರ್ಗಾವಣೆ ಮಾಡಿದ್ದಾಗಿ ಬರೆದಿದ್ದಾರೆ. ಹಾಗಾದರೆ ಎಫ್‍ಐಆರ್ ‌ನಲ್ಲಿ ಸಚಿವರ ಹೆಸರು ಯಾಕೆ ಬಂದಿಲ್ಲ ಎಂದು ಪ್ರಶ್ನಿಸಿದರು. ಇದು ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ ಎಂದರು. ಸರ್ಕಾರದ ಅಧೀನ ಸಂಸ್ಥೆಯಾದ ಸಿಐಡಿಯವರು ಮುಖ್ಯಮಂತ್ರಿಗಳು, ಸಚಿವರ ಬಗ್ಗೆ ತನಿಖೆ ಮಾಡಲು ಎಷ್ಟರಮಟ್ಟಿಗೆ ಸಾಧ್ಯ ಎಂದ ಅವರು, ನೈತಿಕತೆ ಇದ್ದರೆ ಸಚಿವರು ರಾಜೀನಾಮೆ ಕೊಡಬೇಕಿತ್ತು. ಬ್ಯಾಂಕ್ ಖಾತೆಯು ಎಂಡಿ ಮತ್ತು ಅಕೌಂಟ್ಸ್ ಅಧಿಕಾರಿಯ ಜಂಟಿ…

Read More

ಕೇರಳದಲ್ಲಿ ನನ್ನ ವಿರುದ್ಧ ಅಘೋರಿಗಳ ಮೂಲಕ ಪ್ರಯೋಗ ನಡೀತಿದೆ. ಯಾರು ಮಾಡಿಸುತ್ತಿದ್ದಾರೆ ಎಂಬ ವಿಚಾರವೂ ನನಗೆ ಗೊತ್ತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​​ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಈ ಕುರಿತು ಸುದ್ದಿಗೋಷ್ಠಿಸಿ ಈ ವಿಷಯ ತಿಳಿಸಿದ್ದಾರೆ. ನನ್ನ ಹಾಗೂ ಕಾಂಗ್ರೆಸ್​ ಸರ್ಕಾರದ ವಿರುದ್ಧ ಕೇರಳದ ರಾಜರಾಜೇಶ್ವರಿ ದೇವಾಲಯದಲ್ಲಿ ಅಘೋರಿಗಳ ಮೂಲಕ ಪೂಜೆ ಮಾಡಿಸಲಾಗಿದೆ. ನನ್ನ ವಿರುದ್ಧ ವಿರೋಧಿಗಳು ದೊಡ್ಡ ಪ್ರಯೋಗ ಮಾಡಿಸುತ್ತಿದ್ದಾರೆ. ಕೇರಳದ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನನ್ನ ಹಾಗೂ ಕಾಂಗ್ರೆಸ್​ ಸರ್ಕಾರದ ವಿರುದ್ಧ ಯಾಗ ಮಾಡಿಸಿದ್ದಾರೆ. ಮೇಕೆ, ಹಂದಿ, ಕುರಿ, ಬಲಿ ಸೇರಿದಂತೆ ಪಂಚ ಬಲಿ ಕೊಟ್ಟಿದ್ದಾರೆ ಎಂದು ಹೇಳಿದರು. ಅಘೋರಿಗಳ ಮೂಲಕ ಶತ್ರು ಬೈರವಿ ಯಾಗ, ಪಂಚ ಬಲಿ ಕೊಡುತ್ತಿದ್ದಾರೆ. ಇದನ್ನೆಲ್ಲಾ ಯಾರು ಮಾಡಿಸುತ್ತಿದ್ದಾರೆ ಎಂಬುದು ನಮಗೆ ಗೊತ್ತು. ನಾವು ನಂಬಿದ ದೇವರು ನಮ್ಮ ಕೈ ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ಹೇಳಿಕೆ ನೀಡಿದ್ದಾರೆ. ಇತ್ತ ಡಿ.ಕೆ. ಶಿವಕುಮಾರ್​ ಹೇಳಿಕೆ ಕರ್ನಾಟಕ ರಾಜಕೀಯದಲ್ಲಿ…

Read More