Subscribe to Updates
Get the latest creative news from FooBar about art, design and business.
- ರಾಜ್ಯದ ಮುಂದಿನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಆಯ್ಕೆ ಬಹುತೇಕ ಖಚಿತ?
- ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
- ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್ ಸೆಟ್ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
- ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
- ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
- ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ: ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
- ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
Author: admin
ಸಾಮಾನ್ಯವಾಗಿ ಸೆಕೆ ಆದಾಗ ಅಮೆರಿಕನ್ ಡಾಲರ್ ನೋಟಿನಲ್ಲಿ ಹಣೆ ಒರೆಸಿಕೊಳ್ಳುವ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಆಜಂ ಹಾಗೂ ಇನ್ನಿತರ ಆಟಗಾರರ ಜೊತೆ ಇರುವಾಗ ಹೀಗೆ ವರ್ತಿಸಿದ್ದಾರೆ. ದೇಶದ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಿರುವಾಗ ಆಜಂ ಖಾನ್ ಸಂವೇದನಾ ರಹಿತವಾಗಿ ವರ್ತಿಸಿದ್ದು ತೀವ್ರ ಚರ್ಚೆಗೆ ಕಾರಣವಾಗಿದೆ. ಪಾಕಿಸ್ತಾನದ ಯುವ ಬ್ಯಾಟರ್ ಆಜಂ ಖಾನ್ ಇದರಿಂದ ವಿವಾದಕ್ಕೆ ಗುರಿಯಾಗಿದ್ದಾರೆ. ಏನಾಗುತ್ತಿದೆ ಎಂದು ಬಾಬರ್ ಕೇಳಿದ್ದಾರೆ. ಇದಕ್ಕೆ ಉತ್ತರಿಸುವ ಆಜಂ ಭಾರಿ ಸೆಕೆ ಇದೆ ಎಂದು ಹೇಳುತ್ತಾ ನೋಟಿನಿಂದ ಹಣೆ ಒರೆಸಿಕೊಳ್ಳುತ್ತಿರುವುದು ಕಂಡುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬಿಗ್ ಬಾಸ್ ಬಳಿಕ ಡ್ರೋನ್ ಪ್ರತಾಪ್ ಸಮಾಜಮುಖಿ ಕಾರ್ಯದಲ್ಲಿ ನಿರತರಾಗಿದ್ದು, ಇದರ ಜೊತೆಗೆ ವ್ಲಾಗ್ ಮಾಡಿ ಕೆಲ ದೇಶಗಳ ವೈವಿದ್ಯತೆಯನ್ನು ಡಾ.ಬ್ರೋ ಮಾದರಿಯಲ್ಲಿ ತಿಳಿಸುತ್ತಿದ್ದಾರೆ. ಇದರ ಜೊತೆಗೆ ಈ ಸಲದ ಪ್ರತಾಪ್ ಜನ್ಮದಿನದಂದು ವಿಶೇಷವಾಗಿ ಆಚರಿಸಿಕೊಳ್ಳಲು ಮುಂದಾಗಿದ್ದಾರೆ. “ಸ್ನೇಹಿತರೇ ಎಲ್ಲರಿಗೂ ನಮಸ್ಕಾರ, ಡಾ.ರಾಜ್ಕುಮಾರ್ ಸರ್ ಹೇಳ್ತಾರೆ ನೇತ್ರದಾನ ಮಹಾದಾನ ಅಂತ. ಮುಂಬರುವ ಜೂನ್ 11ಕ್ಕೆ ನನ್ನ ಹುಟ್ಟುಹಬ್ಬವಿದೆ ಸ್ನೇಹಿತರೇ ನನಗಂತೂ ಭಾರೀ ಎಕ್ಸೈಟ್ಮೆಂಟ್ ಇದೆ. ನನ್ನ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಬೇಕು ಎಂದು ನಾನು ನಿರ್ಧರಿಸಿದ್ದೇನೆ. ಅದಕ್ಕಾಗಿ ಯಾರಾದರೂ ಬಡವರಿಗೆ 5 ಜನಕ್ಕೆ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡಿಸಬೇಕು ಎಂದು ನಾನು ತೀರ್ಮಾನ ಮಾಡಿದ್ದೇನೆ. ನಿಮ್ಮಲ್ಲಿ ಯಾರಿಗಾದರೂ ಕಣ್ಣಿನ ಸಮಸ್ಯೆಯಿದ್ದರೆ ನಮಗೆ ಮೆಸೇಜ್ ಮಾಡಬಹುದು ಅಥವಾ ಕಮೆಂಟ್ ಮಾಡಿ ತಿಳಿಸಬಹುದು” ಎಂದು ಹೇಳಿದ್ದಾರೆ. ಬಿಗ್ ಬಾಸ್ ಸೀಸನ್ -10 ರನ್ನರ್ ಅಪ್ ಆದ ಬಳಿಕ ವೇದಿಕೆಯಲ್ಲೇ ಅವರು, ಬಿಗ್ ಬಾಸ್ ನಿಂದ ಬಂದ ಹಣವನ್ನು ಬಡವರ ಸಹಾಯಕ್ಕಾಗಿ ಬಳಸುತ್ತೇನೆ ಎಂದು ಹೇಳಿದ್ದರು ಮತ್ತು ಮಾಡುತ್ತಿದ್ದಾರೆ.…
ಸುಜಾತ(42) ಎಂಬವರು ಹಲವರಿಗೆ ಅಂಗಾಂಗ ದಾನ ಮಾಡುವ ಮೂಲಕ ಎಲ್ಲರಿಗೂ ಪ್ರೇರಣೆಯಾಗಿದ್ದಾರೆ. ಮನೆಯಲ್ಲಿ ತನ್ನ ಮಕ್ಕಳಿಗೆ ಅನ್ನ ಬಡಿಸುತ್ತಿರುವ ವೇಳೆ ಏಕಾಏಕಿ ಕುಸಿದು ಬಿದ್ದು ಬ್ರೈನ್ ಡೆಡ್ ಆಗಿದ್ದ ಸುಜಾತ ಹೃದಯ, ಯಕೃತ್ತು ಹಾಗೂ ಎರಡು ಕಿಡ್ನಿಗಳನ್ನು ಕುಟುಂಬಸ್ಥರು ದಾನ ಮಾಡಿದ್ದಾರೆ. ಮೃತ ಸುಜಾತಾ ಅಂಗಾಂಗ ದಾನದಿಂದ ಆರು ಜೀವಗಳನ್ನು ಉಳಿಸಿದ್ದಾರೆ ಎನ್ನಲಾಗಿದೆ. ಈ ಮಹಿಳೆ ಯಾದಾದ್ರಿ ಭುವನಗಿರಿ ಜಿಲ್ಲೆ ಆಲೇರು ಮಂಡಲದ ಬಹದ್ದೂರ್ ಪೇಟೆಯವರು ಎಂದು ವರದಿ ತಿಳಿಸಿದೆ. ಕುಟುಂಬ ಸದಸ್ಯರಿಗೆ ಅನ್ನ ಬಡಿಸುವಾಗ ಸುಜಾತಾ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಮನೆಯವರು ಆಕೆಯನ್ನು ಆಲೇರು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ಸುಜಾತಾಳನ್ನು ಪರೀಕ್ಷಿಸಿ ಉತ್ತಮ ಚಿಕಿತ್ಸೆಗಾಗಿ ಜನರಲ್ ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಸೂಚಿಸಿದ್ದರು. ಚಿಕಿತ್ಸೆಗಾಗಿ ಹೈದರಾಬಾದ್ ನ ಯಶೋದಾ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿಲ್ಲ. ಎರಡು ದಿನಗಳ ನಂತರ ವೈದ್ಯರು ಆಕೆಯ ಬ್ರೈನ್ ಡೆಡ್ ಎಂದು ದೃಢಪಡಿಸಿದ್ದರು. ಇದರೊಂದಿಗೆ ವೈದ್ಯರು, ಅಂಗಾಂಗ ದಾನದ ಜೀವದಾನ ಟ್ರಸ್ಟ್ ಬಗ್ಗೆ ಆಕೆಯ ಕುಟುಂಬ…
ದೆಹಲಿಯಲ್ಲಿರುವ ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. ನವದೆಹಲಿಯ ನಾರ್ತ್ ಬ್ಲಾಕ್ ನಲ್ಲಿರುವ ಪೊಲೀಸ್ ಕಂಟ್ರೋಲ್ ರೂಮ್ ಗೆ ಬಾಂಬ್ ಬೆದರಿಕೆ ಮೇಲ್ ಬಂದಿತ್ತು. ಕೂಡಲೇ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಗಿದೆ. ದೆಹಲಿ ಪೊಲೀಸರು ಮೇ 1 ರಂದು ರಾಜಧಾನಿ ನಗರದ ಸುಮಾರು 150 ಶಾಲೆಗಳಿಗೆ ಕಳುಹಿಸಲಾದ ಬಾಂಬ್ ಬೆದರಿಕೆ ಇಮೇಲ್ ಗಳ ಐಪಿ (ಇಂಟರ್ನೆಟ್ ಪ್ರೋಟೋಕಾಲ್) ವಿಳಾಸವನ್ನು ಪತ್ತೆಹಚ್ಚಿದ್ದಾರೆ. ಬೃಹತ್ ಸ್ಥಳಾಂತರಿಸುವಿಕೆ ಮತ್ತು ಶೋಧ ಕಾರ್ಯಾಚರಣೆಗಳನ್ನು ಪ್ರೇರೇಪಿಸಿದ ಈ ವಂಚಕ ಇಮೇಲ್ ಗಳನ್ನು ಬುಡಾಪೆಸ್ಟ್ ನಲ್ಲಿ ಪತ್ತೆಹಚ್ಚಲಾಗಿದೆ ಎಂದು ವರದಿ ತಿಳಿಸಿದೆ. ಬೆಂಗಳೂರಿನಲ್ಲೂ ವಾರಕ್ಕೆ 4 ರಿಂದ 4 ಬಾಂಬ್ ಬೆದರಿಕೆಗಳು ಬರುತ್ತಿರುವುದು ವರದಿಯಾಗುತ್ತಿವೆ. ಈ ನಡುವೆ ದೆಹಲಿಯಲ್ಲಿರುವ ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ರಕ್ಷಕರಿಗೇ ರಕ್ಷಣೆಯ ಅವಶ್ಯಕತೆಯ ವಿಚಿತ್ರ ಕೇಸ್ ವೊಂದು ಬೆಳಕಿಗೆ ಬಂದಿದೆ. ಅಮಾನತು ಶಿಕ್ಷೆಗೆ ಶಿಫಾರಸು ಮಾಡಿದ್ದಾರೆ ಎಂಬ ಕೋಪಕ್ಕೆ ಬಾಣಸವಾಡಿ ಠಾಣೆಯ ಇನ್ಸ್ ಪೆಕ್ಟರ್ ಮತ್ತು ಎಸಿಪಿಗೆ ಪೊಲೀಸ್ ಪೇದೆ ಚಾಕುವಿನಿಂದ ಇರಿದು ಕೊಲೆ ಮಾಡೋದಾಗಿ ಜೀವ ಬೆದರಿಕೆ ಹಾಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರೇಣುಕಾ ನಾಯಕ್ ಜೀವ ಬೆದರಿಕೆ ಹಾಕಿದ ಪೊಲೀಸ್ ಪೇದೆ ಎಂದು ತನಿಖೆಯಲ್ಲಿ ಬಯಲಾಗಿದೆ. ಕೆಲ ದಿನಗಳ ಹಿಂದೆ ಬೆಂಗಳೂರಿನ ಬಾಣಸವಾಡಿ ವ್ಯಾಪ್ತಿಯ ರೌಡಿಶೀಟರ್ ಕಾರ್ತಿಕೇಯನ್ ಹತ್ಯೆಯಾಗಿತ್ತು. ಈ ಕೃತ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಆರೋಪದ ಮೇಲೆ ಪೊಲೀಸ್ ಪೇದೆಗಳಾದ ಸಂತೋಷ್, ಪುಟ್ಟಸ್ವಾಮಿ, ವಿನೋದ್ ರನ್ನು ಪೂರ್ವವಿಭಾಗದ ಡಿಸಿಪಿ ಕುಲದೀಪ್ ಕುಮಾರ್ ಆರ್. ಜೈನ್ ಅಮಾನತುಗೊಳಿಸಿದ್ದರು ಎನ್ನಲಾಗಿದೆ. ಬೆದರಿಕೆ ಹಾಕಿದ್ದ ಪೊಲೀಸ್ ಪೇದೆ ರೇಣುಕಾ ನಾಯಕ್ ರನ್ನೂ ಅಮಾನತು ಮಾಡುವಂತೆ ಶಿಫಾರಸು ಮಾಡಲಾಗಿತ್ತು. ಈ ವಿಷಯ ತಿಳಿದು ಬಾಣಸವಾಡಿ ಉಪ ವಿಭಾಗದ ಎಸಿಪಿ ಹಾಗೂ ಇನ್ಸ್ಪೆಕ್ಟರ್ ಗೆ ಪೇದೆ ರೇಣುಕಾ ನಾಯಕ್ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.…
ವಾಷಿಂಗ್ಟನ್: ಅಮೆರಿಕದಲ್ಲಿ ಗರಿಷ್ಠ ವೇತನ ಪಡೆಯುವ ಸಿಇಓಗಳ ಪಟ್ಟಿಯಲ್ಲಿ ಭಾರತ ಸಂಜಾತ, ಪಾಲೊ ಆಲ್ಟೊ ನೆಟ್ವರ್ಕ್ಸ್ ನ ಸಿಇಓ ನಿಕೇಶ್ ಅರೋರಾ ಎರಡನೇ ಸ್ಥಾನದಲ್ಲಿದ್ದಾರೆ. ವಾಲ್ ಸ್ಟ್ರೀಟ್ ಜರ್ನಲ್ ಬಿಡುಗಡೆ ಮಾಡಿರುವ ಗರಿಷ್ಠ ವೇತನ ಪಡೆಯುವ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಅರೋರ ಅವರ ಒಟ್ಟು ವೇತನ 151.43 ದಶಲಕ್ಷ ಡಾಲರ್ ಆಗಿದೆ. ಭಾರತೀಯ ಮೂಲದ ಎಕ್ಸಿಕ್ಯೂಟಿವ್ ಗಳು ಅಗ್ರ 500 ಮಂದಿಯ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದು, 17 ಮಂದಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಅಡೋಬ್ ಸಿಇಓ ಶಂತನು ನಾರಾಯಣ್ 11ನೇ ಸ್ಥಾನದಲ್ಲಿದ್ದು, ಅರೋರಾ ಅವರ ಸನಿಹದಲ್ಲಿದ್ದಾರೆ. ಭಾರತದಲ್ಲೇ ಹುಟ್ಟಿ ಬೆಳೆದ ನಾರಾಯಣ್ 44.93 ದಶಲಕ್ಷ ರೂಪಾಯಿ ಗಳಿಸಿದ್ದಾರೆ. ಕುತೂಹಲಕರ ವಿಚಾರವೆಂದರೆ ಟೆಕ್ ದಿಗ್ಗಜ ಟೆಸ್ಲಾದ ಎಲಾನ್ ಮಸ್ಕ್ ಮತ್ತು ಆಲ್ಫಾಬೆಟ್ ನ ಸುಂದರ್ ಪಿಚೈ 2023ರಲ್ಲಿ ಅಸಂಪ್ರದಾಯಿಕ ವೇತನ ಸಂರಚನೆಯನ್ನು ಆಯ್ಕೆ ಮಾಡಿಕೊಂಡಿದ್ದರು. ಮಸ್ಕ್ ಅವರು ಯಾವುದೇ ವೇತನ ಪಡೆದಿಲ್ಲ ಎಂದು ವರದಿಯಾಗಿದ್ದರೆ, ಪಿಚೈ 8.80 ದಶಲಕ್ಷ ವೇತನ ಮಾತ್ರ ಪಡೆದಿದ್ದಾರೆ.…
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ರೋಚಕ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವು ಆರ್ ಸಿ ಬಿ ತಂಡವನ್ನು ಸೋಲಿಸಿ 2ನೇ ಕ್ವಾಲಿಫಯರ್ ಪ್ರವೇಶಿಸಿತು. ಆ ಮೂಲಕ ಈ ಸಲವೂ ಆರ್ ಸಿ ಬಿ ಕಪ್ ನಿಂದ ವಂಚಿತವಾಯಿತು. ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ (45 ರನ್, 30 ಎಸೆತ, 8 ಬೌಂಡರಿ) ಹಾಗೂ ರಿಯಾನ್ ಪರಾಗ್( 36 ರನ್, 26 ಎಸೆತ, 2 ಬೌಂಡರಿ, 2 ಸಿಕ್ಸರ್)ಸಾಂದರ್ಭಿಕ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಬುಧವಾರ ನಡೆದ ಐಪಿಎಲ್ನ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 4 ವಿಕೆಟ್ ಅಂತರದಿಂದ ಮಣಿಸಿತು. ಈ ಫಲಿತಾಂಶದೊಂದಿಗೆ ರಾಜಸ್ಥಾನ ತಂಡ ಮೇ 24ರಂದು ಚೆನ್ನೈನಲ್ಲಿ ನಡೆಯುವ 2ನೇ ಕ್ವಾಲಿಫೈಯರ್ ನಲ್ಲಿ ಆಡಲು ಅರ್ಹತೆ ಪಡೆದಿದ್ದು, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಈ ಸೋಲಿನೊಂದಿಗೆ ಆರ್ ಸಿಬಿ ಟೂರ್ನಿಯಲ್ಲಿ ತನ್ನ ಅಭಿಯಾನ ಅಂತ್ಯಗೊಳಿಸಿದೆ. ಸಂಕ್ಷಿಪ್ತ ಸ್ಕೋರ್: ರಾಯಲ್…
ಹೊಸಪೇಟೆ(ವಿಜಯನಗರ): ನಗರದ ಅಮರಾವತಿಯ,ಗೀತಾ ಟೈಲರ್ ಹಿಂಭಾಗದಲ್ಲಿರುವ ಶರಣಂ ಆಸ್ಪತ್ರೆ ಕೆ.ಪಿ.ಎಮ್.ಇ ಕಾಯ್ದೆ ಉಲ್ಲಂಘನೆ ಮಾಡಿರುವುದು ಸಾಬೀತಾಗಿರುವುದರಿಂದ ತಾತ್ಕಾಲಿಕವಾಗಿ ಮುಚ್ಚಲು ತಾಲೂಕು ಅರೋಗ್ಯಧಿಕಾರಿ ಆದೇಶ ಹೊರಡಸಿದ್ದಾರೆ. 9ವರ್ಷದ ಬಾಲಕನ ಸಾವಿಗೆ ಸಂಬಂಧಿಸಿ ನಗರದ ಶರಣಂ ಆಸ್ಪತ್ರೆ ಕೆಪಿಎಂಇ ಕಾಯ್ದೆ ಉಲ್ಲಂಘಿಸಿದೆ ಎಂಬ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ಆಸ್ಪತ್ರೆಯನ್ನು ತಾತ್ಕಾಲಿಕವಾಗಿ ಮುಚ್ಚಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (ಡಿಎಚ್ಒ) ಅವರು ಆದೇಶ ನೀಡಿದ್ದಾರೆ. ಯಾರಾದರೂ ಒಳ ರೋಗಿಗಳು ಶರಣಂ ಆಸ್ಪತ್ರೆಯಲ್ಲಿ ದಾಖಲಾಗಿದ್ದಲ್ಲಿ ತಕ್ಷಣವೇ ಅವರನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಪತ್ರದ ಸೂಚನೆಯಂತೆ ಶರಣಂ ಆಸ್ಪತ್ರೆಯ ವೈದ್ಯರಾದ ಡಾ. ವಿನಯರಾಘವೇಂದ್ರ ಇವರಿಗೆ ತಾತ್ಕಾಲಿಕವಾಗಿ ಆಸ್ಪತ್ರೆ ಮುಚ್ಚಲು ನೋಟಿಸ್ ನೀಡಲಾಗಿದೆ. ಅವರು 24 ಗಂಟೆಗಳ ಕಾಲಾವಧಿ ಕೇಳಿದ್ದಾರೆ. ನಂತರ ನಿಯಮಗಳ ಪ್ರಕಾರ ಮುಚ್ಚಲಾಗುವುದು ಎಂದು ವಿಜಯನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ವೈದ್ಯಾಧಿಕಾರಿ ಡಾ. ಶಂಕರ್ ನಾಯಕ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ಅಮೆರಿಕದ ಇಯೊವಾ ರಾಜ್ಯದ ಪುಟ್ಟ ಪಟ್ಟಣವಾದ ಗ್ರೀನ್ ಫೀಲ್ಡ್ ನಲ್ಲಿ ಬೀಸಿದ ಭೀಕರ ಬಿರುಗಾಳಿಗೆ ಹಲವಾರು ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಹಲವಾರು ಮನೆಗಳು ಕುಸಿದುಬಿದ್ದಿದ್ದು, ಕಾರು ಮತ್ತಿತರ ವಾಹನಗಳು ಚೆಲ್ಲಾಪಿಲ್ಲಿಯಾಗಿ ಚದುರಿಬಿದ್ದಿವೆ. ಸುಮಾರು 2 ಸಾವಿರ ಜನಸಂಖ್ಯೆಯ ಗ್ರೀನ್ ಫೀಲ್ಡ್ ಪಟ್ಟಣವನ್ನು ವ್ಯಾಪಕ ವಿನಾಶವನ್ನುಂಟು ಮಾಡಿದ ಬಿರುಗಾಳಿ ಆನಂತರ ಪೂರ್ವಾಭಿಮುಖವಾಗಿ ಚಲಿಸಿದ್ದು, ಇಲಿನಾಯ್ಸ್ ಹಾಗೂ ವಿಸ್ಕೊನ್ಸಿನ್ ರಾಜ್ಯಗಳ ಹಲವು ಭಾಗಗಳಲ್ಲಿ ಹಾವಳಿಯೆಬ್ಪಿಸಿದೆ. ಈ ಎರಡೂ ರಾಜ್ಯಗಳ ಹಲವೆಡೆ ವಿದ್ಯುತ್ಕಂಬಗಳು ಉರುಳಿಬಿದ್ದಿದ್ದು, ಸಾವಿರಾರು ಜನರು ವಿದ್ಯುತ್ ಇಲ್ಲದೆಯೇ ದಿನಕಳೆಯಬೇಕಾಯಿತು. ಗ್ರೀನ್ಫೀಲ್ಡ್ ನಲ್ಲಿ ಬಿರುಗಾಳಿಯ ಹೊಡೆತಕ್ಕೆ ಆಸ್ಪತ್ರೆಯೊಂದು ಧರಾಶಾಯಿಯಾಗಿದ್ದು 12 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಅವರನ್ನು ಆನಂತರ ಬೇರೊಂದು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದೆಯೆಂದು ಇಯೊವಾ ರಾಜ್ಯದ ಗಸ್ತುದಳದ ಸಾರ್ಜಂಟ್ ಅಲೆಕ್ಸ್ ಡಿಂಕ್ಲಾ ತಿಳಿಸಿದ್ದಾರೆ. ಬಿರುಗಾಳಿಯ ಹಾವಳಿಗೆ ಸಾವುಗಳು ಸಂಭವಿಸಿರುವುದು ದೃಢಪಟ್ಟಿದೆಯೆಂದು ಅವರು ಹೇಳಿದ್ದಾರೆ. ಬಿರುಗಾಳಿ ಹಾವಳಿಯ ನಂತರ ನಾಪತ್ತೆಯಾದವರಿದ್ದರೆ ಆ ಬಗ್ಗೆ ವರದಿಯೂ ನೀಡುವಂತೆಯೂ ಅವರು ಸ್ಥಳೀಯರಿಗೆ ಮನವಿ ಮಾಡಿದ್ದಾರೆ. ಅಮೆರಿಕದ…
ಬೆಂಗಳೂರು: ಸಾರ್ವಜನಿಕರಿಂದ ಹಣ ವಸೂಲಿ ಮಾಡಿದ ಆರೋಪದಡಿ ಇಲ್ಲಿನ ರಾಜಗೋಪಾಲನಗರ ಠಾಣೆಯ ಎಎಸ್ಐ ಸೇರಿ ಇಬ್ಬರನ್ನು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಅಮಾನತುಗೊಳಿಸಿ, ಇಲಾಖಾ ತನಿಖೆಗೆ ಆದೇಶಿಸಿದ್ದಾರೆ. ಎಎಸ್ಐ ರಾಮಲಿಂಗಯ್ಯ ಹಾಗೂ ಹೆಡ್ ಕಾನ್ಸ್ಟೇಬಲ್ ಪ್ರಸನ್ನ ಕುಮಾರ್ ಅಮಾನತುಗೊಂಡವರು. ಮೇ 20ರ ರಾತ್ರಿ ರಾಜಗೋಪಾಲನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹೊಯ್ಸಳ ಸಿಬ್ಬಂದಿ ಗಸ್ತಿನಲ್ಲಿರುವಾಗ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಅದನ್ನು ಗಮನಿಸಿ ಆಟೋದಲ್ಲಿ ಬಂದಿದ್ದ ವ್ಯಕ್ತಿಯೋರ್ವ ಪೊಲೀಸರನ್ನು ಕಂಡು ‘ಕಳ್ಳ.. ಕಳ್ಳ.. ಪೊಲೀಸ್ ಕಳ್ಳ’ ಎಂದು ಕೂಗಿಕೊಂಡಿದ್ದರು. ಕೂಗಾಟ ಕೇಳುತ್ತಿದ್ದಂತೆ ಹೊಯ್ಸಳ ಸಿಬ್ಬಂದಿ ವಾಹನ ಸಮೇತ ಸ್ಥಳದಿಂದ ಕ್ಷಣಾರ್ಧದಲ್ಲಿ ಪರಾರಿಯಾಗಿದ್ದರು. ಮೊಬೈಲ್ ನಲ್ಲಿ ಸೆರೆಹಿಡಿದಿದ್ದ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಲಾಗಿತ್ತು. ಬಳಿಕ ಪೊಲೀಸ್ ಕಾರ್ಯವೈಖರಿ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು. ಈ ಘಟನೆ ಸಂಬಂಧ ಮಾಹಿತಿ ಅರಿತು ತನಿಖೆ ನಡೆಸಿ ಉತ್ತರ ವಿಭಾಗದ ಡಿಸಿಪಿ ಸೈದುಲು ಅದಾವತ್ ನೀಡಿದ ವರದಿ…