Subscribe to Updates
Get the latest creative news from FooBar about art, design and business.
- ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
- ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
- ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
- ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
- ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ
- ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಆಯ್ಕೆ ಬಹುತೇಕ ಖಚಿತ?
- ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
Author: admin
ಬೆಂಗಳೂರು: ಪರಿಷತ್ ಚುನಾವಣೆಗೆ ಕಾಂಗ್ರೆಸ್ ನಲ್ಲಿ ಆಕಾಂಕ್ಷಿತರ ಸಂಖ್ಯೆ ಹೆಚ್ಚಿದೆ. ಟಿಕೆಟ್ ಗಾಗಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದು, ಹಂಚಿಕೆ ಮಾನದಂಡವನ್ನು ಪಕ್ಷದ ಹೈಕಮಾಂಡ್ ನಾಯಕರು ತೀರ್ಮಾನಿಸುತ್ತಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ದೆಹಲಿಗೆ ಹೋಗುವ ಮುನ್ನ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಮಾತನಾಡಿದ ಅವರು, ಪರಿಷತ್ತಿನ 7 ಸ್ಥಾನಗಳಿಗೆ ಪಕ್ಷದಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಎಲ್ಲಾ ವರ್ಗದಲ್ಲಿಯೂ ಆಕಾಂಕ್ಷಿಗಳಿದ್ದಾರೆ. ಈ ಬಾರಿ ಎಲ್ಲಾ ವರ್ಗದವರಿಗೆ ಅವಕಾಶ ಕಲ್ಪಿಸಲು ಸಾಧ್ಯವಿಲ್ಲ. ಎಲ್ಲರೂ ಬ್ಲಾಕ್, ಜಿಲ್ಲಾ, ರಾಜ್ಯಮಟ್ಟದಲ್ಲಿ ಪಕ್ಷಕ್ಕೆ ದುಡಿದಿದ್ದಾರೆ. ಕರಾವಳಿ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಹಳೇ ಮೈಸೂರು ಭಾಗ ಸೇರಿದಂತೆ ಎಲ್ಲ ಕಾರ್ಯಕರ್ತರಿಗೆ ಗೌರವ ನೀಡಬೇಕಿದೆ. ಎಲ್ಲವನ್ನೂ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ. ಸಿಎಂ, ಡಿಸಿಎಂ ಅವರೇ ಎಲ್ಲಾ ತೀರ್ಮಾನ ಮಾಡಬಾರದು ಎನ್ನುವ ಪರಮೇಶ್ವರ್ ಹೇಳಿಕೆಗೆ ಪ್ರತಿಕ್ರಿಯಿಸಿ, ಎಲ್ಲರ ಅಭಿಪ್ರಾಯ ಸಂಗ್ರಹಿಸುತ್ತೇವೆ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಬೆಂಗಳೂರು: ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮೇ 29ರ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆಯಾಗಿದೆ. ಹಾಸನ ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್. ನಗರ ಸಂತ್ರಸ್ಥ ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಆರೋಪ ಕೇಳಿ ಬಂದಿದ್ದರಿಂದ ಭವಾನಿ ರೇವಣ್ಣ ಅವರಿಗೂ ಬಂಧನ ಭೀತಿ ಎದುರಾಗಿದೆ. ಹೀಗಾಗಿ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ನಾಳೆಗೆ ವಿಚಾರಣೆ ಮುಂದೂಡಿದೆ. ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಭವಾನಿ ರೇವಣ್ಣ ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿ ಎಸ್ ಪಿಪಿಗೆ ಆಕ್ಷೇಪಣೆ ಸಲ್ಲಿಸಲು ನ್ಯಾಯಾಧೀಶರು ನೋಟೀಸ್ ನೀಡಿದ್ದರು. ಭವಾನಿ ರೇವಣ್ಣ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದರು. ಮತ್ತೊಂದೆಡೆ ಆಕ್ಷೇಪಣೆ ಸಲ್ಲಿಸಲು ಎಸ್ಐಟಿ ಕಾಲಾವಕಾಶ ಕೋರಿದ್ದರಿಂದ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…
ಕೊಪ್ಪಳ: ತಾಲೂಕಿನ ಹೊಸಲಿಂಗಾಪುರದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ರಾಜೇಶ್ವರಿ (50), ವಸಂತಾ (28), ಸಾಯಿಧರ್ಮತೇಜ್ (5) ಮೃತ ದುರ್ದೈವಿಗಳಾಗಿದ್ದಾರೆ. ಆಂಧ್ರ ಪ್ರದೇಶದ ನಂದ್ಯಾಲ ಗ್ರಾಮದ ವ್ಯಕ್ತಿ ಜೊತೆ ವಸಂತಾರ ಮದುವೆ ಆಗಿತ್ತು. ಆದರೆ ವಸಂತಾ ಕಳೆದ ಎರಡು ವರ್ಷದ ಹಿಂದೆ ಪತಿಯಿಂದ ದೂರವಾಗಿ, ಬಳಿಕ ಹೊಸಲಿಂಗಾಪುರದಲ್ಲಿ ಬಾಡಿಗೆ ಮನೆ ಮಾಡಿಕೊಂಡು ತಾಯಿ ಮತ್ತು ಮಗನ ಜೊತೆ ಇದ್ದರು. ವಸಂತಾ ಹೊಸಲಿಂಗಾಪುರ ಬಳಿ ಇರುವ ಬೊಂಬೆ ಪ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು. ಇದೇ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಅನ್ಯ ಧರ್ಮದ ವ್ಯಕ್ತಿಯನ್ನು ಮದುವೆಯಾಗಿದ್ದರು. ನಂತರ ಆರು ತಿಂಗಳ ಹಿಂದೆ ಕುಟುಂಬಸ್ಥರಿಂದ ಸ್ವಲ್ಪ ಅಂತರ ಕಾಯ್ದುಕೊಂಡಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿ ರಾಜೇಶ್ವರಿ ಅವರಿಗೆ ಇನ್ನೊಬ್ಬ ಮಗಳು ಕರೆ ಮಾಡಿದ್ದರು. ಆದರೆ ರಾಜೇಶ್ವರಿ ಕರೆ ಸ್ವೀಕರಿಸಲಿಲ್ಲ. ಹೀಗಾಗಿ ಇಂದು ಮುಂಜಾನೆ ಮನೆಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಮುನಿರಾಬಾದ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.…
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ, ಅಪ್ರಾಪ್ತ ಮಗಳ ಪರವಾಗಿ ದೂರು ನೀಡಿದ್ದ ದೂರುದಾರ ಮಹಿಳೆ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವರದಿ ತಿಳಿಸಿದೆ. ದೂರುದಾರ ಮಹಿಳೆಯು ಕಳೆದ ಕೆಲವು ವರ್ಷಗಳಿಂದ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅಲ್ಲದೆ, ಅವರು ಬನ್ನೇರುಘಟ್ಟ ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಸಂಬಂಧ ಯಡಿಯೂರಪ್ಪ ವಿರುದ್ಧ ಇತ್ತೀಚೆಗೆ ಅಪ್ರಾಪ್ತ ಬಾಲಕಿಯ ತಾಯಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಎಫ್ಐಆರ್ ಕೂಡ ದಾಖಲಿಸಿದ್ದರು. “ನನ್ನ ಮಗಳ ಮೇಲೆ ನಡೆದ ಅತ್ಯಾಚಾರ ಪ್ರಕರಣದ ತನಿಖೆಯನ್ನು ಎಸ್ ಐಟಿ ಗೆ ವಹಿಸುವಂತೆ ಆಗ್ರಹಿಸಿ, ಫೆಬ್ರವರಿ 2 ರಂದು ಯಡಿಯೂರಪ್ಪ ಅವರ ಬಳಿ ನಾನು ಮತ್ತು ಮಗಳು ತೆರಳಿದ್ದ ವೇಳೆ, ಲೈಂಗಿಕ ದೌರ್ಜನ್ಯದ ಘಟನೆ…
ಇತ್ತೀಚಿಗೆ ನಟಿಯರ ಭಾವಚಿತ್ರಗಳನ್ನು ಬಳಸಿ ಕೃತಕ ಬುದ್ಧಿಮತ್ತೆ ಮುಖಾಂತರ ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿತ್ತು. ಇದೀಗ ಬೆಂಗಳೂರಿನ ಪ್ರತಿಷ್ಠಿತ ಶಾಲೆಯ 9ನೇ ತರಗತಿಯ ವಿದ್ಯಾರ್ಥಿನಿಯ ಭಾವಚಿತ್ರಗಳನ್ನು ಕೃತಕ ಬುದ್ಧಿಮತ್ತೆ ಮುಖಾಂತರ ಅಶ್ಲೀಲವಾಗಿ ಎಡಿಟ್ ಮಾಡಿ ಹರಿಬಿಡಲಾಗಿದೆ. ದುಷ್ಕರ್ಮಿಗಳು ಇತ್ತೀಚಿಗೆ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಅವರ ಭಾವಚಿತ್ರವನ್ನು, ಡೀಪ್ ಫೇಕ್ ಮೂಲಕ ಅಶ್ಲೀಲವಾಗಿ ವಿಡಿಯೋ ಎಡಿಟ್ ಮಾಡಿದ್ದರು. ಈ ಪ್ರಕರಣ ನಂತರ ಇದೇ ರೀತಿ ನಟಿ ಕತ್ರಿನಾ ಕೈಫ್ ಅವರ ಭಾವಚಿತ್ರ ಉಪಯೋಗಿಸಿ ಅಶ್ಲೀಲವಾಗಿ ಎಡಿಟ್ ಮಾಡಲಾಗಿತ್ತು. 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇನ್ಸ್ಟಾಗ್ರಾಮ್ ನಲ್ಲಿ ಗ್ರೂಪ್ ರಚಿಸಿಕೊಂಡಿದ್ದಾರೆ. ಬಳಿಕ ಈ ಗ್ರೂಪ್ ನಲ್ಲಿ ಅನಾಮದೆಯ ವ್ಯಕ್ತಿ ವಿದ್ಯಾರ್ಥಿನಿಯರ ಮಾರ್ಫಿಂಗ್ ಭಾವಚಿತ್ರಗಳನ್ನು ಶೇರ್ ಮಾಡಿದ್ದಾನೆ. ಈ ವಿಚಾರ ತಿಳಿದು ವಿದ್ಯಾರ್ಥಿನಿಯರು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಪೋಷಕರು ಈಗಾಗಲೇ ಸೈಬರ್ ಸೆಲ್ ಗೆ ದೂರು ನೀಡಿದ್ದಾರೆ. ಮೇ 24 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ಮದ್ಯ ಸರ್ವ್ ಮಾಡಲು ಬಾರ್ ಸಿಬ್ಬಂದಿ ನಿರಾಕರಿಸಿದರೆಂಬ ಕೋಪಕ್ಕೆ ವ್ಯಕ್ತಿಯೊಬ್ಬ ಅಲ್ಲೇ ಇದ್ದ ಡಿಜೆಯನ್ನು ಗುಂಡಿಕ್ಕಿ ಹತ್ಯೆಮಾಡಿದ ಘಟನೆ ಜಾರ್ಖಂಡ್ ನ ರಾಂಚಿಯಲ್ಲಿ ನಡೆದಿದೆ. ಆರೋಪಿ ಹಾಗೂ ಆತನ ನಾಲ್ವರು ಸ್ನೇಹಿತರು ಮಧ್ಯರಾತ್ರಿ ಸುಮಾರು 1 ಗಂಟೆಗೆ ಬಾರ್ ಗೆ ಬಂದಿದ್ದರು. ಆ ಸಮಯದಲ್ಲಿ ಬಾರ್ ಮುಚ್ಚಲಾಗಿತ್ತು. ಆದರೂ ಅಲ್ಲಿದ್ದ ಸಿಬ್ಬಂದಿಗೆ ಮದ್ಯ ಸರ್ವ್ ಮಾಡುವಂತೆ ತಾಕೀತು ಮಾಡಿದ್ದಾರೆ. ಇದಕ್ಕೆ ಸಿಬ್ಬಂದಿ ನಿರಾಕರಿಸಿದ್ದು, ಆಗ ಜಗಳ ಶುರುವಾಗಿದೆ. ಬಾರ್ ಸಿಬ್ಬಂದಿ ಮತ್ತು ಯುವಕರ ನಡುವೆ ಮಾರಾಮಾರಿಯೇ ನಡೆದಿತ್ತು. ಈ ನಡುವೆ ಕೋಪದಲ್ಲಿ ತನ್ನ ಕಾರ್ ನಲ್ಲಿದ್ದ ರೈಫಲ್ ತೆಗೆದುಕೊಂಡು ಬಂತ ಅಪರಿಚಿತ ಒಬ್ಬ ಡಿಜೆ ಜಾಕಿ ಎದೆಗೆ ಗುಂಡಿಕ್ಕಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಡಿಜೆಯನ್ನು ರಾಜೇಂದ್ರ ಮೆಡಿಕಲ್ ಸೈನ್ಸ್ ಆಸ್ಪತ್ರೆಗೆ ದಾಖಲಿಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆತ ಅಲ್ಲೇ ಕೊನೆಯುಸಿರೆಳೆದಿದ್ದಾನೆ. ಸಿಸಿಟಿವಿ ದೃಶ್ಯ ಎಲ್ಲೆಡೆ ವೈರಲ್ ಆಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಉಡುಪಿ: ಪೋಕ್ಸೋ ಕಾಯಿದೆಯಡಿ ಮಾಧ್ಯಮದಲ್ಲಿ ವರದಿ ಮಾಡುವಾಗ ಸಾಕಷ್ಟು ಎಚ್ಚರ ವಹಿಸಬೇಕಾಗುತ್ತದೆ. ಪ್ರಕರಣದ ನೊಂದ ಬಾಲಕ ಅಥವಾ ಬಾಲಕಿಯರ ಹೆಸರು, ವಿಳಾಸ ಸಹಿತ ಗುರುತನ್ನು ಮಾಧ್ಯಮಗಳಲ್ಲಿ ಪ್ರಕಟಿಸುವಂತಿಲ್ಲ. ಆ ರೀತಿಯ ತಪ್ಪು ಮಾಡಿದರೆ ಮಾಧ್ಯಮದವರ ಮೇಲೂ ಪ್ರಕರಣ ದಾಖಲಿಸಲು ಈ ಕಾಯ್ದೆ ಸೂಚಿಸುತ್ತದೆ ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಎಫ್ಟಿಎಸ್ಸಿ-1(ಪೊಕ್ಸೋ) ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ಪತ್ರಕರ್ತರಿಗೆ ಮೇ 21 ರಂದು ಮಂಗಳವಾರ ಉಡುಪಿ ಪತ್ರಿಕಾ ಭವನದಲ್ಲಿ ಹಮ್ಮಿಕೊಳ್ಳಲಾದ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು. ಪೋಕ್ಸೊ ಕಾಯಿದೆ 2012ರಲ್ಲಿ ಜಾರಿಗೆ ಬಂದಿದ್ದು, 18ವರ್ಷದ ಕೆಳಗಿನ ನೊಂದ ಮಕ್ಕಳಿಗೆ ಇದರಲ್ಲಿ ವಿಶೇಷ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ವಿಶೇಷ ಪೋಲಿಸರು ಅದರಲ್ಲೂ ಮಹಿಳೆಯರು ಇವರನ್ನು ವಿಚಾರಣೆ ಮಾಡಬೇಕು ಮತ್ತು ಮಹಿಳಾ ವೈದ್ಯಾಧಿಕಾರಿಗಳೇ ವೈದ್ಯಕೀಯ ಪರೀಕ್ಷೆ ನಡೆಸ ಬೇಕು.…
ದೇಶದ 17 ಸ್ಥಳಗಳಲ್ಲಿ ತಾಪಮಾನ 48 ಡಿಗ್ರಿ ಸೆಲ್ಸಿಯಸ್ ದಾಟಿದೆ. ಉತ್ತರ-ಪಶ್ಚಿಮ ಮತ್ತು ಮಧ್ಯ ಭಾರತದ ಹೆಚ್ಚಿನ ಭಾಗಗಳಲ್ಲಿ ನಿರಂತರ ಶಾಖದಿಂದ ಜನ ತತ್ತರಿಸಿ ಹೋಗಿದ್ದಾರೆ. ಭಾರತ ಹವಾಮಾನ ಇಲಾಖೆ (ಐಎಂಡಿ) ಮುಖ್ಯಸ್ಥ ಮೃತ್ಯುಂಜಯ್ ಮೊಹಾಪಾತ್ರ ಅವರು ಪಶ್ಚಿಮದ ಅಡಚಣೆ ಮತ್ತು ಅರೇಬಿಯನ್ ಸಮುದ್ರದಿಂದ ತೇವಾಂಶದಿಂದ ಬರುತ್ತಿರುವ ಕಾರಣ, ಮೂರು ದಿನಗಳ ನಂತರ ಸುಡುವ ಶಾಖದಿಂದ ಸ್ವಲ್ಪ ಪರಿಹಾರವನ್ನು ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ. ಪಶ್ಚಿಮ ಘಟ್ಟದ ಅವಾಂತರ ಹಾಗೂ ಅರಬ್ಬಿ ಸಮುದ್ರದಿಂದ ತೇವಾಂಶ ಬರುತ್ತಿರುವುದರಿಂದ ದೇಶದ ವಾಯುವ್ಯ ಮತ್ತು ಮಧ್ಯ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದ್ದು, ಪಶ್ಚಿಮ ಹಿಮಾಲಯ ಭಾಗದಲ್ಲಿ ಮಳೆಯಾಗುವ ಸಂಭವವಿದ್ದು, ಬಿಸಿಲಿನ ತಾಪದಿಂದ ಜನತೆಗೆ ನೆಮ್ಮದಿ ದೊರೆಯಲಿದೆ ಎಂದರು. ರಾಷ್ಟ್ರ ರಾಜಧಾನಿಯಲ್ಲಿ ಬಿಸಿಲಿನ ಬೇಗೆ ಮುಂದುವರಿದಿದ್ದು, ಹಲವು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ 48 ಡಿಗ್ರಿ ಸೆಲ್ಸಿಯಸ್ ದಾಟಿದೆ. ದೆಹಲಿಗೆ ಸೋಮವಾರ ‘ರೆಡ್ ಅಲರ್ಟ್’ ನೀಡಲಾಗಿದ್ದು, ಮುಂದಿನ ಮೂರು ದಿನಗಳ ಕಾಲ ಅದು ಹಾಗೆಯೇ ಇರುತ್ತದೆ ಎಂದು ಹವಾಮಾನ…
ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಈ ಬೆನ್ನಲ್ಲೇ ಪಕ್ಷಗಳ ನಾಯಕರು ತಮ್ಮ ಹೇಳಿಕೆಗಳ ಮೂಲಕ ಸುದ್ದಿಯಾಗುತ್ತಿದ್ದಾರೆ. ಅಂತೆಯೇ ಇದೀಗ ಡಿ.ಕೆ. ಶಿವಕುಮಾರ್ ಅವರು EVM ಕುರಿತು ಅಚ್ಚರಿ ಹೇಳಿಕೆ ನೀಡಿದ್ದಾರೆ. ಕೆಪಿಸಿಸಿ ಭಾರತ್ ಜೋಡೋ ಭವನದಲ್ಲಿ ನಡೆದ ನೆಹರು ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ ಅವರು ಇವಿಎಂ ಯಂತ್ರಗಳು ಏನು ಆಗದೇ ಹೋದರೆ ಸರಿ. ಯಾಕೆಂದರೆ ಜನ ನಮ್ಮ ಪರವಾಗಿದ್ದಾರೆ. ಹೀಗಾಗಿ ಒಳ್ಳೆಯ ಶುಭ ಸೂಚನೆ ಬರುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಆದರೆ, ಡಿ.ಕೆ. ಶಿವಕುಮಾರ್ ಅವರ ಈ ಹೇಳಿಕೆ ಸೋಲಿನ ಭಯವೇ? ಅಥವಾ ಗೆಲುವಿನ ಭರವಸೆಯೇ? ಎಂಬುದು ಹಲವರ ಪ್ರಶ್ನೆಯಾಗಿದೆ. ಯಾಕೆಂದರೆ, ಇತ್ತೀಚೆಗೆ ಚುನಾವಣೆ ಸಮೀಕ್ಷೆ ಕಾಂಗ್ರೆಸ್ ನಾಯಕರ ಕೈ ಸೇರಿದೆ. ಅದರಲ್ಲಿ ಕಾಂಗ್ರೆಸ್ ಗೆಲ್ಲುವ ಸ್ಥಾನಗಳ ಮಾಹಿತಿ ಇದೆ. ಹೀಗಾಗಿ ಗೆಲ್ಲುವ ಸ್ಥಾನಗಳು ವಿರಳವಿದ್ದು, ಇತ್ತ ತಾವು ಮಾತ್ರ 20ಕ್ಕೂ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂದು ಹೇಳುತ್ತಾ ಬಂದಿರುವುದು ಫಲಿತಾಂಶ ಬಂದಾಗ ಇರುಸು ಮುರುಸು…
ತುಮಕೂರು: ಕುಟುಂಬ ಕಲಹದ ಹಿನ್ನೆಲೆಯಲ್ಲಿ ಪತಿಯಿಂದಲೇ ಪತ್ನಿಯು ಭೀಕರವಾಗಿ ಕೊಲೆಯಾಗಿರೋ ಘಟನೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಪಟ್ಟಣದ ಹೊಸಪೇಟೆಯಲ್ಲಿ ನಡೆದಿದೆ. ಪುಷ್ಪ(32) ಕೊಲೆಯಾದ ದುರ್ದೈವಿಯಾಗಿದ್ದಾರೆ. ಕತ್ತು ಹಾಗೂ ದೇಹದ ಅಂಗಾಂಗಗಳನ್ನ ಕತ್ತರಿಸಿ ಭೀಕರವಾಗಿ ಕೊಲೆ ಮಾಡಿದ್ದಾನೆ. ಹುಲಿಯೂರುದುರ್ಗ ಬಳಿಯ ಸುಗ್ಗನಹಳ್ಳಿ ನಿವಾಸಿಯಾಗಿದ್ದ ಶಿವರಾಮ್, ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಪುಷ್ಪ ಳನ್ನು ಮದುವೆಯಾಗಿದ್ದನು. ಹುಲಿಯೂರುದುರ್ಗ ಪಟ್ಟಣದಲ್ಲಿ ಪತ್ನಿ ಹಾಗೂ 8 ವರ್ಷದ ಮಗುವಿನೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಿದ್ದನು. ಮರದ ಸಾಮಿಲ್ ವೊಂದರಲ್ಲಿ ಹೆಲ್ಪರ್ ಆಗಿ ಶಿವರಾಮ್ ಕೆಲಸ ಮಾಡ್ತಿದ್ದ ಎನ್ನಲಾಗಿದೆ. ಕ್ಷುಲ್ಲಕ ಕಾರಣಕ್ಕೆ ಪತಿ ಹಾಗೂ ಪತ್ನಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎಂದು ಹೇಳಲಾಗ್ತಿದೆ. ಇದೇ ಗಲಾಟೆಯಲ್ಲಿ ನಿನ್ನೆ ರಾತ್ರಿ ಪತ್ನಿಯನ್ನ ಪತಿ ಶಿವರಾಮ್ ಭೀಕರವಾಗಿ ಕೊಲೆ ಮಾಡಿದ್ದಾರೆ. ತಾವು ವಾಸವಿದ್ದ ಅಡುಗೆ ಮನೆಯಲ್ಲೇ ಪತ್ನಿಯ ಕತ್ತು ಹಾಗೂ ದೇಹದ ಅಂಗಾಂಗ ಕತ್ತರಿಸಿ ಕೊಲೆ ಮಾಡಿದ್ದಾನೆ. ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಹುಲಿಯೂರುದುರ್ಗ…