Author: admin

ಹಾಸನ: ಎಂದೂ ಹಾಸನ ಜನ ನನ್ನ ಕೈ ಬಿಡಲ್ಲ ಎಂದು ಹೆಚ್.ಡಿ. ರೇವಣ್ಣ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, “ನಮಗೆ ಜಿಲ್ಲೆಯ ಜನ ಹಲವು ದಶಕಗಳಿಂದ ಆಶೀರ್ವಾದ ಮಾಡಿದ್ದಾರೆ. 25 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೇನೆ. ಎಲ್ಲರೂ ನನಗೆ ಸಹಕಾರ ಕೊಟ್ಟಿದ್ದಾರೆ. ಈ ಕ್ಷೇತ್ರದ ಜನ ನನ್ನ ಕೈ ಬಿಡುವುದಿಲ್ಲ ಎಂದರು. ನಮಗೆ ದಶಕಗಳಿಂದ ಜಿಲ್ಲೆಯ ಜನ ಆಶೀರ್ವಾದ ಮಾಡಿದ್ದು, ನನ್ನ ವಿರುದ್ಧದ ಕೇಸ್‌ ಗಳು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಏನೂ ಮಾತನಾಡಲ್ಲ” ಎಂದರು. ನ್ಯಾಯಾಲಯಕ್ಕೆ ಗೌರವ ಕೊಡುತ್ತೇನೆ. ಮುಂದೆ ಮಾತನಾಡುತ್ತೇನೆ. ನನಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ನಮ್ಮ ಪ್ರಕರಣ ನ್ಯಾಯಾಲಯದಲ್ಲಿ ಇದೆ. ಆದ್ದರಿಂದ ನಾನು ಏನು ಮಾತನಾಡಲ್ಲ ಎಂದರು. ನಾನು ಬದುಕಿರುವವರೆಗೂ ನನ್ನನ್ನ ಜನ ಕೈ ಬಿಡೋದಿಲ್ಲ ಅನ್ನೋ ವಿಶ್ವಾಸ ಇದೆ. ನಾನು, ಕುಮಾರಸ್ವಾಮಿ ದೇವೇಗೌಡರು ಎಲ್ಲರೂ ಅವರ ಜೊತೆ ಇರುತ್ತೇವೆ. ಜಿಲ್ಲೆಯ ಜನ ದೇವೇಗೌಡರಿಗೆ 60 ವರ್ಷ ರಾಜಕೀಯವಾಗಿ ಬೆಂಬಲ ನೀಡಿದ್ದಾರೆ. ಈ ಜಿಲ್ಲೆಯ ಜನರ…

Read More

ಬೆಂಗಳೂರು: ಸ್ಕೂಟರ್‌ ಸವಾರನೊಬ್ಬ ಕಾರು ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ ಘಟನೆ ಸರ್ಜಾಪುರ ರಸ್ತೆಯಲ್ಲಿ ಜರುಗಿದೆ. ರಾಜಧಾನಿಯಲ್ಲಿ ರೋಡ್ ರೇಜ್ ಪ್ರಕರಣಗಳು ಮಿತಿಮೀರಿ ಹೆಚ್ಚುತ್ತಿವೆ. ಕೆಲವು ವರದಿಯಾಗುತ್ತಿವೆ, ಕೆಲವು ಗಮನಕ್ಕೆ ಬರದೇ ಹೋಗುತ್ತಿವೆ. ಅಖಿಲ್ ಸಾಬು ಎಂಬವರು ಸರ್ಜಾಪುರ ರಸ್ತೆಯಲ್ಲಿ ಅನುಭವಿಸಿದ ಯಾತನೆಯನ್ನು ನಗರ ಪೊಲೀಸರು, ಗೃಹ ಸಚಿವರಿಗೆ ಎಕ್ಸ್ ನಲ್ಲಿ ಟ್ಯಾಗ್ ಮಾಡಿ ದೂರು‌‌ ನೀಡಿದ್ದಾರೆ. ಬಳಿಕ ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸರ್ಜಾಪುರ ರಸ್ತೆಯಲ್ಲಿ ಕುಟುಂಬದೊಂದಿಗೆ ಅಖಿಲ್ ಸಾಬು ಕಾರಿನಲ್ಲಿ ಆಸ್ಪತ್ರೆಗೆ ಹೋಗುತ್ತಿದ್ದಾಗ, ಹೋಂಡಾ ಆ್ಯಕ್ಟಿವಾ ಬೈಕ್ ‌ನಲ್ಲಿ ಬಂದ ವ್ಯಕ್ತಿ ಓವರ್ ಟೇಕ್ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಇಬ್ಬರ ಮಧ್ಯೆ ಮಾತಿಗೆ ಮಾತು ಬೆಳೆದು ನಡುರಸ್ತೆಯಲ್ಲಿ ಜಗಳವಾಗಿದೆ. ಜಗಳದ ವೇಳೆ ಕಾರಿನ ಎಡಭಾಗದ ಕಿಟಕಿಯನ್ನು ಆರೋಪಿ ಹೆಲ್ಮೆಟ್‌ ನಿಂದ ಹೊಡೆದು ಒಡೆದು ಹಾಕಿದ್ದಾನೆ. ಆಗ ಕಾರಿನಲ್ಲಿದ್ದ ಅಖಿಲ್ ಪತ್ನಿ ಹಾಗೂ ಮಗುವಿನ ಕೈಗೆ ಗಾಯವಾಗಿದೆ. ಇದನ್ನು ಪ್ರಶ್ನೆ ಮಾಡಿದ ಅಖಿಲ್ ಮೇಲೂ ಹಲ್ಲೆ ಎಸಗಲಾಗಿದ್ದು,…

Read More

ಬೆಳಗಾವಿ: ಅನಾರೋಗ್ಯದಿಂದ ಬಳಲುತ್ತಿದ್ದ ರೈತ ಹೋರಾಟಗಾರ್ತಿ ವಿಧಿವಶರಾಗಿದ್ದಾರೆ. ಇವರು ಉತ್ತರ ಕರ್ನಾಟಕ ಭಾಗದಲ್ಲಿ ರೈತ ಪರ ಹೋರಾಟ ಮಾಡಿ ಸಂಘಟನೆ ಮಾಡಿದ್ದರು. ಇನ್ನು ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ದೊಡ್ಡ ಮಟ್ಟದ ಹೋರಾಟಕ್ಕೆ ಮುನ್ನುಡಿ ಬರೆದಿದ್ದರು. ಕಬ್ಬಿನ ಬಾಕಿ ಬಿಲ್ ಗಾಗಿ ಸುವರ್ಣ ಸೌಧಕ್ಕೆ ಕಬ್ಬು ತುಂಬಿದ ಲಾರಿ ತೆಗೆದುಕೊಂಡು ಹೋಗಿ, ಸರ್ಕಾರದ ಗಮನ ಸೆಳೆಯಲು ದೊಡ್ಡ ಮಟ್ಟದ ಹೋರಾಟ ಮಾಡಿದ್ದರು. ಈ ವೇಳೆ ಕುಮಾರಸ್ವಾಮಿ ಅವರು ಜಯಶ್ರೀ ಕುರಿತು ಹಗುರವಾಗಿ ಮಾತಾಡಿ ಟೀಕೆಗೆ ಒಳಗಾಗಿದ್ದರು. ಇನ್ನೂ ಅನಾರೋಗ್ಯದಿಂದ ರೈತ ಹೋರಾಟಗಾರ್ತಿ ಜಯಶ್ರೀ ಗುರನ್ನವರ(40) ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಯಶ್ರೀ ಗುರನ್ನವರ ಅವರು ನಿನ್ನೆ ಸಂಜೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಒಣ ಮರ ಏಕೆ ಬಿಟ್ಕೊಂಡಿದ್ದೀರಿ? ಅನಾಹುತ ಆಗ್ಲಿ ಅಂತನಾ? ಎಂಬುದಾಗಿ ಬೆಂಗಳೂರು ಸಿಟಿ ರೌಂಡ್ಸ್ ವೇಳೆಯಲ್ಲಿ ಅಧಿಕಾರಿಗಳನ್ನು ಸಿಎಂ ಸಿದ್ಧರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ ಬೆಂಗಳೂರಿನ ಸೌಂದರ್ಯಕ್ಕೆ ಹೆಚ್ಚು ಆದ್ಯತೆ ನೀಡುವಂತೆ ಸೂಚಿಸಿದರು. ಇದರ ಬಗ್ಗೆ ಇಲ್ಲಿದೆ ಕಂಪ್ಲೀಟ್ ಮಾಹಿತಿ. ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಬೆಂಗಳೂರು ಸಿಟಿ ರೌಂಡ್ಸ್ ನಡೆಸುತ್ತಿದ್ದಾರೆ. ಬೆಂಗಳೂರಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್, ಜಯನಗರ ಹಾಗೂ ಬಿಟಿಎಂ ನಿಂದ ಬನಶಂಕರಿ ಹೋಗುವ ಮಾರ್ಗದಲ್ಲಿ ಸಂಚಾರ ದಟ್ಟನೆಯಿಂದ ನಿತ್ಯ ಉದ್ಯೋಗ ಹಾಗೂ ಇನ್ನಿತರ ಕಾರಣಗಳಿಗಾಗಿ ಈ ರಸ್ತೆಯಲ್ಲಿ ತೆರಳುವ ಸಾವಿರಾರು ವಾಹನ ಸವಾರರಿಗೆ ಅನಾನುಕೂಲ ಆಗುತ್ತಿತ್ತು. ಬಿಟಿಎಂ ಲೇಔಟ್ ವಿಧಾನಸಭೆ ಕ್ಷೇತ್ರದ ಬಿಟಿಎಂ ಮೆಟ್ರೋಸ್ಟೇಷನ್ ಗೆ ಭೇಟಿ ನೀಡಿ ಮೇಲುಸೇತುವೆ ರಸ್ತೆ ಹಾಗೂ ಮೆಟ್ರೋ ಮಾರ್ಗಗಳೆರಡೂ ಒಂದರ ಮೇಲೊಂದು ಇರುವ ಡಬಲ್ ಡೆಕ್ಕರ್ – 2 ಟೈರ್ ವ್ಯವಸ್ಥೆಯನ್ನು ಪರಿಶೀಲಿಸುವ ಸಂದರ್ಭದಲ್ಲಿ ಸಿಲ್ಕ್…

Read More

ತುಮಕೂರು: ಭೀಕರವಾಗಿ ಸಂಭವಿಸಿದ್ದ ಗ್ಯಾಸ್ ಸ್ಟವ್ ಸ್ಪೋಟ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನಲ್ಲಿ ನಡೆದಿದೆ. ಕುಣಿಗಲ್ ಪಟ್ಟಣದ ಕೋಟೆ ನಿವಾಸಿಗಳಾದ ಕುಶಾಲ್ (11), ಶಿವಣ್ಣ (45) ಮೃತಪಟ್ಟವರು ಆಗಿದ್ದಾರೆ. ರವಿಕುಮಾರ್ ಎಂಬುವರು ಕಾರ ಪುರಿ ವ್ಯಾಪಾರಿ ಮಾಡುತ್ತಿದ್ದರು. ಈ ವೇಳೆ ಪುರಿ ಹುರಿಯಲು ಹಾಗೂ ಅಡುಗೆ ಮಾಡಲು 4 ಕೆಜಿ ಗ್ಯಾಸ್ ಸ್ಟವ್ ಬಳಸುತ್ತಿದ್ದರು. 17 ತಾರೀಕಿನಂದು ರವಿಕುಮಾರ್ ಹೆಂಡತಿ ಶೃತಿಯವರು, ಮಗಳು ಹೇಮಲತಾಳನ್ನು ಟ್ಯೂಷನ್ ಗೆ ಬಿಡಲು, ಮನೆಯಿಂದ ಹೊರಗೆ ಬರುತ್ತಿದ್ದಂತೆ ಮನೆಯಲ್ಲಿ ಸ್ಫೋಟದ ಶಬ್ದ ಕೇಳಿ ಬಂದಿತ್ತು. ಒಳಗೆ ಹೋಗಿ ನೋಡಿದಾಗ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿ ಬೆಂಕಿ ಹೊತ್ತಿಕೊಂಡು ಉರಿಯುತ್ತಿತ್ತು. ಈ ವೇಳೆ ಮನೆಯಲ್ಲಿ ಇದ್ದ ಕುಶಾಲ್, ಶೃತಿ, ಹೇಮಲತಾ, ಶಿವಣ್ಣ, ಮಂಜಮ್ಮ ಸಮೀನಾ ಗಾಯಗೊಂಡಿದ್ದರು. ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಗೊಂಡವರಿಗೆ ಪ್ರಥಮ ಚಿಕಿತ್ಸೆ ನೀಡಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕುಶಾಲ್ ಹಾಗೂ ಶಿವಣ್ಣ ಮೃತಪಟ್ಟಿದ್ದಾರೆ. ಸಿಲಿಂಡರ್…

Read More

ತುಮಕೂರು: ಬರೋಬ್ಬರಿ 19 ವಷಗಳಿಂದ ತಲೆಮರೆಸಿಕೊಂಡಿದ್ದ ಪಾವಗಡ ತಾಲೂಕಿನ ವೆಂಕಟಮ್ಮನಹಳ್ಳಿ ನಕ್ಸಲ್‌ ದಾಳಿಯ ರೂವಾರಿ, ನಕ್ಸಲ್ ಕೊತ್ತಗೆರೆ ಶಂಕರನನ್ನು‌ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 2005ರ ಫೆಬ್ರವರಿ 10ರಂದು ರಾತ್ರಿ 10.30ರ ವೇಳೆಯಲ್ಲಿ ಪಾವಗಡ ತಾಲೂಕಿನ ವೆಂಕಟಮ್ಮನಹಳ್ಳಿಯ ಪೊಲೀಸ್‌ ಕ್ಯಾಂಪ್‌ ಮೇಲೆ ಸುಮಾರು 300 ಜನ ಮಾವೋಯಿಸ್ಟ್‌ ನಕ್ಸಲೀಯರು ಬಂದೂಕುಗಳು, ಬಾಂಬ್‌ , ಹ್ಯಾಂಡ್‌ ಗ್ರೇನೇಡ್‌ ಗಳೊಂದಿಗೆ ದಾಳಿ ನಡೆಸಿದ್ದರು. ಕತವ್ಯದಲ್ಲಿದ್ದ 7 ಮಂದಿ ಪೊಲೀಸರನ್ನು ಕೊಲೆ ಮಾಡಿ, 5ಮಂದಿ ಪೊಲೀಸ್‌ ಸಿಬ್ಬಂದಿಗೆ ಗಾಯಗಳನ್ನು ಮಾಡಿದ್ದರು. ಕ್ಯಾಂಪಿನ ಹೊರಗೆ ನಿಂತಿದ್ದ ಖಾಸಗಿ ಬಸ್‌ ನ ಕ್ಲೀನರ್‌ ನನ್ನು ಸಹ ಕೊಲೆ ಮಾಡಿ, ಕ್ಯಾಂಪ್‌ ನಲ್ಲಿದ್ದ ಬಂದೂಕುಗಳು ಮತ್ತು ಗುಂಡುಗಳನ್ನು ದೋಚಿಕೊಂಡು ಪರಾರಿಯಾಗಿದ್ದರು. ಈ ಬಗ್ಗೆ ತಿರುಮಣಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೆ ಈ ಪ್ರಕರಣದಲ್ಲಿ 32 ಮಂದಿ ತಲೆ ಮರೆಸಿಕೊಂಡಿದ್ದು ಇವರ ಮೇಲೆ ಜಾಮೀನು ರಹಿತ ವಾರೆಂಟ್‌ ಹೊರಡಿಸಲಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಪಾವಗಡ: “ಹೆಣ್ಣು ಮಕ್ಕಳಿಗೆ ಕಿಡಿಗೇಡಿಗಳು ತೊಂದರೆ ಕೊಟ್ಟರೆ ಅಥವಾ ಅಪಾಯದಲ್ಲಿದ್ದರೆ ಕೂಡಲೇ ನಿರ್ಭೀತಿಯಿಂದ ಸಹಾಯವಾಣಿ 112ಕ್ಕೆ ಕರೆ ಮಾಡಿ” ಎಂದು ಪಾವಗಡ ಪೊಲೀಸ್ ಠಾಣೆಯ ಪಿಎಸ್ಐ ಮನೋಹರ್ ಬಾಬು ಅವರು ತಿಳಿಸಿದ್ದಾರೆ, ಪಟ್ಟಣದ ಶ್ರೀಮತಿ ಮತ್ತು ಶ್ರೀ ವೈ ಇ ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ಎಸ್ಎಸ್ ಘಟಕಗಳು ಮತ್ತು ಪಾವಗಡ ಪೊಲೀಸ್ ಠಾಣೆಯಿಂದ ಆಯೋಜಿಸಲಾಗಿದ್ದ ರಸ್ತೆ ಸಂಚಾರ ಸುರಕ್ಷಿತ ನಿಯಮಗಳ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ವಿದ್ಯಾರ್ಥಿಗಳು ತಮಗೆ ಬೇರೆ ಯಾರಿಂದಾದರೂ ತೊಂದರೆ ಉಂಟಾದ ಕೂಡಲೇ ಪೊಲೀಸ್ ಸಹಾಯವಾಣಿ 112ಕ್ಕೆ ಕರೆ ಮಾಡಿ, ಹೊಯ್ಸಳ ವಾಹನ ತಾವು ಇರುವ ಸ್ಥಳಕ್ಕೆ ಬಂದು ಪರಿಶೀಲಿಸಿ ತಮ್ಮ ಸಮಸ್ಯೆಯನ್ನು ಬಗೆಹರಿಸುತ್ತದೆ. ವಿದ್ಯಾರ್ಥಿಗಳು ಚಾಲನಾ ಪರವಾನಗಿ ಇಲ್ಲದೆ ವಾಹನವನ್ನು ಚಲಾಯಿಸಬಾರದು. ಎಲ್ಲಾ ವಿದ್ಯಾರ್ಥಿಗಳು ಸಂಚಾರಿ ನಿಯಮಗಳ ಕುರಿತು ಜ್ಞಾನವನ್ನು ಪಡೆದುಕೊಳ್ಳಬೇಕು ಮತ್ತು ವಿದ್ಯಾರ್ಥಿಗಳು ಮಾನವೀಯತಾ ಗುಣಗಳನ್ನು ಬೆಳೆಸಿಕೊಳ್ಳಬೇಕು. ಎಲ್ಲಿಯಾದರೂ ಅಪಘಾತವಾದ ಕೂಡಲೇ ಅವರ ನೆರವಿಗೆ ಧಾವಿಸಬೇಕು. ಕೂಡಲೇ ಅವರನ್ನು ಆಸ್ಪತ್ರೆಗೆ…

Read More

ದಕ್ಷಿಣ ಬ್ರೆಜಿಲ್ ನಲ್ಲಿ ಹವಾಮಾನ ಪೀಡಿತ ರಿಯೊ ಗ್ರಾಂಡೆ ಡೊ ಸುಲ್ ರಾಜ್ಯದಲ್ಲಿ ಕಳೆದ ಕೆಲವು ಗಂಟೆಗಳಲ್ಲಿ ಇನ್ನೂ ನಾಲ್ಕು ಮೃತದೇಹಗಳು ಪತ್ತೆಯಾಗಿದ್ದು ಈ ಮೂಲಕ ಸಾವಿನ ಸಂಖ್ಯೆ 161 ಕ್ಕೆ ಏರಿದೆ ಎಂದು ನಾಗರಿಕ ರಕ್ಷಣಾ ಸಂಸ್ಥೆ ತಿಳಿಸಿದೆ. ಏಪ್ರಿಲ್ 29 ರಿಂದ ದಾಖಲೆಯ ಮಳೆ ರಾಜ್ಯವನ್ನು ನಾಶಪಡಿಸಿದೆ. ಇದು 464 ನಗರಗಳಲ್ಲಿ ಮಾರಣಾಂತಿಕ ಪ್ರವಾಹ ಮತ್ತು ಭೂಕುಸಿತಕ್ಕೆ ಕಾರಣವಾಗಿದೆ ಮತ್ತು ರಾಜಧಾನಿ ಪೋರ್ಟೊ ಅಲೆಗ್ರೆ ಸೇರಿದಂತೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 2.2 ದಶಲಕ್ಷಕ್ಕೂ ಹೆಚ್ಚು ನಿವಾಸಿಗಳ ಮೇಲೆ ಪರಿಣಾಮ ಬೀರಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಪೋರ್ಟೊ ಅಲೆಗ್ರೆಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅನಿರ್ದಿಷ್ಟವಾಗಿ ಮುಚ್ಚಲಾಯಿತು. ಆದ್ದರಿಂದ ಫೆಡರಲ್ ಸರ್ಕಾರವು ಕ್ಯಾನೋವಾಸ್ ವಾಯುಪಡೆಯ ವಾಯುನೆಲೆಯನ್ನು ವಾಣಿಜ್ಯ ವಿಮಾನಗಳಿಗೆ ಬಳಸಲು ಅಧಿಕಾರ ನೀಡಿತು. 85 ಜನರು ಕಾಣೆಯಾಗಿರುವುದರಿಂದ ಮತ್ತು 806 ಜನರು ಗಾಯಗೊಂಡಿರುವುದರಿಂದ ಮುಂದಿನ ದಿನಗಳಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಸಂಸ್ಥೆ ತಿಳಿಸಿದೆ.…

Read More

ಪೊಲೀಸ್‌ ಅಧಿಕಾರಿಯೇ ಕಟ್ಟಿಕೊಂಡ ಹೆಂಡತಿಗೆ ಅನ್ಯಾಯ ಮಾಡಿದ ಘಟನೆ ತೆಲಂಗಾಣದಲ್ಲಿ ವರದಿಯಾಗಿದ್ದು, ನ್ಯಾಯ ಒದಗಿಸುವಂತೆ ಪತ್ನಿ ಠಾಣೆ ಎದುರೇ ಧರಣಿ ಮಾಡಿದ್ದಾಳೆ. ತೆಲಂಗಾಣದ ಸಿದ್ದಿಪೇಟೆ ಜಿಲ್ಲೆಯ ಕೊಮುರವಳ್ಳಿ ಪೊಲೀಸ್ ಠಾಣೆಯ ಎದುರು ಸಬ್​ ಇನ್ಸ್​ ಪೆಕ್ಟರ್ ಪತ್ನಿ ಧರಣಿ ಕುಳಿತು ಪತಿಯ ವಿರುದ್ಧ ಪ್ರತಿಭಟಿಸಿದ್ದಾರೆ. ಕರೀಂ ನಗರ ನಿವಾಸಿಯಾಗಿರುವ ಎಸ್‌ಐ ನಾಗರಾಜು ವಿರುದ್ಧ ಆತನ ಪತ್ನಿ ಮಾನಸ ಠಾಣೆಗೆ ದೂರು ನೀಡಿದ್ದು, ನ್ಯಾಯ ಸಿಗುವವರೆಗೆ ಠಾಣೆ ಎದುರೇ ಧರಣಿ ನಡೆಸುವುದಾಗಿ ಹೇಳಿದ್ದಾರೆ. ಅಲ್ಲದೇ ಅಹೋರಾತ್ರಿ ಠಾಣೆ ಎದುರು ಧರಣಿ ನಡೆಸಿದ ಮಾನಸ ರಾಜ್ಯದ ಗಮನ ಸೆಳೆದಿದ್ದಾಳೆ. ಎರಡು ವರ್ಷಗಳಿಂದ ತನ್ನೊಂದಿಗೆ ಲೈಂಗಿಕ ಸಂಬಂಧ ಹೊಂದಿಲ್ಲ ಎಂದು ಗಂಡನ ವಿರುದ್ಧ ಆರೋಪ ಮಾಡಿರುವ ಮಾನಸ, ನನ್ನಿಬ್ಬರು ಮಕ್ಕಳಿಂದಲೂ ನನ್ನನ್ನು ದೂರವಿಟ್ಟಿದ್ದಾರೆ ಎಂದಿದ್ದಾಳೆ. ಸಾಲದೆನ್ನುವಂತೆ ನಾಗರಾಜ್‌ ಬೇರೊಬ್ಬ ಮಹಿಳೆಯನ್ನೂ ಮದುವೆ ಆಗಿದ್ದಾರೆ ಎಂದು ಗಂಡನ ವಿರುದ್ಧ ಮಾನಸ ಆರೋಪ ಮಾಡಿದ್ದು, ನ್ಯಾಯ ಕೊಡಿಸುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಿದರೂ ನಿರ್ಲಕ್ಷಿಸಲಾಗುತ್ತಿದೆ ಎಂದು…

Read More

ಬೆಂಗಳೂರು ಗ್ರಾಮಾಂತರ: ಶಾರ್ಟ್‌ಸರ್ಕ್ಯೂಟ್‌ ನಿಂದಾಗಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನೆಲಮಂಗಲ ತಾಲೂಕಿನ ಸೋಂಪುರ ಹೋಬಳಿಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಇ-ಪರಿಸರ ಕಾರ್ಖಾನೆಯಲ್ಲಿ ಎಲೆಕ್ಟ್ರಾನಿಕ್ ತ್ಯಾಜ್ಯಗಳ ಸಂಸ್ಕರಣಾ ಕೆಲಸ ನಡೆಯುತ್ತಿದ್ದಾಗಲೇ ಏಕಾಏಕಿ ಬೆಂಕಿ ಹೊತ್ತಿಕಂಡು ಧಗಧಗನೇ ಉರಿದಿದೆ. ಇದರ ಪರಿಣಾಮ ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗೆ ಸುಟ್ಟು ಭಸ್ಮವಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ 4 ಅಗ್ನಿಶಾಮಕ ದಳ ದೌಡಾಯಿಸಿದ್ದು ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟಿದ್ದಾರೆ. ಘಟನೆ ಸಂಬಂಧ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More