Subscribe to Updates
Get the latest creative news from FooBar about art, design and business.
- ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ
- ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!
- ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ
- ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ
- ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
- ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
- ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
- ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
Author: admin
ಇಂದು ರೆಬೆಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬವಾಗಿದ್ದು, ಫ್ರಾನ್ಸ್ ಗೆ ಹಬ್ಬವಾಗಿದೆ. ಅಂಬರೀಶ್ ಅವರ ಜನ್ಮ ದಿನವನ್ನ ಅಭಿಮಾನಿಗಳು ತಮ್ಮದೇ ರೀತಿಯಲ್ಲಿಯೇ ಆಚರಿಸುತ್ತಾರೆ. ಕಂಠೀರವ ಸ್ಟುಡಿಯೋದಲ್ಲಿರೋ ಅಂಬರೀಶ್ ಸಮಾಧಿಗೆ ಬಂದು ಪೂಜೆ ಸಲ್ಲಿಸುತ್ತಾರೆ. ಅಂಬಿಗೆ ಜೈಕಾರ ಹಾಕುತ್ತಾರೆ. ಅಂಬಿಯ ಸಿನಿಮಾಗಳನ್ನ ಹೆಸರನ್ನ ಹೇಳಿ ಅಭಿಮಾನ ಮರೆಯುತ್ತಾರೆ. ಅದೇ ರೀತಿ ಈ ವರ್ಷ ಅಂಬರೀಶ್ 72 ನೇ ಜನ್ಮ ದಿನಕ್ಕೆ ಒಂದು ಕಾಮನ್ ಡಿಪಿ ಮಾಡಿದ್ದಾರೆ. ಇದು ವಿಶೇಷವಾಗಿಯೇ ಇದೆ. ಅಂಬರೀಶ್ ಎಂದೂ ಕೊರಗಲೇ ಇಲ್ಲ ನೋಡಿ. ಅಂಬಿ ನಿಂಗ್ ವಯಸ್ಸಾಯ್ತೋ ಚಿತ್ರದಲ್ಲಿ ತುಂಬಾನೆ ಗೆಲುವಿನಿಂದಲೇ ಆ್ಯಕ್ಟ್ ಮಾಡಿದ್ದರು. ಒಳ್ಳೆ ಕಥೆಯೊಂದಿಗೆ ಈ ಚಿತ್ರದಲ್ಲಿ ಜನರನ್ನ ರಂಜಿಸೋ ಕೆಲಸ ಮಾಡಿದ್ದರು. ಗುರುದತ್ ಗಾಣಿಗ ರಂತಹ ಯುವ ನಿರ್ದೇಶಕರು ಹೇಳಿದಂತೆ ನಟಿಸಿ ಜನರ ದಿಲ್ ಕದ್ದರು. ಅಂಬರೀಶ್ ಅವರ ಈ ಚಿತ್ರದಲ್ಲಿ ಹೇ ಜಲೀಲಾ ಅನ್ನೋ ಹಾಡಿತ್ತು. ಈ ಹಾಡಿನಲ್ಲಿ ಅಂಬರೀಶ್ ಸಖತ್ ಆಗಿಯೇ ಡ್ಯಾನ್ಸ್ ಮಾಡಿದ್ದರು. ಜೋಗಿ ಪ್ರೇಮ್ ಈ ಒಂದು ಹಾಡನ್ನ…
ಮದುವೆ ದಿನ ಸುಂದರವಾಗಿ ಕಾಣಬೇಕು ಎಂಬ ಆಸೆ ಪ್ರತಿಯೊಬ್ಬರಿಗೂ ಇರುತ್ತೆ. ಅದೇ ಕಾರಣಕ್ಕೆ ಸಾಕಷ್ಟು ಹಣ ಖರ್ಚು ಮಾಡುತ್ತಾರೆ. ಆದರೆ ಕೆಲವರು ದುಬಾರಿ ಚಿಕಿತ್ಸೆಯ ಮೊರೆ ಹೋಗುತ್ತಾರೆ. ಇವುಗಳ ಕೆಲವೊಮ್ಮೆ ಜೀವಕ್ಕೆ ಮಾರಕವು ಹೌದು. ಲಾರಾ ಫೆರ್ನಾಂಡಿಸ್ ಕೋಸ್ಟಾ(31) ಎಂಬಾಕೆ ಮದುವೆಯ ದಿನ ಸುಂದರವಾಗಿ ಕಾಣಬೇಕು ಎಂಬ ಕಾರಣಕ್ಕೆ ಗ್ಯಾಸ್ಟ್ರಿಕ್ ಬಲೂನ್ ಸರ್ಜರಿ ಮೊರೆ ಹೋಗಿದ್ದಾಳೆ. ಲಾರಾ ತನ್ನ ಬಹುಕಾಲದ ಪ್ರಿಯಕರ ಮ್ಯಾಥ್ಯೂಸ್ ನೊಂದಿಗೆ ವಿವಾಹವಾಗಲು ಸೆಪ್ಟೆಂಬರ್ 7ರಂದು ದಿನ ನಿಗದಿಯಾಗಿತ್ತು. ಇನ್ನೇನು ಮದುವೆಗೆ ತಿಂಗಳುಗಳು ಬಾಕಿ ಇರುವಾಗ ತೂಕ ಇಳಿಸಿಕೊಳ್ಳಲು ಬಯಸಿದ್ದಾಳೆ. ಹೀಗಾಗಿ ಸುಮಾರು 8 ಕೆ.ಜಿ. ತೂಕ ಕಳೆದುಕೊಳ್ಳಲು ಬಯಸಿದ್ದು, ಇದಕ್ಕಾಗಿ ಏಪ್ರಿಲ್ 26 ರಂದು ಬ್ರೆಜಿಲ್ನ ಬೆಲೊ ಹಾರಿಜಾಂಟೆಯ ಕ್ಲಿನಿಕ್ ನಲ್ಲಿ ಹೊಟ್ಟೆಯೊಳಗೆ ‘ಗ್ಯಾಸ್ಟ್ರಿಕ್ ಬಲೂನ್’ ಸರ್ಜರಿ ಮಾಡಿಸಿಕೊಂಡಿದ್ದಾಳೆ. ಆದರೆ ಸರ್ಜರಿಯಾದ ಕೆಲ ದಿನಗಳ ಬಳಿಕ ಯುವತಿಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಮೇ 01ರಂದು ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಆಕೆಯನ್ನು ಪರೀಕ್ಷಿಸಿ ಆಕೆಯ ಹೊಟ್ಟೆಯೊಳಗಿದ್ದ ಗ್ಯಾಸ್ಟ್ರಿಕ್ ಬಲೂನ್…
ಇನ್ನು ಮುಂದೆ ಕೆಎಸ್ ಆರ್ ಟಿಸಿಯು ದೂರದ ಮಾರ್ಗಗಳಲ್ಲಿ ಸಂಚಾರ ನಡೆಸುವ ಬಸ್ ಗಳನ್ನು ಪ್ರಯಾಣಿಕರ ಅವಶ್ಯಕತೆಗಾಗಿ ವಿರಾಮ ನಿಲುಗಡೆ ಮಾಡಲು ಮಾರ್ಗಸೂಚಿ ಪ್ರಕಾರ ದರ ಪಟ್ಟಿಗಳು ಅನ್ವಯವಾಗಲಿದೆ. ಮುಖ್ಯವಾಗಿ ಫಲಹಾರ ಮಂದಿರದ ಮಾಲೀಕರು ವಾಹನ ನಿಲುಗಡೆ ಶುಲ್ಕ ಹೆಚ್ಚಳವಾದ ಹಿನ್ನೆಲೆಯಲ್ಲಿ ತಿಂಡಿ–ತಿನಿಸುಗಳಿಗೆ ಹೆಚ್ಚಿನ ದರ ವಿಧಿಸುವುದನ್ನು ತಡೆಯಲು ವಾಹನ ನಿಲುಗಡೆ ಶುಲ್ಕವನ್ನು ಕೆಎಸ್ ಆರ್ ಟಿಸಿ (KSRTC) ಪರಿಷ್ಕರಣೆ ಮಾಡಿದೆ. ಸದ್ಯ ದೂರ ಸಂಚಾರದ ಬಸ್ ಗಳನ್ನು ಅನುಕೂಲಕರ ಸ್ಥಳದಲ್ಲಿ ನಿಲ್ಲಿಸಲು ಉತ್ತಮ ಸೌಲಭ್ಯ ಹೊಂದಿರುವ ಫಲಹಾರ ಮಂದಿರಗಳನ್ನು ಆಯ್ಕೆ ಮಾಡಲಾಗುತ್ತದೆ. ಹೌದು, ಬಸ್ಸುಗಳನ್ನು ಫಲಹಾರ ಮಂದಿರದ ಬಳಿ 10 ರಿಂದ 15 ನಿಮಿಷಗಳ ಕಾಲ ಮಾತ್ರ ನಿಲುಗಡೆ ನೀಡುವುದು. ಪ್ರತಿ ಫಲಹಾರ ಮಂದಿರದ ಮುಂದೆ ನಿಲ್ಲುವ ಅನುಸೂಚಿಗಳ ಸಮಯದ ಬಗ್ಗೆ ವೇಳಾಪಟ್ಟಿಯಲ್ಲಿ ದಾಖಲಿಸಿ, ಪರಿಷ್ಕೃತ ವೇಳಾಪಟ್ಟಿಯನ್ನು ಹೊರಡಿಸಲು ಎಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕ್ರಮ ಕೈಗೊಳ್ಳುವುದು. ದರ ಪರಿಷ್ಕರಣೆ ಪ್ರಕಾರ ಸಾಮಾನ್ಯ, ವೇಗದೂತ ಮತ್ತು ತಡೆರಹಿತ ಕರ್ನಾಟಕ ಸಾರಿಗೆ ವಾಹನಗಳ…
ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ 31ರಂದು ಭಾರತಕ್ಕೆ ಬಂದು ಸೆರೆಂಡರ್ ಆಗುವುದಾಗಿ ತಿಳಿಸಿದ್ದಾರೆ. ಈ ವೇಳೆ SIT ಅವರನ್ನು ವಶಪಡಿಸಿಕೊಳ್ಳಲಿದೆ. ಮೇ 31 ರಂದು ಪ್ರಜ್ವಲ್ ರೇವಣ್ಣನನ್ನು(Prajwal Revanna) ವಶಕ್ಕೆ ಪಡೆಯುವ SIT ಮೊದಲು ಧ್ವನಿ ಪರೀಕ್ಷೆ ನಡೆಸಲು ತಯಾರಿ ನಡೆಸಿದೆ. ಹೌದು, ಸಂಸದ(MP) ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿದರೆ ಧ್ವನಿ ಪರೀಕ್ಷೆ ನಡೆಸಲು ವಿಶೇಷ ತನಿಖಾ ದಳ (ಎಸ್ ಐಟಿ) ಅಲೋಚಿಸಿದೆ. ಈ ಧ್ವನಿ ಪರೀಕ್ಷೆಯಲ್ಲಿ ಪೆನ್ ಡ್ರೈವ್ನಲ್ಲಿರುವ ಅಶ್ಲೀಲ ವಿಡಿಯೋಗಳಲ್ಲಿ ಕೇಳಿ ಬರುವ ಪುರುಷನಿಗೆ ಹೋಲಿಕೆಯಾದರೆ ಸಂಸದರ ವಿರುದ್ಧದ ಅತ್ಯಾಚಾರ ಕೃತ್ಯಗಳ ರುಜುವಾತಿಗೆ ಎಸ್ ಐಟಿಗೆ ಮಹತ್ವದ ವೈದ್ಯಕೀಯ ಸಾಕ್ಷ್ಯ ಲಭಿಸಿದಂತಾಗುತ್ತದೆ. ಅಂದ ಹಾಗೆ, ಈಗಾಗಲೇ ತಾನು ಹೇಳಿದಂತೆ ಪ್ರಜ್ವಲ್ ಭಾರತಕ್ಕೆ ಬರಲು ಜರ್ಮನಿಯ ಮ್ಯೂನಿಕ್ ನಿಂದ ಬೆಂಗಳೂರಿಗೆ ಬರೋಕೆ ಪ್ರಜ್ವಲ್ ರೇವಣ್ಣ ಅವರು ಲುಫ್ತಾನ್ಸಾ ಏರ್ ಲೈನ್ಸ್ ಬುಕ್ ಮಾಡಿದ್ದಾರೆ. ಮೇ 31ರ ಮಧ್ಯರಾತ್ರಿ ಪ್ರಜ್ವಲ್ ರೇವಣ್ಣ ಅವರು ಬೆಂಗಳೂರಿಗೆ…
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ನಿಗಮದ ಕೇಂದ್ರ ಕಛೇರಿಯ ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ ನನಗೆ ಅತೀವ ನೋವು ತಂದಿದೆ. ಈ ಹಣ ದುರುಪಯೋಗ ಪ್ರಕರಣದಲ್ಲಿ ನಮ್ಮ ಇಲಾಖೆ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳು ಯಾರೇ ಇರಲಿ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ತಿಳಿಸಿದರು. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಹೇಳಿದಿಷ್ಟು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮುಖ್ಯ ಖಾತೆಯಲ್ಲಿ ಹಿಂದಿನ ಸಾಲಿನ ಹಾಗೂ 2024-25 ನೇ ಸಾಲಿನ ಯೋಜನೆಗಳಿಗೆ ಮೀಸಲಿಟ್ಟ 187 ಕೋಟಿ ಮೊತ್ತದಲ್ಲಿ 88 ಕೋಟಿ ಹಣವನ್ನು ನನಗೆ ಹಾಗೂ ನಿಗಮದ ಅಧ್ಯಕ್ಷರ ಗಮನಕ್ಕೂ ಬಾರದೇ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಂ.ಜಿ ರಸ್ತೆಯ ಶಾಖೆಯ ಅನಧಿಕೃತ ಖಾತೆಗೆ ವರ್ಗಾವಣೆ ಆಗಿರುತ್ತದೆ. ನಿನ್ನೆ…
ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆ-ಸೆಟ್) ತಾತ್ಕಾಲಿಕ ಫಲಿತಾಂಶ ಪ್ರಕಟವಾಗಿದ್ದು, 6,675 ಅಭ್ಯರ್ಥಿಗಳು ಅರ್ಹತೆ ಪಡೆದುಕೊಂಡಿದ್ದಾರೆ. ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ 41 ವಿಷಯಗಳಿಗೆ ಕಳೆದ ಜ.13ರಂದು ಪರೀಕ್ಷೆ ನಡೆಸಲಾಗಿತ್ತು. 95,201 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಈ ಪೈಕಿ ಅರ್ಹತೆ ಪಡೆದವರಲ್ಲಿ 3,398 ಪುರುಷರು ಹಾಗೂ 3,180 ಮಹಿಳೆಯರು, 97 ಲಿಂಗತ್ವ ಅಲ್ಪ– ಸಂಖ್ಯಾತರು ಹಾಗೂ 350 ಮಂದಿ ಅಂಗವಿಕಲರು ಇದ್ದರು. ಯುಜಿಸಿ ಹಾಗೂ ರಾಜ್ಯದ ಮೀಸಲಾತಿ ನಿಯಮಗಳ ಪ್ರಕಾರ ಅರ್ಹತಾ, ಪಟ್ಟಿ ಸಿದ್ಧಪಡಿಸ ಲಾಗಿದೆ. ದಾಖಲೆಗಳ ಪರಿಶೀಲನೆ ನಂತರ ಅರ್ಹ ಅಭ್ಯರ್ಥಿಗಳಿಗೆ ಇ– ಪ್ರಮಾಣ ಪತ್ರ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಶೌಚಾಲಯದಲ್ಲಿ ಏಕಕಾಲದಲ್ಲಿ 35 ಕ್ಕೂ ಹೆಚ್ಚು ಹಾವುಗಳು ಹೊರಬಂದ ಘಟನೆ ಅಸ್ಸಾಂನ ನಗಾಂವ್ ಜಿಲ್ಲೆಯ ಕಲಿಯಾಬೋರ್ ಪ್ರದೇಶದಲ್ಲಿ ನಡೆದಿದೆ. ಸುಮಾರು 35 ಹಾವುಗಳು ಒಂದೆ ಕಡೆ ಹರಿದಾಡುತ್ತಿರುವುದು ಕಂಡುಬಂದಿದೆ. ಈ ಹಾವುಗಳನ್ನು ಕಂಡ ತಕ್ಷಣ ಆತಂಕಗೊಂಡು ಮನೆಯ ಮಾಲೀಕರು ಹಾವು ಹಿಡಿಯುವವರಿಗೆ ಕರೆ ಮಾಡಿದ್ದಾರೆ. ಹೊಸದಾಗಿ ನಿರ್ಮಿಸಿರುವ ಶೌಚಾಲಯದಲ್ಲಿ ಸುಮಾರು 35 ಹಾವುಗಳು ತೆವಳುತ್ತಿದ್ದವು. ನಂತರ ಇವುಗಳನ್ನು ಜಾಗೃತವಾಗಿ ಹೊರಗೆ ತೆಗೆದು ಬಿಡಲಾಯ್ತು ಎಂದು ವರದಿ ತಿಳಿಸಿದೆ. ಇಲ್ಲಿ ಹಾವುಗಳು ಬಂದು ಹೇಗೆ ಸೇರಿಕೊಂಡವು ಎಂಬ ಬಗ್ಗೆ ಮಾಹಿತಿ ದೊರೆತಿಲ್ಲ. ಕತ್ತಲೆಯಲ್ಲಿ ಶೌಚಾಲಯವನ್ನು ಬಳಸುವುದನ್ನು ತಪ್ಪಿಸಿ ಮತ್ತು ಸಾರ್ವಜನಿಕ ಶೌಚಾಲಯಗಳನ್ನು ಬಳಸುವುದನ್ನು ತಪ್ಪಿಸುವಂತೆ ಹಲವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಚಿಕ್ಕಬಳ್ಳಾಪುರ: ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಮೇಲೆ ಮುಖ್ಯಶಿಕ್ಷಕ ಹಲವು ಬಾರಿ ಲೈಂಗಿಕ ದೌರ್ಜನ್ಯ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತನ್ನದೇ ಶಾಲೆಯ 13 ವರ್ಷದ ವಿದ್ಯಾರ್ಥಿನಿಯನ್ನು ಶಿಕ್ಷಕ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎನ್ನಲಾಗಿದೆ. ಮುಖ್ಯಶಿಕ್ಷಕ ಆಕೆಯನ್ನು ಕಳೆದ ಒಂದು ವರ್ಷದಿಂದ ತನ್ನ ಕಾಮತೃಷೆಗೆ ಬಳಸಿಕೊಂಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಮುಖ್ಯ ಶಿಕ್ಷಕ ವೆಂಕಟೇಶ್ ಎಂಬಾತನನ್ನು ಗ್ರಾಮಾಂತರ ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಬಾಲಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಆಪ್ತ ಸಮಾಲೋಚನೆ ಮಾಡಿದ್ದಾರೆ ಎಂದು ವರದಿ ತಿಳಿಸಿದೆ. ಅಪ್ರಾಪ್ತ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಆಕೆ 3 ತಿಂಗಳ ಗರ್ಭಿಣಿ ಎಂದು ತಿಳಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ದಿಗಂಬರ ಜೈನ ಮುನಿಗಳಿಗೆ ವ್ಯಕ್ತಿಯೊಬ್ಬ ರಸ್ತೆ ಬದಿಯಲ್ಲಿ ಕಿರುಕುಳ ನೀಡುತ್ತಿರುವ ವೀಡಿಯೋವೊಂದು ವೈರಲ್ ಆಗಿದ್ದು, ಈ ಘಟನೆಯ ತನಿಖೆಗೆ ಉತ್ತರಾಖಂಡ ಪೊಲೀಸರು ವಿಶೇಷ ತನಿಖಾ ತಂಡ ರಚಿಸಿದ್ದಾರೆ ಎಂದು ವರದಿ ತಿಳಿಸಿದೆ. “ಈ ವೀಡಿಯೋ ದಿಗಂಬರ ಮುನಿಗಳ ಭಾವನೆಗಳಿಗೆ ನೋವುಂಟು ಮಾಡಿದೆ, ಉತ್ತರಾಖಂಡ ಎಲ್ಲಾ ಧರ್ಮಗಳ ಜನರ ಭಾವನೆಗಳನ್ನೂ ಗೌರವಿಸುತ್ತದೆ. ಯಾವುದೇ ಧರ್ಮಕ್ಕೆ ಅಗೌರವ ಸಹಿಸುವುದಿಲ್ಲ, ಆರೋಪಿಯನ್ನು ಪತ್ತೆ ಹಚ್ಚಿ ಕಾನೂನು ಕ್ರಮಕೈಗೊಳ್ಳಲಾಗುವುದು,” ಎಂದು ಉತ್ತರಾಖಂಡ ಡಿಜಿಪಿ ಅಭಿನವ್ ಕುಮಾರ್ ಹೇಳಿದ್ದಾರೆ. ಆರೋಪಿ ಯೂಟ್ಯೂಬರ್ ಎನ್ನಲಾಗಿದ್ದು, ತೆಹ್ರಿ ಜಿಲ್ಲೆಯ ನಿವಾಸಿ ಎಂದು ಗುರುತಿಸಲಾಗಿದೆ. ಆತನ ವಿರುದ್ಧ ಐಪಿಸಿ ಹಾಗೂ ಐಟಿ ಕಾಯಿದೆಯನ್ವಯ ಪ್ರಕರಣ ದಾಖಲಿಸಲಾಗಿದೆ. ವೀಡಿಯೋದಲ್ಲಿ ದಿಗಂಬರ ಜೈನ ಮುನಿಗಳು ರಸ್ತೆ ಬದಿಯಲ್ಲಿ ಕುಳಿತುಕೊಂಡಿರುವಾಗ ಆರೋಪಿ ಅವರಿಗೆ ಕಿರುಕುಳ ನೀಡುತ್ತಿರುವುದು ಹಾಗೂ ಬಟ್ಟೆ ಧರಿಸದೆ ಸಾರ್ವಜನಿಕವಾಗಿ ಏಕೆ ಕಾಣಿಸಿಕೊಳ್ಳಿಸುತ್ತಿದ್ದೀರಿ ಎಂದು ಪ್ರಶ್ನಿಸುತ್ತಿರುವುದು ಕಾಣಿಸುತ್ತದೆ. ಮುನಿಗಳು ವಿವರಣೆ ನೀಡಲು ಯತ್ನಿಸಿದರೂ ಆ ವ್ಯಕ್ತಿ ಸಮಾಧಾನಗೊಳ್ಳದೇ ಇದ್ದಾಗ ಅವರು ಯಾವುದೇ ಪ್ರಶ್ನೆಗೆ ಉತ್ತರಿಸದೆ ಅಲ್ಲಿಂದ…
ಪರೀಕ್ಷೆ ಬರೆಯಲೆಂದು ಬಂದಿದ್ದ ವಿದ್ಯಾರ್ಥಿಯನ್ನು ಕಾನೂನು ಕಾಲೇಜು ಆವರಣದಲ್ಲೇ ಮುಸುಕುಧಾರಿಗಳು ಹೊಡೆದು ಹತ್ಯೆ ಮಾಡಿರುವ ಘಟನೆ ಪಾಟ್ನಾದಲ್ಲಿ ವರದಿಯಾಗಿದೆ. ಹರ್ಷ್ ಬಿ.ಎನ್. ಅಂತಿಮ ವರ್ಷದ ಪದವಿ ವಿದ್ಯಾರ್ಥಿಯಾಗಿದ್ದ ಈತ ಲೋಕನಾಯಕ ಯುವ ಪರಿಷತ್ತಿನ ರಾಷ್ಟ್ರೀಯ ಅಧ್ಯಕ್ಷ ಕೂಡ ಆಗಿದ್ದ ಎನ್ನಲಾಗಿದೆ. ಲೋಕಸಭೆ ಚುನಾವಣೆಯಲ್ಲೂ ಸಮಸ್ತಿಪುರ ಲೋಕಸಭಾ ಕ್ಷೇತ್ರದ ಎನ್ ಡಿಎ ಅಭ್ಯರ್ಥಿ ಶಾಂಭವಿ ಚೌಧರಿ ಪರ ಪ್ರಚಾರದಲ್ಲಿ ನಿರತರಾಗಿದ್ದರು ಎಂದು ವರದಿ ತಿಳಿಸಿದೆ. ಮೂಲತಃ ವೈಶಾಲಿ ಜಿಲ್ಲೆಯ ಬೆಲ್ಸರ್ ಪೊಲೀಸ್ ಠಾಣೆ ವ್ಯಾಪ್ತಿಯ ಮಜೌಲಿ ಗ್ರಾಮದ ನಿವಾಸಿಯಾಗಿರುವ ಹರ್ಷ್ ರಾಜ್, ಪಾಟ್ನಾದ ಬೋರಿಂಗ್ ರಸ್ತೆಯಲ್ಲಿ ವಾಸವಾಗಿದ್ದರು. ಪರೀಕ್ಷೆ ಮುಗಿದು ತರಗತಿಯಿಂದ ಹೊರಬಂದ ಹರ್ಷ್ ಕ್ಯಾಂಪಸ್ ಗೆ ಬಂದು ಬುಲೆಟ್ ಬೈಕ್ ನಲ್ಲಿ ಕುಳಿತಿದ್ದಾಗ ಗುಂಪೊಂದು ದಾಳಿ ನಡೆಸಿದೆ. 1 ವರ್ಷದಿಂದ ಕಾಲೇಜಿನ ಸಿಸಿಟಿವಿ ಕೆಟ್ಟುಹೋಗಿದೆ ಎಂದು ತನಿಖೆಯ ವೇಳೆ ತಿಳಿದಿದ್ದು, ಹಲವು ಅನುಮಾನ ಮೂಡಿಸಿದೆ. ದೊಣ್ಣೆಗಳಿಂದ ತೀವ್ರವಾಗಿ ಹೊಡೆದಿದ್ದಾರೆ. ಇಟ್ಟಿಗೆ ಮತ್ತು ಕಲ್ಲುಗಳಿಂದ ವಿದ್ಯಾರ್ಥಿಯ ಬೆನ್ನು ಮತ್ತು ಹೊಟ್ಟೆಯ ಮೇಲೂ ಹೊಡೆದಿದ್ದಾರೆ,…