Subscribe to Updates
Get the latest creative news from FooBar about art, design and business.
- ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ
- ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!
- ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ
- ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ
- ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
- ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
- ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
- ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
Author: admin
ತುಮಕೂರು: ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಮಾಡಲು ಅನುಕೂಲವಾಗಲಿ ಎಂಬ ದೃಷ್ಟಿ ಯಿಂದ ಸಾಂದರ್ಭಿಕ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳು, ಅನುದಾನ ಹಾಗೂ ಅನುದಾನ ರಹಿತ ಶಾಲೆಗಳು, ಎಲ್ಲಾ ಶೈಕ್ಷಣಿಕ ಸಂಸ್ಥೆಗಳು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳು, ರಾಷ್ಟ್ರೀಕೃತ ಹಾಗೂ ಇತರ ಬ್ಯಾಂಕ್ ಗಳು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಖಾನೆಗಳು ಹಾಗೂ ಉಳಿದ ಕೈಗಾರಿಕಾ ಸಂಸ್ಥೆಗಳು, ಸಹಕಾರ ರಂಗದ ಸಂಸ್ಥೆಗಳಲ್ಲಿ ಎಲ್ಲಾ ವ್ಯವಹಾರಿಕ ಸಂಸ್ಥೆಗಳಲ್ಲಿ, ಕಾಯಮಾಗಿ ಹಾಗೂ ದಿನಗೂಲಿ ಮೇಲೆ ಕೆಲಸ ಮಾಡುತ್ತಿರುವ ಪದವೀಧರರು ಹಾಗೂ ಶಿಕ್ಷಕರು ಮತದಾನ ಮಾಡಲು ಅನುಕೂಲವಾಗುವಂತೆ ಅರ್ಹ ಮತದಾರರಿಗೆ ಸೀಮಿತವಾದಂತೆ ಮತ ಚಲಾಯಿಸಲು ಮತದಾರರಿಗೆ ಜೂನ್ ಮೂರರಂದು ಸೋಮವಾರ ವಿಶೇಷ ಸ್ಥಾನ ವಿಶೇಷ ಸಾಂದರ್ಭಿಕ ರಜೆಯನ್ನು ಘೋಷಿಸಿ ಸರ್ಕಾರ ಆದೇಶಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ತುಮಕೂರು : ಪಾವಗಡ ಪಟ್ಟಣದ ಹೊರವಲಯದಲ್ಲಿ ಕುಡಿದ ಮತ್ತಿನಲ್ಲಿ ಕೆಪಿಟಿಸಿಎಲ್ ಎಂಜಿನಿಯರ್ ಗಳು ಬೀರ್ ಬಾಟಲಿಂದ ತಲೆ ಬುರುಡೆಗೆ ಪರಸ್ಪರ ಹೊಡೆದುಕೊಳ್ಳುವ ದೃಶ್ಯ ವಿಡಿಯೋ ವೈರಲ್ ಆಗಿದೆ. ಕಳೆದ ಗುರುವಾರ ಪಾವಗಡ ಪಟ್ಟಣದ ತುಮಕೂರು ರಸ್ತೆಯ ಮಾರ್ಗದ ರಾಯಲ್ ರೆಸಾರ್ಟ್ ಹಿಂಭಾಗ ನಾಲ್ವರು ನೌಕರರು ಹಗಲೋತ್ತೆ ಪಾರ್ಟಿ ಮಾಡಿಕೊಂಡಿದ್ದರು. ಪಾರ್ಟಿ ಮಧ್ಯೆ ಮಾತಿಗೆ ಮಾತು ಬೆಳೆದು ತೀವ್ರವಾಗಿ ಬಡಿದಾಡಿಕೊಂಡಿದ್ದಾರೆ. ಕೆ.ಪಿ.ಟಿ.ಸಿ.ಎಲ್. ಜೂನಿಯರ್ ಎಂಜಿನಿಯರ್ಗಳಾದ ಶ್ರೀನಿವಾಸ್, ವಾದಿರಾಜ್, ನಡುವೆ ಈ ಒಂದು ಭೀಕರ ಬೀರು ಬಾಟಲಿಂದ ಹೊಡೆದಾಡಿಕೊಳ್ಳುವ ದೃಶ್ಯವನ್ನು ಈಗ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡಲಾಗಿದೆ. ಈ ವೇಳೆ ಈ ಇಬ್ಬರನ್ನು ಸಮಾಧಾನ ಮಾಡಲು ಬೆಸ್ಕಾಂ ಸಿಬ್ಬಂದಿ ನರಸಿಂಹಮೂರ್ತಿ ಮತ್ತು ಸಂತೋಷ್ ಹರಸಾಹಸದ ದೃಶ್ಯ ಕಾಣಬಹುದಾಗಿದೆ. ಇದೇ ಸಂದರ್ಭದಲ್ಲಿ ಇನ್ನೊಬ್ಬ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಮಾಲ್ಗುಂಡ ಇದ್ದರು. ತಲೆಗೆ ಗಾಯವಾಗಿ ರಕ್ತ ಸುರಿಯುತ್ತಿದ್ದರೂ ಸಹ ತಲೆಗೆ ಹೊಡೆದವನನ್ನು ಹುಡುಕಿ ಹುಡುಕಿ ಮತ್ತೆ ಬೀರು ಬಾಟಲಿನಿಂದ ಓಡಿಸಿಕೊಂಡು ಹೋಗಿ ತಲೆಗೆ ಹೊಡೆಯುವ ದೃಶ್ಯವನ್ನು ಕಾಣಬಹುದಾಗಿದೆ. ಈವರೆಗೂ…
ಗುಬ್ಬಿ: ತಾಲ್ಲೂಕಿನ ವೈದ್ಯರು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ತಾಲೂಕು ಪಂಚಾಯಿತ್ ಸಭಾಂಗಣದಲ್ಲಿ ನಡೆಯುತ್ತಿದ್ದ ಡೆಂಗ್ಯೂ ನಿಯಂತ್ರಣ ಕುರಿತ “ಅಡ್ವೋಕಸಿ ಕಾರ್ಯಾಗಾರ”ಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅನಿರೀಕ್ಷಿತ ಭೇಟಿ ನೀಡಿದರು. ಇದೇ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಸಾಂಕ್ರಾಮಿಕ ರೋಗಗಳ ತಡೆಯುವಿಕೆ, ಶುದ್ಧ ಕುಡಿಯುವ ನೀರಿನ ಮಹತ್ವದ ಕುರಿತು ಅರಿವು ಮೂಡಿಸಿದರು. ನಂತರ ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದ ತಾಲೂಕು ಆರೋಗ್ಯಾಧಿಕಾರಿ ಬಿಂದು ಮಾದವರಿಗೆ, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಪರಮೇಶ್ವರ್ ನಾಯಕ್ ಉದ್ದೇಶಿಸಿ, ಸಾಂಕ್ರಾಮಿಕ ರೋಗಗಳು ಕಂಡು ಬಂದ ತಕ್ಷಣ ಜಿಲ್ಲಾಡಳಿತದ ಗಮನಕ್ಕೆ ತರಬೇಕು ಹಾಗೂ ತಾಲ್ಲೂಕು ವ್ಯಾಪ್ತಿ ಶುದ್ಧ ನೀರು ಪೂರೈಕೆ ಆಗುತ್ತಿರುವ ಬಗ್ಗೆ ಪರಿಶೀಲಿಸುವಂತೆ ಸೂಚಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಮಧುಗಿರಿ: ತಾಲೂಕಿನ ದೊಡ್ಡೇರಿ ಹೋಬಳಿ ಬಡವನಹಳ್ಳಿ ಗ್ರಾಮದ ಎಸ್.ಆರ್.ಬಾರ್ ಅಂಡ್ ರೆಸ್ಟೋರೆಂಟ್ ಬಡವರ ಕುಡಿತವನ್ನು ಬಂಡವಾಳ ಮಾಡಿಕೊಂಡು ಬಡ ಮದ್ಯ ಪ್ರಿಯರ ಬಳಿ ಹೆಚ್ಚು ಹಣವನ್ನು ಪೀಕುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಇದು ಬಾರ್ ಮಾಲೀಕರ ತಪ್ಪೋ ಅಥವಾ ಅಲ್ಲಿ ಕೆಲಸ ಮಾಡುವ ಕ್ಯಾಶಿಯರ್ ರವರ ಅವ್ಯವಹಾರಗಳೋ ಒಂದು ತಿಳಿಯದು..? ಈ ಬಾರ್ ನಲ್ಲಿ ಬಾರ್ ನವರೇ ಸ್ವಯಂ ಬೆಲೆಯನ್ನು ನಿಗದಿ ಮಾಡಿ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದಾರೆ, ಇಲ್ಲಿ ಸರ್ಕಾರದ ಆದೇಶವನ್ನು ಪಾಲಿಸುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಸರ್ಕಾರ ನಿಗದಿ ಮಾಡಿರುವ ಬೆಲೆಗಿಂತ ದುಪ್ಪಟ್ಟು ಹಣವನ್ನು ಬಾರ್ ನವರು ವಸೂಲಿ ಮಾಡುತ್ತಿದ್ದಾರೆ. ಬಾರ್ ನಲ್ಲಿ ನೀಡಲಾಗುತ್ತಿರುವ ಬಿಲ್ಲುಗಳೇ ಇದಕ್ಕೆ ಸಾಕ್ಷಿಯಾಗಿದೆ. ಇದು ಮಧುಗಿರಿ ತಾಲೂಕಿನ ಒಂದು ಬಾರ್ ನ ಕಥೆಯಲ್ಲ, ಸುಮಾರು ಕಡೆ ಗಡಿ ಭಾಗದಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ ಕೆಲವು ಬಾರ್ ಮಾಲಿಕರು ಗ್ರಾಹಕರಿಂದ ದುಪ್ಪಟ್ಟು ಹಣ ವಸೂಲಿಗೆ ಇಳಿದಿದ್ದಾರೆ, ಇವರನ್ನು ಕಡಿವಾಣ ಹಾಕುವುದು ಯಾರು ಎನ್ನುವ…
ಕೊರಟಗೆರೆ: ಲಾರಿ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊರಟಗೆರೆ ತಾಲೂಕಿನ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಲಗನಹಳ್ಳಿ ಗ್ರಾಮದ ಬಳಿ ನಡೆದಿದೆ. ರೆಡ್ಡಿಹಳ್ಳಿ ಗ್ರಾಮದ ವೆಂಕಟಶಾಮಯ್ಯ ಎನ್ನುವರ ಪುತ್ರ ನವೀನ್ (28) ಮೃತಪಟ್ಟ ಯುವಕನಾಗಿದ್ದಾನೆ. ಕೊರಟಗೆರೆ ಮಾರ್ಗದಿಂದ ಅತಿವೇಗದಿಂದ ಬರುತ್ತಿದ್ದ ಲಾರಿ, ರೆಡ್ಡಿಹಳ್ಳಿ ಗ್ರಾಮದಿಂದ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಲಾರಿಯಡಿಗೆ ಸಿಲುಕಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಲಾರಿ ಚಾಲಕನ ಅತೀಯಾದ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಅಪಘಾತದ ಬಳಿಕ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತ ನವೀನ್ ವಿವಾಹವಾಗಿ ನಾಳೆಗೆ ಒಂದು ವರ್ಷವಾಗಲಿದೆ. ಈ ನಡುವೆ ನವೀನ್ ನನ್ನು ಕಳೆದುಕೊಂಡಿರುವ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗಿದ್ದು, ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು…
ಶೃಂಗೇರಿ ಶಾರದಾಂಬೆಯ ದರ್ಶನಕ್ಕೆ ಬಂದಿದ್ದ ಬೆಂಗಳೂರು ಮೂಲದ ಪೊಲೀಸ್ ಪೇದೆ ಮೇಲೆ ದೇಗುಲದ ಮುಂಭಾಗದಲ್ಲೇ ಹಲ್ಲೆ ನಡೆಸಿರುವ ಘಟನೆ ಶೃಂಗೇರಿಯಲ್ಲಿ ನಡೆದಿದೆ. ಕಳೆದ ರಾತ್ರಿ ದೇವಸ್ಥಾನದ ಮುಂಭಾಗದಲ್ಲಿ ಕಾರು ನಿಲ್ಲಿಸಿದ್ದಾಗ ಈ ಘಟನೆ ನಡೆದಿದ್ದು, ಪೇದೆ ರಾಜೇಗೌಡ, ಪತ್ನಿ ಕುಸುಮ ಹಾಗೂ ಅವರ ಅಣ್ಣ–ಅತ್ತಿಗೆಯ ಮೇಲೂ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಶೃಂಗೇರಿ ಪಟ್ಟಣದ ಕಿಡಿಗೇಡಿ ಸ್ಪರ್ಶಿತ್ ಎಂಬಾತ ಹಲ್ಲೆ ನಡೆಸಿದ್ದು, ಶೃಂಗೇರಿ ಕಾರು ಪಾರ್ಕಿಂಗ್ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಈತನನ್ನು ಸದ್ಯ ಪೊಲೀಸರು ಬಂಧಿಸಿದ್ದಾರೆ. ಘಟನೆ ವಿವರ: ಬೆಂಗಳೂರು ಮೂಲದ ಪೊಲೀಸ್ ಪೇದೆ ರಾಜೇಗೌಡ ಮತ್ತು ಕುಟುಂಬ ಶೃಂಗೇರಿ ಶಾರದಾಂಬೆಯ ದರ್ಶನಕ್ಕೆ ಬಂದಿದ್ದರು. ಕಳೆದ ರಾತ್ರಿ ಪೇದೆಯ ಅಣ್ಣ–ಅತ್ತಿಗೆ ಉಳಿಯಲು ಲಾಡ್ಜ್ ಕೇಳಲು ಹೋಗಿದ್ದರು. ಆಗ ಸ್ಕೂಟಿಯಲ್ಲಿ ಬಂದ ಇಬ್ಬರು ಹಾಗೂ ದೇವಾಲಯದ ಮುಂಭಾಗವಿದ್ದ ಮತ್ತಿಬ್ಬರು ಸೇರಿ ಗಲಾಟೆ ಮಾಡಿದ್ದು, ದೇವಸ್ಥಾನದ ಮುಂಭಾಗ ಇದ್ದ ಕಾರ್ ತೆಗೆಯುವಂತೆ ಖ್ಯಾತೆ ತೆಗೆದಿದ್ದಾರೆ. ಈ ವೇಳೆ ಗಲಾಟೆ ಜೋರಾಗಿ ಕಬ್ಬಿಣದ…
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ಸ್, ಬಂಟಿಂಗ್ಸ್, ಭಿತ್ತಿಪತ್ರಗಳು ಸೇರಿದಂತೆ ಇನ್ನಿತರೆ ಜಾಹೀರಾತುಗಳಿಗೆ ಸಂಬಂಧಿಸಿದಂತೆ ಮಾಹಿತಿ ಮತ್ತು ದೂರನ್ನು ಸಲ್ಲಿಸಬಹುದಾಗಿದ್ದು, ತಪ್ಪಿತಸ್ಥರ ವಿರುದ್ಧ ಎಫ್.ಐ.ಆರ್ ದಾಖಲು ಮಾಡಿ, ಕಾನೂನು ರೀತಿಯ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ತಿಳಿಸಿದೆ. ನಿವಾಸಿಗಳ ಕ್ಷೇಮಾಭಿವೃಧ್ಧಿ ಸಂಘಗಳು, ಸರಕಾರೇತರ ಸಂಸ್ಥೆಗಳು ಹಾಗೂ ನಾಗರಿಕರು ಪಾಲಿಕೆಯ ಜಾಹೀರಾತು ವಿಭಾಗದ ವಾಟ್ಸಪ್ ಸಂಖ್ಯೆ 94806 83939 ಗೆ ಛಾಯಾಚಿತ್ರಗಳು ಕಳುಹಿಸುವ ಅಥವಾ ದಕ್ಷಿಣ ವಲಯ ನಿಯಂತ್ರಣ ಕೊಠಡಿಯ ದೂರವಾಣಿ ಸಂಖ್ಯೆ 080-2656 6362 / 2297 5704ಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಪ್ರಸ್ತುತ ಜಾರಿಯಲ್ಲಿರುವ ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಹೊರಾಂಗಣ ಜಾಹೀರಾತು ಫಲಕ ಮತ್ತು ಸಾರ್ವಜನಿಕ ಸಂದೇಶದ ಉಪ ವಿಧಿಗಳು-2018’ ರಲ್ಲಿ ಅಂಗಡಿ ಮುಂಗಟ್ಟು ಜಾಹೀರಾತುಗಳು, ವಾಹನ ಸ್ವ-ಜಾಹೀರಾತು ಇನ್ನಿತರೆ ಸಣ್ಣಪುಟ್ಟ ಜಾಹೀರಾತುಗಳನ್ನು ಸೀಮಿತ ಅವಧಿಗೆ ಮತ್ತು ಸೀಮಿತ ಅಳತೆಗೆ(ಪಿಪಿಪಿ ಯೋಜನೆಗಳು ಸೇರಿದಂತೆ) ಅನುಮತಿಸಲು ಮಾತ್ರ ಅವಕಾಶವಿರುತ್ತದೆ. ಇವುಗಳನ್ನು ಹೊರತುಪಡಿಸಿ ಇತರೆ ಯಾವುದೇ ವಸತಿ ಪ್ರದೇಶಗಳಲ್ಲಿ,…
ಬಿತ್ತನೆ ಬೀಜ ದರ ಏರಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ. 2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದ್ದು, ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ ಮಾರಾಟದ ದರ ಏರಿಕೆಯಾಗಿದೆ. ಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ ಇದೆ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಬಿತ್ತನೆ ಬೀಜಗಳ ಮಾರಾಟ ದರಗಳನ್ನು ನಿಗದಿಪಡಿಸುವ ಸಂದರ್ಭಗಳಲ್ಲಿ ಬಿತ್ತನೆ ಬೀಜ ಖರೀದಿ ದರಗಳು ಹಾಗೂ ಗರಿಷ್ಠ APMC ಮಾರಾಟ ದರಗಳನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. 2022-23ನೇ ಸಾಲಿಗೆ ಹೋಲಿಸಿದಾಗ 2023-24ನೇ ಸಾಲಿನಲ್ಲಿ ವಿವಿಧ ಬೆಳೆಗಳ ಖರೀದಿ ದರಗಳಲ್ಲಿ (Procurement Rates) ಗರಿಷ್ಠ ಶೇ.59.58ರಷ್ಟು ವ್ಯತ್ಯಾಸವಾಗಿರುತ್ತದೆ ಎಂದಿದ್ದಾರೆ. ರೈತರು ತಮ್ಮ ಜಮೀನಿನಲ್ಲಿಯೇ ಬೀಜಗಳನ್ನು ಉತ್ಪಾದನೆ ಮಾಡುತ್ತಾರೆ. ಇದನ್ನು ಕರ್ನಾಟಕ ರಾಜ್ಯ ಬೀಜ ನಿಗಮ ನಿ., ರಾಷ್ಟ್ರೀಯ ರಾಜ್ಯ ಬೀಜ ನಿ.,…
ಡಿಟೆಕ್ಟಿವ್ ಏಜೆನ್ಸಿಗಳ ಹೆಸರಿನಲ್ಲಿ ಅನಧಿಕೃತವಾಗಿ ಸಿಡಿಆರ್ (ಕರೆ ವಿವರಗಳ ದಾಖಲೆ) ಕಲೆಹಾಕುತ್ತಿದ್ದ ಪ್ರಕರಣದಡಿ ಏಳು ಜನ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ವಿಜಯನಗರ ಹಾಗೂ ಗೋವಿಂದರಾಜನಗರ ಠಾಣೆಗಳ ವ್ಯಾಪ್ತಿಯಲ್ಲಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿರುವ ಸಿಸಿಬಿ ಹಾಗೂ ವಿಜಯನಗರ ಉಪವಿಭಾಗದ ಪೊಲೀಸರು, ಮಹಾನಗರಿ ಡಿಟೆಕ್ಟಿವ್ ಆ್ಯಂಡ್ ಸೆಕ್ಯುರಿಟಿ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್, ರಾಜಧಾನಿ ಕಾರ್ಪೊರೇಟ್ ಸರ್ವಿಸ್ ಹೆಸರಿನ ಕಚೇರಿಗಳಲ್ಲಿ ಪರಿಶೀಲನೆ ನಡೆಸಿ, ಮೂರು ಪ್ರಕರಣಗಳನ್ನು ದಾಖಲಿಸಿಕೊಂಡಿರುವುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ. ಸಾಮಾನ್ಯವಾಗಿ ಪ್ರಕರಣಗಳ ತನಿಖೆ ಕೈಗೊಳ್ಳುವ ತನಿಖಾ ಏಜೆನ್ಸಿಗಳು ಕಾನೂನಾತ್ಮಕವಾಗಿ ಸಿಡಿಆರ್ ಕಲೆಹಾಕುವ ಅಧಿಕಾರ ಹೊಂದಿರುತ್ತವೆ. ಅನಧಿಕೃತವಾಗಿ ಸಿಡಿಆರ್ ಕಲೆ ಹಾಕುವುದು ಸಾರ್ವಜನಿಕರ ಖಾಸಗಿತನಕ್ಕೆ ಧಕ್ಕೆ ತಂದ ಆರೋಪವಾಗುತ್ತದೆ. ಆದರೆ, ಡಿಟೆಕ್ಟಿವ್ ಏಜೆನ್ಸಿ ಸ್ಥಾಪಿಸುವುದಾಗಿ ಕಟ್ಟಡಗಳನ್ನು ಬಾಡಿಗೆಗೆ ಪಡೆದಿದ್ದ ಆರೋಪಿಗಳು ಸರಕಾರದ ಪರವಾನಗಿ ಪಡೆಯದೆ ಸರ್ವಿಸ್ ಪ್ರೊವೈಡರ್ ಕಂಪೆನಿಗಳ ಏಜೆಂಟರುಗಳೊಂದಿಗೆ ಶಾಮೀಲಾಗಿ ಬೇರೆ ಬೇರೆ ವ್ಯಕ್ತಿಗಳ ಮೊಬೈಲ್ ನಂಬರ್ ಗಳ ಸಿಡಿಆರ್ ಕಲೆಹಾಕುತ್ತಿದ್ದರು. ಅವುಗಳನ್ನು ಅಪರಾಧ ಕೃತ್ಯಗಳನ್ನು…
ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪತ್ನಿ ಭವಾನಿಗೂ ಬಂಧನ ಭೀತಿ ಶುರುವಾಗಿದ್ದು, ಇಂದು ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಮಹಿಳೆಯನ್ನು ಕಾರಿನಲ್ಲಿ ಕರೆದೊಯ್ದ ಆರೋಪದಡಿ ಭವಾನಿ ಕಾರು ಚಾಲಕ ಅಜಿತ್ ಗೂ ಎಸ್ ಐಟಿ ನೋಟಿಸ್ ನೀಡಿದೆ. ಹೀಗಾಗಿ, ಪ್ರಕರಣ ತಮಗೂ ಉರುಳಾಗಬಹುದು ಅನ್ನೋ ಆತಂಕ ಭವಾನಿ ರೇವಣ್ಣಗೆ ಕಾಡುತ್ತಿದೆ. ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯು ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ಅರ್ಜಿ ವಿಚಾರಣೆಗೆ ಬರಲಿದೆ. ಜಾಮೀನು ಅರ್ಜಿಯ ವಿಚಾರಣೆ ಮಂಗಳವಾರವೂ ನಡೆದಿತ್ತು. ನಂತರ ವಿಚಾರಣೆಯನ್ನು ಇಂದಿಗೆ ಮುಂದೂಡಿಕೆ ಮಾಡಲಾಗಿತ್ತು. ಅಪಹರಣ ಪ್ರಕರಣದ ದೂರಿನಲ್ಲಿ ಭವಾನಿ ರೇವಣ್ಣ ಹೆಸರಿದ್ದರೂ ಎಫ್ ಐಆರ್ ದಾಖಲಾಗಿಲ್ಲ. ಅವರ ವಿರುದ್ಧ ಯಾವುದೇ ಆರೋಪಗಳಿಲ್ಲ. ಎಸ್ ಐಟಿ ಕೂಡಾ ಈವರೆಗೆ ನೋಟಿಸ್ ಜಾರಿಗೊಳಿಸಿಲ್ಲ. ಆದರೆ ಪತ್ರಿಕೆಗಳಲ್ಲಿ ಎಸ್ ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ಪ್ರಕಟವಾಗಿದೆ. ಇದಾದ ಬಳಿಕ ಮೇ 15ರಂದು ಭವಾನಿ ರೇವಣ್ಣ ಎಸ್…