Subscribe to Updates
Get the latest creative news from FooBar about art, design and business.
- ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
- ಪಲ್ಸ್ ಪೋಲಿಯೋ ಲಸಿಕೆ: ತುಮಕೂರಿನಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಿ, ಅಲೆಮಾರಿ ಸಮುದಾಯ ಕೇಂದ್ರೀಕರಿಸಿ: ಜಿಲ್ಲಾಧಿಕಾರಿ ಸೂಚನೆ
- ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಆಯ್ಕೆ ಬಹುತೇಕ ಖಚಿತ?
- ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
- ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್ ಸೆಟ್ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
- ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
- ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
Author: admin
ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯಲ್ಲಿ ಊರಲ್ಲಿ ಗೌರವ ಸಿಗಲಿ ಎಂದು ಯುವಕನೋರ್ವ ನಕಲಿ ಅಧಿಕಾರಿ ವೇಶ ಹಾಕಿದ ಘಟನೆ ಜರುಗಿದೆ. ಸಂಗಮೇಶ್ ಲಕ್ಕಪ್ಪಗೋಳ ಎಂಬಾತ ಇಂಟಲಿಜೆನ್ಸಿ ಬ್ಯೂರೋ ಅಧಿಕಾರಿ ವೇಶ ಹಾಕಿದ್ದಾನೆ. ಇಂಟಲಿಜೆನ್ಸ್ ಬ್ಯೂರೋದ ನಕಲಿ ಐಡಿ ಕಾರ್ಡ್, ಕ್ಯಾಪ್ ಹೊಂದಿದ್ದನು. ಬೈಕ್ ಮೇಲೂ ಐಬಿ ಲೋಗೋ ಹಾಕಿಕೊಂಡಿದ್ದ. ಟಾಯ್ ಗನ್, ವಾಕಿಟಾಕಿ ಇಟ್ಟುಕೊಂಡು ತಾನೊಬ್ಬ ಇಂಟಲಿಜೆನ್ಸಿ ಬ್ಯೂರೋ ಆಫಿಸರ್ ಎಂಬಂತೆ ಈತ ಪೋಸ್ ಕೊಟ್ಟಿದ್ನಂತೆ. ಸದ್ಯ ಸಂಗಮೇಶನನ್ನು ಬನಹಟ್ಟಿ ಪೊಲೀಸರು ಬಂಧಿಸಿದ್ದಾರೆ. ಯುವಕನ ಜೊತೆಗೆ ಇನ್ನೂ ಎಂಟು ಜನ ಯುವಕರಿದ್ದಾರೆಂಬ ಗುಮಾನಿ ಮೂಡಿದೆ. ಯುವಕನನ್ನು ತನಿಖೆಗೊಳಪಡಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಅಪ್ರಾಪ್ತರು ವಾಹನ ಚಲಾಯಿಸುವುದು ಅಪರಾಧವಾಗಿದ್ದು, ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಪೋಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಎಚ್ಚರಿಕೆ ನೀಡಿದ್ದಾರೆ. ಶನಿವಾರ ನಗರದ ಎಲೆಕ್ಟ್ರಾನಿಕ್ ಸಿಟಿಯ ಐಐಐಟಿ ಕಾಲೇಜು ಆಡಿಟೋರಿಯಂನಲ್ಲಿ ನಡೆದ ಮಾಸಿಕ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ʼ18 ವರ್ಷಕ್ಕಿಂತ ಕೆಳಗಿನ ಬಾಲಕ, ಬಾಲಕಿಯರು ಎಷ್ಟೇ ಬುದ್ಧಿವಂತರಿದ್ದರೂ ಅವರು ಮೊಬೈಲ್, ವಾಹನ ಸೇರಿದಂತೆ ಇನ್ನಿತರ ತಂತ್ರಜ್ಞಾನ ಬಳಕೆ ಮಾಡಿದರೂ ಅವರಿಗೆ ಪ್ರಬುದ್ಧತೆ ಇರುವುದಿಲ್ಲʼ ಎಂದರು. ಒಬ್ಬ ವ್ಯಕ್ತಿಗೆ 18 ವರ್ಷದ ನಂತರ ಡ್ರೈವಿಂಗ್ ಲೈಸೆನ್ಸ್ ಕೊಡಲು ವೈಜ್ಞಾನಿಕ ಕಾರಣಗಳಿವೆ. ಅಪ್ರಾಪ್ತರಿಗೆ ಮೆದುಳು ಹೆಚ್ಚು ಪ್ರಬುದ್ಧತೆ ಹೊಂದಿರುವುದಿಲ್ಲ. ನಮ್ಮ ಮಕ್ಕಳು ಹೆಚ್ಚು ಬುದ್ಧಿವಂತರು. 10 ವರ್ಷಕ್ಕೇ ದ್ವಿಚಕ್ರ ವಾಹನ, 15 ವರ್ಷಕ್ಕೆ ಕಾರು ಚಲಾಯಿಸುತ್ತಾರೆ ಎಂದು ಪೋಷಕರು ತಮ್ಮ ಮಕ್ಕಳಿಗೆ ವಾಹನದ ಕೀ ಕೊಟ್ಟರೆ ಅವರ ಕೈಗೆ ಆಯುಧ ಕೊಟ್ಟಂತಾಗುತ್ತದೆ ಎಂದು ಅವರು ತಿಳಿಸಿದರು. ಸಾರ್ವಜನಿಕ ಸ್ಥಳಗಳಲ್ಲಿ ಅಪ್ರಾಪ್ತರು ವಾಹನ ಚಲಾಯಿಸಿದರೆ ಇದನ್ನು…
ಬಿಟ್ ಕಾಯಿನ್ ಹಗರಣ ಪ್ರಕರಣದ ಇಬ್ಬರು ಆರೋಪಿಗಳ ವಿರುದ್ಧ ಕೋಕಾ(ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ) ಅಡಿ ಎಸ್ಐಟಿ ಅಧಿಕಾರಿಗಳು ಕ್ರಮ ಕೈಗೊಂಡಿರುವುದಾಗಿ ವರದಿಯಾಗಿದೆ. 2017ರಲ್ಲಿ ತುಮಕೂರು ಸಿಇಎನ್ ಠಾಣೆಯಲ್ಲಿ ದಾಖಲಾಗಿದ್ದ ಯುನೋ ಕಾಯಿನ್ ಕಳ್ಳತನ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ತಂಡ, ಆರೋಪಿಗಳಾದ ಶ್ರೀಕೃಷ್ಣ ಯಾನೆ ಶ್ರೀಕಿ ಹಾಗೂ ರಾಬಿನ್ ಖಂಡೇವಾಲಾನನ್ನು ಕೋಕಾ ಕಾಯ್ದೆಯಡಿ ಜೈಲಿಗಟ್ಟಲು ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿದು ಬಂದಿದೆ. ಬಿಟ್ ಕಾಯಿನ್ ಅಕ್ರಮ ಪ್ರಕರಣದಲ್ಲಿ ಎಸ್ಐಟಿ ತನಿಖೆಗೆ ಹಾಜರಾಗದೆ ಪರಾರಿಯಾಗಿದ್ದ ಶ್ರೀಕಿಯನ್ನು ಮೇ 7ರಂದು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಆತನ ಸಹವರ್ತಿ ರಾಬಿನ್ ಖಂಡೇವಾಲಾನನ್ನು ರಾಜಸ್ಥಾನದಲ್ಲಿ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಇದೀಗ ಇಬ್ಬರು ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಕ್ರಮ ಕೈಗೊಂಡು, ಜೈಲಿ ಕಳುಹಿಸಲು ಮುಂದಾಗಿದ್ದಾರೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ. ಕೋಕಾ ಕಾಯ್ದೆಯೆಂದರೆ?: ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ಹೆಸರೇ ಸೂಚಿಸುವಂತೆ ಪದೇ ಪದೇ ಸಂಘಟಿತ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವ ಆರೋಪಿಗಳನ್ನು…
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಎಚ್.ಡಿ. ಕುಮಾಸ್ವಾಮಿ, “ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯ ಮೇಲೆ ನೀವು ಕೂತಿದ್ದಿರೋ ಅಥವಾ ಊಸರವಳ್ಳಿ ಏನಾದರೂ ಕೂತಿದೆಯೇ?. ನನಗಂತೂ ಅನುಮಾನ, ಇಷ್ಟು ಬಣ್ಣಗೇಡಿ ವರ್ತನೆಯನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿರುವ ಅವರು, “ಸಿದ್ದರಾಮಯ್ಯನವರೇ ಮೈಸೂರಿನಲ್ಲಿ ಇವತ್ತು ಬೆಳಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದೀರಿ.“ನೊಂದ ಮಹಿಳೆಯರ ವಿಡಿಯೋಗಳನ್ನು ಜಾಲತಾಣಗಳಲ್ಲಿ ಹಂಚುವುದು, ಹರಡುವುದು ಮುಖ್ಯವಲ್ಲ. ಅದು ಅಪರಾಧವೂ ಅಲ್ಲ!. ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡಿದ್ದು ದೊಡ್ಡ ಅಪರಾಧ ಎನ್ನುವುದು ಯಾವ ಸೆಕ್ಷನ್ನಲ್ಲಿದೆ?. ಅದನ್ನು ಯಾವ ಸೆಕ್ಷನ್ ನಲ್ಲಿ ಉಲ್ಲೇಖಿಸಿದ್ದಾರೆ?. ಕುಮಾರಸ್ವಾಮಿ ಪ್ರಕಾರ ಯಾವುದಾದರೂ ಹೊಸ ಸೆಕ್ಷನ್ ಇದ್ದರೆ ಹೇಳಲಿ” ಎಂದು ನನಗೆ ಪ್ರಶ್ನೆ ಮಾಡಿದ್ದೀರಿ. “ನಿಜ, ನೀವು ಸ್ವಯಂಘೋಷಿತ ಸಂವಿಧಾನ ತಜ್ಞರು!. ಪ್ರ(ಕು)ಖ್ಯಾತ ಮಾಜಿ ವಕೀಲರು. ಹಾಲಿ ಮುಖ್ಯಮಂತ್ರಿಗಳು. ಆದರೂ ನಿಮ್ಮ ಪ್ರಶ್ನೆಗೆ ಉತ್ತರ…
ಹೊಸದಿಲ್ಲಿ: ವಿಪಕ್ಷಗಳನ್ನು ನನ್ನ ಶತ್ರುಗಳು ಎಂದು ಪರಿಗಣಿಸಿಲ್ಲ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ನಾನು ವಿಪಕ್ಷಗಳೊಂದಿಗೆ ಸಹಭಾಗಿತ್ವದ ಆಧಾರದಲ್ಲಿ ಕೆಲಸ ಮಾಡಲು ಬಯಸುತ್ತೇನೆ ಎಂದು ಹೇಳಿದ್ದಾರೆ. NDTV ಸುದ್ದಿ ಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ, “ನಾನೆಂದಿಗೂ ಸವಾಲು ಹಾಕುವುದಿಲ್ಲ ಹಾಗೂ ನನಗೆ ಅವರೆಲ್ಲರನ್ನೂ ಒಟ್ಟಿಗೆ ಕರೆದೊಯ್ಯಬೇಕಿದೆ. ನಾನು ಯಾರನ್ನೂ ಕಡೆಗಣಿಸುವುದಿಲ್ಲ. ಅವರು 60-70 ವರ್ಷಗಳ ಕಾಲ ಸರಕಾರ ರಚಿಸಿದ್ದಾರೆ. ಅವರು ಮಾಡಿರುವ ಕೆಲಸಗಳಿಂದ ನಾನು ಉತ್ತಮ ಸಂಗತಿಗಳನ್ನು ಕಲಿಯಲು ಬಯಸುತ್ತೇನೆ. ನಾನು ವಿಪಕ್ಷಗಳನ್ನು ನನ್ನ ಶತ್ರುಗಳು ಎಂದು ಪರಿಗಣಿಸಿಲ್ಲ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನಾನು ನನ್ನ ಅನುಭವಿ ವಿಪಕ್ಷ ನಾಯಕರ ರಚನಾತ್ಮಕ ಟೀಕೆಗಳು ಹಾಗೂ ಸಲಹೆಗಳಿಗೆ ಮುಕ್ತವಾಗಿದ್ದೇನೆ ಎಂದೂ ಅವರು ಹೇಳಿದ್ದಾರೆ. ಇದೇ ವೇಳೆ, ವಿರೋಧ ಪಕ್ಷಗಳ ದಾಳಿ, ತಮ್ಮ ಅಭಿವೃದ್ಧಿ ತಾತ್ವಿಕತೆ ಹಾಗೂ ಸದ್ಯ ನಡೆಯುತ್ತಿರುವ ಲೋಕಸಭಾ ಚುನಾವಣೆ ಸೇರಿದಂತೆ ವೈವಿಧ್ಯಮಯ ವಿಷಯಗಳ ಕುರಿತು ಮಾತನಾಡಿರುವ ಪ್ರಧಾನಿ ಮೋದಿ, “ನಾನು ಅವಿನಾಶಿ, ನಾನು ಕಾಶಿಯವನು (ವಾರಣಾಸಿ), ಕಾಶಿಯನ್ನು ನಾಶ ಮಾಡಲು…
ಬೆಂಗಳೂರು: ಕುಡಿದು ಬರ್ತಾನೆ, ಮಲಗಿದ್ದವರ ತಲೆ ಮೇಲೆ ಕಲ್ಲು ಎಸೆದು ಸಾಯಿಸ್ತಾನೆ. ಕೊಲೆಗಾರನನ್ನು ನಗರದ ಬನಶಂಕರಿ ಪೊಲೀಸರು ಕಾರ್ಯಾಚರಣೆ ನಡೆಸಿ ನಟೋರಿಯಸ್ ನ್ನು ಅರೆಸ್ಟ್ ಮಾಡಿದ್ದಾರೆ. ಬನಶಂಕರಿಯ ಗಿರೀಶ್ ಬಂಧಿತ ಆರೋಪಿ. ಆರೋಪಿಯು ಒಂದೇ ವಾರದಲ್ಲಿ ಎರಡು ಕೊಲೆ ಮಾಡಿದ್ದ. ಈ ಕೊಲೆಗಾರನ ಕೃತ್ಯ ಕೇಳಿದರೆ ಗಾಬರಿ ಆಗೋದು ಗ್ಯಾರಂಟಿ. ಈತ ಕುಡಿದು ಬರ್ತಾನೆ, ಬೀದಿ ಬದಿ ಮಲಗಿದ್ದವರ ತಲೆ ಮೇಲೆ ಕಲ್ಲು ಎಸೆದು ಸಾಯಿಸುತ್ತಾನೆ. ಅಲ್ಲಿಂದ ಪರಾರಿಯಾಗ್ತಾನೆ! ಒಂದೇ ವಾರದಲ್ಲಿ ಆರೋಪಿ ಗಿರೀಶ್ ಎರಡು ಕೊಲೆ ಮಾಡಿದ್ದಾನೆ. ಮೇ.12 ರಂದು ಜಯನಗರ 7ನೇ ಬಡಾವಣೆಯಲ್ಲಿ ವ್ಯಕ್ತಿಯೊಬ್ಬರ ಕೊಲೆಯಾಗಿತ್ತು. ಮೃತದೇಹ ನೋಡಿದಾಗ ಯಾರೋ ಎಳೆದು ತಂದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದಂತೆ ಕಂಡಿತ್ತು. ಘಟನೆ ಸಂಬಂಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದಾದ ಬಳಿಕ ಮೇ.18 ರಂದು ಸಿಟಿ ಮಾರ್ಕೆಟ್ ಹಿಂಭಾಗದ ಕಾಂಪ್ಲೆಕ್ಸ್ ನಲ್ಲಿ ಇದೇ ರೀತಿಯೇ ಮತ್ತೊಂದು ಕೊಲೆ ಆಗಿತ್ತು. ವ್ಯಕ್ತಿಯೋರ್ವನ ತಲೆ ಮೇಲೆ…
ಬೆಂಗಳೂರು: ಹಿರಿಯ ಪತ್ರಕರ್ತ ಆರ್. ಜಯಕುಮಾರ್(64)ಅವರು ಅನಾರೋಗ್ಯದಿಂದ ಶನಿವಾರ ಮಧ್ಯಾಹ್ನ ಮೃತಪಟ್ಟಿದ್ದಾರೆ. ಕೊಡಗಿನವರಾದ ಜಯಕುಮಾರ್, ಚಳವಳಿ ಮೂಲಕವೇ ಪತ್ರಕರ್ತರಾಗಿ ರೂಪುಗೊಂಡವರು. ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ ಪತ್ರಿಕೆ, ಉದಯ ಟಿವಿ ಸೇರಿದಂತೆ ಹಲವಾರು ಪತ್ರಿಕೆಗಳಲ್ಲಿ ರಾಜ್ಯದ ನಾನಾ ಭಾಗದಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ವೃತ್ತಿ ಮಾಡಿದ್ದರು. ಜನಪರ ಹೋರಾಟದಲ್ಲಿ ಭಾಗವಹಿಸಿದ್ದ ಕಾಮ್ರೆಡ್ ಜಯಕುಮಾರ್ ಅವರು ಇತ್ತೀಚೆಗೆ ʼಗಾಂಧಿ ಮರೆತ ನಾಡಿನಲ್ಲಿʼ ಮತ್ತು ʼಕಾಡು ಹಾದಿಯ ಬೆಳಕಿನ ಜಾಡಿನಲ್ಲಿʼ ಎಂಬ ಎರಡು ಪುಸ್ತಕಗಳನ್ನು ಹೊರತಂದಿದ್ದರು. ಇಂದು ಸಂಜೆ ಅವರ ಮೃತದೇಹವನ್ನು ಬೆಂಗಳೂರು ಮೆಡಿಕಲ್ ಕಾಲೇಜಿಗೆ ದಾನ ಮಾಡಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿದೆ. ಕೆಯುಡಬ್ಲೂಜೆ ಸಂತಾಪ: ಹಿರಿಯ ಮತ್ತು ಕ್ರಿಯಾಶೀಲ ಪತ್ರಕರ್ತರಾಗಿದ್ದ ಆರ್. ಜಯಕುಮಾರ್ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು (ಕೆಯುಡಬ್ಲ್ಯೂಜೆ) ಎಚ್.ಎಸ್. ದೊರೆಸ್ವಾಮಿ ಅವರ ಹೆಸರಿನಲ್ಲಿ ಕೊಡ ಮಾಡುವ ಪ್ರಶಸ್ತಿಗೆ ಆರ್. ಜಯಕುಮಾರ್ ಭಾಜನರಾಗಿದ್ದರು. ಅನಾರೋಗ್ಯದ…
ಬೆಂಗಳೂರು: ಅಪ್ರಾಪ್ತ ಬಾಲಕಿಯ ಜೊತೆ ಅನುಚಿತವಾಗಿ ವರ್ತಿಸಿದ ಯುವಕನಿಗೆ ಸ್ಥಳೀಯರು ಗೂಸಾ ಕೊಟ್ಟಿರುವ ಘಟನೆ ಬ್ಯಾಡರಹಳ್ಳಿ ಬಳಿ ಇರುವ ಅನುಪಮ ಆಸ್ಪತ್ರೆ ಬಳಿ ಜರುಗಿದೆ. ಗಾಂಜಾ ಅಮಲಿನಲ್ಲಿ ಅಪ್ರಾಪ್ತ ಬಾಲಕಿಯ ಜೊತೆ ಯುವಕ ಅನುಚಿತ ವರ್ತನೆ ಮಾಡ್ತಿದ್ದ. ಆಸ್ಪತ್ರೆಯ ಮುಂಭಾಗ ಅಪ್ರಾಪ್ತೆ ಜೊತೆ ಅಸಭ್ಯವಾಗಿ ವರ್ತನೆ ಮಾಡಿದ್ದಾನೆಂಬ ಆರೋಪ ಕೇಳಿ ಬಂದಿದೆ. ಯುವಕನ ಕುಕೃತ್ಯ ನೋಡಿದ್ದ ಸ್ಥಳೀಯರು ತರಾಟೆ ತೆಗೆದುಕೊಂಡು ಯುವಕನನ್ನ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಕೃತ್ಯದ ಬಗ್ಗೆ ದೂರು ದಾಖಲು ಮಾಡಲು ಯಾರೂ ಮುಂದೆ ಬಾರದ ಹಿನ್ನೆಲೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದು, ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಇಂದು ಚೆನ್ನೈನ ಎಂಎ ಚಿದಂಬರಂ(ಚೆಪಾಕ್) ಸ್ಟೇಡಿಯಂನಲ್ಲಿ KKR vs SRH ನಡುವೆ ಫೈನಲ್ ಪಂದ್ಯ ನಡೆಯಲಿದೆ. ಅಂತಿಮ ಹಣಾಹಣಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (KKR) ಮತ್ತು ಸನ್ ರೈಸರ್ಸ್ ಹೈದಾರಾಬಾದ್(SRH) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಐಪಿಎಲ್ ಸೀಸನ್ 17 ಗೆ ತೆರೆ ಬೀಳಲಿದೆ. ವಿಶೇಷ ಎಂದರೆ ಕೊಲ್ಕತ್ತಾ ನೈಟ್ ರೈಡರ್ಸ್ ಈವರೆಗೆ 2 ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ಇದೀಗ ಮೂರನೇ ಸಲ ಕಪ್ ಎತ್ತಿ ಹಿಡಿಯುವ ವಿಶ್ವಾಸದಲ್ಲಿದೆ. ಅತ್ತ ಹೈದರಾಬಾದ್ ಫ್ರಾಂಚೈಸಿ ಕೂಡ ಈಗಾಗಲೇ 2 ಸಲ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಇದೀಗ ಮೂರನೇ ಬಾರಿ ಟ್ರೋಫಿ ಗೆಲ್ಲುವ ಇರಾದೆಯಲ್ಲಿದೆ. ಇಂದೇ ಅರ್ಜಿ ಸಲ್ಲಿಸಿ. . ಇನ್ನು ಉಭಯ ತಂಡಗಳು ಈವರೆಗೆ 27 ಬಾರಿ ಮುಖಾಮುಖಿಯಾಗಿದ್ದು, ಈ ವೇಳೆ ಕೆಕೆಆರ್ ತಂಡ 18 ಬಾರಿ ಜಯ ಸಾಧಿಸಿದರೆ, ಎಸ್ ಆರ್ ಹೆಚ್ ತಂಡ ಗೆದ್ದಿರುವುದು ಕೇವಲ 9 ಬಾರಿ ಮಾತ್ರ. ಅದರಲ್ಲೂ ಈ ಸಲ ಆಡಲಾದ ಎರಡೂ ಪಂದ್ಯಗಳಲ್ಲೂ ಕೊಲ್ಕತ್ತಾ…
ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ಅಪರೂಪದ ಘಟನೆಯೊಂದು ನಡೆದಿದೆ. ದುಡ್ಡು ಕೊಟ್ಟು ಪೊರಕೆ ಮೊರದಲ್ಲಿ ಏಟು ತಿನ್ನಲು ಭಕ್ತರು ಮುಗಿಬಿದ್ದಿರುವಂತಹ ಅಪರೂಪದ ಘಟನೆಯೊಂದು ಜರುಗಿದೆ. ದ್ರೌಪತಮ್ಮ ಕರಗದ ಅಂಗವಾಗಿ ನಡೆಯುವ ಕೋಟೆ ಜಗಳ ಎಂಬ ವಿಶಿಷ್ಟ ಧಾರ್ಮಿಕ ಆಚರಣೆಯಲ್ಲಿ ಕಾಳಿ ವೇಷಧಾರಿಯಿಂದ ಭಕ್ತರಿಗೆ ಪೊರಕೆ ಮೊರದೇಟು ನೀಡಲಾಗಿದೆ. ಬಲಿ ನೀಡಲಾದ ಮೇಕೆಯ ಶ್ವಾಸಕೋಶವನ್ನು ಬಾಯಿಯಲ್ಲಿ ಕಚ್ಚಿಕೊಳ್ಳುವ ಕಾಳಿ ವೇಶಧಾರಿ, ಸಿಕ್ಕ ಸಿಕ್ಕವರಿಗೆ ಪೊರಕೆ, ಮೊರದಲ್ಲಿ ಹೊಡೆಯುವ ದೃಶ್ಯ ಮಾತ್ರ ರೋಮಾಂಚಕಾರಿ ಆಗಿರುತ್ತದೆ. ಕೋಟೆ ಜಗಳಕ್ಕಾಗಿ ನೂರಾರು ಮಂದಿ ಜನರು ಜಮಾಯಿಸಿದ್ದರು. ಈ ಜಗಳದಲ್ಲಿ ಕಾಳಿ ದೇವಿಯ ಆವಾಹನೆಗೆ ವ್ಯಕ್ತಿ ಒಳಗಾಗುತ್ತಾರೆ. ಕರಗದ ಗುಡಿಯಲ್ಲಿ ಗುಡಿಸಿದ ಪೊರಕೆ, ಮೊರದಲ್ಲಿ ಹೊಡೆಸಿಕೊಂಡರೇ ಒಳ್ಳೆದಾಗುತ್ತೆ, ನಕಾರಾತ್ಮಕ ಅಂಶಗಳು ನಾಶವಾಗುತ್ತದೆ ಎಂಬುದು ಭಕ್ತರ ನಂಬಿಕೆ. ಹೀಗಾಗಿ ಪೊರಕೆ ಮೊರದಲ್ಲಿ ಹೊಡೆಸಿಕೊಳ್ಳಲು ಮುಗಿಬಿದ್ದಿದ್ದರು ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296