Subscribe to Updates
Get the latest creative news from FooBar about art, design and business.
- ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
- ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್ ಸೆಟ್ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
- ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
- ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
- ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ: ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
- ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
- ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
Author: admin
ಈ ಹಿಂದೆ ಹಲವು ಬಾರಿ ಸರ್ಕಾರಿ ಬಸ್ ನಲ್ಲಿ ಮಹಿಳೆಯರು ಕಿತ್ತಾಡಿಕೊಂಡ ಘಟನೆಗಳು ವರದಿಯಾಗಿದ್ದವು. ಹಾಗೆಯೇ ಸರ್ಕಾರಿ ಬಸ್ಸಿನಲ್ಲಿ ಉಚಿತ ಪ್ರಯಾಣದ ಸೀಟಿಗಾಗಿ ಕೆಲವು ಮಹಿಳೆಯರು ಕಿತ್ತಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಒಂದು ಸೀಟಿಗಾಗಿ ಪರಸ್ಪರ ಚಪ್ಪಲಿ ಹಿಡಿದು ಬಡಿದಾಡಿಕೊಂಡು, ಅಂಗಿ- ರವಿಕೆ ಹರಿದುಕೊಂಡ ಘಟನೆ ಬೀದರ್ ನಲ್ಲಿ ನಡೆದಿದೆ. ಈ ಘಟನೆ ಬೀದರ್ ನಿಂದ ಕಲಬುರಗಿಗೆ ತೆರಳುವ ಮಾರ್ಗದ ಬಸ್ಸಿನಲ್ಲಿ ನಡೆದಿದೆ. ತಾನು ಕರ್ಚೀಫ್ ಹಾಕಿಟ್ಟಿದ್ದ ಸೀಟಿನಲ್ಲಿ ಮತ್ತೊಬ್ಬಳು ಬಂದು ಕುಳಿತಿದ್ದರಿಂದ ಸಿಟ್ಟಾದ ಮಹಿಳೆ ಏಳಲು ಹೇಳಿದ್ದಾಳೆ. ಆದರೆ ಕೂತಿದ್ದ ಮಹಿಳೆ ಇದಕ್ಕೆ ಸ್ಪಂದಿಸದೆ ಕಟುವಾಗಿ ಪ್ರತಿಕ್ರಿಯಿಸಿದ್ದು, ಇದರಿಂದ ಮಾತಿಗೆ ಮಾತು ಬೆಳೆದಿದೆ. ಅವಾಚ್ಯ ಶಬ್ದಗಳಿಂದ ಬೈದುಕೊಂಡಿದ್ದಾರೆ. ಪರಸ್ಪರರ ಅಂಗಿ ಹಿಡಿದು ಎಳೆದಾಡಿಕೊಂಡಿದ್ದಾರೆ. ನಂತರ ಚಪ್ಪಲಿ ಹಿಡಿದುಕೊಂಡು ಬಡಿದಾಡಿಕೊಂಡಿದ್ದಾರೆ. ಜೊತೆಗಿದ್ದ ಹಲವರು ಇವರ ಜಗಳ ಬಿಡಿಸಲು ಯತ್ನಿಸಿದ್ದಾರೆ. ಈ ಘಟನೆಯನ್ನು ಪ್ರಯಾಣಿಕರೊಬ್ಬರು ವೀಡಿಯೋ ಮಾಡಿಕೊಂಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
ತುಮಕೂರು: ಜಮೀನುಗಳ ಖಾತೆ ಮತ್ತು ಪಹಣಿಗಳನ್ನು ತಂದೆಯ ಹೆಸರಿನಿಂದ ಮಗನ ಹೆಸರಿಗೆ ವರ್ಗಾವಣೆ ಮಾಡಿಕೊಡಲು 10 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದ ಸಿ.ಎಸ್.ಪುರ ಹೋಬಳಿ ರಾಜಸ್ವ ನಿರೀಕ್ಷಕ ಕೆ.ನರಸಿಂಹಮೂರ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕು, ಸಿ. ಎಸ್.ಪುರ ಹೋಬಳಿ, ಉಂಗ್ರ ಮಜರೆ, ಗದ್ದೆಹಳ್ಳಿ ನಾಗರಾಜು ಅವರ ತಂದೆ ಚಿಕ್ಕಯಲ್ಲಯ್ಯ ಅವರ ಹೆಸರಿನಲ್ಲಿದ್ದ ಉಂಗ್ರ ಗ್ರಾಮದ ಸರ್ವೆ ನಂಬರ್:201/1 ಮತ್ತು ಹುಲ್ಲೇಕೆರೆ ಗ್ರಾಮದ ಸರ್ವೆ ನಂಬರ್:32ರ ಜಮೀನುಗಳನ್ನು ಅವರ ಮಗನಾದ ನಾಗರಾಜು ಅವರಿಗೆ ಗುಬ್ಬಿ ತಾಲೂಕು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಹಕ್ಕು ಖುಲಾಸೆ ಪತ್ರ ಮುಖೇನ ನೋಂದಣಿ ಮಾಡಿಕೊಡಲಾಗಿದೆ. ಸದರಿ ಜಮೀನುಗಳ ಖಾತೆ ಮತ್ತು ಪಹಣಿಗಳನ್ನು ತಂದೆಯ ಹೆಸರಿನಿಂದ ಮಗನಾದ ದೂರುದಾರ ನಾಗರಾಜು ಹೆಸರಿಗೆ ವರ್ಗಾವಣೆ ಮಾಡಿಕೊಡಲು ಸಿ.ಎಸ್. ಪುರ ಹೋಬಳಿ ರಾಜಸ ನಿರೀಕ್ಷಕರಾದ ಕೆ.ನರಸಿಂಹಮೂರ್ತಿ ಹಣದ ಬೇಡಿಕೆ ಇಟ್ಟಿದ್ದು, 10 ಸಾವಿರ ರೂ. ಲಂಚ ಸ್ವೀಕರಿಸುವ ಮೂಲಕ ಆರೋಪಿ ಕೆ.ನರಸಿಂಹಮೂರ್ತಿ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.…
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಮಿಕ್ಕುಳಿದ ವೃಂದದ 2,286 ಹುದ್ದೆಗಳು, ಹಿಂಬಾಕಿ ಹುದ್ದೆ ಸೇರಿ ಒಟ್ಟು 2,500 ಹುದ್ದೆಗಳಿಗೆ ಮಾ.10ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆಯಾಗಿ ದ್ವಿತೀಯ ಪಿಯು ಅಥವಾ ತತ್ಸಮಾನ ತರಗತಿ ಪೂರ್ಣಗೊಳಿಸಿರಬೇಕು. ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ, ಬ್ಯಾಡ್ಜ್ ಹೊಂದಿರಬೇಕು. ಸಾಮಾನ್ಯ ವರ್ಗದವರಿಗೆ ಗರಿಷ್ಠ ವಯೋಮಿತಿ 35 ವರ್ಷ, 2ಎ, 2ಬಿ, 3ಎ ಮತ್ತು 3ಬಿಗೆ 38, ಎಸ್ಸಿ, ಎಸ್ಟಿ ಮತ್ತು ಪ್ರವರ್ಗ-1ಕ್ಕೆ 40, ಮಾಜಿ ಸೈನಿಕ, ಇಲಾಖಾ ಅಭ್ಯರ್ಥಿಗೆ 45 ವರ್ಷ ವಯೋಮಿತಿ. ದೇಹದಾರ್ಢ್ಯತೆ: ಪುರುಷರು 160 ಸೆ.ಮೀ, ಮಹಿಳೆಯರು 150 ಸೆಂ. ಮೀ ಎತ್ತರ ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ ವಯೋಮಿತಿ 18 ಆಗಿದ್ದು, ಗರಿಷ್ಠ ವಯೋಮಿತಿ 35 ವರ್ಷ ಆಗಿದೆ. ಪ್ರವರ್ಗ 2ಎ, 2ಬಿ, 3ಎ ಮತ್ತು…
ತಿರುವನಂತಪುರಂ: ಭಾರೀ ಮಳೆ ಇರುವ ಹಿನ್ನೆಲೆ ಹವಾಮಾನ ಇಲಾಖೆಯು ಕೇರಳದ 9 ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಿದೆ. ಭಾರೀ ಮಳೆಯಾದರೆ ಮಣಿಯಾರ್ ಅಣೆಕಟ್ಟಿನ ಶೆಟರ್ ಗಳನ್ನು ಮೇಲಕ್ಕೆತ್ತುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನೈಋತ್ಯ ಮಾನ್ಸೂನ್ ಮೇ 19ರ ವೇಳೆಗೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳನ್ನು ತಲುಪುವ ನಿರೀಕ್ಷೆಯಿದೆ. ಇದರ ನಂತರ ಮುಂಗಾರು ಮೇ 29 ಮತ್ತು ಜೂನ್ 1ರ ನಡುವೆ ಕೇರಳವನ್ನು ಅಪ್ಪಳಿಸಬಹುದು. ಸಾಮಾನ್ಯವಾಗಿ, ಜೂನ್ 10ರೊಳಗೆ ಮುಂಗಾರು ಮಹಾರಾಷ್ಟ್ರವನ್ನು ಪ್ರವೇಶಿಸುತ್ತದೆ. ಈ ವರ್ಷ ಅದು ಸರಿಯಾದ ಸಮಯಕ್ಕೆ ಆಗಮಿಸುವ ನಿರೀಕ್ಷೆಯಿದೆ. ಜೂನ್ 15ರ ವೇಳೆಗೆ ಗುಜರಾತ್, ಮಧ್ಯಪ್ರದೇಶ, ಛತ್ತೀಸ್ ಗಢ, ಜಾರ್ಖಂಡ್ ಮತ್ತು ಬಿಹಾರಕ್ಕೆ ಮುಂಗಾರು ಪ್ರವೇಶಿಸಬಹುದು. ಜೂನ್ 20-25ರ ನಡುವೆ ಮುಂಗಾರು ಉತ್ತರ ಪ್ರದೇಶ, ಹಿಮಾಚಲ, ಉತ್ತರಾಖಂಡ ಮತ್ತು ಕಾಶ್ಮೀರವನ್ನು ಪ್ರವೇಶಿಸುವ ಸಾಧ್ಯತೆಯಿದೆ. ಮಾನ್ಸೂನ್ ಜೂನ್ 30ರಂದು ರಾಜಸ್ಥಾನ, ದೆಹಲಿ, ಹರಿಯಾಣ ಮತ್ತು ಪಂಜಾಬ್ಗೆ ಅಪ್ಪಳಿಸಬಹುದು. ಇದು ಜುಲೈ 8ರ ವೇಳೆಗೆ ಇಡೀ ದೇಶವನ್ನು ಆವರಿಸುತ್ತದೆ. ತಿರುವನಂತಪುರದಲ್ಲಿ…
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹತ್ಯೆ ನಡೆದು ಕೆಲವು ವಾರಗಳ ಬೆನ್ನಲ್ಲೆ ಯುವತಿ ಅಂಜಲಿಯ ಹತ್ಯೆ ನಡೆದಿದೆ. ಮೇಲಿಂದ ಮೇಲೆ ಇಂತಹ ಘಟನೆಗಳು ನಡೆಯುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ. ಇಂದು ಹುಬ್ಬಳ್ಳಿಯ ಅಂಜಲಿ ಮನೆ ಹಾಗೂ ಕಿಮ್ಸ್ ಆಸ್ಪತ್ರೆ ಮುಂದೆ ಯುವತಿ ಮೃತದೇಹ ಅಂತ್ಯಕ್ರಿಯೆಗೆ ರವಾನಿಸಿದಂತೆ ತಡೆ ಹಿಡಿದ ಘಟನೆ ನಡೆದಿದೆ. ನೆನ್ನೆ ಬೆಳ್ಳಂಬೆಳಗ್ಗೆ ಇಲ್ಲಿನ ವೀರಾಪೂರ ಓಣಿಯಲ್ಲಿರುವ ಅಂಜಲಿ ಮನೆಗೆ ನುಗ್ಗಿದ ಆರೋಪಿ ಗಿರೀಶ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಪ್ರೀತಿ ನಿರಾಕರಿಸಿದ್ದಕ್ಕೆ ಈ ಕೊಲೆ ನಡೆದಿದೆ ಎನ್ನಲಾಗಿದೆ. ಘಟನೆಯಿಂದ ಆಕ್ರೋಶಗೊಂಡಿರುವ ಕುಟುಂಬಸ್ಥರು, ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರು ಜಿಲ್ಲಾಧಿಕಾರಿಗಳು ಅಂಜಲಿ ಮನೆಗೆ ಬರುವವರೆಗೂ ಮೃತದೇಹ ಎತ್ತಲು ಬಿಡುವುದಿಲ್ಲ ಎಂದು ಕಿಮ್ಸ್ ಆಸ್ಪತ್ರೆ ಹಾಗೂ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿ ಕೊಲೆ: ಪ್ರೀತಿ ನಿರಾಕರಿಸಿದ್ದಕ್ಕೆ ಅಂಜಲಿ ಜೀವ ತೆಗೆದ ಪಾಪಿ. ಮೃತದೇಹದ ಆಂಬ್ಯುಲೆನ್ಸ್ ಗೆ ತಡೆ. ಅಂಜಲಿ ಮೃತದೇಹ ಅಂತಿಮ ಆಸ್ಪತ್ರೆ ಪ್ರಕ್ರಿಯೆಗಳು ಮುಗಿಯುತ್ತಿದ್ದಂತೆ…
ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ಬಗ್ಗೆ ನಮಗೆ ಮಾಹಿತಿ ಇಲ್ಲ. ನಿಮಗೇನಾದರೂ ಇದ್ದರೆ ನಮಗೆ ತಿಳಿಸಿ. ನಿಮಗೆ ಗೊತ್ತಿದ್ದರೆ ಹೇಳಿ ನಮಗೆ ಸಹಾಯ ಆಗುತ್ತದೆ ಎಂದು ಮಾಧ್ಯಮಗಳ ಮುಂದೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಕೇಳಿಕೊಂಡ ಪ್ರಸಂಗ ನಡೆಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಹಿತಿಗಳ ಪತ್ರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತದೆ. ಸಾಹಿತಿಗಳು ಅನೇಕ ವಿಷಯಗಳನ್ನು ಗಮನಿಸುತ್ತಾರೆ. ಸಿಎಂಗೆ ಪತ್ರ ಬರೆದಿದ್ದಾರೆ, ತರಿಸಿಕೊಂಡು ನೋಡುತ್ತೇನೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು. ಸಿಎಂಗೆ ಬರೆದ ಪತ್ರದಲ್ಲಿ ಅವರು ಉಲ್ಲೇಖ ಮಾಡಿದ್ದನ್ನು ಎಸ್ ಐಟಿ ಪರಿಗಣಿಸುತ್ತೆ ಎಂದ ಅವರು, ಪ್ರಕರಣದ ಹಿಂದೆ ತಿಮಿಂಗಿಲ ಇದೆ ಎಂಬ ಮಾಜಿ ಸಿಎಂ ಎಚ್ ಡಿಕೆ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿ ತಿಮಿಂಗಿಲ ಯಾರು ಅಂತ ಹೇಳಲಿ. ಅವರಿಗೆ ಗೊತ್ತಿದೆ ಅಂದ ಮೇಲೆ ಹೇಳಬೇಕು ಅಲ್ವಾ? ಹೇಳದೆ ಇರುವುದೆ ದೊಡ್ಡ ತಪ್ಪು. ದಾಖಲೆ ಕೊಟ್ಟ…
ವಿಶ್ವಸಂಸ್ಥೆಯ ಸುರಕ್ಷೆ ಮತ್ತು ಭದ್ರತಾ ಇಲಾಖೆ (ಯುಎನ್ ಡಿಎಸ್ಎಸ್) ಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಭಾರತೀಯ ಸೇನೆಯ ನಿವೃತ್ತ ಕರ್ನಲ್ ವೈಭವ್ ಅನಿಲ್ ಕಾಳೆ (46) ಯುದ್ಧಪೀಡಿತ ಗಾಝಾದಲ್ಲಿ ನಿಧನರಾಗಿದ್ದಾರೆ. ಮೃತ ಕಾಳೆಯವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದು ಎಲ್ಲರೂ ಪುಣೆಯಲ್ಲಿ ವಾಸವಿದ್ದಾರೆ. ಕಳೆದ ಒಂದು ತಿಂಗಳ ಹಿಂದಷ್ಟೇ ವಿಶ್ವಸಂಸ್ಥೆಯ ಇಲಾಖೆಗೆ ಸೇರಿದ್ದರು. ರಫ್ಹಾ ಪಟ್ಟಣದ ಯೂರೋಪಿಯನ್ ಆಸ್ಪತ್ರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಖಾನ್ ಯೂನಿಸ್ ನಲ್ಲಿ ಅವರ ವಾಹನದ ಮೇಲೆ ಗುಂಡಿನ ದಾಳಿ ನಡೆದಿದ್ದು ಈ ವೇಳೆ ಕೊನೆಯುಸಿರೆಳೆದಿದ್ದಾರೆ. ಯುನ್ ಡಿಎಸ್ಎಸ್ ನ ಮತ್ತೊಬ್ಬ ಸಿಬ್ಬಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ವಿಶ್ವಸಂಸ್ಥೆಯ ವಾಹನ ಎಂದು ಸ್ಪಷ್ಟವಾಗಿ ಫಲಕವಿದ್ದರೂ, ಅದರ ಮೇಲೆ ದಾಳಿ ನಡೆಸಿದ್ದು ಯಾರು ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ಕಳೆದ ವರ್ಷದ ಅಕ್ಟೋಬರ್ 7ರಂದು ಆರಂಭವಾದ ಹಮಾಸ್-ಇಸ್ರೇಲ್ ಸಂಘರ್ಷದಿಂದ ಮೃತಪಟ್ಟ ಜಾಗತಿಕ ಸಂಸ್ಥೆಯ ಮೊಟ್ಟಮೊದಲ ಅಂತರಾಷ್ಟ್ರೀಯ ಯೋಧನ ಸಾವು ಇದಾಗಿದೆ. ಈ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರಸ್, ಈ…
ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ಭಾರತಕ್ಕೆ ಆಗಮಿಸುವುದನ್ನೇ ಪೊಲೀಸರು ಕಾದು ಕುಳಿತಿದ್ದಾರೆ. ನಿನ್ನೆ ಮಧ್ಯಾಹ್ನ 12.20 ಕ್ಕೆ ಅಲ್ಲಿಂದ ವಿಮಾನವೊಂದರಿಂದ ಬೆಂಗಳೂರು ಬರಬೇಕಿತ್ತು, ಅವರು ಟಿಕೆಟ್ ತೆಗೆದುಕೊಂಡ ಬಗ್ಗೆ ನಗರದ ಪೊಲೀಸರಿಗೆ ಖಚಿತ ಮಾಹಿತಿ ಇತ್ತು. ಆದರೆ ಕೊನೆಕ್ಷಣದಲ್ಲಿ ಅವರು ಆ ವಿಮಾನ ಹತ್ತದೆ ಅಲ್ಲೇ ಉಳಿದುಬಿಟ್ಟಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್ ಆಗಿ ಅವರು ಹೊರಬರುತ್ತಿದ್ದಂತೆಯೇ ದಸ್ತಗಿರಿ ಮಾಡಬೇಕೆಂದು ಕಾಯುತ್ತಿದ್ದ ಪೊಲೀಸರಿಗೆ ನಿರಾಶೆ ಎದುರಾಯಿತು. ಅವರು ವಾಪಸ್ಸು ಬರಲಿರುವ ಬಗ್ಗೆ ದಟ್ಟ ವದಂತಿಗಳು ಹರಡಿದ್ದು ಸುಳ್ಳಲ್ಲ. ಅವರು ಜರ್ಮನಿಯಲ್ಲಿರುವುದು ಖಚಿತವಾಗಿದೆ. ಆದರೆ, ಇಂಟರ್ ಪೋಲ್ ಏನು ಮಾಡುತ್ತಿದೆ ಅನ್ನುವ ಪ್ರಶ್ನೆ ಉದ್ಭವಿಸುತ್ತದೆ. ರಾಜ್ಯ ಸರ್ಕಾರ ಪ್ರಜ್ವಲ್ ವಿರುದ್ಧ ಬ್ಲೂ ಕಾರ್ನರ್ ನೋಟೀಸ್ ಜಾರಿ ಮಾಡಲಾಗಿದೆ ಎಂದು 10-12 ದಿನಗಳಿಂದ ಹೇಳುತ್ತಿದೆ. ಕುಖ್ಯಾತ ಅಪರಾಧಿಗಳನ್ನು ಕ್ಷಣಾರ್ಧದಲ್ಲಿ ಟ್ರೇಸ್ ಮಾಡಿ ವಶಕ್ಕೆ ಪಡೆಯುವ ಇಂಟರ್ ಪೋಲ್ ಅಧಿಕಾರಿಗಳಿಗೆ ಭಾರತದ ಒಬ್ಬ…
ಸರ್ಕಾರಿ ಜಾಗದ ವಿಚಾರಕ್ಕೆ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದ್ದು ರಾತ್ರೋ ರಾತ್ರಿ 50 ಮಂದಿಯ ಮೇಲೆ ದೂರು ದಾಖಲಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸರ್ಕಾರಿ ಜಾಗ ವಿವಾದ ರಾತ್ರಿಯಿಡೀ ವಿಕೋಪಕ್ಕೆ ತಿರುಗಿತ್ತು. ಇನ್ನು ಸ್ಥಳಕ್ಕೆ ಆಗಮಿಸಿದ ಪೊಲೀಸರು ಎರಡು ಗುಂಪುಗಳನ್ನು ಸಮಾಧಾನ ಪಡಿಸಲು ಯತ್ನಿಸಿದ್ರು. ಘಟನೆ ಸಂಬಂಧ 50 ಮಂದಿಯ ಮೇಲೆ ದೂರು ದಾಖಲಾಗಿದೆ. ಸರ್ಕಾರಿ ಜಾಗದಲ್ಲಿ ದೇವಾಲಯ ಕಟ್ಟಲು ಲಂಬಾಣಿ ಜನಾಂಗದವರು ಜಾಗಕ್ಕೆ ತಂತಿ ಬೇಲಿ ಹಾಕಿದ್ದರು. ಇದನ್ನು ವಿರೋಧಿಸಿ ಸಮುದಾಯ ಭವನ ಕಟ್ಟಲು ಇನ್ನೊಂದು ಸಮುದಾಯ ಪಟ್ಟು ಹಿಡಿದಿತ್ತು. ಈ ಗಲಾಟೆ ನಡುವೆಯೇ ಗ್ರಾಮದ ಕೆಲವರು ತಂತಿ ಬೇಲಿ ಕಿತ್ತು ಬಿಸಾಕಿದ್ದರು. ಹೀಗೆ ಎರಡೂ ಸಮುದಾಯದವರ ನಡುವೆ ಗಲಾಟೆ ತಾರಕಕ್ಕೇರಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ದೇವಾಲಯದಲ್ಲಿ ಹುಂಡಿ ಒಡೆದಾಗ ಸಿಕ್ಕ ಹತ್ತಾರು ಪತ್ರಗಳ ಪೈಕಿ, ಒಂದು ಪತ್ರದಲ್ಲಿ ಮಹಿಳೆಯೋರ್ವರು ಬರೆದ ಡೆತ್ ನೋಟ್ ಸಿಕ್ಕಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ, ಈ ಘಟನೆ ಮೈಸೂರಿನ ಶ್ರೀಕಂಠೇಶ್ವರ ದೇಗುಲದಲ್ಲಿ ಪತ್ತೆಯಾಗಿದೆ. “ಹೇ ಭಗವಂತ! ಮಿತಿ ಮೀರಿದ ಸಾಲದಿಂದ ಜೀವನದಲ್ಲಿ ಬಹಳ ಕಷ್ಟ ಅನುಭವಿಸಿದ್ದೇನೆ. ಸಣ್ಣ ಪುಟ್ಟ ವಿಷ ಯಕ್ಕೂ ಗಂಡ ಜಗಳವಾಡುತ್ತಾರೆ. ನನಗೆ ಬದುಕಲು ಸಾಧ್ಯವಾಗುತ್ತಿಲ್ಲ. ಶನಿದೇವ ನನ್ನ ಸಾವಿಗೆ ಯಾರೂ ಕಾರಣರಲ್ಲ…’ ಇಂಥದೊಂದು ಪತ್ರ ನಂಜನಗೂಡು ಶ್ರೀಕಂಠೇಶ್ವರ ದೇಗುಲದ ಹುಂಡಿ ಎಣಿಕೆಯ ವೇಳೆ ಬೆಳಕಿಗೆ ಬಂದಿದೆ. ವಿಪರೀತ ಸಾಲ, ಬಡ್ಡಿ, ಬ್ಯಾಂಕಿನ ಸಾಲ ಕಟ್ಟಲಾಗುತ್ತಿಲ್ಲ. ಸಾಲದ್ದಕ್ಕೆ ನನ್ನೆಲ್ಲಾ ಒಡವೆಯನ್ನು ಗಿರವಿ ಇಟ್ಟಿರುವೆ. ನನ್ನ ಬಳಿ ಹಣ ಇಲ್ಲದ್ದಕ್ಕೆ ಗಂಡ ಸಣ್ಣ ವಿಚಾರಕ್ಕೂ ಜಗಳವಾಡುತ್ತಾರೆ. ಸಾಲಕ್ಕಾಗಿ ಬ್ಯಾಂಕಿಗೆ ಅರ್ಜಿ ಸಲ್ಲಿಸಿದ್ದೆ, ಅದೂ ಆಗಲಿಲ್ಲ. ನಿತ್ಯವೂ ನೋವು ಅನುಭವಿಸುತ್ತಿರುವೆ. ನಿತ್ಯವೂ ಸಣ್ಣ ವಿಚಾರಕ್ಕೂ ಜಗಳ ನಡೆಯುತ್ತೆ. ನನಗೆ ಈ ಜೀವನ ಬೇಡ ಎಂದು ತೀರ್ಮಾನಿಸಿದ್ದೇನೆ ಎಂದು ಪತ್ರದಲ್ಲಿ ಬರೆಯಲಾಗಿದೆ. ಹಲವು ಭಕ್ತರು…