Subscribe to Updates
Get the latest creative news from FooBar about art, design and business.
- ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
- ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್ ಸೆಟ್ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
- ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
- ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
- ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ: ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
- ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
- ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
Author: admin
ತನ್ನ ದಢೂತಿ ದೇಹದಿಂದಲೇ ದೇಶಾದ್ಯಂತ ಖ್ಯಾತಿ ಗಳಿಸಿರುವ, ಡಬ್ಲ್ಯೂಡಬ್ಲ್ಯೂಇನಲ್ಲಿ ಭಾರತವನ್ನು ಪ್ರತಿನಿಧಿಸಿದ ಕುಸ್ತಿಪಟು ದಿ ಗ್ರೇಟ್ ಖಲಿ ವಿಶ್ವದಲ್ಲೇ ಅತಿ ಕುಬ್ಜ ಮಹಿಳೆ ಎನಿಸಿರುವ ಜ್ಯೋತಿ ಆಮ್ಗ ಯನ್ನು ಒಂದೇ ಕೈಯಲ್ಲಿ ಎತ್ತಿ ಆಡಿಸಿದ ವೀಡಿಯೊ ಈಗ ಭಾರೀ ವೈರಲ್ ಆಗಿದೆ. ಮಹಾರಾಷ್ಟ್ರದವರಾದ ಜ್ಯೋತಿ ಆಮ್ಗೆ(30) ಅವರು ಕೇವಲ 2.3 ಅಡಿ ಎತ್ತರವಾಗಿದ್ದು, ಜಗತ್ತಿನಲ್ಲೇ ಅತಿ ಕುಬ್ಜ ಮಹಿಳೆ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಇವರು ಗಿನ್ನಿಸ್ ದಾಖಲೆಗೂ ಭಾಜನರಾಗಿದ್ದಾರೆ. ಜ್ಯೋತಿ ಆಮ್ಗೆ ಹಾಗೂ ದಿ ಗ್ರೇಟ್ ಖಲಿ ಅವರು ಇತ್ತೀಚೆಗೆ ಭೇಟಿಯಾಗಿದ್ದು, ಗ್ರೇಟ್ ಖಲಿ ಅವರು ತಮಾಷೆಗಾಗಿ ಅವರನ್ನು ಒಂದೇ ಕೈಯಲ್ಲಿ ಎತ್ತಿ ಆಡಿಸಿದ್ದಾರೆ. ಆದರೆ, ತಮಾಷೆಗಾಗಿ ಒಂದೇ ಕೈಯಲ್ಲಿ ಮಗುವಿನಂತೆ ಎತ್ತಿ ಆಡಿಸಿದ ವೀಡಿಯೊ ವೈರಲ್ ಆದ ಬೆನ್ನಲ್ಲೇ ಗ್ರೇಟ್ ಖಲಿ ವಿರುದ್ಧ ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ನಾನು ನಿಮ್ಮನ್ನು ನಾಗ್ಪುರಕ್ಕೆ ಕಳುಹಿಸಿಬಿಡುತ್ತೇನೆ” ಎಂದು ತಮಾಷೆ ಮಾಡಿದ್ದಾರೆ. ಇದರಿಂದ ಜ್ಯೋತಿ ಆಮ್ಗೆ ಅವರು ನಾಚಿ ನೀರಾಗಿದ್ದಾರೆ. ಆದರೆ ಹಲವರು ಬ್ಯಾಡ್…
ತುಮಕೂರು: ಬೈಕ್ ಅಡ್ಡಗಟ್ಟಿ ವ್ಯಕ್ತಿಯೊಬ್ಬರನ್ನು ಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಅಂಚೆಪಾಳ್ಯದಲ್ಲಿ ನಡೆದಿದೆ. ಅಂಚೆಪಾಳ್ಯದ ಮಂಜುನಾಥ್ ಎಂಬವರ ಬೈಕ್ ತಡೆದ ದುಷ್ಕರ್ಮಿಗಳು, ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿದವರು ಗೋವಿಂದ ಅಲಿಯಾಸ್ ಶೂಟೌಟ್ ಗೋವಿಂದ, ಅಕ್ಷಯ್, ನಾಗೇಶ್ ಎಂದು ಹೇಳಲಾಗಿದೆ. ಅಂಚೆಪಾಳ್ಯ ಬಳಿ ಬೈಕ್ ಅಡ್ಡಗಟ್ಟಿ ಹೊಡೆದು ಹತ್ಯೆಗೆ ಯತ್ನಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಗೋವಿಂದನ ಬಗ್ಗೆ ಮಾತನಾಡುತ್ತೀಯಾ ಎಂದು ಪ್ರಶ್ನಿಸಿ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಹಲ್ಲೆಯಿಂದಾಗಿ ಮಂಜುನಾಥ್ ಗೆ ಗಂಭೀರ ಗಾಯವಾಗಿದೆ. ಆತನನ್ನು ಕುಣಿಗಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ವಿಜಯನಗರ: ಜೀವಂತವಾಗಿರುವ ತಾಯಿ-ಮಗನನ್ನು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿ, ಇಬ್ಬರನ್ನೂ ಪಡಿತರ ಚೀಟಿ ಹೆಸರಿನಿಂದ ಆಹಾರ ಇಲಾಖೆಯು ಡಿಲೀಟ್ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಆಹಾರ ಇಲಾಖೆಯಲ್ಲಿ ಬೆಳಕಿಗೆ ಬಂದಿದೆ. ಅಂಜೀನಮ್ಮ ಮತ್ತು ಅವರ ಪುತ್ರ ಅಜಯ್ ಎಂಬವರು ಬದುಕಿದ್ದಾರೆ. ಹೀಗಿರುವಾಗಲೇ 2019ರಲ್ಲೇ ಸಾವನ್ನಪ್ಪಿದ್ದಾರೆ ಎಂದು ಬಿಪಿಎಲ್ ಕಾರ್ಡ್ನಿಂದ ಹೆಸರು ಡಿಲೀಟ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ. ಕಳೆದ ಐದು ವರ್ಷದಿಂದ ಪಡಿತರದಿಂದ ಬಡ ಕುಟುಂಬವೊಂದು ವಂಚಿತವಾಗಿದೆ ಎಂಬ ಆರೋಪ ಕೇಳಿಬಂದಿದೆ. ಆಹಾರ ಇಲಾಖೆಯ ಎಡವಟ್ಟಿನಿಂದ ತಾಯಿ ಮಗ ಸರ್ಕಾರಿ ಸೌಲಭ್ಯಗಳಿಂದಲೂ ವಂಚಿತರಾಗಿದ್ದಾರೆ ಎನ್ನಲಾಗಿದೆ. ಇತ್ತ ನ್ಯಾಯಕ್ಕಾಗಿ ಅಂಜಿನಮ್ಮ ಕುಟುಂಬ ನಿತ್ಯ ಆಹಾರ ಇಲಾಖೆ, ನ್ಯಾಯಬೆಲೆ ಅಂಗಡಿಗೆ ಅಲೆಯುತ್ತಿದ್ದಾರೆ ಎನ್ನಲಾಗಿದೆ. ಅಧಿಕಾರಿಗಳು ಪರಿಶೀಲಿಸದೇ ಅಂಜೀನಮ್ಮ ಹೆಸರು ತೆಗೆದಿರುವುದಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ತುಮಕೂರು ಜಿಲ್ಲೆಯ ಶಿರಾದಲ್ಲಿ ಸುರಿದ ಧಾರಾಕಾರ ಮಳೆಗೆ ಆಕಳು ಬಲಿಯಾದ ಘಟನೆ ನಡೆದಿದೆ. ಚರಂಡಿ, ರಸ್ತೆಗಳೆಲ್ಲಾ ಸಂಪೂರ್ಣ ಜಲಾವೃತಗೊಂಡಿದ್ದು, ಮಳೆಯ ರಭಸಕ್ಕೆ ಕರು ಚರಂಡಿಗೆ ಸಿಲುಕಿದ್ದು, ಚರಂಡಿ ನೀರಿನಲ್ಲಿ ಸಿಲುಕಿದ ಕರುವನ್ನು ರಕ್ಷಿಸಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ. ಕೊನೆಗೂ ಚರಂಡಿ ನೀರಿನಲ್ಲಿ ಮುಳುಗಿ ಕರು ಸಾವನ್ನಪ್ಪಿದೆ. ತುಮಕೂರು ಜಿಲ್ಲೆಯ ಶಿರಾ ನಗರದ 18ನೇ ವಾರ್ಡ್ ನ ಬೇಗಂ ಮೋಹಲ್ಲಾ ಬಳಿ ಈ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಪಾವಗಡ: ತಾಲ್ಲೂಕಿನ ಅರಸೀಕೆರೆ ಗ್ರಾಮದಲ್ಲಿ ಭಾರೀ ಮಳೆಯ ಪರಿಣಾಮದಿಂದಾಗಿ ರೈತರು ಬೆವರು ಹರಿಸಿ ಬೆಳೆಸಿದ್ದ ಅಡಿಕೆ ಗಿಡಗಳು ನೆಲಕ್ಕುರುಳಿವೆ. ಫಸಲಿಗೆ ಬಂದಿದ್ದ ಅಡಿಕೆ ಗಿಡಗಳು ಮಳೆಯ ರಭಸಕ್ಕೆ ಮುರಿದು ಬಿದ್ದಿವೆ. ಅರಸೀಕೆರೆಯ ರೈತ ಪ್ರಕಾಶ್ ಎಂಬುವವರ ಸರ್ವೆ ನಂಬರ್ 127/ 2 ಜಮೀನಿನಲ್ಲಿ ಈ ಘಟನೆ ಸಂಭವಿಸಿದೆ. 10-12 ವರ್ಷದಿಂದ ಬೆಳೆದು ಫಸಲಿಗೆ ಬಂದಿದ್ದ ಅಡಿಕೆ ಗಿಡಗಳು ಉರುಳಿ ಬಿದ್ದ ಪರಿಣಾಮ ಅಂದಾಜು 2 ಲಕ್ಷ ರೂಪಾಯಿಯಷ್ಟು ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಹೀಗೆ ಇದೇ ಗ್ರಾಮದ ಹಲವು ರೈತರು ಬೆಳೆಸಿದ್ದ ಅಡಿಕೆ ಮರಗಳ ಸ್ಥಿತಿಯು ಹೀಗೆಯೆ ಆಗಿದೆ. ಮಳೆ ಬಂದರು ರೈತರೇ ನಷ್ಟಕ್ಕೊಳಗಾಗುತ್ತಾರೆ. ಮಳೆ ಬರದಿದ್ದರೂ ರೈತರೆ ನಷ್ಟ ಅನುಭವಿಸುತ್ತಾರೆ. ರೈತರ ಗೋಳು ಮಾತ್ರ ಸರ್ಕಾರದ ಕಿವಿಗೆ ಕೇಳಿಸುವುದಿಲ್ಲ. ವರದಿ: ನಂದೀಶ್ ನಾಯ್ಕ ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ನಗರದ ಹೊರವಲಯದ ಅಂತರಸಹಳ್ಳಿ ಕ್ಯೆಗಾರಿಕಾ ವಸಾಹತು ಕಾರ್ಖಾನೆಯೊಂದರಿಂದ ಕಲುಷಿತ ನೀರನ್ನು ರಾಜ ಕಾಲುವೆಗೆ ಹೊರಬೀಡುತ್ತಿರುವ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಶುಭಕಲ್ಯಾಣ್ ರವರು ಸೋಮವಾರ ಮಧ್ಯಾಹ್ನ ನಗರದ ಹೊರವಲಯದ ಅಂತರಸಹಳ್ಳಿ ಕ್ಯೆಗಾರಿಕಾ ವಸಾಹತು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೈಗಾರಿಕೆಗಳು ಮಾಲಿನಯುಕ್ತ ತ್ಯಾಜ್ಯಗಳನ್ನು ಕಾಲುವೆಗಳಿಗೆ ಬಿಡಬಾರದು, ಈ ಬಗ್ಗೆ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಸದರಿ ಪ್ರದೇಶವನ್ನು ಸಮಗ್ರವಾಗಿ ಪರಿಶೀಲಿಸಿ, ತ್ವರಿತ ವರದಿ ಸಲ್ಲಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಅಂತರಸಹಳ್ಳಿ ಕೈಗಾರಿಕಾ ವಸಾಹತು ಪ್ರದೇಶದ ವ್ಯಾಪ್ತಿಯು ರಾಜ್ಯ ಸಣ್ಣ ಕ್ಯೆಗಾರಿಕಾ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಸೇರಿರುವುದರಿಂದ, ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ದಿ ನಿಗಮದ ಸಹಾಯಕ ವ್ಯವಸ್ಥಾಪಕರಿಗೆ ಸ್ಥಳದಲೇ ದೂರವಾಣಿ ಮುಖೇನ ಮಾತನಾಡಿ, ಅಂತರಸಹಳ್ಳಿ ಕೈಗಾರಿಕಾ ಪ್ರದೇಶದ ಕಾಲುವೆಗಳಲ್ಲಿ ಇರುವಂತಹ ತ್ಯಾಜ್ಯಗಳ ಪರಿಶೀಲನೆ ಮತ್ತು ವಿಲೇವಾರಿಗೆ ಶೀಘ್ರ ಕ್ರಮಕೈಗೊಳ್ಳುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕರಾದ ಡಿ.ಕೆ.ಲಿಂಗರಾಜು, ಕೆಐಎಡಿಬಿ ಅಧಿಕಾರಿಗಳು ಸೇರಿದ್ದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.…
ಹುಬ್ಬಳ್ಳಿ: ಯುವತಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು. ಹುಬ್ಬಳ್ಳಿಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಹತ್ಯೇಗೀಡಾದ ಇಬ್ಬರು ಯುವತಿಯರ ನಿವಾಸಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿದ, ಬಳಿಕ ಸುದ್ದಿಗಾರರನ್ನು ಉದ್ದೇಶಿಸಿ ಅವರು ಮಾತನಾಡಿದರು. ವಿಪಕ್ಷದವರು ನೇಹಾ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ. ಅನೇಕ ವಿಚಾರಗಳನ್ನು ತಮ್ಮ ಮುಂದೆ ಹೇಳಲು ಆಗುವುದಿಲ್ಲ. ಇದರಿಂದ ತನಿಖೆಗೆ ಅಡ್ಡಿಯಾಗುತ್ತದೆ. ಕೃತ್ಯಕ್ಕೆ ಕಾರಣ ಏನೆಂಬುದನ್ನು ಈಗಲೇ ಹೇಳಲಾಗುವುದಿಲ್ಲ ಎಂದರು. ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕು ಎಂಬ ಉದ್ದೇಶದಿಂದ ಈ ಎರಡು ಕೊಲೆ ಪ್ರಕರಣಗಳನ್ನು ಸಿಐಡಿಗೆ ವಹಿಸಲಾಗಿದೆ. ಸ್ಥಳೀಯ ಪೊಲೀಸರು ಒತ್ತಡಕ್ಕೆ ಒಳಗಾಗಿದ್ದಾರೆ ಎಂಬ ಆರೋಪಗಳು ಬರಬಹುದು. ಹೀಗಾಗಿ ಸಿಐಡಿಗೆ ವಹಿಸಲಾಗಿದೆ ಎಂದು ತಿಳಿಸಿದರು. ವಿಪಕ್ಷದವರು ನೇಹಾ ಹತ್ಯೆ ಪ್ರಕರಣಕ್ಕೆ ರಾಜಕೀಯ ಬಣ್ಣಕಟ್ಟುವ ಪ್ರಯತ್ನ ಮಾಡಿದರು. ಅನೇಕರ ಹೇಳಿಕೆಯನ್ನು ಪೊಲೀಸ್ ಇಲಾಖೆ ಗಮನಿಸಿದೆ. ಪ್ರಕರಣದ ಆರೋಪಿ ಯಾವ ಉದ್ದೇಶಕ್ಕಾಗಿ ಕೃತ್ಯ ಎಸಗಿದ ಎಂಬುದು ತನಿಖೆಯಿಂದ ಹೊರಬರಬೇಕಿದೆ. ಮೂಲಾಂಶವನ್ನು ತನಿಖೆಯಿಂದ…
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ. ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ. ಒನ್ ಇಯರ್ ಖಜಾನೆ ಫುಲ್ ಕ್ಲಿಯರ್, ವರುಷ ಒಂದು ಸಮಸ್ಯೆಗಳು ನೂರೊಂದು. ಕಾಂಗ್ರೆಸ್ ಸರ್ಕಾರ ಬಂತು – ಜನರ ಮುಖದಲ್ಲಿ ಹರ್ಷ ಹೋಯಿತು ಎಂದು ಲೇವಡಿ ಮಾಡಿದ್ದಾರೆ. ಒಂದು ವರ್ಷ ಪೂರೈಸಿದ ಹಿನ್ನೆಲೆ ಮುಖ್ಯಮಂತ್ರಿಗಳು ಕೊಲೆಗಡುಕರಿಗೆ ಧನ್ಯವಾದ ಹೇಳಿದ್ದಾರಾ? ಅಥವಾ ತಮ್ಮ ಸರ್ಕಾರದ ಅವಧಿ ಮುಗಿದುದ್ದಕ್ಕೆ ಬೈಬೈ-ಗುಡ್ ಬೈ ಎಂದು ಧನ್ಯವಾದ ಹೇಳಿದ್ದಾರೋ ಅರ್ಥ ಆಗಿಲ್ಲ. ಸಿದ್ದರಾಮಯ್ಯ ಅವರ ಮುಖದ ಕಳೆ ನೋಡಿದ್ರೆ, ಕಾಂಗ್ರೆಸ್ ಸರ್ಕಾರದ ಅವಧಿ ಮುಗಿದಂತೆ ಕಾಣ್ತಿತ್ತು ಎಂದು ಕುಟಕಿದ್ದಾರೆ. ಕಾಂಗ್ರೆಸ್ ಲೂಟಿ – ಎಷ್ಟು ಕೋಟಿ? ಎಂದು ಜನರು ಲೆಕ್ಕ ಹಾಕುತ್ತಿದ್ದಾರೆ.…
ಹಾಸನ: ಪೆನ್ ಡ್ರೈ ಪ್ರಕರಣದಲ್ಲಿ ದೇವೇಗೌಡ ಇನ್ನೂ ಸ್ಯೂಸೈಡ್ ಮಾಡಕೊಂಡು ಸಾಯಲಿಲ್ಲ ಅನ್ನೋ ಶಿವರಾಮೇಗೌಡ ಮಾತನಾಡಿದ್ರು ಅನ್ನೋ ವಿಚಾರಕ್ಕೆ ಸದ್ಯ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಸದ್ಯ ಈ ಬೆಳವಣಿಗೆ ನಡುವೆ ರೇವಣ್ಣ ಕಾರು ಚಾಲಕ ಕಾರ್ತಿಕ್ ಮತ್ತು ಶಿವರಾಮೇಗೌಡರದ್ದು ಎನ್ನಲಾದ ಆಡಿಯೋ ವೈರಲ್ ಆಗಿದೆ. ಕಾರ್ತಿಕ್ ಅನ್ನೋ ವ್ಯಕ್ತಿ ಶಿವರಾಮೇಗೌಡ ಗೆ ಕರೆ ಮಾಡಿ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾನೆ. ದೇವೇಗೌಡರಿಂದ ಸಂಸದನಾಗಿ ದೇವೇಗೌಡರ ಸಾವು ಬಯಸಿದ್ದು ಸರೀನಾ? ದೇವೇಗೌಡರ ಸಾವು ಬಯಿದ್ರೆ ನೀವೇ ಸ್ಯುಸೈಡ್ ಮಾಡಿಕೊಳ್ಳುತ್ತಿರಾ ಅಂತ ಸಖರ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ನವರಿಗೆ ಮಾರಾಟ ಆಗಿರೋ ಟೀವಿಲಿ ಕ್ಷಮೆ ಕೇಳೋದಲ್ಲ. ಪ್ರೆಸ್ ಮೀಟ್ ಮಾಡಿ ಕ್ಷಮೆ ಕೇಳಿ. ಇಲ್ಲ ನೀವು ಹೇಳಿದ್ದೀರಾ ಎಂದು ಒಪ್ಪಿಕೊಳ್ಳಿ ಎಂದು ಕಾರ್ತಿಕ್ ಹೇಳಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕರ್ನಾಟಕ ಪಬ್ಲಿಕ್ ಸ್ಕೂಲ್ ಬಗ್ಗೆ ನಮ್ಮ ಸರ್ಕಾರ ಬದ್ಧತೆ ಹೊಂದಿದೆ. ನೂರು ಶಾಲೆಗಳನ್ನು ಇಡೀ ರಾಜ್ಯಾದ್ಯಂತ ತೆರೆಯುತ್ತೇವೆ. ಮುಂದಿನ ಮೂರು ವರ್ಷಗಳಲ್ಲಿ 3,000 ಶಾಲೆ ತೆರೆಯುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಎಸ್ಎಸ್ಎಲ್ ಸಿ ಪರೀಕ್ಷೆ ಗ್ರೇಸ್ ಮಾರ್ಕ್ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಅವರು. ಎರಡು ಮತ್ತು ಮೂರನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇರುವುದಿಲ್ಲ. 20 ಗ್ರೇಸ್ ಮಾರ್ಕ್ ಯಾವತ್ತೂ ಇರುತ್ತಾ ಎಂದು ಹಲವರಿಗೆ ಸಂಶಯ ಇದೆ. ಉಡುಪಿ, ದಕ್ಷಿಣ ಕನ್ನಡ ಯಾವತ್ತೂ ಟಾಪರ್ಸ್ ಆಗಿ ಇರುತ್ತಿದ್ದರು. ನಂತರ ರಿಸಲ್ಟ್ ನಲ್ಲಿ ಇಳಿಮುಖವಾಯಿತು. ಈಗ ಮತ್ತೆ ಉಡುಪಿ, ಮಂಗಳೂರು ಟಾಪರ್ಸ್ ಆಗಿದ್ದಾರೆ ಎಂದರು. ನಾವು ಪರೀಕ್ಷೆಯ ಪವಿತ್ರತೆಯನ್ನು ಉಳಿಸಿದ್ದೇವೆ. ಪರೀಕ್ಷೆಗಳ ಪವಿತ್ರತೆ ಉಳಿಸಲು 20 ಗ್ರೇಸ್ ಮಾರ್ಕ್ ನೀಡಲಾಗಿದೆ. ಅಗತ್ಯವಿದ್ದವರು ಎರಡು ಮತ್ತು ಮೂರನೇ ಪರೀಕ್ಷೆ ತೆಗೆದುಕೊಳ್ಳಬಹುದು. ಗ್ರೇಸ್ ಮಾರ್ಕ್ ಪಡೆದವರು ಕೂಡ ಮತ್ತೊಮ್ಮೆ ಪರೀಕ್ಷೆ ಬರೆಯುತ್ತಿದ್ದಾರೆ. ಗ್ರೇಸ್ ಮಾರ್ಕ್ ನೀಡಿರುವುದು ಈ ವರ್ಷಕ್ಕೆ ಮಾತ್ರ. ನಾವೀಗ…