Subscribe to Updates
Get the latest creative news from FooBar about art, design and business.
- ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ
- ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!
- ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ
- ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ
- ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
- ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
- ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
- ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
Author: admin
ಕೇಂದ್ರ ಲೋಕ ಸೇವಾ ಆಯೋಗವು ಡೆಪ್ಯುಟಿ ಸೂಪರಿಂಟೆಂಡಿಂಗ್ ಆರ್ಕಿಯಾಲಾಜಿಕಲ್ ಕೆಮಿಸ್ಟ್, ಡೆಪ್ಯೂಟಿ ಸೂಪರಿಂಟೆಂಡಿಂಗ್ ಆರ್ಕಿಯಾಲಜಿಸ್ಟ್, ಸಿವಿಲ್ ಹೈಡ್ರೋಗ್ರಾಫಿಕ್ ಆಫೀಸರ್, ಸ್ಪೆಷಲಿಸ್ಟ್ ಗ್ರೇಡ್ III, ಫೋರೆನ್ಸಿಕ್ ಮೆಡಿಸಿನ್ ನಲ್ಲಿ ಸಹಾಯಕ ಪ್ರೊಫೆಸರ್ ಸೇರಿದಂತೆ ಹಲವಾರು ಹುದ್ದೆಗಳ ನೇಮಕಾತಿಗಾಗಿ (recruitment 2024) ಅಭ್ಯರ್ಥಿಗಳಿಂದ ಅರ್ಜಿಗಳನ್ನು ಸ್ವೀಕರಿಸಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಜೂನ್ 13, 2024 ರೊಳಗೆ UPSC (ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ -ಯುಪಿಎಸ್ಸಿ) ಅಧಿಕೃತ ವೆಬ್ ಸೈಟ್ upsconline.nic.in ಮೂಲಕ ಸಲ್ಲಿಸಬಹುದು. ಪುರಾತತ್ತ್ವ ಶಾಸ್ತ್ರದಲ್ಲಿ ಡೆಪ್ಯುಟಿ ಸೂಪರಿಂಟೆಂಡಿಂಗ್ ಆರ್ಕಿಯಾಲಾಜಿಕಲ್ ಕೆಮಿಸ್ಟ್: 4 ಪೋಸ್ಟ್ ಗಳು ಪುರಾತತ್ತ್ವ ಶಾಸ್ತ್ರದಲ್ಲಿ ಡೆಪ್ಯುಟಿ ಸೂಪರಿಂಟೆಂಡಿಂಗ್ ಆರ್ಕಿಯಾಲಜಿಸ್ಟ್: 67 ಹುದ್ದೆಗಳು ಸಿವಿಲ್ ಹೈಡ್ರೋಗ್ರಾಫಿಕ್ ಆಫೀಸರ್, ಇಂಟಿಗ್ರೇಟೆಡ್ ಹೆಡ್ಕ್ವಾರ್ಟರ್ಸ್ (ನೌಕಾಪಡೆ), ನಾಗರಿಕ ಸಿಬ್ಬಂದಿ ನಿರ್ದೇಶನಾಲಯ: 4 ಹುದ್ದೆಗಳು ಸ್ಪೆಷಲಿಸ್ಟ್ ಗ್ರೇಡ್ III ಸಹಾಯಕ ಪ್ರೊಫೆಸರ್ (ಫೊರೆನ್ಸಿಕ್ ಮೆಡಿಸಿನ್): 6 ಹುದ್ದೆಗಳು ಸ್ಪೆಷಲಿಸ್ಟ್ ಗ್ರೇಡ್ III ಸಹಾಯಕ ಪ್ರೊಫೆಸರ್ (ಜನರಲ್ ಮೆಡಿಸಿನ್): 61 ಹುದ್ದೆಗಳು ಸ್ಪೆಷಲಿಸ್ಟ್ ಗ್ರೇಡ್ III ಸಹಾಯಕ…
ಪ್ರಿಯಾ ವಾರಿಯರ್ ನಟನೆಯ ಒರು ಅಡಾರ್ ಲವ್ ಸೇರಿದಂತೆ ಇನ್ನೂ ಕೆಲವು ಹಿಟ್ ಸಿನಿಮಾಗಳನ್ನು ನೀಡಿರುವ ಮಲಯಾಳಂ ನಿರ್ದೇಶಕ ಒಮರ್ ಲುಲು ವಿರುದ್ಧ ನಟಿಯೊಬ್ಬರು ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಎರ್ನಾಕುಲಂ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಯುವನಟಿ, ನಿರ್ದೇಶಕ ಒಮರ್ ವಿರುದ್ಧ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ಪ್ರಕರಣವನ್ನು ಇದೀಗ ನಿಡುಂಬಸ್ಸೇರಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದ್ದು, ನಿರ್ದೇಶಕರ ವಿರುದ್ಧ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಿನಿಮಾದಲ್ಲಿ ಅವಕಾಶ ನೀಡುವುದಾಗಿ ಹೇಳಿ ನನ್ನ ವಿರುದ್ಧ ಹಲವು ಬಾರಿ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಮಾಡಲಾಗಿದೆ ಎಂದು ಯುವನಟಿ ನಿರ್ದೇಶಕ ಒಮರ್ ವಿರುದ್ಧ ಆರೋಪ ಮಾಡಿದ್ದಾರೆ. ಪ್ರಕರಣದ ಬಗ್ಗೆ ಹೇಳಿಕೆ ನೀಡಿರುವ ನಿರ್ದೇಶಕ ಒಮರ್ ಲುಲು, ‘ಇದು ಬ್ಲಾಕ್ ಮೇಲ್ ಮಾಡುವ ತಂತ್ರವಷ್ಟೆ. ಆರೋಪ ಮಾಡಿ ನನ್ನ ಘನತೆ ಹಾಳು ಮಾಡುವ ಹಾಗೂ ನನ್ನಿಂದ ಹಣ ವಸೂಲಿ ಮಾಡುವುದು ಆ ನಟಿಯ ಉದ್ದೇಶ. ನನ್ನ ಈ ಹಿಂದಿನ…
ಅಶ್ಲೀಲ ವಿಡಿಯೋ ಬಹಿರಂಗ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಇಂದು ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಆಗಮಿಸಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್ ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ. ದೇಶ ಬಿಟ್ಟು ಪರಾರಿಯಾದ ಒಂದು ತಿಂಗಳ ಬಳಿಕ ಪ್ರತ್ಯಕ್ಷವಾಗಿದ್ದ ಪ್ರಜ್ವಲ್ ರೇವಣ್ಣ ವಿಡಿಯೋ ಮಾಡಿ ತಾನು ಮೇ 31ರಂದು ಬೆಂಗಳೂರಿಗೆ ಆಗಮಿಸುವುದಾಗಿ ಹೇಳಿದ್ದರು. ಅಲ್ಲದೆ ಲುಫ್ತಾನ್ಸ ವಿಮಾನದಲ್ಲಿ 30ನೇ ತಾರೀಕಿನಂದು ವಿಮಾನ ಬುಕ್ ಸಹ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಎಸ್ ಐಟಿ ಅಧಿಕಾರಿಗಳು ಅಲರ್ಟ್ ಆಗಿದ್ದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೀಡು ಬಿಟ್ಟಿದ್ದರು. ರಾಜ್ಯದಲ್ಲಿ ಏಪ್ರಿಲ್ 26ರಂದು ನಡೆದ ಮೊದಲ ಹಂತದ ಲೋಕಸಭೆ ಚುನಾವಣೆ ಮತದಾನ ಬಳಿಕ ಏಪ್ರಿಲ್ 27ರಂದು ಪ್ರಜ್ವಲ್ ರೇವಣ್ಣ ತಮ್ಮ ರಾಜತಾಂತ್ರಿಕ ಪಾಸ್ ಪೋರ್ಟ್ ಬಳಸಿ ಜರ್ಮನಿಗೆ ತೆರಳಿದ್ದರು. ಇದೀಗ ಪ್ರಜ್ವಲ್ ರೇವಣ್ಣರನ್ನು ವಶಕ್ಕೆ ಪಡೆದಿರುವ ಎಸ್ ಐಟಿ ಪೊಲೀಸರು ಎಸ್ ಐಟಿ ಕಚೇರಿಗೆ ಕರೆತಂದಿದ್ದಾರೆ. ನಮ್ಮತುಮಕೂರಿನ ಕ್ಷಣ…
ಧಾರವಾಡ: ಪ್ರತಿ ವರ್ಷ ಅನೇಕ ವಾಹನ ಸವಾರರು ಹಾಗೂ ಸಂಚಾರಿಗಳು ಸಂಚಾರಿ ನಿಯಮ ಉಲ್ಲಂಘನೆಯಿಂದ ಜೀವ ಕಳೆದುಕೊಳ್ಳುತ್ತಾರೆ. ಸಂಚಾರ ನಿಯಮಗಳನ್ನು ಪಾಲಿಸುವುದು ಪ್ರಜ್ಞಾವಂತ ನಾಗರಿಕರ ಮೊದಲ ಕರ್ತವ್ಯವಾಗಿದೆ ಎಂದು ಹುಬ್ಬಳ್ಳಿ– ಧಾರವಾಡ ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ಹೇಳಿದರು. ಅವರು ಮೇ.29 ಸಂಜೆ ಧಾರವಾಡ ನಗರದ ಆಲೂರು ವೆಂಕಟರಾವ್ (ಜುಬ್ಲಿ ಸರ್ಕಲ್) ವೃತ್ತದಲ್ಲಿ ಸಂಚಾರ ನಿಯಮಗಳ ಸಾರ್ವಜನಿಕ ಜಾಗೃತಿ ಹಾಗೂ ದೋಷಪೂರಿತ ಸೈಲೆನ್ಸರ್ ಗಳ ನಾಶಪಡಿಸುವ ಕಾರ್ಯಕ್ಕೆ ಚಾಲನೆ ನೀಡಿ, ಮಾತನಾಡಿದರು. ಸಂಚಾರ ನಿಯಮಗಳ ಕುರಿತು ಪ್ರತಿ ವರ್ಷ ವಿವಿಧ ಕಾರ್ಯಕ್ರಮಗಳ ಮೂಲಕ ಶಾಲಾ ಕಾಲೇಜುಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಜನಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಆದರೂ ವಾಹನ ಸವಾರರು ಸರಿಯಾಗಿ ಹೆಲ್ಮೆಟ್ ಧರಿಸುವುದಿಲ್ಲ, ಸೀಟ್ ಬೆಲ್ಟ್ ಧರಿಸುವುದಿಲ್ಲ, ಸಿಗ್ನಲ್ ಜಂಪ್ ಮಾಡುವುದು, ಸಂಚಾರಿ ಸಾಮಾನ್ಯ ನಿಯಮಗಳನ್ನು ಸಹ ಪಾಲಿಸುವುದಿಲ್ಲ. ಇದರಿಂದಾಗಿ ತಮ್ಮ ಅಮೂಲ್ಯ ಜೀವವನ್ನೇ ಕಳೆದುಕೊಳ್ಳುತ್ತಾರೆ ಎಂದು ಅವರು ತಿಳಿಸಿದರು. ಅವಳಿ ನಗರದಲ್ಲಿ ವಾಹನ ದಟ್ಟಣೆ ಮಾರ್ಗಗಳನ್ನು ಗುರುತಿಸಲಾಗಿದೆ. ಅವುಗಳಿಗೆ…
ನವದೆಹಲಿ: ಜಾತಿ ಮತ್ತು ಧರ್ಮದ ಆಧಾರದಲ್ಲಿ ಮತಯಾಚಿಸಬಾರದು ಎಂಬ ಚುನಾವಣಾ ಆಯೋಗದ ನಿರ್ದೇಶನದ ಹೊರತಾಗಿಯೂ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಚುನಾವಣಾ ಪ್ರಚಾರದ ವೇಳೆ ‘ಮಂದಿರ-ಮಸೀದಿ’ ಹಾಗೂ ದೇಶ ವಿಭಜನೆ ವಿಷಯದ ಕುರಿತು 421 ಬಾರಿ ಮಾತನಾಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಏಳನೇ ಮತ್ತು ಕೊನೆಯ ಹಂತದ ಚುನಾವಣಾ ಪ್ರಚಾರದ ಕೊನೆಯ ದಿನದಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 15 ದಿನಗಳ ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ ಅವರು ತಮ್ಮದೇ ಹೆಸರನ್ನು 758 ಬಾರಿ ಮತ್ತು 232 ಬಾರಿ ಕಾಂಗ್ರೆಸ್ ಹೆಸರನ್ನು ಉಚ್ಚರಿಸಿದ್ದಾರೆ. ಆದರೆ, ಒಂದು ಬಾರಿಯೂ ನಿರುದ್ಯೋಗದ ಕುರಿತು ಮಾತನಾಡಿಲ್ಲ ಎಂದು ಹೇಳಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ‘ಇಂಡಿಯಾ’ ಮೈತ್ರಿಕೂಟ ಸರ್ಕಾರ ರಚಿಸಲಿದೆ. ಜೂನ್ 4ರಂದು ಪರ್ಯಾಯ ಸರ್ಕಾರಕ್ಕೆ ಜನಾದೇಶ ದೊರೆಯುತ್ತದೆ ಎಂಬ ವಿಶ್ವಾಸವಿದೆ. ಬಿಜೆಪಿ ಸರ್ಕಾರಕ್ಕೆ ಮತ್ತೊಂದು ಅವಕಾಶ ದೊರೆತರೆ ಅದು ಪ್ರಜಾಪ್ರಭುತ್ವದ ಅಂತ್ಯ ಎಂದು ಜನರು ಕೂಡ ಒಪ್ಪಿದ್ದಾರೆ…
ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇಂದು ಮಧ್ಯರಾತ್ರಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ ಎನ್ನಲಾಗಿದೆ. ಜರ್ಮನಿಯ ಮ್ಯೂನಿಕ್ನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಆಗಮಿಸಲು ಲುಫ್ತಾನ್ಸಾ ಏರ್ ಲೈನ್ಸ್ ವಿಮಾನದಲ್ಲಿ ಪ್ರಜ್ವಲ್ ಹೆಸರಿನಲ್ಲೇ ಟಿಕೆಟ್ ಬುಕ್ ಮಾಡಲಾಗಿದೆ. ಇಂದು ಮಧ್ಯಾಹ್ನ 12.30ರ ಸುಮಾರಿಗೆ ಮ್ಯೂನಿಕ್ ನಿಂದ ಹೊರಡಲಿರುವ ವಿಮಾನ, ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಬೆಂಗಳೂರಿಗೆ ಆಗಮಿಸಲಿದೆ. ಇದೇ ವಿಮಾನದಲ್ಲಿ ಪ್ರಜ್ವಲ್ ಆಗಮಿಸಲಿದ್ದಾರೆ ಎಂದು ತನಿಖಾಧಿಕಾರಿಗಳು ವಿಮಾನ ನಿಲ್ದಾಣದಲ್ಲಿ ಕಾದು ಕುಳಿತಿದ್ದಾರೆ. ಎಸ್ಐಟಿಯ ಒಂದು ತಂಡ ವಿಮಾನ ನಿಲ್ದಾಣದಲ್ಲಿದೆ. ನ್ಯಾಯಾಲಯದಿಂದ ಬಂಧನ ವಾರಂಟ್ ಜಾರಿ ಆಗಿದ್ದು, ಪ್ರಜ್ವಲ್ ಬಂದ ತಕ್ಷಣವೇ ವಶಕ್ಕೆ ಪಡೆದು ಬಂಧಿಸಲಾಗುವುದು ಎಂದು ಎಸ್ಐಟಿ ಮೂಲಗಳು ತಿಳಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೊಪ್ಪಳ: ಫ್ಯಾಕ್ಟರಿಯಲ್ಲಿ ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥಗೊಂಡಿದ್ದ ಕಾರ್ಮಿಕ ಸಾವನ್ನಪ್ಪಿದ್ದಾರೆ. ಕೊಪ್ಪಳ ತಾಲೂಕಿನ ಗಿಣಿಗೇರಾ ಸಮೀಪ ಇರುವ ಸ್ಟೀಲ್ ಫ್ಯಾಕ್ಟರಿಯಲ್ಲಿ ದುರ್ಘಟನೆ ನಡೆದಿದೆ. ರಾಘವೇಂದ್ರ ಗೊಂದಳಿ(40) ಮೃತಪಟ್ಟವರಾಗಿದ್ದಾರೆ. ಅವರು ಕೊಪ್ಪಳ ತಾಲೂಕಿನ ಹಿಟ್ನಾಳ ನಿವಾಸಿಯಾಗಿದ್ದು, ಮೇ 28 ರಂದು ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ BFG ಗ್ಯಾಸ್ ಸೋರಿಕೆಯಾಗಿ ಅಸ್ವಸ್ಥಗೊಂಡಿದ್ದರು. ಅವರನ್ನು ಕೊಪ್ಪಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕೊಪ್ಪಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಯನ್ನು ಆಕರ್ಷಿಸಲು ಹಾಗೂ ಉದ್ಯೋಗ ಸೃಷ್ಟಿಗೆ ಪ್ರಾಮುಖ್ಯತೆ ನೀಡಲು ಬೆಂಗಳೂರಿನ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆ (ಎಫ್ಕೆಸಿಸಿಐ), ರಾಜ್ಯ ಪ್ರವಾಸೋದ್ಯಮ ಇಲಾಖೆಯ ಸಹಯೋಗದಲ್ಲಿ ಜೂನ್ 15 ಮತ್ತು 16ರಂದು ಬೆಂಗಳೂರಿನ ಅರಮನೆ ಮೈದಾನದ ಪ್ರಿನ್ಸೆಸ್ ಶ್ರೈನ್ ಗೇಟ್ ನಂ.9ರಲ್ಲಿ ‘ದಕ್ಷಿಣ ಭಾರತ ಉತ್ಸವ-2024’ನ್ನು ಆಯೋಜಿಸಿದೆ ಎಂದು ಎಫ್ಕೆಸಿಸಿಐನ ಹಿರಿಯ ಉಪಾಧ್ಯಕ್ಷ ಎಂ.ಜಿ.ಬಾಲಕೃಷ್ಣ ತಿಳಿಸಿದ್ದಾರೆ. ಉಡುಪಿಯ ಮಣಿಪಾಲ ಇನ್ ಹೊಟೇಲ್ ಸಭಾಂಗಣದಲ್ಲಿ ಕರೆದ ಸುದ್ದಿ ಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು. ಈ ಕಾರ್ಯಕ್ರಮದ ಮೂಲಕ ಹೂಡಿಕೆದಾರರನ್ನು ಆಕರ್ಷಿಸಿ, ದಕ್ಷಿಣ ಭಾರತದ ಉಳಿದ ರಾಜ್ಯಗಳ ಪ್ರವಾಸೋದ್ಯಮ ಅಭಿವೃದ್ಧಿ ಮಟ್ಟಕ್ಕೆ ಸರಿಸಮಾನವಾಗಿ ನಿಲ್ಲುವುದು ನಮ್ಮ ಗುರಿಯಾಗಿದೆ ಎಂದವರು ಹೇಳಿದರು. ಬಹುನಿರೀಕ್ಷಿತ ಈ ಉತ್ಸವವನ್ನು ಜೂ.15ರಂದು ಬೆಳಗ್ಗೆ 11ಗಂಟೆಗೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸು ವರು ಎಂದ ಬಾಲಕೃಷ್ಣ, ಈ ಸಂಬಂಧ ಇಂದು ಇಲ್ಲಿ ಪೂರ್ವಭಾವಿ ಸಿದ್ಧತಾ ಸಭೆ ‘ಉಡುಪಿ ರೋಡ್ ಶೋ’ವನ್ನು ಕರೆಯ ಲಾಗಿದೆ ಎಂದು ವಿವರಿಸಿದರು.…
ಬೆಂಗಳೂರು: ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ಬೆಂಗಳೂರಿನ ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. “ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ಈಗಾಗಲೇ ತನಿಖೆಗೆ ಆದೇಶಿಸಲಾಗಿದೆ. ತನಿಖೆ ನಂತರವಷ್ಟೇ ಸತ್ಯತೆ ಸ್ಪಷ್ಟವಾಗಿ ಬೆಳಕಿಗೆ ಬರಲಿದೆ” ಎಂದು ಗೃಹ ಸಚಿವ ಪರಮೇಶ್ವರ್ ಇಂದು ಬೆಂಗಳೂರಿನಲ್ಲಿ ತಿಳಿಸಿದ್ದಾರೆ. “ಈಶ್ವರಪ್ಪ ಅವರು ಸಚಿವರಾಗಿದ್ದ ಸಂದರ್ಭದಲ್ಲಿ ನಡೆದ ಪ್ರಕರಣಕ್ಕೂ ಈ ಪ್ರಕರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಹಾಗಾಗಿ ತನಿಖೆ ನಂತರವೇ ಕಾಯಬೇಕಿದೆ” ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ವಾರಗಳ ಕಾಲ ನಡೆದ ಲೋಕಸಭಾ ಚುನಾವಣಾ ಪ್ರಚಾರವನ್ನು ಮುಗಿಸಿದ ನಂತರ ಮೇ 30 ರಿಂದ ಜೂನ್ 1 ರವರೆಗೆ ವಿವೇಕಾನಂದ ರಾಕ್ ಸ್ಮಾರಕದಲ್ಲಿ ಧ್ಯಾನಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕನ್ಯಾಕುಮಾರಿಗೆ ತೆರಳಲಿದ್ದಾರೆ. ಜೂನ್ 4 ರಂದು ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುವ ಕೆಲವೇ ದಿನಗಳ ಮೊದಲು ಪ್ರಧಾನಿ ಮೋದಿಯವರ ಆಧ್ಯಾತ್ಮಿಕ ಪ್ರವಾಸ ಬರಲಿದೆ. 2019ರ ಲೋಕಸಭೆ ಚುನಾವಣೆಯಲ್ಲೂ ಪ್ರಧಾನಿ ಮೋದಿ ಅಂತಿಮ ಹಂತದ ಚುನಾವಣೆಗೂ ಮುನ್ನ ಕೇದಾರನಾಥ ದೇಗುಲಕ್ಕೆ ಇದೇ ರೀತಿಯ ಪ್ರವಾಸ ಕೈಗೊಂಡು ಗುಹೆಯಲ್ಲಿ ಧ್ಯಾನಮಗ್ನರಾಗಿದ್ದರು. ಕಳೆದ ಲೋಕಸಭಾ ಚುನಾವಣೆಯಿಂದಲೂ, ಪ್ರಧಾನಿ ಮೋದಿ ಚುನಾವಣೆಗೂ ಮುನ್ನ ಈ ರೀತಿ ಧ್ಯಾನ ಮಾಡುತ್ತಿರುವುದು ಕೆಲವರಲ್ಲಿ ಅಚ್ಚರಿ ಉಂಟು ಮಾಡಿದರೆ, ಇನ್ನು ಕೆಲವರಿಲ್ಲಿ ಆತಂಕ ಮನೆ ಮಾಡಿದಂತಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296