Subscribe to Updates
Get the latest creative news from FooBar about art, design and business.
- ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ
- ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
- ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
- ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ
- ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಆಯ್ಕೆ ಬಹುತೇಕ ಖಚಿತ?
- ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
- ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್ ಸೆಟ್ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
Author: admin
ಸಾಲ ಮರುಪಾವತಿಗೆ ಸಾಧ್ಯವಾಗದೆ ಖಾಸಗಿ ಶಾಲೆಗೆ ಸೇರಿದ ಈ ಆಸ್ತಿಯು ಶ್ರೀ ಎಂ ವಿಶ್ವೇಶ್ವರಯ್ಯ ಸಹಕಾರಿ ಬ್ಯಾಂಕ್ ನ ಸ್ವಾಧೀನದಲ್ಲಿದೆ. ಅತಿಕ್ರಮಣದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಸರ್.ಎಂ. ವಿಶ್ವೇಶ್ವರಯ್ಯ ಕೋ ಆಪರೇಟಿವ್ ಬ್ಯಾಂಕ್ ನಾಮ ಫಲಕ ಹಾಕಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಕಿರಂಗೂರು ಗ್ರಾಮದ ಖಾಸಗಿ ಶಾಲೆ ಆಡಳಿತ ಮಂಡಳಿಯವರು ಸರ್.ಎಂ ವಿಶ್ವೇಶ್ವರಯ್ಯ ಕೋ ಆಪರೇಟಿವ್ ಬ್ಯಾಂಕ್ ನಿಂದ ಸಾಲ ಪಡೆದಿದೆ. ಆದರೆ, ಸಾಲವನ್ನು ಮರುಪಾವತಿ ಮಾಡದ ಪರಿಣಾಮ ಬ್ಯಾಂಕ್ ಅಧಿಕಾರಿಗಳು ವಿದ್ಯಾಸಂಸ್ಥೆಯನ್ನು ಮುಟ್ಟುಗೋಲು ಹಾಕಿಕೊಂಡು ಅತಿಕ್ರಮಣ ಮಾಡದಂತೆ ಶಾಲಾ ಗೇಟಿಗೆ ನಾಮ ಫಲಕ ಅಳವಡಿಸಿದ್ದಾರೆ ಎಂದು ವರದಿ ತಿಳಿಸಿದೆ. ರಾಜ್ಯಾದ್ಯಂತ ಒಂದೆರಡು ದಿನಗಳಲ್ಲಿ ಶಾಲೆ ಮರು ಆರಂಭಗೊಳ್ಳಲಿದೆ. ಇದೀಗ ವಿದ್ಯಾಸಂಸ್ಥೆಯ ಗೇಟ್ ಸೀಲ್ ಮಾಡಿ ಬೀಗ ಹಾಕಿರುವುದರಿಂದ ಶಾಲಾ ಆಡಳಿತ ಮಂಡಳಿ ವಿರುದ್ಧ, ಪಾಲಕರು “ನಮ್ಮ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಬಹುದು” ಎಂದು ಆತಂಕಗೊಂಡಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಆಂಕರ್ ಅನುಶ್ರೀ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ. ತಮ್ಮ ಪಟ ಪಟ ಅನ್ನೋ ಪಠಾಕಿಯ ಮಾತುಗಳಿಂದ, ಮುತ್ತು ಪೋಣಿಸಿದಂತೆ ನುಡಿಯುವ ಕನ್ನಡ ನುಡಿಗಳಿಂದ, ಸ್ಪಾಟ್ ಅಲ್ಲೇ ಬರುವ ಕೌಂಟ್ರು, ಕಾಮಿಡಿಗಳಿಂದ ಕನ್ನಡಿಗರ ಮನೆ ಮಾತಾಗಿ, ಮನೆ ಮಗಳಾಗಿ ಬೆಳೆದು ನಿಂತಿದ್ದಾರೆ. ಅನುಶ್ರೀ ವಿಚಾರದಲ್ಲಿ ಎಲ್ಲರಿಗೂ ಪ್ರೀತಿ, ವಿಶ್ವಾಸ. ಅವರು ಇನ್ನೂ ಮದುವೆ ಆಗಲಿಲ್ಲವಲ್ಲಾ ಎಂಬ ಸ್ವಲ್ಪ ಸ್ವಲ್ಪವೇ ಸಿಟ್ಟು, ಬೇಜಾರು ಹಲವರಿಗೆ ಇದೆ. ಇತ್ತೀಚೆಗಷ್ಟೆ ಕರಾವಳಿಯ ವಾಹಿನಿಯಲ್ಲಿ ಸಂದರ್ಶನ ಮಾಡುವಾಗ ಸದ್ಯದಲ್ಲೇ ಮದುವೆ ಆಗುವುದಾಗಿ ತಿಳಿಸಿದ್ದರು. ಆದರೀಗ ಈ ಬೆನ್ನಲ್ಲೇ ಅನುಶ್ರೀ ಕಂಠೀರವ ಸ್ಟುಡಿಯೋ ಒಳಗೆ ಒಬ್ಬರನ್ನು ಮುದ್ದಾಡುತ್ತಾ ಎಲ್ಲರಿಗೂ ಸಿಕ್ಕಿಬಿದ್ದಿದ್ದಾರೆ. ಅರೇ ಮುದ್ದಾಡೋದು ಅಂದರೆ ನೀವು ಎಲ್ಲೆಲಿಗೊ ಹೋಗ ಬೇಡ್ರಪ್ಪಾ. ಅವರು ಮುದ್ದಾಡಿದ್ದು ವ್ಯಕ್ತಿಯನ್ನಲ್ಲ. ಅವರ ಪ್ರೀತಿಯ ನಾಯಿಯನ್ನು. ಹೌದು, ಅನುಶ್ರೀ ಎಂದಾಕ್ಷಣ ಆ್ಯಂಕರ್ ಎಂದು ಎಷ್ಟು ಖಚಿತವಾಗಿ ಹೇಳುತ್ತೇವೆಯೋ ಅಷ್ಟೇ ಸತ್ಯವಾಗಿಯೂ ಅವರು ಪ್ರಾಣಿಪ್ರಿಯರೂ ಹೌದು. ಅದರಲ್ಲಿಯೂ ನಾಯಿಮರಿ(Pet Dogs)ಗಳೆಂದರೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಸದಾಕಾಲ ನಾಯಿಮರಿಗಳನ್ನು ತಮ್ಮೊಂದಿಗೆ…
ಪಾವಗಡ: ಶ್ರೀರಾಮಾನುಜರ ತತ್ವ-ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದು ತುಮಕೂರು ರಾಮಾನುಜ ಪತ್ತಿನ ಸಹಕಾರ ಸಂಘದ ಮುಖ್ಯಸ್ಥ ಚೆಲುವಯ್ಯ ತಿಳಿಸಿದರು. ತಾಲ್ಲೂಕಿನ ಮಂಗಳವಾಡ ಗ್ರಾಮದಲ್ಲಿ, ಪಾವಗಡ ತಾಲ್ಲೂಕು ವೈಷ್ಣವ ಮಹಾ ಸಭಾದ ವತಿಯಿಂದ ಹಮ್ಮಿಕೊಂಡಿದ್ದ ಶ್ರೀರಾಮಾನುಜಾಚಾರ್ಯರ ಜಯಂತೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು “ಜಾತಿ, ಮತ, ವರ್ಗ, ಲಿಂಗ ಭೇದವಿಲ್ಲದೆ ಎಲ್ಲರೂ ಮುಕ್ತಿ ಮಾರ್ಗದಲ್ಲಿ ಹೋಗಬಹುದೆಂಬುದನ್ನು ಸಾರಿದ ಮಹಾನ್ ಸಂತರು ರಾಮಾನುಜರು, 32 ವರ್ಷ ಈ ನಾಡಿನಾದ್ಯಂತ ಸಂಚರಿಸಿ ಭಕ್ತಿಯನ್ನು ಎಲ್ಲ ವರ್ಗದವರಿಗೂ ಪರಿಚಯಿಸಿದ ಮಹಾನ್ ಪುಣ್ಯ ಪುರುಷರು. ಇಂತಹ ಮಹನೀಯರ ಜೀವನದ ಆದರ್ಶಗಳನ್ನು ಪಾಲಿಸಬೇಕು ಎಂದು ತಿಳಿಸಿದರು. ಜಿಲ್ಲಾ ನಿರ್ದೇಶಕ ರಘುನಾಥ್ ಮಾತನಾಡಿ, “ಅಂದಿನ ಕಾಲದಲ್ಲೇ ಅಸ್ಪೃಶ್ಯತೆಯನ್ನು ಸಮಾಜದಿಂದ ತೊಡೆದು ಹಾಕಿದ ಪ್ರಥಮ ಆಚಾರ್ಯರೇ ಶ್ರೀ ರಾಮಾನುಜಾಚಾರ್ಯರು. ಸಮಾಜದಲ್ಲಿ ತೀರ ಹಿಂದುಳಿದ ಜನಾಂಗದವರನ್ನು ತಮ್ಮ ಹತ್ತಿರ ಕರೆದು ಅವರಿಗೆ ದೇವಾಲಯ ಪ್ರವೇಶ ಮಾಡಿಸಿ, ಅವರನ್ನು ಶ್ರೇಷ್ಠ ಕುಲದವರು ಎಂದು ಕರೆದ ಮಹಾಮಹಿಮರು ಎಂದು ತಿಳಿಸಿದರು. ವೈಷ್ಣವರು ಸಂಘಟನೆಯಾಗದ ಹೊರತು ಅಭಿವೃದ್ಧಿ…
ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡವು ಮೂರನೇ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ರಶಸ್ತಿಯನ್ನು ಗೆದ್ದು ಬೀಗಿದೆ. ಶ್ರೇಯಸ್ ಅಯ್ಯರ್ ನಾಯಕತ್ವದ ಮತ್ತು ಗೌತಮ್ ಗಂಭೀರ್ ಮಾರ್ಗದರ್ಶನದ ಕೆಕೆಆರ್ ತಂಡ ಭಾನುವಾರ ನಡೆದ ಫೈನಲ್ ನಲ್ಲಿ 2016ರ ಚಾಂಪಿಯನ್ ಸನ್ ರೈಸರ್ಸ್ ಹೈದರಾಬಾದ್ (ಎಸ್ಆರ್ಹೆಚ್) ಅನ್ನು 8 ವಿಕೆಟ್ ಗಳಿಂದ ಸೋಲಿಸಿ ಟ್ರೋಫಿಯನ್ನು ಗೆದ್ದುಕೊಂಡಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬೌಲಿಂಗ್ ಮಾಡಿದ ಕೋಲ್ಕತ್ತಾ, ಐಪಿಎಲ್ ಫೈನಲ್ ನಲ್ಲಿ ಹೈದರಾಬಾದ್ ತಂಡವನ್ನು 18.3 ಓವರ್ಗಳಲ್ಲಿ 113 ರನ್ ಗಳ ಕನಿಷ್ಠ ಸ್ಕೋರ್ ಗೆ ಆಲೌಟ್ ಮಾಡಿ ನಂತರ 10.3 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 114 ರನ್ ಬಾರಿಸಿ ಪ್ರಶಸ್ತಿ ಗೆದ್ದುಕೊಂಡಿತು. 114 ರನ್ ಗಳ ಅಲ್ಪ ಮೊತ್ತದ ಗುರಿಯನ್ನು ಬೆನ್ನಟ್ಟಿದ ಕೆಕೆಆರ್ ಗೆ ಉತ್ತಮ ಆರಂಭ ಸಿಗಲಿಲ್ಲ. ಸುನಿಲ್ ನರೈನ್ ತಮ್ಮ ಇನ್ನಿಂಗ್ಸ್ ನ ಮೊದಲ ಎಸೆತದಲ್ಲಿ ಸಿಕ್ಸರ್ ಬಾರಿಸಿ ಎರಡನೇ ಎಸೆತದಲ್ಲಿ…
ರಾಜ್ಯ ಸರ್ಕಾರ ಮುಸಲ್ಮಾನರ ತುಷ್ಟೀಕರಣಕ್ಕೆ ಮುಂದಾಗಿದ್ದು, ರಾಜ್ಯದ ಜನತೆ ತೊಂದರೆ ಅನುಭವಿಸುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದರು. ನೈರುತ್ಯ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಸಭೆ ನಡೆಸಲು ನಗರಕ್ಕೆ ಆಗಮಿಸಿದ್ದ ಅವರು, ಖಾಸಗಿ ಹೋಟೆಲ್ ಆದ್ರಿಕಾದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, “ಹುಬ್ಬಳಿ ಮತ್ತು ಧಾರವಾಡದಲ್ಲಿ ಕೊಲೆ ಪ್ರಕರಣಗಳು ನಡೆದಿದ್ದರೆ, ಚನ್ನಗಿರಿಯಲ್ಲಿ ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವಪ್ಪಿದ್ದು, ಠಾಣೆಯ ಮೇಲೆ ಕಲ್ಲುತೂರಾಟ ನಡೆಸಿದ್ದರಿಂದ ಹಲವು ಮಂದಿ ಪೊಲೀಸರಿಗೆ ಗಾಯಗಳಾಗಿವೆ” ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿದು ೧ ವರ್ಷವಾಗಿದ್ದು, ಸಾಧನೆ ಶೂನ್ಯವಾಗಿದೆ. ಅಭಿವೃದ್ಧಿ ಕೆಲಸಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ರಾಜ್ಯದ ಜನತೆ ಭ್ರಮನಿರಶನಗೊಂಡಿದ್ದಾರೆ. ಅಭಿವೃದ್ಧಿ ಕೆಲಸಕ್ಕಾಗಿ ಮುಖ್ಯಮಂತ್ರಿಗಳು ಯಾವುದೇ ಗುದ್ದಲಿಪೂಜೆ ನೆರವೇರಿಸಿಲ್ಲ. ಗ್ಯಾರಂಟಿ ಗುಂಗಿನಲ್ಲೇ ಮುಳುಗಿದ್ದಾರೆ” ಎಂದು ಟೀಕಿಸಿದರು. “ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ಮೇಲೆ ರಾಜ್ಯಸರ್ಕಾರಕ್ಕೆ ಅರಿವಾಗಲಿದೆ. ರಾಜ್ಯ ಸರ್ಕಾರ ಎನ್.ಇ.ಪಿ. ರದ್ದುಪಡಿಸಿದ್ದು, ಎಸ್ ಇಪಿ ಜಾರಿಗೊಳಿಸುವ ಮೂಲಕ ಶಿಕ್ಷಣ ಕ್ಷೇತ್ರವನ್ನು…
ರಾಜ್ಯಾದ್ಯಂತ ಮೇ 29ರಿಂದ ಶಾಲೆಗಳು ಆರಂಭವಾಗುತ್ತಿದ್ದು, ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳ ಕುರಿತ ವಾರ್ಷಿಕ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ 2024-25ನೇ ಸಾಲಿನ ಶೈಕ್ಷಣಿಕ ಮಾರ್ಗದರ್ಶಿಯನ್ನು ಶಾಲಾ ಶಿಕ್ಷಣ ಇಲಾಖೆಯು ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. 2024-25ನೆ ಶೈಕ್ಷಣಿಕ ವರ್ಷವನ್ನು ‘ಶೈಕ್ಷಣಿಕ ಬಲವರ್ಧನೆ ವರ್ಷ’ ಎಂದು ಸಂಕಲ್ಪ ಮಾಡಲಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ ಬದಲಾಗುತ್ತಿರುವ ಶೈಕ್ಷಣಿಕ ಅವಶ್ಯಕತೆಗಳು ಮತ್ತು ತಂತ್ರಜ್ಞಾನ ಆಧಾರಿತ ಕಲಿಕೆ ಹೊಂದಾಣಿಕೆ ಮಾಡಿಕೊಂಡು, ಮಗುವಿನ ಕಲಿಕಾ ಬಲವರ್ಧನೆ ಆಗಬೇಕಾಗುತ್ತದೆ ಎಂದು ಶೈಕ್ಷಣಿಕ ಮಾರ್ಗದರ್ಶಿಯಲ್ಲಿ ತಿಳಿಸಲಾಗಿದೆ. ಹಿಂದಿನ ಸರಕಾರವು ಎನ್ಇಪಿ ಅನ್ವಯ ರಾಜ್ಯದಲ್ಲಿ ಒಂದನೇ ತರಗತಿಗೆ ಪ್ರವೇಶಾತಿಯನ್ನು ಪಡೆಯಲು ಕಡ್ಡಾಯವಾಗಿ ಮಗುವಿಗೆ ಜೂ.1ಕ್ಕೆ ಆರು ವರ್ಷಗಳು ತುಂಬಿರಬೇಕು ಎಂದು ಆದೇಶ ಹೊರಡಿಸಿತ್ತು. ಇದಕ್ಕೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಆದೇಶಕ್ಕೆ ತಿದ್ದುಪಡಿಯನ್ನು ತಂದು, ಆದೇಶವು 2025-26ನೆ ಸಾಲಿನಿಂದ ಜಾರಿಗೆ ಬರಲಾಗುತ್ತದೆ ಎಂದು ತಿಳಿಸಿತ್ತು. ಆದರೆ ಇತ್ತೀಚೆಗೆ ಕೇಂದ್ರವು ಶಾಲೆಗೆ ಸೇರಲು 6…
ಚಾಮರಾಜನಗರ: ಕಲುಷಿತ ನೀರು ಕುಡಿದು 15 ಜನರು ಅಸ್ವಸ್ಥರಾದ ಮಧುವಿನಹಳ್ಳಿ ಗ್ರಾಮಕ್ಕೆ, ಚಾಮರಾಜನಗರ ಜಿಲ್ಲಾಧಿಕಾರಿ ಟಿ. ಶಿಲ್ಪಾನಾಗ್ ರವರು ಭೇಟಿ ನೀಡಿ ಅನಾರೋಗ್ಯಕ್ಕೆ ಒಳಗಾದ ಗ್ರಾಮಸ್ಥರ ಅರೋಗ್ಯ ವಿಚಾರಿಸಿದರು. ಚಾಮರಾಜನಗರ ಜಿಲ್ಲೆಯ ಕೊಳ್ಲೇಗಾಲ ತಾಲೂಕಿನ ಮಧುವಿನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಕೆಲವರು ಅಸ್ವಸ್ಥಗೊಂಡಿದ್ದರು. ಈ ಹಿನ್ನಲೆಯಲ್ಲಿ ಭಾನುವಾರ ಮಧ್ಯಾಹ್ನ ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆ ಸಿಬ್ಬಂಧಿಗಳ ಜೊತೆಗೂಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಧುವಿನಹಳ್ಲಿ ಗ್ರಾಮಕ್ಕೆ ಭೇಟಿ ನೀಡಿ ಸುದ್ದಿಗಾರರ ಜೊತೆ ಮಾತನಾಡಿದ ಜಿಲ್ಲಾಧಿಕಾರಿಗಳು, ಮಧುವಿನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿ ಹಲವರು ಸರ್ಕಾರಿ ಆಸ್ಪತ್ರೆಗೆ ಹಾಗೂ ಕೆಲವರು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿ ಬಹುತೇಕರು ಡಿಸ್ಚಾಜ್೯ ಆಗಿದ್ದಾರೆ ಎಂದರು. ಗ್ರಾಮದಲ್ಲಿ ಎರಡು ಬೋರ್ ವೆಲ್ ಗಳು ಇದ್ದು ಉಪ್ಪಿನ ಅಂಶ ಇರುವ ಕಾರಣ ಮತ್ತು ಸತತ ಮಳೆಯ ಕಾರಣರಿಂದ, ಆ ಎರಡೂ ಬೋರ್ವವೆಲ್ ಗಳಲ್ಲಿನ ನೀರು ಕಲುಷಿತಗೊಂಡು ಕುಡಿಯಲು ಯೋಗ್ಯವಾಗಿರುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಾಗಾಗಿ ಜಿಲ್ಲಾಡಳಿತದಿಂದ ಟ್ಯಾಂಕರ್ ಮೂಲಕ…
ನ್ಯೂಯಾರ್ಕ್: ರಷ್ಯಾ ಮತ್ತು ಉಕ್ರೇನ್ ನಡುವೆ ಯುದ್ಧ ಮುಂದುವರಿದಿದೆ. ಇತ್ತೀಚಿನ ದಿನಗಳಲ್ಲಿ ರಷ್ಯಾದಿಂದ ಉಕ್ರೇನ್ ಮೇಲೆ ಕ್ಷಿಪ್ರ ದಾಳಿ ನಡೆಸಲಾಗುತ್ತಿದೆ. ಉಕ್ರೇನ್ ಮದ್ದುಗುಂಡುಗಳ ತೀವ್ರ ಕೊರತೆಯನ್ನು ಹೊಂದಿದೆ. ಇಂತಹ ಬಿಕ್ಕಟ್ಟಿನ ಸಮಯದಲ್ಲಿ, ಉಕ್ರೇನ್ ಗೆ ಸಹಾಯ ಮಾಡಲು ಅಮೆರಿಕ ಮತ್ತೆ ಮುಂದೆ ಬಂದಿದೆ. ಅಧಿಕಾರಿಗಳ ಪ್ರಕಾರ, ಈ ಯುದ್ಧದಲ್ಲಿ ಉಕ್ರೇನ್ ಗೆ ಬೆಂಬಲವನ್ನು ನೀಡಲು ಅಮೆರಿಕ ತಯಾರಿ ನಡೆಸುತ್ತಿದೆ. ಅಮೆರಿಕ ಈಗ ಉಕ್ರೇನ್ ಗೆ 275 ಮಿಲಿಯನ್ ಡಾಲರ್ ಗಳ ಮಿಲಿಟರಿ ನೆರವು ಪ್ಯಾಕೇಜ್ ನೀಡಲು ಸಿದ್ಧತೆ ನಡೆಸಿದೆ. ಇದರಲ್ಲಿ 155 ಎಂಎಂ ಫಿರಂಗಿ ಶೆಲ್ ಗಳು, ನಿಖರವಾದ ವಾಯು ಯುದ್ಧಸಾಮಗ್ರಿಗಳು ಮತ್ತು ವಾಹನಗಳು ಸೇರಿವೆ ಎನ್ನಲಾಗಿದೆ. ಇತ್ತ ರಷ್ಯಾದ ಭೂ ದಾಳಿಯ ನಂತರ ಈಶಾನ್ಯ ಉಕ್ರೇನ್ ನಲ್ಲಿ ಸಾವಿರಾರು ಮಂದಿ ನಾಗರಿಕರು ಪ್ರದೇಶವನ್ನು ತೊರೆದಿದ್ದಾರೆ. ರಷ್ಯಾ ಫಿರಂಗಿ, ಪಟ್ಟಣಗಳು ಮತ್ತು ಹಳ್ಳಿಗಳನ್ನು ಗುರಿಯಾಗಿಸಿದೆ. ರಷ್ಯಾದ ಸೇನೆಯು ಗಡಿಯ ಬಹುಭಾಗದ ಮೇಲೆ ಹಿಡಿತ ಸಾಧಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಜುಲೈ 1ರಿಂದ ಮೂರು ಹೊಸ ಅಪರಾಧ ಕಾನೂನುಗಳು ದೇಶದೆಲ್ಲೆಡೆ ಜಾರಿಯಾಗಲಿದ್ದು, ಅವುಗಳ ಅನುಷ್ಠಾನದಲ್ಲಿ ಪ್ರಮುಖ ಪಾತ್ರ ವಹಿಸಲು ಪೊಲೀಸರಿಗೆ ತರಬೇತಿ ನೀಡಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುಂದಾಗಿದೆ. ಇದಕ್ಕಾಗಿ ಕೇಂದ್ರ ಗೃಹ ಸಚಿವಾಲಯ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ. ಹೊಸ ಅಪರಾಧ ಕಾನೂನುಗಳ ಹಿಡಿತಕ್ಕೆ ಬಹುತೇಕ ಪೊಲೀಸರಿಗೆ ತರಬೇತಿ ನೀಡಲಾಗಿದೆ. ಆನ್ಸೆನ್ ತರಗತಿ ನಡೆಸಿ ಕಾನೂನು ಜಾರಿ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಅಲ್ಲದೇ ಕ್ರಾಂತಿಕಾರಕ ಕಾನೂನು ಎಂದೇ ಹೇಳಲಾಗುವ ಮೂರು ಕಾಯ್ದೆಗಳ ಪರಿಣಾಮಕಾರಿ ಜಾರಿಗೆ ಕೇಂದ್ರ ಗೃಹ ಸಚಿವಾಲಯ ಎಲ್ಲಾ ರೀತಿಯ ಕ್ರಮ ಕೈಗೊಂಡಿದ್ದು, ಹಿಂದಿನ ಭಾರತೀಯ ದಂಡ ಸಂಹಿತೆ ಐಪಿಸಿ 1860, ಅಪರಾಧ ದಂಡ ಸಂಹಿತೆ- 1973, ಭಾರತೀಯ ಸಾಕ್ಷ್ಯ ಕಾಯಿದೆ -1872ಕ್ಕೆ ಬದಲಾಗಿ ಹೊಸದಾಗಿ ಭಾರತೀಯ ನ್ಯಾಯ ಸಂಹಿತೆ(BNS), ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, ಭಾರತೀಯ ಸಾಕ್ಷ್ಯ ಅಧಿನಿಯಮ ಕಾಯ್ದೆಗಳು ಜಾರಿಗೆ ಬರಲಿವೆ. ಸದ್ಯ ಮೂಲ ಕಾಯ್ದೆಗಳಲ್ಲಿದ್ದ ಅಂಶಗಳನ್ನೇ ಹೊಸ ಕಾಯ್ದೆಯಲ್ಲಿ ಸೇರ್ಪಡೆ ಮಾಡಿದ್ದರೂ ಬದಲಾವಣೆಗೆ ಅನುಗುಣವಾಗಿ…
ಅಯೋಧ್ಯೆಯ ರಾಮಮಂದಿರದ ಆವರಣದಲ್ಲಿ ಮೊಬೈಲ್ ಫೋನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಟ್ರಸ್ಟ್ ಆದೇಶ ಹೊರಡಿಸಿದೆ. ಶನಿವಾರ(ಮೇ.25) ನಡೆದ ರಾಮಮಂದಿರ ಟ್ರಸ್ಟ್ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿ ತಿಳಿಸಿದೆ. ದೇವಸ್ಥಾನದಲ್ಲಿ ಸಾರ್ವಜನಿಕರು ಮೊಬೈಲ್ ಕೊಂಡೊಯ್ಯುವುದನ್ನು ಈಗಾಗಲೇ ನಿಷೇಧಿಸಲಾಗಿತ್ತು. ಆದರೆ ಈಗ ವಿಐಪಿಗಳು ಮತ್ತು ವಿವಿಐಪಿಗಳು ಮೊಬೈಲ್ ಫೋನ್ ಕೊಂಡೊಯ್ಯುವುದನ್ನೂ ನಿಷೇಧಿಸಲಾಗಿದೆ. ರಾಮಮಂದಿರ ಟ್ರಸ್ಟ್ ನ ಪದಾಧಿಕಾರಿಗಳು ಐಜಿ ಹಾಗೂ ಕಮಿಷನರ್ ಜೊತೆಗಿನ ಸಭೆಯಲ್ಲಿ ಮೊಬೈಲ್ ಫೋನ್ ಗಳನ್ನು ಸಂಪೂರ್ಣವಾಗಿ ನಿಷೇಧಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಟ್ರಸ್ಟ್ ಟ್ರಸ್ಟಿ ಅನಿಲ್ ಮಿಶ್ರಾ ತಿಳಿಸಿದ್ದಾರೆ. ರಾಮ ಮಂದಿರಕ್ಕೆ ಬರುವ ಭಕ್ತರ ಮೊಬೈಲ್ ಗಳನ್ನು ಇಡಲು ಸೂಕ್ತ ವ್ಯವಸ್ಥೆ ಇದೆ ಎಂದು ಟ್ರಸ್ಟಿ ಹೇಳಿದ್ದಾರೆ. ಜನರು ತಮ್ಮ ಮೊಬೈಲ್ ಜೊತೆಗೆ ಇತರ ಬೆಲೆಬಾಳುವ ವಸ್ತುಗಳನ್ನು ಇಟ್ಟುಕೊಳ್ಳಬಹುದು. ಇಂತಹ ಪರಿಸ್ಥಿತಿಯಲ್ಲಿ ಜನರು ಈ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ದೇವಸ್ಥಾನದ ಆವರಣದಲ್ಲಿ ಸುವ್ಯವಸ್ಥೆ ಕಾಪಾಡಲು ಟ್ರಸ್ಟ್ ಗೆ ಸಹಕರಿಸಬೇಕು ಎಂದಿದ್ದಾರೆ.…