Author: admin

ಕೊರಟಗೆರೆ: ಕುರಿಮಂದೆಯನ್ನು ಗಮನಿಸಿದ ಹೆಬ್ಬಾವೊಂದು ಮೇಕೆ ಮರಿಯನ್ನು ತಿನ್ನಲು ಬಂದಾಗ, ಉರಗ ತಜ್ಞರ ಸಹಾಯದಿಂದ ಹೆಬ್ಬಾವನ್ನು ಸೆರೆಹಿಡಿಯಲಾಗಿರುವ ಘಟನೆ ಕೊರಟಗೆರೆ ತಾಲ್ಲೂಕಿನ ಕುರಂಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಣುವಿನಕುರಿಕೆ ಗ್ರಾಮದಲ್ಲಿ ನಡೆದಿದೆ. ಕುರಿಗಳನ್ನು ಮೇಯಿಸುತ್ತಿದ್ದ ವೇಳೆ, ಸುಮಾರು 11 ಅಡಿ ಉದ್ದ, 16 ಕೆಜಿ ತೂಕದ ಬೃಹತ್ ಗಾತ್ರದ ಹೆಬ್ಬಾವು ಮೇಕೆಯ ಮೇಲೆ ದಾಳಿ ಮಾಡಿ ಮೇಕೆ ಮರಿ ನುಂಗಲು ಯತ್ನಿಸುತ್ತಿದ್ದ ವೇಳೆ, ಇದನ್ನು ಗಮನಿಸಿದ ಮಾಲೀಕ ಮೇಕೆ ಮರಿ ಪ್ರಾಣ ಉಳಿಸಲು ಜೋರಾಗಿ ಕಿರುಚಾಡಿದ್ದಾರೆ. ಜನರ ಕಿರುಚಾಟಕ್ಕೆ ಬೆದರಿದ ಹೆಬ್ಬಾವು ಅಲ್ಲೆ ಪಕ್ಕದಲ್ಲಿದ್ದ ಕತ್ತಾಳೆ ಗಿಡ ಸೇರಿ ಅವಿತುಕೊಂಡಿದೆ. ಕೂಡಲೇ ಸ್ಥಳೀಯರು ತುಮಕೂರು ವರಂಗಲ್ ಫೌಂಡೇಶನ್ ವನ್ಯಜೀವಿ ಹಾಗೂ ಉರಗ ರಕ್ಷಣಾ ಸಂಸ್ಥೆಗೆ ಮಾಹಿತಿ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಉರಗ ತಜ್ಞ ದಿಲೀಪ್ ಸುಮಾರು ಸಮಯ ಕಾರ್ಯಾಚರಣೆ ನಡೆಸಿ ಹೆಬ್ಬಾವನ್ನು ಸೆರೆ ಹಿಡಿದು, ಹೊರ ತಂದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಗಿದೆ. ಇನ್ನು ಈ ಕಾರ್ಯಾಚರಣೆಯಲ್ಲಿ ಆರ್‌ಎಫ್‌ಓ ರವಿಕುಮಾರ್ ನೇತೃತ್ವದಲ್ಲಿ ಡಿ…

Read More

ಗುಬ್ಬಿ: ಹೇಮಾವತಿ ನೀರು ಮಾಗಡಿಗೆ ಹರಿಸುವ ಲಿಂಕ್ ಕೆನಾಲ್ ಪೈಪ್ ಲೈನ್ ಕಾಮಗಾರಿಗೆ ಸಾವಿರಾರು ರೈತರು ಹೋರಾಟ ನಡೆಸಿ ಕೆಲಸ ನಿಲ್ಲಿಸಲು ಸೂಚಿಸಿದ್ದರೂ, ಮೂರು ದಿನದ ಬಳಿಕ ಬೃಹತ್ ಗಾತ್ರದ ೧೨ ಅಡಿ ವ್ಯಾಸದ ಪೈಪ್ ಗಳನ್ನು ಲಾರಿಗಳ ಮೂಲಕ ತಂದು ಕೆಲಸ ಪುನರಾರಂಭ ಮಾಡುವ ಮುನ್ಸೂಚನೆ ಕಂಡ ರೈತರು, ತಕ್ಷಣ ಶಾಸಕ ಎಂ.ಟಿ. ಕೃಷ್ಣಪ್ಪ ಹಾಗೂ ಮಾಜಿ ಸಚಿವ ಸೊಗಡು ಶಿವಣ್ಣ ಅವರ ನೇತೃತ್ವದಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಸಿ.ಎಸ್.ಪುರ ಹೋಬಳಿ ಹೊಸಹಳ್ಳಿ ಕ್ರಾಸ್ ಬಳಿ ದೊಡ್ಡ ಪೈಪ್ ಹೊತ್ತ ೨೫ ಲಾರಿಗಳು ಪ್ರತ್ಯಕ್ಷವಾಗಿರುವುದು ಕಂಡ ಸ್ಥಳೀಯ ರೈತರು, ಶಾಸಕರಿಗೆ ಮಾಹಿತಿ ತಿಳಿಸಿದರು. ಕೂಡಲೇ ನೂರಾರು ಮಂದಿ ಜಮಾಯಿಸಿ ಹೆಬ್ಬರು ರಸ್ತೆಯಲ್ಲಿ ಕುಳಿತು ಕೆಲ ಕಾಲ ಪ್ರತಿಭಟನೆ ನಡೆಸಿ, ಲಾರಿಗಳನ್ನು ತಡೆದು ಮರಳಿ ವಾಪಸ್ ಹೋಗಲು ತಾಕೀತು ಮಾಡಿದರು. ಪ್ರತಿಭಟನಾ ನಿರತರನ್ನು ಕುರಿತು ಶಾಸಕ ಎಂ.ಟಿ. ಕೃಷ್ಣಪ್ಪ ಮಾತನಾಡಿ, “ಯಾವುದೇ ರೀತಿ ರೈತರಿಗೆ ನೋಟಿಸ್ ನೀಡದೆ ಭೂ ವಶಕ್ಕೆ…

Read More

ರಾಯಚೂರು: ಅನಧಿಕೃತವಾಗಿ ನಡೆಸುತ್ತಿದ್ದ ಕೋಚಿಂಗ್‌ ಸೆಂಟರ್ ‌ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ರಾಯಚೂರಿನ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ. ಲಿಂಗಸೂಗೂರು ಎಸಿ ನೇತೃತ್ವದಲ್ಲಿ 10ಕ್ಕೂ ಹೆಚ್ಚು ಕೋಚಿಂಗ್‌ ಸೆಂಟರ್ ‌ಗಳ ಮೇಲೆ ದಾಳಿ ನಡೆಸಿದ್ದಾರೆ. ಅನಧಿಕೃತವಾಗಿ ನಡೆಸುತ್ತಿರುವ ಎಲ್ಲಾ ಕೋಚಿಂಗ್ ಸೆಂಟರ್ ‌ಗಳು ಬಂದ್ ಆಗಬೇಕು. ಗಡುವು ಮೀರಿದ ಬಳಿಕ ಕ್ಲಾಸ್ ನಡೆಸಿದ್ರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ. ಎಲ್ಲಾ ಕೇಂದ್ರಗಳನ್ನು ಬಂದ್‌ ಮಾಡಿ ಮಕ್ಕಳನ್ನು ತಮ್ಮ ತಮ್ಮ ಪೋಷಕರ ಬಳಿ ಕಳುಹಿಸಬೇಕು. ಗಡುವು ಮೀರಿದ ಬಳಿಕ ಕ್ಲಾಸ್ ನಡೆಸಿದ್ರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಲಿಂಗಸುಗೂರು ಸಹಾಯಕ ಆಯುಕ್ತ ಅವಿನಾಶ್ ಶಿಂಧೆ ಎಚ್ಚರಿಕೆ ನೀಡಿದ್ದಾರೆ. ಅನಧಿಕೃತ ಕೋಚಿಂಗ್ ಸೆಂಟರ್ ಗಳು ವಸತಿ ಸಹಿತವಾಗಿದ್ದರೆ, ಇನ್ನೂ ಕೆಲವು ವಸತಿ ರಹಿತವಾಗಿ ನಡೆಸುತ್ತಿದ್ದದ್ದು ಪತ್ತೆಯಾಗಿದೆ. ಹಾಗಾಗಿ ದಾಳಿ ನಡೆಸಿದ ಅಧಿಕಾರಿಗಳ ತಂಡ ಸೋಮವಾರ ಒಳಗೆ ಕೋಚಿಂಗ್‌ ಸೆಂಟರ್‌ ಗಳನ್ನು ಬಂದ್‌ ಮಾಡುವಂತೆ ಸೂಚಿಸಿದೆ. ಈ ಕ್ರಮಗಳನ್ನು ಶಿಕ್ಷಣ ಇಲಾಖೆ ರಾಜ್ಯದಾದ್ಯಂತ ನಡೆಸಲು…

Read More

ತುರುವೇಕೆರೆ: “ನಮ್ಮ ತಾಲೂಕಿನ ಜನಪ್ರಿಯ ಶಾಸಕರಾದ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್. ಶ್ರೀನಿವಾಸ್ ರವರು ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ನಮ್ಮ ಪಕ್ಷದ ಪರವಾಗಿ ಹಾಗೂ ವೈಯಕ್ತಿಕವಾಗಿ ಖಂಡಿಸುತ್ತೇನೆ. ನಾನು ನಿಮಗೆ ನೇರವಾಗಿ ಪ್ರಶ್ನೆ ಮಾಡುತ್ತೇನೆ. ನಮ್ಮ ಶಾಸಕರು ನಿಮ್ಮನ್ನು ಎಲ್ಲಿ ಕಳ್ಳ ಎಂದು ಹೇಳಿಕೆಯನ್ನು ನೀಡಿದ್ದಾರೆ? ತಮ್ಮಲ್ಲಿ ಆಡಿಯೋ ಅಥವಾ ವಿಡಿಯೋ ತುಣುಕುಗಳಿದ್ದರೆ ಬಹಿರಂಗಪಡಿಸಿ” ಎಂದು ತುರುವೇಕೆರೆ ತಾಲೂಕು ಜೆಡಿಎಸ್ ಪಕ್ಷದ ವಕ್ತಾರ ವೆಂಕಟಾಪುರ ಯೋಗೀಶ್ ತುರುವೇಕೆರೆ ಕ್ಷೇತ್ರದ ಶಾಸಕ ಶ್ರೀನಿವಾಸ ವಿರುದ್ಧ ಕಿಡಿಕಾರಿದರು. ಪಟ್ಟಣದ ದಬ್ಬೆಘಟ್ಟ ರಸ್ತೆಯಲ್ಲಿರುವ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಘೋಷ್ಠಿಯಲ್ಲಿ ಮಾತನಾಡಿ, “ತಾಕತ್ತಿದ್ದರೆ ಗುಬ್ಬಿಗೆ ಬನ್ನಿ ನಿಮ್ಮ ಕೊರಳಪಟ್ಟಿ ಹಿಡಿದು ಎಳೆದುಕೊಳ್ಳುತ್ತೇನೆ ಮತ್ತು ಕೃಷ್ಣಪ್ಪನವರ ಗಂಡಸ್ತನದ ಬಗ್ಗೆ ಮಾಧ್ಯಮದ ಪ್ರತಿನಿಧಿಗಳ ಮುಂದೆ ಪ್ರಶ್ನೆ ಮಾಡಿದ್ದೀರಿ. ಕೃಷ್ಣಪ್ಪನವರ ಗಂಡಸ್ತನ ಏನು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ. ನಿಮಗೆ ತಾಕತ್ತಿದ್ದರೆ ಕೃಷ್ಣಪ್ಪನವರ ಒಂದು ರೋಮ ಮುಟ್ಟಿ ಸಾಕು. ಮುಂದೆ ರಾಜ್ಯದಲ್ಲಿ ಯಾವ ರೀತಿಯ ಪರಿಣಾಮವಾಗುತ್ತದೆ ಎಂದು ನೋಡಿ. ವಾಸುರವರೆ ನೀವೇ…

Read More

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪೂರ್ವ ಮುಂಗಾರಿನ ಅಬ್ಬರ ಜೋರಾಗಿದೆ. ಕಳೆದ ಎಂಟತ್ತು ದಿನಗಳಿಂದ ಅಬ್ಬರಿಸುತ್ತಿರೋ ಮಳೆರಾಯ, ರಾಜ್ಯದಾದ್ಯಂತ ಮುಂದಿನ ನಾಲ್ಕೈದು ದಿನ ಮತ್ತಷ್ಟು ಅಬ್ಬರಿಸುವ ಸಾಧ್ಯತೆಯಿದೆ. ರಾಜ್ಯದ ಅನೇಕ ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ ಕೂಡ ಇದ್ದು, ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಮೇಲ್ಮೈ ಸುಳಿಗಾಳಿ, ಟ್ರಫ್ ಹಾಗೂ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಇಂದಿನಿಂದ ಐದು ದಿನ ರಾಜ್ಯದ 17 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ ಮಾಡಲಾಗಿದೆ. ಇಂದಿನಿಂದ ಮೂರು ದಿನ ಕರಾವಳಿ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ 5 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಉತ್ತರ ಕರ್ನಾಟಕದ ಭಾಗಗಳಿಗೆ ಸಾಧಾರಣ ಮಳೆ ಮುನ್ಸೂಚನೆ ನೀಡಲಾಗಿದೆ. ಜೊತೆಗೆ ಬಹುತೇಕ ಕಡೆ ಮಳೆ ಜೊತೆಗೆ ಬಿರುಗಾಳಿ ಸಹಿತ ಮಳೆ, ಗುಡುಗು ಮಿಂಚಿನ ಎಚ್ಚರಿಕೆ ಕೂಡ ನೀಡಲಾಗಿದೆ. ಬೆಂಗಳೂರಿನಲ್ಲೂ ಮಳೆಯ ಅಬ್ಬರ ಮುಂದುವರೆಯುವ ಸಾಧ್ಯತೆ ಇದ್ದು, ಮುಂದಿನ ಒಂದು ವಾರ ನಗರದ…

Read More

ಬೆಳಗಾವಿ: ಕಂಗ್ರಾಳಿ ಕೆಎಚ್ ಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದು, ಮಲತಾಯಿಯೇ ಕೊಲೆ ಮಾಡಿರುವ ಆರೋಪ ಕೇಳಿ ಬರುತ್ತಿದೆ. ಸಮೃದ್ಧಿ ರಾಯಣ್ಣ ನಾವಿ(4) ಮೃತ ಬಾಲಕಿಯಾಗಿದ್ದಾಳೆ. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಮನೆಯಲ್ಲಿ ಆಟವಾಡುತ್ತಿದ್ದ ಮಗು ಏಕಾಏಕಿ ಸಾವನ್ನಪ್ಪಿದೆ. ಹುಷಾರಿಲ್ಲವೆಂದು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಬರುವಾಗಲೇ ದಾರಿ ಮಧ್ಯೆ ಮಗು ಕೊನೆಯುಸಿರೆಳೆದಿದೆ. ಮಗು ಸಾವಿನ ಸುದ್ದಿ ತಿಳಿದು ಅಜ್ಜ, ಅಜ್ಜಿ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಈಗ ಮಲತಾಯಿ ಸಪ್ನಾಳೇ 4 ವರ್ಷದ ಮೊಮ್ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಬಾಲಕಿ‌ ಅಜ್ಜ ಸುನೀಲ ಹಂಪನ್ನವರ ಗಂಭೀರ ಆರೋಪ ಮಾಡಿದ್ದಾರೆ. ಮೃತ ಬಾಲಕಿ ತಂದೆ ರಾಯಣ್ಣ ನಾವಿ ಛತ್ತೀಸ್‌ ಗಢದಲ್ಲಿ ಸಿಆರ್ ಪಿಎಫ್ ಯೋಧರಾಗಿ ಕೆಲಸ ಮಾಡುತ್ತಿದ್ದಾರೆ. ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296  

Read More

ಕೊರಟಗೆರೆ: ಕೊರಟಗೆರೆ ಪಟ್ಟಣದ ಶ್ರೀ ಬೈಲಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ತಹಸಿಲ್ದಾರ್ ಮಂಜುನಾಥ್ ಕೆ. ಪೂಜೆ ಸಲ್ಲಿಸಿ ರೈತರಿಗೆ ಮೇವು ವಿತರಣೆಗೆ ಚಾಲನೆ ನೀಡಿದರು. ರಾಜ್ಯದಲ್ಲಿ ಭೀಕರ ಬರಗಾಲದಿಂದ ಮಳೆ ಬೆಳೆ ಇಲ್ಲದೆ ಜಾನುವಾರಗಳಿಗೆ ಮೇವು ಇಲ್ಲದೆ ಆಹಾಕಾರ ಸೃಷ್ಟಿ ಯಾಗಿರುವ ಕಾರಣ, ಈಗಾಗಲೇ ರಾಜ್ಯ ಸರ್ಕಾರವು ಕೊರಟಗೆರೆ ತಾಲೂಕನ್ನು ಬರ ಪೀಡಿತ ತಾಲೂಕು ಎಂದು ಘೋಷಣೆ ಮಾಡಿದೆ. ಮಾನ್ಯ ಜಿಲ್ಲಾಧಿಕಾರಿಗಳ ಆದೇಶದಂತೆ ಈಗಾಗಲೇ ತಾಲೂಕಿನ ಬುಕ್ಕಪಟ್ಟಣ ದೊಡ್ಡಮ್ಮ ದೇವಿ ಹಾಗೂ ಕ್ಯಾಮೇನಹಳ್ಳಿ ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ, ಮೇವು ಬ್ಯಾಂಕ್ ಪ್ರಾರಂಭವಾಗಿದ್ದು, ಅಲ್ಲಿನ ಸುತ್ತಮುತ್ತ ಗ್ರಾಮಗಳ ರೈತರು ಜಾನುವಾರುಗಳಿಗೆ ಮೇವನ್ನು  ಪಡೆದುಕೊಳ್ಳುತ್ತಿದ್ದಾರೆ. ಇದೀಗ ಕೊರಟಗೆರೆ ಪಟ್ಟಣದ ಶ್ರೀ ಬೈಲಾಂಜನೇಯ ಸ್ವಾಮಿಯ ದೇವಸ್ಥಾನದ ಆವರಣದಲ್ಲಿ ಮತ್ತೊಂದು ಮೇವು ಬ್ಯಾಂಕ್ ಇಂದಿನಿಂದ ಪ್ರಾರಂಭವಾಗಿದ್ದು, ಕಸಬಾ ಹೋಬಳಿಯ ರೈತರು ಹಾಗೂ ಸುತ್ತಮುತ್ತ ಹಳ್ಳಿಗಳ ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದು. ಈಗ ತಾನೇ ಎಲ್ಲಾ ಕಡೆ ವರುಣನ ಕೃಪೆ ನಮಗೆ ಆಗುತ್ತಿದೆ. ಉತ್ತಮ ಮಳೆಯಾಗಿ ಜಾನುವಾರಗಳಿಗೆ…

Read More

ಟೆಹ್ರಾನ್:‌ ಭಾನುವಾರ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಅಜರ್ ಬೈಜಾನ್‍ ನ ಗಡಿಗೆ ಭೇಟಿ ನೀಡಿ ಹಿಂದಿರುಗುವ ಮಾರ್ಗದಲ್ಲಿ ಪರ್ವತ ಪ್ರದೇಶವನ್ನು ದಾಟುತ್ತಿದ್ದಾಗ ದಟ್ಟ ಮಂಜಿನಿಂದಾಗಿ ಪತನವಾಗಿತ್ತು. ಕಡಿದಾದ ಪರ್ವತ ಶ್ರೇಣಿಯ ಕಣಿವೆ ಭಾಗದಲ್ಲಿ ಪ್ರತಿಕೂಲ ವಾತಾವರಣದ ನಡುವೆ ಹಲವು ಗಂಟೆಗಳ ಶೋಧ ಕಾರ್ಯದ ಬಳಿಕ ಡ್ರೋನ್ ಮೂಲಕ ಪತನಗೊಂಡ ಹೆಲಿಕಾಪ್ಟರ್ ಅವಶೇಷ ಪತ್ತೆ ಮಾಡಲಾಗಿತ್ತು. ಹೆಲಿಕಾಪ್ಟರ್ ಸುಟ್ಟು ಭಸ್ಮವಾಗಿದೆ ಎಂದು ಅಧಿಕಾರಿ ತಿಳಿಸಿದ್ದರು. ಹೆಲಿಕಾಪ್ಟರ್ ಅಪಘಾತದ ನಂತರ ಶೋಧ ಕಾರ್ಯಾಚರಣೆಯಲ್ಲಿ ಇಂದು ಮೃತದೇಹಗಳನ್ನು ಸಾಗಿಸುತ್ತಿರುವ ತುಣುಕನ್ನು ಅಲ್ಲಿನ ಸುದ್ದಿ ಸಂಸ್ಥೆಯೊಂದು ಬಿಡುಗಡೆ ಮಾಡಿದೆ. ಸೋಮವಾರ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ ಶೋಧ ತಂಡಗಳು ಅವಶೇಷಗಳನ್ನು ಪತ್ತೆ ಮಾಡಿದ ನಂತರ ರೈಸಿ ಮತ್ತು ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಇರಾನ್ ಅಧಿಕಾರಿ ತಿಳಿಸಿದ್ದಾರೆ. ಇರಾನ್‌ ನ ಸುದ್ದಿ ಸಂಸ್ಥೆಯು ರೈಸಿ ಹಾಗೂ ಇತರರ ಸಾವುಗಳನ್ನು ದೃಢಪಡಿಸಿದೆ. ಇರಾನ್ ಅಧ್ಯಕ್ಷ ಮತ್ತು ವಿದೇಶಾಂಗ ಸಚಿವರನ್ನು ಹೊತ್ತ…

Read More

ಕೆಲವರು ದೇಹವನ್ನು ಆಟದ ಗೊಂಬೆಯಂತೆ ತಮಗೆ ಬೇಕಾದ ರೀತಿಯಲ್ಲಿ ಅಥವಾ ಪ್ರಸ್ತುತ ಟ್ರೆಂಡ್ ಗಳಿಗೆ ತಕ್ಕಂತೆ ಬದಾಲಾಯಿಸಿಕೊಳ್ಳುವುದು ವಾಡಿಕೆ. ಅಮೆರಿಕದ ವ್ಯಕ್ತಿಯೊಬ್ಬರು ಇತ್ತೀಚಿಗಷ್ಟೇ ಸರ್ಜರಿ ಮೂಲಕ ದೇಹದ ಮೇಲೆ ನಾಲ್ಕು ಮೊಲೆತೊಟ್ಟುಗಳನ್ನು ಸೇರಿಸಿಕೊಂಡ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಹ್ಯಾರಿ ಹೂಫ್‌ ಕ್ಲೋಪೆನ್ ಎಂಬ ವ್ಯಕ್ತಿ ಇದೀಗಾ ಒಟ್ಟು 6 ಮೊಲೆ ತೊಟ್ಟುಗಳನ್ನು ಹೊಂದಿದ್ದಾರೆ. ಪ್ರಾರಂಭದಲ್ಲಿ ದೇಹ ಮಾರ್ಪಾಡು ತಜ್ಞ ಸ್ಟೀವ್ ಹಾವರ್ತ್ ಸರ್ಜರಿ ಮೂಲಕ ದೇಹದ ಮೇಲೆ ನಾಲ್ಕು ಮೊಲೆತೊಟ್ಟು ಹಾಕುವ ಸರ್ಜರಿಗೆ ಒಳಗಾಗಿದ್ದ, ಆದರೆ ಅದು ವಿಫಲವಾಗಿತ್ತು. ಬಳಿಕ ಕೊಲೊರಾಡೋ ಮೂಲದ ಟ್ಯಾಟೂ ಕಲಾವಿದ ಏಂಜೆಲ್‌ ಸಿಲಿಕೋನ್ ಇಂಪ್ಲಾಂಟ್‌ಗಳನ್ನು ನೈಸರ್ಗಿಕವಾಗಿ ಕಾಣುವ ರೀತಿಯಲ್ಲಿ ಹಚ್ಚೆ ಹಾಕಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಗಾಢನಿದ್ದೆಯಲ್ಲಿದ್ದ ಗೆಳೆಯನ ಗುಪ್ತಾಂಗವನ್ನೇ ಮಹಿಳೆಯೊಬ್ಬಳು ಕತ್ತರಿಸಿ ಎಸೆದಿರುವ ಘಟನೆ ಅಮೆರಿಕದ ಕೊಲೋರಡೋ ಪ್ರದೇಶದಲ್ಲಿ ವರದಿಯಾಗಿದೆ. ತನ್ನನ್ನು ನೆಮ್ಮದಿಯಿಂದ ಮಲಗುವುದಕ್ಕೆ ಬಿಡದಿದ್ದ ಕಾರಣ ಮತ್ತು ಆತ ಮತ್ತೆ ತನ್ನನ್ನು ಗರ್ಭಿಣಿಯನ್ನಾಗಿ ಮಾಡಿದ್ದಾನೆಂಬ ಕಾರಣಕ್ಕೆ ಕೋಪಗೊಂಡ ಮಹಿಳೆ ಬಾಯ್ ಫ್ರೆಂಡ್ ನ ಗುಪ್ತಾಂಗವನ್ನೇ ಕತ್ತರಿಸಿದ್ದಾಳೆ ಎಂದು ತನಿಖೆಯಿಂದ ಬಯಲಾಗಿದೆ. ಹೊಟೇಲ್ ವೊಂದರಲ್ಲಿ ಈ ಘಟನೆ ನಡೆದಿದ್ದು, ಶೆಂಟಿಂಗ್ ಗೋ ಎಂಬ 32ವರ್ಷದ ಮಹಿಳೆ ತನ್ನ ಬಾಯ್ ಫ್ರೆಂಡ್ ಅನ್ನು ಹಲವು ಬಾರಿ ಚುಚ್ಚಿದ್ದಾಳೆ. ಬಳಿಕ ಅವನ ಗುಪ್ತಾಂಗವನ್ನು ಕಟ್ ಮಾಡಿ ಎಸೆದಿದ್ದಾಳೆ. ಈ ವಿಚಾರ ತಿಳಿದ ಹೊಟೇಲ್ ಸಿಬ್ಬಂದಿ ತಕ್ಷಣ ಪೊಲೀಸರಿಗೆ ಕರೆ ಮಾಡಿದ್ದಾರೆ. ಪೊಲೀಸ್ ಸ್ಥಳಕ್ಕೆ ಬಂದು ನೋಡಿದಾಗ ಯುವಕ ರಕ್ತದ ಮಡುವಿನಲ್ಲಿ ಬಿದ್ದಿದ್ದ. ಆತನ ಗುಪ್ತಾಂಗವನ್ನು ಕತ್ತರಿಸಲಾಗಿತ್ತು. ಕತ್ತರಿಸಿಲಾಗಿದ್ದ ಗುಪ್ತಾಂಗ ಬೆಡ್ ಪಕ್ಕದಲ್ಲೇ ಇದ್ದ ಕಸದ ಬುಟ್ಟಿಯಲ್ಲಿ ಸಿಕ್ಕಿತ್ತು ಎನ್ನಲಾಗಿದೆ. ಕೊಲೆಯಾದ ವ್ಯಕ್ತಿ, ಶೆಂಟಿಂಗ್ ಗೋ ಇಚ್ಛೆಗೆ ವಿರುದ್ಧವಾಗಿ ಆಕೆಯ ಜೊತೆ ದೈಹಿಕ ಸಂಪರ್ಕ ಬೆಳೆಸಿ ಎರಡನೇ ಬಾರಿ ಗರ್ಭಿಣಿಯನ್ನಾಗಿ ಮಾಡಿದ್ದ.…

Read More