Author: admin

ಬೆಂಗಳೂರು: ಐಪಿಎಲ್ 2024 ರಲ್ಲಿ ಆರ್ ಸಿಬಿ ಹಾಗೂ ಸಿಎಸ್ ಕೆ ವಿರುದ್ಧದ ಕಾಳಗ ವೀಕ್ಷಿಸಲು ಆರ್ ಸಿಬಿ ಮಹಿಳಾ ತಂಡದ ಆಟಗಾರ್ತಿಯರು ಮೈದಾನಕ್ಕೆ ಆಗಮಿಸಿದ್ದು, ವಿಶೇಷ ಆಕರ್ಷಣೆಯಾಗಿತ್ತು. ಈ ವರ್ಷ ಡಬ್ಲ್ಯೂ ಪಿಎಲ್ ಟೂರ್ನಿಯಲ್ಲಿ ಆರ್ ಸಿಬಿ ಮಹಿಳಾ ತಂಡ ಕಪ್ ಗೆದ್ದು ಬೀಗಿತ್ತು. ಅದರಂತೆ ಈ ಬಾರಿ ಪುರುಷರ ತಂಡ ಕೂಡ ಕಪ್ ಗೆಲ್ಲಲಿದೆ ಎನ್ನುವ ನಿರೀಕ್ಷೆ ಮೂಡಿದೆ. ತಮ್ಮ ಗೆಲುವಿನ ನಂತೆ ಇದೀಗ ಪುರುಷರ ತಂಡಕ್ಕೆ ಸ್ಪೂರ್ತಿ ತುಂಬಲು ಸ್ಮ್ರತಿ ಮಂಧನ ನೇತೃತ್ವದ ಆರ್ ಸಿಬಿ ಮಹಿಳೆಯರ ಪಡೆ ಚಿನ್ನಸ್ವಾಮಿ ಮೈದಾನಕ್ಕೆ ಆಗಮಿಸಿದರು. ವಿಶೇಷವೆಂದರೆ ಇವರ ಜೊತೆಗೆ ಡೆಲ್ಲಿ ಮಹಿಳಾ ತಂಡದ ಜೆಮಿಮಾ ರೊಡ್ರಿಗಸ್ ಕೂಡಾ ಆರ್ ಸಿಬಿಗೆ ಚಿಯರ್ ಅಪ್ ಮಾಡಿದ್ದಾರೆ. ಈ ಫೋಟೋಗಳನ್ನು ಖುದ್ದಾಗಿ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ ಸ್ಮ್ರತಿ ಮಂಧನ ಕನ್ನಡ ಭಾಷೆಯಲ್ಲಿರುವ ಆರ್ ಸಿಬಿ ಧ್ಯೇಯ ಗೀತೆಯನ್ನೂ ಪ್ರಕಟಿಸಿ ಅಭಿಮಾನಿಗಳಿಗೆ ಖುಷಿ ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ತುಮಕೂರು: ಗೊರವನಹಳ್ಳಿ ಮಹಾಲಕ್ಷ್ಮಿ ಸನ್ನಿಧಾನಕ್ಕೆ ಇನ್ಫೋಸಿಸ್ ಮುಖ್ಯಸ್ಥೆ ಭೇಟಿ ನೀಡಿದ್ದಾರೆ. ಸುಧಾ ಮೂರ್ತಿ ಅವರು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಕ್ಷೇತ್ರಕ್ಕೆ  ಸಂಬಂಧಿಕರೊಂದಿಗೆ ಆಗಮಿಸಿ ಮಹಾಲಕ್ಷ್ಮಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಅವರು ಸಾಮಾನ್ಯರಂತೆ ಬಂದು ಮಹಾಲಕ್ಷ್ಮಿ ತಾಯಿಗೆ ಪೂಜೆ ಸಲ್ಲಿಸಿದ್ದು, ಇದಾದ ಬಳಿಕ ದೇವಸ್ಥಾನದ ಆಡಳಿತ ಮಂಡಳಿಯ ಜೊತೆ ಕೆಲಕಾಲ ಚರ್ಚೆ ನಡೆಸಿದರು. ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಅವರಿಗೆ ಸನ್ಮಾನ ಮಾಡಲಾಯಿತು. ಸುಧಾಮೂರ್ತಿಯವರಿಗೆ ದೇವಸ್ಥಾನದ ಆಡಳಿತ ಮಂಡಳಿ ಮುಖಂಡರು ಹಾಗೂ ಸದಸ್ಯರು ಸಾಥ್ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಈ ಶೈಕ್ಷಣಿಕ ವರ್ಷದಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ಆರಂಭಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. 4–5 ನೇ ವರ್ಷದ ಮಕ್ಕಳಿಗಾಗಿ ಎಲ್ ಕೆಜಿ ಮತ್ತು ಯುಕೆಜಿ ಆರಂಭಿಸುವಂತೆ ಪೋಷಕರಿಂದ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಸರ್ಕಾರವು ಈ ವರ್ಷ ಅಕ್ಷರ ಆವಿಷ್ಕಾರದ ಯೋಜನೆಯಡಿಯಲ್ಲಿ ಸರ್ಕಾರಿ ಶಾಲೆಗಳಲ್ಲಿ ಇಸಿಸಿಇ, ಎಲ್ ಕೆಜಿ, ಯುಕೆಜಿಯ ಹಾಗೂ ದ್ವಿಭಾಷಾ (ಕನ್ನಡ ಮತ್ತು ಆಂಗ್ಲ ಮಾಧ್ಯಮ) ತರಗತಿಗಳನ್ನು ನಡೆಸಲು ಮುಂದಾಗಿದೆ ಎನ್ನಲಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲೆಗಳಲ್ಲಿ ಇಸಿಸಿಇ, ಎಲ್ ಕೆಜಿ ಹಾಗೂ ಯುಕೆಜಿಯ ತರಗತಿಗಳು ಹಾಗೂ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳು ಪ್ರಕಾರ ಆರಂಭಗೊಳ್ಳುತ್ತಿದ್ದು, ಪಾಲಕರು ಇದರ ಸದುಪಯೋಗ ಶಿಕ್ಷಣ ಇಲಾಖೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಲೈಂಗಿಕ ಕಿರುಕುಳದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ಹೆಚ್ಚಿದೆ. ಪ್ರಜ್ವಲ್ ರೇವಣ್ಣ ವಿರುದ್ಧ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಎಸಿಎಂಎಂ) ನ್ಯಾಯಾಲಯ ಅರೆಸ್ಟ್ ವಾರೆಂಟ್ ಹೊರಡಿಸಿದೆ.  ಲೈಂಗಿಕ ಕಿರುಕುಳ ಆರೋಪದ ಬಗ್ಗೆ ತನಿಖೆ ನಡೆಸುತ್ತಿರುವ ಎಸ್ ಐಟಿ ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ ಬಂಧನ ವಾರಂಟ್ ಹೊರಡಿಸಲಾಗಿದೆ. ರೇವಣ್ಣ ವಿರುದ್ಧ ಈಗಾಗಲೇ ಹೊರಡಿಸಲಾಗಿರುವ ಲುಕ್ ಔಟ್ ನೋಟಿಸ್ ಮತ್ತು ಬ್ಲೂ ಕಾರ್ನರ್ ನೋಟಿಸ್ ಗಳ ಬಗ್ಗೆಯೂ ಎಸ್ ಐಟಿ ನ್ಯಾಯಾಲಯಕ್ಕೆ ತಿಳಿಸಿದ್ದು, ಮೂಲ ಚಾರ್ಜ್ ಶೀಟ್ ಸಲ್ಲಿಸುವ ಅಗತ್ಯವಿಲ್ಲ ಎಂದು ಹೇಳಿದೆ. ಎಸ್ ಐಟಿ ಸಲ್ಲಿಕೆ ಆಧಾರದ ಮೇಲೆ ನ್ಯಾಯಾಲಯ ಪ್ರಜ್ವಲ್ ರೇವಣ್ಣ ವಿರುದ್ಧ ಬಂಧನ ವಾರಂಟ್ ಹೊರಡಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಲೋಕಸಭಾ ಚುನಾವಣೆ ಮುಗಿದ ಬಳಿಕ ರಾಜ್ಯ ಸರ್ಕಾರವು ಮದ್ಯದ ದರದಲ್ಲಿ ಮತ್ತೆ ಏರಿಕೆ ಮಾಡಲು ಮುಂದಾಗಿದ್ದು ಪ್ರಿಯರಿಗೆ ಶಾಕ್ ನೀಡಲು ತಯಾರಿ ನಡೆಸಿದೆ. ಆದರೆ ಅಚ್ಚರಿ ಏನಂದ್ರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಆಗುವ ವೇಳೆಗೆ ಸರ್ಕಾರ 3 ಸಲ ಬಿಯರ್ ದರ ಏರಿಕೆ ಮಾಡಿ ಬಿಯರ್ ಪ್ರಿಯರಿಗೆ ಶಾಕ್ ಕೊಟ್ಟಿದೆ. 2023 ರ ವಿಧಾನಸಭಾ ಚುನಾವಣೆಯ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಈಗಾಗಲೇ ಮೂರು ಬಾರಿ ಬಿಯರ್ ಬೆಲೆಯನ್ನು ಹೆಚ್ಚಿಸಿದೆ. ಆರಂಭದಲ್ಲಿ ಶೇ.20ರಷ್ಟು ಹೆಚ್ಚುವರಿ ಸುಂಕ ವಿಧಿಸಲಾಗಿದ್ದು, ನಂತರ ಹೆಚ್ಚುವರಿ ಅಬಕಾರಿ ಸುಂಕವನ್ನು (ಎಇಡಿ) 185 ರಿಂದ ಶೇ.195ಕ್ಕೆ ಹೆಚ್ಚಿಸಲಾಗಿದೆ. ಇದರ ಪರಿಣಾಮವಾಗಿ ಬಿಯರ್ ಬೆಲೆಗಳು ಪ್ರತಿ ಬಾಟಲಿಗೆ ರೂ 8 ರಿಂದ 15 ರೂಪಾಯಿಯಷ್ಟು ಏರಿಕೆಯಾಯಿತು. ಕಳೆದ ಏಳೆಂಟು ತಿಂಗಳುಗಳಲ್ಲಿ ಬಿಯರ್ ಬೆಲೆಯು ಪ್ರತಿ ಬಾಟಲಿಗೆ ಸುಮಾರು 40 ರೂ.ಗಳಷ್ಟು ಏರಿಕೆಯಾಗಿದೆ. ಅಂದಹಾಗೆ, ರಾಜ್ಯದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ಹಣಕಾಸಿನ ಬಿಕ್ಕಟ್ಟು…

Read More

ಪಾವಗಡ: ಸಾರ್ವಜನಿಕರಿಗೆ ಆರೋಗ್ಯಕ್ಕೆ ಸಂಬಂದಿಸಿದ ಎಲ್ಲಾ ವೈದ್ಯಕೀಯ ಸೇವೆಗಳನ್ನು, ಸಮಾಜ ಸೇವಾ ಸಂಸ್ಥೆ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ರವರು ಒಂದೇ ಸೂರಿನಡಿ ಸಿಗುವಂತೆ ಮಾಡಿ ಗ್ರಾಮೀಣ ಜನರಿಗೆ ಅರೋಗ್ಯ ಮೇಳವನ್ನು ನಡಿಸುತ್ತಿರುವುದು ಉಪಯೋಗಕಾರಿ ಸೇವಾ ಕಾರ್ಯ ಎಂದು ಸ್ಥಳೀಯ ಮುಖಂಡರಾದ ಪಿ ಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷರಾದ ಎಲ್. ಎಸ್. ನರಸರೆಡ್ಡಿ ಹೇಳಿದರು. ತಾಲ್ಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ಹೆಲ್ಪ್ ಸೊಸೈಟಿ ಪಾವಗಡ ಹಾಗೂ ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರ ಆಶ್ರಯದಲ್ಲಿ ಏರ್ಪಡಿಸಿದ್ದ ಉಚಿತ ಅರೋಗ್ಯ ತಪಾಸಣೆ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ನಿವೃತ್ತ ದೈಹಿಕ ಶಿಕ್ಷಕರಾದ ಸಣ್ಣರಾಮರೆಡ್ಡಿ ಮಾತನಾಡುತ್ತ ಇಂತಹ ಅರೋಗ್ಯ ಮೇಳದಿಂದ ಆರ್ಥಿಕವಾಗಿ ಆಶಕ್ತ ರಗಿರುವವರಿಗೆ ಪ್ರಯೋಜನವಾಗಲಿದೆ ಎಂದರು. ಆಸರೆ ಫೌಂಡೇಶನ್ ಸದಸ್ಯರಾದ ಅಮಿಲಿನೇನಿ ನರಸಿಂಹಮೂರ್ತಿ ಮಾತನಾಡುತ್ತ ದೈನಂದಿನ ಬದುಕಿನ ಒತ್ತಡಗಳು ಹಾಗೂ ಬದಲಾದ ಜೀವನ ಶೈಲಿಯಿಂದ ಅನೇಕ ರೋಗಗಳು ನಮ್ಮನ್ನು ಕಾಡುತ್ತಿದ್ದು ರೋಗ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯರನ್ನು ಸಂಪರ್ಕಿಸಿ…

Read More

ಮಂಡ್ಯದಲ್ಲಿ ನಡೆದಿರುವ ಭ್ರೂಣ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ವಿಚಾರಣೆ ವೇಳೆ ನರ್ಸ್ ಸ್ಫೋಟಕ ಸತ್ಯವನ್ನು ಬಾಯಿಬಿಟ್ಟಿದ್ದಾಳೆ. ಆರೋಪಿಗಳು 25-30 ಸಾವಿರ ರೂ.ಗೆ ಕಂದಮ್ಮಗಳ ಉಸಿರು ನಿಲ್ಲಿಸುತ್ತಿದ್ದರು ಎಂದು ಪೊಲೀಸರ ಎದುರು ಹೇಳಿಕೊಂಡಿದ್ದಾಳೆ. ಯಾವ ಮಗು ಅನ್ನುವುದನ್ನು ಪತ್ತೆ ಹಚ್ಚಿ ಆರೋಪಿಗಳು ಹೇಳುತ್ತಿದ್ದರು. ಹೆಣ್ಣು ಮಗು ಅಂತ ಕಂಡ ಕೂಡಲೇ ಅದನ್ನು ತಿಳಿಸುತ್ತಿದ್ದರು. ಹೆಣ್ಣು ಮಗು ಬಗ್ಗೆ ನಿರಾಸಕ್ತಿಯಿದ್ರೆ ಭ್ರೂಣ ಹತ್ಯೆ ಮಾಡ್ತಿದ್ದರು ಎಂದು ವಿಚಾರಣೆ ವೇಳೆ ಕರಾಳ ದಂಧೆಯ ಬಗ್ಗೆ ಬಂಧಿತ ನರ್ಸ್ ಬಾಯ್ಬಿಟ್ಟಿದ್ದಾರೆ. ಸ್ಕಾನಿಂಗ್ ಸೆಂಟರ್​ ಗಳಿಗೆ ಬರುವ ಗರ್ಭಿಣಿಯರನ್ನು ಟಾರ್ಗೆಟ್ ಮಾಡಲಾಗುತ್ತಿತ್ತು. ಎರಡನೇ ಮಗುವಿನ ಸ್ಕ್ಯಾನಿಂಗ್​ ಗೆ ಬಂದವರಿಗೆ ಈ ರೀತಿಯಾಗಿ ಮಾಡಲಾಗುತ್ತಿತ್ತು. ಹೆಣ್ಣು ಮಗು ಬಗ್ಗೆ ನಿರಾಸಕ್ತಿ ತೋರಿಸಿದ್ರೆ ಭ್ರೂಣ ಲಿಂಗ ಪರೀಕ್ಷೆ ಮಾಹಿತಿ ನೀಡುತ್ತಿದ್ದರು. ಪ್ಲಾನ್ ಮಾಡಿ ತಂತ್ರ ರೂಪಿಸುತ್ತಿದ್ದರು. ಒಪ್ಪಿಕೊಂಡ್ರೆ ಒಂಟಿ ಮನೆಯಲ್ಲಿ ಸ್ಕ್ಯಾನಿಂಗ್ ನಡೆಸಲಾಗುತ್ತಿತ್ತು. ಹೆಣ್ಣು ಭ್ರೂಣ ಎಂದು ಖಚಿತವಾದ್ರೆ ಪಾಂಡವಪುರಕ್ಕೆ ಗರ್ಭಿಣಿಯನ್ನು ಶಿಫ್ಟ್ ಮಾಡಿ ಬಳಿಕ ಸರ್ಕಾರಿ ಹೆಲ್ತ್…

Read More

ಫ್ರಾನ್ಸ್‌ ನಲ್ಲಿ ನಡೆಯುತ್ತಿರುವ 2024ರ 77ನೇ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಮೊದಲ ಬಾರಿಗೆ ಹೆಜ್ಜೆ ಹಾಕುವ ಮೂಲಕ ನಟಿ ಶೋಭಿತಾ ಧೂಳಿಪಾಲ ಗಮನ ಸೆಳೆದಿದ್ದಾರೆ. ನೇರಳೆ ಬಣ್ಣದ ಕಾರ್ಡೆಲಿಯಾ ಜಂಪ್‌ಸೂಟ್​ ದಿರಿಸಿನಲ್ಲಿ ನಟಿ ಬೆಕ್ಕಿನ ನಡಿಗೆಯಲ್ಲಿ ಮಿಂಚಿದ್ದಾರೆ. ಕೇನ್ಸ್‌ ಗೆ ಹೊರಡುವ ಮೊದಲು ಶೋಭಿತಾ ಧೂಳಿಪಾಲ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡರು. ಫೋಟೋಸ್ ​ಗೆ ಮನೋಹರವಾದ ಪೋಸ್ ನೀಡಿದರು. ಅಲ್ಲಿಂದ 77ನೇ ಕೇನ್ಸ್ ಚಲನಚಿತ್ರೋತ್ಸವದಲ್ಲಿ ತಮ್ಮ ಬಹು ನಿರೀಕ್ಷಿತ ಚೊಚ್ಚಲ ಪ್ರವೇಶ ಪಡೆದರು. ನೇರಳೆ ಬಣ್ಣದ ಸುಂದರ ದಿರಿಸಿನಲ್ಲಿ ತಮ್ಮ ಸೌಂದರ್ಯ ಪ್ರದರ್ಶಿಸಿದರು. ಶೋಭಿತಾ ಧೂಳಿಪಾಲ ಧರಿಸಿದ್ದ ಆಕರ್ಷಕವಾದ ಜಂಪ್‌ ಸೂಟ್​ ಅನ್ನು ವಿನ್ಯಾಸಕಿ ನಮ್ರತಾ ಜೋಶಿಪುರ ವಿನ್ಯಾಸ ಮಾಡಿದ್ದಾರೆ. ಇಂತಹದ್ದೇ ದಿರಿಸನ್ನು ಕಳೆದ ವರ್ಷದ ಲ್ಯಾಕ್ಮೆ ಫ್ಯಾಶನ್ ವೀಕ್‌ ನಲ್ಲಿ ನಟಿ ಅಥಿಯಾ ಶೆಟ್ಟಿ ಪ್ರದರ್ಶಿಸಿದ್ದರು. ಈ ಉಡುಪಿನ ಬೆಲೆ 1.8 ಲಕ್ಷ ರೂಪಾಯಿ ಆಗಿದೆ. ಕ್ಯಾನೆಸ್​ ಫಿಲ್ಮ್​ ಫೆಸ್ಟ್​ ನಲ್ಲಿ ಶೋಭಿತಾ ಮ್ಯಾಗ್ನಮ್ ಇಂಡಿಯಾ ಐಸ್ ಕ್ರೀಮ್ ಬ್ರ್ಯಾಂಡ್​ ಅನ್ನು…

Read More

ಬೆಂಗಳೂರು: ಮೊಬೈಲ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿ ಮಚ್ಚಿನಿಂದ ಹಲ್ಲೆ ನಡೆಸಿರೋ ಘಟನೆ ಬಾಪೂಜಿನಗರದ ಮಧುರ ಬಾರ್ ಬಳಿ ನಡೆದಿದೆ. ಮನೋಜ್, ತರುಣ್, ಕಿರಣ್ ಸೇರಿ ಓರ್ವ ಅಪ್ರಾಪ್ತನನ್ನು ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮನೋಜ್ ಎಂಬಾತ ತಿಂಗಳ ಹಿಂದೆ ವಿಜಯ್ ಮೊಬೈಲ್ ಕಸಿದು ವಾಪಸ್ ಕೊಟ್ಟು ತಮಾಷೆ ಮಾಡಿದ್ದನಂತೆ. ಇದಾದ ಬಳಿಕ ಕಳೆದ ವಾರ ಒಂದೇ ಬಾರ್​ ನಲ್ಲಿ ಮದ್ಯಪಾನ ಮಾಡಲು ಮನೋಜ್ ಮತ್ತು ವಿಜಯ್ ಸೇರಿದ್ದರು. ಈ ವೇಳೆ ವಿಜಯ್ ಮೊಬೈಲ್ ಕಸಿದುಕೊಂಡಿದ್ದ ವಿಚಾರ ಪ್ರಸ್ತಾಪಿಸಿ ತಮಾಷೆ ಮಾಡಿದ್ದಾನಂತೆ. ಇದೇ ವಿಚಾರಕ್ಕೆ ಕೋಪಗೊಂಡ ಮನೋಜ್ ಮೂವರನ್ನ ಕರೆದುಕೊಂಡು ಬಂದು ತನಗೆ ಅವಮಾನ ಮಾಡ್ತೀಯ ಅಂತ ಮಚ್ಚಿನಿಂದ ವಿಜಯ್​ ಮೇಲೆ ಮನೋಜ್ ಹಲ್ಲೆ ಮಾಡಿದ್ದಾನಂತೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ವಿಜಯ್ ಬ್ಯಾಟರಾಯನಪುರ ಪೊಲೀಸರಿಗೆ ದೂರು ನೀಡಿದ್ದಾನೆ. ವಿಜಯ್ ದೂರಿನ ಆಧಾರದ ಮೇಲೆ ಓರ್ವ ಅಪ್ರಾಪ್ತ ಸೇರಿದಂತೆ ಮೂವರನ್ನು ಅರೆಸ್ಟ್​ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ತುಮಕೂರು: ರಸ್ತೆ ಕಾಮಗಾರಿಗೆ ಪೂರ್ವ ನಿಯೋಜಿತವಾಗಿ ಸುರಕ್ಷತೆ ಕೈಗೊಳ್ಳದ ಕಾರಣ, ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಸಿರುವ ಘಟನೆ ತುಮಕೂರು ಕೊರಟಗೆರೆ ತಾಲೂಕಿನ ಬೈರೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೈರೇನಹಳ್ಳಿಯಲ್ಲಿ ಹಾದು ಗೌರಿಬಿದನೂರು ಕೊರಟಗೆರೆ ಹೋಗುವ ರಾಜ್ಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ನಿನ್ನೆ ಸುರಿದ ಭಾರೀ ಮಳೆಗೆ ಮನೆಯೊಳಗೆ ಹರಿದ ಚರಂಡಿ ನೀರಿನಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮನೆಯೊಳಗಿದ್ದ ಅಪಾರ ಪ್ರಮಾಣ ಧವಸ ಧಾನ್ಯ, ದಿನಬಳಕೆ ವಸ್ತುಗಳು ನೀರು ಪಾಲಾಗಿದೆ. ಹೆದ್ದಾರಿ ಎತ್ತರ ಹೆಚ್ಚಿಸಿ, ಚರಂಡಿ ಕಾಮಗಾರಿ ಪೂರ್ಣಗೊಳಿಸದೇ ಇರೋದೆ ಕಾರಣ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಸ್ಥಳಕ್ಕೆ ಕೊರಟಗೆರೆ ತಹಸೀಲ್ದಾರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸ್ಥಳದಲ್ಲಿ ರಸ್ತೆ ಕುಸಿತದಿಂದ ಸಿಎನ್ ಜಿ ವಾಹನ ಪಲ್ಟಿಯಾಗಿದ್ದು, ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಕೊರಟಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More