Author: admin

ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಹೊರವಲಯದ ಮಾಹಲಿಂಗಪುರ-ನಿಪ್ಪಾಣಿ ರಾಜ್ಯ ಹೆದ್ದಾರಿಯಲ್ಲಿ ಬೃಹತ್ ಲಾರಿ- ಕಾರು ಹಾಗೂ ಎರಡು ಬೈಕುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಅಪಘಾತ ತೀವ್ರತೆಗೆ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಚಿಕ್ಕೋಡಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಬೀದರ್: ನಗರದ ನ್ಯೂ ಆದರ್ಶ ಕಾಲೋನಿಯಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 1 ಲಕ್ಷ ರೂ. ಅಧಿಕ ಮೌಲ್ಯದ ನಶೆ ಏರಿಸುವ ನಾರ್ಕೋಟಿಕ್ ಔಷಧಿ ಹಾಗೂ ಮಾತ್ರೆಗಳನ್ನು ಬೀದರ್ ಪೊಲೀಸರು ಕಾರ್ಯಾಚರಣೆ ಮಾಡಿ ಜಪ್ತಿ ಮಾಡಿದ ಘಟನೆ ನಡೆದಿದೆ. ನಾರ್ಕೋಟಿಕ್ ಔಷಧಿ ಹಾಗೂ ಮಾತ್ರೆಗಳನ್ನು ಮನೆಯಲ್ಲಿ ಅಕ್ರಮವಾಗಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ಮನೆ ಮೇಲೆ ದಾಳಿ ಮಾಡಿದ ಪೊಲೀಸರು, ನಶೆ ಭರಿಸುವ ಲಕ್ಷಾಂತರ ಮೌಲ್ಯದ ಡ್ರಗ್ಸ್ ಹಾಗೂ ಮೂರು ಜನ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಬೀದರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮೈಸೂರು: ಮೂರ್ಬಾಂದ್ ಬೆಟ್ಟದ ಸಮೀಪದಲ್ಲಿ ರೈತ ಮಹಿಳೆಯ ಮೇಲೆ ಹುಲಿ ದಾಳಿ ನಡೆಸಿದ್ದು, ಮಹಿಳೆ ಸಾವನ್ನಪ್ಪಿದ ಘಟನೆ ನಡೆದಿದೆ. ಚಿಕ್ಕಿ(48) ಹುಲಿ ದಾಳಿಗೆ ಬಲಿಯಾದ ಮಹಿಳೆಯಾಗಿದ್ದಾರೆ. ಮೇಕೆ ಮೇಯಿಸುತ್ತಿದ್ದಾಗ ಹಠಾತ್ ಮಹಿಳೆ ಮೇಲೆ ಹುಲಿ ದಾಳಿ ಮಾಡಿದೆ. ಇನ್ನು ಘಟನಾ ಸ್ಥಳದಲ್ಲಿ ಮಹಿಳೆಯ ಕಾಲು ಮಾತ್ರ ಸಿಕ್ಕಿದೆ. ಆದ್ರೆ, ಮಹಿಳೆಯ ಮೃತದೇಹಕ್ಕಾಗಿ ಸಿಬ್ಬಂದಿ ಹುಡುಕಾಟ ನಡೆಸಿದ್ದು, ಅರಣ್ಯಇಲಾಖೆ ನಿರ್ಮಿಸಿದ್ದ ಅರಣ್ಯ ವೀಕ್ಷಣೆಯ ಟವರ್ ಮೇಲೆ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಎನ್. ಬೇಗೂರು ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಕ್ಷತಾ(30) ಆತ್ಮಹತ್ಯೆಗೆ ಶರಣಾದ ಮಹಿಳೆಯಾಗಿದ್ದಾರೆ. ಭದ್ರಾವತಿ ತಾಲೂಕಿನ ಕೆರೆಬೀರನಹಳ್ಳಿ ಗ್ರಾಮದ ಮೂಲದವರಾದ ಅಕ್ಷತಾ ಅವರು ಬ್ಯೂಟಿ ಪಾರ್ಲರ್ ನಡೆಸುತ್ತಿದ್ದರು ಎನ್ನಲಾಗಿದೆ. ಕೆಲ ದಿನಗಳಿಂದ ಅಕ್ಷತಾ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇನ್ನು ಈ ಬಗ್ಗೆ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುರುವೇಕೆರೆ: ರಾಮನಗರ ಚನ್ನಪಟ್ಟಣಕ್ಕೆ ನೀರು ಕೊಡಲು ಎಕ್ ಪ್ರೆಸ್ ಚಾನಲ್ ಅನ್ನು ನಿರ್ಮಿಸಲು ಮುಂದಾಗಿದ್ದರು. ಆ ಕಾಮಗಾರಿಯನ್ನು  ಜಿಲ್ಲಾ ರೈತರ ನಾಯಕರುಗಳ ಸಹಕಾರದಿಂದ ಮುಚ್ಚಿಸಿದ್ದೇವೆ. ಈ ಚಾನಲ್ ಅನ್ನು ನಿರ್ಮಿಸಲು ಸುಮಾರು 12:1/2ಅಡಿ ಆಳದ ಚಾನೆಲ್ ಹಾಗೂ ದೊಡ್ಡ ವ್ಯಾಸದ ಪೈಪುಗಳನ್ನು ಅಳವಡಿಸಲು ಬಿಟ್ಟರೆ, ಟಿಬಿಸಿ ನಾಲೆಯಿಂದ ಒಂದು ಹನಿ ನೀರು ಕೂಡ ಉಳಿಯುವುದಿಲ್ಲ. ಇದೊಂದು ಕಾಮಗಾರಿಯನ್ನು ಮಾಡಲು ಅವಕಾಶ ಮಾಡಿಕೊಟ್ಟರೆ, ತುರುವೇಕೆರೆ ತಾಲೂಕಿಗೆ ಮೀಸಲಾಗಿರುವ 2.80 ಟಿಎಂಸಿ ನೀರಿನಲ್ಲಿ ಸಿಗುವುದಿಲ್ಲ ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಎಂ.ಟಿ. ಕೃಷ್ಣಪ್ಪ ತಮ್ಮ ಸ್ವಗೃಹದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಅಭಿಪ್ರಾಯಪಟ್ಟರು. ಇದೇ ತಿಂಗಳ 30 /05/2024 ರ ಗುರುವಾರ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರ ತುಮಕೂರಿನ ನಿವಾಸದ ಮುಂಭಾಗ ಬೆಳಿಗ್ಗೆಯಿಂದ ಸಂಜೆಯವರೆಗೆ ಲಿಂಕ್ ಕೆನಾಲ್ ವಿರೋಧಿಸಿ ಧರಣಿ  ನಡೆಸಲಾಗುವುದು ಎಂದು ಹೇಳಿ, ಈ ಕಾಮಗಾರಿಯನ್ನು ಮಾಡಲು ಬಿಟ್ಟರೆ, ಜಿಲ್ಲೆಯ ಗುಬ್ಬಿ, ಚಿಕ್ಕನಾಯಕನಹಳ್ಳಿ, ತಿಪಟೂರು, ಮಧುಗಿರಿ, ಕೊರಟಗೆರೆ, ತುಮಕೂರು ಗ್ರಾಮಾಂತರ ಕ್ಷೇತ್ರಗಳಿಗೆ ಒಂದು ಹನಿ ನೀರನ್ನು…

Read More

ಬೆಂಗಳೂರು: ಕಾರು ಕಲಿಯಲು ಹೋಗಿದ್ದ ಮಹಿಳೆಯೊಬ್ಬರು ಮನೆ ಮುಂದೆ ಆಟವಾಡ್ತಿದ್ದ ಬಾಲಕಿ‌ ಮೇಲೆ‌ ಕಾರು ಹತ್ತಿಸಿದ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲೀಪುರ ಗ್ರಾಮದಲ್ಲಿ ನಡೆದಿದೆ. ಮನೆ ಮುಂದೆ ಆಟವಾಡ್ತಿದ್ದ ಬಾಲಕಿಗೆ ಕಾರು ಡಿಕ್ಕಿ ಹೊಡೆದಿದ್ದು ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ನಾಗಲಕ್ಷ್ಮೀ(7) ಮೃತ ಬಾಲಕಿಯಾಗಿದ್ದಾಳೆ. ಪಕ್ಕದ ಮನೆಯ ಮಹಿಳೆಯಿಂದಲೇ ಅಪಘಾತ ಸಂಭವಿಸಿದೆ. ಬ್ರೇಕ್‌ ತುಳಿಯಲು ಹೋಗಿ ಎಕ್ಸಲೇಟರ್ ತುಳಿದು ಕಾರಣ ಮನೆ ಮುಂದೆ ಆಟವಾಡ್ತಿದ್ದ ಬಾಲಕಿ ಮೇಲೆ ಕಾರು ಹತ್ತಿದೆ. ಈ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮಹಿಳೆಯನ್ನ ವಶಕ್ಕೆ ಪಡೆದು ಕಾರು ಸೀಜ್ ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಲಕ್ನೋ: ಉತ್ತರಪ್ರದೇಶದ ಶಹಜಹಾನ್‌ಪುರದಲ್ಲಿ ಕಲ್ಲು ಬಂಡೆ ತುಂಬಿದ್ದ ಟ್ರಕ್ಕೊಂದು ನಿಂತಿದ್ದ ಬಸ್‌ ಗೆ ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಖುತಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಗೋಲಾ ಬೈಪಾಸ್ ರಸ್ತೆಯಲ್ಲಿ ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. ಸೀತಾಪುರದಿಂದ ಪೂರ್ಣಗಿರಿಗೆ ತೆರಳುತ್ತಿದ್ದ ಖಾಸಗಿ ಬಸ್ ಶಹಜಾನ್‌ ಪುರದ ಧಾಬಾದಲ್ಲಿ ನಿಂತಿತ್ತು. ಕಲ್ಲು ಬಂಡೆ ತುಂಬಿದ್ದ ಟ್ರಕ್ ಬಸ್‌ ಗೆ ಡಿಕ್ಕಿ ಹೊಡೆದು ಅದರ ಮೇಲೆ ಪಲ್ಟಿಯಾದ ಪರಿಣಾಮ ಬಸ್ ‌ನಲ್ಲಿದ್ದ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ದೆಹಲಿಯ ಬೇಬಿ ಕೇರ್​ ಸೆಂಟರ್​ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು,  7 ನವಜಾತ ಶಿಶುಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.  12 ಶಿಶುಗಳನ್ನು ರಕ್ಷಿಸಲಾಗಿದ್ದು, ಅದರಲ್ಲಿ 6 ಶಿಶುಗಳು ಸಾವನ್ನಪ್ಪಿವೆ. ಅದೇ ಸಮಯದಲ್ಲಿ, 5 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶನಿವಾರ(ಮೇ 25) ರಾತ್ರಿ 11.32 ಕ್ಕೆ ಪೂರ್ವ ದೆಹಲಿಯ ವಿವೇಕ್ ವಿಹಾರ್ ‌ನಲ್ಲಿರುವ ಶಿಶುಪಾಲನಾ ಕೇಂದ್ರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ 9 ಅಗ್ನಿಶಾಮಕ ದಳಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ, ಎಂದು ಸ್ವತಃ ಅಗ್ನಿಶಾಮಕ ಇಲಾಖೆ ಮಾಹಿತಿ ನೀಡಿದೆ. 12 ನವಜಾತ ಶಿಶುಗಳನ್ನು ಕಟ್ಟಡದಿಂದ ಹೊರತೆಗೆಯಲಾಯಿತು, ಆದರೆ ಚಿಕಿತ್ಸೆ ವೇಳೆ 6 ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಏನು ಎಂಬ ಬಗ್ಗೆ ಇನ್ನೂ ಮಾಹಿತಿ ಬಂದಿಲ್ಲ. ಎಲ್ಲಾ ಆಯಾಮದಲ್ಲೂ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಹುಡುಗಾಟ ಆಡುವುದನ್ನು ನೋಡಿದ್ದೇವೆ. ಆದರೆ ಮಂಗನಾಟ ಆಡೋಕೆ ಹೋದ್ರೆ ಭಾರೀ ತಲೆದಂಡ ತೆರಬೇಕಾಗುತ್ತದೆ ಅನ್ನುವುದಕ್ಕೆ ಬಸ್ ಡ್ರೈವರ್ ಹಾಗೂ ಕಂಡೆಕ್ಟರ್ ಸಾಕ್ಷಿಯಾಗಿದ್ದಾರೆ. ಏನಿದು ಘಟನೆ..?: ಮೇ23ಕ್ಕೆ ವಿಡಿಯೋವೊಂದು ಭಾರಿ ವೈರಲ್ ಆಗಿತ್ತು. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ವೊಂದರ ಡ್ರೈವರ್ ಮಳೆಯ ನಡುವೆ ಬಸ್ ತೆಗೆದುಕೊಂಡು ಹೋಗುತ್ತಿರುತ್ತಾನೆ. ಒಂದು ಕೈನಲ್ಲಿ ಛತ್ರಿ ಹಿಡಿದುಕೊಂಡು ಮತ್ತೊಂದು ಕೈನಲ್ಲಿ ಸ್ಟೇರಿಂಗ್ ಹಿಡಿದುಕೊಂಡು ಡ್ರೈವರ್ ಚಾಲನೆ ಮಾಡುತ್ತಿದ್ದ ವಿಡಿಯೋ ವೈರಲ್ ಆಗಿತ್ತು. ಸದ್ಯ ಈ ವಿಡಿಯೋ ಇಬ್ಬರ ನೌಕರಿಗೂ ಕುತ್ತು ತಂದಿದೆ. ಮೋಜಿಗಾಗಿ ಮಾಡಿದ ವಿಡಿಯೋದಿಂದ ಇಬ್ಬರು ತಮ್ಮ ಕೆಲಸವನ್ನೇ ಕಳೆದುಕೊಳ್ಳುವಂತಾಗಿದೆ. ಈ ವಿಡಿಯೋ ಹೊರ ಬರುತ್ತಿದ್ದ ಹಿರಿಯ ಅಧಿಕಾರಿಗಳು ಬಸ್ ಸೋರುತ್ತಿದ್ದದ್ದು ನಿಜವೇ ಅನ್ನುವುದನ್ನು ಪರಿಶೀಲಿಸುವುದಕ್ಕೆ ತಂಡವನ್ನು ರಚಿಸಿದ್ದಾರೆ. “ಬಸ್ ಪರೀಕ್ಷಿಸಿದಾಗ ಎಲ್ಲವೂ ಸರಿ ಇತ್ತು. ಮತ್ತೆ ನೀವ್ಯಾಕೆ ಹೀಗೆ ವಿಡಿಯೋ ಮಾಡಿದ್ರಿ ಅಂದಿದ್ದಕ್ಕೆ ಮನೋರಂಜನೆಗಾಗಿ ಚಿತ್ರೀಕರಣ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ” ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖೀಸಲಾಗಿದೆ. ವರದಿ ಆಧಾರದ…

Read More

ಸಿನಿಮಾ ಇಂಡಸ್ಟ್ರಿ ಅಂದ ಮೇಲೆ ಅಲ್ಲೊಂದು ಸಮ್ ಥಿಂಗ್ ಸ್ಪೆಶಲ್ ಇದ್ದೇ ಇರುತ್ತದೆ. ಅದರಲ್ಲೂ ನಟಿಯನ್ನು ಕೆಲವರು ಕೆಟ್ಟದಾಗಿ ನಡೆಸಿಕೊಳ್ತಾರೆ ಅನ್ನುವ ಮಾತುಗಳು ಆಗಾಗ್ಗೆ ಕೇಳಿ ಬಂದಿವೆ. ಈ ನಡುವೆ ಖ್ಯಾತ ನಟಿಯೊಬ್ಬರು ‘ಹಣಕ್ಕೆ ಆಸೆ ಪಟ್ಟು ಕೆಟ್ಟ ಪಾತ್ರ, ಸಿನಿಮಾಗಳನ್ನ ಮಾಡಿಬಿಟ್ಟೆ, ಈಗ ನಂಗೆ ಅಸಹ್ಯ ಆಗ್ತಿದೆ’ ಅಂತ ಹೇಳಿಕೊಂಡು ಅಚ್ಚರಿ ಮೂಡಿಸಿದ್ದಾರೆ. ನಾನು ಕೆಲಸ ಅರಸಿಕೊಂಡು ಮುಂಬೈಗೆ ದಿಲ್ಲಿಯಿಂದ ಬಂದೆ. ಆದರೆ ಮುಂಬೈ ನನಗೆ ಯಾಕೋ ಹಿಡಿಸಲೇ ಇಲ್ಲ. ಮುಂಬೈ ಬಿಟ್ಟು ಮರಳಿ ದಿಲ್ಲಿಗೆ ಹೋಗಿ ನನ್ನ ಪಿಚ್ ಡಿ ಅಧ್ಯಯನ ಮುಂದುವರಿಸಬೇಕು ಅಂದುಕೊಂಡಿದ್ದೆ. ಆದರೆ ಈ ನಗರ ನನ್ನನ್ನು ಕೈ ಬಿಡಲಿಲ್ಲ. ಆರಂಭದಲ್ಲಿ ನನಗೆ ತುಂಬಾ ಹಣದ ಅವಶ್ಯಕತೆ ಇತ್ತು. ನನಗೆ ಬೇರೆ ದಾರಿ ಇರಲಿಲ್ಲ. ಹೀಗಾಗಿ ಕೆಟ್ಟ ಸಿನಿಮಾ, ಕೆಟ್ಟ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಈ ಸಿನಿಮಾಗಳು ತೆರೆ ಕಾಣುವ ಮೊದಲು ಇದು ತೆರೆಗೆ ಬಾರದಿರಲಿ ಎಂದು ಪ್ರಾರ್ಥಿಸಿಕೊಳ್ಳುತ್ತಿದ್ದೆ ಎಂದು ನಟಿ ನೀನಾ ಗುಪ್ತಾ ತಿಳಿಸಿದ್ದಾರೆ. 1982ರಿಂದ…

Read More