Author: admin

ಬೆಂಗಳೂರು: ಬುದ್ಧ ಪೂರ್ಣಿಮೆ ದಿನದ ಹಿನ್ನೆಲೆ ಎರಡು ನಗರಗಳ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲ ಮಾಂಸದಂಗಡಿಗಳನ್ನು ಮೇ 23ರಂದು ಮುಚ್ಚುವಂತೆ ಆದೇಶಿಸಲಾಗಿದೆ. ಕುರಿ, ಮೇಕೆ, ಕೋಳಿ, ಹಂದಿ ಮಾಂಸ ಮತ್ತು ಮೀನು ವ್ಯಾಪಾರವನ್ನು ಮೈಸೂರು ನಗರದಲ್ಲಿ ಕಡ್ಡಾಯವಾಗಿ ನಿಷೇಧಿಸಲಾಗಿರುತ್ತದೆ ಎಂದು ಮೈಸೂರು ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಇನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣ ನಿಷೇಧಿಸಲಾಗಿದೆ. ಜೊತೆಗೆ ಕಸಾಯಿಖಾನೆಯಲ್ಲಿ ಪ್ರಾಣಿವಧೆಗೂ ನಿಷೇಧ ವಿಧಿಸಿ ಬಿಬಿಎಂಪಿಯ ಪಶುಪಾಲನೆ ಇಲಾಖೆಯ ಜಂಟಿ ನಿರ್ದೇಶಕರು ಆದೇಶಿಸಿದ್ದಾರೆ. ಮೇ 23ರಂದು ಬುದ್ಧ ಪೂರ್ಣಿಮೆ ದಿನ ಬೆಂಗಳೂರು ಹಾಗೂ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆಯನ್ನು ನಿಷೇಧಿಸಿ ಆದೇಶವಿತ್ತಿದೆ. ಈ ದಿನ ಯಾವುದೇ ಕಾರಣಕ್ಕೂ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡದಂತೆ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಮೈಸೂರು ವ್ಯಾಪ್ತಿಯಲ್ಲಿ ಮಹಾನಗರ ಪಾಲಿಕೆಯು ಆದೇಶವಿತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಬೆಂಗಳೂರು: “ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರೂ ಈವರೆಗೂ ಸ್ಪಂದಿಸಿಲ್ಲ” ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರು ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಜ್ವಲ್ ರೇವಣ್ಣ ಅವರ ಪಾಸ್‌ ಪೋರ್ಟ್ ರದ್ದು ಮಾಡುವಂತೆ ಮುಖ್ಯಮಂತ್ರಿಯವರು ಪತ್ರ ಬರೆದಿದ್ದಾರೆ. ಎಸ್ಐಟಿ ಪತ್ರ ಬರೆದಿದೆ. ಈವರೆಗೂ ಕೇಂದ್ರ ಸರ್ಕಾರದಿಂದ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ” ಎಂದರು. “ಕೇಂದ್ರ ಸರ್ಕಾರವು ಕಾನೂನಿನ ಚೌಕಟ್ಟಿನಲ್ಲಿ ಸಹಾಯ ಮಾಡಬೇಕು. ಬರೀ ಟೀಕೆ ಮಾಡಿದರೆ ಅರ್ಥವಿಲ್ಲ. ಪ್ರಜ್ವಲ್ ರೇವಣ್ಣ ಅವರ ಮೇಲೆ ವಾರಂಟ್ ಜಾರಿ ಮಾಡಿರುವುದನ್ನು ತಿಳಿಸಲಾಗಿದೆ. ವಾರಂಟ್ ಜಾರಿಯಾದ ನಂತರ ಪಾಸ್‌ ಪೋರ್ಟ್ ರದ್ದುಗೊಳಿಸುವುದು ಕೇಂದ್ರ ಸರ್ಕಾರದ ಕರ್ತವ್ಯ” ಎಂದು ಹೇಳಿದರು. ಉಪಮುಖ್ಯಮಂತ್ರಿಯವರದ್ದು ಎನ್ನಲಾದ ಆಡಿಯೋ ಕುರಿತು ಹೆಚ್.ಡಿ. ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, “ಕುಮಾರಸ್ವಾಮಿ ಅವರು ಪ್ರತಿಯೊಂದಕ್ಕೂ ಮಾತನಾಡುತ್ತಿದ್ದಾರೆ. ಕಾನೂನಿಮ ಚೌಕಟ್ಟಿನಲ್ಲಿ ಎಸ್ಐಟಿ ಏನೆಲ್ಲ ಕೆಲಸ ಮಾಡಬೇಕೋ ಅದನ್ನು…

Read More

ಪಾವಗಡ: ಪಾವಗಡ ತಾಲೂಕಿನ ಹೊಸಕೋಟೆ ಹೋಬಳಿಯ ಇಂದ್ರಬೆಟ್ಟ ಗ್ರಾಮದಲ್ಲಿ ಭಾರತ ರತ್ನ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ 133ನೇ ಜಯಂತೋತ್ಸವ ಮತ್ತು ಸಮುದಾಯ ಭವನ ಉದ್ಘಾಟನೆ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಗಿದೆ. ಗ್ರಾಮದ ಮಹಿಳೆಯರು ಪೂರ್ಣ ಕುಂಭದೊಂದಿಗೆ ಗ್ರಾಮದಲ್ಲಿ ಮೆರವಣಿಗೆ ಮೂಲಕ ವೇದಿಕೆಯನ್ನು ಸೇರಿದ್ದಾರೆ. ನೂತನ ಸಮುದಾಯ ಭವನವನ್ನು ಬೆಂಗಳೂರು ಮಹಾರಾಣಿ ವಿಶ್ವವಿದ್ಯಾನಿಲಯದ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಡಾ. ಗೋವಿಂದಪ್ಪ ಪಾವಗಡ ಅವರು ಉದ್ಘಾಟಿಸಿದ್ದಾರೆ. ಕಾರ್ಯಕ್ರಮದ ಪ್ರಧಾನ ಭಾಷಣವನ್ನು ಹೈಕೋರ್ಟ್ ವಕೀಲರು ಹಾಗೂ ಹೋರಾಟಗಾರರಾದ ಪ್ರೊಫೆಸರ್ ಹರಿರಾಮ್ ಅವರು ನೆರವೇರಿಸಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಸದಸ್ಯೆ ಪಾರ್ವತಮ್ಮ ರವಿ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯದರ್ಶಿಗಳಾದ ಐಎ ನಾರಾಯಣಪ್ಪ, ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ. ಪ್ರೇಮಜ್ಯೋತಿ, ಹಿರಿಯ ಹೋರಾಟಗಾರರಾದ ಡಾ. ಸುಬ್ಬರಾಜು, ಎಚ್.ಕೆಂಚರಾಯ, ಕುಮಾರ್ ಇಂದ್ರಬೆಟ್ಟ, ಗ್ರಾಮದ ಯುವಕರು ಸೇರಿದಂತೆ ಹಲವರು ಹಾಜರಿದ್ದರು. ವರದಿ: ನಂದೀಶ್ ನಾಯ್ಕ ಪಾವಗಡ ನಮ್ಮತುಮಕೂರಿನ…

Read More

ತಿಪಟೂರು: ಟಿವಿಎಸ್ ಮತ್ತು ಓಮಿನಿ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ದ್ವಿಚಕ್ರ ವಾಹನ ಟಿವಿಎಸ್ ನಲ್ಲಿ ಸಂಚಾರ ಮಾಡುತ್ತಿದ್ದ ಹೊನ್ನವಳ್ಳಿಯ ಗ್ರಾಮದ ಲೋಕೇಶ್(44) ಎಂಬುವರು ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ದುರ್ದೈವಿಯಾಗಿದ್ದಾರೆ. ಮೃತ ವ್ಯಕ್ತಿಯು ಹೊನವಳ್ಳಿ ಗ್ರಾಮದ ನೇಕಾರ ಕೆಲಸವನ್ನು ಮಾಡುತ್ತಿದ್ದರು ಎನ್ನಲಾಗಿದೆ. ಎರಡು ವಾಹನಗಳು ಮುಖಾಮುಖಿಯಾಗಿದ್ದು, ಪರಿಣಾಮ ಗಂಭೀರ ಗಾಯಗೊಂಡಿದ್ದ ಲೋಕೇಶ್ ನನ್ನು, ಚಿಕಿತ್ಸೆಗಾಗಿ ಸಾರ್ವಜನಿಕ ಆಸ್ಪತ್ರೆ ತಿಪಟೂರಿಗೆ ದಾಖಲು ಮಾಡಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹಾಸನಕ್ಕೆ ತೆರಳುವಾಗ ಮಾರ್ಗ ಮಧ್ಯೆ ಲೋಕೇಶ್ ಸಾವನ್ನಪ್ಪಿದ್ದಾರೆ. ಓಮಿನಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ವ್ಯಕ್ತಿಯು ಹೊನ್ನವಳ್ಳಿ ಬಾರ್ ಮಾಲಿಕ ಹನುಮಂತಪುರದ ಪ್ರೇಮಕುಮಾರ ಎಂದು ತಿಳಿದಿದೆ. ಈ ಪ್ರಕರಣವು ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತಿಪಟೂರು: “ತಿಪಟೂರು ಶಿಕ್ಷಕರು ಅಧಿಕಾರಕ್ಕೆ ಬಂದರೆ ಮಾತ್ರ ಶಿಕ್ಷಕರ ಅಭಿವೃದ್ಧಿ ಸಾಧ್ಯವಾಗುತ್ತದೆ. ಆದ್ದರಿಂದ ಈ ಬಾರಿ ನಡೆಯುವ ಆಗ್ನೇಯ ಶಿಕ್ಷಕ ಕ್ಷೇತ್ರದ ಚುನಾವಣೆಯಲ್ಲಿ ಶಿಕ್ಷಕ ವೃತ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಾನು ಸ್ಪರ್ಧೆ ಮಾಡುತ್ತಿದ್ದೇನೆ” ಎಂದು ಪಕ್ಷೇತರ ಅಭ್ಯರ್ಥಿ ಲೋಕೇಶ್ ತಾಳಿಕಟ್ಟೆ ತಿಳಿಸಿದರು. ಇದೇ ಸಮಯದಲ್ಲಿ ವಿಧಾನ ಪರಿಷತ್ ಸದಸ್ಯ ವೈಎ ನಾರಾಯಣಸ್ವಾಮಿ ವಿರುದ್ಧ ಹರಿಹಾಯ್ದವರು, ಅವರು ಮೂರು ಬಾರಿ ಚುನಾವಣೆಯಲ್ಲಿ ಶಿಕ್ಷಕರ ಕ್ಷೇತ್ರದಿಂದ ಗೆಲುವು ಸಾಧಿಸಿದ ನಾರಾಯಣಸ್ವಾಮಿ ಶಿಕ್ಷಕರ ನಂಬಿಕೆಗೆ ಅರ್ಹರಾದವರಲ್ಲ. ನಾರಾಯಣಸ್ವಾಮಿಗೆ ಶಿಕ್ಷಕರು ಮತ ಹಾಕಿ ಮೋಸ ಹೋಗಿದ್ದಾರೆ ಎಂದು ಲೋಕೇಶ್ ತಾಳಿಕಟ್ಟೆ ತಿಳಿಸಿದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೊಲ್ಕತ್ತಾ: ನೀತಿ ಸಂಹಿತೆ ನಿಯಮಗಳನ್ನು ಉಲ್ಲಂಘಿಸಿದ ಬಿಜೆಪಿ ವಿರುದ್ಧ ಕ್ರಮ ಕೈಗೊಳ್ಳದ ಚುನಾವಣಾ ಆಯೋಗದ ನಡೆಗೆ ಕೊಲ್ಕತ್ತಾ ಹೈಕೋರ್ಟ್ ತೀವ್ರ ಅಸಮಧಾನ ವ್ಯಕ್ತಪಡಿಸಿದೆ. ಮುಂದಿನ ಆದೇಶವರೆಗೂ ಟಿಎಂಸಿ ಸರ್ಕಾರದ ವಿರುದ್ಧ ಯಾವುದೇ ಅವಹೇಳನಕಾರಿ ಜಾಹೀರಾತು ಪ್ರಕಟಿಸದಂತೆ ಬಿಜೆಪಿಗೆ ಕೋರ್ಟ್ ನಿರ್ಬಂಧ ಹೇರಿದೆ. ಮತದಾನದ ಹಿಂದಿನ ದಿನ ನೀತಿ ಸಂಹಿತೆ ನಿಯಮಗಳನ್ನು ಉಲ್ಲಂಘಿಸಿ ತೃಣಮೂಲ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಅವಹೇನಕಾರಿ ಜಾಹೀರಾತು ಪ್ರಕಟಿಸಿತ್ತು. ಆದರೂ ಬಿಜೆಪಿ ವಿರುದ್ಧ ಕೈಗೊಳ್ಳದ ಚುನಾವಣಾ ಆಯೋಗದ ವಿರುದ್ಧ ಟಿಎಂಸಿ, ಹೈಕೋರ್ಟ್ ಮೊರೆ ಹೋಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಸಬ್ಯಸಾಚಿ ಭಟ್ಟಚಾರ್ಯ ನೇತೃತ್ವದ ಏಕಸದಸ್ಯ ಪೀಠವು ಟಿಎಂಸಿ ಸಲ್ಲಿಸಿದ ದೂರುಗಳನ್ನು ಪರಿಹರಿಸಲು ಆಯೋಗ ತೀವ್ರವಾಗಿ ವಿಫಲವಾಗಿದೆ ಎಂದು ದೂರಿತು. ಟಿಎಂಸಿಯ ದೂರುಗಳನ್ನು ಪರಿಹರಿಸಲು ಚುನಾವಣಾ ಆಯೋಗ ಸಂಪೂರ್ಣವಾಗಿ ವಿಫಲವಾಗಿದೆ. ಚುನಾವಣೆಗಳು ಮುಗಿದ ನಂತರದ ದೂರುಗಳ ಪರಿಹಾರ ಕೋರಿ ನ್ಯಾಯಲಯಕ್ಕೆ ಬರುತ್ತಿವೆ ಎಂದು ಆಶ್ವರ್ಯ ವ್ಯಕ್ತಪಡಿಸಿದರು. ಚುನಾವಣೆ ಮತ್ತು ಮತದಾನದ ಹಿಂದಿನ ದಿನ ಬಿಜೆಪಿಯ ಜಾಹೀರಾತುಗಳು ಮಾದರಿ…

Read More

ಹುಬ್ಬಳ್ಳಿ: ಹುಬ್ಬಳ್ಳಿ ನವನಗರದ ಶಿವಾನಂದ ನಗರದಲ್ಲಿ ಕೌಟುಂಬಿಕ ಕಲಹ ಹಿನ್ನಲೆ ಪೊಲೀಸ್ ಕಾನ್ಸ್ಟೇಬಲ್ ಜೊತೆ ಮಹಿಳೆ ನೇಣಿಗೆ ಶರಣಾದ ಘಟನೆ ನಡೆದಿದೆ. ಕಾನ್‌ ಸ್ಟೇಬಲ್‌ ಮಹೇಶ್ ಹೆಸರೂರ್(31) ಮತ್ತು ವಿಜಯಲಕ್ಷ್ಮೀ ವಾಲಿ(30) ಆತ್ಮಹತ್ಯೆ ಮಾಡಿಕೊಂಡವರು. ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದ ನಿವಾಸಿ ಕಾನ್‌ ಸ್ಟೇಬಲ್‌ ಮಹೇಶ್‌, ಮದುವೆ ಆಗಿದ್ದರೂ ವಿವಾಹಿತ ಮಹಿಳೆಯೊಂದಿಗೆ ಹೊಂದಿದ್ದ ಅನೈತಿಕ ಸಂಬಂಧವೇ ಆತ್ಮಹತ್ಯೆಗೆ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದೆ. ಮೃತ ಮಹೇಶ್ ಈಗಾಗಲೇ ಬೇರೆ ಹುಡುಗಿ ಜೊತೆಗೆ ಮದುವೆ ಆಗಿದ್ದ. ಹೀಗಿದ್ದರೂ ವಿಜಯಲಕ್ಷ್ಮಿ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ. ಹೆಂಡತಿ ಬಿಟ್ಟು ವಿಜಯಲಕ್ಷ್ಮಿಯೊಂದಿಗೆ ಕಳೆದ 15 ದಿನದಿಂದ ಬೇರೆ ಮನೆ ಮಾಡಿಕೊಂಡಿದ್ದ ಎನ್ನಲಾಗಿದ್ದು, ವಿಜಯಲಕ್ಷ್ಮಿ ಜೊತೆಗೆ ಬಾಡಿಗೆ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ವಿಜಯಲಕ್ಷ್ಮಿ ಶನಿವಾರ ರಾತ್ರಿ ಮನೆಯಿಂದ ಹೋಗಿದ್ದಳು. ಹನುಮಂತನಗರದಲ್ಲಿ ವಿಜಯಲಕ್ಷ್ಮಿ ವಾಸವಿದ್ದಳು. ವಿದ್ಯಾನಗರದ ಚೇತನ ಕಾಲೇಜು ಎದುರಿಗೆ ಪಡ್ಡು ಮಾರಿ ಜೀವನ ನಡೆಸುತ್ತಿದ್ದಳು. ವಿಜಯಲಕ್ಷ್ಮಿ ಈಗಾಗಲೇ ಲವ್ ಮ್ಯಾರೇಜ್ ಮಾಡಿಕೊಂಡಿದ್ದಳು. ಎರಡು ಮಕ್ಕಳು ಸಹ ಇವೆ.…

Read More

ಬೆಂಗಳೂರು: ರೇವ್ ಪಾರ್ಟಿಯಲ್ಲಿ ತೆಲುಗಿನ ಪೋಷಕ ನಟಿ ಸಹ ಭಾಗಿಯಾಗಿದ್ದರು. ಆದರೆ, ಯಾವುದೇ ಜನಪ್ರತಿಧಿಗಳು ಭಾಗಿಯಾಗಿರಲಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾಹಿತಿ ನೀಡಿದ ಅವರು, ರೇವ್ ಪಾರ್ಟಿ ನಡೆಸಿದ ಪ್ರಕರಣದಲ್ಲಿ ಐವರನ್ನು ಬಂಧಿಸಲಾಗಿದೆ. ಪಾರ್ಟಿ ನಡೆಯುತ್ತಿರುವುದನ್ನು ತಿಳಿದುಕೊಂಡು ಸಿಸಿಬಿ ಪೊಲೀಸರು, ಸ್ಥಳೀಯ ಪೊಲೀಸರೊಂದಿಗೆ ಸೇರಿ ದಾಳಿ ನಡೆಸಿದ್ದಾರೆ. ಮಾದಕ ವಸ್ತು ಪತ್ತೆಗೆ ತರಬೇತಿ ಪಡೆದಿರುವ ಶ್ವಾನದಳದ ನೆರವು ಪಡೆಯಲಾಗಿದೆ. ನೂರಕ್ಕೂ ಅಧಿಕ ಜನ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ದಾಳಿ ವೇಳೆ ಮಾದಕ ಪದಾರ್ಥಗಳು ಪತ್ತೆಯಾಗಿವೆ. ಕೆಲವರು ಬಳಸುತ್ತಿದ್ದ ಮಾದಕ ಪದಾರ್ಥಗಳನ್ನು ಸ್ವಿಮ್ಮಿಂಗ್ ಪೂಲ್ ಮತ್ತಿತರ ಕಡೆ ಎಸೆದಿದ್ದಾರೆ. ಘಟನೆ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐವರನ್ನು ಬಂಧಿಸಲಾಗಿದೆ. ಘಟನಾ ಸ್ಥಳದ ಬೆಂಗಳೂರು ಗ್ರಾಮಾಂತರದ ಹೆಬ್ಬಗೋಡಿ ಠಾಣಾ ವ್ಯಾಪ್ತಿಗೆ ಬರುವುದರಿಂದ ಪ್ರಕರಣವನ್ನು ಅಲ್ಲಿಗೆ ವರ್ಗಾವಣೆ ಮಾಡಲಾಗುತ್ತದೆ. ದಾಳಿ ಸಂದರ್ಭದಲ್ಲಿ ಪೋಷಕ ನಟಿಯೊಬ್ಬರು ವೀಡಿಯೋ ಮಾಡಿರುವುದರ ಕುರಿತು ‘ಅವರು ಯಾವ ಸಂದರ್ಭದಲ್ಲಿ…

Read More

ಮೂಲಂಗಿಯು ಮೂಲ ಬೆಳೆಯಾಗಿದ್ದು, ಇದನ್ನು ಬೇಯಿಸಿ ಹಾಗೂ ಹಸಿದಾಗಿಯೂ ಸೇವಿಸಲಾಗುತ್ತದೆ. ಹಸಿ ಮೂಲಂಗಿಯು ಖಾರವಾಗಿ, ಹೆಚ್ಚು ಜ್ಯೂಸಿಯಾಗಿದ್ದು ಸಲಾಡ್ ರೀತಿಯಲ್ಲಿಯೂ ಸೇವಿಸಲಾಗುತ್ತದೆ. ಇದು ನಮ್ಮ ಪಾರಂಪರಿಕ ಆಹಾರ ತರಕಾರಿಗಳಲ್ಲಿ ಒಂದಾಗಿದ್ದು, ಹಲವು ಖಾಯಿಲೆಗಳಿಗೆ ಇದನ್ನು ಮದ್ದಾಗಿಯೂ ಉಪಯೋಗಿಸಲಾಗುತ್ತದೆ. ಕೇವಲ ಮೂಲಂಗಿಯಲ್ಲಷ್ಟೇ ಅಲ್ಲದೆ ಇದರ ಎಲೆಯೂ ಆರೋಗ್ಯಕ್ಕೆ ಒಳ್ಳೆಯದು.  ಈ ಹಸಿರೆಲೆಯೂ ತಿನ್ನಲು ಒಗರು ಒಗರಾಗಿದ್ದು, ಪಲ್ಯ, ಜ್ಯೂಸ್, ಸಲಾಡ್ ರೂಪದಲ್ಲಿ ಸೇವಿಸಬಹುದಾಗಿದೆ. ಮೂಲಂಗಿಯ ಪ್ರಯೋಜನಗಳು: ನಿರ್ವಿಶೀಕರಣ ಸುಧಾರಿಸುತ್ತೆ: ಮೂಲಂಗಿಯು ಕರುಳು ಮತ್ತು ಹೊಟ್ಟೆಗೆ ಬಹಳ ಉತ್ತಮ ಆಹಾರವಾಗಿದೆ. ಇದು ರಕ್ತ ಶುದ್ಧ ಮಾಡುವುದರ ಜೊತೆಗೆ ದೇಹದಲ್ಲಿನ ವೇಸ್ಟ್ ಮತ್ತು ವಿಷವನ್ನು ತೆಗೆದುಹಾಕುತ್ತದೆ. ರಕ್ತಕ್ಕೆ ಹೊಸ ಆಮ್ಲಜನಕ ಪೂರೈಸುವುದರಿಂದ ಕಾಮಾಲೆ ಇರುವವರಿಗೆ ಸಂಭವಿಸುವ ಕೆಂಪು ರಕ್ತ ಕಣಗಳ ನಾಶವನ್ನು ಕಡಿಮೆ ಮಾಡುತ್ತದೆ. ಕಪ್ಪು ಮೂಲಂಗಿಯೂ ಕಾಮಾಲೆಗೆ ಇನ್ನೂ ಒಳ್ಳೆಯದಾಗಿದ್ದು, ಇದರ ಎಲೆಗಳು ಹಲವು ಚಿಕಿತ್ಸೆಗಳಿಗೆ ಬಳಸಲಾಗುತ್ತದೆ. ಪೈಲ್ಸ್: ಪೈಲ್ಸ್ ಸಮಸ್ಯೆ ಇರುವವರಿಗೆ ಡಾಕ್ರ‍್ಗಳು ಸಾಮಾನ್ಯವಾಗಿ ಹಸಿ ಮೂಲಂಗಿ ಸೇವಿಸಲು ಹೇಳುತ್ತಾರೆ. ಏಕೆಂದರೆ ಇದರಲ್ಲಿ…

Read More

ಬೆಂಗಳೂರು: ಗ್ಯಾಸ್‌ ಸಿಲಿಂಡರ್‌ ಹೊಂದಿರುವ ಕುಟುಂಬಗಳಿಗೆ ಶಾಕ್ ಎದುರಾಗಿದ್ದು, ಇನ್ಮುಂದೆ ಕೆಲವು ನಿಯಮ ಕಡ್ಡಾಯವಾಗಿದೆ. ಹೌದು. ಗ್ಯಾಸ್ ಏಜೆನ್ಸಿಗಳಿಗೂ ಇ-ಕೆವೈಸಿ ಮಾಡಲು ಯಂತ್ರಗಳನ್ನು ನೀಡಲಾಗಿದೆ. ಇದರಲ್ಲಿ ಯಾರ ಹೆಸರಿನಲ್ಲಿ ಗ್ಯಾಸ್ ಸಂಪರ್ಕವಿದೆಯೋ ಅವರೇ ಕೆವೈಸಿ ಮಾಡಿಕೊಳ್ಳಬೇಕಾಗುತ್ತದೆ. ಕೇಂದ್ರ ಸರ್ಕಾರ ಹೊರಡಿಸಿರುವ ಹೊಸ ನಿಯಮದ ಪ್ರಕಾರ ಇ-ಕೆವೈಸಿ ಮಾಡದವರಿಗೆ ಕಡಿಮೆ ಸಿಲಿಂಡರ್ ನೀಡಲಾಗುವುದು ಅಥವಾ ಸಿಲಿಂಡರ್ ಸಬ್ಸಿಡಿ ಸಿಗುವುದಿಲ್ಲ. ಹಾಗಾಗಿಯೇ ಇಂತಹ ಸಮಸ್ಯೆಯನ್ನು ತಪ್ಪಿಸಲು. ತಕ್ಷಣವೇ KYC ನ್ನು ಪೂರ್ಣಗೊಳಿಸಿ. ಕೇಂದ್ರದ ಹೊಸ ನಿಯಮದಿಂದಾಗಿ ನಕಲಿ ದಾಖಲೆಗಳನ್ನು ನೀಡಿ ಸಿಲಿಂಡರ್ ಪಡೆದುಕೊಳ್ಳುತ್ತಿದ್ದವರ ಸಿಲಿಂಡರ್ ಬ್ಲಾಕ್ ಮಾಡಲಿದ್ದಾರೆ. ಆನ್‌ ಲೈನ್ ಬುಕ್ಕಿಂಗ್ ಇರುವುದಿಲ್ಲ. ಹೊಸ ನಿಯಮಗಳ ಪ್ರಕಾರ ಯಾವುದೇ ಮನೆಯಲ್ಲಿ ಒಂದೇ ಹೆಸರಿನ ಎರಡು ಮತ್ತು ಅದಕ್ಕಿಂತ ಹೆಚ್ಚು ಸಿಲಿಂಡರ್ ಗಳಿದ್ದರೆ ಎರಡನೇ ಸಿಲಿಂಡರ್ ಸ್ವಯಂಚಾಲಿತವಾಗಿ ಬ್ಲಾಕ್ ಆಗುವುದು ಸ್ಪಷ್ಟ. ಅಂದರೆ ಒಂದು ಮನೆಯಲ್ಲಿ ಒಂದೇ ಹೆಸರಿನ ಸಿಲಿಂಡರ್ ಮಾತ್ರ ಇರುತ್ತದೆ. ಎಲ್ಲಾ ಅಕ್ರಮ ಸಂಪರ್ಕಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರ ಬಯಸಿದೆ. ಅಂತಹವರನ್ನು ಗುರುತಿಸಲು…

Read More