Author: admin

ಅಶ್ಲೀಲ ವೀಡಿಯೋ ಪ್ರಕರಣಗಳಲ್ಲಿ ಸಿಕ್ಕಿ ಹಾಕಿಕೊಂಡು ತಲೆ ಮರೆಸಿಕೊಂಡಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ವಿಶೇಷ ತನಿಖಾ ದಳ (SIT) ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿರುವ ಪ್ರಜ್ವಲ್ ರೇವಣ್ಣ ಜರ್ಮನಿಯಲ್ಲಿ ತಲೆ ಮರೆಸಿಕೊಂಡಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಜರ್ಮನಿಯಿಂದ ಲಂಡನ್ ಗೆ ತೆರಳಿದ್ದಾರೆ ಅನ್ನುವ ಮಾಹಿತಿ ಸಿಕ್ಕಿದೆ. ಸದ್ಯ ಇಂಗ್ಲೆಂಡ್ ನಲ್ಲಿರುವ ಭಾರತೀಯ ಉದ್ಯಮಿಯ ಸಹಾಯ ಪಡೆದುಕೊಂಡು ಪ್ರಜ್ವಲ್ ರೇವಣ್ಣ ಮತ್ತು ಅವರ ಇಬ್ಬರು ಗೆಳೆಯರು ರೈಲು ಮೂಲಕ ಜರ್ಮನಿಯ ಮ್ಯೂನಿಚ್ ಮೂಲಕ ಲಂಡನ್ ಗೆ ತೆರಳಿದ್ದಾರೆ ಎನ್ನಲಾಗಿದೆ. ಸದ್ಯ ದುಬೈ ಮೂಲದ ಓರ್ವ ಹಾಗೂ ಬೆಂಗಳೂರು ಮೂಲದ ಸ್ನೇಹಿತರು ಪ್ರಜ್ವಲ್ ಜೊತೆಗಿದ್ದಾರೆ ಎಂದು ತಿಳಿದು ಬಂದಿದೆ. ಇವರಿಬ್ಬರೂ ಕೂಡ ಪ್ರಜ್ವಲ್ ಜೊತೆ ಹೋಗಿದ್ದಾರೆ ಎನ್ನಲಾಗುತ್ತಿದೆ. ಪ್ರಜ್ವಲ್ ರೇವಣ್ಣ ಈಗಾಗಲೇ ಎರಡು ಸಲ ವಿಮಾನ ಟಿಕೆಟ್ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಲೋಕಸಭಾ ಚುನಾವಣೆಯ ನಂತರ ಪ್ರಜ್ವಲ್ ಭಾರತಕ್ಕೆ ಬರಬಹುದು ಎಂದು ಹೇಳಲಾಗಿತ್ತು. ಸದ್ಯ ಪ್ರಜ್ವಲ್ ಕುಟುಂಬಸ್ಥರಿಂದಲೇ ವಾಪಸ್…

Read More

ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಕ್ಷೇತ್ರಗಳಿಂದ ಕರ್ನಾಟಕ ವಿಧಾನಪರಿಷತ್ ಗೆ ನಡೆಯಲಿರುವ ಚುನಾವಣೆ ಸಂಬಂಧ, ಭಾರತ ಚುನಾವಣಾ ಆಯೋಗವು ಹಿರಿಯ ಐ.ಎ.ಎಸ್. ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನು ನೇಮಕ ಮಾಡಿದೆ. ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಹಾಗೂ ದಾವಣಗೆರೆ ಜಿಲ್ಲೆಯ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರಕ್ಕೆ ಅನಿಲ್ ಕುಮಾರ್ ಟಿ.ಕೆ. (ಐಎಎಸ್) ಹಾಗೂ ಹರ್ಷ ಗುಪ್ತ (ಐಎಎಸ್) ಅವರನ್ನು ಚುನಾವಣಾ ವೀಕ್ಷಕರಾಗಿ ನೇಮಿಸಲಾಗಿದ್ದು, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ರುದ್ರೇಶ್.ಕೆ., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ.ಎಂ.ಡಿ. ಸುದರ್ಶನ್ ಅವರು ಸಹಾಯಕ ಅಧಿಕಾರಿಗಳಾಗಿರುತ್ತಾರೆ. ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗೆ ಡಾ. ರವಿಶಂಕರ್ ಅವರನ್ನು ಚುನಾವಣಾ ವೀಕ್ಷಕರಾಗಿ ನೇಮಿಸಲಾಗಿದ್ದು, ಮೈಸೂರಿನ ಅಬಕಾರಿ ಉಪ ಆಯುಕ್ತರಾದ ಎಸ್.ನಾಗರಾಜಪ್ಪ ಅವರು ಸಹಾಯಕ ಅಧಿಕಾರಿಗಳಾಗಿರುತ್ತಾರೆ. ಮೂರು ಕ್ಷೇತ್ರಗಳ ಚುನಾವಣಾ ವೀಕ್ಷಕರು ಈಗಾಗಲೇ ಚುನಾವಣಾ ಕೆಲಸ-ಕಾರ್ಯಗಳ ವೀಕ್ಷಣೆ ನಡೆಸುತ್ತಿದ್ದು, ಸದರಿ ಚುನಾವಣಾ ಚುನಾವಣಾ ವೀಕ್ಷಕರನ್ನು…

Read More

ತುಮಕೂರು: ಜಿಲ್ಲೆಯ ವಿವಿಧಡೆ ಕಳೆದ ರಾತ್ರಿ ಭಾರಿ ಮಳೆಯಾಗಿದ್ದು ಚಿಕ್ಕನಾಯಕನಹಳ್ಳಿ ಹಾಗೂ ಶಿರಾ ತಾಲೂಕಿನಲ್ಲಿ ಅಪಾರ ಪ್ರಮಾಣದ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನೊಂದೆಡೆ ಜಿಲ್ಲೆಯ ಗಡಿ ಭಾಗದಲ್ಲಿ ಹರಿಯುವ ವೇದಾವತಿ ನದಿ ನೀರಿನ ಹರಿವು ಹೆಚ್ಚಾಗಿದೆ.  ನೆರೆ ಜಿಲ್ಲೆಯ ಚಿತ್ರದುರ್ಗದ ಹೊಸದುರ್ಗ ದಲ್ಲಿ ಹರಿಯುವ ವೇದಾವತಿ ನದಿ ನೀರು ವಿವಿ ಸಾಗರ ಸೇರುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಸೈಜ್ ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಭ್ರಾಮರಿ ಕ್ರಾಸ್ ಬಳಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕೋರೆ ಕಾರ್ಮಿಕರಾದ ಕೊಪ್ಪಳ ಜಿಲ್ಲೆಯ ಯಲಬುರ್ಗಿ ದೇವಲಾಪುರ ನಿವಾಸಿಗಳಾದ ಕರಿಯಪ್ಪ(26) ಮತ್ತು ನರಿಯಪ್ಪ(27) ಮೃತಪಟ್ಟಿದ್ದಾರೆ. ಕಾರ್ಕಳ ಪುರಸಭೆಯ ಮಾಜಿ ಸದಸ್ಯರೊಬ್ಬರ ಮಾಲೀಕತ್ವದ ನಿಟ್ಟೆಯ ಭ್ರಾಮರಿ ಕ್ರಾಸ್ ಬಳಿಯ ಕಲ್ಲು ಕೋರೆಯಲ್ಲಿ ಶಿಲೆ ಕಲ್ಲು ಲೋಡ್ ಮಾಡಿಕೊಂಡು ಮಂಗಳೂರಿನ ಕಡೆ ತೆರಳುತ್ತಿದ್ದಾಗ ಕಡಿದಾದ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿ ಈ ದುರ್ಘಟನೆ ಭೀಕರ ಸಂಭವಿಸಿದೆ. ಅಪಘಾತದ ಸಂದರ್ಭದಲ್ಲಿ ಕಾರ್ಮಿಕರು ಹಿಂಬದಿಯಲ್ಲಿ ಕುಳಿತಿದ್ದರು ಎನ್ನಲಾಗಿದೆ. ಲಾರಿ ಪಟ್ಟಿಯಾಗುತ್ತಿದ್ದಂತೆಯೇ ಕಲ್ಲುಗಳು ಕಾರ್ಮಿಕರಾದ ಕರಿಯಪ್ಪ ಮತ್ತು ನರಿಯಪ್ಪ ಎಂಬವರ ಮೇಲೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಪಂದ್ಯದಲ್ಲಿ ಗೆದ್ದು ಬೀಗಿದ ಬೆಂಗಳೂರು ತಂಡವು ರಾಯಲ್‌ ಆಗಿ ಪ್ಲೇ-ಆಫ್‌ಗೆ ಎಂಟ್ರಿ ಕೊಟ್ಟಿದೆ. ಈ ಸಲ ಕಪ್‌ ನಮ್ದೆ ಎಂದು ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಪದ್ಯದಲ್ಲಿ ಚೆನ್ನೈ ವಿರುದ್ಧ ಆರ್‌ ಸಿಬಿ 27 ರನ್ ‌ಗಳ ಗೆಲುವು ದಾಖಲಿಸಿತು. ಒಂದು ವೇಳೆ ಪಂದ್ಯ ಸೋತು 201 ರನ್‌ ಗಳಿಸಿದ್ದರೂ ಚೆನ್ನೈ ಪ್ಲೇ-ಆಫ್‌ ಪ್ರವೇಶಿಸಲು ಸಾಧ್ಯವಾಗುತ್ತಿತ್ತು. ಆದರೆ ಆರ್‌ ಸಿಬಿ ಬೌಲರ್‌ ಗಳ ಉತ್ತಮ ಪ್ರದರ್ಶನದಿಂದ ಚೆನ್ನೈ ಪ್ಲೇ-ಆಫ್‌ ಕನಸಿಗೂ ತಣ್ಣೀರು ಬಿದ್ದಿತು. ಕೇವಲ 10 ರನ್‌ಗಳ ಅಂತರದಲ್ಲಿ ಗಾಯಕ್‌ವಾಡ್‌ ಪಡೆ ಪ್ಲೇ-ಆಫ್‌ನಿಂದ ಮುಗ್ಗರಿಸಿತು. ಬೆಂಗಳೂರು ತಂಡ ನೀಡಿದ್ದ 219 ರನ್‌ಗಳ ಗುರಿ ಬೆನ್ನತ್ತಿದ ಸಿಎಸ್‌ಕೆ 20 ಓವರ್‌ಗಳಿಗೆ 7 ವಿಕೆಟ್‌ ನಷ್ಟಕ್ಕೆ 191 ರನ್‌ ಗಳಿಸಿ ಪಂದ್ಯ ಸೋತು ಪ್ಲೇ-ಆಫ್‌ನಿಂದ ಹೊರಬಿದ್ದಿತು. ತವರಿನಲ್ಲೇ ಆರ್‌ ಸಿಬಿ ಅಭಿಮಾನಿಗಳಿಗೆ ಭರ್ಜರಿ ಗೆಲುವಿನ ಗಿಫ್ಟ್‌ ನೀಡಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್‌…

Read More

ನವದೆಹಲಿ: ಪ್ರಧಾನಿ ಮೋದಿ ಹಾಗೂ ಅವರ ಸಚಿವರು ವಿಮಾನಗಳಲ್ಲಿ ಉಚಿತ ಪ್ರಯಾಣ ಮಾಡಬಹುದಾದರೆ, ದೇಶಾದ್ಯಂತ ಮಹಿಳೆಯರು ಯಾಕೆ ಉಚಿತ ಬಸ್‌ ಪ್ರಯಾಣ ಮಾಡಬಾರದು ಎಂದು ನವದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಪ್ರಶ್ನಿಸಿದ್ದಾರೆ. ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಮಧ್ಯಂತರ ಜಾಮೀನಿನ ಮೇಲೆ ಕೇಜ್ರಿವಾಲ್‌ ಹೊರಗಿದ್ದಾರೆ. ಉಚಿತ ಬಸ್‌ ಪ್ರಯಾಣ ಕುರಿತ ಮೋದಿ ಹೇಳಿಕೆಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಸಿಎಂ ಕೇಜ್ರಿವಾಲ್‌ ಟಾಂಗ್‌ ಕೊಟ್ಟಿದ್ದಾರೆ. ದೆಹಲಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಒದಗಿಸುವುದನ್ನು ಪ್ರಧಾನಿ ಬಹಿರಂಗವಾಗಿ ವಿರೋಧಿಸುತ್ತಿದ್ದಾರೆ. ದೇಶಾದ್ಯಂತ ಉಚಿತ ಬಸ್ ಪ್ರಯಾಣವನ್ನು ಪರಿಚಯಿಸಬೇಕೆಂದು ಮಹಿಳೆಯರು ಬಯಸುತ್ತಾರೆ.  ಆದರೆ ಪ್ರಧಾನಿ ಮತ್ತು ಅವರ ಮಂತ್ರಿಗಳು ಉಚಿತ ವಿಮಾನ ಪ್ರಯಾಣವನ್ನು ಪಡೆಯಬಹುದಾದರೆ, ದೇಶಾದ್ಯಂತ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಏಕೆ ಪಡೆಯಲು ಸಾಧ್ಯವಿಲ್ಲ ಎಂದು ಪ್ರಶ್ನಿಸಿದ್ದಾರೆ. ಪ್ರಧಾನಿ ಮೋದಿಯವರ ಸಂದರ್ಶನದ ವೀಡಿಯೋ ಕ್ಲಿಪ್ ಅನ್ನು ನವದೆಹಲಿ ಸಿಎಂ ಹಂಚಿಕೊಂಡಿದ್ದಾರೆ. ಉಚಿತ ಬಸ್ ಪ್ರಯಾಣ ಕಲ್ಪಿಸುವುದು ಆರ್ಥಿಕವಾಗಿ ಲಾಭದಾಯಕವಲ್ಲ ಎಂದು ಹೇಳಲಾಗಿದೆ. ನಮ್ಮತುಮಕೂರಿನ…

Read More

ಪೊಲೀಸ್ ಠಾಣೆಗಳಿಗೆ ಬರುವ ಸಿವಿಲ್ ಪ್ರಕರಣಗಳಿಗೆ ಕ್ರಿಮಿನಲ್ ಬಣ್ಣ ಬಳಿದು ದುಡ್ಡು ವಸೂಲಿ, ಹಣಕಾಸಿನ ವ್ಯಾಪಾರಕ್ಕೆ ನಿಂತರೆ ಪೊಲೀಸರಿಗೆ ಕಠಿಣವಾದ ಪಾಠ ಕಲಿಸಬೇಕಾದೀತು. ಪೊಲೀಸ್ ಠಾಣೆಗಳು ವ್ಯಾಪಾರಿ ಕೇಂದ್ರವಲ್ಲ ಎಂದು ಕರ್ನಾಟಕ ಹೈಕೋರ್ಟ್ ಎಚ್ಚರಿಕೆ ನೀಡಿದೆ. ಕರ್ನಾಟಕ ಹೈಕೋರ್ಟ್‌ನ ನ್ಯಾ. ಎಚ್.ಪಿ. ಸಂದೇಶ್ ಅವರಿದ್ದ ನ್ಯಾಯಪೀಠ ಬೆಂಗಳೂರಿನ ಚಂದ್ರಾ ಲೇಔಟ್ ಪೊಲೀಸರ ಮೂಲಕ ರಾಜ್ಯದ ಪೊಲೀಸರಿಗೆ ಈ ಎಚ್ಚರಿಕೆ ನೀಡಿದೆ. ಸಿವಿಲ್ ವ್ಯಾಜ್ಯವನ್ನು ಕ್ರಿಮಿನಲ್ ಪ್ರಕರಣವನ್ನಾಗಿ ಮಾರ್ಪಡಿಸಲು ಹೇಗೆ ಸಾಧ್ಯ? ಪೊಲೀಸ್ ಠಾಣೆಯಲ್ಲಿ ಸಿವಿಲ್ ವ್ಯಾಜ್ಯವನ್ನು ತೀರ್ಮಾನಿಸಲು ಪೊಲೀಸರಿಗೆ ಅಧಿಕಾರವನ್ನು ನೀಡಿದವರು ಯಾರು ಎಂದು ನ್ಯಾಯಪೀಠ ಪ್ರಶ್ನಿಸಿದೆ. ನಿವೇಶನವೊಂದರ ಖರೀದಿಗೆ ಸಂಬಂಧಿಸಿದ ವಿಚಾರದಲ್ಲಿ ಮಾರಾಟದಾರರಿಗೆ ಹಣ ಪಾವತಿಸಲು ಖರೀದಿದಾರರಿಗೆ ಒತ್ತಾಯಿಸಿದ ಹಾಗೂ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ನ್ಯಾಯಪೀಠ ಪೊಲೀಸರ ನಡವಳಿಕೆ ಬಗ್ಗೆ ಕಟುವಾಗಿ ಈ ಹೇಳಿಕೆ ನೀಡಿದೆ. ಪೊಲೀಸ್ ಠಾಣೆಗಳಲ್ಲಿ ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸುವ ಪೊಲೀಸರ ಕಾರ್ಯವೈಖರಿ ಮತ್ತೆ ಮತ್ತೆ ನಡೆಯುತ್ತಿದೆ. ಠಾಣೆಗಳನ್ನು ವ್ಯಾಪಾರಿ ಕೇಂದ್ರಗಳನ್ನಾಗಿ…

Read More

ಚೆನ್ನೈ: ‌ಪಶ್ಚಿಮ ಘಟ್ಟಗಳಲ್ಲಿ ಹಠಾತ್ ಮಳೆಯಿಂದಾಗಿ ತಮಿಳುನಾಡಿನ ತೆಂಕಾಶಿಯಲ್ಲಿರುವ ಓಲ್ಡ್ ಕುರ್ಟಾಲಂ ಜಲಪಾತದಲ್ಲಿ ಹಠಾತ್ ಪ್ರವಾಹ ಸೃಷ್ಟಿಯಾಗಿದೆ. ಪರಿಣಾಮ ತನ್ನ ಸಂಬಂಧಿಕರೊಂದಿಗೆ ಸ್ನಾನಕ್ಕೆಂದು ತೆರಳಿದ್ದ 17 ವರ್ಷದ ಹುಡುಗ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಹುಡುಗನನ್ನು ಅಶ್ವಿನ್‌ ಎಂದು ಗುರುತಿಸಲಾಗಿದೆ. ಈತ ಪಳಯಂಕೊಟ್ಟೈನ NGO ಕಾಲೋನಿಯ 11 ನೇ ತರಗತಿ ವಿದ್ಯಾರ್ಥಿ. ವಿಷಯ ತಿಳಿದ ಕೂಡಲೇ ತಮಿಳುನಾಡು ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ತಂಡವು ಜಿಲ್ಲಾಧಿಕಾರಿ ಎ.ಕೆ. ಕಮಲ್ ಕಿಶೋರ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಟಿ.ಪಿ. ಸುರೇಶ್ ಕುಮಾರ್ ಅವರೊಂದಿಗೆ ರಕ್ಷಣಾ ಕಾರ್ಯಾಚರಣೆಗೆ ದೌಡಾಯಿಸಿದ್ದಾರೆ. ಪ್ರವಾಸಿಗರ ಗುಂಪೊಂದು ಹಳೆಯ ಕುರ್ಟಾಲಂ ಜಲಪಾತದಲ್ಲಿ ಸ್ನಾನ ಮಾಡುತ್ತಿತ್ತು. ಈ ವೇಳೆ ಜಲಪಾತ ಹಠಾತ್‌ ಆಗಿ ತುಂಬಿ ಹರಿದಿದೆ. ಪರಿಣಾಮ ಅರಿವಿಲ್ಲದೆ ಸಿಕ್ಕಿಬಿದ್ದ ಪ್ರವಾಸಿಗರು ಸಹಾಯಕ್ಕಾಗಿ ಕಿರುಚಾಡಿದ್ದಾರೆ. ಜಲಪಾತದ ಬಳಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಯು ಪ್ರವಾಸಿ ತಾಣದಲ್ಲಿದ್ದ ಅಂಗಡಿಯವರ ನೆರವಿನೊಂದಿಗೆ ರಕ್ಷಿಸಲು ಧಾವಿಸಿದರು. ಹಠಾತ್ ಪ್ರವಾಹವು ಎಷ್ಟು ತೀವ್ರವಾಗಿತ್ತು ಎಂದರೆ ಎಲ್ಲರೂ ತಮ್ಮ ತಮ್ಮ ರಕ್ಷಣೆಗೆಂದು ಓಡಿ…

Read More

ಸದಾಕಾಲ ಮೋದಿ ದ್ವೇಷದ ಕಾರಣದಿಂದಾಗಿಯೇ ಸೋಶಿಯಲ್‌ ಮೀಡಿಯಾದಲ್ಲಿ ಪರ ಹಾಗೂ ವಿರೋಧ ವ್ಯಕ್ತಿಗಳನ್ನು ಪಡೆದುಕೊಂಡಿರುವ ನಟ ಕಿಶೋರ್‌ ಮತ್ತೊಮ್ಮೆ ತಮ್ಮ ಪೋಸ್ಟ್‌ ಮೂಲಕ ಸುದ್ದಿಯಾಗಿದ್ದಾರೆ. ಬಹುಭಾಷಾ ನಟ ಕಿಶೋರ್ ಬಿಜೆಪಿ ಪಕ್ಷವನ್ನು, ಪ್ರಧಾನಿ ಮೋದಿಯನ್ನು ಪದೇ ಪದೆ ಟೀಕಿಸುತ್ತಲೇ ಇರುತ್ತಾರೆ. ಸದ್ಯ ಲೋಕಸಭೆ ಚುನಾವಣೆ ನಡೆಯುತ್ತಿದ್ದು, ವಿವಿಧ ಹಂತಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಆಗಿದೆ. ಇಂತಹ ಸಮಯದಲ್ಲಿ ಮತ್ತೊಮ್ಮೆ ಪ್ರಧಾನಿ ಮೋದಿ ವಿರುದ್ಧ ನಟ ಕಿಶೋರ್ ಆಕ್ರೋಶ ಹೊರ ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಾಷಣದ ವೀಡಿಯೋ ತುಣುಕುಗಳನ್ನು ಹಂಚಿಕೊಂಡು “ನಿಜ ನೀವು ಸಾರ್ವಜನಿಕ ಜೀವನಕ್ಕೇ ಅಲ್ಲ, ಮನುಷ್ಯನಾಗಿರಲೇ ಅಯೋಗ್ಯ” ಎಂದು ಕಿಶೋರ್ ಬರೆದುಕೊಂಡಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ಕಿಶೋರ್ ದ್ವೇಷ ಹೊರ ಹಾಕುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಕೂಡ ಸಾಕಷ್ಟು ಬಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಾರಿ ಕೊಂಚ ಖಾರವಾಗಿಯೇ ಕಾಮೆಂಟ್ ಮಾಡಿದ್ದಾರೆ. “ನಿಜ ನೀವು ಸಾರ್ವಜನಿಕ ಜೀವನಕ್ಕೇ ಅಲ್ಲ, ಮನುಷ್ಯನಾಗಿರಲೇ ಅಯೋಗ್ಯ. ನಿಮ್ಮಂಥವರ ಬಾಯಲ್ಲಿ ಮರ್ಯಾದಾ ಪುರುಷೋತ್ತಮ ರಾಮನ…

Read More

ಅಜ್ಜಿ ಮನೆಗೆ ರಜೆ ಕಳೆಯಲು ಬಂದಿದ್ದ ಬಾಲಕ ಟ್ರಾಕ್ಟರ್ ಗೆ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಈ ದುರ್ಘಟನೆಯು ಮೈಸೂರಿನ ನಂಜನಗೂಡು ತಾಲೂಕಿನ ದೇವರಸನಹಳ್ಳಿಯಲ್ಲಿ ನಡೆದಿದೆ. ಭವಿಷ್ (8) ಟ್ರಾಕ್ಟರ್ ಗೆ ಸಿಲುಕಿ ಸಾವನ್ನಪ್ಪಿದ ಬಾಲಕನಾಗಿದ್ದಾನೆ. ಚಾಮರಾಜನಗರ ವಾಸಿ ತಾಯಿ ಮಮತಾ ತನ್ನ ಮಕ್ಕಳೊಂದಿಗೆ ದೇವರಸನಹಳ್ಳಿಗೆ ಬಂದಿದ್ದರು. ಮಕ್ಕಳಿಗೆ ರಜೆ ನಿಮಿತ್ತ ತನ್ನ ಮಕ್ಕಳ ಅಜ್ಜಿಮನೆಗೆ ಮಕ್ಕಳೂ ಖುಷಿಯಿಂದ ಬಂದಿದ್ದರು. ಮಕ್ಕಳಲ್ಲಿ ಭವಿಷ್ ಎಂಬ 8 ವರ್ಷದ ಹುಡುಗ ತನ್ನ ಸೋದರಮಾವನ ಜೊತೆ ಟ್ರಾಕ್ಟರ್ ಹತ್ತಿ ಜಮೀನಿಗೆ ತೆರಳಿದ್ದ. ಅಲ್ಲಿ ಜಮೀನಿನಲ್ಲಿ ಟ್ರ್ಯಾಕ್ಟರ್ ಹತ್ತಿ ಮಾವನ ಜತೆ ಉಳುಮೆ ಮಾಡುತ್ತಿದ್ದ. ಈ ಸಂದರ್ಭ ಭವಿಷ್ ಟ್ರಾಕ್ಟರ್ ನಿಂದ ಏಕಾಏಕಿ ಕೆಳಗೆ ಬಿದ್ದಿದ್ದಾನೆ. ಆತನ ಮೇಲೆ ರೊಟಾವೆಲ್ಟರ್ ಹರಿದು ಹೋಗಿದೆ. ಘಟನೆಯಲ್ಲಿ ಆತನ ದೇಹ ಛಿದ್ರ ಛಿದ್ರ ವಾಗಿದೆ. ಈ ಸಂಬಂಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More