Author: admin

ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿರುವ ಮನೆಯೊಂದರಲ್ಲಿ ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಪ್ರಕಾಶ್(51) ಮತ್ತು ಪತ್ನಿ ಯಶೋಧ(48) ಮೃತರಾಗಿದ್ದಾರೆ. ಪತಿ ಪ್ರಕಾಶ್ ರಸ್ತೆ ಬದಿ ಕ್ಯಾಂಟೀನ್ ನಡೆಸುತ್ತಿದ್ದರೆ, ಪ್ರಕಾಶ್ ಪತ್ನಿ ಯಶೋಧ ಫ್ಲೋರ್ ಮಿಲ್ ನಡೆಸುತ್ತಿದ್ದರು. ಈವರೆಗೂ ಪತಿ ಹಾಗೂ ಪತ್ನಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಹುಬ್ಬಳ್ಳಿ: ಪರಿಣಾಮಕಾರಿಯಾದ ಸಾರಿಗೆ ಸೌಲಭ್ಯಗಳನ್ನು ಒದಗಿಸುವ ಮೂಲಕ ಮಕ್ಕಳಿಗೆ ಪೋಷಾಕಾಂಶವನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ನಡೆಯೊಂದರಲ್ಲಿ ಡಾ. ಅಗರ್ವಾಲ್ಸ್ ನೇತ್ರ ಹಾಸ್ಪಿಟಲ್ ತನ್ನ ಕಾಪೆರ್ಟ್ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ಹುಬ್ಬಳ್ಳಿಯಲ್ಲಿ ಅಕ್ಷಯ ಪಾತ್ರ ಫೌಂಡೇಶನ್‍ಗೆ ಆಹಾರ ಡೆಲಿವರಿ ವ್ಯಾನ್ ಅನ್ನು ಒದಗಿಸಿದೆ. ಹೊಸದಾಗಿ ದೇಣಿಗೆ ನೀಡಿದ ವಾಹನವು ಹುಬ್ಬಳ್ಳಿ ವ್ಯಾಪ್ತಿಯಲ್ಲಿನ 28 ಶಾಲೆಗಳಿಗೆ ಅಂದಾಜು 6,000 ಊಟವನ್ನು ಪ್ರತಿ ದಿನ ವಿತರಣೆ ಮಾಡಲು ಅನುಕೂಲ ಮಾಡಿಕೊಡಲಿದೆ. ಸಮುದಾಯದ ಕಲ್ಯಾಣಕ್ಕೆ ಆಸ್ಪತ್ರೆ ಎಷ್ಟು ಬದ್ಧವಾಗಿದೆ ಮತ್ತು ಶಾಲೆಯಲ್ಲಿ ಹಸಿವನ್ನು ನಿರ್ಮೂಲನೆ ಮಾಡಲು ಅಕ್ಷಯ ಪಾತ್ರದ ಧ್ಯೇಯಕ್ಕೆ ಎಷ್ಟು ಪೂರಕವಾಗಿದೆ ಎಂಬುದಕ್ಕೆ ಈ ಕೊಡುಗೆಯು ಸಾಕ್ಷಿಯಾಗಿದೆ. ಅಗರ್ವಾಲ್ಸ್ ಐ ಹಾಸ್ಪಿಟಲ್‍ ನ ಕ್ಲಿನಿಕಲ್ ಸೇವೆಗಳ ಮುಖ್ಯಸ್ಥ ಡಾ. ಶ್ರೀಕೃಷ್ಣ ನಾಡಗೌಡ ಹೇಳುವಂತೆ “ಈ ಉಪಕ್ರಮದ ಭಾಗವಾಗಲು ನಮಗೆ ಹೆಮ್ಮೆಯಾಗುತ್ತದೆ. ಇದು ಕಣ್ಣಿನ ಆರೋಗ್ಯವನ್ನು ಪ್ರೋತ್ಸಾಹಿಸಲು ತನ್ನ ಬದ್ಧತೆಯನ್ನು ಪ್ರತಿಫಲಿಸುವುದಷ್ಟೇ ಅಲ್ಲ, ಸಮುದಾಯದಲ್ಲಿ ಸಮಗ್ರ ಯೋಗಕ್ಷೇಮವನ್ನು ಕಲ್ಪಿಸುವುದಕ್ಕೂ ಇದು ಪೂರಕವಾಗಿದೆ. ಯುವಜನತೆಯಲ್ಲಿ ಅರ್ಥವತ್ತಾದ ಬದಲಾವಣೆಯನ್ನು ಉಂಟು…

Read More

ಕೊರಟಗೆರೆ: ತಾಲ್ಲೂಕಿನ ಚನ್ನಾರಾಯನದುರ್ಗ ಹೋಬಳಿಯ ದಾಸಲುಕುಂಟೆ ಗ್ರಾಮದಲ್ಲಿ ಜಾತ್ರಾ ಮಹೋತ್ಸವ ಮತ್ತು 16 ನೇ ವರ್ಷದ ಮಡಿಲಕ್ಕಿ ಕಾರ್ಯಕ್ರಮ ಜರುಗಿತು. ಜಿಲ್ಲೆಯ ಹೆಸರಾಂತ ಕಲಾವಿದ ನಾಗಭೂಷಣ್ ಮತ್ತು ತಂಡದವರಿಂದ ಭಕ್ತಿಗೀತೆ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಬೆಳ್ಳಾವಿ ಕಾರದ ಮಠದ ಶ್ರೀವೀರ ಬಸವ ಮಹಾ ಸ್ವಾಮೀಜಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸ ಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಮಹಾಸ್ವಾಮೀಜಿ ಮತ್ತು ಬೆಳ್ಳಾವಿ ಕಾರದ ಮಠದ ಶ್ರೀ ವೀರ ಬಸವಲಿಂಗ ಸ್ವಾಮೀಜಿ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಹೆಚ್ಚು ಅಂಕ ಪಡೆದು ಗ್ರಾಮಕ್ಕೆ ಕೀರ್ತಿ ತಂದ ವಿದ್ಯಾರ್ಥಿಗಳಾದ ಚೈತ್ರ ಡಿ.ಆರ್., ಪ್ರಜ್ಞಾ ಡಿ.ಆರ್., ಚಂದ್ರು ಡಿ.ಎನ್., ಚಿತ್ರ, ತನುಶ್ರೀ, ಅನಿತಾ ರವರಿಗೆ ಶ್ರೀಗಳು ಸನ್ಮಾನಿಸಿ ಆಶೀರ್ವಾದ ನೀಡಿದರು. ನಂತರ ಮಾತನಾಡಿದ…

Read More

ದೇವಸ್ಥಾನದ ಅರ್ಚಕ ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ ನಡೆಸಿದ್ದಾಗಿ ಜನಪ್ರಿಯ ಟಿವಿ ನಿರೂಪಕಿಯೊಬ್ಬರು ಆರೋಪಿಸಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಚೆನ್ನೈಯ ಪ್ರಮುಖ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಬಲ್‌ ದೇಗುಲದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ ವಿರುದ್ಧ ಇದೀಗ ನಿರೂಪಕಿ ವಿರುಗಂಬಾಕ್ಕಂ ಮಹಿಳಾ ಠಾಣೆಗೆ ದೂರು ದಾಖಲಿಸಿದ್ದಾರೆ. ಸಾಲಿಗ್ರಾಮ ಮೂಲದ, ಖಾಸಗಿ ವಾಹಿನಿ ನಿರೂಪಕಿ ಕಾರ್ತಿಕ್‌ ಮುನಿಸ್ವಾಮಿ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. 30 ವರ್ಷದ ನಿರೂಪಕಿ ಆಧ್ಯಾತ್ಮಿಕತೆ ಕಡೆಗೆ ಒಲವು ಹೊಂದಿರುವ ವ್ಯಕ್ತಿಯಾಗಿದ್ದು, ಆಗಾಗ ದೇವಸ್ಥಾನಗಳಿಗೆ ಭೇಟಿ ನೀಡುತ್ತಿರುತ್ತಾರೆ. ಅದರಂತೆ ಚೆನ್ನೈಯ ಪರ್ಯಾಸ್‌ ನಲ್ಲಿರುವ ಈ ದೇವಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ವೇಳೆ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ ಜತೆಗೆ ಪರಿಚಯವಾಗಿತ್ತು. ಕ್ರಮೇಣ ಇಬ್ಬರೂ ಸ್ನೇಹಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರ ನಡುವೆ ಗೆಳೆತನ ಗಟ್ಟಿಯಾಗುತ್ತಿದ್ದಂತೆ ಕಾರ್ತಿಕ್‌ ಮುನಿಸ್ವಾಮಿ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮ, ವಿಶೇಷ ಪೂಜೆಗಳ ಬಗ್ಗೆ ನಿರೂಪಕಿಗೆ ಮಾಹಿತಿ ನೀಡುತ್ತಿದ್ದ. ವಾಟ್ಸಾಪ್‌ ಮೂಲಕ ಸಂದೇಶ ಕಳುಹಿಸುತ್ತಿದ್ದ.…

Read More

ತುಮಕೂರು: ನಾನು ಜೈಲಿನಿಂದ ಹೊರಗೆ ಬಂದ ನಂತರ ಸರಕಾರ ಪತನ ಆಗಲಿದೆ ಎಂದು ವಕೀಲ ದೇವರಾಜೇಗೌಡ ನೀಡಿರುವ ಹೇಳಿಕೆಗೆ ಪತ್ರಿಕ್ರಿಯಿಸಿರುವ ಗೃಹ ಸಚಿವ ಜಿ.ಪರಮೇಶ್ವರ್‌, ಹಾಗಾದರೆ ದೇವರಾಜೇಗೌಡ ಜೈಲಿನಲ್ಲಿಯೇ ಇರಲಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಎಸ್‌ ಐಟಿಯವರು ವಕೀಲ ದೇವರಾಜೇಗೌಡ ಹೇಳಿಕೆ ಬಗ್ಗೆ “ಅದರ ಸಾಧಕ ಬಾಧಕ ಅರಿತು ಕ್ರಮ ತೆಗೆದುಕೊಳ್ಳುತ್ತಾರೆ” ಎಂದರು. ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ಕೊಲೆಗಳು ಎಷ್ಟು ಆಗಿವೆ ಎಂದು ಹೇಳುವುದಕ್ಕಿಂತ, ಮೊದಲು ಬಿಜೆಪಿ ಆಡಳಿತದ ಅವಧಿಯಲ್ಲಿ ಎಷ್ಟು ಕೊಲೆಗಳು ಆಗಿವೆ ಎಂಬುದನ್ನು ನೆನಪಿಸಿಕೊಳ್ಳಲಿ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ. ಬಿಜೆಪಿಯವರಿಂದ ಹೇಳಿಸಿಕೊಂಡು ಕೇಳಿಸಿಕೊಂಡು ಕಾನೂನು ಸುವ್ಯವಸ್ಥೆ ಮಾಡುವ ಅಗತ್ಯವಿಲ್ಲ. ಇದಕ್ಕಾಗಿ ಏನು ಕ್ರಮ ಬೇಕಾದ್ರೂ ತೆಗೆದುಕೊಳ್ಳುತ್ತೇವೆ. ರಾಜ್ಯದಲ್ಲಿ ಬಿಜೆಪಿಯವರು ಶಾಂತಿ ಕದಡಲು ಯತ್ನಿಸಿದರೂ ಕೂಡ ಅದನ್ನು ನಿಯಂತ್ರಿಸುವ ಶಕ್ತಿ ಸರಕಾರಕ್ಕೆ ಇದೆ ಎಂದರು. ಒಂದೊಂದು ಘಟನೆಗೂ ಒಂದೊಂದು ಕಾರಣವಿದೆ. ರಾಜ್ಯದಲ್ಲಿ ಶಾಂತಿಯನ್ನು ಕಾಪಾಡುತ್ತೇವೆ. ಕಾನೂನು ಸುವ್ಯವಸ್ಥೆ ಹಾಳು ಮಾಡಲು ಯತ್ನಿಸಿದರೂ ನಾವು…

Read More

ಪಾವಗಡ: ತಾಲ್ಲೂಕಿನ ರೈತರಿಗೆ ಬರ ಪರಿಹಾರ ನೀಡುವಂತೆ ರೈತ ಸಂಘಗಳ ಮುಖಂಡರು, ತಹಸೀಲ್ದಾರ್ ಸಂತೋಷ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ತಾಲೂಕಿನಲ್ಲಿ ಕೆಲವರಿಗೆ ಮಾತ್ರ ಸಹಾಯ ಧನ ದೊರೆತಿದ್ದು, ಬರಗಾಲದ ನೆರವು ಸಿಗದವರು ಸಂಕಷ್ಟದಲ್ಲಿರುವ ಕುಟುಂಬಕ್ಕೆ ಆಸರೆಯಾಗುತ್ತಿದ್ದಾರೆ ಎಂದರು. ರೈತರಿಗೆ ಅನ್ಯಾಯವಾಗದಂತೆ ಬರ ಪರಿಹಾರ ಸಿಗುವಂತೆ ಮಾಡುವುದಾಗಿ ರೈತ ಸಂಘಗಳ ಮುಖಂಡರಿಗೆ ತಹಸೀಲ್ದಾರ್ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ತಾಲ್ಲೂಕು ರೈತ ಅಧ್ಯಕ್ಷ ಪೂಜಾರಪ್ಪ, ಸದಸ್ಯರಾದ ಬಡಪ್ಪ, ಗುಡಿಪಲ್ಲಪ್ಪ, ನರಸಪ್ಪ, ಹನುಮಂತರಾಯಪ್ಪ, ತಿಪ್ಪೇಸ್ವಾಮಿ, ನಡಿಪಣ್ಣ, ಸಿದ್ದಪ್ಪ, ಚಿತ್ತಯ್ಯ ಇತರರು ಇದ್ದರು. ವರದಿ: ನಂದೀಶ್ ನಾಯ್ಕ ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಗುಜರಾತ್‌: ಬೋರ್ಡ್ ಪರೀಕ್ಷೆಯಲ್ಲಿ ಟಾಪರ್ ಆಗಿದ್ದ ಗುಜರಾತ್‌ ನ ಮೊರ್ಬಿಯಾದ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ. ಗುಜರಾತ್ ಸೆಕೆಂಡರಿ ಮತ್ತು ಹೈಯರ್ ಸೆಕೆಂಡರಿ ಎಜುಕೇಶನ್ ಬೋರ್ಡ್ ಫಲಿತಾಂಶ ಮೇ 11 ರಂದು ಪ್ರಕಟವಾಗಿದೆ. ಹೀರ್ ಘೆಟಿಯಾ ಎಂಬಾಕೆ 10 ನೇ ತರಗತಿ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ್ದಾಳೆ. ಆಕೆಗೆ ಮೆದುಳಿನ ರಕ್ತಸ್ರಾವವಾಗಿದ್ದು, ಒಂದು ತಿಂಗಳ ಹಿಂದೆ ರಾಜ್‌ ಕೋಟ್‌ ನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಳು. ಶಸ್ತ್ರಚಿಕಿತ್ಸೆಯ ನಂತರ ಡಿಸ್ಚಾರ್ಜ್ ಕೂಡ ಆಗಿ ಮನೆಗೆ ತೆರಳಿದ್ದಳು. ಆದರೆ ವಾರದ ಹಿಂದೆ ಆಕೆಯಲ್ಲಿ ಮತ್ತೆ ಉಸಿರಾಟ ಮತ್ತು ಹೃದಯದ ತೊಂದರೆ ಕಾಣಿಸಿಕೊಂಡಿದೆ. ಕೂಡಲೇ ಆಕೆಯನ್ನು ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಯಿತು. ಎಂಆರ್‌ಐ ವರದಿಯಲ್ಲಿ 80% ರಿಂದ 90% ರಷ್ಟು ಆಕೆಯ ಮೆದುಳು ಕೆಲಸ ಮಾಡುವುದನ್ನು ನಿಲ್ಲಿಸಿದೆ ಎಂದು ತೋರಿಸಿದೆ. ಆಕೆಯ ಹೃದಯ ಕೆಲಸ ಮಾಡುವುದನ್ನು ನಿಲ್ಲಿಸಿದ ನಂತರ ಹೀರ್ ಬುಧವಾರ ನಿಧನರಾದಳು. ಬಳಿಕ ಆಕೆಯ ಕಣ್ಣುಗಳು ಮತ್ತು ಆಕೆಯ ದೇಹವನ್ನು ಪೋಷಕರು…

Read More

ಬಯಲು ಶೌಚಕ್ಕೆ ತೆರಳಿದ್ದ ಬಾಲಕನನ್ನು ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ನೆರಿಗಾ ಗ್ರಾಮದಲ್ಲಿ ನಡೆದಿದೆ. ಬಯಲು ಶೌಚಾಲಯಕ್ಕೆ ಹೋದ ಬಾಲಕ ಮೃತದೇಹವಾಗಿ ಪತ್ತೆಯಾಗಿದ್ದಾನೆ. ಕಳೆದ ಮೇ 15ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಾಣೇಶ್(15) ಕೊಲೆಯಾಗಿ ಪ್ರಾಣವನ್ನು ಕಳೆದುಕೊಂಡವನು. ಬಯಲು ಶೌಚಾಲಯಕ್ಕೆಂದು ಹೋದವನನ್ನು ಯಾರೋ ಹಂತಕರು ದೊಣ್ಣೆಯಿಂದ ಹೊಡೆದು ಕೊಂದಿದ್ದಾರೆ. ತಲೆ ಹಾಗೂ ಹೊಟ್ಟೆ ಭಾಗಕ್ಕೆ ರಭಸವಾಗಿ ಹೊಡೆದಿರುವುದರಿಂದ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಮಗ ಕಾಣದೆ ಇದ್ದಾಗ ಹುಡುಕಾಟ ನಡೆಸಿದಾಗ ಆತನ ಮೃತದೇಹವು ಪತ್ತೆಯಾಗಿದೆ ಎನ್ನಲಾಗಿದೆ. ಕೂಡಲೇ ಪೋಷಕರು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ. ಪ್ರಾಣೇಶ್‌ ತಂದೆ, ತಾಯಿ ಕಳೆದ ಮೂರು ತಿಂಗಳ ಹಿಂದೆ ಗಾರೆ ಕೆಲಸಕ್ಕೆಂದು ನೆರಿಗಾ ಗ್ರಾಮಕ್ಕೆ ಬಂದು ನೆಲೆಸಿದ್ದರು ಎನ್ನಲಾಗಿದೆ. ಮೂಲತಃ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಗೆ ಸೇರಿದ ಮಂತ್ರಾಲಯದ ಪ್ರಾಣೇಶ್‌, ಬೇಸಿಗೆ ರಜೆ ಹಿನ್ನೆಲೆಯಲ್ಲಿ ತಂದೆ-…

Read More

ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಮಾರು ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿ ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವ ಹೋರಿಯ ಪತ್ತೆಗಾಗಿ ಬಜರಂಗದಳದ ಕಾರ್ಯಕರ್ತರು ಹಾಗೂ ಭಕ್ತರು ಕಾರಣಿಕ ಶಕ್ತಿ ಬಲ್ನಾಡಿನ ಉಳ್ಳಾಲ್ತಿ ದೈವದ ಮೊರೆ ಹೋಗಿದ್ದಾರೆ. ದೇವಸ್ಥಾನದ ಗದ್ದೆಯಲ್ಲಿ ತಿರುಗಾಡುತ್ತಿದ್ದ ಎರಡು ಹೋರಿಗಳು ಇದ್ದಕ್ಕಿದ್ದ ಹಾಗೆ ನಾಪತ್ತೆಯಾಗಿದ್ದವು. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಬಜರಂಗದಳದವರು ಪ್ರಕರಣ ದಾಖಲಿಸಿದ್ದರು. ಇದೀಗ ಬಜರಂಗದಳ ಹಾಗೂ ಭಕ್ತರು ಹೋರಿಗಾಗಿ ದೈವದ ಮೊರೆ ಹೋಗಿದೆ. ಅಲ್ಲದೇ ಪ್ರಶ್ನಾಚಿಂತನೆಯಲ್ಲೂ ಹೋರಿಯ ಕುರಿತು ಕೇಳಿದ್ದಾರೆ. ಅದರಲ್ಲಿ ಕಂಡುಬಂದಂತೆ ಹೋರಿ ಅಡ್ಯನಡ್ಕ ಸಮೀಪ ಇದೆ ಎಂದು ತಿಳಿದು ಬಂದಿದೆ. ಜ್ಯೋತಿಷ್ಯ ಚಿಂತನೆಯಲ್ಲಿ ಹೋರಿ ಜೀವಂತವಾಗಿರುವ ಕುರಿತು ಮಾಹಿತಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಬಜರಂಗದಳ ಕಾರ್ಯಕರ್ತರು ಹಾಗೂ ಭಕ್ತರು ಬಲ್ನಾಡು ಉಳ್ಳಾಲ್ತಿ ದೈವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಹೋರಿ ಕಳ್ಳತನಗೈದವರಿಗೆ ತಕ್ಕ ಶಿಕ್ಷೆ ದೈವದ ಮೂಲಕ ಸಿಗುವಂತೆ ಪ್ರಾರ್ಥಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಬೆಂಗಳೂರು: ಇಲ್ಲಿ ನೀವು ಓಡಾಡ ಬೇಕಂದ್ರೆ ನಿಮ್ಮ ಗುಂಡಿಗೆ ಗಟ್ಟಿಯಿರಬೇಕು. ಬೆಂಗಳೂರಿನ ರಸ್ತೆಗಳೇ ಹಾಗೆ ರಸ್ತೆಗೂ ಗುಂಡಿಗಳಿಗೂ ಅವಿನಾಭಾವ ಸಂಬಂಧ. ಮಳೆ ಬಂದರೆ ಸಾಕು, ರಸ್ತೆ ಯಾವುದು? ಗುಂಡಿ ಯಾವುದು ಅನ್ನೋದೇ ಗೊತ್ತಾಗಲ್ಲ. ಇನ್ನು ಬ್ರಾಂಡ್ ಬೆಂಗಳೂರು ಕನಸು ಕಂಡಿರುವ ಡಿಕೆಶಿಯ ಕನಸು ನನಸಾಗೋ ಲಕ್ಷಣಗಳು ಕಾಣುತ್ತಿಲ್ಲ. ಬಿಬಿಎಂಪಿ ಅಂತೂ ನಮಗೂ ಇದಕ್ಕೂ ಸಂಬಂಧವೇ ಇಲ್ಲ ಎನ್ನುವಂತೆ ಗಪ್ ಚುಪ್ ಆಗಿದೆ. ಎಸ್ ಸಿಲಿಕಾನ್ ಸಿಟಿಯಲ್ಲಿ ರಸ್ತೆಗಳು ಕಿತ್ತುಹೋಗಿ, ವಾಹನ ಸವಾರರಿಗೇ ಸವಾಲು ಹಾಕುತ್ತಿದೆ. ಅದೆಷ್ಟೋ ಮಂದಿ ರಸ್ತೆ ಗುಂಡಿಗಳಲ್ಲಿ ಬಿದ್ದು ಅಪಘಾತವಾಗಿರೊ ಉದಾಹರಣೆಗಳಿವೆ. ಇನ್ನು ಬೆಂಗಳೂರಿನಲ್ಲಿ ಮಳೆ ಬಂದರೆ ಬದುಕು ಚಿಂದಿ ಚಿತ್ರಾನ್ನವಾಗುವುದರಲ್ಲಿ ಎರಡು ಮಾತಿಲ್ಲ. ಒಂದು ಕಡೆ ಮಳೆ, ಮತ್ತೊಂದು ಕಡೆ ಗುಂಡಿಗಳಿಂದ ವಾಹನ ಸವಾರರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡ್ತಾರೆ. ಇನ್ನು ಬ್ರಾಂಡ್ ಬೆಂಗಳೂರು ಅಡಿಯಲ್ಲಿ ಗುಂಡಿಗಳನ್ನು ಮುಚ್ಚುವ ಕಾರ್ಯದಲ್ಲಿ ಬಿಬಿಎಂಪಿ ಕಂಪ್ಲೀಟ್ ಫೇಲ್ ಆಗಿದೆ. ಕಳೆದ ಮೂರ್ನಾಲ್ಕು ದಿನ ಮಳೆ ಸುರಿಯುತ್ತಿದ್ದಂತೆ ರಾಜಧಾನಿ ಬೆಂಗಳೂರಿನ…

Read More