Subscribe to Updates
Get the latest creative news from FooBar about art, design and business.
- ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
- ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್ ಸೆಟ್ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
- ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
- ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
- ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ: ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
- ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
- ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
Author: admin
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಉತ್ತರ ಪ್ರದೇಶದ ಆಗ್ರಾದಲ್ಲಿ ನಡೆಸಿದ ದಾಳಿಯಲ್ಲಿ, ಒಬ್ಬ ಸಾಮಾನ್ಯ ಶೂ ವ್ಯಾಪಾರಿಯ ಮನೆಯಿಂದ 40 ಕೋಟಿ ರೂ. ನಗದು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಹಲವು ಅನುಮಾನಗಳು ಮೂಡಿದ್ದು, ಸದ್ಯ 40 ಕೋಟಿ ರೂ. ಜಪ್ತಿ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಜಪ್ತಿ ಮಾಡಿದ ಹಣವನ್ನು ಇನ್ನೂ ಎಣಿಕೆ ಮಾಡಲಾಗುತ್ತಿದ್ದು, ಹಣದ ಮೊತ್ತ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ತೆರಿಗೆ ವಂಚನೆ ಮತ್ತು ಅಕ್ರಮ ಆಸ್ತಿ ಹೊಂದಿದ್ದ ಆರೋಪದ ಮೇಲೆ ಐಟಿ ಅಧಿಕಾರಿಗಳು ಆಗ್ರಾದಲ್ಲಿ ಶೂ ವ್ಯಾಪಾರಿ ರಾಮನಾಥ್ ಡಂಗ್ ಮನೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ದಾಖಲೆ ಇಲ್ಲದ 500 ರೂ. ನೋಟುಗಳ ಹಲವು ಬಂಡಲ್ಗಳನ್ನು ಹೊರತೆಗೆದಿದ್ದಾರೆ. ಇತ್ತೀಚೆಗೆ ದೇಶದಲ್ಲಿ ನಡೆದ 2ನೇ ಅತಿದೊಡ್ಡ ದಾಳಿಯೂ ಇದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಅಕ್ರಮ ಮರಳು ದಂಧೆ ನಡೆಯುತ್ತಿದ್ದ ಬಗ್ಗೆ ಹಲವು ದೂರುಗಳು ಬಂದ ಹಿನ್ನಲೆ, ಬೃಹತ್ ಅಕ್ರಮ ಮರಳು ಅಡ್ಡಾದ ಮೇಲೆ ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳು ದಾಳಿ ಮಾಡಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರಿನ ದೇವದುರ್ಗ ತಾಲೂಕಿನ ಚಿಕ್ಕರಾಯಕುಂಪಿಯಲ್ಲಿ ದಾಳಿ ನಡೆಸಿದ್ದು, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 20,033 ಮೆಟ್ರಿಕ್ ಟನ್ ನಷ್ಟು ಮರಳನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಜಮೀನು ಮಾಲೀಕರಾದ ಚಂದ್ರಮ್ಮ ಹಾಗೂ ಇತರರ ವಿರುದ್ಧ ದೂರು ದಾಖಲಾಗಿದೆ ಎನ್ನಲಾಗಿದೆ. ದಾಳಿ ವೇಳೆ ಸುಮಾರು 1,58,26,070 ರೂ. ಮೊತ್ತದ ಅಕ್ರಮ ಮರಳು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬಾಲಿವುಡ್ ಮತ್ತು ಟಾಲಿವುಡ್ ನಲ್ಲಿ ಬೇಡಿಕೆಯ ನಟಿ ಜಾನ್ವಿ ಕಪೂರ್ ‘ಮಿಸ್ಟರ್ ಆ್ಯಂಡ್ ಮಿಸೆಸ್ ಮಹಿ’ ಸಿನಿಮಾ ಪ್ರಚಾರವೊಂದರಲ್ಲಿ ವೈಯಕ್ತಿಕ ಬದುಕಿನ ಬಗ್ಗೆ ಮಾತನಾಡಿದ್ದಾರೆ. ಜ್ಯೂ. ಎನ್ಟಿಆರ್, ರಾಮ್ ಚರಣ್, ಸೂರ್ಯ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿ ತೊಡಗಿಕೊಂಡಿದ್ದಾರೆ. ಸದ್ಯ ‘ಚಿಕ್ಕವಯಸ್ಸಿನಲ್ಲಿ ಅಶ್ಲೀಲ ವೆಬ್ ಸೈಟ್ ನಲ್ಲಿ ನನ್ನ ಫೋಟೋ ಹಾಕಿದ್ದರು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸಿನಿಮಾ ಪ್ರಚಾರದ ಸಂದರ್ಶನ ವೇಳೆ, 12 -13 ವರ್ಷ ವಯಸ್ಸಿನಲ್ಲಿರುವಾಗ ಸೋಷಿಯಲ್ ಮೀಡಿಯಾದಿಂದಾಗಿ ಲೈಂಗಿಕವಾಗಿ ನಾನು ಸಮಸ್ಯೆ ಎದುರಿಸಿದ್ದೆ ಎಂದು ಹೇಳಿಕೊಂಡಿದ್ದಾರೆ. ಆಗ ನನಗೆ ಚಿಕ್ಕ ವಯಸ್ಸು. ಒಮ್ಮೆ ನನ್ನ ತಾಯಿ ಮತ್ತು ತಂದೆಯೊಂದಿಗೆ ಈವೆಂಟ್ ಗೆ ಹೋಗಿದ್ದೆ. ಆ ಚಿತ್ರಗಳು ಇಂಟರ್ ನೆಟ್ ನಲ್ಲಿ ವೈರಲ್ ಆಗಿತ್ತು. ಮಾರ್ಫಿಂಗ್ ಮಾಡಿ ಪೋರ್ನ್ ವೆಬ್ ಸೈಟ್ ಗಳಲ್ಲಿ ಹಾಕಿದ್ದರು ಎಂದಿದ್ದಾರೆ. ಆದರೆ ಇದು ಮಾರ್ಫ್ ಮಾಡಿದ ಚಿತ್ರಗಳು ಎಂದು ಹಲವರಿಗೆ ತಿಳಿದೇ ಇರಲಿಲ್ಲ. ನಿಜ ಎಂದು ನಂಬಿದ್ದರು. ಆ ಚಿಕ್ಕ ವಯಸ್ಸಿನಲ್ಲಿಯೇ ನನಗೆ ತುಂಬಾ…
ಸುಮಾರು 70 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಸಂಪೂರ್ಣ ಬತ್ತಿ ಹೋಗಿದ್ದ ಕಾವೇರಿ, ಇದೀಗ ಮತ್ತೆ ಮೈ ತುಂಬಿ ಹರಿಯುತ್ತಿದೆ. ತೀವ್ರ ಬರದಿಂದಾಗಿ ಹರಿಯುವಿಕೆಯನ್ನೇ ನಿಲ್ಲಿಸಿದ್ದ ಜೀವನದಿಯಾಗಿದ್ದ ಕಾವೇರಿಗೆ ಮತ್ತೆ ಜೀವಕಳೆ ಬಂದಿದೆ. ಕಳೆದ ಕೆಲವು ದಿನಗಳಿಂದ ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಕಾವೇರಿ ಮಾತ್ರವಲ್ಲ, ಕೊಡಗಿನ ಹೆಚ್ಚಿನ ಎಲ್ಲಾ ನದಿ ತೊರೆಗಳು ತುಂಬಿ ಹರಿಯುತ್ತಿವೆ. ಕೊಡಗು ಮತ್ತೆ ಜಲರಾಶಿಯಿಂದ ಜನರನ್ನು ಆಕರ್ಷಿಸುತ್ತಿದೆ. ವಿಶೇಷವಾಗಿ ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳು ಕುಡಿಯುವ ನೀರಿಗಾಗಿ ಆಹಾಕಾರ ಉಂಟಾಗಿತ್ತು. ಆದರೆ ಇದೀಗ ಕಾವೇರಿಯಲ್ಲಿ ನೀರು ಹರಿಯುತ್ತಿರುವುದು ಸದ್ಯ ನೀರಿನ ಬವಣೆ ದೂರವಾಗುವಂತೆ ಮಾಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಜೀವನದಲ್ಲಿ ನಾವು ಎಷ್ಟೋ ಕಷ್ಟಗಳನ್ನು ಅನುಭವಿಸುತ್ತೇವೆ. ಆದರೆ ಇಲ್ಲೊಂದು ಕಡೆ ತಾಯಿ-ಮಗಳು ಅನುಭವಿಸಿದ ಕಷ್ಟದ ಎದುರು ನಮ್ಮ ಕಷ್ಟ ಏನಿಲ್ಲ ಅನ್ನಿಸಿಬಿಡುತ್ತೆ. ಹೌದು, ಮಗಳು ವಿಶೇಷ ಚೇತನ ಯುವತಿ, ಆಕೆ ಹೆಸರು ಪ್ರಗತಿ(32 ವರ್ಷ). ತಾಯಿಯ ಹೆಸರು ಜಯಂತಿ ಶೆಟ್ಟಿ(61 ವರ್ಷ). ಇವರು ಕುಂದಾಪುರದ ಗೋಪಾಡಿ ಗ್ರಾಮದ ಮೂಡು ಗೋಪಾಡಿಯ ದಾಸನಹಾಡಿಯ ನಿವಾಸಿ. ವಿಶೇಷ ಚೇತನ ಹುಡುಗಿಗೆ ತಾಯಿ ಆಸರೆಯಾಗಿದ್ದರು. ಇವರಿಬ್ಬರೇ ಮನೆಯಲ್ಲಿ ವಾಸವಾಗಿದ್ದರು. ಆದರೆ ಅದೇನಾಯ್ತೋ ಗೊತ್ತಿಲ್ಲ. ತಾಯಿ ಸಾವನ್ನಪ್ಪಿದ್ದಾರೆ. ಮೂರು ದಿನಗಳ ತನಕ ಈ ವಿಚಾರ ಯಾರಿಗೂ ಗೊತ್ತಾಗಲಿಲ್ಲ. ಕೊಳೆತ ವಾಸನೆ ಹೊಡೆಯುತ್ತಿದ್ದದರಿಂದ ಸ್ಥಳೀಯರು ಬಂದು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣ ಸ್ಥಳೀಯರೆಲ್ಲರು ಸೇರಿ ವಿಶೇಷ ಚೇತನ ಯುವತಿಯನ್ನು ರಕ್ಷಣೆ ಮಾಡ್ತಾರೆ. ಆದರೆ ದುರಾದೃಷ್ಟವಶಾತ್ ಪ್ರಗತಿ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಬ್ಯಾಂಕ್ ಉದ್ಯೋಗಿಯಾಗಿದ್ದ ಪತಿಯ ಸಾವಿನ ಬಳಿಕ ದಾಸನಹಾಡಿಯ ಮನೆಯಲ್ಲಿ ಜಯಂತಿ ಅವರು ವಿಶೇಷ ಚೇತನ ಪುತ್ರಿ ಪ್ರಗತಿಯೊಂದಿಗೆ ನೆಲೆಸಿದ್ದರು. ಈಕೆ…
ಪತಂಜಲಿಯ ನವರತ್ನ ಇಲೈಚಿ ಸೋನ್ ಪಾಪ್ಡಿ ಗುಣಮಟ್ಟದ ಪರೀಕ್ಷೆಯಲ್ಲಿ ವಿಫಲವಾದ ನಂತರ ಉತ್ತರಾಖಂಡದ ನ್ಯಾಯಾಲಯವು ಪತಂಜಲಿ ಅಧಿಕಾರಿಯೊಬ್ಬರು ಮತ್ತು ಇತರ ಇಬ್ಬರಿಗೆ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ದಾರಿತಪ್ಪಿಸುವ ಜಾಹೀರಾತು ಪ್ರಕರಣದಲ್ಲಿ ಪತಂಜಲಿ ಸಿಲುಕಿರುವಂತೆಯೇ ಈ ಬೆಳವಣಿಗೆ ನಡೆದಿದೆ. ಯೋಗ ಗುರು ಬಾಬಾ ರಾಮ್ ದೇವ್ ಮತ್ತು ಇತರರಿಗೆ ನೀಡಿರುವ ನ್ಯಾಯಾಂಗ ನಿಂದನೆ ನೋಟಿಸ್ ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತನ್ನ ಆದೇಶವನ್ನು ಕಾಯ್ದಿರಿಸಿದೆ. ನ್ಯಾಯಾಲಯವು ಪತಂಜಲಿ ಆಯುರ್ವೇದ ಲಿಮಿಟೆಡ್ ಮತ್ತು ಅಜಯ್ ಜೋಶಿಗೆ ತಲಾ 10,000 ರೂ. ದಂಡ ವಿಧಿಸಿದರೆ, ಅಭಿಷೇಕ್ ಕುಮಾರ್ 25,000 ರೂ. ಮತ್ತು ಪಾಠಕ್ 5,000 ರೂ. ದಂಡ ವಿಧಿಸಲಾಗಿದೆ. ಸೆಪ್ಟೆಂಬರ್ 17, 2019 ರಂದು ಲೀಲಾಧರ್ ಪಾಠಕ್ ಅವರ ಅಂಗಡಿಯಿಂದ ಸಂಗ್ರಹಿಸಲಾದ ಮಾದರಿಗಳನ್ನು ರುದ್ರಪುರದ ಪರೀಕ್ಷಾ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಪರೀಕ್ಷಾ ಫಲಿತಾಂಶಗಳು ಉತ್ಪನ್ನದ ಗುಣಮಟ್ಟವನ್ನು ಬಹಿರಂಗಪಡಿಸಿದವು, ನಂತರ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿ ಮೂವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಮೂವರು ಆರೋಪಿಗಳು ತಮ್ಮ…
ನ್ಯಾಯಾಲಯದ ಆದೇಶದಂತೆ ಪತ್ನಿ ಹಾಗೂ ವಿಶೇಷಚೇತನ ಮಗುವಿನ ಜೀವನೋಪಾಯಕ್ಕೆ ನಿಯಮಿತವಾಗಿ ಜೀವನಾಂಶ ಪಾವತಿ ಮಾಡದ ಪತಿಯ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವಂತೆ ಹೈಕೋರ್ಟ್ ಆದೇಶಿಸಿದೆ. ಸಾಮಾನ್ಯವಾಗಿ ನ್ಯಾಯಾಲಯಗಳು ಜೀವನಾಂಶ ಪಾವತಿಸುವಂತೆ ಆದೇಶ ನೀಡುತ್ತವೆ. ಪಾವತಿ ಮಾಡದಿದ್ದಲ್ಲಿ ದಂಡ ವಿಧಿಸಲಾಗುತ್ತದೆ. ಆದರೆ, ಈ ರೀತಿಯ ಜೀವನಾಂಶ ಪಾವತಿಸದ ಪತಿಯ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಆದೇಶ ನೀಡಿರುವುದು ಇದೇ ಮೊದಲು. ಇನ್ನು ಮುಂದೆ ಕೌಟುಂಬಿಕ ವ್ಯಾಜ್ಯಗಳಲ್ಲಿ ತೊಡಗಿರುವವರು ಜೀವನಾಂಶ ಪಾವತಿಯಿಂದ ಅಷ್ಟು ಸುಲಭವಾಗಿ ತಪ್ಪಿಸಿಕೊಳ್ಳಲಾಗದು. ಹೈಕೋರ್ಟ್ ಆದೇಶದಿಂದಾಗಿ ಪತಿ, ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ 1,276 ಚದರ ಅಡಿ ಜಾಗದ ಆಸ್ತಿ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಪತ್ನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅನು ಸಿವರಾಮನ್ ಮತ್ತು ಅನಂತ್ ರಾಮನಾಥ್ ಹೆಗಡೆ ಅವರಿದ್ದ ವಿಭಾಗೀಯ ಪೀಠ ಮಾಸಿಕ ಜೀವನಾಂಶವಾಗಿ ತಲಾ 5,000 ರೂ. ಪಾವತಿಸುವಂತೆ ಸೂಚನೆ ನೀಡಿದೆ. ಪತಿಯ 1,276 ಚದರ ಅಡಿ ಮನೆಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಪತ್ನಿಯು ಇತರೆ ಆಸ್ತಿ ವಿವರಗಳನ್ನು ಒದಗಿಸಿದರೆ, ಅದರಲ್ಲಿಯೂ ಭಾಗಿದಾರರಾಗಿರುತ್ತಾರೆ,”…
ಪ್ರೇಯಸಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಕೊಡಿಗೇಹಳ್ಳಿ ಮೇಲ್ಸೇತುವೆಯಲ್ಲಿ ಬೈಕ್ ಸವಾರಿ ಮಾಡಿ ಹುಚ್ಚಾಟ ಮೆರೆದಿದ್ದ ಯುವಕನನ್ನು ಹೆಬ್ಬಾಳ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾವಲ್ ಬೈರಸಂದ್ರ ಎಂ.ವಿ. ಲೇಔಟ್ ನ ಸಿಲಂಬರಸನ್, ಮೇ 17ರಂದು ರಾತ್ರಿ ತನ್ನ ಪ್ರೇಯಸಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಯಲಹಂಕದಿಂದ ಹೆಬ್ಬಾಳ ಕಡೆಗೆ ಬೈಕ್ ಚಾಲನೆ ಮಾಡಿಕೊಂಡು ಹೋಗಿದ್ದ. ಈ ವೇಳೆ ಹಿಂದೆ ಬರುತ್ತಿದ್ದ ವಾಹನ ಸವಾರರು ಸಿಲಂಬರಸನ್ ಮತ್ತು ಆತನ ಪ್ರೇಯಸಿಯ ಹುಚ್ಚಾಟವನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದರು. ಅಜಾಗರೂಕ ಚಾಲನೆ ಮತ್ತು ಅನುಚಿತ ವರ್ತನೆಗಾಗಿ ಬೈಕ್ ಸವಾರ ಸಿಲಂಬರಸನ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ನೆಟ್ಟಿಗರು ಆಗ್ರಹಿಸಿದ್ದರು. ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಅಗತ್ಯತೆ ಕುರಿತು ನೆಟ್ಟಿಗರು ಚರ್ಚಿಸಿದ್ದರು. ಸಿಲಂಬರಸನ್ ಮತ್ತು ಆತನ ಪ್ರೇಯಸಿ ಹೆಲ್ಮೆಟ್ ಧರಿಸದೆ ಬೈಕ್ ನಲ್ಲಿ ಜಾಲಿ ರೈಡ್ ಮಾಡಿದ್ದರು. ಈ ವೀಡಿಯೊ ವೈರಲ್ ಆದ ಬೆನ್ನಲ್ಲೇ ಪೊಲೀಸರು ಸಿಲಂಬರಸನ್ ನನ್ನು…
ಬಿಜೆಪಿ ಕೇಂದ್ರದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಂದರೆ RSS ನಿಷೇಧ ಮಾಡುತ್ತಾರೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ಕೆಲ ದಿನಗಳ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ(J P Nadda), “ಬಿಜೆಪಿ, RSS ಒಂದನ್ನೊಂದು ಅವಲಂಬಿಸಿಯೇ ಇರಬೇಕೆಂದೇನಿಲ್ಲ. ಸ್ವತಂತ್ರವಾಗಿ ಚಿಂತಿಸುವ ರೀತಿ ಎರಡೂ ಬೆಳೆದು ನಿಂತಿದೆ” ಎಂದು ಹೇಳಿದ್ದರು. ಇದನ್ನೇ ಗುರಿಯಾಗಿಸಿಕೊಂಡು ಉದ್ಧವ್ ಠಾಕ್ರೆ ಅವರು ‘ಶಿವಸೇನೆಯನ್ನು ಬಳಸಿ ಬಿಸಾಡಲು ಯತ್ನಿಸಿದ ರೀತಿಯ ಆಟವನ್ನು ಪ್ರಧಾನಿ ಮೋದಿಯವರು ಮುಂದಿನ ದಿನಗಳಲ್ಲಿ RSSನ ಜೊತೆಗೂ ಆಡಲಿದ್ದಾರೆ. ಹೀಗಾಗಿ ಮುಂದೆ ಮೋದಿ ಅಧಿಕಾರಕ್ಕೆ ಬಂದರೆ RSS ಬ್ಯಾನ್ ಮಾಡಿದರೂ ಆಶ್ಚರ್ಯ ಪಡಬೇಕಾಗಿಲ್ಲ’ ಎಂದು ಹೇಳಿದ್ದಾರೆ. ಅಲ್ಲದೆ, ಈ ಹಿಂದೆ ಕೇಂದ್ರ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ RSS ನಿಷೇಧಿಸಿದ್ದರು. ಹೀಗಾಗಿ ಕೇಂದ್ರದಲ್ಲಿ ಬಿಜೆಪಿ ಒಂದು ವೇಳೆ ಮತ್ತೆ ಅಧಿಕಾರಕ್ಕೆ ಬಂದರೆ RSS ನಿಷೇಧಿಸುವುದು ಖಚಿತವೆಂದು ಹೇಳಿದ್ದಾರೆ. ಒಟ್ಟಾರೆ ಬಿಜೆಪಿ ಅಧಿಕಾರಕ್ಕೆ ಬಂದರೆ ಆರೆಸ್ಸೆಸ್ ಕಾರ್ಯಕರ್ತರಿಗೆ ಅಪಾಯ…
ಬೆಂಗಳೂರು: ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ಎಸೆಯಲಾಗಿದ್ದು, ಪೊಲೀಸರಿಂದ ಬಿಗಿಭದ್ರತೆ ಒದಗಿಸಲಾಗಿದೆ. ಪೆನ್ ಡ್ರೈವ್ ವಿಚಾರ ಮಾತನಾಡುವಾಗ ಮಾಜಿ ಸಂಸದರು ಜೆಡಿಎಸ್ ವರಿಷ್ಠರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದರು. ಈ ಹಿನ್ನೆಲೆಯಲ್ಲಿ ಮೊಟ್ಟೆ ದಾಳಿಗೆ ಯತ್ನಿಸಲಾಗಿದೆ ಎಂದು ತಿಳಿದುಬಂದಿದೆ. ತಡರಾತ್ರಿ ಕಾರಿನಲ್ಲಿ ಬಂದ ಐದಾರು ಮಂದಿಯಿಂದ ಈ ಯತ್ನ ನಡೆದಿದೆ. ಪೊಲೀಸರು ಕಂಡು ಮನೆ ಮುಂದೆ ಮೊಟ್ಟೆ ಎಸೆದು ಪರಾರಿಯಾಗಿದ್ದಾರೆ. ಈ ನಡುವೆ ಪೊಲೀಸರ ಕಣ್ತಪ್ಪಿಸಿ ಅದಾಗಲೇ ಐದಾರು ಮೊಟ್ಟೆ ಎಸೆದಿದ್ದಾರೆ. ಸದ್ಯ ಮೊಟ್ಟೆ ಎಸೆಯಲು ಯತ್ನಿಸಿ ಪರಾರಿಯಾದವರಿಗಾಗಿ ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಮೊಟ್ಟೆ ಎಸೆಯಲು ಯತ್ನಿಸಿದವರಿಗೆ ಬಲೆ ಬೀಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296