Author: admin

ನವದೆಹಲಿ: ಭ್ರಷ್ಟಾಚಾರ ವಿರೋಧಿ ಹೋರಾಟದಿಂದ ಮೇಲೆ ಬಂದ ಆಮ್ ಆದ್ಮಿ ಪಕ್ಷ ಇದೀಗ ಸ್ವತಃ ಭ್ರಷ್ಟಾಚಾರ ಆರೋಪದ ಸುಳಿಯಲ್ಲಿ ಸಿಲುಕಿದೆ. ಮದ್ಯ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿದ ಜಾರ್ಜ್‌ಶೀಟ್ ‌ನಲ್ಲಿ ‘ಆಪ್‌’ಗೆ 2014 ರಿಂದ 2022ರವರೆಗೂ ವಿದೇಶದಿಂದ ಫಂಡಿಂಗ್ ಆಗಿತ್ತು ಎಂದು ತಿಳಿಸಿದೆ. ವಾಸ್ತವದಲ್ಲಿ ಭಾರತಲ್ಲಿರುವ ರಾಜಕೀಯ ಪಕ್ಷಗಳು ವಿದೇಶಗಳಿಂದ ದೇಣಿಗೆ ಪಡೆಯುವಂತಿಲ್ಲ. ಆದರೆ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ, ಪ್ರಜಾಪ್ರತಿನಿಧಿ ಕಾಯ್ದೆ ಉಲ್ಲಂಘಿಸಿ ಎಎಪಿ ವಿದೇಶಿ ದೇಣಿಗೆ ಪಡೆದಿದೆ. ಆಮ್ ಆದ್ಮಿ ಪಕ್ಷಕ್ಕೆ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಸೌದಿ ಅರೇಬಿಯಾ, ಯುಎಇ, ಕುವೈತ್, ಓಮನ್ ಸೇರಿ ಹಲವು ದೇಶಗಳಿಂದ ಒಟ್ಟು 7.8 ಕೋಟಿ ರೂ. ದೇಣಿಗೆ ಹರಿದುಬಂದಿದೆ. ಆಪ್‌ ನ ಐಡಿಬಿಐ ಬ್ಯಾಂಕ್ ಖಾತೆಗೆ ಈ ವಿದೇಶಿ ಹಣ ಜಮೆಯಾಗಿದೆ. ಒಟ್ಟು 155 ಮಂದಿ 55 ಪಾಸ್‌ಪೋರ್ಟ್ ನಂಬರ್ ಬಳಸಿ 404 ಬಾರಿ 1.02 ಕೋಟಿ ರೂ. ದೇಣಿಗೆ ನೀಡಿದ್ದಾರೆ. 71 ದಾನಿಗಳು 21 ಮೊಬೈಲ್ ನಂಬರ್ ಬಳಸಿ 256…

Read More

ವಾಷಿಂಗ್ಟನ್‌: ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮೂವರು ಭಾರತೀಯ ಮೂಲದ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಆಲ್ಫರೆಟ್ಟಾ ಹೈಸ್ಕೂಲ್ ಮತ್ತು ಜಾರ್ಜಿಯಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದರು. ಎಲ್ಲಾ ಐವರು ವಿದ್ಯಾರ್ಥಿಗಳೂ 18 ವರ್ಷ ವಯಸ್ಸಿನವರಾಗಿದ್ದಾರೆ. ಮೃತ ವಿದ್ಯಾರ್ಥಿಗಳು ಕಾರನ್ನು ವೇಗವಾಗಿ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ನಂತರ ವೇಗವಾಗಿ ಬಂದ ವಾಹನವು ಪಲ್ಟಿಯಾಗಿ ಬಿದ್ದಿದೆ. ಆರ್ಯನ್ ಜೋಶಿ ಮತ್ತು ಶ್ರೀಯಾ ಅವಸರಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅನ್ವಿ ಶರ್ಮಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಮೈಸೂರು: ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಮನೆಯೊಳಗೆ ಮಲಗಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ. ಕುಮಾರಸ್ವಾಮಿ (45), ಅವರ ಪತ್ನಿ ಮಂಜುಳಾ (39) ಹಾಗೂ ಇವರ ಮಕ್ಕಳಾದ ಅರ್ಚನಾ (19) ಮತ್ತು ಸ್ವಾತಿ (17) ಘಟನೆಯಲ್ಲಿ ಸಾವನ್ನಪ್ಪಿದ ದುರ್ದೈವಿಗಳಾಗಿದ್ದಾರೆ. ಮೃತ ಕುಮಾರಸ್ವಾಮಿ ದಂಪತಿ ಮನೆಯಲ್ಲಿ ಬಟ್ಟೆ ಐರನ್ ಮಾಡುವ ಕೆಲಸ ಮಾಡುತ್ತಿದ್ದರು. ಈ ಕಾರಣಕ್ಕಾಗಿ ಮೂರು ಸಿಲಿಂಡರ್ ಇಟ್ಟುಕೊಂಡಿದ್ದರು. ಅದರಲ್ಲಿ ಒಂದು ಸಿಲಿಂಡರ್ ಸೋರಿಕೆಯಾಗಿ ಈ ಸಾವುಗಳು ಸಂಭವಿಸಿವೆ ಎನ್ನಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ನವದೆಹಲಿ: ದೆಹಲಿ ಮದ್ಯದ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ಮೇ 31ರವರೆಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಮಂಗಳವಾರ ವಿಸ್ತರಿಸಿದೆ. ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಸಿಸೋಡಿಯಾ ಅವರ ಕಸ್ಟಡಿಯನ್ನು ವಿಸ್ತರಿಸಿದರು. ನ್ಯಾಯಾಂಗ ಬಂಧನದ ಅವಧಿ ಮುಗಿದಿರುವ ಹಿನ್ನೆಲೆ ಸಿಸೋಡಿಯಾ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ಹಿಂದೆ ಸಿಸೋಡಿಯ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ವಜಾ ಮಾಡಿದ್ದ ಹಿನ್ನೆಲೆ ಕೋರ್ಟ್ ಇಂದು ನ್ಯಾಯಾಂಗ ಬಂಧನ ವಿಸ್ತರಿಸಿದೆ. 2023ರ ಫೆಬ್ರವರಿ 26 ರಿಂದ ಸಿಬಿಐ ಬಂಧಿಸಿದ ನಂತರ ಸಿಸೋಡಿಯಾ ಬಂಧನದಲ್ಲಿದ್ದಾರೆ. ಬಳಿಕ ಇ.ಡಿ ಅವರನ್ನು ಬಂಧಿಸಿತ್ತು. ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರನ್ನು ಸಹ ಬಂಧಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296…

Read More

ಮುಂಬೈ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ಭಾರೀ ಗಾಳಿ ಬೀಸಿ ದೋಣಿ ಮುಗುಚಿ ಭೀಕರ ಅವಘಡ ಸಂಭವಿಸಿದೆ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ದೋಣಿ ಮುಗುಚಿ 6 ಮಂದಿ ನೀರು ಪಾಲಾಗಿದ್ದಾರೆ. ನೀರುಪಾಲಾಗಿರುವವರ ಹುಡುಕಾಟಕ್ಕೆ ರಾಷ್ತ್ರೀಯ ವಿಪತ್ತು ನಿರ್ವಹಣಾ ದಳ (NDRF) ತಂಡದ ಸಿಬ್ಬಂದಿ ಆಗಮಿಸಿದ್ದಾರೆ. ಸ್ಥಳೀಯ ಪೊಲೀಸರ ಸಹಾಯದೊಂದಿಗೆ ಎನ್ ಡಿ ಆರ್ ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಹುಡುಕಾಟ ಮುಂದುವರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೊಪ್ಪಳ: ಕೊಪ್ಪಳದಲ್ಲಿ ಅಂಗಡಿಯ ಕೆಲಸಕ್ಕೆ ಬರುತ್ತಿದ್ದ ಯುವತಿಯ ಮೇಲೆ ಅತ್ಯಾಚಾರವೆಸಗಿ ವ್ಯಕ್ತಿಯೊಬ್ಬ ಬೆದರಿಸಿರುವ ಘಟನೆ ನಡೆದಿದೆ. ವೀರೇಶ ನಾಯಕ ಅತ್ಯಾಚಾರವೆಸಗಿದ ಆರೋಪಿಯಾಗಿದ್ದಾನೆ. ವೀರೇಶ್​ ಎಂಬಾತ ಎಲೆಕ್ಟ್ರಿಕ್ ಅಂಗಡಿ ಇಟ್ಟಿದ್ದು, ಇಲ್ಲಿ ಕೆಲಸಕ್ಕೆ ಬರುತ್ತಿದ್ದ ಯುವತಿ ಮೇಲೆ ಕೆಲವು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಇತ್ತೀಚಿಗೆ ಅಂಗಡಿಯ ಕೆಲಸಕ್ಕೆ ಬರುವುದಿಲ್ಲ ಎಂದು ಯುವತಿ ಹೋಗಿದ್ದಕ್ಕೆ ಆಕೆಗೆ ಹೆದರಿಸಿ ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ರ ಬರೆಸಿಕೊಂಡು, ವೀಡಿಯೋ ಮಾಡಿಕೊಂಡಿದ್ದಾನೆ. ಸದ್ಯ, ಪ್ರಕರಣ ದಾಖಲಿಸಿಕೊಂಡಿರುವ ಕುಷ್ಟಗಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಈ ಕುರಿತು ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದಾಳೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಬಾಗಲಗುಂಟೆ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಅಣ್ಣನಿಂದಲೇ ಸಹೋದರಿ ಮೂರು ತಿಂಗಳ ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ಜರುಗಿದೆ.  ಅಣ್ಣ-ತಂಗಿ ಇಬ್ಬರು ಅವಳಿ ಜವಳಿಯಾಗಿದ್ದಾರೆ. ಆದ್ರೆ, ಮನೆಯಲ್ಲಿ ಪೋಷಕರು ಇಲ್ಲದ ವೇಳೆ ಅಶ್ಲೀಲ ವಿಡಿಯೋಗಳನ್ನು ವೀಕ್ಷಣ ಮಾಡಿದ್ದು, ಬಳಿಕ ಲೈಂಗಿಕ ಸಂಪರ್ಕ ಬೆಳೆಸಿದ್ದಾರೆ. ಮನೆಯಲ್ಲಿ ಪೋಷಕರು ಇಲ್ಲದೇ ವೇಳೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿದ್ದು, ಇದೀಗ ಬಾಲಕಿ ಮೂರು ತಿಂಗಳು ಗರ್ಭಿಣಿಯಾಗಿದ್ದಾಳೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಲೈಂಗಿಕ ಕ್ರಿಯೆಯಲ್ಲಿ ತೊಡಗಿಕೊಳ್ಳುತ್ತಿದ್ದರಿಂದ ಒಂದು ದಿನ ಬಾಲಕಿಗೆ ಹೊಟ್ಟೆ ನೋವು ಬಂದಿದೆ. ಕೂಡಲೇ ಬಾಲಕಿ ಚಿಕಿತ್ಸೆ ಪಡೆಯಲು ಖಾಸಗಿ ಆಸ್ಪತ್ರೆಗೆ ಹೋಗಿದ್ದಾಳೆ. ಆ ವೇಳೆ ವೈದ್ಯರು ಪರೀಕ್ಷಿಸಿದಾಗ ಬಾಲಕಿ ಮೂರು ತಿಂಗಳು ಗರ್ಭಿಣಿಯಾಗಿರುವುದು ಗೊತ್ತಾಗಿದೆ. ಕೂಡಲೇ ವೈದ್ಯರು, ಬಾಗಲಗುಂಟೆ ಪೊಲೀಸ್ ಠಾಣೆಗೆ ಮಾಹಿತಿ ರವಾನಿಸಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚಿಕ್ಕಮಗಳೂರು: ಅಪಘಾತ ಅಥವಾ ತುರ್ತು ಸಂದರ್ಭದಲ್ಲಿರುವ ವ್ಯಕ್ತಿಗಳಿಗೆ ಮೊದಲಿಗೆ ಪ್ರಥಮ ಚಿಕಿತ್ಸೆಯನ್ನು ಒದಗಿಸುವ ಮೂಲಕ ಪ್ರಾಣಾಪಾಯದಿಂದ ಕಾಪಾಡಲು ಮುಂದಾಗಬೇಕು ಎಂದು ರೆಡ್‌ ಕ್ರಾಸ್ ಸಂಸ್ಥೆ ಆರೋಗ್ಯ ಸಮಿತಿ ಅಧ್ಯಕ್ಷ ಡಾ.ಕೆ. ಸುಂದರಗೌಡ ಹೇಳಿದರು. ನಗರ ಹೊರವಲಯದ ಜಿಲ್ಲಾ ಕಾರಾಗೃಹದಲ್ಲಿ ಇಂಡಿಯನ್ ರೆಡ್‌ ಕ್ರಾಸ್ ಸಂಸ್ಥೆ, ಜಿಲ್ಲಾ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ ಸಹಯೋಗದಲ್ಲಿ ಮಂಗಳವಾರ ಏರ್ಪಡಿಸಿದ್ದ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯ ಕ್ರಮವನ್ನು ಪ್ರತ್ಯಕ್ಷಿಕೆ ಮೂಲಕ ಪ್ರದರ್ಶಿಸಿ ಅವರು ಮಾಹಿತಿ ನೀಡಿದರು. ಆಕಸ್ಮಿಕವಾಗಿ ಸಂಭವಿಸುವ ಅಪಘಾತಕ್ಕೆ ವ್ಯಕ್ತಿಗಳು ಒಳಗೊಂಡಲ್ಲಿ ಪ್ರಥಮವಾಗಿ ರಕ್ತ ಹೆಚ್ಚು ಸೋ ರಿಕೆ ಜಾಗದಲ್ಲಿ ಬಟ್ಟೆ ಅಥವಾ ಇನ್ನಿತರೆ ವಸ್ತ್ರಗಳಿಂದ ಬಿಗಿಯಾಗಿ ಕಟ್ಟುವ ಮೂಲಕ ಸೋರಿಕೆ ಕಡಿಮೆಗೊಳಿಸಬೇಕು. ತದನಂತರ ಆಸ್ಪತ್ರೆಗೆ ಕರೆದೊಯ್ದುರೆ ವ್ಯಕ್ತಿಯ ಪ್ರಾಣವನ್ನು ಕಾಪಾಡಲು ಸಾಧ್ಯ ಎಂದು ತಿಳಿಸಿದರು. ಓರ್ವ ವ್ಯಕ್ತಿ ಆಹಾರ, ನೀರಿಲ್ಲದೇ ಹಲವಾರು ದಿನಗಳು ಬದುಕಬಲ್ಲ. ಅಪಘಾತ ವೇಳೆಯಲ್ಲಿ ಹೆಚ್ಚು ರಕ್ತ ಸೋರಿಕೆಗೊಂಡಲ್ಲಿ ಪ್ರಾಣ ಉಳಿಸಲು ಅಸಾಧ್ಯ. ಮಾನವ ಶರೀರದಲ್ಲಿ ಕೇವಲ ೫…

Read More

ಕಾರು ಅಪಘಾತಗೊಂಡು ತೀವ್ರ ಸ್ವರೂಪದ ಗಾಯಗಳಾಗಿದ್ದರೂ ಹುಡುಗಿಯರು ರಸ್ತೆಯಿಂದ ಏಳದೆ ಅಲ್ಲೇ ಕೂತು ಸೆಲ್ಫಿಗೆ ಪೋಸ್‌ ಕೊಟ್ಟಿರುವ ವಿಚಿತ್ರ ಘಟನೆ ಮೆಕ್ಸಿಕೋದಲ್ಲಿ ವರದಿಯಾಗಿದೆ. ಮೆಕ್ಸಿಕನ್ ನಗರದ ಕ್ಯುರ್ನಾವಾಕಾದ ರಸ್ತೆಯಲ್ಲಿ ಐವರು ಯುವತಿಯರು ಕಾರಿನಲ್ಲಿ ಹೋಗುತ್ತಿರಬೇಕಾದರೆ ಲೋಮಾಸ್ ಡೆಲ್ ಮಿರಾಡೋರ್ ಮಾರ್ಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿತ್ತು. ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಇಬ್ಬರು ಯುವತಿಯರು ಕಾರಿನಿಂದ ಹೊರಬಿದ್ದು ತೀವ್ರತರದ ಗಾಯಗಳಾಗಿದೆ. ಮಾರ್ಗದಲ್ಲೇ ಇಬ್ಬರು ಯುವತಿಯರು ಬಿದ್ದಿದ್ದು, ಇತರೆ ಮೂವರು ಕಾರಿನಲ್ಲಿ ಸಿಲುಕಿಕೊಂಡಿದ್ದರು. ಆದರೆ ರಸ್ತೆಯಲ್ಲಿ ಬಿದ್ದಿದ್ದ ಇಬ್ಬರು ಯುವತಿಯರು ಗಾಯಗೊಂಡಿದ್ದರೂ ಅಪಘಾತವಾದ ಕಾರಿನ ಮುಂದೆ ಕುಳಿತು ಸೆಲ್ಫಿಗಾಗಿ ಪೋಸ್‌ ಕೊಟ್ಟಿರುವುದು ಟೀಕೆಗೆ ಗುರಿಯಾಗಿದೆ. ಆಂಬ್ಯುಲೆನ್ಸ್ ಬರುವವರೆಗೆ ಇಬ್ಬರು ಸೆಲ್ಫಿಗೆ ಪೋಸ್‌ ನೀಡುತ್ತಲೇ ಅಲ್ಲೇ ಕುಳಿತಿದ್ದಾರೆ. ಇದಕ್ಕೆ ಕಾರಣ ಕಾರಿನಲ್ಲಿದ್ದವರು ಮದ್ಯದ ಅಮಲಿನಲ್ಲಿದ್ದರು ಎಂದು ಶಂಕಿಸಲಾಗಿದೆ. ಸದ್ಯ ಮೆಕ್ಸಿಕನ್ ಅಧಿಕಾರಿಗಳು ಅಪಘಾತದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾರ್ಟಿಯಲ್ಲಿ ಪಾಲ್ಗೊಂಡವರ ವಿವರ ಪೊಲೀಸರ ಬಳಿಯಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬೆಂಗಳೂರಿನಲ್ಲಿ ರೇವ್ ಪಾರ್ಟಿ ನಡೆಯುತ್ತಿತ್ತು ಎಂದು ಸಿಸಿಬಿಯವರು ದಾಳಿ ಮಾಡಿದ್ದಾರೆ. ಯಾರ್ ಯಾರು ಬಂದಿದ್ದರು ಎಂದು ಪೊಲೀಸರು ಮಾಹಿತಿ ತೆಗೆದುಕೊಂಡಿದ್ದಾರೆ. ದಾಳಿ ವೇಳೆ ಡ್ರಗ್ಸ್, ಸಿಂಥೆಟಿಕ್ ಡ್ರಗ್ಸ್ ಪತ್ತೆ ಆಗಿದೆ. ಕಾನೂನು ಪ್ರಕಾರ ಕ್ರಮ ಆಗಲಿದೆ. ಡ್ರಗ್ಸ್ ಫ್ರೀ ರಾಜ್ಯ ಮಾಡಬೇಕು ಎಂದು ಇದ್ದೇವೆ. ಸಾವಿರಾರು ಕೋಟಿ ಡ್ರಗ್ಸ್ ದಂಧೆ ಹಿಡಿದಿದ್ದೇವೆ. ಡ್ರಗ್ಸ್ ಪೂರೈಕೆ, ಸಾಗಣೆ ಹತ್ತಿಕ್ಕುವ ಕೆಲಸ ಆಗುತ್ತಿದೆ. ಗಾಂಜಾ ಎಲ್ಲಿಂದ ಬರುತ್ತೆ ಎಂದು ಮಾಹಿತಿ ಮೇಲೆ ಹಿಡಿಯುತ್ತೇವೆ. ಪೆಡ್ಲರ್ಸ್ ಯಾರಿದ್ದಾರೆ ಅವರನ್ನು ಹಿಡಿಯವುದು ಬಹಳ ಮುಖ್ಯ. ಸ್ಟೂಡೆಂಟ್ಸ್ ಎಂದು ಹೇಳಿಕೊಂಡು ಇಲ್ಲಿ ಬಂದು ಕೃತ್ಯ ಮಾಡುತ್ತಾರೆ. ಅವರ ಮೇಲೆ ನಿಗಾ ಇಟ್ಟಿದ್ದೇವೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More