Subscribe to Updates
Get the latest creative news from FooBar about art, design and business.
- ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
- ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
- ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
- ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
- ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ
- ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಆಯ್ಕೆ ಬಹುತೇಕ ಖಚಿತ?
- ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
Author: admin
ಕೊರಟಗೆರೆ: ಪಟ್ಟಣದ ದೊಡ್ಡಪೇಟೆ ಬಡಾವಣೆಯ ಪತ್ರಕರ್ತ ದೇವರಾಜ್ ಸಹೋದರಿ ಶಶಿಕಲಾ ಎನ್ನುವವರ ಮನೆಯೊಂದರಲ್ಲಿ ಕಳ್ಳತನವಾಗಿದ್ದು, ಇಂದು ಬೆಳಗಿನ ಜಾವ ಪತ್ರಕರ್ತನ ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಗಮನಿಸಿ ಖತರ್ನಾಕ್ ಕಳ್ಳರು ಕಳ್ಳತನ ಮಾಡಿದ್ದಾರೆ. ಬೆಳಗಿನ ಜಾವ 3:00 ಸುಮಾರಿಗೆ ಮನೆಯ ಬೀಗ ಹೊಡೆದು, 30 ಗ್ರಾಂ ಬಂಗಾರ ಹಾಗೂ 25,000 ನಗದು ದೋಚಿ ಇಬ್ಬರು ಕಳ್ಳರು ಪರಾರಿಯಾಗಿದ್ದಾರೆ. ಪಕ್ಕದ ಬಾಡಿಗೆ ಮನೆಯವರು ಓಡಾಟದ ಶಬ್ದ ಕೇಳಿ ಹೊರ ಬಂದಾಗ ಕಳ್ಳರು ಓಡಿ ಹೋಗಿದ್ದಾರೆ ಎನ್ನಲಾಗಿದೆ. ಬಾಡಿಗೆ ಮನೆಯವರು ತಕ್ಷಣ ಮನೆಯ ಓನರ್ ಗೆ ಕರೆ ಮಾಡಿ ತಿಳಿಸಿದ್ದಾರೆ. ಮಕ್ಕಳ ಶಾಲೆ ಪ್ರಾರಂಭಕ್ಕೆ ಸ್ಕೂಲ್ ಫೀಸ್ ಗೆ ಎಂದು ಇಟ್ಟಿದ್ದ ಹಣ ಕಳ್ಳತನ ಮಾಡಿದ್ದಾರೆ ಎಂದು ಮನೆ ಒಡತಿ ಶಶಿಕಲಾ ತಿಳಿಸಿದ್ದಾರೆ. ಇನ್ನು ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣಾ ಅಧಿಕಾರಿಗಳು ಬೆರಳಚ್ಚು ತಜ್ಞರು, ಡಾಗ್ ಸ್ವಾಡ್ ಭೇಟಿ ನೀಡಿ ಮನೆಯ ಸುತ್ತಮುತ್ತ ಪರಿಶೀಲನೆ ನಡೆಸಿ, ಮನೆಯವರ ಬಳಿ ಅಧಿಕಾರಿಗಳು…
ಸಾರ್ವಜನಿಕರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ತೆಲಂಗಾಣದ ಆಹಾರ ಸುರಕ್ಷತಾ ಆಯುಕ್ತರು ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಆಹಾರ ಸುರಕ್ಷತಾ ಆಯುಕ್ತರು 24 ಮೇ 2024 ರಿಂದ ಗುಟ್ಕಾ ಮತ್ತು ಪಾನ್ಮಸಾಲ ಉತ್ಪಾದನೆ, ಸಂಗ್ರಹಣೆ, ವಿತರಣೆ, ಸಾಗಣೆ ಮತ್ತು ಮಾರಾಟದ ಮೇಲೆ ಸಂಪೂರ್ಣ ನಿಷೇಧ ಹೇರುವ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಈ ನಿಷೇಧವು ಒಂದು ವರ್ಷದವರೆಗೆ ಜಾರಿಯಲ್ಲಿರುತ್ತದೆ. ಗುಟ್ಕಾ ಮತ್ತು ಪಾನ್ ಮಸಾಲಾ ತಂಬಾಕು ಮತ್ತು ನಿಕೋಟಿನ್ ಅನ್ನು ಹೊಂದಿರುತ್ತದೆ. ಇದು ದೇಹಕ್ಕೆ ಅತ್ಯಂತ ಹಾನಿಕಾರಕವಾಗಿದೆ. ಈ ಉತ್ಪನ್ನಗಳು ಬಾಯಿ, ಗಂಟಲು, ಶ್ವಾಸಕೋಶಗಳು, ಹೃದಯ ಮತ್ತು ದೇಹದ ಇತರ ಭಾಗಗಳ ಕ್ಯಾನ್ಸರ್ ಗೆ ಕಾರಣವಾಗಬಹುದು. ಈ ಉತ್ಪನ್ನಗಳು ಯುವಕರು ಮತ್ತು ಮಕ್ಕಳಿಗೆ ವಿಶೇಷವಾಗಿ ಅಪಾಯಕಾರಿ. ಏಕೆಂದರೆ ಅವರು ಬೇಗನೆ ವ್ಯಸನಕಾರಿಯಾಗುತ್ತಾರೆ. ತೆಲಂಗಾಣ ರಾಜ್ಯದಲ್ಲಿ ಗುಟ್ಖಾ ಮತ್ತು ಪಾನ್ ಮಸಾಲಾ ಉತ್ಪಾದನೆ, ಸಂಗ್ರಹಣೆ, ಮಾರಾಟ, ವಿತರಣೆ ಅಥವಾ ಸಾಗಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ನಿಯಮವನ್ನು ಉಲ್ಲಂಘಿಸಿದವರು ಕಠಿಣ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ. ಈ ನಿಷೇಧವು ತಂಬಾಕಿನಿಂದ ಉಂಟಾಗುವ ಸಾವುಗಳು ಮತ್ತು…
ಪ್ರಸಕ್ತ ಸಾಲಿನ ಐಪಿಎಲ್ ಫೈನಲ್ ಮುಗಿದ ಬಳಿಕವೂ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಬಗ್ಗೆ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ನೀಡಿದ ಹೇಳಿಕೆ ಮತ್ತೆ ವಿವಾದಕ್ಕೆ ಕಾರಣವಾಗಿದೆ. ಕೊಹ್ಲಿ ಅವರ ಅದ್ಭುತ ಪ್ರದರ್ಶನದ ನಡುವೆಯೂ ಸ್ಟಾರ್ ಬ್ಯಾಟರ್ ನ ನಿರಂತರತೆ ತಂಡಕ್ಕೆ ಹೊರೆಯಾಗಿದೆ ಎಂದು ರಾಯುಡು ಹೇಳಿದ್ದಾರೆ. ಟೂರ್ನಿಯಲ್ಲಿ ಗರಿಷ್ಠ ರನ್ ಗಳಿಸಿದ ಆಟಗಾರ ಎಂಬ ಗೌರವಕ್ಕೆ ಪಾತ್ರರಾದರೂ ಕೊಹ್ಲಿ ಬಗ್ಗೆ ನೀಡಿರುವ ಈ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಕೆವಿನ್ ಪೀಟರ್ ಸನ್ ಮತ್ತು ಮಯಾಂತಿ ಲ್ಯಾಂಜರ್ ಜತೆಗೆ ಸ್ಟಾರ್ ಸ್ಪೋರ್ಟ್ಸ್ ನಲ್ಲಿ ವಿಶ್ಲೇಷಣೆಯ ವೇಳೆ ಮಾತನಾಡಿದ ರಾಯುಡು, ಕೊಹ್ಲಿಯವರ ಉತ್ಕೃಷ್ಟತೆ ಆರ್ ಸಿಬಿಯಂಥ ತಂಡದ ಮೇಲೆ ಬೀರಬಹುದಾದ ಪರಿಣಾಮದ ಬಗ್ಗೆ ಚರ್ಚಿಸಿದರು. “ಅತ್ಯುನ್ನತ ಗುಣಮಟ್ಟದ ಮಾನದಂಡ ಹುಟ್ಟುಹಾಕಿದ ಸ್ಟಾರ್ ಕ್ರಿಕೆಟಿಗ ದಂತಕಥೆ ಎನಿಸಿದ ವಿರಾಟ್ ಕೊಹ್ಲಿಯಂಥ ಆಟಗಾರರು ನಿಮ್ಮಲ್ಲಿದ್ದಾರೆ. ಅಂಥ ತಂಡದಲ್ಲಿ ಯುವಕರು ಇರುವುದು, ಅಂಥ ಗುಣಮಟ್ಟವನ್ನು ಸಾಧಿಸುವುದು ಕಷ್ಟಸಾಧ್ಯ. ಏಕೆಂದರೆ ಅವರು…
ಮುಂಬೈ: ಸರ್ಕಾರಿ ಸ್ವಾಮ್ಯದ ಭಾರತೀಯ ಜೀವವಿಮಾ ನಿಗಮ, ಆರೋಗ್ಯ ವಿಮಾ ಕ್ಷೇತ್ರ ವಲಯ ಪ್ರವೇಶಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, ಈ ಕ್ಷೇತ್ರದ ಇತರ ಕಂಪನಿಗಳನ್ನು ಸ್ವಾಧೀನಪಡಿಸಿಕೊಳ್ಳುವ ಅವಕಾಶಗಳನ್ನು ಪರಿಶೀಲಿಸುತ್ತಿದೆ. ಈ ವಲಯದಲ್ಲಿ ಸಂಯುಕ್ತ ವಿಮಾ ಕಂಪನಿಗಳಿಗೆ ಅವಕಾಶ ನೀಡುವ ಪ್ರಸ್ತಾವದ ನಡುವೆಯೇ ಎಲ್ ಐಸಿ ಈ ಮಹತ್ವದ ಹೆಜ್ಜೆ ಇಟ್ಟಿದೆ. “ಹೊಸ ಸರ್ಕಾರ ಆರೋಗ್ಯ ವಿಮಾ ಕ್ಷೇತ್ರದಲ್ಲಿ ಸಂಯೋಜಿತ ಲೈಸನ್ಸ್ ನೀಡುವ ಸಾಧ್ಯತೆ ಇದ್ದು, ಆಂತರಿಕವಾಗಿ ಈ ಸಂಬಂಧ ಮೂಲಭೂತ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ” ಎಂದು ಉನ್ನತ ಮೂಲಗಳು ಹೇಳಿವೆ. “ಸಾಮಾನ್ಯ ವಿಮೆಯಲ್ಲಿ ನಾವು ನೈಪುಣ್ಯದ ಕೊರತೆ ಹೊಂದಿದ್ದು, ಆರೋಗ್ಯವಿಮೆಯಲ್ಲಿ ಆಸಕ್ತಿ ಹೊಂದಿದ್ದೇವೆ. ಅಜೈವಿಕ ಪ್ರಗತಿ ಅವಕಾಶಗಳನ್ನು ಕೂಡಾ ನಾವು ಪರಿಶೀಲಿಸುತ್ತಿದ್ದೇವೆ” ಎಂದು ಎಲ್ ಐಸಿ ಅಧ್ಯಕ್ಷ ಸಿದ್ಧಾರ್ಥ ಮೊಹಾಂತಿ ಸ್ಪಷ್ಟಪಡಿಸಿದ್ದಾರೆ. ವೆಚ್ಚವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಮತ್ತು ವಿಮಾ ಕಂಪನಿಗಳ ಬದ್ಧತಾ ಹೊರೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಸಂಯೋಜಿತ ಲೈಸನ್ಸ್ ನೀಡಲು 2024ರ ಫೆಬ್ರವರಿಯಲ್ಲಿ ಸಂಸದೀಯ ಸಮಿತಿ ಶಿಫಾರಸ್ಸು ಮಾಡಿತ್ತು.…
ಮಳೆ ನೀರು ಇಂಗಿಸುವುದನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮಳೆ ನೀರು ನೇರವಾಗಿ ಒಳಚರಂಡಿಗೆ ಸೇರ್ಪಡೆ ಮಾಡುವವರ ವಿರುದ್ದ ದಂಡ ಅಭಿಯಾನ ನಡೆಸಲಾಗುತ್ತಿದೆ ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ. ರಾಮ್ ಪ್ರಸಾತ್ ಮನೋಹರ್ ಎಚ್ಚರಿಕೆ ನೀಡಿದ್ದಾರೆ. ಸೋಮವಾರ ಇಲ್ಲಿನ ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಮಳೆನೀರು ಕೊಯ್ಲು ಪದ್ದತಿಯ ಅಳವಡಿಕೆಯ ಮೂಲಕ ನೀರನ್ನು ಸದ್ಬಳಕೆ ಮಾಡುವುದು ಕಡ್ಡಾಯವಾಗಿದೆ. ಆದರೆ, ಹಲವಾರು ಕಡೆಗಳಲ್ಲಿ ಈ ನೀರನ್ನು ನೇರವಾಗಿ ಒಳಚರಂಡಿಗೆ ಸೇರ್ಪಡೆ ಮಾಡುವ ಮೂಲಕ ಒಳಚರಂಡಿ ಮೇಲೆ ಒತ್ತಡ ಹೆಚ್ಚಾಗುವಂತೆ ಮಾಡಲಾಗುತ್ತಿದೆ ಎಂದರು. ನಗರದಲ್ಲಿ ಬೀಳುವ ಮಳೆಯನ್ನು ಸಮರ್ಪಕವಾಗಿ ಬಳಕೆ ಮಾಡುವುದರಿಂದ ನಗರದ ಅಂತರ್ಜಲ ಮಟ್ಟವನ್ನು ಗಣನೀಯವಾಗಿ ಹೆಚ್ಚಿಸಬಹುದಾಗಿದೆ. ಕೆಲವಡೆ ಮಳೆ ನೀರು ಕೊಯ್ಲು ಪದ್ದತಿಯ ಮೂಲಕ ಸಂಗ್ರಹಿಸಲಾದ ನೀರನ್ನು ಒಳಚರಂಡಿಗೆ ನೇರವಾಗಿ ಹರಿಯಬಿಡಲಾಗುತ್ತಿದೆ. ಇದರಿಂದ ಮಳೆ ನೀರು ಒಳಚರಂಡಿಗೆ ಸೇರ್ಪಡೆಗೊಂಡು ಪೋಲಾಗುವುದಲ್ಲದೇ, ಒಳಚರಂಡಿ ವ್ಯವಸ್ಥೆಯ ಮೇಲೆ ಒತ್ತಡವನ್ನು ಹೆಚ್ಚಿಸುತ್ತಿದೆ ಎಂದು ಅವರು ತಿಳಿಸಿದರು. ಮಳೆ ನೀರು ಪೋಲಾಗುವುದನ್ನು ತಡೆಗಟ್ಟುವುದು ಹಾಗೂ…
ನವದೆಹಲಿ: ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಲಾಗಿದೆ. ದೆಹಲಿಯಿಂದ ವಾರಾಣಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿರುವುದಾಗಿ ತಿಳಿದು ಬಂದಿದೆ. ತನಿಖೆಗಾಗಿ ವಿಮಾನವನ್ನು ಪ್ರತ್ಯೇಕ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ವಿಮಾನಯಾನ ಭದ್ರತೆ ಮತ್ತು ಬಾಂಬ್ ನಿಷ್ಕ್ರಿಯ ತಂಡವು ಸ್ಥಳದಲ್ಲಿದೆ. ಪ್ರಯಾಣಿಕರನ್ನು ತುರ್ತು ಬಾಗಿಲಿನ ಮೂಲಕ ಸ್ಥಳಾಂತರಿಸಲಾಯಿತು. ದೆಹಲಿ ಅಗ್ನಿಶಾಮಕ ಸೇವೆಯ ಪ್ರಕಾರ, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಮತ್ತು ವಿಮಾನವನ್ನು ಪರಿಶೀಲಿಸಲಾಗುತ್ತಿದೆ. ಇಂದು ಮುಂಜಾನೆ 5.35 ಕ್ಕೆ ದೆಹಲಿಯಿಂದ ವಾರಾಣಸಿಗೆ ಹೊರಟಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂಬ ಸುದ್ದಿ ಇತ್ತು. QRT ಸ್ಥಳಕ್ಕೆ ತಲುಪಿತು. ಎಲ್ಲಾ ಪ್ರಯಾಣಿಕರನ್ನು ತುರ್ತು ಬಾಗಿಲಿನ ಮೂಲಕ ಸ್ಥಳಾಂತರಿಸಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತೆ ಮತ್ತೆ ಡೀಪ್ ಫೇಕ್ ಗೆ ಒಳಗಾಗುತ್ತಿದ್ದಾರೆ. ಈಗಾಗಲೇ ಡೀಪ್ ಫೇಕ್ ಗೆ ಸಂಬಂಧಿಸಿದಂತೆ ಕೆಲವರನ್ನು ಅರೆಸ್ಟ್ ಮಾಡಿದ್ದರೂ ಬುದ್ದಿ ಕಲಿಯದ ಕಿಡಿಗೇಡಿಗಳು ಮತ್ತೆ ಅದೇ ಕೆಲಸ ಮಾಡಿದ್ದಾರೆ. ಮಾಡೆಲ್ ಕಂ ಕಂಟೆಂಟ್ ಕ್ರಿಯೇಟರ್ ಡೇನಿಯಾಲ ವಿಲ್ಲಾರ್ರಿಯಲ್ ಅವರ ವಿಡಿಯೋಗೆ ರಶ್ಮಿಕಾರ ಮುಖವನ್ನು ಅಂಟಿಸಿ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಡಲಾಗಿದೆ. ರಶ್ಮಿಕಾ ಅವರ ಡೀಪ್ ಫೇಕ್ ವೀಡಿಯೋವನ್ನು ಏಪ್ರಿಲ್ 19, 2024 ರಂದು ತನ್ನ Instagram ಪ್ರೊಫೈಲ್ ನಲ್ಲಿ ಪೋಸ್ಟ್ ಮಾಡಲಾಗಿದೆ. ಅದೇ ಬಿಕಿನಿಯಲ್ಲಿರುವ ವಿಲ್ಲಾರ್ರಿಯಲ್ ಅವರ ಇತರ ಚಿತ್ರಗಳು ಮತ್ತು ವೀಡಿಯೊಗಳ ಜೊತೆಗೆ ವಿಡಿಯೋದಲ್ಲಿರುವುದು ಮೂಲ ವ್ಯಕ್ತಿಯೇ ಹೊರತು ರಶ್ಮಿಕಾ ಮಂದಣ್ಣ ಅಲ್ಲ ಎನ್ನುವುದು ರಿವೀಲ್ ಆಗಿದೆ. ವೀಡಿಯೋವನ್ನು ಫೇಸ್ ಬುಕ್, ಇನ್ ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ನಂತಹ ಪ್ಲಾಟ್ ಫಾರ್ಮ್ಗಳಲ್ಲಿ ಹಂಚಿಕೊಳ್ಳಲಾಗಿದೆ. ಒಂದು ಪೋಸ್ಟ್ 45,000 ಕ್ಕೂ ಹೆಚ್ಚು ಇಷ್ಟಗಳನ್ನು ಮತ್ತು ಸುಮಾರು 300 ಶೇರ್ಗಳನ್ನು ಗಳಿಸಿದೆ. ಡೀಪ್ ಫೇಕ್ ಅನ್ನು ಸೀರಿಯಸ್…
ಕುಕ್ಕರ್ ನಲ್ಲಿ ಅಡುಗೆ ಮಾಡುವ ಮುನ್ನ ನೀವು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮ ಯಾವುದು ಎಂಬುವುದರ ಬಗ್ಗೆ ಕೆಲವೊಂದಷ್ಟು ಸಲಹೆಯನ್ನು ನೀಡಲಾಗಿದೆ. ಈಗಂತೂ ಪ್ರತಿಯೊಬ್ಬರ ಮನೆಯಲ್ಲೂ ಪ್ರೆಶರ್ ಕುಕ್ಕರ್ ಬಳಕೆ ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಆದರೆ ಕುಕ್ಕರ್ ಬಳಸಿ ಅಡುಗೆ ತಯಾರಿಸುವ ಅನೇಕ ಮಂದಿಗೆ ಅದನ್ನು ಹೇಗೆ ಬಳಸಬೇಕು ಎಂಬ ಅರಿವಿಲ್ಲ. ಇದರಿಂದ ಎಷ್ಟೋ ಬಾರಿ ಕುಕ್ಕರ್ ಬ್ಲಾಸ್ಟ್ ಆಗಿರುವ ಘಟನೆಗಳು ನಮ್ಮ ಕಣ್ಣ ಮುಂದಿದೆ. ಹಾಗಾಗಿ ಕುಕ್ಕರ್ ನಲ್ಲಿ ಅಡುಗೆ ಮಾಡುವ ಮುನ್ನ ನೀವು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮ ಯಾವುದು ಎಂಬುವುದರ ಬಗ್ಗೆ ಕೆಲವೊಂದಷ್ಟು ಸಲಹೆಯನ್ನು ನೀಡಲಾಗಿದೆ. ಸ್ಕ್ರೂ ಟೈಟ್: ನಾವು ಯಾವುದೇ ರೀತಿಯ ಆಹಾರ ಬೇಯಿಸಲು ಮುಂದಾಗುವ ಮುನ್ನ ಮೊದಲು ಕುಕ್ಕರ್ ಸರಿಯಾಗಿದೆಯೇ ಎಂದು ಪರಿಶೀಲಿಸುವುದು ಬಹಳ ಮುಖ್ಯ. ಹಾಗಾಗಿ ಮೊದಲು ಕುಕ್ಕರ್ ಹ್ಯಾಂಡಲ್ ಅಂದರೆ ಕುಕ್ಕರ್ ಹಿಡಿದುಕೊಳ್ಳಲು ಇರು ಹ್ಯಾಂಡಲ್ ಹಾಗೂ ಅದರ ಸ್ಕ್ರೂ ಲೂಸ್ ಆಗಿದ್ಯಾ ಎಂಬುವುದನ್ನು ಪರೀಕ್ಷಿಸಿ. ಇದರಿಂದ ಮುಂದಾಗುವ ಅನಾಹುತವನ್ನು ತಪ್ಪಿಸಬಹುದು. ಒಂದು ವೇಳೆ…
ಕೋಲಾರ: ರಾಜ್ಯದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಕೋಲಾರದಲ್ಲಿ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ಮಾಡಿದ್ದಾರೆ. ರಾಜ್ಯದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ. ಚನ್ನಗಿರಿಯ ಲಾಕಪ್ ಡೆತ್ ಸಹ ಹಲವು ರೀತಿಯ ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಲಾಕಪ್ ಡೆತ್ ಮೃತನ ಪತ್ನಿ ಹೇಳಿರುವುದನ್ನ ಗಮನಿಸಿದ್ದೇನೆ. ಇಲಾಖೆಗೆ ನಾಲ್ಕುವರೆ ಲಕ್ಷ ಪ್ರತಿ ತಿಂಗಳು ಹಫ್ತಾ ಕೊಡುತ್ತಿದ್ರು. ಈ ತಿಂಗಳು ಕೊಟ್ಟಿಲ್ಲ ಅನ್ನೋ ಕಾರಣಕ್ಕೆ ಲಾಕಪ್ ಡೆತ್ ಆಗಿದೆ. ಸರ್ಕಾರದ ಅಂಗೈ ಹುಣ್ಣಿಗೆ ಕನ್ನಡಿ ಬೇಕಾ ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ೧೮೦ ಕೋಟಿ ದುರ್ಬಳಕೆ, ಅಕ್ರಮ ವರ್ಗಾವಣೆ ಆಗಿದೆ. ಕಾನೂನು ಬಾಹಿರ ಚಟುವಟಿಕೆ ಮಾಡುವವರ ಬೆನ್ನಿಗೆ ಈ ಸರ್ಕಾರ ನಿಂತಿದೆ. ಭಿತ್ತನೆ ಬೀಜದ ಬೆಲೆ ಏರಿಕೆ, ಗೊಬ್ಬರದ ಕೊರತೆ ಇದೆ. ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ದಿಕ್ಕುಬತಪ್ಪಿಸುವ ಕೆಲಸ ನಡೆಯುತ್ತಿದೆ. ವಿರೋಧ ಪಕ್ಷಗಳು ಸೈಲಾಂಟಗಿಲ್ಲ, ಆಡಳಿತ ಪಕ್ಷವೆ ಏನೂ…
ನವದೆಹಲಿ: ಇಲ್ಲಿನ ಆಸ್ಪತ್ರೆಯೊಂದರಲ್ಲಿ ಬೆಂಕಿ ಅವಘಡದಲ್ಲಿ ಏಳು ನವಜಾತ ಶಿಶುಗಳು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಮಾಲೀಕನನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಬೆಂಕಿ ಹೊತ್ತಿಕೊಂಡಾಗ ಕರ್ತವ್ಯದಲ್ಲಿದ್ದ ಮತ್ತೊಬ್ಬ ವೈದ್ಯನನ್ನೂ ಬಂಧಿಸಲಾಗಿದೆ. ಪೂರ್ವ ದೆಹಲಿಯ ವಿವೇಕ್ ವಿಹಾರ್ನಲ್ಲಿರುವ ನ್ಯೂ ಬಾರ್ನ್ ಬೇಬಿ ಕೇರ್ ಆಸ್ಪತ್ರೆಯ ಮಾಲೀಕ ಡಾ. ನವೀನ್ ಖಿಚಿ ಶನಿವಾರ ರಾತ್ರಿ ಬೆಂಕಿ ಕಾಣಿಸಿಕೊಂಡ ನಂತರ ಪರಾರಿಯಾಗಿದ್ದರು. ಎರಡು ಅಂತಸ್ತಿನ ಕಟ್ಟಡದಲ್ಲಿ ಇರಿಸಲಾಗಿದ್ದ ಆಕ್ಸಿಜನ್ ಸಿಲಿಂಡರ್ ಗಳು ಸ್ಫೋಟಗೊಂಡಿದ್ದರಿಂದ ಅಕ್ಕಪಕ್ಕದ ಕಟ್ಟಡಗಳಿಗೆ ಹಾನಿಯಾಗಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ. ಲೇನ್ ಕಿರಿದಾಗಿದ್ದು, ಓವರ್ ಹೆಡ್ ತಂತಿಗಳಿಂದ ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಅಗ್ನಿಶಾಮಕದಳದವರು ಸವಾಲುಗಳನ್ನು ಎದುರಿಸಿದರು. ನಾವು ಎದುರಿಸಿದ ಮತ್ತೊಂದು ಸವಾಲೆಂದರೆ ಯಾವುದೇ ನೀರಿನ ಮೂಲವಿರಲಿಲ್ಲ. ನೇತಾಡುತ್ತಿದ್ದ ವಿದ್ಯುತ್ ತಂತಿಗಳು ದೊಡ್ಡ ಸಮಸ್ಯೆಯಾಗಿದ್ದವು ಎಂದು ತಿಳಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸಲು ಆಯೋಗದ ತಂಡವು ಆಸ್ಪತ್ರೆಗೆ ಭೇಟಿ ನೀಡಲಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ (ಎನ್ ಸಿಪಿಸಿಆರ್)…