Author: admin

ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಗುವೊಂದು ಕೆಮ್ಮಿದ ಕಾರಣ ಜೀವ ಉಳಿದ ಘಟನೆ ಘಟನೆ ಬಾಗಲಕೋಟೆ ಜಿಲ್ಲೆಯ ಇಳಕಲ್ ನಡೆದಿದೆ. ಬದುಕಿದ ಬಳಿಕ ಆಸ್ಪತ್ರೆಯ ಬದಲು ಮುರ್ತುಜಾ ಖಾದ್ರಿ ಪವಾಡ ಎಂದು ನಂಬಿ ಪೋಷಕರು ಮಗುವನ್ನು ದರ್ಗಾಕ್ಕೆ ಕರೆದುಕೊಂಡು ಹೋದ್ದರು, ಬಳಿಕ ಚಿಕಿತ್ಸೆ ನೀಡಲಾಗಿದೆ. ಬಸವರಾಜ ಭಜಂತ್ರಿ ಹಾಗೂ ನೀಲಮ್ಮ ದಂಪತಿಯ 13 ತಿಂಗಳ ದ್ಯಾಮಣ್ಣ ಭಜಂತ್ರಿ ಎಂಬ ಮಗು ಎಂದು ಗುರುತಿಸಲಾಗಿದೆ. ಉಸಿರಾಟ ತೊಂದರೆ ಸೇರಿದಂತೆ ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಮಗುವನ್ನು ಕಳೆದ ನಾಲ್ಕೈದು ದಿನಗಳ ಹಿಂದೆ ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಮಗು ಬದುಕೋದು ಕಷ್ಟ ಎಂದು ಹೇಳಿದ್ದರು. ಹೀಗಾಗಿ ವಾಪಸ್ ವಾಹನದಲ್ಲಿ ಬರುವಾಗ ಮಗುವಿಗೆ ಪ್ರಜ್ಞೆ ತಪ್ಪಿದೆ ಎನ್ನಲಾಗಿದೆ. ಪ್ರಜ್ಞೆ ತಪ್ಪಿದ ಮಗು ಮೃತಪಟ್ಟಿದೆ ಎಂದು ಭಾವಿಸಿ ಪೋಷಕರು ಸಂಬಂಧಿಕರಿಗೆ ಸಾವಿನ ಸುದ್ದಿ ಮುಟ್ಟಿಸಿದ್ದಾರೆ. ಅದರಂತೆ ಸಂಬಂಧಿಕರು ಅಂತ್ಯಸಂಸ್ಕಾರಕ್ಕೆ ಅಂತ ಬಂದಿದ್ದು, ಸಿದ್ಧತೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಗು ಕೆಮ್ಮಿದೆ. ಈ ವೇಳೆ ಮಗು ಬದುಕಿದೆ ಎಂದು…

Read More

ಮಲಯಾಳಂನಲ್ಲಿ ಇತ್ತೀಚೆಗೆ ತೆರೆಕಂಡ ‘ಮಂಜುಮ್ಮೆಲ್ ಬಾಯ್ಸ್’ ಚಿತ್ರ ಭಾರೀ ಜನಮೆಚ್ಚುಗೆ ಪಡೆಯುತ್ತಿದ್ದಂತೆ ಅದಕ್ಕೆ ಕಾಫಿರೈಟ್ ಕಂಟಕ ಎದುರಾಗಿದೆ. ಈ ಚಿತ್ರದಲ್ಲಿ ತಾವು ಸಂಗೀತ ಸಂಯೋಜನೆ ಮಾಡಿದ್ದ ‘ಕಣ್ಮಣಿ’ ಹಾಡನ್ನು ಬಳಸಲಾಗಿದೆ ಎಂದು ಸಂಗೀತ ಮಾಂತ್ರಿಕ ಇಳಯರಾಜ ಕಾನೂನು ಸಮರ ಸಾರಿದ್ದಾರೆ. ತಮ್ಮ ಹಾಡು ‘ಮಂಜುಮ್ಮೆಲ್ ಬಾಯ್ಸ್’ ಚಿತ್ರದಲ್ಲಿ ಬಳಕೆ ಆಗಿದೆ ಎಂದು ಚಿತ್ರದ ನಿರ್ಮಾಪಕರಿಗೆ ನೋಟಿಸ್ ನೀಡಿದ್ದಾರೆ. ಕಮಲ್‌ ಹಾಸನ್‌ ನಟನೆಯ ‘ಗುಣ’ ಸಿನಿಮಾ ರಿಲೀಸ್ ಆಗಿದ್ದು 1991ರಲ್ಲಿ. ಈ ಚಿತ್ರಕ್ಕೆ ಇಳಯರಾಜ ಅವರು ಸಂಗೀತ ಸಂಯೋಜನೆ ಮಾಡಿದ್ದರು. ಈ ಸಿನಿಮಾದ ‘ಕಣ್ಮಣಿ ಅನ್ಬೊಡು…’ ಹಾಡು ಗಮನ ಸೆಳೆದಿತ್ತು. ಈ ಹಾಡು ‘ಮಂಜುಮ್ಮೇಲ್ ಬಾಯ್ಸ್’ನಲ್ಲಿ ಬಳಕೆ ಆಗಿದೆ. ಆದರೆ, ಇದನ್ನು ಅಕ್ರಮವಾಗಿ ಬಳಕೆ ಮಾಡಿದ್ದಾರೆ ಎಂದು ಇಳಯರಾಜ ಆರೋಪಿಸಿದ್ದಾರೆ. ‘ಮಂಜುಮ್ಮೇಲ್ ಬಾಯ್ಸ್’ ನಿರ್ಮಾಣ ಮಾಡಿದ್ದ ಸೌಬಿನ್ ಶಾಹಿರ್ ಅವರಿಗೆ ಇಳಯರಾಜ ಕಡೆಯಿಂದ ನೋಟಿಸ್ ಹೋಗಿದೆ. ಹಾಡನ್ನು ಅಕ್ರಮವಾಗಿ ಬಳಕೆ ಮಾಡಲಾಗಿದ್ದು, ಇಳಯರಾಜ ಅವರು ಈ ಹಾಡಿನ ಸಂಪೂರ್ಣ ಹಕ್ಕನ್ನು ಹೊಂದಿದ್ದಾರೆ ಎಂದು…

Read More

ಮಹಿಳೆಯೊಬ್ಬಳು 16 ವರ್ಷದ ಹುಡುಗನ ಮೇಲೆ ಪ್ರೀತಿಯಾಗಿದ್ದು, ಹದಿಹರೆಯದವರನ್ನು ತನ್ನೊಂದಿಗೆ ವಾಸಿಸುವಂತೆ ಪೀಡಿಸಿದ್ದಾರೆ. ತನ್ನ ಬೇಡಿಕೆಯನ್ನು ಈಡೇರಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ ಎನ್ನಲಾಗಿದೆ. 26ರ ಯುವತಿ ತಾನು ಆತನೊಂದಿಗೆ ಇದ್ದು ಮದುವೆಯಾಗಲು ಬಯಸಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಯುವತಿಯು ಸಾಮಾಜಿಕ ಮಾಧ್ಯಮದ ಮೂಲಕ ಹುಡುಗನೊಂದಿಗೆ ಸಂಪರ್ಕ ಮಾಡಿದ್ದಳು. ಕಡೆಗೆ ಸೀದಾ ಹುಡುಗನ ಮನೆಗೆ ಬಂದು ಅಲ್ಲಿಯೇ ಇರುವುದಾಗಿ ಹಟ ಹಿಡಿದಿದ್ದಾಳೆ ಎನ್ನಲಾಗಿದೆ. ‘ಮಹಿಳೆ ಕಳೆದ ಕೆಲವು ದಿನಗಳಿಂದ ನಮ್ಮ ಮನೆಯಲ್ಲಿಯೇ ವಾಸವಿದ್ದು, ಆಕೆಯನ್ನು ಮನೆಯಿಂದ ಹೊರ ಹೋಗುವಂತೆ ಕೇಳಿದಾಗ ಆಕೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ’ ಎಂದು ಬಾಲಕನ ಕುಟುಂಬದವರು ದೂರಿದ್ದಾರೆ. ಪೊಲೀಸರು ಸಹ ‘ಸಮಸ್ಯೆಯನ್ನು ಪರಿಹರಿಸಲು ವಿಫಲವಾದಾಗ’ ಬಾಲಕನ ತಂದೆ ಸಹಾಯಕ್ಕಾಗಿ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅನ್ನು ಸಂಪರ್ಕಿಸಿದ್ದಾರೆ ಎಂದು ವರದಿ ತಿಳಿಸಿದೆ. ನನ್ನ ಮಗ ಓದಿಲ್ಲ, ಎಲ್ಲಿಯೂ ಕೆಲಸ ಮಾಡುತ್ತಿಲ್ಲ, ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯೊಂದಿಗೆ ಸ್ನೇಹ ಬೆಳೆಸಿದ್ದಾನೆ. ಈಗ ಆಕೆ ನಮ್ಮ…

Read More

ಜಿಲ್ಲೆಯ ಬರ ನಿರ್ವಹಣೆ, ಪೂರ್ವ ಮುಂಗಾರು ಪರಿಸ್ಥಿತಿ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು:  ರಾಜ್ಯದಲ್ಲಿನ ಬರಪರಿಸ್ಥಿತಿ, ಪೂರ್ವ–ಮುಂಗಾರು ಮತ್ತು ಮುಂಗಾರು ಋತುಮಾನ ಪರಿಸ್ಥಿತಿ ಮತ್ತು ಮಳೆಯಿಂದ ಉಂಟಾದ ಹಾನಿ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೇಸ್ವಾನ್ ಮೂಲಕ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭಾಗವಹಿಸಿ ಜಿಲ್ಲೆಯ ಬರಪರಿಸ್ಥಿತಿ, ಮುಂಗಾರು ಋತುಮಾನ ಪರಿಸ್ಥಿತಿ ಹಾಗೂ ಮಳೆಯಿಂದ ಉಂಟಾದ ಹಾನಿ ಬಗ್ಗೆ ಮಾಹಿತಿ ನೀಡಿದರು. ರಾಜ್ಯದಲ್ಲಿಯೇ ಅತಿ ಹೆಚ್ಚು 20 ಮೇವಿನ ಬ್ಯಾಂಕ್‌ ಗಳನ್ನು ಜಿಲ್ಲೆಯಲ್ಲಿ ಸ್ಥಾಪಿಸಲಾಗಿದ್ದು, ಬರ ಸಮರ್ಪಕ ನಿರ್ವಹಣೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರಲ್ಲದೆ, ಜಿಲ್ಲೆಯಲ್ಲಿ ಮೇ, 2024ರ  ಮಾಹೆಯಲ್ಲಿ , ಮೇ 21 ದಿನಾಂಕ ವರೆಗೂ  94 ಮಿ.ಮೀ. ವಾಡಿಕೆ ರೀತ್ಯಾ ಮಳೆಯಾಗಬೇಕಿದ್ದು, 150.9 ಮಿ.ಮೀ. ಮಳೆಯಾಗಿದೆ. ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆ ಚುರುಕುಗೊಂಡಿದೆ, ಜಿಲ್ಲೆಯಲ್ಲಿ ಸಾಕಷ್ಟು ಬೀಜ, ರಸಗೊಬ್ಬರ, ಕೀಟನಾಶಕಗಳ ಸಂಗ್ರಹ…

Read More

ಕೊರಟಗೆರೆ: ಯೋಧನೋರ್ವ ತನ್ನ ಮನೆಗೆ ತೆರಳಲು ದಾರಿ ಕೇಳಿದ್ದಕ್ಕೆ ಸಿಟ್ಟಿಗೆದ್ದ 5 ಜನ ಪುಡಿರೌಡಿಗಳ ತಂಡವೊಂದು ಬಿಯರ್ ಬಾಟಲಿನಿಂದ ಯೋಧನಿಗೆ ಹೊಡೆದು ಕೊಲೆಗೆ ಯತ್ನಿಸಿರುವ ಘಟನೆ ಮೇ 21ರ ಮಂಗಳವಾರ ತಡರಾತ್ರಿ ಬೈರೇನಹಳ್ಳಿಯ ಎನ್‍ ಟಿ ಆರ್ ಕಂಪರ್ಟ್ ಮತ್ತು ರೆಸ್ಟೋರೆಂಟ್‍ ನಲ್ಲಿ ನಡೆದಿದೆ. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅರಸಾಪುರ ಗ್ರಾ.ಪಂ. ವ್ಯಾಪ್ತಿಯ ಬೈರೇನಹಳ್ಳಿಯ ಎನ್‍ ಟಿಆರ್ ಕಂಪರ್ಟ್ ಮತ್ತು ಬಾರ್ ರೆಸ್ಟೋರೆಂಟ್‍ ನಲ್ಲಿ ಘಟನೆ ನಡೆದಿದೆ. ರಾಯವಾರದ ಯೋಧ ಗೋವಿಂದರಾಜು(30) ತಲೆ ಮತ್ತು ಕೈಕಾಲುಗಳಿಗೆ ತೀವ್ರ ತರದ ಗಾಯಗಳಾಗಿ ಕೊರಟಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಜಮ್ಮು ಕಾಶ್ಮಿರದ ಭಾರತೀಯ ಭೂ ಸೇನೆ ಸಿಪಾಯಿಯಾಗಿ ಜಮ್ಮುಕಾಶ್ಮಿರದ ರಜೌರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರಾಯವಾರದ ಯೋಧ ಗೋವಿಂದರಾಜು ರಜೆಯ ಪ್ರಯುಕ್ತ ತನ್ನ ಸ್ವಗ್ರಾಮಕ್ಕೆ ಆಗಮಿಸಿದ್ದಾನೆ. ಮದ್ಯಪಾನ ಮಾಡುವ ಹವ್ಯಾಸ ಇರುವ ಯೋಧ ಬೈರೇನಹಳ್ಳಿ ತೆರಳಿ ಮದ್ಯಪಾನ ಮಾಡಿ ಮನೆಗೆ ಹಿಂದಿರುಗುವ ವೇಳೆ ಯುವಕರ ಗುಂಪು ಹಲ್ಲೆ ನಡೆಸಿದೆ. ಅಣ್ಣ ದಾರಿ ಬಿಡಿ…

Read More

ಬಂಗಾಳಕೊಲ್ಲಿಯಲ್ಲಿ ತೀವ್ರವಾದ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸಲಹೆಯನ್ನು ನೀಡಿದೆ. ಒಡಿಶಾ ಮತ್ತು ಪಶ್ಚಿಮ ಬಂಗಾಳದ ಉತ್ತರ ಭಾಗದ ಕರಾವಳಿಯುದ್ದಕ್ಕೂ, ಭಾರೀ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆ ಇದೆ. ಒಡಿಶಾ ಅಲ್ಲದೆ, ಚಂಡಮಾರುತವು ಮೇ 23 ಮತ್ತು ಮೇ 27 ರ ನಡುವೆ ಮಹಾರಾಷ್ಟ್ರ ಮತ್ತು ಗುಜರಾತ್ನ ಮೇಲೂ ಪರಿಣಾಮ ಬೀರುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ಮೇ 28ರ ಸುಮಾರಿಗೆ ಗುಜರಾತ್ ಮತ್ತು ಮುಂಬೈನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ ಮತ್ತು ಇತರ ರಾಜ್ಯಗಳಲ್ಲಿ ಮೇ 23 ರವರೆಗೆ ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಚಿಕ್ಕೋಡಿ: ಮದುವೆಗೆ ವಿಳಂಬ ಆಗಿದ್ದರಿಂದ ಮನನೊಂದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ನಡೆದಿದೆ. ಶಾಂತಿನಾಥ ಸುರೇಶ ಕೇಸ್ತಿ(27) ಆತ್ಮಹತ್ಯೆ ಮಾಡಿಕೊಂಡವನಾಗಿದ್ದಾನೆ. ಹುಕ್ಕೇರಿ ಪಟ್ಟಣದಲ್ಲಿ ಸ್ವಂತ ಬೈಕ್ ಗ್ಯಾರೇಜ್ ನಡೆಸುತ್ತಿದ್ದ ಶಾಂತಿನಾಥ ಸುರೇಶ್‌ ಕೇಸ್ತಿ, ಸಾಲದ ಸುಳಿಗೆ ಸಿಲುಕಿದ್ದ. ಜತೆಗೆ ಮದುವೆಗೆ ಹೆಣ್ಣು ಸಿಗದ ಕಾರಣಕ್ಕೆ ಸುರೇಶ್‌ ಮನನೊಂದಿದ್ದ ಎನ್ನಲಾಗಿದೆ. ಇದೇ ಕಾರಣಕ್ಕಾಗಿ ಗ್ಯಾರೇಜ್ ‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಹುಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹುಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆ ನಡೆಸಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರ ಹಾಗೂ ಮುಂಗಾರು ಕೃಷಿ ಚಟುವಟಿಕೆ ಕುರಿತು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆಗಿನ ವೀಡಿಯೋ ಸಂವಾದದಲ್ಲಿ ಸಿಎಂ ಮಾತನಾಡಿ, “ಚುನಾವಣಾ ನೀತಿ ಸಂಹಿತೆ ಸಮಯ ಈ ಬಾರಿ ದೀರ್ಘವಾಗಿತ್ತು. ಇದರಿಂದ ಆಡಳಿತ ಯಂತ್ರ ಸ್ಥಗಿತವಾದಂತೆ ಆಗಿತ್ತು. ಅಭಿವೃದ್ಧಿ ಕೆಲಸಗಳಿಗೆ ಗಮನ ಹರಿಸಲು ಅಧಿಕಾರಿಗಳಿಂದ ಸಾಧ್ಯ ಆಗಿರಲಿಲ್ಲ. ನಮ್ಮ ಮನವಿ ಮೇರೆಗೆ ಚುನಾವಣಾ ಆಯೋಗ ನೀತಿ ಸಂಹಿತೆ ಸಡಿಲಿಸಿದೆ. ಈಗ ಮಳೆ ವಾಡಿಕೆಗಿಂತ ಅಧಿಕವಾಗಿದೆ. ಕೃಷಿ ಚಟುವಟಿಕೆ ಆರಂಭವಾಗಿದೆ. ಚುನಾವಣಾ ಸಿದ್ಧತೆ ಜನವರಿಯಲ್ಲೇ ಶುರುವಾಗಿತ್ತು. ನೀತಿ ಸಂಹಿತೆ ಜೂನ್ ಆರರವರೆಗೆ ಇದೆ. ಆದರೂ ತುರ್ತು ಕೆಲಸಗಳಿಗೆ ಗಮನ ನೀಡಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು. 500 ಕ್ಕೂ ಹೆಚ್ಚು ಘೋಷಣೆಗಳನ್ನು ಮಾಡಲಾಗಿದೆಬಜೆಟ್ ಘೋಚಣೆಗಳಿಗೆ ಸಂಬಂಧಿಸಿದಂತೆ ಜೂನ್ ಕೊನೆಯ ವೇಳೆಗೆ ಆದೇಶ ಹೊರ ಬರಬೇಕು. ಕಾಮಗಾರಿಗಳಿಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಕೂಡ ಶೀಘ್ರವಾಗಿ ಆಗಬೇಕು.…

Read More

ತುಮಕೂರು: ದೇಶದ 50 ನಗರಗಳ ಐಪಿಎಲ್ ಕ್ರಿಕೆಟ್ ಅಭಿಮಾನಿಗಳನ್ನು ಒಂದೆಡೆ ಸೇರಿಸುವ ಫ್ಯಾನ್ ಪಾರ್ಕ್ ಗಳ ಪೈಕಿ ತುಮಕೂರು ಕೂಡ ಒಂದಾಗಿದ್ದು ಮೇ 24 ಮತ್ತು 26ರಂದು ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ವಿಶೇಷವಾದ ದೊಡ್ಡ ಪರದೆಗಳಲ್ಲಿ ನೇರಪ್ರಸಾರದ ಸ್ಟೇಡಿಯಂ ಅನುಭವವನ್ನು ನೀಡಲು ಐಪಿಎಲ್ ಮುಂದಾಗಿದೆ. ಇದರ ಪ್ರವೇಶ ಉಚಿತವಾಗಿದ್ದು ಸಂಗೀತ ಮರ್ಚೆ ಆಹಾರ ಮಳಿಗೆಗಳು ಪಾನೀಯ ಐಪಿಎಲ್ ಅಧಿಕೃತ ಪ್ರಯೋಜಕತ್ವಗಳಿಂದ ಮೋಜು ಮತ್ತು ಉತ್ಸುಕತೆಯು ದುಪ್ಪಟ್ಟಾಗಲಿದೆ ಎನ್ನುತ್ತಾರೆ ಸಿಬ್ಬಂದಿ ಆನಂದ ದತ್ತ. ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಪ್ರತಿ ಸೀಸಂ ಕೂಡ ಹಿಂದಿಗಿಂತ ದೊಡ್ಡದಾಗಿರುತ್ತದೆ. ಈ ಬಾರಿ ಫ್ಯಾನ್ ಪಾರ್ಕ್ ಗಳಲ್ಲಿ ಕ್ರೇಜಿ ಮೋಜಿನ ಅನುಭವವನ್ನು 10 ಲಕ್ಷಕ್ಕೂ ಹೆಚ್ಚಿನ ಕ್ರಿಕೆಟ್ ಪ್ರೇಮಿಗಳು ಪಡೆಯಲಿದ್ದಾರೆ” ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಹಾಸನ: ಸಿನಿಮೀಯ ರೀತಿಯಲ್ಲಿ ಡಿವೈಎಸ್‌ ಪಿ ಒಬ್ಬರ ಬ್ಯಾಂಕ್ ಖಾತೆಯಿಂದ ಸೈಬರ್ ಕಳ್ಳರು 15 ಲಕ್ಷಕ್ಕೂ ಅಧಿಕ ಹಣ ದೋಚಿರುವ ಘಟನೆ ಹಾಸನದಲ್ಲಿ ವರದಿಯಾಗಿದೆ. ಹಾಸನ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ. ಮುರಳೀಧರ್ ಖಾತೆಯಿಂದಲೇ 15,98,761 ಲಕ್ಷ ರೂ. ಹಣ ವರ್ಗಾವಣೆ ಮಾಡಿಕೊಂಡು ಸೈಬರ್ ಖದೀಮರು ವಂಚನೆ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಹಾಸನ ನಗರದ ಸಿಇಎನ್ ಪೊಲೀಸ್ ಠಾಣೆಗೆ ಮುರಳೀಧರ್ ದೂರು ದಾಖಲಿಸಿದ್ದಾರೆ. ಮಡಿಕೇರಿಯ ಕೆನರಾ ಬ್ಯಾಂಕ್ ಮುಖ್ಯಶಾಖೆ ಹಾಗೂ ಭಾಗಮಂಡಲದ ಕೆನರಾಬ್ಯಾಂಕ್ ‌ನ ಶಾಖೆಯಲ್ಲಿ ಪಿ.ಕೆ. ಮುರಳೀಧರ್ ಖಾತೆಗಳನ್ನು ಹೊಂದಿದ್ದಾರೆ. ಮೇ 20 ರಂದು ಮಧ್ಯಾಹ್ನ 1:30ರ ವೇಳೆಗೆ ಡಿವೈಎಸ್‌ ಪಿ ಮೊಬೈಲ್ ಸಂಖ್ಯೆಗೆ ಖಾಲಿ ಮೆಸೇಜ್‌ ಗಳು ಬಂದಿವೆ. ಇದಾದ ನಂತರ ತಮ್ಮ ಗಮನಕ್ಕೇ ಬಾರದೇ ಬೇರೆ ಬೇರೆ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾವಣೆ ಆಗಿರುವುದು ಬೆಳಕಿಗೆ ಬಂದಿದೆ. ಮಡಿಕೇರಿಯಲ್ಲಿರುವ ಕೆನರಾ ಬ್ಯಾಂಕ್ ಮುಖ್ಯಶಾಖೆ ಖಾತೆಯಿಂದ ಬೆಳಗ್ಗೆ 10.29 ಗಂಟೆಯಿಂದ ಮಧ್ಯಾಹ್ನ 1.30 ಗಂಟೆವರೆಗೆ ಒಟ್ಟು 25…

Read More