Author: admin

ಹಾಸನ: ಜಿಲ್ಲೆಯ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದ ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಬಾಲಕರು ನೀರುಪಾಲಾಗಿದ್ದಾರೆ. ಮತ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಜೀವನ್ (13), ಸಾತ್ವಿಕ್ (11), ವಿಶ್ವ (12), ಪೃಥ್ವಿ (12) ಮೃತ ದುರ್ದೈವಿಗಳಾಗಿದ್ದಾರೆ. ಮೃತ ಮಕ್ಕಳು ಮುತ್ತಿಗೆ ಗ್ರಾಮದವರು ಎಂದು ತಿಳಿದು ಬಂದಿದೆ. ಶಾಲೆಗೆ ರಜೆ ಇರುವುದರಿಂದ ಐವರು ಗೆಳೆಯರು ಈಜಲು ಹೊಳೆಗೆ ಹೋಗಿದ್ದರು. ಹೊಳೆಗೆ ಇಳಿದಾಗ ನೀರಿನಿಂದ ಹೊರಬರಲು ಆಗದೆ ನಾಲ್ವರು ನೀರುಪಾಲಾಗಿದ್ದಾರೆ. ಮತ್ತೊರ್ವ ಬದುಕುಳಿದಿದ್ದಾನೆ. ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ನೀರಲ್ಲಿ ಕೊಚ್ಚಿ ಹೋಗಿರುವ ಮೃತದೇಹಕ್ಕಾಗಿ ಅಗ್ನಿಶಾಮಕದಳದ ಸಿಬ್ಬಂದಿಯಿಂದ ಶೋಧಕಾರ್ಯ ಮುಂದುವರಿದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಕೊರಟಗೆರೆ: ರಾಜ್ಯಪಾಲರ ಲೆಟರ್ ರೈಟ್ ಹಾಗೂ ಸಹಿಯನ್ನೇ ಫೋರ್ಜರಿ ಮಾಡಿ ಮುಗ್ಧ ಜನರಿಗೆ ವಂಚನೆ ಮಾಡುತ್ತಿದ್ದ ಖತರ್ನಾಕ್ ಕಳ್ಳ ಈಗ ಪೊಲೀಸರ ಅಥಿತಿಯಾಗಿದ್ದಾನೆ. RBI ಗವರ್ನರ್ ಸೀಲ್ ಮತ್ತು ಸಹಿ ಬಳಸಿ ಬ್ಯಾಂಕುಗಳಲ್ಲಿ ಸಾಲ ಪಡೆಯಲು ಹರಸಾಹಸ ಪಡುತ್ತಿದ್ದ ಈ ಖತರ್ನಾಕ್ ಕಳ್ಳನು ಗೃಹಸಚಿವ ಡಾ.ಜಿ. ಪರಮೇಶ್ವರ ಜೊತೆಯಲ್ಲಿ ಇರುವ ಪೋಟೋ ದುರ್ಬಳಕೆ ಮಾಡಿ ವಂಚನೆ ಮಾಡುತ್ತಿದ್ದ ಎನ್ನಲಾಗಿದೆ. ಬೆಂಗಳೂರಿನ ಕೆಂಗೇರಿ, ರಾಜರಾಜೇಶ್ವರಿ ನಗರ ಸೇರಿದಂತೆ ಹಲವೆಡೆ 14ಪ್ರಕರಣ ದಾಖಲಾಗಿವೆ. ಬೆಂಗಳೂರಿನ ಕೆಂಗೇರಿ ಪೊಲೀಸ್ ಠಾಣಾ ಒಂದರಲ್ಲಿಯೇ ವಿವಿಧ ದೂರುಗಳ ಅನ್ವಯ ಸುಮಾರು 13 ಪ್ರಕರಣಗಳು ಈತನ ಮೇಲೆ ದಾಖಲಾಗಿವೆ. ಬೆಂಗಳೂರು ಮೂಲದ ಕೆಲವು ದೊಡ್ಡ ದೊಡ್ಡ ಅಧಿಕಾರಿಗಳ ಸಹಿಯನ್ನೇ ಫೋರ್ಜರಿ ಮಾಡುತ್ತಿದ್ದ ಖತರ್ನಾಕ್ ಭೂಪನಾಗಿರುವ ಈ ಝುಬೇರ್ ಎನ್ನುವಾತ. ಗೃಹ ಸಚಿವರ ಆಪ್ತ, ಪಿ ಎ, ಎಂದು ಹೇಳಿಕೊಂಡು ಅಮಾಯಕರಿಗೆ 8 ಕೋಟಿಗೂ ಅಧಿಕ ಹಣ ವಂಚನೆ ಮಾಡುತ್ತಿದ್ದ. ಈ ಆರೋಪಿಯು ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ಅವರ…

Read More

ಪಾವಗಡ:  ವಿದ್ಯುತ್ ಶಾಕ್ ನಿಂದಾಗಿ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ಪಾವಗಡ ಪಟ್ಟಣದ ವೇಣುಗೋಪಾಲ ದೇವಸ್ಥಾನದ ರಸ್ತೆ ಸಮೀಪದಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆಯ ಸಮಯದಲ್ಲಿ ನಡೆದಿದೆ. ಪಾರ್ಸಿಲಾಲ್ ಎನ್ನುವ ವ್ಯಕ್ತಿ ರಾಜಸ್ಥಾನದ ಮೂಲದವರಾಗಿದ್ದು ಕಳೆದ 13 ವರ್ಷಗಳಿಂದ ಪಾವಗಡದಲ್ಲಿ ಸ್ವೀಟ್ ಅಂಗಡಿಯನ್ನು ತೆರೆದು ಜೀವನವನ್ನು ನಡೆಸುತ್ತಿದ್ದರು. ಪ್ರತಿನಿತ್ಯದಂತೆ ಇಂದು ಸಹ ತನ್ನ ಸ್ವೀಟ್ ಗಾಡಿಯಲ್ಲಿರುವ ಬ್ಯಾಟರಿಗೆ ಚಾರ್ಜ್ ಮಾಡಲು ಹೋದಾಗ ಆಕಸ್ಮಿಕವಾಗಿ ವಿದ್ಯುತ್ ತಗಲಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನು ಮೃತ ಪಾರ್ಸಿಲಾಲ್ ಅವರಿಗೆ ಹೆಂಡತಿ ಮತ್ತು ಮೂರು ಜನ ಮಕ್ಕಳಿದ್ದು, ಇವರ ಅಂತ್ಯಕ್ರಿಯೆಗಳು ಪಾವಗಡದಲ್ಲೇ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದ್ದು, ಸದ್ಯ ಈ ಘಟನೆ ಸಂಬಂಧಪಟ್ಟು ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ನಂದೀಶ್ ನಾಯ್ಕ ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ತುಮಕೂರು: ಬೈಕ್‌ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ತೀವ್ರವಾಗಿ ಗಾಯಗೊಂಡಿದ್ದ ಕುಣಿಗಲ್‌ ಪೊಲೀಸ್‌ ಠಾಣೆಯ ಎಎಸ್‌ಐ ಸಾವನ್ನಪ್ಪಿರುವ ಘಟನೆ ತಾಲೂಕಿನ ಅಲಪ್ಪನಗುಡ್ಡೆ ಸಮೀಪ ನಡೆದಿದೆ. ಮೃತ ಎಎಸ್‌ಐ ಯನ್ನು ಬಿ. ವೆಂಕಟೇಶ್‌ ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬುಧವಾರ ಸಂಜೆ ಕೆಲಸದ ನಿಮಿತ್ತ ತಮ್ಮ ಬೈಕ್‌ ನಲ್ಲಿ ಎಡೆಯೂರಿಗೆ ಹೋಗಿ ಹಿಂತಿರುಗುತ್ತಿದ್ದ ಸಂದರ್ಭ ದುರ್ಘಟನ ನಡೆದಿದೆ ನಡೆದಿದೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಲಕೊಪ್ಪರ ಗ್ರಾಮದಲ್ಲಿ ಮಹಿಳೆಯೊಬ್ಬಳು ನವಜಾತ ಶಿಶುವನ್ನು ಚರಂಡಿಗೆ ಎಸೆದು ಹೋಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮಹಿಳೆಯು ಮೃತಪಟ್ಟ ನವಜಾತ ಶಿಶುವನ್ನು ಪ್ಲಾಸ್ಟಿಕ್ ಹಾಳೆಯಲ್ಲಿ ಸುತ್ತಿ, ಚರಂಡಿಗೆ ಎಸೆದು ಅಲ್ಲಿಂದ ಜಾಗ ಖಾಲಿ ಮಾಡಿದ್ದಾಳೆ. ಇತ್ತ ಶಿಶುವನ್ನು ಗಮನಿಸಿದ ಗ್ರಾಮಸ್ಥರು ಚರಂಡಿಯಿಂದ ಗಂಡು ಮಗುವನ್ನು ಮೇಲಕ್ಕೆತ್ತಿದ್ದಾರೆ. ಅಲ್ಲದೇ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಮಹಿಳೆಯ ವಿರುದ್ಧ ಕ್ರಮಕ್ಕೆ, ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಮುದ್ದೇಬಿಹಾಳ ಪೊಲೀಸರು ತಾಯಿಗಾಗಿ ಶೋಧ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಹಿಂದೂ ಯುವಕನನ್ನು ಪ್ರೀತಿಸಿ ಮದುವೆಯಾಗಿ, ಕೊರೊನಾ ಕಾಲದಲ್ಲಿ ಪತಿಯನ್ನೂ ಕಳೆದುಕೊಂಡಿರುವ ಮುಸ್ಲಿಂ ಮಹಿಳೆಗೆ ಕೆಲವು ಮುಸ್ಲಿಂ ಹುಡುಗರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಮಹಿಳೆಯ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೂ ದುಷ್ಕರ್ಮಿಗಳು ಕಿರುಕುಳ ನೀಡಿದ್ದು, ಹಲ್ಲೆ ನಡೆಸಿದ್ದಾರೆ. ದೂರು ನೀಡಿದರೂ ಪೊಲೀಸರು ಕ್ಯಾರೇ ಎಂದಿಲ್ಲ ಎಂದು ಆರೋಪಿಸಿದ್ದಾರೆ. ಗದಗ ಬೆಟಗೇರಿಯ ಆಶ್ರಯ ಕಾಲೋನಿ ನಿವಾಸಿಯಾದ ಸೈನಜಾ ಬೇಗಂ ಎಂಬಾಕೆ ಕಿರುಕುಳಕ್ಕೆ ಒಳಗಾದ ಮಹಿಳೆ ಎನ್ನಲಾಗಿದೆ. ನಾಲ್ಕು ಜನ ಮಕ್ಕಳೊಂದಿಗೆ ಜೀವನ ನಡೆಸುತ್ತಿರುವ ಸೈನಜಾ ಬೇಗಂ, ಹಿಂದೂ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಾರೆ. ಮೂರು ವರ್ಷಗಳ ಹಿಂದೆ ಕೊರೊನಾದಿಂದ ಪತಿ ಕೊನೆಯುಸಿರೆಳೆದಿದ್ದಾರೆ. ಇತ್ತೀಚೆಗೆ ಲಿಯಾಕತ್, ಅಲ್ತಾಫ್, ಸೈಯದ್ ಸೇರಿದಂತೆ ಹಲವರು ಈಕೆಗೆ ಕಿರುಕುಳ ನೀಡುತ್ತಿದ್ದು, ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂದಿದ್ದು, ಸೈನಾಜ್ ನ ಮಗ ಸದ್ದಾಂನ ಮೇಲೆ ಲಿಯಾಕತ್ ಗ್ಯಾಂಗ್ ತೀವ್ರವಾಗಿ ಹಲ್ಲೆ ಮಾಡಿದೆ. “ನಮಗೆ ಸೂಕ್ತವಾದ ರಕ್ಷಣೆ ನೀಡಬೇಕುʼʼ ಎಂದು ಮಹಿಳೆ ಒತ್ತಾಯಿಸಿದ್ದಾರೆ. ತಾಯಿ, ಮಕ್ಕಳ ‌ಮೇಲೆ ಹಲ್ಲೆ ಮಾಡಿ…

Read More

ನಟ ಭಯಂಕರ ಡಾಲಿ ಧನಂಜಯ್ ನಟನೆಯ ‘ಕೋಟಿ’ ಸಿನಿಮಾದ ಟೀಸರ್ ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿ ಸದ್ದು ಮಾಡಿತ್ತು. ಇದೀಗ ಸಿನಿಮಾದ ಮೊದಲ ಹಾಡು ಯೂಟ್ಯೂಬ್ ​ನಲ್ಲಿ ಬಿಡುಗಡೆ ಆಗಿದ್ದು ಸಂಗೀತ ಪ್ರಿಯರ ಮನ ಸೆಳೆದಿದೆ. ಯೋಗರಾಜ್ ಭಟ್ ಬರೆದ ಸಾಹಿತ್ಯಕ್ಕೆ ಅರ್ಮಾನ್ ಮಲ್ಲಿಕ್ ಹಾಡಿದ್ದು, ವಾಸುಕಿ ವೈಭವ್ ಸಂಗೀತ ಸಂಯೋಜನೆ ಮಾಡಿದ್ದಾರೆ. ‘ಕೋಟಿ’ ಮಧ್ಯಮವರ್ಗದ ಯುವಕನ ಕತೆಯುಳ್ಳ ಸಿನಿಮಾ. ‘ಕೋಟಿ’ ಸಿನಿಮಾನಲ್ಲಿ ಡಾಲಿ ಧನಂಜಯ್ ಎದುರು ಮೋಕ್ಷ ಕುಶಾಲ್ ನಾಯಕಿಯಾಗಿ ನಟಿಸಿದ್ದಾರೆ. ನಟಿ ತಾರಾ, ರಂಗಾಯಣ ರಘು, ರಮೇಶ್ ಇಂದಿರಾ, ತನುಜಾ ವೆಂಕಟೇಶ್ ಇನ್ನೂ ಹಲವರು ನಟಿಸಿದ್ದಾರೆ. ಹಾಡು ಬಿಡುಗಡೆಗೆ ಮುನ್ನ ಮಾತನಾಡಿದ್ದ ನಿರ್ದೇಶಕ ಪರಮೇಶ್ವರ್ ಗುಂಡ್ಕಲ್, ‘‘ವಾಸುಕಿ ಭವನ್​ ಹೊಸ ತಲೆಮಾರಿನ ಪ್ರತಿಭಾವಂತ ಮ್ಯೂಸಿಕ್​ ಡೈರೆಕ್ಟರ್​. ಇನ್ನು, ಯೋಗರಾಜ್ ಭಟ್ ಅವರ ಸಾಹಿತ್ಯದ ದೊಡ್ಡ ಫ್ಯಾನ್​ ನಾನು. ಯೋಗರಾಜ್​ ಭಟ್​ ಮತ್ತು ವಾಸುಕಿ ವೈಭವ್​ ಕಾಂಬಿನೇಷನ್​ನ ಈ ಗೀತೆಯನ್ನು ಅರ್ಮಾನ್ ಮಲಿಕ್ ಬಹಳ ಚೆನ್ನಾಗಿ ಹಾಡಿದ್ದಾರೆ. ಕನ್ನಡಿಗರಿಗೆ…

Read More

ರಾಜಧಾನಿಯಲ್ಲಿ ಮಾವಿನ ಸೀಸನ್ ಲೇಟಾಗಿ ಆರಂಭವಾಗಿದ್ದು, ಮಳೆ ಬಂದ ನಂತರ ಸಿಲಿಕಾನ್ ಸಿಟಿ ಮಂದಿ ಬಗೆ ಬಗೆಯ ಹಣ್ಣುಗಳನ್ನ ಸವಿಯುತ್ತಿದ್ದಾರೆ. ಈ ಮಧ್ಯೆ ಲಾಲ್ ಬಾಗ್ ನಲ್ಲಿಯು ಈ ವರ್ಷ ಮಾವಿನ‌ ಮೇಳ ನಡೆಸುವುದಕ್ಕೆ ಸಿದ್ದತೆ ಮಾಡಿಕೊಳ್ಳುತ್ತಿದ್ದು, ಸದ್ಯ ಮೇಳಕ್ಕೆ ಡೇಟ್ ಕೂಡ ಫಿಕ್ಸ್ ಮಾಡಿದ್ದಾರೆ. ಇದೇ ಮೇ. 24 ರಿಂದ ಜೂನ್ 10 ರವರೆಗೂ ಮಾವು ಹಾಗೂ ಹಲಸಿನ ಮೇಳ ಮಾಡುವುದಕ್ಕೆ ಮಾವು ಅಭಿವೃದ್ಧಿ ನಿಗಮ ಹಾಗೂ ಲಾಲ್ ಬಾಗ್ ತೋಟಗಾರಿಕೆ ಇಲಾಖೆ ನಿರ್ಧರಿಸಿದೆ. ಈ ಮಾವಿನ ಮೇಳಕ್ಕೆ ಕೋಲಾರ, ಶ್ರೀನಿವಾಸಪುರ, ಚಿಂತಾಮಣಿ, ಬೆಂಗಳೂರು ಗ್ರಾಮಾಂತರ, ಹಾವೇರಿ, ಧಾರವಾಡ ಸೇರಿದಂತೆ ನಾನಾ ಜಿಲ್ಲೆಗಳ ಮಾವು ಬೆಳೆಗಾರರು ಮೇಳದಲ್ಲಿ ಭಾಗವಹಿಸಲಿದ್ದಾರೆ. ಮೇಳದಲ್ಲಿ ವಾಣಿಜ್ಯ, ಪಾರಂಪರಿಕ ಮಾವಿನ ತಳಿಗಳು, ಜೊತೆಗೆ ಉಪ್ಪಿನಕಾಯಿಗೆ ಬಳಸುವ ಆಮ್ಲೆಟ್‌, ಮಿಡಿ ಮಾವು ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆ ಇರಲಿದೆ. ಇನ್ನು ಐಐಎಚ್‌ಆರ್‌, ಜಿಕೆವಿಕೆ ಮತ್ತಿತರ ಸಂಸ್ಥೆಗಳು ಅಭಿವೃದ್ಧಿಪಡಿಸಿದ ಹಲಸಿನ ತಳಿಗಳು, ರೈತರು ಬೆಳೆದ ನಾನಾ ತಳಿಯ ಹಲಸಿನ…

Read More

ಪಾವಗಡ: ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ, ಪಾವಗಡ ತಾಲೂಕಿನ ಸಹನಾ ಕಾನ್ವೆಂಟ್ ಮತ್ತು ಕೋಡಿಗೆಹಳ್ಳಿಯ ಮೊರಾರ್ಜಿ ವಸತಿ ಶಾಲೆ ನೂರಕ್ಕೆ ನೂರರಷ್ಟು ಫಲಿತಾಂಶ ಪಡೆದುಕೊಂಡು ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದೆ ಎಂದು ಬಿ.ಇ.ಓ. ಇಂದ್ರಾಣಮ್ಮ ತಿಳಿಸಿದ್ದಾರೆ. ಕೋಟಗುಡ್ಡ ಗ್ರಾಮದ ಸಹನಾ ಕಾನ್ವೆಂಟ್ ನಲ್ಲಿ ಹಮ್ಮಿಕೊಂಡಿದ್ದ, ಹೆಚ್ಚು ಅಂಕಗಳನ್ನು ಪಡೆದ, ಜಾಹ್ನವಿ, ನಾಗಶ್ರೀ, ಸುಶ್ಮಿತಾ ವಿದ್ಯಾರ್ಥಿಗಳನ್ನು ಗೌರವಿಸಿ, ಶಾಲೆಯನ್ನು ಅಭಿನಂದಿಸಿ ಮಾತನಾಡಿದ್ದಾರೆ. “ಪರೀಕ್ಷೆಯನ್ನು ಯಾವುದೋ ಪೂರ್ವಗ್ರಹ ಪೀಡಿತದಿಂದ ನೋಡದೆ, ಅದರ ಬಗ್ಗೆ ಅರಿವು ಇಲ್ಲದೆ ಊಹಾಪೋಹಗಳಿಂದ ದಾರಿ ತಪ್ಪುವಂತಾಗುತ್ತದೆ. ಇದು ಮಕ್ಕಳ ಪೋಷಕರಲ್ಲಿ ಕಳವಳಕ್ಕೆ ಕಾರಣವಾಗುತ್ತದೆ. ಕೂಲಿಕಾರ್ಮಿಕರು ತಮ್ಮ ಮಕ್ಕಳನ್ನು ತಮ್ಮ ಜೊತೆಯಲ್ಲೇ ಕರೆದುಕೊಂಡು ಹೋಗುವುದರಿಂದ ಫಲಿತಾಂಶವನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಈ ಬಾರಿಯ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಯಾವ ರೀತಿಯಾಗಿ ಪರೀಕ್ಷೆಯನ್ನು ಬರೆದಿದ್ದಾರೋ ಅದೇ ರೀತಿಯಾಗಿ ಅವರು ಫಲಿತಾಂಶವನ್ನು ಸಹ ಪಡೆದುಕೊಂಡಿದ್ದಾರೆ. ಮುಂದಿನ 2025 ರಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪ್ರತಿಯೊಬ್ಬರು 625ಕ್ಕೆ 625 ಅಂಕಗಳನ್ನು ಪಡೆದುಕೊಳ್ಳುವ ಗುರಿ ಹೊಂದಬೇಕೆಂದು ಸಹನಾ…

Read More

ಬೆಂಗಳೂರು: ಸಮಾಜದ ಸ್ವಾಸ್ಥ್ಯವನ್ನ ಕಾಪಾಡಬೇಕು ಅಂದ್ರೆ ಮಾಧ್ಯಮಗಳ ಪಾತ್ರ ಬಲುದೊಡ್ಡದು ಅಂತಾರೆ. ಅದಕ್ಕಾಗಿಯೇ ಇವತ್ತಿನ ಈ ಸುದ್ದಿ ಸಾಕ್ಷಿಯಾಗಿದೆ. ನೋಡೋಕೆ, ಕೇಳೋಕೆ ಪ್ರೇಕ್ಷಕರಿಗೆ ಇಷ್ಟವಿಲ್ಲದಿದ್ರೂ ಇಲ್ಲಿನ ಪರಿಸ್ಥಿತಿ, ದುಸ್ಥಿತಿ ಬಗ್ಗೆ ತೋರಿಸಲೇ ಬೇಕಾದ ಅನಿವಾರ್ಯವಿದೆ. ಹೌದು… ಬೆಂಗಳೂರಿನಲ್ಲಿ ಸಾಕಷ್ಟು ಸ್ಮಶಾನಗಳಿವೆಯಾದರೂ, ಕಲ್ಪಲ್ಲಿ ಸ್ಮಶಾನ ನಗರದ ಅತ್ಯಂತ ಹಳೆಯ ಸ್ಮಶಾನಗಳಲ್ಲಿ ಒಂದು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸೇರಿದ ಸ್ಮಶಾನವಾದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿದೆ. ಇಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಕನಿಷ್ಟ ಮೂಲಭೂತ ಸೌಕರ್ಯ ಇಲ್ಲದೆ ಶೋಚನೀಯ ಸ್ಥಿತಿ ನಿರ್ಮಾಣವಾಗಿದೆ. ಸ್ಮಶಾನದಲ್ಲಿ ಸಮಾಧಿ ಅಗೆಯುವವರು ಹಾಗೂ ಅವರ ಕುಟುಂಬಸ್ಥರು ಸೇರಿ ಸುಮಾರು 40ಕ್ಕೂ ಹೆಚ್ಚು ಮಂದಿ ನೆಲೆಸಿದ್ದಾರೆ. ಅಲ್ಲದೆ, ಇಲ್ಲಿ ನೋಂದಣಿ ಕಚೇರಿ ಕೂಡ ಇದೆ. ಅಡುಗೆ, ಸ್ನಾನ, ಶೌಚಾಲಯ ಎಲ್ಲದಕ್ಕೂ 35-40 ಮಂದಿಗೆ 2 ಟ್ಯಾಂಕರ್ ಮಾತ್ರ ನೀರು ಪೂರೈಕೆ ಆಗುತ್ತಿದೆ. 6 ನಲ್ಲಿಗಳಿದ್ದರೂ ಎರಡು ನಲ್ಲಿಗಳು ಮಾತ್ರ ಕೆಲಸ ಮಾಡುತ್ತಿವೆ. ನೀರಿನ ಗುಣಮಟ್ಟ, ನಿರಂತರ ಹೊಗೆ ಸ್ಮಶಾನದ ಕೆಲಸಗಾರರ…

Read More