Author: admin

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಇಂದು ಮಾಜಿ ಸಚಿವ ರೇವಣ್ಣ ಕುರಿತ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.  42ನೇ ಎಸಿಎಂಎಂ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ರೇವಣ್ಣಗೆ ಮತ್ತೆ ಜೈಲಾ ಅಥವಾ ಬೇಲಾ ಅನ್ನೋ ಕುತೂಹಲ ಮೂಡಿಸಿದೆ. 47 ವರ್ಷದ ಮನೆ ಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಜೆಡಿಎಸ್ ಶಾಸಕ ಎಚ್‌.ಡಿ. ರೇವಣ್ಣ ಮತ್ತು ಅವರ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 28 ರಂದು ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಕೆಲವು ಅಶ್ಲೀಲ ವೀಡಿಯೊಗಳು ಹಾಸನ ಜಿಲ್ಲೆಯಾದ್ಯಂತ ಹರಿದಾಡಿದ್ದವು. ಪ್ರಜ್ವಲ್ ರೇವಣ್ಣ ಏಪ್ರಿಲ್ 27 ರಂದು ಜರ್ಮನಿಗೆ ತೆರಳಿದ ಬಳಿಕ ತಲೆಮರೆಸಿಕೊಂಡಿದ್ದಾರೆ. ಶಾಸಕರ ನಿವಾಸದಲ್ಲಿ ತಂದೆ ಮತ್ತು ಮಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದರು. ಹಾಸನ ಅಶ್ಲೀಲ ವೀಡಿಯೋ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ದೇವರಾಜೇಗೌಡ ಎಸ್‌ಐಟಿ ಕಸ್ಟಡಿಯಲ್ಲಿರುವಾಗಲೇ ಹೊಸ ಆಡಿಯೋ ಸದ್ದು ಮಾಡಿದೆ.…

Read More

ಮಾಂಸಪ್ರಿಯರಿಗೆ ಬೆಲೆ ಏರಿಕೆಯ ಶಾಕ್​​ ಎದುರಾಗಿದ್ದು, ಚಿಕನ್ ಬೆಲೆ ಗಗನಕ್ಕೆ ಏರಿಕೆಯಾಗಿದೆ. ಬೆಲೆ ಕೇಳಿ ಗ್ರಾಹಕರು ದಂಗಾಗಿದ್ದಾರೆ. ಇಷ್ಟು ದಿನ ತರಕಾರಿಗಳ ಬೆಲೆ‌ ಏರಿಕೆಯಾಗಿತ್ತು. ಇದೀಗ ‌ ಹವಮಾನ ವೈಪರಿತ್ಯದಿಂದ ಮಾಂಸ ಮತ್ತು ಮೊಟ್ಟೆ ಬೆಲೆ ಕೂಡ ಹೆಚ್ಚಳವಾಗಿದೆ. ಕೆಜಿ ಚಿಕನ್​ಗೆ 380 ರೂ ಆಗಿದೆ. ಕೆಜಿ ಮಟನ್​ಗೆ 800 ರೂ. ಆಗಿದ್ದು, ಮೊಟ್ಟೆಗೆ 8 ರಿಂದ 7 ರೂ. ನಿಗದಿ‌‌ ಮಾಡಲಾಗಿದೆ. ಬೇಸಿಗೆ ಇದ್ದ ಪರಿಣಾಮ ಹೆಚ್ಚಿನ ಸಂಖ್ಯೆಯಲ್ಲಿ ಈ ವರ್ಷ ಕೋಳಿ ಸಾಕಾಣೆಯಾಗಿಲ್ಲ. ಇದೀಗ ಬೇಡಿಕೆ ಜಾಸ್ತಿಯಾಗಿದೆ. ಬೇಡಿಕೆಗೆ ತಕ್ಕಷ್ಟು ಕೋಳಿ‌‌ ಮಾಂಸದ ಪೂರೈಕೆ ಇಲ್ಲದ ಕಾರಣ ಮಾಂಸಾಹಾರ ಬೆಲೆ ಕೂಡ ಏರಿಕೆಯಾಗಿದೆ.‌ ಅಲ್ಲದೆ ಮದುವೆ ಸೀಜನ್​ ನಲ್ಲಿ ಮಾಂಸಾಹಾರಕ್ಕೂ ಹೆಚ್ಚು ಬೇಡಿಕೆ ಇರುವುದರಿಂದ, ಮುಂದಿನ ಒಂದು ತಿಂಗಳವರೆಗೂ ಮಾಂಸದ ಬೆಲೆ ಹೆಚ್ಚಾಗಲಿದೆ ಎಂದು ಮಾಂಸ ವ್ಯಾಪಾರಿ ಉಬೇದ್ ಉಲ್ಲಾ ಖಾನ್ ಹೇಳಿದ್ದಾರೆ. ತರಕಾರಿ ಬೆಲೆ ಹೆಚ್ಚಾಗಿದೆ. ಇದೀಗ ಮಾಂಸ‌ದ ಬೆಲೆಯೂ ಏರಿಕೆಯಾಗಿದೆ. ಇಷ್ಟೊಂದು ಬೆಲೆ ಏರಿಕೆಯಾದರೆ ಮಾಂಸವನ್ನು…

Read More

ಸಿಂಗಾಪುರದಲ್ಲಿ ಕೋವಿಡ್-19ರ ಹೊಸ ಅಲೆ ಕಾಣಿಸಿಕೊಂಡಿದೆ. ಪರಿಣಾಮ ಒಂದೇ ವಾರದಲ್ಲಿ 25,900 ಸೋಂಕಿನ ಪ್ರಕರಣ ದಾಖಲಾಗಿದ್ದು, ಮತ್ತೆ ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವ ಓಂಗ್ ಯೆಕುಂಗ್ ಜನತೆಗೆ ಸಲಹೆ ನೀಡಿದ್ದಾರೆ. ದೇಶದಲ್ಲಿ ಕೋವಿಡ್ ಸೋಂಕಿನ ಅಲೆ ಆರಂಭಿಕ ಹಂತದಲ್ಲಿದ್ದು ಸ್ಥಿರವಾಗಿ ಏರುತ್ತಿದೆ. ಮುಂದಿನ 2ರಿಂದ 4 ವಾರಗಳಲ್ಲಿ, ಅಂದರೆ ಜೂನ್ ಅಂತ್ಯದ ವೇಳೆಗೆ ಅಲೆ ಗರಿಷ್ಟ ಮಟ್ಟ ತಲುಪಲಿದೆ ಎಂದು ಓಂಗ್ ಎಚ್ಚರಿಕೆ ನೀಡಿದ್ದಾರೆ. ಮೇ 5ರಿಂದ 11ರವರೆಗಿನ ವಾರದಲ್ಲಿ 25,900 ಕೋವಿಡ್-19 ಸೋಂಕಿನ ಪ್ರಕರಣ ದಾಖಲಾಗಿದ್ದರೆ ಅದಕ್ಕಿಂತ ಹಿಂದಿನ ವಾರದಲ್ಲಿ 13,700ರಷ್ಟಿತ್ತು. ಆಸ್ಪತ್ರೆಗೆ ದಾಖಲಾಗುವ ದೈನಂದಿನ ಸರಾಸರಿ 250ನ್ನು ದಾಟಿದ್ದು ತೀವ್ರ ನಿಗಾ ಘಟಕ(ಐಸಿಯು)ದಲ್ಲಿ ದಾಖಲಾಗುವ ದೈನಂದಿನ ಸರಾಸರಿ ಪ್ರಕರಣ 3 ಆಗಿದೆ. ಸರಕಾರಿ ಆಸ್ಪತ್ರೆಯಲ್ಲಿ ಸೂಕ್ತ ಹಾಸಿಗೆಗಳನ್ನು ಕಾಯ್ದಿರಿಸುವ ಉದ್ದೇಶದಿಂದ ತುರ್ತು ಅಗತ್ಯವಿಲ್ಲದ ಶಸ್ತ್ರಚಿಕಿತ್ಸೆಗಳನ್ನು ಮುಂದೂಡುವಂತೆ ಹಾಗೂ ಸೂಕ್ತ ರೋಗಿಗಳನ್ನು ಮನೆಗೆ ವಾಪಾಸು ಕಳುಹಿಸಿ ಸಂಚಾರಿ ಚಿಕಿತ್ಸಾಲಯದ ಸೇವೆ ಮುಂದುವರಿಸುವಂತೆ ಸೂಚಿಸಿರುವುದಾಗಿ ಆರೋಗ್ಯ ಸಚಿವಾಲಯ ಹೇಳಿದೆ. ಕೋವಿಡ್-19 ಸೋಂಕಿನ…

Read More

ಪ್ರಸ್ತಾವಿತ ಸಂಸತ್ ಸುಧಾರಣೆ ಮಸೂದೆಯ ಬಗ್ಗೆ ತೈವಾನ್ ‍ನ ಸಂಸದರ ನಡುವೆ ಮಾತಿನ ಚಕಮಕಿ, ತಳ್ಳಾಟ ನಡೆದು ಪರಸ್ಪರ ಕೈ ಮಿಲಾಯಿಸುವ ಹಂತ ತಲುಪಿದೆ. ಈ ವೇಳೆ ಸಂಸದರೊಬ್ಬರು ಮಸೂದೆಯ ಪ್ರತಿಯನ್ನು ಅಧಿಕಾರಿಗಳ ಕೈಯಿಂದ ಎಳೆದುಕೊಂಡು ಸದನದ ಹೊರಗೆ ಓಡಿಹೋದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಚುನಾಯಿತ ಅಧ್ಯಕ್ಷ ಲಾಯ್ ಚಿಂಗ್‍ ಟೆ ಶಾಸಕಾಂಗ ಬಹುಮತವಿಲ್ಲದೆ ಅಧಿಕಾರ ಸ್ವೀಕರಿಸುವ ಕೆಲವೇ ದಿನಗಳ ಮೊದಲು ತೈವಾನ್ ಸಂಸತ್ ಈ ಗದ್ದಲದ ಸನ್ನಿವೇಶಕ್ಕೆ ಸಾಕ್ಷಿಯಾಗಿದೆ. ಸರಕಾರದ ಮೇಲೆ ನಿಗಾ ವಹಿಸಲು ಸಂಸತ್‍ ಗೆ ಹೆಚ್ಚಿನ ಅಧಿಕಾರವನ್ನು ನೀಡುವುದು ವಿರೋಧ ಪಕ್ಷಗಳ ಉದ್ದೇಶವಾಗಿದೆ. ಮಸೂದೆಯನ್ನು ಮತಕ್ಕೆ ಹಾಕುವುದಕ್ಕೂ ಮೊದಲೇ ಸದನದ ಹೊರಗೆ ಕೆಲವು ಸಂಸದರ ನಡುವೆ ವಾಗ್ಯುದ್ದ, ನೂಕಾಟ, ಪರಸ್ಪರರನ್ನು ಹಿಡಿದೆಳೆಯುವುದು ನಡೆದಿತ್ತು. ಬಳಿಕ ಸದನದ ಒಳಗೂ ಈ ಸನ್ನಿವೇಶ ಪುನರಾವರ್ತನೆಗೊಂಡಿದ್ದು ಸ್ಪೀಕರ್ ಆಸನದ ಸುತ್ತ ಸೇರಿದ ಕೆಲವು ಸಂಸದರು ಮಸೂದೆಯನ್ನು ವಿರೋಧಿಸಿ ಘೋಷಣೆ ಕೂಗಿದರೆ, ಇನ್ನು ಕೆಲವರು ಮೇಜಿನ ಮೇಲೇರಿ ಘೋಷಣೆ ಕೂಗುತ್ತಿದ್ದವರನ್ನು…

Read More

ಇತ್ತೀಚಿನ ದಿನಗಳಲ್ಲಿ ಪ್ರತಿ ಮನೆಯಲ್ಲೂ ಇನ್ವರ್ಟರ್ ಬಳಕೆ ಸಾಮಾನ್ಯವಾಗಿದೆ. ವಿಶೇಷವಾಗಿ ಬೇಸಿಗೆಯಲ್ಲಿ ಪವರ್ ಬ್ಯಾಕಪ್ ಅತ್ಯಗತ್ಯ. ಆದರೆ ಇನ್ವರ್ಟರ್ ಬಳಕೆ ಸಂದರ್ಭದಲ್ಲಿ ಕೆಲವು ನಿರ್ಲಕ್ಷ್ಯವು ದೊಡ್ಡ ಹಾನಿಯನ್ನುಂಟುಮಾಡುತ್ತದೆ. ಇನ್ವರ್ಟರ್ ಸ್ಫೋಟಗೊಂಡು ನೆರೆಹೊರೆಯವರು ಗಾಯಗೊಂಡಿರುವ ಹಲವು ಪ್ರಕರಣಗಳು ನಡೆದಿವೆ. ಇನ್ವರ್ಟರ್ ಬ್ಯಾಟರಿಗಳಲ್ಲಿ ಸ್ಫೋಟಗಳು ಅಪರೂಪವಾಗಿದ್ದರೂ, ಸರಿಯಾದ ಮುನ್ನೆಚ್ಚರಿಕೆಗಳು ಮತ್ತು ಸುರಕ್ಷತಾ ಕ್ರಮಗಳನ್ನು ಅನುಸರಿಸದಿದ್ದರೆ ಹಾನಿ ಸಂಭವಿಸಬಹುದು. ಇನ್ವರ್ಟರ್ ಅನ್ನು ಬಳಸುವ ಸರಿಯಾದ ಮಾರ್ಗವು ಇನ್ವರ್ಟರ್ ಸ್ಫೋಟದಂತಹ ಘಟನೆಗಳನ್ನು ತಪ್ಪಿಸಬಹುದು. ಹಾಗಾಗಿ ಇನ್ವರ್ಟರ್ ಬಳಸುವಾಗ ಮಾಡುವ ಕೆಲವು ತಪ್ಪುಗಳ ಬಗ್ಗೆ ಇಲ್ಲಿ ತಿಳಿಯೋಣ. ಇನ್ವರ್ಟರ್ ಓವರ್ ಚಾರ್ಜಿಂಗ್: ಇನ್ವರ್ಟರ್ ಬ್ಯಾಟರಿಯನ್ನು ನಿಗದಿತ ಸಮಯಕ್ಕಿಂತ ಹೆಚ್ಚು ಚಾರ್ಜ್ ಮಾಡುವುದು ಅಪಾಯಕಾರಿ.  ಇದನ್ನು ತಪ್ಪಿಸಲು ಬ್ಯಾಟರಿ ತಯಾರಕರ ಚಾರ್ಜಿಂಗ್ ಸೂಚನೆಗಳನ್ನು ಯಾವಾಗಲೂ ಅನುಸರಿಸಿ. ಉತ್ತಮ ಚಾರ್ಜ್ ನಿಯಂತ್ರಕವನ್ನು ಬಳಸಿ. ಕಡಿಮೆ ನೀರಿನ ಮಟ್ಟ: ನಿಮ್ಮ ಬ್ಯಾಟರಿಯು ನೀರಿನ ಮೇಲೆ ಕಾರ್ಯನಿರ್ವಹಿಸುತ್ತಿದೆಯೇ ಎಂದು ಖಚಿತಪಡಿಸಿಕೊಳ್ಳಲು ಬ್ಯಾಟರಿ ನೀರಿನ ಮಟ್ಟವನ್ನು ನಿಯಮಿತವಾಗಿ ಪರಿಶೀಲಿಸಿ. ನೀರಿನ ಮಟ್ಟ ಕಡಿಮೆಯಿದ್ದರೆ, ಬ್ಯಾಟರಿ ಪ್ಲೇಟ್‌ಗಳು…

Read More

ಸರಗೂರು: ರಾಜ್ಯದ ಹಿರಿಯ ರಾಜಕಾರಣಿ ವಿ. ಶ್ರೀನಿವಾಸ್ ಪ್ರಸಾದ್ ರವರು, ಬದುಕಿನ ಹೆಚ್ಚುಕಾಲ ರಾಜಕೀಯದಲ್ಲಿಯೇ ಕಳೆದರು. ಅವರು ನಡೆಸಿದ ಹೋರಾಟಗಳು ದಲಿತರಿಗೆ ಹಾಗೂ ಶೋಷಿತ ಸಮುದಾಯಗಳಿಗೆ ಆಶಾಕಿರಣವಾಗಿತ್ತು. ಶ್ರೀನಿವಾಸ್ ಪ್ರಸಾದ್ ಅವರು ನೇರನುಡಿಗೆ ಹೆಸರಾದವರು ಎಂದು ಶಾಸಕ ಅನಿಲ್ ಚಿಕ್ಕಮಾದು ತಿಳಿಸಿದರು. ತಾಲ್ಲೂಕಿನ ಪಟ್ಟಣ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭವನದಲ್ಲಿ ಭಾನುವಾರದಂದು ಕೋಟೆ ಮತ್ತು ಸರಗೂರು ಆದಿಕರ್ನಾಟಕ ಮಹಾಸಭಾ ವತಿಯಿಂದ ಹಮ್ಮಿಕೊಂಡಿದ್ದ, ಸ್ವಾಭಿಮಾನಿ ಸಂಸದರಾದ ವಿ. ಶ್ರೀನಿವಾಸಪ್ರಸಾದ್ ರವರ ನುಡಿ ನಮನ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಿ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿದರು. ಸ್ವಾಭಿಮಾನಿ ಚಕ್ರವರ್ತಿ ವಿ. ಶ್ರೀನಿವಾಸಪ್ರಸಾದ್ ರವರ ಸ್ಥಾನ ತುಂಬಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಡೆಯಬಹುದು ಎಂದರು. ಬದುಕಿನ ಕೊನೆಯ ಪಯಣವೇ ಸಾವು. ಹಾಗಾಗಿ ಸಾವಿಗೂ ಅವರು ಮಾಡಿದ ಎಲ್ಲಾ ಸಮುದಾಯ ಕಾರ್ಯಕ್ರಮಗಳು ನಿಲುವು ಬದ್ಧತೆ ಅವರನ್ನು ಉನ್ನತ ಸ್ಥಾನಕ್ಕೆ ಏರುವಂತೆ ಮಾಡಿದೆ ಎಂದು ಹೇಳಿದರು. ನಗರ ಪಾಲಿಕೆ ಮಾಜಿ ಮಹಾಪೌರರು ಪುರುಷೋತ್ತಮ್…

Read More

ಬೆಂಗಳೂರು: ಹುಟ್ಟುತ್ತಾ ಅಣ್ಣ ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಅನ್ನೋ ಗಾದೆ ಮಾತನ್ನ ನೀವೆಲ್ರೂ ಕೇಳಿರುತ್ತೀರ. ಅದೇ ರೀತಿ ಇಲ್ಲಿ ಜೊತೆ ಜೊತೆಯಾಗಿ ಆಟವಾಡುತ್ತಾ ಬೆಳೆದ ಅಣ್ಣ ಆನ್ಲೈನ್ ಗೇಮ್ ಚಟಕ್ಕೆ ಒಡಹುಟ್ಟಿದ ತಮ್ಮನನ್ನೆ ಬರ್ಬರವಾಗಿ ಕೊಂದು ಮುಗಿಸಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.‌ ಅಷ್ಟಕ್ಕೂ ಇಂತಹದೊಂದು ಘೋರ ಘಟನೆ ನಡೆದಿದ್ದಾದ್ರು ಎಲ್ಲಿ ಅಂತೀರಾ ನೋಡಿ ಈ ರಿಪೋರ್ಟ್ ನಲ್ಲಿ. ಪ್ರಾಣೇಶ್ ಕೇವಲ ಹದಿನೈದು ವರ್ಷದ ಈತ ತನ್ನ ಅಣ್ಣ ಶಿವಕುಮಾರ್ ನಿಂದಲೇ ಬರ್ಬರವಾಗಿ ಹತ್ಯೆಯಾಗಿ ಹೋಗಿದ್ದಾನೆ. ಆಂದ್ರಪ್ರದೇಶದ ಕರ್ನೂಲಿನ ಸೂಳೆಕೆರಿ ಗ್ರಾಮದ ನಿವಾಸಿಯಾದ ಈತ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ನೆರಿಗಾ ಸಮೀಪದ ಕತ್ರಿಗುಪ್ಪೆ ಬಳಿ ಇದೇ ತಿಂಗಳು ಹದಿನೈದನೇ ತಾರೀಖು ಕೊಲೆಯಾಗಿದ್ದಾನೆ. ಅಜ್ಜಿ ಜೊತೆ ವಾಸವಿದ್ದ ಪ್ರಾಣೇಶ್ ಎರಡು ವಾರಗಳ ಹಿಂದೆ ತಮ್ಮ ತಂದೆ ತಾಯಿ ಮತ್ತು ಅಣ್ಣ ಗಾರೆ ಕೆಲಸ ಮಾಡುತ್ತಿದ್ದ ಕತ್ರಿಗುಪ್ಪೆಗೆ ರಜೆ ಕಳೆಯಲು ಬಂದಿದ್ದಾನೆ. ಆದ್ರೆ ಅಪ್ಪ ಅಮ್ಮ ಅಣ್ಣ ಗಾರೆ ಕೆಲಸಕ್ಕೆ ಹೋದರೆ ಬಾಲಕ ಪ್ರಾಣೇಶ್…

Read More

ಶಿವಮೊಗ್ಗ: ಖಾಸಗಿ ಹಾಗೂ ಸರ್ಕಾರಿ ಕಾಮಗಾರಿಗಳಿಗೆ ಕೆರೆಯ ಹೋಳು ಹಾಗೂ ಮಣ್ಣನ್ನು ಸೂಕ್ತ ಪ್ರಾಧಿಕಾರದ ಅನುಮತಿ ಇಲ್ಲದೆ ತೆಗೆದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ. ಕೆರೆ ಹೂಳು ಹಾಗೂ ಮಣ್ಣಿನ ಅನಧಿಕೃತ ಸಾಗಾಣಿಕೆ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಶುಕ್ರವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸಣ್ಣ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸುವುದಾಗಿ ಸೂಚಿಸಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಸರ್ಕಾರಿ-ಖಾಸಗಿ ಕಾಮಗಾರಿಗಳಿಗೆ, ಕೆರೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಾಗೂ ಇತರೆ ಕೆರೆಯ ಹೂಳು ಎತ್ತುವಳಿ ಕಾಮಗಾರಿಗಳಿಗೆ ಕೆರೆಯ ಮಣ್ಣನ್ನು ಉಪಯೋಗಿಸಲು, ಸಂಬಂಧಪಟ್ಟ ಕೆರೆ ಪ್ರಾಧಿಕಾರಗಳಾದ ಸಣ್ಣ ಮತ್ತು ಭಾರಿ ನೀರಾವರಿ ಇಲಾಖೆ, ಪಂಚಾಯತ್‌ ರಾಜ್‌ ಇಂಜಿನಿಯರಿಂಗ್‌ ಇಲಾಖೆ, ಗ್ರಾಮ ಪಂಚಾಯತ್ ‌ಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕು. ಸಂಬಂಧಪಟ್ಟ ಕೆರೆ ಪ್ರಾಧಿಕಾರಗಳು ಅರ್ಜಿಯನ್ನು ಪರಿಶೀಲಿಸಿ, ಕೆರೆ ಪ್ರದೇಶದಲ್ಲಿ ಎತ್ತುವಳಿ ಮಾಡಬಹುದಾದ ಹೂಳು/ಮಣ್ಣಿನ ಅಂದಾಜು…

Read More

ಇಂಡಿ: “ಸರ್ಕಾರದ ಕೆಲಸ ದೇವರ ಕೆಲಸ” ಇದು ಶಕ್ತಿ ಸೌಧ ವಿಧಾನ ಸೌಧದ ಮುಂದೆ ಹಾಕಿರುವ ಘೋಷ ವಾಕ್ಯ. ಆದರೆ, ಸರ್ಕಾರದ ಕೆಲಸ ದೇವರ ಕೆಲಸವಲ್ಲ ಎಂಬಂತೆ ವರ್ತಿಸುತ್ತಿರುವ ಇಂಡಿ ಪುರಸಭೆ ಕಾರ್ಯಾಲಯದ ಸಿಬ್ಬಂದಿ ದರ್ಬಾರು ನೋಡಿದರೆ ಹೇಳತೀರದು. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಪುರಸಭೆ ಕಾರ್ಯಾಲಯ ಶನಿವಾರ 12 ಘಂಟೆ. ಆದರೂ ಇಲ್ಲಿ ಕಾಣುವ ಕುರ್ಚಿಗಳೆಲ್ಲ ಖಾಲಿ ಖಾಲಿ ಎನ್ನುವದು ವಿಪರ್ಯಾಸ ಸಂಗತಿ .ಇಲ್ಲಿನ ನೌಕರರು ಆಫೀಸ್ ಗೆ ಬಂದ್ರೆ ಬರ್ತಾರೆ. ಇಲ್ಲ ಅಂದ್ರೆ ಇಲ್ಲ. ಇವರಿಗೆ ಹೇಳೋರು ಕೇಳೋರು ಯಾರೂ ಇಲ್ಲ. ಯಾರ ಭಯವೂ ಇಲ್ಲ. ಹೀಗೆ ಕಳ್ಳಾಟವಾಡಿಕೊಂಡು ತಿಂಗಳಾಯಿತು. ಅಂದರೆ ಕೈ ತುಂಬಾ ಸಂಬಳ ಜೇಬಿಗಿಳಿಸಿಕೊಳ್ಳತಾರೆ. ಇಂತಹ ಬೇಜವಾಬ್ದಾರಿ ಅಧಿಕಾರಿ ಇದ್ದರೆ ಅಧೋಗತಿ. ಇಲ್ಲಿ ಹೇಳೋರು ಇಲ್ಲ. ಕೇಳೋರು ಇಲ್ಲ. ಇಂತಹ ಪರಿಸ್ಥಿತಿ ಉದ್ಭವವಾಗಿದೆ. ಸದ್ಯ ಇಲ್ಲಿನ ಜನರ ಹೇಳಿಕೆಯ ಪ್ರಕಾರ ಇಲ್ಲಿನ ಸಿಬ್ಬಂದಿಗಳು ಮನಸಿಗೆ ಬಂದಾಗ ಬರುತ್ತಾರೆ ಎಂದು ಮಾಧ್ಯಮದ ಎದುರು ಹೇಳಿರುತ್ತಾರೆ. ಇನ್ನಾದರೂ ಸಂಬಂಧಪಟ್ಟ…

Read More

ಬೆಂಗಳೂರು: ಟ್ರೋಲರ್ಸ್ ಮೇಲೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಕೆಂಗಣ್ಣು ಬೀರಿದ್ದು, ತಮ್ಮನ್ನು ಟ್ರೋಲ್ ಮಾಡಿದವರಿಗೆ ಹಿಡಿಶಾಪ ಹಾಕಿದ್ದಾರೆ. ಈ ಉಪಯೋಗ ಇಲ್ಲದ ಇರುವ ಕೆಲವರು ಟ್ರೋಲ್ ಮಾಡುತ್ತಾರೆ. ಕೆಟ್ಟ ಕೆಟ್ಟ ರೀತಿಯಲ್ಲಿ ಟ್ರೋಲ್ ಮಾಡುವುದು. ಟ್ರೋಲ್ ಮಾಡುವವರು ನಿಮ್ಮ ಜೀವಮಾನದಲ್ಲಿ ಉದ್ಧಾರಾಗಲ್ಲ. ಇನ್ಮೇಲಿಂದ ನಿಮಗೆ ನಮ್ಮ ಶಾಪ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧುಬಂಗಾರಪ್ಪನವರ ಹೇಳಿಕೆ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಮಾಧ್ಯಮಗಳೊಂದಿಗೆ ಮಾತನಾಡಿದ ಮಧುಬಂಗಾರಪ್ಪ, ನಿಮ್ಮ ನರೇಂದ್ರ ಮೋದಿ ಅವರಿಗೆ ಕನ್ನಡ ಬರುತ್ತಾ? ಇಲ್ಲಿ ಬಂದು ಕನ್ನಡ ಮಾತಾಡ್ತಾರೆ, ತಮಿಳುನಾಡಿಗೆ ಹೋಗಿ ತಮಿಳಲ್ಲಿ ಮಾತಾಡ್ತಾರೆ. ಯಾರೋ ಬರೆದು ಕೊಟ್ಟಿದ್ದನ್ನು ಹೇಳ್ತಾರೆ, ಅದನ್ನು ಮೊದಲು ತಿಳಿದುಕೊಳ್ಳಿ. ನನ್ನ ಕನ್ನಡವನ್ನು ಟ್ರೋಲ್ ಮಾಡುವುದರಿಂದ ನಿಮ್ಮ ಹೊಟ್ಟೆ ಏನು ತುಂಬಲ್ಲ ಎಂದಿದ್ದಾರೆ. ನನಗೆ ಕನ್ನಡ ಓದೋದು ಸ್ವಲ್ಪ ಕಷ್ಟ. ಆದರೆ, ಮಾತಾಡುವಾಗ ಕನ್ನಡ ಚೆನ್ನಾಗಿಯೇ ಮಾತಾಡ್ತೀನಿ. ಈಗ ಏನಾದ್ರೂ ತಡವರಿಸುತ್ತಿದ್ದೇನಾ? ಟ್ರೋಲ್ ಮಾಡೋರಿಗೆ ಬೇರೆ ಕೆಲಸ ಇಲ್ಲ. ಅವರಿಗೆ ಶಾಪ ಹಾಕ್ತೀನಿ ಅಂದಿದ್ದೆ, ಅನಿವಾರ್ಯವಾಗಿ…

Read More