Subscribe to Updates
Get the latest creative news from FooBar about art, design and business.
- ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
- ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್ ಸೆಟ್ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
- ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
- ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
- ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ: ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
- ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
- ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
Author: admin
ಬೆಂಗಳೂರು: ವಿಂಡ್ಸನ್ ಮ್ಯಾನರ್ ಜಂಕ್ಷನ್ ಬಳಿ ಕಾಮಗಾರಿ ಹಿನ್ನೆಲೆ ಏರ್ ರ್ಪೋರ್ಟ್ ರಸ್ತೆಯ ಓಲ್ಡ್ ಹೈಗ್ರೌಂಡ್ಸ್ ಜಂಕ್ಷನ್ ನಿಂದ ಪ್ಯಾಲೇಸ್ ಗುಟ್ಟಹಳ್ಳಿವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ರೈಲ್ವೆ ಇಲಾಖೆಯಿಂದ ಹೈಟ್ ಗೇಜ್ ಕಂಬಿ ಅಳವಡಿಕೆ ಸಲುವಾಗಿ ಇಂದು ರಾತ್ರಿ 11ರಿಂದ ನಾಳೆ ಬೆಳಗಿನ ಜಾವ 3ರವರೆಗೆ ಸಂಚಾರ ನಿರ್ಬಂಧ ಹೊರಡಿಸಲಾಗಿದ್ದು, ಪರ್ಯಾಯ ಮಾರ್ಗ ಬಳಸಲು ಸಂಚಾರಿ ಪೊಲೀಸರು ಸೂಚಿಸಿದ್ದಾರೆ. ಬಸವೇಶ್ವರ ಜಂಕ್ಷನ್ ನಿಂದ ಬಳ್ಳಾರಿ ರಸ್ತೆ ಕಡೆ ಹೋಗುವವರು ಬಸವೇಶ್ವರ ಜಂಕ್ಷನ್, ಓಲ್ಡ್ ಹೈ ಗ್ರೌಂಡ್ ಜಂಕ್ಷನ್, ಕಲ್ಪನಾ ಜಂಕ್ಷನ್, ಎಮ್ ಸಿಸಿ ಕಾಲೇಜು, ವಸಂತನಗರ ಕೆಳ ಸೇತುವೆ, ಚಕ್ರವರ್ತಿ ಲೇಔಟ್, ಬಿಡಿಎ ಅಂಡರ್ ಪಾಸ್, ಬಿಎಸ್ ರಾಜು ರಸ್ತೆ, ಜಟಕಾ ಸ್ಟ್ಯಾಂಡ್ ಮೂಲಕ ಬಳ್ಳಾರಿ ರಸ್ತೆ ಪ್ರವೇಶ ಮಾಡಬಹುದು. ಇನ್ನು ಬಸವೇಶ್ವರ ಜಂಕ್ಷನ್, ಕಲ್ಪನಾ ಜಂಕ್ಷನ್, ಚಂದ್ರಿಕಾ ಜಂಕ್ಷನ್, ಓಲ್ಡ್ ಉದಯ ಟಿವಿ ಜಂಕ್ಷನ್, ಕಂಟೋನ್ಮೆಂಟ್ ಅಂಡರ್ ಪಾಸ್, ಜಯಮಹಲ್ ರಸ್ತೆ, ಮೇಖ್ರಿ ಸರ್ಕಲ್ ಮೂಲಕ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.…
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾಗ ಬಂದೂಕು ಆಕಸ್ಮಿಕವಾಗಿ ಸಿಡಿದು ರಾಯಚೂರು ಮೂಲದ ಯೋಧರೊಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿ ತಿಳಿಸಿದೆ. ಮಾನ್ವಿ ತಾಲೂಕಿನ ಆರ್.ಜಿ. ಕ್ಯಾಂಪ್ನ ಯೋಧ ರವಿಕಿರಣ್(37) ಹುತಾತ್ಮರಾದವರು ಎಂದು ಗುರುತಿಸಲಾಗಿದೆ. ಚೆನ್ನೈ ಏರ್ ಪೋರ್ಟ್ ಸಮೀಪದ ಕಲ್ಪಾಕ್ಕಂ ಬಳಿ ಈ ದುರ್ಘಟನೆ ನಡೆದಿದೆ. ಚೆನ್ನೈನಲ್ಲಿ ಯೋಧನ ಪಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಲಾಗಿದೆ. ನೈಟ್ ಡ್ಯೂಟಿ ಮುಗಿಸಿ ಕ್ಯಾಂಪ್ ನತ್ತ ತೆರಳುವ ವೇಳೆ ಘಟನೆ ನಡೆದಿದೆ. ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ವೇಳೆ ಗನ್ ಆಕಸ್ಮಿಕವಾಗಿ ಸಿಡಿದಿದೆ. ಇಂಡಿಯನ್ ಸ್ಮಾಲ್ ಆರ್ಮ್ಸ್ ಸಿಸ್ಟಮ್ ರೈಫಲ್ನ ಬುಲೆಟ್ ರವಿಕಿರಣ್ ಕುತ್ತಿಗೆಯ ಭಾಗಕ್ಕೆ ತಗುಲಿದೆ ಎನ್ನಲಾಗಿದೆ. ಕೇಂದ್ರೀಯ ಔದ್ಯಮಿಕ ಭದ್ರತಾ ಸಂಸ್ಥೆ (CISF) ಯೋಧರಾದ ರವಿಕಿರಣ್ ಕಲ್ಪಾಕ್ಕಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಂಗನ ವಿಡಿಯೋವೊಂದು ವೈರಲ್ ಆಗಿದ್ದು, ಬೈಕ್ ನ ಮೇಲೆ ಕುಳಿತು ಅದರ ಕನ್ನಡಿಯಲ್ಲಿ ತನ್ನ ಮುಖವನ್ನು ಕಂಡು ವಿಚಿತ್ರವಾಗಿ ವರ್ತಿಸಿ ಚೇಷ್ಟೆ ಮಾಡಿದೆ. ಹೊಟ್ಟೆ ಹುಣ್ಣಾಗಿಸುವ ನಕ್ಕು, ನೆಟ್ಟಿಗರು ಈ ವೀಡಿಯೋವನ್ನು ಮೆಚ್ಚಿಕೊಂಡಿದ್ದಾರೆ. ಹೀಗೆ ಬೈಕಿನಲ್ಲಿ ಮಂಗವೊಂದು ಕನ್ನಡಿಯಲ್ಲಿ ತನ್ನನ್ನು ನೋಡಿಕೊಂಡು ನಾಚಿಕೊಳ್ಳುವ ಕೋತಿಯ ತಮಾಷೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೀಡಿಯೋವನ್ನು ರಾಮ್ ಮೌರ್ಯ ಎಂಬವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ನಾನಾ ಬಗೆಯ ಕಮೆಂಟ್ ಗಳು ಬಂದಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಾಜಿ ಗೆಳತಿಯ ಮದುವೆ ಆರತಕ್ಷತೆಗೆ ಬಂದ ಯುವಕ ಮದುವೆ ಮಂಟಪದಲ್ಲಿಯೇ ವರನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲು ಯತ್ನಿಸಿದ್ದಾನೆ ಮತ್ತು ಕೈಯಿಂದ ಥಳಿಸಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸದ್ಯ ಅದೇ ರೀತಿಯ ಸುದ್ದಿಯೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ತನ್ನ ಮಾಜಿ ಗೆಳತಿಯ ಮದುವೆ ಆರತಕ್ಷತೆಗೆ ಬಂದ ಯುವಕ ಮಂಟಪದಲ್ಲಿಯೇ ವರನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ ಮತ್ತು ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಈ ಘಟನೆ ರಾಜಸ್ಥಾನ್ ಚಿತ್ತೋರ್ ಗಢ ಜಿಲ್ಲೆಯ ಭಿಲ್ವಾರದಲ್ಲಿ ನಡೆದಿದ್ದು, ವಧು ವರರಿಗೆ ವಿಶ್ ಮಾಡುವ ನೆಪದಲ್ಲಿ ಸ್ಟೇಜ್ ಹತ್ತಿದ ವಧುನಿನ ಮಾಜಿ ಪ್ರಿಯಕರ ವರನ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಅದೃಷ್ಟವಶಾತ್ ವರನಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಹಲ್ಲೆ ನಡೆಸಿರುವ ಆರೋಪಿ ಶಂಕರ್ ಲಾಲ್ ನನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ವಧು ಮತ್ತು ಶಂಕರ್ ಲಾಲ್ ಎರಡು ವರ್ಷಗಳ ಹಿಂದೆ ಒಂದೇ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಆ ಸಮಯದಲ್ಲಿ ಇವರಿಬ್ಬರ…
ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಹೆಚ್.ಬೈರಾಪುರ ಗ್ರಾಮದಲ್ಲಿ ಬಿದ್ದ ಭಾರೀ ಮಳೆಗೆ, ತಿಪಟೂರು-ಹುಳಿಯಾರು ರಸ್ತೆ ಮಧ್ಯದ ಹೆಚ್. ಬೈರಾಪುರದ ಗ್ರಾಮದ ಮಧ್ಯಭಾಗದಲ್ಲಿರುವ ಎರಡು ಸೇತುವೆಗಳು, ಆಪಿನಕಟ್ಟೆ ಹಳ್ಳ ಮತ್ತು ಕುನ್ನಿರಕಟ್ಟೆ ಹಳ್ಳದ ಬಳಿ ಹಳ್ಳದಿಂದ ನೀರು ಬರುತ್ತಿದ್ದು, ಹುಳಿಯಾರು ಮಾರ್ಗದ ರಸ್ತೆ ಸಂಪೂರ್ಣ ಜಲಾವೃತವಾಗಿದೆ. ಈ ಎರಡು ಕೆರೆಯ ನೀರುಗಳು ಈ ಸೇತುವೆ ಮಾರ್ಗ ಬರುತ್ತಿರುವ ಹಿನ್ನೆಲೆಯಲ್ಲಿ ವಾಹನ ಸವಾರರಿಗೆ ಮತ್ತು ದಾರಿ ಹೋಕರಿಗೆ ತುಂಬಾ ತೊಂದರೆ ಉಂಟಾಗುತ್ತಿದ್ದು, ಈ ಭಾಗದಲ್ಲಿ ವಾಹನ ಸಂಪೂರ್ಣ ದಟ್ಟಣೆಯಾಗಿದೆ. ಈ ಸೇತುವೆಗಳು ತೀರ ಚಿಕ್ಕದಾಗಿದ್ದು,ಮಳೆ ಬಂದಾಗಲೆಲ್ಲ ಪದೇ ಪದೇ ಈ ರೀತಿ ತೊಂದರೆಗಳು ಅನುಭವಿಸುವಂತಾಗಿದೆ. ಎರಡೂ ಸೇತುವೆಗಳನ್ನು ಮೇಲ್ಸೇತುವೆಗಳಾಗಿ ನಿರ್ಮಾಣ ಮಾಡಿ ರೈತರು, ವಾಹನ ಸವಾರರಿಗೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯಾದಗಿರಿ: ತಾಲೂಕಿನ ಅಬ್ಬೇತುಕುರ ಗ್ರಾಮದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನಡೆದಿದೆ. ಸಿದ್ದಪ್ಪ(45) ಎಂಬುವವರು ಹಲ್ಲೆಗೊಳಗಾದ ವ್ಯಕ್ತಿಯಾಗಿದ್ದಾರೆ. ಕೂಡಲೇ ಕುಟುಂಬದವರು ಗಾಯಾಳುವನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದ್ದಕ್ಕೆ ಕುಟುಂಬದವರು ಆಕ್ರೋಶ ಹೊರಹಾಕಿದ್ದಾರೆ. ಕೇವಲ ವೈದ್ಯಕೀಯ ಸಿಬ್ಬಂದಿಯಿಂದ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದು, ಸಾವು ಬದುಕಿನ ಮದ್ಯೆ ವ್ಯಕ್ತಿ ಹೋರಾಟ ನಡೆಸುತ್ತಿದ್ದಾರೆ. ಜಿಲ್ಲಾಸ್ಪತ್ರೆ ವಿರುದ್ಧ ಜನರು ಕಿಡಿಕಾರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೊರಟಗೆರೆ: ತಾಲೂಕಿನ ಸಿ ಎನ್ ದುರ್ಗಾ ಹೋಬಳಿಯ ಜೆಟ್ಟಿ ಅಗ್ರಹಾರ ಕೆರೆಯಂಗಳದಲ್ಲಿ ಏಳು ಹಳ್ಳಿ ಗ್ರಾಮದೇವತೆ ಶ್ರೀ ಬೇವಿನಳಮ್ಮ ತಾಯಿಯ ಜಲಧಿ ಮಹೋತ್ಸವ ಶ್ರದ್ಧಾಭಕ್ತಿಯಿಂದ ನೆರೆವೇರಿತು. ದೇವಿಗೆ ವಿಶೇಷ ಹೂವಿನ ಅಲಂಕಾರ ಮಾಡಿದ್ದು, ಭಕ್ತರ ಕಣ್ಣು ಮನ ಸೆಳೆಯುವಂತಿತ್ತು. ಧಾರ್ಮಿಕ ಪೂಜೆ ಸಲ್ಲಿಸಿದ ನಂತರ ಗಂಗಾ ಪೂಜೆ ನಡೆಯಿತು. ಸಾಹಿತಿಗಳಾದ ಡಾ. ನರಸಿಂಹ ಮೂರ್ತಿ ಮಾತನಾಡಿ, “ಸುಮಾರು 250 ವರ್ಷಗಳ ಇತಿಹಾಸವುಳ್ಳ ದೇವಗಾನಿಕೆ ಶ್ರೀ ಬೇವಿನಮ್ಮ ತಾಯಿ ಏಳು ಜನ ಅಕ್ಕತಂಗಿಯರಲ್ಲಿ ತಾಯಿಯು ಒಬ್ಬಳು. ಈ ತಾಯಿಯ ಜಾತ್ರೆ-ಜಲಧಿ ವಿಶೇಷವಾಗಿ ಆಚರಣೆ ಮಾಡುತ್ತಾ ನಮ್ಮ ಪೂರ್ವಿಕರು ಬಂದಿದ್ದಾರೆ. ಹಾಗೆ ನಾವು ಕೂಡ ಈ ಆಚರಣೆಯನ್ನು ಮುಂದುವರಿಸುತ್ತಾ ಬಂದಿದ್ದೇವೆ. ಈ ದೇವಿಯ ಜಾತ್ರೆಯನ್ನು ಐದು ವರ್ಷಕ್ಕೊಮ್ಮೆ ಮಾಡುತ್ತಿದ್ದು, ಜಲದಿಯನ್ನು ವರ್ಷಕ್ಕೊಮ್ಮೆ ಬಹಳ ಅರ್ಥಪೂರ್ಣವಾಗಿ ವಿಜೃಂಭಣೆಯಿಂದ ಆಚರಿಸುತ್ತಿದ್ದೇವೆ” ಎಂದರು. ಜಟ್ಟಿ ಅಗ್ರಹಾರ ಅಂದರೆ ಜಟ್ಟಿ ಮನೆತನದವರಿಗೆ ರಾಜರು ಮಹಾರಾಜರು ಉಡುಗೊರೆಯಾಗಿ ನೀಡಿದಂತಹ ಇತಿಹಾಸವುಳ್ಳ ಗ್ರಾಮವಾಗಿದ್ದು, ಇಲ್ಲಿ ನೆಲೆಸಿರುವ ಗ್ರಾಮ ಶಕ್ತಿ ಬೇವಿನಳಮ್ಮ ತಾಯಿಯು ಗ್ರಾಮಕ್ಕೆ…
ಘಜಿಯಾಬಾದ್: ತಮ್ಮ 14 ವರ್ಷದ ಸಹೋದರಿಯ ಮೇಲೆ 1 ವರ್ಷಕ್ಕೂ ಹೆಚ್ಚು ಕಾಲ ಅತ್ಯಾಚಾರವೆಸಗಿದ ಆರೋಪದ ಮೇಲೆ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯಲ್ಲಿ ಇಬ್ಬರು ಸಹೋದರರನ್ನು ಬಂಧಿಸಲಾಗಿದೆ. ಇದೀಗ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದಾಳೆ. ಇಬ್ಬರು ಸಹೋದರರ ವಿರುದ್ಧ ಅವರ ತಾಯಿ ತಿಲಾ ಮೋರ್ಹ್ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ಅವರನ್ನು ಬಂಧಿಸಲಾಗಿದೆ ಎಂದು ಘಜಿಯಾಬಾದ್ ಪೊಲೀಸರು ತಿಳಿಸಿದ್ದಾರೆ. 8ನೇ ತರಗತಿಯ ವಿದ್ಯಾರ್ಥಿನಿ ಹೊಟ್ಟೆ ನೋವು ಎಂದು ಮನೆಯಲ್ಲಿ ಹೇಳಿದ್ದಳು. ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಬಾಲಕಿ ಗರ್ಭಿಣಿ ಎಂದು ಬೆಳಕಿಗೆ ಬಂದಿದೆ. ಮನೆಯಲ್ಲಿ ಅಮ್ಮ ಇಲ್ಲದಿದ್ದಾಗ ಯುವಕರಿಬ್ಬರೂ ಶಾಲೆಗೆ ಹೋಗುತ್ತಿದ್ದ ತಂಗಿಯ ಮೇಲೆ ಅತ್ಯಾಚಾರ ಎಸಗುತ್ತಿದ್ದರು. ಅಲ್ಲದೆ, ಈ ಲೈಂಗಿಕ ದೌರ್ಜನ್ಯದ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಐಪಿಸಿಯ ಸೆಕ್ಷನ್ 376ಡಿ (ಸಾಮೂಹಿಕ ಅತ್ಯಾಚಾರ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ…
ಬೋರ್ವೇಲ್ ಕೇಬಲ್ಗಳನ್ನು ಕದಿಯೋದಕ್ಕೆ ತಿಂಗಳ ಸಂಬಳಕ್ಕೆ ಕಳ್ಳನನ್ನು ನೇಮಿಸಿಕೊಂಡಿರುವ ವಿಚಿತ್ರ ಪ್ರಕರಣವೊಂದು ತುಮಕೂರಿನಲ್ಲಿ ನಡೆದಿದೆ. ವೆಂಕಟೇಶ್ ಎಂಬಾತ ಕಳ್ಳತನಕ್ಕಾಗಿಯೇ ಓರ್ವನನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ ಎನ್ನಲಾಗಿದೆ. ವೆಂಕಟೇಶ್ ಕಳ್ಳತನ ಮಾಡುವ ರಾಘವೇಂದ್ರನಿಗೆ ತಿಂಗಳ ಲೆಕ್ಕದಲ್ಲಿ ಸಂಬಳ ಕೊಡುತ್ತಿದ್ದ. ರಾಘವೇಂದ್ರ ತಿಂಗಳಿಗೆ 20 ಸಾವಿರ ರೂ. ಸಂಬಳ ಪಡೆಯುತ್ತಿದ್ದಾಗಿ ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಈ ಖದೀಮರು ಗ್ರಾಮೀಣ ಭಾಗದಲ್ಲಿರುವ ಬೋರ್ ವೆಲ್ ಕೇಬಲ್ ಕಳ್ಳತನ ಮಾಡುತ್ತಿದ್ದರು. ವಡ್ಡಗೆರೆ ಎಂಬಲ್ಲಿ ಇತ್ತೀಚೆಗೆ ಖತರ್ನಾಕ್ ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಕೃತ್ಯಕ್ಕೆ ಬಳಸಿದ್ದ ಕಾರಿನ ಚಲನವಲನ ಗಮನಿಸಿ ಕಳ್ಳರನ್ನು ಪತ್ತೆ ಹಚ್ಚಿದ್ದಾರೆ ಎನ್ನಲಾಗಿದೆ. ಆ ಕೇಬಲ್ ಗಳನ್ನು ಖರೀದಿಸುತ್ತಿದ್ದಾತನೂ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಅಥಣಿ: ವಾರ ಕಳೇದರೂ ಚರಂಡಿ ಸ್ವಚ್ಛಗೊಳಿಸದ ಗ್ರಾಂ ಪಂಚಾಯ್ತಿ ಆಡಳಿತದ ವಿರುದ್ಧ ಗ್ರಾಮಸ್ಥರು ಹಿಡಿಶಾಪ ಹಾಕುತ್ತಿದ್ದಾರೆ. ಅಸ್ವಚ್ಛತೆಯಿಂದ ರೋಗರುಜಿನಗಳು ಹರಡುವ ಭೀತಿಯಲ್ಲಿ ಜನರು ಕಾಲ ಕಳೆಯುವಂತಾಗಿದೆ. ಚರಂಡಿ ತುಂಬೆಲ್ಲ ಹುಳಗಳು ತುಂಬಿದ್ರು ಸಂಬಂಧಪಟ್ಟವರು ಮಾತ್ರ ನಮಗೂ ಅದಕ್ಕೂ ಸಂಬಂಧವಿಲ್ಲದಂತೆ ವರ್ತಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಅಸ್ವಚ್ಛತೆಯ ಆಗರವಾದ ಅಥಣಿ ತಾಲೂಕಿನ ಸಂಬರಗಿ ಗ್ರಾಮ ಪಂಚಾಯಿತಿ ಹಲವು ರೋಗಗಳಿಗೆ ಎಡೆಮಾಡಿ ಕೊಟ್ಟಂತೆ ತೋರುತ್ತಿದ್ದು, ಹಲವುಬಾರಿ ಮನವಿ ಮಾಡಿದರು ಕ್ಯಾರೆ ಎನ್ನದ ಪಿಡಿಓ ಸಾಹೇಬ್ರು ಗಾಢ ನಿದ್ದೇಗೆ ಜಾರಿದಂತಿದೆ. ಒಟ್ಟಾರೆ ಸುದ್ದಿಯಿಂದ ಎಚ್ಚೆತ್ತಾದರೂ ಗ್ರಾಮದಲ್ಲಿ ಚರಂಡಿ ಸ್ವಚ್ಛತೆಗೆ ಗ್ರಾಮ ಪಂಚಾಯ್ತಿ ಆಡಳಿತ ಮುಂದಾಗುತ್ತಾ ಕಾದುನೋಡಬೇಕಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296