Author: admin

ಚೆನ್ನೈನಿಂದ ಶಸ್ತ್ರಾಸ್ತ್ರಗಳನ್ನು ಹೊತ್ತು ಇಸ್ರೇಲ್‌ ಗೆ ಸಾಗುತ್ತಿರುವ ಹಡಗಿಗೆ ಸ್ಪೇನ್‌ ದೇಶ ತನ್ನ ಕಾರ್ಟಗೆನರ ಬಂದರಿನಲ್ಲಿ ನಿಲುಗಡೆಗೆ ಅವಕಾಶ ನಿರಾಕರಿಸಿದೆ ಎಂದು ಸ್ಪೇನ್‌ ನ ವಿದೇಶ ಸಚಿವ ಜೋಸ್‌ ಮ್ಯಾನುವೆಲ್‌ ಅಲ್ಬಾರೆಸ್‌ ಮಾಹಿತಿ ನೀಡಿದ್ದಾರೆ. ʼಮರಿಯನ್ನೆ ಡೇನಿಕಾʼ ಹೆಸರಿನ ಹಡಗು ಸ್ಪೇನ್‌ ಬಂದರಿನಲ್ಲಿ ಮೇ 21ರಂದು ನಿಲುಗಡೆಗೆ ಅವಕಾಶ ಕೋರಿತ್ತು. ಗಾಝಾ ಯುದ್ಧ ಆರಂಭಗೊಂಡಂದಿನಿಂದ ಇಸ್ರೇಲ್‌ ಗೆ ಎಲ್ಲಾ ಶಸ್ತ್ರಾಸ್ತ್ರ ರಫ್ತು ನಿಷೇಧಿಸುವ ಸ್ಪೇನ್‌ ನೀತಿಯ ಅನುಸಾರ ಅನುಮತಿ ನಿರಾಕರಿಸಲಾಗಿದೆ ಎಂದು ಸ್ಪೇನ್ ಸಚಿವರು ತಿಳಿಸಿದ್ದಾರೆ. ಡೆನ್ಮಾರ್ಕ್‌ ಧ್ವಜವಿರುವ ಹಡಗಿನಲ್ಲಿ 27 ಟನ್‌ ತೂಕದ ಶಸ್ತ್ರಾಸ್ತ್ರಗಳನ್ನು ಇಸ್ರೇಲ್ ನ ಹೈಫಾ ಬಂದರಿಗೆ ಸಾಗಿಸಲಾಗುತ್ತಿತ್ತು. ಈ ರೀತಿ ಸ್ಪೇನ್‌ ಬಂದರಿಗೆ ಇಸ್ರೇಲ್‌ ಗೆ ಹೊರಟಿರುವ ಶಸ್ತ್ರಾಸ್ತ್ರ ಹೊತ್ತ ಹಡಗು ಆಗಮಿಸಿರುವುದು ಮೊದಲನೇ ಬಾರಿ ಇದಾಗಿದ್ದು ಅನುಮತಿ ನಿರಾಕರಿಸಲಾಗಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಚಲಿಸುತ್ತಿದ್ದ ರೈಲಿನಲ್ಲಿ ಮುಸುಕುಧಾರಿ ವ್ಯಕ್ತಿಯೊಬ್ಬ ಹಲವರಿಗೆ ಹಲ್ಲೆ ಮಾಡಿದ ಘಟನೆ ಖಾನಾಪುರ ತಾಲೂಕಿನ ಲೋಂಡಾ ಬಳಿ ನಡೆದಿದೆ. ಗಾಯಾಳುಗಳ ಆರೋಗ್ಯವನ್ನು ರೈಲ್ವೆ ಡಿಐಜಿ ಶರಣಪ್ಪ ವಿಚಾರಿಸಿದ್ದಾರೆ. ಡಿಐಜಿ ಮಾತನಾಡಿ, ಐಪಿಸಿ ಸೆಕ್ಷನ್ 302, 307, 332, 353 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪುದುಚೇರಿ ದಾದರ್ ಎಕ್ಸ್ ​ಪ್ರೆಸ್ ರೈಲಿನಲ್ಲಿ ಈ ಘಟನೆ ನಡೆದಿದೆ ಎಂದಿದ್ದಾರೆ. ಅನಾಮಿಕ ಪ್ರಯಾಣಿಕ ಟಿಕೆಟ್ ವಿಚಾರಕ್ಕೆ ಟಿಟಿ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾನೆ. ಅವರ ಸಹಾಯಕ್ಕೆ ಬಂದ ಕೋಚ್ ಹೆಲ್ಪಿಂಗ್ ಸ್ಟಾಫ್​​ ಮೇಲೆಯೂ ಹಲ್ಲೆ ಆಗಿದೆ. ಆ ಪೈಕಿ ಓರ್ವ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ರೈಲ್ವೆ ಇಲಾಖೆಯೊಂದಿಗೆ ಮಾತನಾಡಿದ್ದೇವೆ. ಮೃತನ ಕುಟುಂಬಕ್ಕೆ ರೈಲ್ವೆ ಇಲಾಖೆಯಿಂದ ಪರಿಹಾರ ನೀಡಲಾಗುತ್ತಿದೆ. ದೇವರ್ಷಿ ವರ್ಮಾ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದ ಡಿಐಜಿ ಶರಣಪ್ಪ, ಹಲ್ಲೆ ಮಾಡಿದ ಆರೋಪಿ ಪತ್ತೆಗೆ ಆರ್ ​ಪಿಎಫ್, ಜಿಆರ್​ ಪಿ ಮತ್ತು ಸ್ಥಳೀಯ ಪೊಲೀಸ್ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ. ನಾಲ್ಕು ವಿಶೇಷ ತಂಡಗಳನ್ನು…

Read More

ಎಸ್‍ಎಸ್‍ಎಲ್‍ ಸಿಯಲ್ಲಿ ಶಿಕ್ಷಣ ಇಲಾಖೆ ಈ ವರ್ಷ ನೀಡಿದ 20% ಗ್ರೇಸ್ ಅಂಕಗಳಿಗೆ ಖುದ್ದು ಸಿಎಂ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ವರ್ಷದಿಂದ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿಂದು ಇಲಾಖಾವಾರು ಪ್ರಗತಿ ಪರಿಶೀಲನೆ ಸಭೆ ನಡೆದ ವೇಳೆ ಗ್ರೇಸ್ ಅಂಕ ಕೊಟ್ಟ ವಿಚಾರ ಚರ್ಚೆಗೆ ಬಂತು. ಈ ವೇಳೆ ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಗರಂ ಆದ ಸಿಎಂ, ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧ ಬಂದಿದೆ. ಗ್ರೇಸ್ ಮಾರ್ಕ್ಸ್ ಕೊಡೋದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರುತ್ತಿವೆ ಎಂದಿದ್ದಾರೆ. ಎಸ್‍ಎಸ್‍ಎಲ್‍ ಸಿಯಲ್ಲಿ (SSLC) ಗ್ರೇಸ್ ಮಾರ್ಕ್ಸ್ ಕೊಡೋದು ಅಗತ್ಯ ಇತ್ತಾ? ಪರೀಕ್ಷೆಯಲ್ಲಿ ಈ ಬಾರಿ ಕಠಿಣ ಕ್ರಮ ಕೈಗೊಂಡಿದ್ದು ಸರಿ. ಆದರೆ ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದು ಸರಿ ಇತ್ತಾ ಎಂದು ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಿಎಂ ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ಮುಂಬರುವ ಶೈಕ್ಷಣಿಕ…

Read More

ಮುಸ್ಲಿಂ ಮಹಿಳೆಯೊಬ್ಬರು ಮದುವೆಯಾಗಿ ತ್ರಿವಳಿ ತಲಾಖ್ ಪಡೆದ ನಂತರ ಹಿಂದೂ ಧರ್ಮಕ್ಕೆ ಮತಾಂತರವಾಗಿ, ಹಿಂದೂ ಧರ್ಮದ ಯುವಕನನ್ನು ಮದುವೆಯಾದ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮದುವೆಯಲ್ಲಿ ಎಲ್ಲಾ ಹಿಂದೂ ಸಂಪ್ರದಾಯಗಳನ್ನು ಅನುಸರಿಸಲಾಗಿದೆ ಎಂದು ವರದಿ ತಿಳಿಸಿದ್ದು, ರುಬಿನಾ ಎಂಬ ಮೂಲ ಹೆಸರನ್ನು ಹೊಂದಿದ್ದ ಮಹಿಳೆ ಸಂಗಾತಿಯಿಂದ ತ್ರಿವಳಿ ತಲಾಖ್‌ ಪಡೆದ ನಂತರ ತುಂಬಾ ನೊಂದಿದ್ದಳು. ವಿಚ್ಛೇದನದ ನಂತರ ಅವಳು ತನ್ನ ಧರ್ಮವನ್ನು ಬದಲಾಯಿಸಲು ನಿರ್ಧರಿಸಿದಳು ಎನ್ನಲಾಗಿದೆ. ಮಹಿಳೆ ಈ ಹಿಂದೆ ಪ್ರೀತಿಸಿ ಮದುವೆಯಾಗಿದ್ದಳು. ಆದರೆ ಸಂಗಾತಿ ಆಕೆಗೆ ತ್ರಿವಳಿ ತಲಾಖ್‌ ನೀಡಿದ್ದ. ಇದಾದ ಬಳಿಕ ಮಹಿಳೆ ತನ್ನ 2 ಮಕ್ಕಳನ್ನು ಬಿಟ್ಟು ಹೋಗಿದ್ದಾಳೆ. ಒಬ್ಬ 6 ವರ್ಷ ಮತ್ತು ಇನ್ನೊಬ್ಬಳು ಕೇವಲ 3 ವರ್ಷ ವಯಸ್ಸಿನವಳು. ರುಬಿನಾ ಹಿಂದೂ ಯುವಕನನ್ನು ಮದುವೆಗಾಗಿ ತನ್ನ ಹೆಸರನ್ನು ರುಬಿನಾದಿಂದ ಪ್ರೀತಿ ಎಂದು ಬದಲಾಯಿಸಿದಳು. ಇಬ್ಬರ ನಡುವಿನ ಸಂಬಂಧವು ಮಿಸ್ಡ್ ಕಾಲ್ ಮೂಲಕ ಪ್ರಾರಂಭವಾಯಿತು. ನಂತರ ದಂಪತಿಗಳು ಇನ್ಸ್ಟಾಗ್ರಾಮ್ ನಲ್ಲಿ ಸಂಪರ್ಕಗೊಂಡರು. ಕೆಲವು ಸಂಭಾಷಣೆಗಳ…

Read More

ವಿಪರೀತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್‌ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ ಸ್ತಂಭನದಿಂದ ಚಿಪ್ಸ್ ತಿನ್ನುತ್ತಲೇ ಸಾವನ್ನಪ್ಪಿದ ಘಟನೆ ನಡೆದಿದೆ. ನ್ಯೂಯಾರ್ಕ್ ನ ಮ್ಯಾಸಚೂಸೆಟ್ಸ್‌ ನ 14 ವರ್ಷದ ಹ್ಯಾರಿಸ್ ವೊಲೊಬಾಹ್ “ಒನ್ ಚಿಪ್ ಚಾಲೆಂಜ್” ನಲ್ಲಿ ಭಾಗವಹಿಸಿದ ನಂತರ ನಿಧನರಾಗಿದ್ದಾರೆ. ಕ್ಯಾಪ್ಸೈಸಿನ್ ಎಂಬ ಮೆಣಸಿನಕಾಯಿಯ ಸಾರವನ್ನು ದೊಡ್ಡ ಪ್ರಮಾಣದಲ್ಲಿ ಸೇವಿಸಿದ ನಂತರ ಹ್ಯಾರಿಸ್ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯ ಮುಖ್ಯ ವೈದ್ಯಕೀಯ ಪರೀಕ್ಷಕರು ನಿರ್ಧರಿಸಿದ್ದಾರೆ ಎಂದು ಮೃತದೇಹ ಪರೀಕ್ಷೆ ವರದಿ ತಿಳಿಸಿದೆ. ಕ್ಯಾಲಿಫೋರ್ನಿಯಾದಲ್ಲಿ, ಈ ಚಾಲೆಂಜ್ ನಲ್ಲಿ ಭಾಗವಹಿಸಿದ ನಂತರ ಮೂವರು ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ಅದೇ ಕಾರಣಕ್ಕಾಗಿ ಮಿನ್ನೇಸೋಟದಲ್ಲಿ ಏಳು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಕ್ಯಾರೊಲಿನಾ ರೀಪರ್ ಮತ್ತು ನಾಗಾ ವೈಪರ್ ಪೆಪ್ಪರ್‌ ಗಳೊಂದಿಗೆ ಉತ್ಪಾದಿಸಿದ ಚಿಪ್ ಇದಾಗಿತ್ತು ಎಂದು ವರದಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಬೆಂಗಳೂರು: ವಿಧಾನಸೌಧ ಪ್ರವೇಶಕ್ಕೆ ಇನ್ಮುಂದೆ ಬೇಕಾಬಿಟ್ಟಿ ಪಾಸ್ ‌ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ಹೇಳಿದ್ದಾರೆ. ವಿಧಾನಸೌಧ ದ್ವಾರದ ಮೆಟಲ್ ಡಿಟೆಕ್ಟರ್‌, ನೂತನ ಬ್ಯಾಗೇಜ್‌ ಸ್ಕ್ಯಾನರ್‌ ಯಂತ್ರಗಳನ್ನು ಪರಿಶೀಲಿಸಿ, ಡಿಸಿಪಿ ನೇತೃತ್ವದಲ್ಲಿ ಭದ್ರತಾ ಕ್ರಮಗಳ ಪರಿಶೀಲನೆ ಹಾಗೂ ಮಾಹಿತಿಯನ್ನು ಪಡೆದರು. ನಂತರ ಮಾತನಾಡಿದ ಅವರು, ವಿಧಾನಸೌಧಕ್ಕೆ ಬರಬೇಕು ಅಂದರೆ ಇನ್ನು ಮುಂದೆ ಕ್ಯೂ ಆರ್ ಕೋಡ್ ಇರುವ ಪಾಸ್ ‌ಗಳನ್ನು ನೀಡಲಾಗುತ್ತದೆ ಎಂದರು. ವಿಧಾನಸೌಧದಲ್ಲಿ ಯಾರಾದರೂ ಮೆಟಲ್ ಸಾಧನ ತೆಗೆದುಕೊಂಡು ಹೋಗುತ್ತಿದ್ದರೆ ಈ ಬ್ಯಾಗೇಜ್ ಸ್ಕ್ಯಾನರ್‌ನಲ್ಲಿ ಪತ್ತೆಯಾಗುತ್ತದೆ. ಕಳೆದ 3 ವರ್ಷಗಳಿಂದ ಈ ಬ್ಯಾಗೇಜ್ ಸ್ಕ್ಯಾನರ್ ಹಾಳಾಗಿತ್ತು. ಈಗ ಸಿಎಂ ಹಣ ಬಿಡುಗಡೆ ಮಾಡಿದ ಮೇಲೆ ಈ ಬ್ಯಾಗೇಜ್ ಸ್ಕ್ಯಾನರ್ ಖರೀದಿಸಿದ್ದೇವೆ ಎಂದು ಹೇಳಿದರು. ವಿಧಾನಸೌಧದಲ್ಲಿ ಭದ್ರತೆಯನ್ನು ಇನ್ನೂ ಜಾಸ್ತಿ ಮಾಡುತ್ತೇವೆ. ಈ ಬಾರಿಯ ಅಧಿವೇಶನದಲ್ಲಿ ನಾವು ಹೆಚ್ಚು ಭದ್ರತೆ ಕೈಗೊಳ್ಳುತ್ತೇವೆ. ಕಳೆದ ವಿಧಾನ ಸಭೆ ಅಧಿವೇಶನ ಸಮಯದಲ್ಲಿ ಬ್ಯಾಗೇಜ್ ಸ್ಕ್ಯಾನರ್‌ ಗಳು ಇರಲಿಲ್ಲ. ಈಗ 2-3 ಕೋಟಿ…

Read More

ಮೈಸೂರು: ಕಾರು-ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಮೈಸೂರಿನ ಕೆಆರ್‌ಎಸ್ ರಸ್ತೆಯಲ್ಲಿ ನಡೆದಿದೆ. ಹೆಬ್ಬಾಳು ಬಡಾವಣೆ ನಿವಾಸಿ ರಾಧಾ(34) ಮೃತ ದುರ್ದೈವಿಯಾಗಿದ್ದಾರೆ. ಸ್ಥಳಕ್ಕೆ ವಿವಿ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಬೆಂಗಳೂರು: ಬೆಂಗಳೂರು ಹೊರವಲಯದ ಚಂದಾಪುರದಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿನಿಯೊಬ್ಬಳ ಮೃತದೇಹ ವಸತಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ. ಚಂದಾಪುರ ಸಮೀಪದ ಹೀಲಲಿಗೆ ಬಳಿಯಿರುವ ಬಿಸಿಇಟಿ ಎಂಜಿನಿಯರಿಂಗ್‌ ಕಾಲೇಜಿನ ವಸತಿ ನಿಲಯದಲ್ಲಿ ವಿದ್ಯಾರ್ಥಿನಿ ಹರ್ಷಿತಾ(18) ಮೃತದೇಹವಾಗಿ ಪತ್ತೆಯಾಗಿದ್ದಾಳೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಕರಡಿಹಳ್ಳಿ ಗ್ರಾಮದ ವಿದ್ಯಾರ್ಥಿನಿ ಹರ್ಷಿತ ಹೀಲಲಿಗೆಯಲ್ಲಿನ ಕಾಲೇಜ್ ಅಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿಯಲ್ಲಿ ಎಂಜಿನಿಯರಿಂಗ್​ ವಿದ್ಯಾಭ್ಯಾಸ ಮಾಡುತ್ತಿದ್ದಳು. ವರದಿಗಳ ಪ್ರಕಾರ ಇಂದು ಪಕ್ಕದ ಕೋಣೆಯ ಪ್ರಗತಿ ಎಂಬ ವಿದ್ಯಾರ್ಥಿನಿ ಹರ್ಷಿತಾ ಇದ್ದ ಕೋಣೆಯನ್ನು ಸಾಕಷ್ಟು ಬಾರಿ ಬಡಿದಿದ್ದಳು. ಆ ಕಡೆಯಿಂದ ಉತ್ತರ ಬರದಿದ್ದಾಗ ಅನುಮಾನಗೊಂಡು ಸ್ಟೂಲ್‌ ಹತ್ತಿ ಕಿಟಕಿಯಿಂದ ಇಣುಕಿ ನೋಡಿದ್ದಾಳೆ. ಈ ವೇಳೆ ಹರ್ಷಿತಾ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾಳೆ. ಕಾಲೇಜು ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಡಳಿತ ಮಂಡಳಿ ಸಾಕಷ್ಟು ದಿನಗಳಿಂದ ಹರ್ಷಿತಾಳಿಗೆ ಕಿರುಕುಳ ನೀಡುತ್ತಿತ್ತು. ಇದರಿಂದ ಬೇಸತ್ತು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹರ್ಷಿತಾ ಸಹಪಾಠಿಗಳು ಆರೋಪಿಸಿದ್ದಾರೆ.…

Read More

ರಾಮನಗರ: ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನೀರಿನ ಹೊಂಡದಲ್ಲಿ ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಮೃತ ಮಕ್ಕಳನ್ನು ಶಾಬಾಜ್ (14) ಸುಲ್ತಾನ್ (13) ರಿಹಾನ್ ಖಾನ್ (16) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ರಾಮನಗರ ಟೌನ್ ನ ಸುಲ್ತಾನ್ ನಗರದವರಾಗಿದ್ದಾರೆ. ಎಂಟು ಬಾಲಕರು ನಮಾಜ್ ಮುಗಿಸಿ ಈಜಲು ಹೋಗಿದ್ದು, ಈ ಪೈಕಿ ಮೂವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳು ಮೃತದೇಹಗಳನ್ನು ಹೊರತೆಗೆದಿದ್ದಾರೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಸಸ್ಯ ಸಂಪತ್ತಿನಿಂದ ಕಂಗೊಳಿಸುವ ಕೊಡಗಿನ ಸಿರಿಯನ್ನೇ ಮರ ಕಳ್ಳರು ಹಗಲು ದರೋಡೆ ಮಾಡಿದ್ದಾರೆ. ತಲಕಾವೇರಿ ಅಭಯಾರಣ್ಯದ ವಿರಾಜಪೇಟೆ ವಲಯದ ಮುಂಡ್ರೋಡು ಮೀಸಲು ಅರಣ್ಯದಲ್ಲಿ ಅಕ್ರಮವಾಗಿ ಸಾವಿರಾರು ಮರಗಳನ್ನು ಕಡಿಯಲಾಗಿದ್ದು ಪರಿಸರ ಪ್ರೇಮಿಗಳಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಮರಗಳ ಮಾರಣ ಹೋಮ ನಡೆಯುತ್ತಿದ್ದರೂ ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಅನ್ನುವ ಗಂಭೀರ ಆರೋಪಗಳು ಕೂಡ ಕೇಳಿ ಬಂದಿದೆ. ಈ ಬಗ್ಗೆ ಸ್ವತಃ ಇದೀಗ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರೇ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ತನಿಖೆಗೆ ಸೂಚನೆ ನೀಡಿದ್ದಾರೆ. ಎಪಿಸಿಸಿಎಫ್ ದರ್ಜೆಯ ಅಧಿಕಾರಿಯನ್ನು ಸ್ಥಳಕ್ಕೆ ಕಳುಹಿಸಿ ವರದಿ ನೀಡುವಂತೆ ಸೂಚಿಸಿದ್ದಾರೆ. ಮರ ಕಡಿದ ಆರೋಪಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಗೆ ಆದೇಶ ನೀಡಿದ್ದಾರೆ. 239 ಮರಗಳನ್ನು ಕಡಿದ ವಿಚಾರವಾಗಿ ಏಪ್ರಿಲ್ 30 ರಂದು ಮೂವರ ವಿರುದ್ಧ ಮುಂಡ್ರೋಟು ರೇಂಜ್ ಫಾರೆಸ್ಟ್ ಆಫೀಸರ್ ಪ್ರಕರಣ ದಾಖಲಿಸಿದ್ದರು. ಆದರೆ, ಕೊಡಗು ಏಕೀಕರಣ ರಂಗದ ಕಾರ್ಯಕರ್ತರು ಘಟನಾ ಸ್ಥಳಕ್ಕೆ ಭೇಟಿ…

Read More