Subscribe to Updates
Get the latest creative news from FooBar about art, design and business.
- ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
- ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
- ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
- ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ
- ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಆಯ್ಕೆ ಬಹುತೇಕ ಖಚಿತ?
- ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
- ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್ ಸೆಟ್ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
Author: admin
ಬ್ರಿಟನ್ ನ ಸಾರ್ವತ್ರಿಕ ಚುನಾವಣೆಯನ್ನು ಜುಲೈ 4ರಂದು ನಡೆಸುವ ನಿರ್ಧಾರವನ್ನು ಪ್ರಧಾನಿ ರಿಷಿ ಸುನಾಕ್ ಪ್ರಕಟಿಸಿದ ಬೆನ್ನಲ್ಲೇ, ಸ್ವಪಕ್ಷೀಯರಿಂದಲೇ ಭಾರಿ ಆಘಾತ ಎದುರಿಸಿದ್ದಾರೆ. ಮೊದಲ ವಾರಾಂತ್ಯ ಪ್ರಚಾರದಿಂದ ಒಂದು ದಿನ ದೂರ ಉಳಿಯಲು ನಿರ್ಧರಿಸಿ, ತಮ್ಮ ಆಪ್ತ ಸಲಹೆಗಾರರ ಜತೆ ಸುನಾಕ್ ವಾರಾಂತ್ಯ ಕಳೆದಿದ್ದಾರೆ. ತಮ್ಮ ಆಪ್ತರು ಹಾಗೂ ಕುಟುಂಬದ ಸದಸ್ಯರೊಂದಿಗೆ ವಿಹಾರಕ್ಕೆ ತೆರಳಿರುವ 44 ವರ್ಷದ ಸುನಾಕ್ ಗೆ ಕನ್ಸರ್ವೇಟಿವ್ ಪಾರ್ಟಿಯ 78 ಸಂಸದರ ಸಾಮೂಹಿಕ ನಿರ್ಗಮನ ಭಾರೀ ಆಘಾತ ನೀಡಿದೆ. ಮುಂಚೂಣಿ ಟೋರಿ ಮುಖಂಡರು ಹಾಗೂ ಸಂಪುಟ ಸಹೋದ್ಯೋಗಿಗಳಾದ ಮೈಕೆಲ್ ಗೋವ್ ಮತ್ತು ಆ್ಯಂಡ್ರಿಯಾ ಲೀಡ್ಸಮ್ ಮುಂದಿನ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಪ್ರಕಟಿಸಿದ್ದಾರೆ. ಈ ಮೂಲಕ ಪಕ್ಷದ ಸದಸ್ಯತ್ವ ತೊರೆದ ಸಂಸದರ ಸಂಖ್ಯೆ 78ಕ್ಕೇರಿದೆ. ಗೋವ್ ತಮ್ಮ ರಾಜೀನಾಮೆ ಪತ್ರವನ್ನು ಶುಕ್ರವಾರ ಸಂಜೆ ಜಾಲತಾಣಗಳಲ್ಲಿ ಬಿಡುಗಡೆ ಮಾಡಿದ್ದು, ದೇಶಾದ್ಯಂತ ಪ್ರಸ್ತುತ ಇರುವ ಟೋರಿಗಳಿಗೆ ಪ್ರಬಲ ಸವಾಲು ಎದುರಾಗಿರುವ ನಡುವೆಯೇ ಈ ಬೆಳವಣಿಗೆ ನಡೆದಿದೆ. ಸುನಾಕ್ ಸಂಪುಟದಲ್ಲಿ ವಸತಿ…
ಹಾವು ಕಚ್ಚಿದ್ದರೂ ಮುಳ್ಳು ಚುಚ್ಚಿದೆ ಎಂದು ಹೇಳಿ ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದ ವ್ಯಕ್ತಿ ಬೆಳಗಾಗುತ್ತಲೇ ಮೃತಪಟ್ಟ ಘಟನೆ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.ಕರಕುಚ್ಚಿ ಗ್ರಾಮದ ಗಂಗಪ್ಪ (48) ಮೃತರು ಎಂದು ತಿಳಿದುಬಂದಿದೆ. ಗಂಗಪ್ಪ ಗದ್ದೆಗೆ ಕೆಲಸಕ್ಕೆ ಹೋಗಿದ್ದ ವೇಳೆ ಹಾವು ಕಡಿದಿದೆ. ಆದರೆ ಇದರ ಅರಿವಾಗದ ಗಂಗಪ್ಪ ಮನೆಗೆ ಬಂದಿದ್ದಾರೆ. ಈ ವೇಳೆ ಗಂಗಪ್ಪ ಅವರ ಕಾಲಿನಲ್ಲಿ ಗಾಯದ ಕಲೆಗಳನ್ನು ಕಂಡು ಮನೆಮಂದಿ ಕೇಳಿದಾಗ ಮುಳ್ಳು ಚುಚ್ಚಿ ಗಾಯವಾಗಿರಬೇಕು ಎಂದು ಹೇಳಿ ಊಟ ಮಾಡಿ ಮಲಗಿದ್ದಾರೆ. ಆದರೆ ಬೆಳಿಗ್ಗೆ ಮನೆಮಂದಿ ಎದ್ದು ಗಂಗಪ್ಪ ಅವರನ್ನು ಎಬ್ಬಿಸಿದರೆ ಏಳಲೇ ಇಲ್ಲ. ಬಳಿಕ ಪರಿಶೀಲಿಸಿದಾಗ ಗಂಗಪ್ಪ ಅವರ ಕಾಲಿಗೆ ಮುಳ್ಳಿನ ಗಾಯವಾಗಿರುವುದಲ್ಲ. ಬದಲಿಗೆ ಕಾವು ಕಚ್ಚಿ ಗಾಯವಾಗಿರುವುದು ಬೆಳಕಿಗೆ ಬಂದಿದೆ. ಆದರೆ ಅಷ್ಟೋತ್ತಿಗಾಗಲೇ ಗಂಗಪ್ಪ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು. ಈ ಬಗ್ಗೆ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಕೊರಟಗೆರೆ: ಗ್ರಾಮದ ಗೌಡರ ವೈಯಕ್ತಿಕ ವಿಷಯಕ್ಕೆ ದೇವಾಲಯಕ್ಕೆ ಬೀಗ ಹಾಕಿದ್ದು, ಇದೀಗ ಈ ಪ್ರಕರಣ ಕೊರಟಗೆರೆ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಪ್ರತಿ ವರ್ಷ ಮಾಡುವ ಗ್ರಾಮ ದೇವರ ಜಾತ್ರೆ ನಿಲ್ಲಬಾರದು ಎಂದು ಗ್ರಾಮಸ್ಥರು ಆಗ್ರಹಿಸಿದ್ದು, ಗ್ರಾಮದ ನೂರಾರು ಮಹಿಳೆಯರಿಂದ ತಹಶೀಲ್ದಾರ್ ಕಚೇರಿ ಮುಂದೆ ಧರಣಿ ಮಾಡಿರುವ ಘಟನೆ ನಡೆದಿದೆ. ಜಾತ್ರೆ ಮಾಡದೆ ನಿಲ್ಲಿಸಿರುವುದರಿಂದ ಗ್ರಾಮದಲ್ಲಿ ಸುಮಾರು 20 ಸಾವುಗಳು ಸಂಭವಿಸಿವೆ. ಹಾಗಾಗಿ ಶ್ರೀ ಆಂಜನೇಯ ದೇವರ ಜಾತ್ರೆಯಾಗಲೇಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದಿರುವ ಘಟನೆ ಕೊರಟಗೆರೆ ತಾಲೂಕಿನ ಕುರಂಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರುಬರಹಳ್ಳಿ ಗ್ರಾಮದಲ್ಲಿ ನಡೆದಿದೆ. ಚುನಾವಣೆಯ ಫಲಿತಾಂಶ ಹತ್ತಿರವಿರುವ ಕಾರಣ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಕೆಲಸಗಳ ಒತ್ತಡವಿರುತ್ತದೆ. ಆದ ಕಾರಣ ಚುನಾವಣೆ ಫಲಿತಾಂಶ ಮುಗಿದ ನಂತರ ಜಾತ್ರೆ ಮಾಡಿಕೊಳ್ಳುವಂತೆ ತಹಶೀಲ್ದಾರ್ ಗ್ರಾಮಸ್ಥರಿಗೆ ತಿಳಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿರುವ ಕೇಸ್ ವಾಪಸ್ ತೆಗೆದುಕೊಂಡು ಜಾತ್ರೆಯನ್ನು ಮಾಡಿಕೊಳ್ಳಿ. ಆಗ ಯಾವುದೇ ಸಮಸ್ಯೆ ಆಗುವುದಿಲ್ಲ ಎಂದು ತಹಶೀಲ್ದಾರ್ ಮಂಜುನಾಥ್ ಗ್ರಾಮಸ್ಥರಿಗೆ ಮನವಿ…
ಸರಗೂರು: ಸಾರ್ವಜನಿಕರೇ ಎಚ್ಚರಗೊಳ್ಳಿ. ಬುದ್ದಿವಂತರಾಗಿ ಸೊಳ್ಳೆಗಳ ಕಡಿತದಿಂದ ಸ್ವಯಂ ರಕ್ಷಣೆ ಪಡೆಯಿರಿ. ಮನೆಯ ಸುತ್ತು-ಮುತ್ತ ನೀರು ನಿಲ್ಲದಂತೆ ಸ್ವಚ್ಚತೆ ಕಾಪಾಡಿ ಎಂದು ಆರೋಗ್ಯಾಧಿಕಾರಿ ಡಾ.ಟಿ ರವಿಕುಮಾರ್ ತಿಳಿಸಿದರು. ತಾಲ್ಲೂಕಿನ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರದಂದು ಕಚೇರಿ ಮುಂಭಾಗದಲ್ಲಿ, ಹೆಚ್.ಡಿ. ಕೋಟೆ ಮತ್ತು ಸಮುದಾಯ ಆರೋಗ್ಯ ಕೇಂದ್ರ ಸರಗೂರು ವತಿಯಿಂದ ರಾಷ್ಟ್ರೀಯ ಡೆಂಗ್ಯೂ ದಿನ ಜಾಗೃತಿ ಜಾಥಾ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಟಿ. ರವಿಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಎಸ್ ಎಸ್ ಮಂಜುನಾಥ್ ರವರು ಹಸಿರು ನಿಶಾನೆ ತೋರುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚು ಕಂಡು ಬಂದಿದ್ದು, ಸಾರ್ವಜನಿಕರು ಜಾಗೃತಿವಹಿಸಬೇಕು. ನಾಗರೀಕರ ಜಾಗೃತಿಗಾಗಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಲಾಖೆಯ ಮಾರ್ಗದರ್ಶನ ಚಾಚು ತಪ್ಪದೇ ಪಾಲಿಸಿ ಡೆಂಗ್ಯೂ ಜ್ವರ ನಿಯಂತ್ರಿಸಿರಿ ಎಂದರು. ಡೆಂಗ್ಯೂ ಜ್ವರದ ಅಪಾಯಗಳು ಮತ್ತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ರೋಗ ಲಕ್ಷಣ ಕುರಿತು ಜನರಲ್ಲಿ ಜಾಗೃತಿ…
ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೋಲಿಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದವರಿಗೆ, ಸರ್ಕಾರದಿಂದ ನೀಡಲಾದ ಸವಲತ್ತುಗಳನ್ನು ವಾಪಸ್ ಪಡೆಯಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ. ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ ವಿಚಾರವಾಗಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಚನ್ನಗಿರಿಯಲ್ಲಿ ಬಾಂಧವರ ಗುಂಪೊಂದು ಪೊಲೀಸ್ ಠಾಣೆಗೆ ಕಲ್ಲು ತೂರಾಟ ನಡೆಸಿದೆ. ಪೊಲೀಸ್ ವಾಹನಗಳಿಗೆ ಬೆಂಕಿ ಇಟ್ಟಿದೆ. ಈ ಘಟನೆ ಅವರ ಮನಃಸ್ಥಿತಿ ಎಂತದ್ದು ಎಂಬುದು ತೋರಿಸುತ್ತದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡಿದವರ ಮೇಲೆ ಕೇಸ್ ದಾಖಲಿಸಬೇಕು. ಸರ್ಕಾರಕ್ಕೆ ನಷ್ಟ ಮಾಡಿರುವ ಅಷ್ಟು ವೆಚ್ಚವನ್ನು ಅವರಿಂದ ಭರಿಸಬೇಕು. ಅಲ್ಲದೇ, ಸ್ಥಳೀಯ ಡಿವೈಎಸ್ ಪಿ ಮನವಿ ಮಾಡಿದರೂ ಸಹ ಚದುರದ ಗುಂಪಿನ ಮುಖ್ಯಸ್ಥ ಹಾಗೂ ಪ್ರಚೋದನೆ ಮಾಡಿದವರ ಮೇಲೆ ಕೇಸ್ ದಾಖಲಿಸಬೇಕು. ಅವರಿಗೆ ಸರ್ಕಾರ ನೀಡಿರುವ ಎಲ್ಲಾ ರೀತಿಯ ಸವಲತ್ತನ್ನು ವಾಪಸ್ ಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ತುಮಕೂರು: ನಗರದ ಶಿರಾ ಗೇಟ್ ಸಮೀಪ ನಿರ್ಮಾಣವಾಗುತ್ತಿದ್ದ ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ, ಈ ಮಾರ್ಗದಲ್ಲಿ ಸಂಚರಿಸುವ ಲಘು ವಾಹನಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಈ ಕಾಮಗಾರಿ ಆರಂಭವಾಗಿತ್ತು. ಅಲ್ಲದೆ, ವಾಹನಗಳ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ಕಲ್ಪಿಸಿಕೊಡಲಾಗಿತ್ತು. ಆದರೆ ವಿಪರೀತ ಮಳೆ ಹಿನ್ನೆಲೆಯಲ್ಲಿ ಪರ್ಯಾಯ ಮಾರ್ಗದಲ್ಲಿ ಸಾಕಷ್ಟು ತೊಂದರೆಯನ್ನು ವಾಹನ ಸವಾರರು ಎದುರಿಸಬೇಕಾಗಿತ್ತು. ಇದನ್ನು ಮನಗಂಡ ಜಿಲ್ಲಾಡಳಿತ ಇಂದಿನಿಂದ ಶಿರ ಗೇಟ್ ಗೇಟ್ರಳಲು ಎಸ್ ಮಾಲ್ ಬಳಿ ನಿರ್ಮಾಣವಾಗುತ್ತಿದ್ದ ಬಹುತೇಕ ಪೂರ್ಣಗೊಳಿಸಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಆದರೆ ಬಾರಿ ವಾಹನಗಳಾದ ಬಸ್ಸು, ಲಾರಿ, ಟ್ರಕ್ ಕಲ್ಪಿಸಿಕೊಡಲಾಗಿಲ್ಲ. ಅಲ್ಲದೆ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಪ್ರಜಾಪ್ರಭುತ್ವ ಮತ್ತು ಜಾತ್ಯಾತೀತ ತತ್ವದಲ್ಲಿ ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ್ದು ಜವಾಹರಲಾಲ್ ನೆಹರೂ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು. KPCC ಕಚೇರಿಯಲ್ಲಿ ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಪ್ರಜಾಪ್ರಭುತ್ವ ಮತ್ತು ಜಾತ್ಯಾತೀತ ತತ್ವದಲ್ಲಿ ದೇಶದ ಅಭಿವೃದ್ಧಿ ಮಾಡಲು ಮುಂದಾದರು. 17 ವರ್ಷಗಳ ದೀರ್ಘ ಕಾಲ ದೇಶದ ಪ್ರಧಾನ ಮಂತ್ರಿಯಾಗಿ ಭವಿಷ್ಯದ ಭಾರತವನ್ನು ಕಟ್ಟುವ ಕೆಲಸ ಮಾಡಿದರು. ಇಡೀ ವಿಶ್ವದಲ್ಲಿ ಶಾಂತಿ ನೆಲೆಸಬೇಕು ಎನ್ನುವ ಬದ್ಧತೆ ಉಳ್ಳವರಾಗಿದ್ದರು. ಆಗ ಮಾತ್ರ ವಿಶ್ವದ ಅಭಿವೃದ್ಧಿ ಸಾಧ್ಯ ಎನ್ನುವ ನಂಬಿಕೆ ಹೊಂದಿದ್ದರು ಎಂದು ವಿವರಿಸಿದರು. ನೆಹರೂ ಇತಿಹಾಸಕಾರರೂ ಆಗಿದ್ದರು. ದೇಶದ ಇತಿಹಾಸ ಗೊತ್ತಿದ್ದರಿಂದಲೇ ಅವರು ದೇಶದ ಭವಿಷ್ಯ ರೂಪಿಸಿದರು. ಅಂಬೇಡ್ಕರ್ ಅವರ ಮಾತಿನಂತೆ, ಇತಿಹಾಸ ಗೊತ್ತಿದ್ದವರು ಮಾತ್ರ ದೇಶದ ಭವಿಷ್ಯ ರೂಪಿಸ ಬಲ್ಲರು. ನೆಹರೂ ಈ ಕೆಲಸ ಮಾಡಿ ದೇಶವನ್ನು ಕಟ್ಟಿ ಬೆಳೆಸಿದರು ಎಂದು ಉದಾಹರಣೆಗಳ ಸಮೇತ ವಿವರಿಸಿದರು.…
ಕೋವಿಡ್-19 ಅಕ್ರಮದ ವಿಚಾರಣಾ ಆಯೋಗದ ಅವಧಿಯನ್ನು ಎರಡನೇ ಬಾರಿಗೆ ವಿಸ್ತರಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ. ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ನೇತೃತ್ವದ ತನಿಖಾ ಆಯೋಗದ ಅವಧಿಯನ್ನು ಮೇ 25ರಿಂದ ಆ.31ರ ವರೆಗೆ ಮೂರು ತಿಂಗಳು ವಿಸ್ತರಿಸಿ ಆದೇಶಿಸಿದೆ. 2023ರ ಆ.25ರಂದು ಏಕ ಸದಸ್ಯ ತನಿಖಾ ಆಯೋಗ ರಚಿಸಿದ್ದ ಸರಕಾರ ಅದರ ಅವಧಿಯನ್ನು ನ.22ಮೊದಲ ಬಾರಿ ವಿಸ್ತರಣೆ ಮಾಡಿತ್ತು. ಈಗ ಎರಡನೇ ಬಾರಿ ವಿಚಾರಣಾ ಆಯೋಗದ ಅವಧಿಯನ್ನು ವಿಸ್ತರಿಸಿದೆ. ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಇತರೆ ಇಲಾಖೆಗಳು ಸೇರಿ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ ಔಷಧಿ, ಉಪಕರಣಗಳು ಹಾಗೂ ಸಾಮಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳು ಹಾಗೂ ಇತ್ಯಾದಿ ವಿಷಯಗಳ ಕುರಿತು 2021ರ ಜುಲೈ-ಆಗಸ್ಟ್ ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರವಾದ ಆರೋಪಗಳ…
ತೆಲುಗು ‘ಪವರ್ ಸ್ಟಾರ್’ ಖ್ಯಾತಿಯ ನಟ ಪವನ್ ಕಲ್ಯಾಣ್ ಅವರು ಸಂದರ್ಶನ ಒಂದರಲ್ಲಿ ತಮ್ಮ ಜೀವನದ ರಹಸ್ಯ ಬಿಚ್ಚಿಟ್ಟಿದ್ದಾರೆ. ಏಕೆಂದರೆ, ಅವರು ಅದೆಷ್ಟು ಮದುವೆಯಾಗಿದ್ದಾರೆ ಎಂಬುದನ್ನು ಅವರೇ ಹೇಳಬೇಕು. ಈಗಾಗಲೇ ನಟ ಪವನ್ ಕಲ್ಯಾಣ್, ತಮ್ಮ ಸಿನಿಮಾಗಳ ಸಹನಟಿ ರೇಣು ದೇಸಾಯಿ ಅವರನ್ನು ಕೂಡ ಮದುವೆಯಾಗಿ ಡಿವೋರ್ಸ್ ಮಾಡಿದ್ದಾರೆ. ಹೌದು, ನಟ ಪವನ್ ಕಲ್ಯಾಣ್ ಹಾಗು ರೇಣು ದೇಸಾಯಿ ಬದ್ರಿ, ಜಾನಿ ಚಿತ್ರಗಳಲ್ಲಿ ಒಟ್ಟಾಗಿ ನಟಿಸಿದ್ದರು. ಶೂಟಿಂಗ್ ವೇಳೆ ಈ ಇಬ್ಬರಲ್ಲಿ ಸ್ನೇಹವಾಗಿದೆ. ಬಳಿಕ ಅದು ಪ್ರೇಮಕ್ಕೆ ತಿರುಗಿದೆ. ಪ್ರೇಮ ಮದುವೆಗೂ ದಾರಿ ಮಾಡಿಕೊಟ್ಟಿದೆ. 2009ರಲ್ಲಿನಟ ಪವನ್ ಕಲ್ಯಾಣ್ ಹಾಗೂ ನಟಿ ರೇಣು ದೇಸಾಯಿ ಸಪ್ತಪದಿ ತುಳಿದು ಮದುವೆಯಾಗಿದ್ದಾರೆ. ಆದರೆ, ಸಂಸಾರದಲ್ಲಿ ಮೂಡಿದ ಭಿನ್ನಾಭಿಪ್ರಾಯದಿಂದ 2012ರಲ್ಲಿ ಈ ಇಬ್ಬರೂ ಡಿವೋರ್ಸ್ ಪಡೆದು ಬೇರೆಯಾಗಿದ್ದಾರೆ. ಸಂದರ್ಶನವೊಂದರಲ್ಲಿ ಮದುವೆ ಮತ್ತು ಪ್ರೀತಿಯ ಬಗ್ಗೆ ಕೇಳಿದಾಗ ನಟ ಪವನ್ ಕಲ್ಯಾಣ್ ವಿಚಿತ್ರ ಉತ್ತರ ನೀಡಿದ್ದಾರೆ. ‘ಕಾಮವೇ ಪ್ರೇಮಕ್ಕೆ ದಾರಿ, ಕಾಮಕ್ಕೆ ಕಮಿಟ್ಮೆಂಟ್ ಕೊಡೋಕೆ ಆಗುತ್ತಾ? ಕಮಿಟ್…
ಕೇಂದ್ರದಲ್ಲಿ ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರೀಕ ಸಂಹಿತೆ ಮತ್ತು ಒಂದು ದೇಶ ಒಂದು ಚುನಾವಣೆಯನ್ನು ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪಿಟಿಐ(PTI) ಸಂದರ್ಶನದಲ್ಲಿ ಮಾತನಾಡಿರುವ ಅವರು, ಮೋದಿ ಸರ್ಕಾರವು ಮುಂದಿನ ಅವಧಿಯಲ್ಲೂ ಅಧಿಕಾರಕ್ಕೆ ಬರುತ್ತದೆ. ಈ ಸಂದರ್ಭದಲ್ಲಿ ‘ಒಂದು ದೇಶ ಒಂದು ಚುನಾವಣೆ(One Nation One Election)ಹಾಗೂ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿ ಮಾಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿದ ಅವರು ಸಂವಿಧಾನ ತಜ್ಞರು ಹಾಗೂ ಕಾನೂನು ತಜ್ಞರಾದ ಕೆ. ಎಂ. ಮುನ್ಶಿ, ರಾಜೇಂದ್ರ ಬಾಬು ಹಾಗೂ ಅಂಬೇಡ್ಕರ್ ಅವರು ಯಾವುದೇ ಧರ್ಮಾಧಾರಿತ ಕಾನೂನುಗಳು ಜಾತ್ಯತೀತ ದೇಶದಲ್ಲಿ ಇರಬಾರದು ಎಂದು ಹೇಳಿದ್ದರು. ಏಕರೂಪ ನಾಗರಿಕ ಸಂಹಿತೆಯನ್ನು ಪ್ರತಿಪಾದಿಸಿದ್ದರು. ಅವರ ಆಶಯಗಳಿಗೆ ಅನುಗುಣವಾಗಿ ಕಾನೂನು ಜಾರಿಗೆ ತರಬೇಕಿದೆ ಎಂದು ಹೇಳಿದರು. ಅಲ್ಲದೆ ಈ ನೀತಿಗಳನ್ನು ಜಾರಿಗೆ ತರಲು ಸಂಬಂಧಪಟ್ಟ ಎಲ್ಲರ ವಿಶ್ವಾಸ…