Subscribe to Updates
Get the latest creative news from FooBar about art, design and business.
- ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
- ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್ ಸೆಟ್ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
- ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
- ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
- ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ: ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
- ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
- ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
Author: admin
ಉತ್ತರಾಖಂಡದಲ್ಲಿ ಸಾವಿರಾರು ಹೆಕ್ಟೇರ್ ಅರಣ್ಯ ಪ್ರದೇಶ ಕಾಡ್ಗಿಚ್ಚಿಗೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ಉತ್ತರಾಖಂಡ ರಾಜ್ಯ ಸರ್ಕಾರಗಳನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಕಾಡ್ಗಿಚ್ಚನ್ನು ತಡೆಗೆ ಅಗತ್ಯವಿರುವ ಅನುದಾನವನ್ನು ಯಾಕೆ ಬಿಡುಗಡೆ ಮಾಡಿಲ್ಲ? ಅರಣ್ಯ ಸಿಬ್ಬಂದಿಯನ್ನು ಮತಗಟ್ಟೆ ಕರ್ತವ್ಯಕ್ಕೆ ನಿಯೋಜಿಸಿದ್ದು ಯಾಕೆ ಎಂದು ಖಾರವಾಗಿ ಪ್ರಶ್ನಿಸಿದೆ. ಈ ಬಗ್ಗೆ ಪರಿಸರವಾದಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯ ಸರ್ಕಾರಗಳ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿತು. ನವೆಂಬರ್ ನಿಂದ ಈವರೆಗೂ ಸಾವಿರಕ್ಕೂ ಅಧಿಕ ಬಾರಿ ರಾಜ್ಯದ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು. ಈವರೆಗೂ 1,100 ಹೆಕ್ಟೇರ್ಗೂ ಹೆಚ್ಚು ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಈ ಕಾಡ್ಗಿಚ್ಚು ತಡೆಗೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ₹ 10 ಕೋಟಿ ರೂ ಬೇಡಿಕೆ ಸಲ್ಲಿಸಿದ್ದರೂ ನೀಡಿದ್ದು ಕೇವಲ ₹ 3.15 ಕೋಟಿ ನೀಡಲಾಗಿದೆ ಎಂಬ ವರದಿಯನ್ನು ಕೋರ್ಟ್ ಮುಂದಿಡಲಾಗಿತ್ತು. ಏಪ್ರಿಲ್ 19ರಂದು ಉತ್ತರಾಖಂಡದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ…
ನವದೆಹಲಿ: ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಹಲ್ಲೆ ನಡೆಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿಯಲ್ಲಿ ಚುನಾವಣಾ ಸಂಭ್ರಮದ ನಡೆಯುತ್ತಿರುವ ನಡುವೆ, ದೆಹಲಿ ಈಶಾನ್ಯ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯಾ ಕುಮಾರ್ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ್ದಾನೆ. ಈ ಘಟನೆ ನಡೆದಾಗ ಕನ್ಹಯ್ಯ ಅವರು ಲೋಕಸಭೆ ಚುನಾವಣೆಯ ಪ್ರಚಾರ ನಡೆಸುತ್ತಿದ್ದರು. ಮಾಲೆ ಹಾಕುವ ನೆಪದಲ್ಲಿ ಈ ವ್ಯಕ್ತಿ ಕನ್ಹಯ್ಯನ ಬಳಿಗೆ ಬಂದು ಕಪಾಳಮೋಕ್ಷ ಮಾಡಿದ್ದಾನೆ. ವಿಶೇಷವೆಂದರೆ ಈ ವ್ಯಕ್ತಿ ಅಪರಾಧ ಮಾಡುವ ಮುನ್ನ ವೀಡಿಯೋವನ್ನೂ ಮಾಡಿಕೊಂಡಿದ್ದಾನೆ. ಮೊಬೈಲ್ ಕ್ಯಾಮರಾ ಹಿಡಿದುಕೊಂಡಿದ್ದ ಆತನ ಸಹಚರ ಮೊದಲು ‘ಕನ್ಹಯ್ಯಾಗೆ ಈಗ ಹೊಡೆಯಲಿದ್ದಾನೆ’ ಎನ್ನುತ್ತಾನೆ. ಕನ್ಹಯ್ಯಾ ಕುಮಾರ್ ಗೆ ಮಾಲೆ ಹಾಕಿದ ಬಳಿಕ ಆರೋಪಿಯು ಕಪಾಳಮೋಕ್ಷ ಮಾಡಿದ್ದು, ಬಳಿಕ ಘಟನಾ ಸ್ಥಳದಲ್ಲಿ ಕೋಲಾಹಲ ಎದ್ದಿರುವುದನ್ನು ಕಾಣಬಹುದು. ಕನ್ಹಯ್ಯಾಗೆ ಕಪಾಳಮೋಕ್ಷ ಮಾಡಿದ ವ್ಯಕ್ತಿ ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ. ದೆಹಲಿ ಪೊಲೀಸರ ಪ್ರಕಾರ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕನ್ಹಯ್ಯಾ ಕುಮಾರ್ಗೆ ಕಪಾಳಮೋಕ್ಷ ಮಾಡಿದ ಇಬ್ಬರೂ ಆರೋಪಿಗಳು…
ರಾಜಧಾನಿಯ ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ. ಮಂಜುನಾಥ ನಗರದ ಸಂಧ್ಯಾ ಮೃತ ಮಹಿಳೆಯಾಗಿದ್ದಾರೆ. ನೆನ್ನೆ ರಾತ್ರಿ ಘಟನೆ ನಡೆದಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಮೃತದೇಹ ಪತ್ತೆಯಾಗಿದೆ. ಇವರಿಗೆ ಮದುವೆಯಾಗಿ 5 ವರ್ಷ ಆಗಿತ್ತು. ನಾಲ್ಕು ವರ್ಷದ ಗಂಡು ಮಗುವೂ ಇತ್ತು. ಅಳಿಯ ಜಯಪ್ರಕಾಶ್ ಮೈತುಂಬಾ ಸಾಲ ಮಾಡಿ ಅದನ್ನು ತೀರಿಸಲು ಕಿರುಕುಳ ನೀಡುತ್ತಿದ್ದ. ನನ್ನ ಮಗಳಿಗೆ ಈ ವಿಚಾರವಾಗಿ ಕಿರುಕುಳ ನೀಡುತ್ತಿದ್ದ ಎಂದು ಸಂಧ್ಯಾ ತಂದೆ ಆಪಾದಿಸಿದ್ದಾರೆ. ಸದ್ಯ ಬಸವೇಶ್ವರನಗರ ಪೊಲೀಸ್ ಠಾಣಾ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಸಾರ್ವಜನಿಕರ ಅನುಕೂಲಕ್ಕಾಗಿ ನಗರ ಬಸ್ ನಿಲ್ದಾಣದಿಂದ ಗುಬ್ಬಿ ಗೇಟ್ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಮೂಲಕ ಶಿರಾಗೇಟ್ವರೆಗೂ ಪ್ರತಿ 20 ನಿಮಿಷಕ್ಕೊಮ್ಮೆ ನಗರ ಸಾರಿಗೆ ಬಸ್ ಗಳ ವ್ಯವಸ್ಥೆಯನ್ನು ಇಂದಿನಿಂದ ಕಲ್ಪಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆದ ತುಮಕೂರು ನಗರದ ರಾಷ್ಟ್ರೀಯ ಹೆದ್ದಾರಿ–4 ರಲ್ಲಿ ಅಮಾನಿಕೆರೆ ಕೋಡಿ ಹಳ್ಳಕ್ಕೆ ಸೇತುವೆ ನಿರ್ಮಾಣ ಕಾಮಗಾರಿಯ ಹಿನ್ನೆಲೆಯಲ್ಲಿ ವಾಹನಗಳ ಸುಗಮ ಸಂಚಾರ ಹಾಗೂ ಕಾಮಗಾರಿ ಪ್ರಗತಿ ಕುರಿತ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಪ್ರತಿ ದಿನ ದುಡಿಯುವ ಕಾರ್ಮಿಕ ವರ್ಗದವರು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಮತ್ತು ತುಮಕೂರು ನಗರದ ಬಸ್ ನಿಲ್ದಾಣದಿಂದ ಗುಬ್ಬಿಗೇಟ್ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ ಮೂಲಕ ಶಿರಾಗೇಟ್ವರೆಗೂ ಪ್ರತಿ ೨೦ ನಿಮಿಷಕ್ಕೊಮ್ಮೆ ಪ್ರತಿ ದಿನ ಬೆಳಿಗ್ಗೆ 7 ರಿಂದ ನಗರ ಸಾರಿಗೆ ಮಿನಿ ಬಸ್ ಗಳ ವ್ಯವಸ್ಥೆಯನ್ನು ಇಂದಿನಿಂದ ಕಲ್ಪಿಸಿ ಈ ಬಗ್ಗೆ…
ಬೆಂಗಳೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಮತ್ತು ಪರಿಸರ ಸಂಘ ಬೆಂಗಳೂರು ಜಂಟಿಯಾಗಿ ಜೂನ್ 8, 2024 ರಂದು ವಿಶ್ವ ಪರಿಸರ ದಿನವನ್ನು ಆಯೋಜಿಸುತ್ತಿದ್ದು, ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸೃಜನಶೀಲತೆ, ನಾವೀನ್ಯತೆ ಮತ್ತು ವಿಶ್ವ ಪರಿಸರ ದಿನಾಚರಣೆಯಲ್ಲಿ ವಿದ್ಯಾರ್ಥಿಗಳ ಸಕ್ರಿಯತೆಯನ್ನು ಉತ್ತೇಜಿಸಲು ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಇದು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಮತ್ತು ಮಣ್ಣು ಮತ್ತು ಭೂಮಿಯ ಮೇಲೆ ಹವಾಮಾನ ಬದಲಾವಣೆಯ ಪರಿಣಾಮಗಳ ಬಗ್ಗೆ ತಮ್ಮ ಕೊಡುಗೆ ನೀಡಲು ಅವಕಾಶವನ್ನು ಒದಗಿಸುತ್ತದೆ. ಕರ್ನಾಟಕ ರಾಜ್ಯದ ಯಾವುದೇ ಮಂಡಳಿಯಲ್ಲಿ ಪ್ರಸ್ತುತ ದಾಖಲಾದ ಪ್ರೌಢಶಾಲಾ ವಿದ್ಯಾರ್ಥಿಗಳು ಈ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪ್ರಬಂಧಗಳನ್ನು ಕನ್ನಡ ಅಥವಾ ಇಂಗ್ಲಿಷ್ ನಲ್ಲಿ ಸಲ್ಲಿಸಬಹುದು. ಪ್ರತಿ ಭಾಷೆಗೆ ಒಬ್ಬ ಸ್ಪರ್ಧಿಗೆ ಕೇವಲ ಒಂದು ಪ್ರಬಂಧವನ್ನು ಮಾತ್ರ ಸಲ್ಲಿಸಲು ಅವಕಾಶವಿದೆ. ಯಾವುದೇ ಸ್ಪರ್ಧಿಯು ಒಂದು ನಿರ್ದಿಷ್ಟ ಭಾಷೆಯಲ್ಲಿ ಒಂದಕ್ಕಿಂತ ಹೆಚ್ಚು ಪ್ರಬಂಧಗಳನ್ನು ಸಲ್ಲಿಸಿರುವುದು ಕಂಡುಬಂದರೆ, ಅವರು ಸಲ್ಲಿಸಿದ ಎಲ್ಲಾ ಪ್ರಬಂಧಗಳನ್ನು ಅಮಾನ್ಯವೆಂದು ಪರಿಗಣಿಸಲಾಗುತ್ತದೆ. ಪ್ರಬಂಧದ ಕೊನೆಯಲ್ಲಿ ಹೆಸರು,…
ಐಸ್ ಕ್ರೀಂ ಮ್ಯಾನ್ ಆಫ್ ಇಂಡಿಯಾ ಎಂದೇ ಪ್ರಖ್ಯಾತರಾದ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್(70) ಅವರು ಮೇ 17ರಂದು ಮುಂಬಯಿಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಐಸ್ ಕ್ರೀಂ ಎನ್ನುವುದು ಒಂದು ವರ್ಗಕ್ಕೆ ಮಾತ್ರ ಸೀಮಿತವಾಗಿತ್ತು. ರಘುನಂದನ್ ಕಾಮತ್ ಅವರು ಐಸ್ಕ್ರೀಂ ಅನ್ನು ಜಯಪ್ರಿಯಗೊಳಿಸಿ ಎಲ್ಲರಿಗೂ ಲಭ್ಯವಾಗುವಂತೆ ಮತ್ತು ಅದು ಸಮಾರಂಭಗಳಲ್ಲಿ ಒಂದು ಅಗತ್ಯದ ಪದಾರ್ಥ ಎಂಬಷ್ಟರ ಮಟ್ಟಿಗೆ ಬೆಳೆಸಿದ ಕೀರ್ತಿಗೆ ಪಾತ್ರರಾದವರು. ರಘುನಂದನ್ ಅವರು 1954ರಲ್ಲಿ ಮೂಲ್ಕಿಯಲ್ಲಿ ಬಡ ಕುಟಂಬವೊಂದರಲ್ಲಿ ಜನಿಸಿದ್ದರು. ಕಾಮತ್ ಅವರ ತಂದೆ ಹಣ್ಣಿನ ವ್ಯಾಪಾರಿಯಾಗಿದ್ದರು. ಕಾಮತ್ ಅವರು ತಮ್ಮ 15ನೇ ವಯಸ್ಸಿನಲ್ಲಿ ಅಣ್ಣನ ಹೊಟೇಲ್ಗೆ ಕೆಲಸಕ್ಕೆಂದು ಮುಂಬಯಿಗೆ ತೆರಳಿದ್ದರು. ಅಲ್ಲಿ ಹೊಟೇಲ್ ಉದ್ಯಮ ಆರಂಭಿಸಿ ಹಣ್ಣುಗಳಿಂದಲೇ ಐಸ್ ಕ್ರೀಂ ತಯಾರಿಸಿ ಜನಪ್ರಿಯರಾದರು. ಮುಂಬಯಿಯಲ್ಲಿ 1984ರಲ್ಲಿ ನ್ಯಾಚುರಲ್ಸ್ ಐಸ್ ಕ್ರೀಂ ಆರಂಭಿಸಿದ್ದರು. ಅದು ದೇಶಾದ್ಯಂತ ಜನಪ್ರಿಯವಾಗಿ ದೊಡ್ಡ ಉದ್ಯಮವಾಗಿ ಬೆಳೆದಿದೆ. 40ಕ್ಕೂ ಅಧಿಕ ನಗರಗಳಲ್ಲಿ 140ಕ್ಕೂ ಹೆಚ್ಚು ಕಡೆಗಳಲ್ಲಿ ನ್ಯಾಚುರಲ್…
ಕಳೆದ ನಾಲ್ಕೈದು ದಿನಗಳ ಹಿಂದೆ ಕನ್ನಡದ ನಟಿ, ಸದ್ಯ ತೆಲುಗು ಕಿರುತೆರೆಯಲ್ಲಿ ಮಿಂಚುತ್ತಿದ್ದ ನಟಿ ಪವಿತ್ರಾ ಜಯರಾಂ ರಸ್ತೆ ಅಪಘಾತದಲ್ಲಿ ನಿಧನರಾದರು. ಈಗ ಇನ್ನೊಂದು ಶಾಕಿಂಗ್ ಸುದ್ದಿ ಕೇಳಿಬಂದಿದೆ. ಪವಿತ್ರಾ ಜಯರಾಮ್ ಜೊತೆ ಸ್ನೇಹ ಹೊಂದಿದ್ದ ತೆಲುಗು ಕಿರುತೆರೆ ನಟ ಚಂದು ಅವರು ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಪವಿತ್ರಾ ಜಯರಾಮ್ ಜೊತೆ ಚಂದು ಆಪ್ತರಾಗಿದ್ದರು. ಪವಿತ್ರಾ ನಿಧನದ ಬಳಿಕ ತೀವ್ರ ದುಃಖಕ್ಕೆ ಒಳಗಾಗಿದ್ದ ಚಂದು ಅವರು ಹೈದರಾಬಾದ್ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೆಲುಗಿನ ಹಲವು ಧಾರಾವಾಹಿಗಳಲ್ಲಿ ಚಂದು ನಟಿಸುತ್ತಿದ್ದರು. ಇತ್ತೀಚೆಗೆ ಅವರು ಪವಿತ್ರಾ ಜಯರಾಮ್ ಜೊತೆ ಬೆಂಗಳೂರಿಗೆ ಬಂದಿದ್ದರು. ಸಿನಿಮಾವೊಂದಕ್ಕೆ ಸಹಿ ಮಾಡಿದ ಬಳಿಕ ಅವರು ಪುನಃ ಹೈದರಾಬಾದ್ ಗೆ ಹಿಂದಿರುಗುವಾಗ ಕಾರು ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಚಂದುಗೆ ಪೆಟ್ಟಾಗಿತ್ತು. ಅದನ್ನು ನೋಡಿ ಗಾಬರಿಗೊಂಡ ಪವಿತ್ರಾ ಅವರ ಉಸಿರು ನಿಂತುಹೋಗಿತ್ತು. ಆ ದುರಂತದ ನೆನಪು ಮಾಸುವುದಕ್ಕೂ ಮುನ್ನವೇ ಚಂದು ನಿಧನರಾಗಿದ್ದಾರೆ. ಹೈದರಾಬಾದ್ನ ಮಣಿಕೊಂಡದಲ್ಲಿರುವ ಮನೆಯಲ್ಲಿ ಚಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆಗೆ…
ಅವೈಜ್ಞಾನಿಕ ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿಯಿಂದ ಮಳೆನೀರು ಮನೆಗಳಿಗೆ ನುಗ್ಗಿದ ಘಟನೆ ಕೊರಟಗೆರೆ ತಾಲೂಕಿನ ಅರಸಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಬೈರೇನಹಳ್ಳಿ ಗ್ರಾಮದ ಮನೆ, ಅಂಗಡಿ, ಮೆಡಿಕಲ್ಸ್ ಗಳಿಗೆ ಕೂಡ ಮಳೆ ನೀರು ನುಗ್ಗಿದೆ. ಗುತ್ತಿಗೆದಾರರು ಚರಂಡಿಯನ್ನು ನಿರ್ಮಿಸದೇ, ರಾಜ್ಯ ಹೆದ್ದಾರಿ ರಸ್ತೆ ಕಾಮಗಾರಿ ಮುಗಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಲಾಗಿದೆ. ಬೈರೇನಹಳ್ಳಿಯ ರೈತಾಪಿ ವರ್ಗ ಮತ್ತು ಅಂಗಡಿ ಮಾಲೀಕರಿಗೆ ಲಕ್ಷಾಂತರ ರೂ ನಷ್ಟವಾಗಿದೆ ಎನ್ನಲಾಗಿದೆ. ರಾಜ್ಯ ಹೆದ್ದಾರಿ ಗುತ್ತಿಗೆದಾರರು ಬೈರೇನಹಳ್ಳಿ ಬಸ್ ನಿಲ್ದಾಣದಲ್ಲಿ ನೂತನವಾಗಿ ಕಟ್ಟೆ ನಿರ್ಮಿಸಿದ್ದಾರೆ. ಖಾಸಗಿ ವ್ಯವಸ್ಥಾಪಕ ಕೊರಟಗೆರೆ ಕ್ಷೇತ್ರಕ್ಕೂ ರಾಜ್ಯ ಹೆದ್ದಾರಿಗೂ ಸಂಬಂಧವೇ ಇಲ್ಲವೆಂಬಂತೆ ವರ್ತಿಸಿದ್ದಾರೆ. ಸರಕಾರಿ ಅಧಿಕಾರಿಗಳು ಸ್ಥಳಕ್ಕೆ ಬರೋದಿಲ್ಲ. ಕಾಮಗಾರಿಯು ಸಮರ್ಪಕವಾಗಿ ನಡೆಯುತ್ತಿಲ್ಲ ಎಂದು ಆರೋಪಿಸಲಾಗಿದೆ. ಸ್ಥಳೀಯರು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ಬಳಿ ರಾಜ್ಯಹೆದ್ದಾರಿ ಕಾಮಗಾರಿ ಪರಿಶೀಲನೆ ನಡೆಸುವಂತೆ ಆಗ್ರಹಿಸಿದ್ದಾರೆ. ಇನ್ನಾದರೂ ಸಂಬಂಧಪಟ್ಟವರು ಸಮಸ್ಯೆಯನ್ನ ಬಗೆಹರಿಸಿ ಸೂಕ್ತ ಪರಿಹಾರ ನೀಡಲು ಮುಂದಾಗುತ್ತಾರ ಎಂದು ಕಾದು ನೋಡಬೇಕಿದೆ.…
ಮಹಿಳೆಯೊಬ್ಬರು ಕೆ.ಎಸ್.ಆರ್.ಟಿ.ಸಿ ಬಸ್ ನ ತುರ್ತುನಿರ್ಗಮನ ಬಾಗಿಲ ಕಿಟಕಿಯಲ್ಲಿ ಉಗುಳಲು ಹೋಗಿ ತಲೆ ಸಿಲುಕಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. KSRTC ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಕಿಟಕಿಯ ಮೂಲಕ ಉಗಳಲೆಂದು ತಲೆ ಹೊರಗೆ ಹಾಕಿದ್ದಾರೆ. ಆದರೆ ದುರಾದೃಷ್ಟವಶಾತ್ ಮಹಿಳೆಯ ತಲೆ ಅಲ್ಲಿಯೇ ಲಾಕ್ ಆಗಿದೆ. ಈ ವೇಳೆ ಮಹಿಳೆ ಸಾಕಷ್ಟು ಪರದಾಟ ಅನುಭವಿಸಿದ್ದಾರೆ. ಕಿಟಕಿಯ ಸಣ್ಣ ಜಾಗ ಇದ್ದ ಕಾರಣ ಮತ್ತು ತುರ್ತು ನಿರ್ಗಮನದ ಬಾಗಿಲನ್ನು ಹೆಚ್ಚಾಗಿ ಬಳಸದ ಕಾರಣ ಅದರ ಕಿಟಕಿಯನ್ನು ಬೇಗನೆ ತೆಗೆಯಲಾಗಲಿಲ್ಲ. ಹೀಗಾಗಿ ಅರ್ಧ ಗಂಟೆಗೂ ಹೆಚ್ಚು ಕಾಲ ತಲೆ ಲಾಕ್ ಆಗಿದೆ. ಈ ವೇಳೆ ಮಹಿಳೆಯ ಪರದಾಟ ಗಮನಿಸಿದ KSRTC ಬಸ್ ಚಾಲಕ ಹಾಗೂ ನಿರ್ವಾಹಕ ಬಸ್ ನಿಲ್ಲಿಸಿ ಆಕೆಯ ಸಹಾಯಕ್ಕೆ ಬಂದಿದ್ದಾರೆ. ಬಳಿಕ ಜಾಗರೂಕತೆಯಿಂದ ಮಹಿಳೆಯ ರಕ್ಷಣೆ ಮಾಡಲಾಗಿದೆ. ಮಹಿಳೆಯ ತಲೆ ಲಾಕ್ ಆಗಿ ಪರದಾಡುತ್ತಿರುವುದನ್ನು ಸ್ಥಳೀಯರು ತಮ್ಮ ಮೊಬೈಲ್ ನಲ್ಲಿ ವೀಡಿಯೋ ಮಾಡಿದ್ದು, ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.…
ಕೊಳೆತ ಸ್ಥಿತಿಯಲ್ಲಿ ಹುಲಿಯೊಂದರ ಮೃತದೇಹ ಪತ್ತೆಯಾಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಉಪ ವಿಭಾಗ ವ್ಯಾಪ್ತಿಯಲ್ಲಿ ವರದಿಯಾಗಿದೆ. ಮೃತ ಹುಲಿಯು 4 ವರ್ಷದ ಪ್ರಾಯದ್ದಾಗಿದ್ದು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವುದರಿಂದ ಲಿಂಗ ಗುರುತಿಸಲು ಸಾಧ್ಯವಾಗಿಲ್ಲ ಎಂದು ವರದಿ ತಿಳಿಸಿದೆ. ಹುಲಿಯ ಸಾವಿನ ಬಗ್ಗೆ ಹೆಚ್ಚಿನ ವಿವರ ಸಂಗ್ರಹಿಸುವ ಸಲುವಾಗಿ ಮೃತ ಹುಲಿಯ ಅಂಗಾಂಗಳನ್ನು ಸಂಗ್ರಹಿಸಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ತಿಳಿಸಿದ್ದಾರೆ. ಅರಣ್ಯ ಸಿಬ್ಬಂದಿ ಗಸ್ತು ತಿರುಗುವಾಗ ಅರಣ್ಯ ಪ್ರದೇಶದ ಗಿಡಗಂಟಿಗಳ ಪೊದೆಯಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದ್ದು, ಹುಲಿಯು ವನ್ಯಜೀವಿಯ ಜೊತೆಗಿನ ಕಾದಾಟದಿಂದ ಸುಮಾರು 12ರಿಂದ 15 ದಿನಗಳ ಹಿಂದೆ ಸಾವನ್ನಪ್ಪಿರುವುದಾಗಿ ಇಲಾಖಾ ಪಶು ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. ಇವುಗಳ ಬಗ್ಗೆ ಯಾವುದೇ ನಿಖರತೆ ದೊರೆಯದಿರುವುದರಿಂದ ಹುಲಿ ಸಾವಿನ ಬಗ್ಗೆ ಅನುಮಾನ ಮೂಡಿಸಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ. ಸ್ಥಳಕ್ಕೆ ಹೆಡಿಯಾಲ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ. ರವೀಂದ್ರ, ಎನ್. ಬೇಗೂರು ವಲಯ ವಲಯ…