Author: admin

ಯುವತಿಯರ ಫೊಟೋಗಳನ್ನು ಅಶ್ಲೀಲವಾಗಿ ಮಾರ್ಫ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹಾಕುತ್ತಿದ್ದ ಪ್ರಕರಣದಡಿ ಇಬ್ಬರು ಅಪ್ರಾಪ್ತರು ಸೇರಿ ಮೂವರು ಆರೋಪಿಗಳನ್ನು ಇಲ್ಲಿನ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಬಾಗಲೂರು ಮೂಲದ ಆರೋಪಿ ಬಂಧಿತರಾಗಿದ್ದಾರೆ. ಉಳಿದಿಬ್ಬರು ಅಪ್ರಾಪ್ತರಾಗಿದ್ದು, ಬಾಲ ನ್ಯಾಯಮಂಡಳಿಗೆ ಹಾಜರುಪಡಿಸಲಾಗಿದೆ. ಮೂರು ಮೊಬೈಲ್ ಫೋನ್‍ ಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಆರೋಪಿಗಳು ಅಪ್ರಾಪ್ತೆಯ ಇನ್‍ ಸ್ಟಾಗ್ರಾಮ್ ಖಾತೆಯಿಂದ ಫೊಟೋ ತೆಗೆದುಕೊಂಡು, ಅಶ್ಲೀಲವಾಗಿ ಮಾರ್ಫ್ ಮಾಡಿ ನಕಲಿ ಖಾತೆಗಳಲ್ಲಿ ಪೋಸ್ಟ್ ಮಾಡಿದ್ದರು ಎನ್ನಲಾಗಿದೆ. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಮೂವರು ಆರೋಪಿಗಳ ಪೈಕಿ ಓರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಉಳಿದಿಬ್ಬರು ಶಾಲೆಯಲ್ಲಿ ಕಲಿಯುತ್ತಿದ್ದು, ಈ ಮೂವರೂ ಪರಸ್ಪರ ಸ್ನೇಹಿತರು. ಕೀಟಲೆಗಾಗಿ ಯುವತಿಯರ ಫೊಟೋಗಳನ್ನು ತೆಗೆದುಕೊಂಡು ಅಶ್ಲೀಲವಾಗಿ ಮಾರ್ಫ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಅಮಿತ್ ಶಾ ಅಥವಾ ಬಿಜೆಪಿಯವರೇ ಪ್ರಜ್ವಲ್ ರೇವಣ್ಣಗೆ ವಿಡಿಯೋ ಮಾಡಿ ಹೊರಗೆ ಬಾ ಎಂದಿರಬೇಕು. ಇವರಿಗೆ ವಿದೇಶದಲ್ಲಿ ಉಳಿದುಕೊಳ್ಳುವಂಥದ್ದು ಏನಿದೆ?. ಇದೆಲ್ಲವೂ ಕೂಡ ಬಿಜೆಪಿ ನಾಯಕರ ನಿರ್ದೇಶನದ ಮೇರೆಗೆ ನಡೆದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ಬುಧವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಂಧಿಸಲು 30 ದಿನ ಬೇಕಾ?. ಪ್ರಜ್ವಲ್ ಅಷ್ಟು ಕ್ಲೀನ್ ಆಗಿದ್ದರೆ, ಮೊದಲ ದಿನವೇ ಪ್ರತಿಕ್ರಿಯೆ ನೀಡಬೇಕಿತ್ತು. ಕುಂಭಕರ್ಣ ನಿದ್ರೆಯಿಂದ ಎದ್ದಮೇಲೆ ರಾಹುಲ್ ಗಾಂಧಿ. ರಾಹುಲ್ ಗಾಂಧಿ. ಅಂದ್ರೆ ಹೇಗೆ” ಎಂದು ಟೀಕಿಸಿದರು. ಸಂಸದ ಪ್ರಜ್ವಲ್ ರೇವಣ್ಣ ಎಲ್ಲರನ್ನು ಬಿಟ್ಟು ಕೇವಲ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಮಾತನಾಡಿದ್ದಾರೆ. ಅಂದರೆ ಇದರ ನಿರ್ದೇಶಕರಾಗಿ ಅಮಿತ್ ಶಾ ಇದ್ದಿರಬಹುದು. ಮೊನ್ನೆ ಪ್ರಜ್ವಲ್ ವಿಡಿಯೋ ರಿಲೀಸ್ ಮಾಡಿದ್ದು ನೋಡಿ ಆಶ್ಚರ್ಯವಾಯ್ತು. ಆರೇಳು ಹಂತದ ಚುನಾವಣೆ ಮುಗಿದ ಮೇಲೆ ಹೊರ ಬಂದ್ರಾ?. 30 ದಿನಗಳ ಹಿಂದೆ ನಿಮ್ಮ…

Read More

ಶಿವಮೊಗ್ಗ ವಿಭಾಗೀಯ ವ್ಯಾಪ್ತಿಯ ಜಾರಿ ಮತ್ತು ಜಾಗೃತಿ ದಳ ಹಾಗೂ ವಿಭಾಗೀಯ ಸರಕು ಮತ್ತು ಸೇವಾ ತೆರಿಗೆ ಇಲಾಖೆಯ ಸುಮಾರು 40 ಅಧಿಕಾರಿಗಳ ತಂಡವು, ಮಲೆನಾಡು ವಿಭಾಗ ವ್ಯಾಪ್ತಿಯ ಎಲ್ಲಾ ಅಡಿಕೆ ವರ್ತಕರ ವ್ಯಾಪಾರ ಗೋದಾಮು ಸ್ಥಳಗಳ ಮೇಲೆ ದಿಢೀರ್ ದಾಳಿ ನಡೆಸಿ, ಲಕ್ಷಾಂತರ ಮೊತ್ತದ ಅಕ್ರಮ ಅಡಿಕೆ ವಹಿವಾಟು ದಾಸ್ತಾನು ಪತ್ತೆ ಹಚ್ಚಿ ದಂಡ ವಿಧಿಸಿರುವುದಾಗಿ ವರದಿಯಾಗಿದೆ. ಈ ವಿಶೇಷ ಕಾರ್ಯಾಚರಣೆಯನ್ನು ಶಿವಮೊಗ್ಗದ ಮಲೆನಾಡು ವಿಭಾಗೀಯ ತೆರಿಗೆ ಜಾಗೃತಿ ದಳ ಹಾಗೂ ಸರಕು ಮತ್ತು ಸೇವಾ ತೆರಿಗೆಗಳ ಜಂಟಿ ಆಯುಕ್ತರುಗಳು ಹಾಗೂ ಉಪ ಆಯುಕ್ತರುಗಳ ನೇತೃತ್ವದಲ್ಲಿ ನಡೆಸಿದ್ದು, ಅಕ್ರಮವಾಗಿ ಅಡಿಕೆ ಸಂಗ್ರಹಿಸಿದ ವ್ಯಾಪಾರಿಗಳ ಮೇಲೆ ಜಿ.ಎಸ್ ಟಿ ಕಾಯ್ದೆ ನಿಯಮಾನುಸಾರ ಕ್ರಮ ಜರುಗಿಸಲಾಗಿದೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಹೇಮಾವತಿ ನದಿ ನೀರು ಲಿಂಕ್ ಕೇನಾಲ್ ಕಾಮಗಾರಿ ವಿರೋಧಿಸಿ ಗೃಹ ಸಚಿವ ಪರಮೇಶ್ವರ್ ಮನೆ ಎದುರು ಪ್ರತಿಭಟನೆ ನಡೆಸಲು ಸಜ್ಜಾಗುತ್ತಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ಹಾಗೂ ತುರುವೇಕೆರೆ ಜೆಡಿಎಸ್ ಶಾಸಕ ಎಂ ಟಿ ಕೃಷ್ಣಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳಗ್ಗೆ 11 ಗಂಟೆ ವೇಳೆಗೆ ಪರಮೇಶ್ವರ್ ಮನೆ ಎದುರು ಪ್ರತಿಭಟನೆ ನಡೆಸಲು ಸಜ್ಜಾಗಿದ್ದರು. ಗೃಹ ಸಚಿವ ಡಾ.ಜಿ. ಪರಮೇಶ್ವರ್ ನಿವಾಸಕ್ಕೆ ಮುತ್ತಿಗೆ ಹಾಕಲು ಬರುತ್ತಿದ್ದ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ ಗುಬ್ಬಿ ತಾಲ್ಲೂಕು ಕಲ್ಲೂರು ಕ್ರಾಸ್ ಬಳಿ ಪೊಲೀಸರು ಬಂಧಿಸಿದ್ದಾರೆ. ಇನ್ನೊಂದೆಡೆ ಇಂದು ಬೆಳಗ್ಗೆಯೇ ಮಾಜಿ ಸಚಿವ ಸಗುಡು ಶಿವಣ್ಣ ಅವರನ್ನು ತುಮಕೂರು ನಗರದಲ್ಲಿ ವಶಕ್ಕೆ ತೆಗೆದುಕೊಂಡು ಪೊಲೀಸರು ಬಿಎಆರ್ ಗ್ರೌಂಡ್ ನಲ್ಲಿ ಇರಿಸಿದ್ದಾರೆ. ಒಂದು ವಾರದ ಹಿಂದೆಯೇ ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕುವ ಕುರಿತು ಲಿಂಕ್ ಕೆನಾಲ್ ಯೋಜನೆಯ ಹೋರಾಟ ಸಮಿತಿ ಘೋಷಣೆ ಮಾಡಿತ್ತು. ಅದರ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದಲೂ ಗೃಹ ಸಚಿವ ಪರಮೇಶ್ವರವರ ಮನೆಯದುರು…

Read More

ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ಬುಧವಾರ ದಾಖಲೆಯ 52.9 ಡಿಗ್ರಿ ಸೆಲ್ಷಿಯಸ್ ತಾಪಮಾನ ದಾಖಲಿಸಿದೆ. ಇದು ಇಡೀ ಭೂಮಿಯಲ್ಲಿ ಇದುವರೆಗೆ ದಾಖಲಾದ ಗರಿಷ್ಠ ಉಷ್ಣಾಂಶವಾದ 56.7 ಡಿಗ್ರಿ ಸೆಲ್ಷಿಯಸ್ ಗಿಂತ ಕೇವಲ 4.4 ಡಿಗ್ರಿಯಷ್ಟು ಕಡಿಮೆ. ಇದುವರೆಗಿನ ಗರಿಷ್ಠ ತಾಪಮಾನ ಕ್ಯಾಲಿಫೋರ್ನಿಯಾದ ಡೆತ್ ವ್ಯಾಲಿಯ ಗ್ರೀನ್ ಲ್ಯಾಂಡ್ ರಾಂಚ್ ನಲ್ಲಿ ದಾಖಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ಅಂಕಿ ಅಂಶಗಳ ಪ್ರಕಾರ, ವಾಯವ್ಯ ದೆಹಲಿಯ ಮಂಗೇಶ್ ಪುರ ಹವಾಮಾನ ಕೇಂದ್ರದಲ್ಲಿ ಮಧ್ಯಾಹ್ನ 2.30ಕ್ಕೆ ಈ ಆಘಾತಕಾರಿ ತಾಪಮಾನ ದಾಖಲಾಗಿದೆ. ನಗರದ ಹೊರವಲಯ ರಾಜಸ್ಥಾನದ ಬಿಸಿಗಾಳಿಯ ಹೊಡೆತಕ್ಕೆ ಸಿಲುಕುವ ಮೊದಲ ಪ್ರದೇಶ ಎಂದು ಐಎಂಡಿ ಪ್ರಾದೇಶಿಕ ಮುಖ್ಯಸ್ಥ ಕುಲದೀಪ್ ಶ್ರೀವಾಸ್ತವ ಹೇಳಿದ್ದಾರೆ. ಈಗಾಗಲೇ ತೀವ್ರ ಹವಾಮಾನ ಸ್ಥಿತಿಯಿಂದ ಕಂಗೆಟ್ಟಿರುವ ನಗರದ ಹೊರವಲಯಕ್ಕೆ ಉಷ್ಣಗಾಳಿ ಅಪ್ಪಳಿಸುವ ಸಾಧ್ಯತೆ ಅಧಿಕ. ಮಂಗೇಶ್ ಪುರ, ನರೇಲಾ ಮತ್ತು ನಜಾಫ್ ಗಢದಂತಹ ಪ್ರದೇಶಗಳು ಈ ಉಷ್ಣಗಾಳಿಯ ಪೂರ್ಣ ರಭಸಕ್ಕೆ ಸಿಲುಕುವ ಪ್ರದೇಶಳಾಗಿವೆ ಎಂದು ಕುಲದೀಪ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಪಿಟಿಐ ವರದಿ…

Read More

ಲಂಡನ್: ಬ್ರಿಟನ್ ಸಂಸತ್ತಿಗೆ ಜುಲೈ 4ರಂದು ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಐದು ವಾರಗಳ ಪ್ರಚಾರ ಅವಧಿ ಆರಂಭವಾದ ಬೆನ್ನಲ್ಲೇ ಗುರುವಾರ ಬ್ರಿಟನ್ ಸಂಸತ್ತನ್ನು ವಿಸರ್ಜಿಸಲಾಗಿದೆ. 14 ವರ್ಷಗಳ ಕನ್ಸರ್ವೇಟಿವ್ ಆಡಳಿತದ ಬಳಿಕ ಲೇಬರ್ ಪಕ್ಷವನ್ನು ಈ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ತರುವ ಸೂಚನೆಗಳು ಕಾಣುತ್ತಿವೆ. ಗುರುವಾರ ಮಧ್ಯರಾತ್ರಿ 12 ಗಂಟೆ ಕಳೆದು ಒಂದು ನಿಮಿಷವಾಗುತ್ತಿದ್ದಂತೆ ಸಂಸತ್ತಿನ ಎಲ್ಲ 650 ಸ್ಥಾನಗಳು ತೆರವಾಗಿವೆ. ಈ ಮೂಲಕ ಚುನಾವಣಾ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಭಾರೀ ಮಳೆಯ ನಡುವೆಯೇ ಪ್ರಧಾನಿ ರಿಷಿ ಸುನಾಕ್ ಅವರು ಚುನಾವಣಾ ಘೋಷಣೆ ಮಾಡಿರುವುದನ್ನು ಹಲವು ಮಂದಿ ಪ್ರಚಾರ ಕಾರ್ಯದ ನಡುಕದ ಆರಂಭ ಎಂದು ವಿಶ್ಲೇಷಿಸಿದ್ದು, ಮತ್ತೆ ಕೆಲವರು ಮಳೆಯನ್ನು ದುರಾದೃಷ್ಟದ ಸಂಕೇತ ಎಂದೂ ಪರಿಗಣಿಸಿದ್ದಾರೆ. ನಿರೀಕ್ಷೆಗಿಂತ ಮೊದಲೇ ಅಂದರೆ ಜುಲೈ 4ರಂದೇ ಚುನಾವಣೆ ನಡೆಸುವ ಸುನಾಕ್ ನಿರ್ಧಾರಕ್ಕೆ, ಚುನಾವಣಾ ಪೂರ್ವ ಸಮೀಕ್ಷೆಗಳಲ್ಲಿ ಅವರ ಪಕ್ಷದ ಜನಪ್ರಿಯತೆ ಕಡಿಮೆಯಾಗುತ್ತಿದೆ ಎಂದು ಕಂಡುಬಂದಿರುವುದೇ ಕಾರಣ ಎಂದು ಹೇಳಲಾಗುತ್ತಿದೆ. ಈ ಮಧ್ಯೆ ಮಾನವ ಹಕ್ಕುಗಳ…

Read More

ಹೆಗ್ಗಣಗಳಿಂದ ಮುಕ್ತಿ ನೀಡುವಂತೆ ಹಳೆ ಹುಬ್ಬಳ್ಳಿಯ ಆನಂದ ನಗರ ನಿವಾಸಿ ಅನಿಲ್ ಮುಂಡರಗಿ ಎಂಬುವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ವರದಿ ತಿಳಿಸಿದೆ. ಅನಿಲ್ ಮುಂಡರಗಿ ಪಕ್ಕದ ಮನೆಯಲ್ಲಿರುವ ಹೆಗ್ಗಣಗಳಿಂದನಮಗೆ ನೆಮ್ಮದಿ ಹಾಳಾಗಿದೆ. ಹೆಗ್ಗಣಗಳು ನಮ್ಮ ಮನೆಯಲ್ಲಿನ ಗ್ಯಾಸ್ ಪೈಪ್ ಲೈನ್, ಸಿಂಕ್ ಪೈಪ್ ಲೈನ್ ಕತ್ತರಿಸಿವೆ. ಎಲ್ಲೆಂದರಲ್ಲಿ ನೆಲ ಅಗೆದು ಮಣ್ಣು ಹೊರ ಹಾಕುತ್ತಿವೆ. ಮನೆಯಲ್ಲಿ ಎಲ್ಲೆಂದರಲ್ಲಿ ರಂಧ್ರಗಳು ಬಿದ್ದಿವೆ ಎಂದು ದೂರು ನೀಡಿದ್ದಾರೆ ಎನ್ನಲಾಗಿದೆ. ಪ್ರತಿದಿನ 15 ರಿಂದ 20 ಹೆಗ್ಗಣಗಳು ಕಾಟ ಕೊಡುತ್ತಿವೆ. ಪಕ್ಕದ ಮನೆಯವರಿಗೆ ಸಾಕಷ್ಟು ಬಾರಿ ಹೇಳಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ನೀವೇ ಸಮಸ್ಯೆಗೆ ಪರಿಹಾರ ಕಂಡು ಹಿಡಿಯಬೇಕು. ಸಿಲಿಂಡರ್ ಸೋರಿಕೆಯಾಗಿ ಅನಾಹುತವಾದರೆ ಯಾರು ಹೊಣೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ದೂರು ಆಧರಿಸಿ ಪೊಲೀಸರು ಅನಿಲ್ ಅವರ ಪಕ್ಕದ ಮನೆಯ ಮಾಲೀಕ ಸಿದ್ದು ಅಂಗಡಿ ಎಂಬುವರನ್ನು ಕರೆಯಿಸಿ, ನಾಲ್ಕೈದು ದಿನಗಳಲ್ಲಿ ಹೆಗ್ಗಣಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿ, ಮುಚ್ಚಳಿಕೆ ಬರೆಯಿಸಿಕೊಂಡಿದ್ದಾರೆ ಎನ್ನಲಾಗಿದೆ.…

Read More

ಪ್ರಯಾಣಿಕನ ಅಸಭ್ಯ ವರ್ತನೆಯಿಂದ ವಿಮಾನ ಟೇಕಾಫ್ ಆದ ಕೆಲವೇ ಗಂಟೆಗಳಲ್ಲಿ ಹಿಂದಿರುಗಿದ್ದು, ವಿಮಾನ ಆಸ್ಟ್ರೇಲಿಯಾದಿಂದ ಮೆಲ್ಬೋರ್ನ್‌ಗೆ ತೆರಳುತ್ತಿತ್ತು ಎನ್ನಲಾಗಿದೆ. ಫ್ಲೈಟ್ VA696 ಪರ್ತ್ ವಿಮಾನ ನಿಲ್ದಾಣದಿಂದ ಸ್ಥಳೀಯ ಕಾಲಮಾನ ಸುಮಾರು 7.20 ಗಂಟೆಗೆ ಹೊರಟಿತ್ತು. ಪ್ರಯಾಣಿಕರೊಬ್ಬರು ವಿಮಾನದಲ್ಲಿ ಬೆತ್ತಲೆಯಾಗಿ ಓಡಾಡಿ, ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಬೀಳಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ವಿಮಾನವನ್ನು ಹಿಂದಿರುಗಿಸುವಂತೆ ಒತ್ತಾಯಿಸಿದ್ದಾನೆ ಎನ್ನಲಾಗಿದೆ. ಸಿಬ್ಬಂದಿ ನೀಡಿದ ಮಾಹಿತಿ ಮೇರೆಗೆ ವಿಮಾನ ನಿಲ್ದಾಣದಲ್ಲಿದ್ದ ಆಸ್ಟ್ರೇಲಿಯಾ ಫೆಡರಲ್ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿಸಿರುವ ಆರೋಪಿಯನ್ನ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೂನ್ 14 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನವನ್ನು ಸುರಕ್ಷಿತವಾಗಿ ಪರ್ತ್‌ನಲ್ಲಿ ಇಳಿಸಲಾಗಿದ್ದು, ಘಟನೆಯಲ್ಲಿ ಸಹ ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿಸಿದ್ದಾರೆ. ವ್ಯಕ್ತಿ ಯಾವಾಗ ತನ್ನ ಬಟ್ಟೆಗಳನ್ನು ಬಿಚ್ಚಿಟ್ಟಿದ್ದಾನೆ ಎಂಬುದು ಸ್ಪಷ್ಟವಾಗಿಲ್ಲ. ನ್ಯಾಯಾಲಯಕ್ಕೆ ಹಾಜರುಪಡಿಸಲು ಆರೋಪಿ ಮೇಲೆ ಯಾವ ಆರೋಪಗಳನ್ನು ಹೊರಿಸುತ್ತಿದ್ದಾರೆ ಎಂಬುದನ್ನು ಪೊಲೀಸರು ಬಹಿರಂಗಪಡಿಸಿಲ್ಲ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಹಿಂದೂ– ಮುಸ್ಲಿಂ ಜೊತೆಯಾಗಿದ್ದರೂ ಈ ಪ್ರದೇಶದಲ್ಲಿ ಒಂದು ಮಸೀದಿಯಿದೆ. ಆದರೆ ದೇವಸ್ಥಾನವಿಲ್ಲ. ತಮಿಳುನಾಡಿನ ಈ ಪ್ರದೇಶದಲ್ಲಿ ಹೆಚ್ಚು ಮುಸ್ಲಿಮರೇ ವಾಸವಾಗಿದ್ದಾರೆ. ತಿರುಪ್ಪೂರ್ ಜಿಲ್ಲೆಯ ಪಡಿಯೂರು ಬಳಿಯ ಒಟ್ಟಪಾಳ್ಯಂ ಪ್ರದೇಶದಲ್ಲಿ ಸುಮಾರು 300 ಕುಟುಂಬಗಳಿವೆ ಎನ್ನಲಾಗಿದೆ. ಕೆಲ ವರ್ಷಗಳ ಹಿಂದೆ ಇಲ್ಲಿ ಕೆಲ ಹಿಂದೂ ಕುಟುಂಬಗಳು ಬಂದು ನೆಲೆಕಂಡಿದೆ. ಈ ಕುಟುಂಬಗಳ ಮನೆಯಲ್ಲಿ ದೇವರ ಫೋಟೋವಿದೆ ಹೊರತು, ಪೂಜಿಸಲು ದೇವಾಲಯ ಈ ಪ್ರದೇಶದಲ್ಲಿರಲಿಲ್ಲ. ಈ ಕಾರಣದಿಂದ ಹಿಂದೂ ಕುಟುಂಬಗಳು ಜೊತೆಯಾಗಿ ದೇವಸ್ಥಾನವನ್ನು ನಿರ್ಮಿಸಲು ಯೋಜನೆಯೊಂದನ್ನು ಹಾಕಿಕೊಂಡು ಸೂಕ್ತ ಜಾಗವನ್ನು ಹುಡುಕಲು ಪ್ರಾರಂಭಿಸುತ್ತಾರೆ. ಆದರೆ ಹಿಂದೂ ಕುಟುಂಬಗಳಿಗೆ ಗಣೇಶ ದೇವಸ್ಥಾನವನ್ನು ಕಟ್ಟಲು ಸೂಕ್ತವಾದ ಜಾಗ ಸಿಕ್ಕಿರಲಿಲ್ಲ. 20 ವರ್ಷಗಳ ಹಿಂದೆ ಮುಸ್ಲಿಂ ಕುಟುಂಬವೊಂದು ಜಾಗವನ್ನು ಖರೀದಿ ಮಾಡಿತ್ತು. ಆ ಜಾಗದಲ್ಲಿ ಲೇಔಟ್‌ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಖಾಲಿಯಾಗಿತ್ತು. 10 ಹಿಂದೂ ನಿವಾಸಿಗಳು ರೋಸ್ ಗಾರ್ಡನ್ ಮುಸ್ಲಿಂ ಜಮಾತ್ ಬಳಿ ತಮಗೆ ಆ ಲೇಔಟ್‌ ಜಾಗದಲ್ಲಿ ಒಂದು ಭೂಮಿ ದೇವಸ್ಥಾನ ನಿರ್ಮಾಣಕ್ಕೆ ನೀಡಿಯೆಂದು ಮನವಿಯನ್ನು ಮಾಡಿದ್ದಾರೆ.…

Read More

ಬೆಂಗಳೂರು:  ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ಬಂಧನಕ್ಕೆ ಪಕ್ಷ ಎಂಬುದು ಬರುವುದಿಲ್ಲ.‌ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದರೆ ಅಂತವರನ್ನು ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜನತಾದಳ, ಬಿಜೆಪಿ ಎಂಬುದಕ್ಕಿಂತ ಹೆಚ್ಚಾಗಿ, ಈ ಪ್ರಕರಣದಲ್ಲಿ ಯಾರು ಭಾಗಿಯಾಗಿರುವುದು ಕಂಡು ಬರುತ್ತದೆಯೋ ಅಂತವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತದೆ. ಈಗಾಗಲೇ‌ ಪ್ರಕರಣದಲ್ಲಿ 11-12 ಜನರನ್ನು ಬಂಧಿಸಲಾಗಿದೆ ಎಂದರು. ಪ್ರಜ್ವಲ್ ರೇವಣ್ಣ ವಾಪಸ್ ಆಗುತ್ತಿರುವ ವಿಚಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಪ್ರಜ್ವಲ್ ವಿರುದ್ಧ ವಾರಂಟ್ ಜಾರಿಯಾಗಿರುವುದರಿಂದ ಬಂಧಿಸಬೇಕಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ಎಸ್ಐಟಿಯವರು ಪ್ರಕ್ರಿಯೆ ಆರಂಭಿಸಿದ್ದಾರೆ ಎಂದು ತಿಳಿಸಿದರು. ಎಮ್‌ಎಲ್‌ಸಿ ಅಭ್ಯರ್ಥಿಗಳ ಆಯ್ಕೆ ವಿಚಾರದ ಕುರಿತು ಮಾತನಾಡಿ, ನನ್ನ ಹೇಳಿಕೆಯನ್ನು ಯಾರು ತಪ್ಪಾಗಿ ಅರ್ಥೈಸಿಕೊಳ್ಳಬೇಕಾದ ಅಗತ್ಯ ಇಲ್ಲ. ಪ್ರಮುಖರೊಂದಿಗೆ ಸಮಾಲೋಚನೆ ಅಭ್ಯರ್ಥಿಗಳ ಆಯ್ಕೆ ಮಾಡಬೇಕಾದುದು ಪ್ರಕ್ರಿಯೆ. ಯಾರು ಸಹ ಇದನ್ನು ತಪ್ಪು ಅಂತ ಹೇಳಲಾಗುವುದಿಲ್ಲ. ನಾನು ಸಹ ಕೆಪಿಸಿಸಿ‌ ಅಧ್ಯಕ್ಷನಾಗಿ‌ ಕೆಲಸ…

Read More