Subscribe to Updates
Get the latest creative news from FooBar about art, design and business.
- ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
- ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್ ಸೆಟ್ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
- ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
- ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
- ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ: ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
- ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
- ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
Author: admin
ಭಾರತದ ಕೇಸರಿ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಏಕಾಏಕಿ ದರ ಏರಿಕೆಯಿಂದ ಎಲ್ಲರೂ ಅಚ್ಚರಿಗೊಂಡಿದ್ದಾರೆ. 1 ಕೆಜಿ ಭಾರತೀಯ ಕೇಸರಿ ಬೆಲೆ 4.95 ಲಕ್ಷ ರೂಪಾಯಿಗೆ ಏರಿದೆ. ಏತನ್ಮಧ್ಯೆ, ಭಾರತದ ಕೇಸರಿ ಬೆಲೆ ಏರಿಕೆಗೆ ನಿಖರವಾದ ಕಾರಣವೇನು? ಈ ಬಗ್ಗೆ ವಿವರವಾದ ಮಾಹಿತಿಯನ್ನು ಇಲ್ಲಿದೆ. ಇರಾನ್ ನಿಂದ ಕೇಸರಿ ಪೂರೈಕೆಯಲ್ಲಿ ಭಾರಿ ಕುಸಿತ: ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಿಂದಾಗಿ, ಇರಾನ್ ನಿಂದ ಕೇಸರಿ ಪೂರೈಕೆಯು ತೀವ್ರವಾಗಿ ಕಡಿಮೆಯಾಗಿದೆ. ಅಲ್ಲದೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೇಸರಿ ಉತ್ಪಾದನೆಯಾಗುತ್ತದೆ. ಆದರೆ, ಈ ವರ್ಷವೂ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದೆ. ಭಾರತೀಯ ಕೇಸರಿ ಬೆಳೆಗಾರರು ಮತ್ತು ವ್ಯಾಪಾರಿಗಳಿಗೆ ಒಂದು ಪರಿಹಾರ: ಸಿಕ್ಕಿರುವ ಮಾಹಿತಿಯಂತೆ, ಭಾರತದ ಕೆಲವು ಪ್ರಸಿದ್ಧ ಮಸಾಲೆ ಕಂಪನಿಗಳ ಮಸಾಲೆಗಳ ಮಾರಾಟವನ್ನು ಸಿಂಗಾಪುರ ಮತ್ತು ಹಾಂಕಾಂಗ್ ನಲ್ಲಿ ನಿಷೇಧಿಸಲಾಗಿದೆ. ಆದರೆ ಕೇಸರಿ ಭಾರತೀಯ ಮಸಾಲೆಯಾಗಿದ್ದು ಅದು ಪ್ರಪಂಚದಾದ್ಯಂತ ಪ್ರಸಿದ್ಧವಾಗಿದೆ. ಪ್ರಸ್ತುತ, ಕೇಸರಿ ಬೆಲೆ 4.95 ಲಕ್ಷ ರೂ ಆಗಿದೆ. ಪಶ್ಚಿಮ ಏಷ್ಯಾದಲ್ಲಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲಪಾಳ್ಯ ಹಾಗೂ ದೊಡ್ಡಪ್ಪನಹಳ್ಳಿಯಲ್ಲಿರುವ ಕಸದ ತೊಟ್ಟಿಯನ್ನು ಕಳೆದ ಮೂರು ತಿಂಗಳಿಂದ ಸ್ವಚ್ಛಗೊಳ್ಳಿಸಿಲ್ಲ ಎಂದು ಅಲ್ಲಿನ ನಿವಾಸಿಗಳು ಆರೋಪಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲಪಾಳ್ಯ ಗ್ರಾಮ ಪಂಚಾಯಿತಿಯಲ್ಲಿ ಕಸವನ್ನು ತೆಗೆದುಕೊಂಡು ಹೋಗದೇ ಸ್ವಚ್ಛತೆಯ ಹೆಸರಿನಲ್ಲಿ ಲಕ್ಷಾಂತರ ರೂಪಾಯಿ ಹಣ ಲೂಟಿ ಮಾಡಲಾಗುತ್ತಿದೆ. ಇಡೀ ಗ್ರಾ.ಪಂ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಜನ ವಾಸಿಸುವ ಪ್ರದೇಶದಲ್ಲಿ ನೈರ್ಮಲ್ಯತೆ ಕಾಪಾಡುತ್ತಿಲ್ಲ ಎಂದು ದೂರಿದ್ದಾರೆ. ದೊಡ್ಡಪ್ಪನಹಳ್ಳಿ ಬಳಿಯೇ ವೃದ್ಧಾಶ್ರಮ ಇದ್ದು, ಆಸರೆ ಇಲ್ಲದ ಹಿರಿ ಜೀವಿಗಳು ಬದುಕುತ್ತಿರುವ ಸ್ಥಳದಲ್ಲಿ ಗಬ್ಬು ವಾಸನೆ ನಾರುತ್ತಿದ್ದು, ಸೊಳ್ಳೆ, ಕ್ರಿಮಿ ಕೀಟಗಳಿಂದ ಅವರು ದಿನ ನಿತ್ಯ ಹೇಳಿಕೊಳ್ಳುಲು ಆಗದಂತಹ ಬಾಧೆಯನ್ನು ಅನುಭವಿಸುತ್ತಿದ್ದಾರೆ ಎನ್ನುತ್ತಾರೆ ಸ್ಥಳೀಯರು. ಇಲ್ಲಿರುವ ಉರ್ದು ಶಾಲೆಯ ಸಮೀಪ ತೊಟ್ಟಿಯಲ್ಲಿ ಕಸ ತುಂಬಿದ್ದು, ಹತ್ತಿರದಲ್ಲಿಯೇ ಅಂಗನವಾಡಿ ಇದೆ. ಅದಕ್ಕೆ ಹೊಂದಿಕೊಂಡಂತೆ ಶುದ್ಧ ಕುಡಿಯುವ ನೀರಿನ ಘಟಕವಿದ್ದು, ನೀರು ತರಲು ಹೋದವರು ಮೂಗು ಮಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಶಾಲೆಗೆ ದಾಖಲು ಆಗಲು…
ನಮ್ಮ ಆರೋಗ್ಯದ ಗುಟ್ಟು ತಿಳಿಯಲು ನಾವು ಯಾವಾಗಲೂ ಆಸ್ಪತ್ರೆಗೆ ಹೋಗಬೇಕು ಎಂದೇನಿಲ್ಲ. ನಮ್ಮ ದೇಹದಲ್ಲಿಯೇ ಆಗುವಂತಹ ಕೆಲವೊಂದು ಬದಲಾವಣೆಗಳು ಮತ್ತು ಸೂಚನೆಗಳು ನಮಗೆ ನಮ್ಮ ಸದ್ಯದ ಆರೋಗ್ಯ ಸ್ಥಿತಿಯ ಬಗೆಗಿನ ಮಾಹಿತಿಯನ್ನು ಕೊಡುತ್ತವೆ. ಇದಕ್ಕೆ ಉದಾಹರಣೆ ಎನ್ನುವಂತೆ, ಇದ್ದಕ್ಕಿದ್ದಂತೆ ಕಣ್ಣುಗಳು ಹಳದಿ ಬಣ್ಣಕ್ಕೆ ತಿರುಗಿದರೆ, ಅದನ್ನು ಜಾಂಡೀಸ್ ಎಂದು ಹೇಳಬಹುದು. ಮಂಡಿಗಳನ್ನು ಮಡಿಸಲು ಆಗದಿದ್ದರೆ, ಅಥವಾ ಕುಳಿತು ಮೇಲಕ್ಕೆ ಎದ್ದೇಳಲು ಆಗದಿದ್ದರೆ, ಅದನ್ನು ಕೀಲು ನೋವು ಎನ್ನಬಹುದು. ಹೀಗೆ ಹಲವಾರು ವಿಚಾರಗಳ ಮೂಲಕ ನಮ್ಮ ದೇಹದ ಆರೋಗ್ಯದ ಸ್ಥಿತಿಗತಿಯನ್ನು ನಾವು ತಿಳಿದುಕೊಳ್ಳಬಹುದು. ಹಾಗಾದರೆ ಮನುಷ್ಯ ಮೂತ್ರ ವಿಸರ್ಜನೆ ಮಾಡುವಾಗ ಮೂತ್ರದ ಬಣ್ಣವನ್ನು ಗಮನಿಸಿ ಅದರಿಂದ ಆರೋಗ್ಯದ ಗುಟ್ಟು ತಿಳಿಯಬಹುದೇ ಎಂದು ನೀವು ಪ್ರಶ್ನೆ ಕೇಳಿದರೆ, ಹೌದು ಎನ್ನುತ್ತದೆ ವೈದ್ಯಲೋಕ. ಒಂದೊಂದು ಮೂತ್ರದ ಬಣ್ಣಕ್ಕೆ ಒಂದೊಂದು ರೀತಿಯ ಆರೋಗ್ಯ ಸಮಸ್ಯೆ ಇರಬಹುದು ಎನ್ನುವುದು ವೈದ್ಯರ ಮಾತು. ಬನ್ನಿ ಹಾಗಾದರೆ ಬೇರೆ ಮೂತ್ರದ ಬಣ್ಣಕ್ಕೆ ಅನುಗುಣವಾಗಿ ಯಾವ ಕಾಯಿಲೆಗಳು ಇರುತ್ತವೆ ಎಂಬುದನ್ನು ತಿಳಿಯೋಣ. ತಿಳಿ…
ನಮ್ಮ ಆರೋಗ್ಯದ ಗುಟ್ಟು ತಿಳಿಯಲು ನಾವು ಯಾವಾಗಲೂ ಆಸ್ಪತ್ರೆಗೆ ಹೋಗಬೇಕು ಎಂದೇನಿಲ್ಲ. ನಮ್ಮ ದೇಹದಲ್ಲಿಯೇ ಆಗುವಂತಹ ಕೆಲವೊಂದು ಬದಲಾವಣೆಗಳು ಮತ್ತು ಸೂಚನೆಗಳು ನಮಗೆ ನಮ್ಮ ಸದ್ಯದ ಆರೋಗ್ಯ ಸ್ಥಿತಿಯ ಬಗೆಗಿನ ಮಾಹಿತಿಯನ್ನು ಕೊಡುತ್ತವೆ. ಇದಕ್ಕೆ ಉದಾಹರಣೆ ಎನ್ನುವಂತೆ, ಇದ್ದಕ್ಕಿದ್ದಂತೆ ಕಣ್ಣುಗಳು ಹಳದಿ ಬಣ್ಣಕ್ಕೆ ತಿರುಗಿದರೆ, ಅದನ್ನು ಜಾಂಡೀಸ್ ಎಂದು ಹೇಳಬಹುದು. ಮಂಡಿಗಳನ್ನು ಮಡಿಸಲು ಆಗದಿದ್ದರೆ, ಅಥವಾ ಕುಳಿತು ಮೇಲಕ್ಕೆ ಎದ್ದೇಳಲು ಆಗದಿದ್ದರೆ, ಅದನ್ನು ಕೀಲು ನೋವು ಎನ್ನಬಹುದು. ಹೀಗೆ ಹಲವಾರು ವಿಚಾರಗಳ ಮೂಲಕ ನಮ್ಮ ದೇಹದ ಆರೋಗ್ಯದ ಸ್ಥಿತಿಗತಿಯನ್ನು ನಾವು ತಿಳಿದುಕೊಳ್ಳಬಹುದು. ಹಾಗಾದರೆ ಮನುಷ್ಯ ಮೂತ್ರ ವಿಸರ್ಜನೆ ಮಾಡುವಾಗ ಮೂತ್ರದ ಬಣ್ಣವನ್ನು ಗಮನಿಸಿ ಅದರಿಂದ ಆರೋಗ್ಯದ ಗುಟ್ಟು ತಿಳಿಯಬಹುದೇ ಎಂದು ನೀವು ಪ್ರಶ್ನೆ ಕೇಳಿದರೆ, ಹೌದು ಎನ್ನುತ್ತದೆ ವೈದ್ಯಲೋಕ. ಒಂದೊಂದು ಮೂತ್ರದ ಬಣ್ಣಕ್ಕೆ ಒಂದೊಂದು ರೀತಿಯ ಆರೋಗ್ಯ ಸಮಸ್ಯೆ ಇರಬಹುದು ಎನ್ನುವುದು ವೈದ್ಯರ ಮಾತು. ಬನ್ನಿ ಹಾಗಾದರೆ ಬೇರೆ ಮೂತ್ರದ ಬಣ್ಣಕ್ಕೆ ಅನುಗುಣವಾಗಿ ಯಾವ ಕಾಯಿಲೆಗಳು ಇರುತ್ತವೆ ಎಂಬುದನ್ನು ತಿಳಿಯೋಣ. ತಿಳಿ…
ಬೆಂಗಳೂರು ನಗರದಲ್ಲಿ ನೀರನ್ನು ಪೋಲು ಮಾಡುವುದನ್ನು ತಡೆಗಟ್ಟುವ ಉದ್ದೇಶದಿಂದ ಈಜುಕೊಳದ ಬಳಕೆಗೆ ಹೇರಲಾಗಿದ್ದ ನಿಷೇಧವನ್ನು ಬೆಂಗಳೂರು ಜಲಮಂಡಳಿ ಸಡಿಲಿಸಿದೆ. ಬೆಂಗಳೂರು ನಗರದ ಅಪಾರ್ಟ್ಮೆಂಟ್ ಹಾಗೂ ಕ್ರೀಡಾ ಸಂಸ್ಥೆಯವರು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್, ಕೆಲವು ಷರತ್ತುಗಳನ್ನು ವಿಧಿಸುವ ಮೂಲಕ ಈಜುಕೊಳದ ಬಳಕೆಯ ನಿಷೇಧವನ್ನು ಸಡಿಲಿಸಿದ್ದಾರೆ. ಕಡ್ಡಾಯವಾಗಿ ಈಜುಕೊಳಕ್ಕೆ ಕಾವೇರಿ ನೀರನ್ನು ಬಳಸುವಂತಿಲ್ಲ. ಈಜುಕೊಳಕ್ಕೆ ಮಳೆ ನೀರು ಅಥವಾ ಕೊಳವೆ ಬಾವಿ ಮೂಲಕ ನೀರನ್ನು ಮಾತ್ರ ಬಳಸತಕ್ಕದ್ದು. ಈಜುಕೊಳಕ್ಕೆ ನೀರನ್ನು ಶುದ್ದೀಕರಿಸುವ ಯಂತ್ರವನ್ನು ಅಳವಡಿಸಿಕೊಂಡು ನೀರನ್ನು ಮರುಬಳಕೆ ಮಾಡಬೇಕು ಎಂದಿದ್ದಾರೆ. ತಮ್ಮ ಸಮುಚ್ಚಯದಲ್ಲಿ ಕಡ್ಡಾಯವಾಗಿ ಕೊಳವೆ ಬಾವಿ ಅಕ್ಕಪಕ್ಕದಲ್ಲಿ ಮಳೆ ನೀರು ಇಂಗುಗುಂಡಿಗಳನ್ನು ನಿರ್ಮಿಸಿರಬೇಕು. ಎಲ್ಲ ಟ್ಯಾಪ್ ಗಳಿಗೆ ಕಡ್ಡಾಯವಾಗಿ ಏರಿಯೇಟರ್ ಅಳವಡಿಸಿಕೊಂಡಿರಬೇಕು ಹಾಗೂ ಕುಡಿಯುವುದನ್ನು ಹೊರತುಪಡಿಸಿ ಅನ್ಯ ಬಳಕೆಗಳಿಗೆ(ಗಾರ್ಡೆನಿಂಗ್ ಮತ್ತು ಫ್ಲಶಿಂಗ್)ಗೆ ಕಡ್ಡಾಯವಾಗಿ ಸಂಸ್ಕರಿಸಿದ ನೀರನ್ನು ಬಳಸಬೇಕು ಎನ್ನುವ ಷರತ್ತುಗಳನ್ನು ವಿಧಿಸಲಾಗಿದೆ. ಈಜುಕೊಳಕ್ಕೆ ಕಾವೇರಿ ನೀರು ಬಳಕೆ ಮಾಡುವುದು ಕಂಡುಬಂದಲ್ಲಿ ಜಲಮಂಡಳಿಯ ಕಾಯ್ದೆ…
ನ್ಯಾಷನಲ್ ಇನಿಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ಐಟಿಕೆ) ಸುರತ್ಕಲ್ ನಲ್ಲಿರುವ ತನ್ನ ಎಲ್ಲಾ ಬೋಧಕ ಮತ್ತು ಸಿಬ್ಬಂದಿ ವಸತಿಗೃಹಗಳಿಗೆ ಕೊಳವೆ ಮೂಲಕ ಅನಿಲ ಪೂರೈಸಲು ಗೇಲ್ (ಇಂಡಿಯಾ) ಲಿಮಿಟೆಡ್ ನ ಅಂಗಸಂಸ್ಥೆಯಾದ ಗೇಲ್ ಗ್ಯಾಸ್ ಲಿಮಿಟೆಡ್ (ಜಿಜಿಎಲ್) ನೊಂದಿಗೆ, ಬೃಹತ್ ದೇಶೀಯ ಪೈಪ್ಡ್ ನ್ಯಾಚುರಲ್ ಗ್ಯಾಸ್ ಒಪ್ಪಂದಕ್ಕೆ ಸಹಿ ಹಾಕಿದೆ. ಎನ್ಐಟಿಕೆ ಕ್ಯಾಂಪಸ್ ನಲ್ಲಿ ಗೇಲ್ ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಜಿಎಂಪಿಎಲ್) ಸಿಇಒ ಸುಧೀರ್ ಕುಮಾರ್ ದೀಕ್ಷಿತ್ ಅವರ ಉಪಸ್ಥಿತಿಯಲ್ಲಿ ಸುರತ್ಕಲ್ ಎನ್ಐಟಿಕೆ ನಿರ್ದೇಶಕ ಪ್ರೊ.ಬಿ.ರವಿ ಮತ್ತು ಮಂಗಳೂರಿನ ಗೇಲ್ ಗ್ಯಾಸ್ನ ಜಿಎಂ (ಸಿಜಿಡಿ) ಪ್ರಾಜೆಕ್ಟ್ ಮತ್ತು ಮುಖ್ಯಸ್ಥ ಸಾಯಿ ಶಂಕರ್ ಬಿ ಅವರು ಒಪ್ಪಂದಕ್ಕೆ ಸಹಿ ಹಾಕಿದರು. ಸಮಾರಂಭದಲ್ಲಿ ಯೋಜನೆ ಮತ್ತು ಅಭಿವೃದ್ಧಿ ಡೀನ್ ಪ್ರೊ.ಕೆ.ವಿ.ಗಂಗಾಧರನ್, ರಿಸರ್ಚ್ ಕನ್ಸಲ್ಟೆನ್ಸಿ ಡೀನ್ ಪ್ರೊ. ಉದಯ ಭಟ್ ಕೆ, ಅಕಾಡೆಮಿಕ್ ಡೀನ್ ಪ್ರೊ.ದ್ವಾರಕೇಶ್, ಪ್ರೊ.ಶ್ರೀಕಾಂತ ಎಸ್ ರಾವ್, ಜಂಟಿ ರಿಜಿಸ್ಟ್ರಾರ್ ರಾಮ್ ಮೋಹನ್ ವೈ ಮತ್ತು ಗೇಲ್ ಗ್ಯಾಸ್ನ ಮಾರ್ಕೆಟಿಂಗ್ ನ ಹಿರಿಯ…
ಮುಂಬೈ: ಇಲ್ಲಿನ ಘಾಟ್ಖೋಪರ್ನಲ್ಲಿ ಹೋರ್ಡಿಂಗ್ ದುರಂತ ಸಂಭವಿಸಿದ ಸ್ಥಳದಲ್ಲಿ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ಗುರುವಾರ ಬೆಳಗ್ಗೆ ಅಂತ್ಯಗೊಂಡಿದೆ ಎಂದು ಕೇಂದ್ರ ವಿಪತ್ತು ನಿರ್ವಹಣಾ ದಳದ ಅಧಿಕಾರಿ ತಿಳಿಸಿದ್ದಾರೆ. ಭಾರೀ ಮಳೆ ಹಾಗೂ ಧೂಳಿನ ಬಿರುಗಾಳಿಗೆ ಘಾಟ್ಖೋಪರ್ನ ಛೆಡ್ಡಾ ನಗರ ಪ್ರದೇಶದಲ್ಲಿರುವ 120 X 120 ಅಡಿ ಎತ್ತರದ ಬೃಹತ್ ಹೋರ್ಡಿಂಗ್ ಪೆಟ್ರೋಲ್ ಬಂಕ್ ಮೇಲೆ ಸೋಮವಾರ ಸಂಜೆ ಕುಸಿದ ಬಳಿಕ 66 ಗಂಟೆಗಳ ಕಾಲ ಶೋಧ ಹಾಗೂ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ ಅವರು ತಿಳಿಸಿದ್ದಾರೆ. ಕಾರ್ಯಾಚರಣೆಯನ್ನು ಗುರುವಾರ ಬೆಳಗ್ಗೆ 10.30ಕ್ಕೆ ಅಂತ್ಯಗೊಳಿಸಲಾಗಿದೆ. ಸ್ಥಳ ಪರಿಶೀಲನೆ ನಡೆಸಿದ ಬಳಿಕ ಬಿಎಂಸಿ ಆಯುಕ್ತ ಭೂಷಣ್ ಗಗ್ರಾನಿ ಅವರು ಈ ಕುರಿತು ಘೋಷಣೆ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ. ಬುಧವಾರ ತಡ ರಾತ್ರಿ ಹೋರ್ಡಿಂಗ್ನ ಅಡಿಯಲ್ಲಿ ಸಿಲುಕಿದ್ದ ಕಾರಿನಲ್ಲಿದ್ದ ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ)ನ ನಿವೃತ್ತ ಜನರಲ್ ಮ್ಯಾನೇಜರ್ ಹಾಗೂ ಅವರ ಪತ್ನಿಯ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಇದರೊಂದಿಗೆ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ.…
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಬಹು ದಿನದ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರರಿಗೆ ಬಸ್ ಪಾಸ್ ನೀಡುವ ಸಂಬಂಧ, ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ 38ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತು ಕೊಟ್ಟಂತೆ, ಈ ವರ್ಷದ ಬಜೆಟ್ ನಲ್ಲಿ ಅದನ್ನು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯರು ರಾಜ್ಯದ ಅಡಳಿತದ ಶಕ್ತಿದೇಗುಲವಾದ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕಚೇರಿಗೆ ತೆರಳಿ ಅಭಿನಂದನೆ ಪತ್ರ ಸಲ್ಲಿಸಿದರು. ಸಂಘದ ನಿಯೋಗದೊಂದಿಗೆ ಮುಖ್ಯಮಂತ್ರಿಗಳು ರಾಜ್ಯದ ಸಾವಿರಾರು ಗ್ರಾಮೀಣ ಪತ್ರಕರ್ತರಿಗೆ ನಿಮ್ಮ ಘೋಷಣೆಯಿಂದ ತುಂಬ ಅನುಕೂಲ ಆಗಲಿದ್ದು, ನಿಮ್ಮ ಈ ಉದಾರತೆಗೆ ಪತ್ರಕರ್ತರ ಸಂಘ ಸದಾ ಚಿರ ಋಣಿಯಾಗಿರುತ್ತದೆ ಎಂದು ಶಿವಾನಂದ ತಗಡೂರು ಹೇಳಿದರು. ಇದಕ್ಕೆ ಮುಖ್ಯಮಂತ್ರಿಗಳು ನಗುತ್ತಲ್ಲೆ ಕೈಜೋಡಿಸಿದರು. ನಿಯೋಗದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ…
ಮೋಜು-ಮಸ್ತಿ ಮಾಡಲೆಂದು ಅತಿಯಾದ ವೇಗದಲ್ಲಿ ವಾಹನ ಚಲಾಯಿಸಿ ಪ್ರಾಣ ಕಳೆದುಕೊಂಡ ಘಟನೆ ಗುಜರಾತ್ ನಲ್ಲಿ ನಡೆದಿದ್ದು, ಐವರು ಯುವಕರು ಇನ್ ಸ್ಟಾಗ್ರಾಂ ಲೈವ್ ಹೋಗುತ್ತಾ ಕಾರನ್ನು ಪ್ರತಿ ಗಂಟೆಗೆ 160 ಕಿಲೋಮೀಟರ್ ವೇಗದಲ್ಲಿ ಚಲಾಯಿಸಿ ಕೊನೆಗೆ ಭೀಕರ ಅಪಘಾತಕ್ಕೀಡಾಗಿದ್ದಾರೆ. ಘಟನೆಯಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಅಸುನೀಗಿದರೆ, ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುಜರಾತ್ ನ ಕಛ್ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಹ್ಮದಾಬಾದ್ನಿಂದ ಮುಂಬೈಗೆ SUV ಕಾರಿನಲ್ಲಿ ರೋಡ್ ಟ್ರಿಪ್ ಹೊರಟಿದ್ದ ಐವರು ಯುವಕರು ಕಾರು ಚಲಾಯಿಸುತ್ತಲೇ ಇನ್ಸ್ಟಾಗ್ರಾಂ ಲೈವ್ ಹೋಗಿದ್ದಾರೆ. ಒಂದು ಅತೀ ವೇಗದ ಕಾರು ಚಾಲನೆ ಅದರ ಜೊತೆ ಇನ್ಸ್ಟಾಗ್ರಾಂನಲ್ಲಿ ಲೈವ್ ಹೀಗೆ ಎದುರಿಗೆ ಬರುತ್ತಿದ್ದ ಒಂದೊಂದೆ ವಾಹಗಳನ್ನು ಓವರ್ ಟೇಕ್ ಮಾಡುತ್ತಾ ಹುಚ್ಚಾಟ ಮೆರೆದಿದ್ದಾರೆ. ಫುಲ್ ಎಂಜಾಯ್ ಮೂಡ್ ನಲ್ಲಿದ್ದ ಯುವಕರ ಹುಚ್ಚಾಟದಿಂದ ಎದುರಿಗೆ ಬರುತ್ತಿದ್ದ ವಾಹನ ತಪ್ಪಿಸಲು ಹೋಗಿ ಮರವೊಂದಕ್ಕೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಯುವಕರಿಬ್ಬರು ಸ್ಥಳದಲ್ಲೇ ಬಲಿಯಾಗಿದ್ದಾರೆ. ಉಳಿದ ಮೂವರು ಗಂಭೀರವಾಗಿ…
ದಾವಣಗೆರೆ: ಗ್ರಾಮದ ಕೆರೆಗೆ ಕೆಲವು ದುಷ್ಕರ್ಮಿಗಳು ವಿಷ ಹಾಕಿ ಸಾವಿರಾರು ಮೀನುಗಳು ಸತ್ತಿರುವ ಘಟನೆ ದಾವಣಗೆರೆ ತಾಲೂಕಿನ ಎಲೆಬೇತೂರಿನಲ್ಲಿ ನಡೆದಿದೆ. ಗ್ರಾಮದ ಹೊರ ವಲಯದ ಎಲೆಬೇತೂರು ಗ್ರಾಮಕ್ಕೆ ಹೊಂದಿಕೊಂಡಿರುವ ಭದ್ರಾ ಕಾಲುವೆ ಆಶ್ರಿತವಾಗಿರುವ ಸುಮಾರು 126 ಎಕರೆ ವಿಸ್ತೀರ್ಣದ ಬೇತೂರು ಕೆರೆಯಲ್ಲಿ, ಈ ಬರದಲ್ಲಿ ಸುಮಾರು 60 ಎಕರೆಯಷ್ಟು ನೀರು ಸಂಗ್ರಹವಾಗಿತ್ತು ಎನ್ನಲಾಗಿದೆ. ಕೆರೆ ಅಂಗಳದಲ್ಲಿ ಸುಮಾರು 20 ಅಡಿಗಳಷ್ಟು ಆಳದ ಗುಂಡಿಗಳಲ್ಲಿ 8-10 ಕೆಜಿ ತೂಕದ ಭಾರೀ ಮೀನುಗಳ ಮಾರಣ ಹೋಮ ನಡೆಸಲಾಗಿದೆ ಎಂದು ವರದಿ ತಿಳಿಸಿದೆ. ಎಲೆಬೇತೂರು ಗ್ರಾಮದ ಮಂಜಪ್ಪ ಬಾರಿಕೇರ, ಸಿದ್ದಪ್ಪ ಬಾರಿಕರ, ಹನುಮಂತಪ್ಪ ಜಕ್ಕಾವರು ಸೇರಿಕೊಂಡು ಮೀನುಗಾರಿಕೆ ಇಲಾಖೆಯಿಂದ ಟೆಂಡರ್ ಪಡೆದು, ಸುಮಾರು 8 ಲಕ್ಷ ಮೀನು ಮರಿಗಳನ್ನು ಬಿಟ್ಟಿದ್ದರು. 5 ವರ್ಷಗಳ ಹಿಂದೆ ಬಿಟ್ಟಿದ್ದ ಮೀನುಗಳ ಸಂತತಿ ಹೆಚ್ಚಾಗಿತ್ತು. ರವೂ, ಕಾಟ್ಲಾ, ಗೌರಿ, ಮಿರಗಲ್, ಬ್ಲಾಕ್ ಶಾರ್ಪ್ ಹೀಗೆ ನಾನಾ ಮೀನುಗಳ ಮರಿಗಳನ್ನು ಬಿಡಲಾಗಿತ್ತು. ಎಲೆಬೇತೂರು ಕೆರೆಯ 126 ಎಕರೆ ಪೈಕಿ ಅರ್ಧದಷ್ಟು ನೀರು…