Subscribe to Updates
Get the latest creative news from FooBar about art, design and business.
- ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
- ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್ ಸೆಟ್ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
- ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
- ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
- ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ: ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
- ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
- ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
Author: admin
ಬೆಂಗಳೂರು: ಸಂಪುಟ ಪುನರ್ ರಚನೆ ಪ್ರಸ್ತಾಪ ನಮ್ಮ ಮುಂದೆ ಇಲ್ಲ. ಸದ್ಯಕ್ಕೆ ಸಂಪುಟ ಪುನರ್ ರಚನೆ ಇಲ್ಲ. ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ ಅಂತಾ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ಪ್ರೆಸ್ ಕ್ಲಬ್ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಮಿನಿಮಮ್ 15, ಮ್ಯಾಕ್ಸಿಮಮ್ 20 ಗೆಲ್ತೀವಿ. ಬಿಜೆಪಿಯ ವರ ರೀತಿ, ಯಡಿಯೂರಪ್ಪ ರೀತಿ 28ಕ್ಕೆ 28 ಗೆಲ್ತೀವಿ ಅಂತ ಹೇಳಲ್ಲ ಎಂದು ಬಿಎಸ್ ವೈ ರೀತಿ ಮಿಮಿಕ್ರಿ ಮಾಡಿದ್ರು. ಇದೇ ವೇಳೆ ನೀವು ಪ್ರಧಾನ ಮಂತ್ರಿ ರೇಸ್ ನಲ್ಲಿ ಇದ್ದೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಪ್ರಧಾನಿ ಅಭ್ಯರ್ಥಿ ಅಂತಾ ಕರ್ನಾಟಕದಿಂದ ಯಾರೂ ಇಲ್ಲ. ಕೇಂದ್ರದಲ್ಲಿ INDIA ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ. ನಮ್ಮ ಕಾರ್ಯಕ್ರಮಗಳ ಜಾರಿ ಆಧಾರದಲ್ಲಿ ಚರ್ಚಿಸಿ ಪ್ರಧಾನಮಂತ್ರಿ ಯಾರಾಗಬೇಕು ಎನ್ನುವುದನ್ನು ನಿರ್ಧರಿಸುತ್ತೇವೆ ಅಂತಾ ಸ್ಪಷ್ಟಪಡಿಸಿದ್ರು. ಜಾತಿ ಗಣತಿಯನ್ನ ಸ್ವೀಕಾರ ಮಾಡಿದ್ದೇವೆ. ನಾನು ವರದಿಯನ್ನು ನೋಡಿಯೂ ಇಲ್ಲ. ಕ್ಯಾಬಿನೆಟ್ ಮುಂದೆ ಇಟ್ಟು ಚರ್ಚೆ ಆಗಬೇಕು.…
ಬೆಂಗಳೂರು: ನನ್ನ ಸುತ್ತಮುತ್ತಲಿನ 40 ಜನರ ಫೋನ್ ಗಳನ್ನು ರಾಜ್ಯ ಸರಕಾರ ಟ್ಯಾಪ್ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರೇವಣ್ಣ ಅವರ ಫೋನ್ ಸೇರಿದಂತೆ ನನ್ನ ಸುತ್ತಮುತ್ತ ಇರುವ ಎಲ್ಲರ ಫೋನ್ ಗಳನ್ನೂ ಸರಕಾರ ಟ್ಯಾಪ್ ಮಾಡಿಸುತ್ತಿದೆ. ನನ್ನ ಫೋನ್ ಕೂಡ ಟ್ಯಾಪ್ ಆಗುತ್ತಿದೆ ಎಂದು ದೂರಿದರು. ರಾಜಕೀಯವಾಗಿ ನಮ್ಮ ಕುಟುಂಬವನ್ನು ಮುಗಿಸಲೇಬೇಕು ಎಂದು ಈ ಸರಕಾರ ತೀರ್ಮಾನಕ್ಕೆ ಬಂದಿದೆ. ಅದು ಆಡಿಯೋ ಟೇಪುಗಳಲ್ಲಿಯೇ ಬಯಲಾಗಿದೆ. ಹೀಗಾಗಿ ನಮ್ಮ ಕುಟುಂಬದ ಎಲ್ಲರ ಮೊಬೈಲ್ ಫೋನ್ ಗಳನ್ನು ಸರಕಾರ ಕದ್ದಾಲಿಕೆ ಮಾಡಿಸುತ್ತಿದೆ. ಯಾರನ್ನೂ ಇವರು ಬಿಟ್ಟಿಲ್ಲ, ಎಲ್ಲರ ಫೋನ್ ಟ್ಯಾಪ್ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು. ಫೋನ್ ಟ್ಯಾಪ್ ಮಾಡುವಂಥ ಮುಟ್ಟಾಳ ಕೆಲಸವನ್ನು ನಮ್ಮ ಸರಕಾರ ಮಾಡುತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರಲ್ಲ ಎಂದು ಮಾಧ್ಯಮಗಳು ಗಮನ ಸೆಳೆದಾಗ, ಭೂತದ ಬಾಯಲ್ಲಿ ಭಗವದ್ಗೀತೆ ಬಂದ ಹಾಗಿದೆ ಡಿಕೆಶಿ ಹೇಳೋದು…
ಬೆಂಗಳೂರು: ಬೇರೆಯವರ ಹೆಸರಲ್ಲಿ ಸಿಮ್ ಪರ್ಚೇಸ್ ಮಾಡಿ ವಿದೇಶಕ್ಕೆ ಸಾಗಿಸುತ್ತಿದ್ದವನನ್ನು ಕಸ್ಟಮ್ಸ್ ಅಧಿಕಾರಿಗಳು ಏರ್ ಪೋರ್ಟ್ ನಲ್ಲಿ ಲಾಕ್ ಮಾಡಿದ್ದಾರೆ. ಶ್ರೀನಿವಾಸ್ ಎಂಬಾತ ಬಂಧಿತ ಆರೋಪಿ ಎನ್ನಲಾಗಿದೆ. ಆನ್ ಲೈನ್ ವಂಚನೆಗೆ ದೇಶಿ ಸಿಮ್ ಕಾರ್ಡ್ ಸಂಗ್ರಹಿಸಿ ವಿದೇಶಕ್ಕೆ ಆರೋಪಿ ಮಾರಾಟ ಮಾಡುತ್ತಿದ್ದ. ಭಾರತದಲ್ಲಿನ ಸಿಮ್ ಕಾರ್ಡ್ ಖರೀದಿಸಿ ವಿದೇಶಕ್ಕೆ ಸಾಗಾಟ ಮಾಡುತ್ತಿದ್ದ. ಏರ್ಪೋರ್ಟ್ ನಲ್ಲಿ ಅಧಿಕಾರಿಗಳ ಪರಿಶೀಲನೆ ವೇಳೆ ಕಿಲಾಡಿ ಸಿಕ್ಕಿ ಬಿದ್ದಿದ್ದಾನೆ. ವಿಶಾಖಪಟ್ಟಣದಿಂದ ವಿಯೆಟ್ನಾಂಗೆ ಸಿಮ್ ಕಾರ್ಡ್ ಸಾಗಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಸಿಕ್ಕಿ ಬಿದ್ದಿದ್ದಾನೆ. ಭಾರತೀಯ ಸಿಮ್ ಕಾರ್ಡ್ ಬಳಸಿಕೊಂಡು ಇಲ್ಲಿನ ಜನರಿಗೆ ಮೆಸೇಜ್, ಕರೆಗಳ ಮೂಲಕ ವಂಚನೆಗೆ ಯತ್ನಿಸುತ್ತಿರುವುದು ತಿಳಿದು ಬಂದಿದೆ. ಈ ಬಗ್ಗೆ ಎರಡು ಪ್ರತ್ಯೇಕ ಪ್ರಕರಣಗಳನ್ನ ಪೊಲೀಸರು ಪತ್ತೆ ಹಚ್ಚಿದ್ದಾರೆ. ಬೇರೆ ಬೇರೆ ವ್ಯಕ್ತಿಗಳಿಂದ ಸಿಂಗಲ್ ಆಗಿ ಸಿಮ್ ಕಾರ್ಡ್ ಪಡೆದಿರೋ ಬಗ್ಗೆ ಮಾಹಿತಿ ದೊರೆತಿದೆ. ಕೆಐಎಎಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ಬೆಂಗಳೂರು: ಏರ್ಪೋರ್ಟ್ ನಲ್ಲಿ ಬಾಂಬ್ ಇದೆ ಅಂತಾ ಜೋಕ್ ಮಾಡಿ ಪ್ರಯಾಣಿಕನೋರ್ವ ಪೊಲೀಸರ ಅತಿಥಿಯಾಗಿದ್ದಾನೆ. ಪ್ರಯಾಣಿಕ ಹರಿಯಾಣ ಮೂಲದ ರಾಜೇಶ್ ಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ. ರಾಜಧಾನಿ ಬೆಂಗಳೂರಿನ ಕೆಐಎಎಲ್ ಏರ್ಪೋರ್ಟ್ ನಲ್ಲಿ ಪ್ರಯಾಣಿಕನ ಅವಾಂತರ ಕಂಡು ಬಂದಿದೆ. ಬಾಂಬ್ ಇದೆ ಅಂತಾ ಜೋಕ್ ಮಾಡಿ ಪ್ರಯಾಣಿಕ ಪೊಲೀಸರ ಅತಿಥಿಯಾಗಿದ್ದಾನೆ. ಪ್ರಯಾಣಿಕನನ್ನ ವಶಕ್ಕೆ ಪಡೆದು ಪೊಲೀಸರಿಗೆ ಅಧಿಕಾರಿಗಳು ಒಪ್ಪಿಸಿದ್ದಾರೆ. ಬೆಂಗಳೂರಿನಿಂದ ಪುಣೆಗೆ ರಾಜೇಶ್ ಕುಮಾರ್ ಹೊರಟಿದ್ದ. ಟರ್ಮಿನಲ್-2 ನಲ್ಲಿ ಚೆಕ್ ಇನ್ ವೇಳೆ ಅವಾಂತರ ಕಂಡು ಬಂದಿದೆ. ಚೆಕ್ ಇನ್ ವೇಳೆ ಬ್ಯಾಗ್ ನಲ್ಲಿ ಬಾಂಬ್ ಇದೆ ಎಂದು ಪ್ರಯಾಣಿಕ ಹೇಳಿದ್ದ. ಇದರಿಂದ ಆತಂಕಗೊಂಡು ಪ್ರಯಾಣಿಕನ ಬ್ಯಾಗ್ ತಪಾಸಣೆ ಮಾಡಿದ್ದಾರೆ. ನಂತರ ಪ್ರಯಾಣಿಕನನ್ನ ಕೆಐಎಎಲ್ ಪೊಲೀಸರಿಗೆ ಅಧಿಕಾರಿಗಳು ಒಪ್ಪಿಸಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಚೆಕ್ ಇನ್ ವೇಳೆ ಜೋಕ್ ಮಾಡಿದ್ದಾಗಿ ಪ್ರಯಾಣಿಕ ಹೇಳಿದ್ದಾನೆ. ರಾಜೇಶ್ ಕುಮಾರ್ ವಿರುದ್ಧ ಕೆಐಎಎಲ್ ಪೊಲೀಸರು ಪ್ರಕರಣ ದಾಖಲಿಸಿದ್ದರು. ನಂತರ ಬಂಧನ ಪ್ರಕ್ರಿಯೆ ಮುಗಿಸಿ ಸ್ಟೇಷನ್ ಬೇಲ್…
ಸತತ ಆರು ಪಂದ್ಯಗಳನ್ನು ಗೆಲ್ಲೋ ಮೂಲಕ ಅಸಾಧ್ಯವನ್ನು ಸಾಧ್ಯವನ್ನಾಗಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಪ್ಲೇ ಆಫ್ಸ್ ಗೆ ಅರ್ಹತೆ ಪಡೆದುಕೊಂಡಿದೆ. ಲೀಗ್ ಹಂತದಲ್ಲಿ ತನ್ನ ಪಾಲಿನ ಕಡೇ ಲೀಗ್ ಪಂದ್ಯದಲ್ಲಿ ಬದ್ಧ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ಎದುರು 27 ರನ್ ಗಳ ಜಯ ದಾಖಲಿಸಿ ಅಭಿಮಾನಿ ಬಳಗದ ಮನದಲ್ಲಿ ಮಿಂಚಿನ ಸಂಚಲ ಉಂಟು ಮಾಡಿತು. ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಆರ್ಸಿಬಿ ತಂಡದ ಮಾಜಿ ಮಾಲೀಕ ವಿಜಯ್ ಮಲ್ಯ ವಿಶೇಷ ಸಂದೇಶ ಒಂದನ್ನು ರವಾನಿಸಿದ್ದಾರೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಆರ್ ಸಿಬಿ ತಂಡಕ್ಕೆ ಮುಂದಿನ ಸುತ್ತಿನ ಅರ್ಹತೆ ಪಡೆಯಲು ಕನಿಷ್ಠ 18 ರನ್ ಗಳ ಗೆಲುವಿನ ಅಗತ್ಯವಿತ್ತು. ಅಂತಯೇ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಚಾಲೆಂಜರ್ಸ್ 218 ರನ್ ಗಳ ಬೃಹತ್ ಮೊತ್ತವನ್ನು ದಾಖಲಿಸಿತು. ಬಳಿಕ ಗುರಿ ಬೆನ್ನತ್ತಿದ ಸಿಎಸ್ ಕೆ ತಂಡವನ್ನು…
ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಜಯಂತ್ ಸಿನ್ಹಾ ಅವರು ಸೋಮವಾರ ಮತ ಚಲಾವಣೆ ಮಾಡದ ಹಿನ್ನೆಲೆಯಲ್ಲಿ ಅವರಿಗೆ ಬಿಜೆಪಿ ಶೋಕಾಸ್ ನೋಟಿಸ್ ನೀಡಿದೆ. ಜಾರ್ಖಂಡ್ ನ ಹಝಾರಿಬಾಗ್ ಕ್ಷೇತ್ರದಿಂದ ಮನೀಶ್ ಜೈಸ್ವಾಲ್ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಘೋಷಣೆ ಮಾಡಿದ ಬಳಿಕ “ಸಾಂಸ್ಥಿಕ ಕಾರ್ಯ ಮತ್ತು ಚುನಾವಣಾ ಪ್ರಚಾರ”ದಲ್ಲಿ ಕೂಡಾ ಪಾಲ್ಗೊಂಡಿಲ್ಲ ಎಂದು ಶೋಕಾಸ್ ನೋಟಿಸ್ ನಲ್ಲಿ ಹೇಳಲಾಗಿದೆ. ಕಳೆದ ಮಾರ್ಚ್ ತಿಂಗಳಲ್ಲಿ ಸಿನ್ಹಾ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು. ಈ ಪ್ರತಿಷ್ಠಿತ ಕ್ಷೇತ್ರವನ್ನು ಪ್ರಸ್ತುತ ಅವರು ಪ್ರತಿನಿಧಿಸುತ್ತಿದ್ದಾರೆ. “ಹಝಾರಿಬಾಗ್ ಕ್ಷೇತ್ರದಿಂದ ಮನೀಶ್ ಜೈಸ್ವಾಲ್ ಅವರನ್ನು ಪಕ್ಷದ ಅಭ್ಯರ್ಥಿಯಾಗಿ ಘೋಷಿಸಿದ ಬಳಿಕ ನೀವು ಸಾಂಸ್ಥಿಕ ಕಾರ್ಯ ಮತ್ತು ಚುನಾವಣಾ ಪ್ರಚಾರದಲ್ಲಿ ಆಸಕ್ತಿಯನ್ನು ಕೂಡಾ ತೋರಿಸಿಲ್ಲ. ಮತ ಚಲಾಯಿಸಬೇಕು ಎಂಬ ಭಾವನೆ ಕೂಡಾ ನಿಮಗೆ ಬಂದಿಲ್ಲ. ನಿಮ್ಮ ನಡತೆಯಿಂದ ಪಕ್ಷದ ಘನತೆಗೆ ಧಕ್ಕೆ ಬಂದಿದೆ” ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಆದಿತ್ಯ ಸಾಹು ನೋಟಿಸ್ನಲ್ಲಿ ಹೇಳಿದ್ದಾರೆ. ಎರಡು ದಿನಗಳ ಒಳಗಾಗಿ…
ಲಾಹಾವುಲ್ ಹಾಗೂ ಸ್ಪಿಟಿಗೆ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಹಿಮಾಚಲಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಅವರಿಗೆ ಸ್ಥಳೀಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಕಪ್ಪು ಬಾವುಟ ತೋರಿಸಿದ ಘಟನೆ ನಡೆದಿದೆ. ಕಂಗನಾ ಅವರ ಬೆಂಗಾವಲು ವಾಹನಗಳ ಮೇಲೆ ಕಲ್ಲೆಸೆಯಲಾಗಿದೆಯೆಂದು ಬಿಜೆಪಿ ಆಪಾದಿಸಲಾಗಿದೆ. ‘ಕಂಗನಾ ವಂಗನಾ ನಹಿ ಚಲೇಗಿ’, ‘ಕಂಗನಾ ಗೋ ಬ್ಯಾಕ್’ ಇತ್ಯಾದಿ ಘೋಷಣೆಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಕೂಗಿದ್ದಾರೆ. ಟಿಬೆಟ್ ಅಧ್ಯಾತ್ಮಿಕ ಧರ್ಮಗುರು ದಲಾಯಿ ಲಾಮಾ ಬಗ್ಗೆ ಕಂಗನಾ ಅವರು ಕಳೆದ ವರ್ಷದ ಎಪ್ರಿಲ್ ನೀಡಿದ ವಿವಾದಿತ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಚುನಾವಣಾ ಪ್ರಚಾರ ಸಭೆಯನ್ನು ಕೆಡಿಸಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ್ದಾರೆ ಹಾಗೂ ತಾವು ಹಿಂತಿರುಗುತ್ತಿದ್ದಾಗ ತಮ್ಮ ಕಾರಿಗೆ ಕಲ್ಲೆಸೆದಿದ್ದಾರೆಂದು ಹಿಮಾಚಲಪ್ರದೇಶದ ಪ್ರತಿಪಕ್ಷ ನಾಯಕ ಜೈ ರಾಮ್ ಠಾಕೂರ್ ಆಪಾದಿಸಿದ್ದಾರೆ. ‘ಅಮೆರಿಕದ ಶ್ವೇತಭವನಕ್ಕೆ ಭೇಟಿ ನೀಡಿದ ಸಂದರ್ಭ, ದಲಾಯಿ ಲಾಮಾ ಅವರು ಜೊಬೈಡೆನ್ ಜೊತೆ ಫೋಟೋ ತೆಗೆಸಿಕೊಂಡ ಸಂದರ್ಭ ತನ್ನ ನಾಲಗೆಯನ್ನು ಹೊರಚಾಚಿರುವ ಛಾಯಾಚಿತ್ರವನ್ನು…
ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟ ಮಾಡುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯಮಾಪನ ಮಂಡಳಿಯು ಹೇಳಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದು. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧಿಕೃತ ವೆಬ್ ಸೈಟ್ ಮೇಲೆ ಕ್ಲಿಕ್ ಮಾಡಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಅಲ್ಲದೆ, ಮಂಗಳವಾರವೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ದಿನಾಂಕವನ್ನು ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ. ಫಲಿತಾಂಶವನ್ನು ನೋಡುವುದು ಹೇಗೆ? ದ್ವಿತೀಯ PUC ಫಲಿತಾಂಶಗಳು https://karresults.nic.in/ ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್ ಗೆ ಭೇಟಿ ನೀಡಿ. ಮುಖಪುಟದಲ್ಲಿ ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ. ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು…
ಕೆಲದಿನಗಳ ಹಿಂದೆ ಪುಟ್ಟ ಕಂದಮ್ಮವೊಂದು ಅಪಾರ್ಟ್ ಮೆಂಟ್ ನ ಬಾಲ್ಕನಿಯಿಂದ ಬಿದ್ದಿದ್ದ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿತ್ತು, ಮತ್ತು ಆ ಮಗುವನ್ನು ರಕ್ಷಿಸಲಾಗಿತ್ತು. ಇದೀಗ ಆ ಮಗುವಿನ ತಾಯಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಕಸ್ಮಿಕವಾಗಿ ತನ್ನ ಕೈಯಿಂದ ಜಾರಿ ಮಗು ಅಪಾರ್ಟ್ ಮೆಂಟ್ ಬಾಲ್ಕನಿಯಲ್ಲಿ ಬಿದ್ದ ಘಟನೆಯ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ನಿಂದನೆ ವ್ಯಕ್ತವಾಗಿದ್ದರಿಂದ, ಮನನೊಂದು ಟೆಕ್ಕಿ ರಮ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಯಮತ್ತೂರಿನ ಕಾರಮಡೈಯಲ್ಲಿರುವ ತವರು ಮನೆಯಲ್ಲಿ ರಮ್ಯಾ ಸಾವನ್ನಪ್ಪಿರುವುದು ಅಚ್ಚರಿಗೆ ಕಾರಣವಾಗಿದೆ. ತಾಯಿಯ ಕೈಯಿಂದ ಮಗು ಬಿತ್ತೆಂದು ವೈರಲ್ ವಿಡಿಯೋದಲ್ಲಿ ಹಲವರು ತಾಯಿಯನ್ನು ನಿಂದಿಸಿದ್ದರು ಎನ್ನಲಾಗಿದೆ. ಈ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರಮ್ಯಾ ಚೆನ್ನೈನ ಐಟಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಮತ್ತು ಆಕೆಯ ಪತಿ ವೆಂಕಟೇಶ್ ಕೂಡ ಐಟಿ ಉದ್ಯೋಗಿ ಎನ್ನಲಾಗಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ರಮ್ಯಾರನ್ನು ಪೋಷಕರು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಆಕೆ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ…
ತುಮಕೂರು: ಮುಂಗಾರು ಮಳೆಯಿಂದ ಸಂಭವಿಸಬಹುದಾದ ವಿವಿಧ ರೀತಿಯ ಪ್ರಾಕೃತಿಕ ವಿಕೋಪ ಪರಿಸ್ಥಿತಿಯನ್ನು ಎದುರಿಸಲು ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳುವ ಮೂಲಕ ಜಿಲ್ಲೆಯಲ್ಲಿ ಯಾವುದೇ ಜೀವಹಾನಿಯಾಗದ ರೀತಿಯಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸನೃದ್ದರಾಗಿರುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ನಿರ್ದೇಶನ ನೀಡಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯ ವೀಡಿಯೋ ಕಾನ್ಪೆರೆನ್ಸ್ ಸಭಾಂಗಣದಲ್ಲಿ ನಡೆದ ‘ಮುಂಗಾರು-೨೦೨೪ ಪೂರ್ವಸಿದ್ದತೆ ಹಾಗೂ ಬರ ನಿರ್ವಹಣೆ ಮತ್ತು ಕಂದಾಯ ವಿಷಯಗಳಿಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾದ್ಯಂತ ಆಗಿರುವ ಮಳೆಯ ಪ್ರಮಾಣ, ಅದರಿಂದ ಆದ ಹಾನಿ, ಬರ ನಿರ್ವಹಣೆ, ಮೊದಲಾದ ವಿಷಯದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ರಾಷ್ಟೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಗಾರು ಮಳೆ ಹಾಗೂ ಚಂಡಮಾರುತ ಪರಿಣಾಮಗಳನ್ನು ತಗ್ಗಿಸಲು ಕ್ಯೆಗೊಳ್ಳಬಹುದಾದ ಕ್ರಮಗಳ ಕುರಿತು ನೀಡಿರುವ ಸಲಹೆ ಸೂಚನೆಗಳ ರೀತ್ಯ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು, ಜಿಲ್ಲೆಯಲ್ಲಿ ಈ ಹಿಂದಿನ ವರ್ಷಗಳಲ್ಲಿ ಉಂಟಾದ ಘಟನೆಗಳಿಗೆ ಅನುಗುಣವಾಗಿ ಸಮಸ್ಯೆಗೆ ಒಳಗಾದ ಸ್ಥಳಗಳನ್ನು ಪರಿಶೀಲಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.…