Author: admin

ಬೆಂಗಳೂರಿನ ಹಲವೆಡೆ ಬೆಳ್ಳಂ ಬೆಳಗ್ಗೆ ಭಾರೀ ಮಳೆಯಾಗಿದೆ. ರಾಮಕೃಷ್ಣ ಆಶ್ರಮ, ಜೆಸಿ ರಸ್ತೆ, ನ್ಯಾಷನಲ್ ಕಾಲೇಜು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿದು ವಾಹನ ಸವಾರರ ಸಂಚಾರಕ್ಕೆ ತೊಡಕು ಉಂಟಾಯಿತು. ಬೆಳಗ್ಗೆ 5 ಗಂಟೆಯಿಂದಲೇ ಕೆಲವೆಡೆ ಸಾಧಾರಣ ಮಳೆಯಾದರೆ ಇನ್ನು ಕೆಲವೆಡೆ ಧಾರಾಕಾರವಾಗಿ ಮಳೆ ಸುರಿಯಿತು.  ನ್ಯಾಷನಲ್ ಕಾಲೇಜು ಹಾಗೂ ಲಾಲ್​ ಬಾಗ್ ಮಧ್ಯೆ ರಸ್ತೆಯಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆಯಾಯಿತು. ಶಾಂತಿನಗರ, ಕೋರಮಂಗಲ, ರಿಚ್ಮಂಡ್​ ಸರ್ಕಲ್​​, ಕಾರ್ಪೊರೇಷನ್​, ಕೆಆರ್ ಮಾರ್ಕೆಟ್​, ಮೆಜೆಸ್ಟಿಕ್, ಶಿವಾಜಿನಗರ, ವಿಧಾನಸೌಧ, ವಸಂತನಗರ, ಎಂಜಿ ರಸ್ತೆ, ಕಬ್ಬನ್​ಪಾರ್ಕ್, ಟ್ಯಾನಿರೋಡ್, ರಾಮಕೃಷ್ಣ ಆಶ್ರಮ, ಬಸವನಗುಡಿ, ಗಿರಿನಗರ, ಶ್ರೀನಿವಾಸ ನಗರ, ಕತ್ರಿಗುಪ್ಪೆ, ಜಯನಗರ, ಬನಶಂಕರಿ ಸೇರಿದಂತೆ ಹಲವೆಡೆ ಮಳೆ ಸುರಿಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೋಲಾರ: ಜಮೀನು ಪೋಡಿ ದುರಸ್ತಿ ಹೆಸರಿನಲ್ಲಿ ಸರ್ವೆ ಮಾಡಿ ನಮ್ಮಿಂದ ಬೇಸಾಯ ಭೂಮಿ ಕಿತ್ತುಕೊಳ್ಳುವ ಉನ್ನಾರ ನಡೆಯುತ್ತಿದೆ ಎಂದು ಜಮೀನು ಮಾಲೀಕ ರತ್ನಮ್ಮ ಮುನಿಯಪ್ಪ ಅವ್ರು ಆರೋಪಿಸಿದರು. ಕೋಲಾರ ತಾಲೂಕಿನ ವಕ್ಕಲೇರಿ ಹೋಬಳಿ ಸ್ವಾಮಿಗಳ ಗೊಲ್ಲಹಳ್ಳಿ ಗ್ರಾಮದ ಸರ್ವೇ ನಂ. 75/2 1ಎಕರೆ 8ಗುಂಟೆ ಜಮೀನು ವಿಚಾರವಾಗಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಜಮೀನು ಸೇರಿದಂತೆ ಸರ್ವೇ ನಂ 76, 77, 78 ಜಮೀನುಗಳನ್ನು ಕಬಳಿಸಲು ಕಿಡಿಗೇಡಿಗಳು ಮುಂದಾಗಿದ್ದು, ತಹಶೀಲ್ದಾರ್ ಸಹ ಅವರಿಗೆ ಸಾಥ್ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಚೆನ್ನೈ ಕಾರಿಡಾರ್ ಕಾಮಗಾರಿಗಾಗಿ ನಮ್ಮ ಜಮೀನನ್ನು ಕಳೆದುಕೊಂಡು ಅದರಲ್ಲಿ ಬಂದ ಹಣದಿಂದ ಕೋಲಾರ ನಗರದ ಕಠಾರಿ ಪಾಳ್ಯ ನಿವಾಸಿ ಸಿರಾಜ್ ಎಂಬುವರ ಬಳಿ ಲಕ್ಷ್ಮಿ ಸಾಗರ ಗ್ರಾಮದ ಸರ್ವೇ ನಂ 75/2 ಭೂಮಿಯನ್ನು ಕೊಂಡುಕೊಂಡಿದ್ದೇನೆ. ಕೃಷಿಗೆ ಯೋಗ್ಯವಲ್ಲದ ಭೂಮಿಯನ್ನು ಸರಿ ಮಾಡಿ ಕೃಷಿ ಭೂಮಿಯಾಗಿ ಪರಿವರ್ತಿಸಿದ್ದು, ಟ್ರಾನ್ಸ್ ಫಾರ್ಮರ್, ಕೃಷಿ ಹೊಂಡ ನಿರ್ಮಿಸಿ ಬೆಳೆಗಳನ್ನು ಬೆಳೆಯುತ್ತಿದ್ದೇನೆ. ಈಗ ಕೆಲವು ಕಿಡಿಗೇಡಿಗಳಿಂದ ಜಮೀನು…

Read More

ಇಂಡೊನೇಶ್ಯಾದ ಪಶ್ಚಿಮ ಸುಮಾತ್ರಾ ಪ್ರಾಂತದಲ್ಲಿ ಕಳೆದ ವಾರಾಂತ್ಯದಿಂದ ಸುರಿಯುತ್ತಿರುವ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿದೆ. ಘಟನೆಯಲ್ಲಿ ಇದುವರೆಗೂ 58 ಮಂದಿ ಮೃತಪಟ್ಟಿದ್ದು 35 ಜನರು ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಪ್ರವಾಹದ ಸಮಸ್ಯೆ ಎದುರಾಗಿದೆ. ಭೂಕುಸಿತದಿಂದ ಕೆಸರು ಮಣ್ಣು ಹಾಗೂ ಪಶ್ಚಿಮ ಸುಮಾತ್ರಾದ ಮೂರು ಜಿಲ್ಲೆಗಳಲ್ಲಿ ಮರಾಪಿ ಪರ್ವತದಿಂದ ಸಿಡಿದ ಜ್ವಾಲಾಮುಖಿಯ ಬಿಸಿಬೂದಿ ಪ್ರವಾಹದ ನೀರಿನಲ್ಲಿ ಸೇರಿಕೊಂಡು ಪ್ರಮುಖ ರಸ್ತೆಗಳಲ್ಲಿ ತ್ಯಾಜ್ಯಗಳು ರಾಶಿ ಬಿದ್ದಿವೆ. ತನಾಹ್ ದತಾರ್ ಜಿಲ್ಲೆಯಲ್ಲಿ ಹಲವು ಸೇತುವೆ, ಮನೆಗಳು ಕುಸಿದು ಬಿದ್ದಿದ್ದು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದೆ. ರಸ್ತೆಗಳಲ್ಲಿ ರಾಶಿಬಿದ್ದಿರುವ ಕಲ್ಲು ಮಣ್ಣು, ಮರಗಳು ಹಾಗೂ ತ್ಯಾಜ್ಯವನ್ನು ತೆರವುಗೊಳಿಸಿ ಸಂಚಾರ ವ್ಯವಸ್ಥೆ ಸುಗಮಗೊಳಿಸಲು ಪ್ರಮುಖ ಆದ್ಯತೆ ನೀಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಕನಿಷ್ಟ 249 ಮನೆಗಳು, 556 ಎಕರೆ ಕೃಷಿ ಪ್ರದೇಶ, 19 ಸೇತುವೆಗಳು ಹಾಗೂ…

Read More

ಪಾವಗಡ: ಪಾವಗಡ ತಾಲೂಕಿನ ರಂಗಸಮುದ್ರದಲ್ಲಿ ಸಿಡಿಲಿಗೆ ದನದ ಕೊಟ್ಟಿಗೆ ಹೊತ್ತಿ ಉರಿದ ಘಟನೆ ನಡೆದಿದೆ. ಒಂದು ಹಸು ಸಜೀವ ದಹನಗೊಂಡಿದ್ದು, ಮೂರು ಹಸುಗಳಿಗೆ ಗಾಯಗಳಾಗಿವೆ. ಈ ಹಸುಗಳು ರಂಗಸಮುದ್ರದ ಕರಿಯಪ್ಪ ಎನ್ನುವವರಿಗೆ ಸೇರಿದವಾಗಿವೆ. ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆ ವೇಳೆ ಸಿಡಿಲು ಅಬ್ಬರಿಸಿದ್ದು, ಕೊಟ್ಟಿಗೆಯಲ್ಲಿ ಮಲಗಿದ್ದ ಕರಿಯಪ್ಪ ಹಾಗೂ ಬಾಲಕ ಮಹಾಲಿಂಗನಿಗ ಗಾಯಗಳಾಗಿವೆ. ಗಾಯಾಳುಗಳಿಗೆ ತಾಲೂಕು‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅರಸಿಕೆರೆ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವರದಿ: ನಂದೀಶ್ ನಾಯ್ಕ ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೊರಟಗೆರೆ: ಕೊರಟಗೆರೆ ತಾಲೂಕಿನ ಅಗ್ರಹಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ಥರಟಿ ಗ್ರಾಮದ ಬಳಿ ಘಟನೆ ನಡೆದಿದೆ. ಘಟನಾ ಸ್ಥಳದಲ್ಲಿ ರೈತನ ಆಕ್ರಂದನ ಮುಗಿಲು ಮುಟ್ಟಿದೆ. ಥರಟಿ ಗ್ರಾಮದ ತಿಮ್ಮಪ್ಪ ಬಿನ್ ವೆಂಕಟರಮಣಪ್ಪ ಎನ್ನುವ ಬಡ ರೈತನಿಗೆ ಸೇರಿದ ಕುರಿಗಳಾಗಿವೆ. ಕುರಿಗಳು ಕಳೆದುಕೊಂಡ ರೈತನಿಗೆ ಬಸ್ ಮಾಲೀಕನಿಂದ ಪರಿಹಾರ ಕೊಡಿಸುವಂತೆ ಗ್ರಾಮಸ್ಥರ ಆಗ್ರಹಿಸಿದ್ದಾರೆ. ಈ ರಸ್ತೆಯಲ್ಲಿ ಅತೀ ವೇಗದ ಚಲನೆಯಿಂದ ಪದೇ ಪದೇ ಅಪಘಾತಗಳು ಸಂಭವಿಸುತ್ತವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾಸಗಿ ಬಸ್ ತಡೆದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಒಂದು ಗಂಟೆಗೂ ಅಧಿಕ ಟ್ರಾಫಿಕ್ ಜಾಮ್ ಆಗಿದ್ದು, ಕೊರಟಗೆರೆ ಪೊಲೀಸ್ ಅಧಿಕಾರಿಗಳು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8123382149ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR ಯೂಟ್ಯೂಬ್ ಚಾನೆಲ್ Subscribe ಮಾಡಿ:…

Read More

ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ‌ ಕಣಿವೆ ಬಿಳಚಿ ಬಳಿ ನಡೆದಿತ್ತು. ಮೃತದೇಹದ ಕಿವಿ ಓಲೆಯಿಂದ‌ಲೇ ಕೊಲೆವೊಂದನ್ನು  ಪೊಲೀಸರು ಪತ್ತೆ ಹಚ್ಚಿದ್ದಾರೆ. ಕಳೆದ ಮೇ 9ರಂದು ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕಿವಿಯೋಲೆ ಹಂತಕರ ಸುಳಿವು ನೀಡಿದೆ. ಕೈ-ಕಾಲು ಕಟ್ಟಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾದದ್ದು ಹಲವು ಅನುಮಾನಗಳಿಗೆ ಕಾರಣವಾಗಿತ್ತು. ಆದರೆ ಮೃತದೇಹ ಸಂಪೂರ್ಣ ಕೊಳೆತ ಹಿನ್ನೆಲೆಯಲ್ಲಿ ಗುರುತು ಹಿಡಿಯಲು ಕಷ್ಟವಾಗಿತ್ತು. ಮೃತದೇಹ ಸಿಕ್ಕ ಜಾಗದಲ್ಲಿ ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದರು. ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ನಾಪತ್ತೆ ಆಗಿದ್ದಾರೆ ಎಂಬ ಪ್ರಕರಣ ದಾಖಲಿಸಿಕೊಂಡಿದ್ದದ್ದು ತಿಳಿದಿತ್ತು. ಭದ್ರಾ ನಾಲೆಯಲ್ಲಿ ಸಿಕ್ಕ ಮೃತದೇಹಕ್ಕೂ ಇಲ್ಲಿ ಮಿಸ್ಸಿಂಗ್‌ ಆಗಿದ್ದ ಮಹಿಳೆಗೂ ತಾಳೆ ಮಾಡಿ ನೋಡಿದ್ದರು. ಆಗ ಮೃತದೇಹದಲ್ಲಿದ್ದ ಕಿವಿ ಓಲೆಯಿಂದ ಮೃತಳ ಗುರುತನ್ನು ಪತ್ತೆ ಮಾಡಲಾಯಿತು. ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರಕೆರೆ ಗ್ರಾಮದ ನಿವಾಸಿ ನೇತ್ರಾವತಿ (47) ಕೊಲೆಯಾಗಿದ್ದಾರೆ ಎನ್ನಲಾಗಿದೆ. ಕುಮಾರ ಎಚ್.ಜಿ. (38) ಹಾಗೂ…

Read More

2014 ರ ಡಿಸೆಂಬರ್ 31 ಕ್ಕಿಂತ ಮೊದಲು ನೆರೆಯ ಮುಸ್ಲಿಂ ಬಹುಸಂಖ್ಯಾತ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಭಾರತೀಯ ಪೌರತ್ವಕ್ಕೆ ಮಾರ್ಗವನ್ನು ಒದಗಿಸಲು ಸಿಎಎ 1955 ರ ಪೌರತ್ವ ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಯಾಗಿದ್ದು, ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫಘಾನಿಸ್ತಾನದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವುದು ಕಾಯ್ದೆಯ ಉದ್ದೇಶವಾಗಿದ್ದು, ಕೇಂದ್ರ ಸರ್ಕಾರವು 300 ಜನರಿಗೆ ಪೌರತ್ವ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಿದೆ. ಇದರ ಭಾಗವಾಗಿಯೇ 14 ಜನರಿಗೆ ಪೌರತ್ವ ಪ್ರಮಾಣಪತ್ರಗಳನ್ನು ಹಸ್ತಾಂತರಿಸಲಾಗಿದೆ. ಪಾಕಿಸ್ತಾನದಿಂದ ಬಂದು, ದೆಹಲಿಯ ಆದರ್ಶ ನಗರದಲ್ಲಿ ವಾಸಿಸುತ್ತಿರುವ ಹಲವರಿಗೆ ಭಾರತದ ಪೌರತ್ವ ನೀಡಲಾಗಿದ್ದು, ಅವರೀಗ ಸಂತಸ ವ್ಯಕ್ತಪಡಿಸಿದ್ದಾರೆ. ಮಹಿಳೆಯರು ಹಾಗೂ ಮಕ್ಕಳು ಸೇರಿ ಹಲವರು ಭಾರತದ ಪೌರತ್ವ ಹಿಡಿದಿರುವ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ. ಹೀಗೆ, ಪಾಕಿಸ್ತಾನದಲ್ಲಿ ಬಹುಸಂಖ್ಯಾತರಿಂದ ಸಂಕಷ್ಟ ಅನುಭವಿಸಿ, ಭಾರತಕ್ಕೆ ಬಂದು…

Read More

ರಿಯಲ್​ ಸ್ಟಾರ್ ಉಪೇಂದ್ರ ನಾಯಕನಾಗಿ ನಟಿಸುವ ಜೊತೆಗೆ ಆ್ಯಕ್ಷನ್​​ ಕಟ್​ ಹೇಳಿದ್ದ ‘A’ ಸಿನಿಮಾ  ಮೇ 17ರಂದು ರೀ ರಿಲೀಸ್ ಆಗುತ್ತಿದೆ. 1998ರ ಫೆಬ್ರವರಿ 12ರಂದು ಕರ್ನಾಟಕದಾದ್ಯಂತ ಚಿತ್ರಮಂದಿರ ಪ್ರವೇಶಿಸಿದ್ದ A ಸಿನಿಮಾ ಕಿಚ್ಚು ಹಚ್ಚಿತ್ತು. ಚಿತ್ರ ರೀ ರಿಲೀಸ್ ಆಗುತ್ತಿರುವ ಸಂದರ್ಭದಲ್ಲಿ ಚಿತ್ರದ ಬಗ್ಗೆ ಚಿತ್ರದ ನಟಿ, ಪಾತ್ರ, ಚಾಂದಿನಿ ಇದೀಗ ಅಭಿಪ್ರಾಯ ಹಂಚಿಕೊಂಡಿದ್ದು, ಉಪೇಂದ್ರ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನನ್ನ ಜೀವನವನ್ನೇ ಬದಲಿಸಿದ ಸಿನಿಮಾ ಅದು. ಅದರಿಂದ ನನಗೆ ಸಿಕ್ಕಿದ್ದು ಎರಡು ವಿಚಾರಗಳು. ಒಂದು ಕನ್ನಡ ಜನರ ಪ್ರೀತಿ, ಮತ್ತೊಂದು ಆ ಸಿನಿಮಾದ ಫೇಮಸ್ ಡೈಲಾಗ್ “GOD IS GREAT” ನಂತೆ ಸಿಕ್ಕ ಆಶೀರ್ವಾದ ಎಂದು ಅವರು ಹೇಳಿದ್ದಾರೆ. ನಾನಿಂದಿಗೂ A ಚಾಂದಿನಿ ರೀತಿಯೇ ಇದ್ದೇನೆ. ಕಾಲಘಟ್ಟವನ್ನೂ ಮೀರಿದ ಒಂದು ಅಪ್ರತಿಮ ಪ್ರೇಮ ಕಥೆ ‘A’  ಎಂದು ಅವರು ಹೇಳಿದ್ದಾರೆ. ಅಲ್ಲದೇ  ಉಪೇಂದ್ರ ನಿರ್ದೇಶನದ ಬಗ್ಗೆ ವರ್ಣಿಸಲು ಪದಗಳಿಲ್ಲ ಎಂದಿದ್ದಾರೆ. ಅಂದಿಗೂ ಇಂದಿಗೂ ಉಪೇಂದ್ರ ನನ್ನ ಮೆಚ್ಚಿನ…

Read More

ಮೈಸೂರು: ಪ್ರಜ್ವಲ್ ರೇವಣ್ಣ ಕೇಸ್ ಗೆ ಸಂಬಂಧ ಪಟ್ಟಂತೆ ಭ್ರಷ್ಟರ ಮಾಹಿತಿ ನೀಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳುವಿರಾ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಸವಾಲು ಹಾಕಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನನ್ನ ಬಳಿ ಇರುವ ಪೆನ್ ಡ್ರೈವ್ ನಲ್ಲಿ ಎಲ್ಲಾ ಮಾಹಿತಿಗಳು ಇವೆ. ಭ್ರಷ್ಟರ ಬಗ್ಗೆ ಮಾಹಿತಿ ನೀಡಲು ನಾನು ಸಿದ್ಧ, ನಾನು ಸಾಕ್ಷಿ ಸಮೇತ ನಿಮಗೆ ನೀಡಿದರೆ ನೀವು ಅವರ ವಿರುದ್ಧ ಕ್ರಮ ಕೈಗೊಳ್ಳುವಿರಾ. ನಿಮಗೆ ಧೈರ್ಯ ಇದೆಯಾ ಎಂದು ಬಹಿರಂಗವಾಗಿ ಪ್ರಶ್ನಿಸಿದ್ದಾರೆ. ರಾಜ್ಯದಲ್ಲಿ ದಾಖಲೆ ಸಮೇತವಾಗಿ ಹಲವಾರು ರಾಜಕಾರಣಿಗಳ ಕಳ್ಳಾಟವನ್ನು ನೀಡಿದರು ಯಾಕೆ ಅದರ ಬಗ್ಗೆ ವಿಚಾರಣೆ ನಡೆಸುತ್ತಿಲ್ಲ. ಕಾಂಗ್ರೆಸ್ ಸರ್ಕಾರ ಇರುವವರೆಗೆ ಈ ವ್ಯವಸ್ಥೆ ಸರಿ ಮಾಡಲು ಸಾದ್ಯವಿಲ್ಲ ಎಂದು ಕುಮಾರಸ್ವಾಮಿ ಹೇಳಿದರು. ಈಗಾಗಲೇ ವಕೀಲ ದೇವರಾಜೇ ಗೌಡರನ್ನು ಬಂಧಿಸಿದ್ದಾರೆ. ಅವರಿಂದ ಯಾವ ಉತ್ತರ ಬಯಸುತ್ತಿದ್ದೀರಾ. ಪೆನ್ ಡ್ರೈವ್ ಗೆ ಸಂಬಂಧ ಪಟ್ಟಂತೆ ವಿಚಾರಣೆ ಮಾಡುತ್ತಿದ್ದರೋ ಅಥವಾ ಅತ್ಯಾಚಾರ ವಿಚಾರವಾಗಿ…

Read More

ಬೆಂಗಳೂರು: ಮನೆಯ ಶೌಚಾಲಯದಲ್ಲಿ ಕತ್ತು ಕೊಯ್ದ ಸ್ಥಿತಿಯಲ್ಲಿ ಯುವತಿ ಸಾವನ್ನಪ್ಪಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪ್ರಭುಧ್ಯಾ(21) ಸಾವನ್ನಪ್ಪಿರುವ ಯುವತಿಯಾಗಿದ್ದಾಳೆ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾ ಮೃತದೇಹ ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬುಧವಾರ ಸಂಜೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸದ್ಯ ಅಸಹಜ ಸಾವು ಅಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More