Subscribe to Updates
Get the latest creative news from FooBar about art, design and business.
- ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
- ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್ ಸೆಟ್ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
- ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
- ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
- ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ: ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
- ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
- ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
Author: admin
ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟಿ ಶಮಿತಾ ಶೆಟ್ಟಿ ಅವರು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಶೇರ್ ಮಾಡಿಕೊಂಡ ವೀಡಿಯೋದಲ್ಲಿ ನಟಿ ಶಮಿತಾ ಶೆಟ್ಟಿ ಅವರು ಎಂಡೊಮೆಟ್ರಿಯೊಸಿಸ್ ಸಮಸ್ಯೆಯಿಂದ ಬಳಲುತ್ತಿದ್ದಾರಂತೆ. ಅದಕ್ಕಾಗಿ ಸೂಕ್ತವಾದ ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ. ಎಲ್ಲಾ ಮಹಿಳೆಯರಿಗೂ ಈ ಬಗ್ಗೆ ಜಾಗೃತರಾಗಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ ಅಂತ ಸಲಹೆ ನೀಡಿದ್ದಾರೆ. ಆಸ್ಪತ್ರೆಯ ಹಾಸಿಗೆಯಲ್ಲಿ ಕುಳಿತು ವೀಡಿಯೊ ಶೇರ್ ಮಾಡಿಕೊಂಡಿದ್ದಾರೆ. ಶಮಿತಾ ಮಾತನಾಡಿ ಮಹಿಳೆಯರೇ, ದಯವಿಟ್ಟು ಎಂಡೊಮೆಟ್ರಿಯೊಸಿಸ್ ಬಗ್ಗೆ ಸುಮಾರು 40% ಮಹಿಳೆಯರು ಎಂಡೊಮೆಟ್ರಿಯೊಸಿಸ್ ನಿಂದ ಬಳಲುತ್ತಿದ್ದಾರೆ. ನಮ್ಮಲ್ಲಿ ಹೆಚ್ಚಿನವರಿಗೆ ಈ ರೋಗದ ಬಗ್ಗೆ ತಿಳಿದಿಲ್ಲ ನನ್ನ ನೋವಿನ ಮೂಲ ಕಾರಣವನ್ನು ಕಂಡುಕೊಳ್ಳಲು ಸಹಾಯ ಮಾಡಿದ ನನ್ನ ವೈದ್ಯರಾದ ಗೈನಾಕ್ ಡಾ ನೀತಾ ವಾರ್ಟಿ ಮತ್ತು ನನ್ನ ಜಿಪಿ ಡಾ ಸುನೀತಾ ಬ್ಯಾನರ್ಜಿ ಇಬ್ಬರಿಗೂ ನಾನು ಧನ್ಯವಾದ ಎಂದಿದ್ದಾರೆ. ಈಗ ನಾನು ಈ ರೋಗವನ್ನು ಶಸ್ತ್ರಚಿಕಿತ್ಸೆಯಿಂದ ತೆಗೆದುಹಾಕಿದ್ದೇನೆ…
ನವ ವಿವಾಹಿತ ಜೋಡಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಹೊರ ಭಾಗದ ಶ್ರೀ ಸಿದ್ದೇಶ್ವರ ಬಡಾವಣೆಯ ಮನೆಯೊಂದರಲ್ಲಿ ನಡೆದಿದೆ. ಮನೋಜಕುಮಾರ ಪೋಳ(30), ರಾಖಿ(23) ಮೃತ ದುರ್ದೈವಿಗಳು ಎನ್ನಲಾಗಿದೆ. ಕಳೆದ ನಾಲ್ಕು ತಿಂಗಳ ಹಿಂದೆ ಪರಸ್ಪರ ಪ್ರೀತಿಸಿ ಕುಟುಂಬದ ಒಪ್ಪಿಗೆ ಮೇರೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು ಎನ್ನಲಾಗಿದೆ. ತಡರಾತ್ರಿ ಮನೆಯಲ್ಲಿ ದಂಪತಿಗಳು ಇಬ್ಬರು ಮಾತ್ರ ಇದ್ದು, ಈ ವೇಳೆಯೇ ನವ ಜೋಡಿ ಆತ್ಮಹತ್ಯೆಗೆ ಶರಣಾಗಿದೆ ಎನ್ನಲಾಗಿದೆ. ಇಬ್ಬರ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ಮನೋಜಕುಮಾರ ತಾಯಿ ಭಾರತಿ ಮಗಳ ಊರಿಗೆ ಹೋಗಿದ್ದು, ಇಂದು ಬೆಳಗ್ಗೆ ಮನೆಯವರು ಮನೆಗೆ ವಾಪಸ್ ಬಂದ ವೇಳೆ ಘಟನೆ ಬೆಳಕಿಗೆ ಬಂದಿದೆ. ಆದರೆ ಇಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಜಲನಗರ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಪೊಲೀಸರ ತನಿಖೆ ಬಳಿಕ ಸತ್ಯಾಂಶ ತಿಳಿದು ಬರಬೇಕಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಬೆಂಗಳೂರು: ಕಳೆದ 20 ವರ್ಷಗಳಿಂದ ಮನೆಗಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ ಕಳ್ಳನನ್ನು ಸಿಸಿಬಿ ಸಂಘಟಿತ ಅಪರಾಧ ದಳ ಸೆರೆ ಹಿಡಿದಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರಕಾಶ್ ಅಲಿಯಾಸ್ ಬಾಲಾಜಿ (44) ಬಂಧಿತ ಎಂದು ಗುರುತಿಸಲಾಗಿದ್ದು, ನಿವೃತ್ತ ಹೆಡ್ ಕಾನ್ಸ್ಟೇಬಲ್ ಒಬ್ಬರ ಮಗಳನ್ನೇ ಪ್ರೀತಿಸಿ ಮದುವೆಯಾಗಿದ್ದ ಈತ ಹಿಂದೆಗೂ ಜೈಲುವಾಸ ಅನುಭವಿಸಿದ್ದ ಎನ್ನಲಾಗಿದೆ. ಇತ್ತೀಚೆಗೆ ಬಂಡೆಪಾಳ್ಯ ವ್ಯಾಪ್ತಿಯ ಮನೆಯೊಂದರಲ್ಲಿ ನಕಲಿ ಕೀ ಬಳಸಿ ಚಿನ್ನಾಭರಣ ದೋಚಿದ್ದ ಪ್ರಕರಣದ ತನಿಖೆ ಸಿಸಿಬಿಗೆ ವರ್ಗಾವಣೆಯಾಗಿತ್ತು. ಹಲವು ಆಯಾಮಗಳಲ್ಲಿ ತನಿಖೆ ನಡೆಸಿದಾಗ ರಾಜಧಾನಿಯ ಮೋಸ್ಟ್ ವಾಂಟೆಡ್ ಮನೆಗಳ್ಳ ಪ್ರಕಾಶನ ಕೈವಾಡವಿರುವುದು ಗೊತ್ತಾಗಿತ್ತು. ಹೀಗಾಗಿ, ತಲೆಮರೆಸಿಕೊಂಡಿದ್ದ ಪ್ರಕಾಶನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ನಗರದಲ್ಲಿ ಆರು ಮನೆಕಳವು ಪ್ರಕರಣಗಳು ಬೆಳಕಿಗೆ ಬಂದಿವೆ. ಆರೋಪಿ ದೋಚಿದ್ದ 27 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದೂವರೆ ತಿಂಗಳ ಹಿಂದೆ ಜೈಲಿಂದ ಬಿಡುಗಡೆಯಾಗಿದ್ದ ಪ್ರಕಾಧಿಶ್, ಆರು ಮನೆ ದೋಚುವಲ್ಲಿ ಸಫಲನಾಗಿದ್ದ. ಕದ್ದ ಆಭರಣಗಳನ್ನು ಅಡವಿಟ್ಟು ಮೋಜು ಮಸ್ತಿ, ದುಶ್ಚಟಗಳಿಗೆ…
ವಿಜಯಪುರ: ಮುಂಗಾರು ವೈಫಲ್ಯ ಹಾಗೂ ಮಳೆ ಕೊರತೆಯಿಂದಾಗಿ ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಸರ್ಕಾರ ಬರಪೀಡಿತ ತಾಲ್ಲೂಕು ಎಂದು ಘೋಷಿಸಿದ್ದು, ಜಿಲ್ಲೆಯ ಬೆಳೆಹಾನಿಯಾದ ರೈತರ ಖಾತೆಗಳಿಗೆ ನೇರವಾಗಿ ಡಿಬಿಟಿ ಮೂಲಕ ಪರಿಹಾರ ಹಣ ಜಮೆ ಮಾಡಲಾಗುತ್ತಿದ್ದು, ಜಿಲ್ಲೆಯ 2,50,063 ರೈತರಿಗೆ ₹360.10 ಕೋಟಿ ಹಣವನ್ನು ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನ ಜಮೆಯಾಗಿರುವ ಕುರಿತು https://parihara.karnataka.gov.in/service92/ ಜಾಲತಾಣದಿಂದ ಪರಿಶೀಲಿಸಬಹುದಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ ಪಡೆದುಕೊಳ್ಳಬಹುದಾಗಿದೆ. ಸಹಾಯವಾಣಿ: ಜಿಲ್ಲಾಧಿಕಾರಿಗಳ ಕಚೇರಿ ವಿಜಯಪುರ 08352- 221261 ಹಾಗೂ ಟೋಲ್ ಫ್ರೀ ಸಂಖ್ಯೆ 1077, ಉಪ ವಿಭಾಗಾಧಿಕಾರಿಗಳು ವಿಜಯಪುರ 083521- 295286, ಉಪವಿಭಾಗಾಧಿಕಾರಿಗಳು ಇಂಡಿ 08359- 225003, ಉಪನಿರ್ದೇಶಕರು ತೋಟಗಾರಿಕೆ ಇಲಾಖೆ, ವಿಜಯಪುರ 08352- 250244 ಸಂಪರ್ಕಿಸಬಹುದಾಗಿದೆ. ಜೊತೆಗೆ ವಿಜಯಪುರ ತಹಶೀಲ್ದಾರ್ ಮೊ. 08352- 355731, ಬಬಲೇಶ್ವರ ತಹಶೀಲ್ದಾರ ಮೊ.8310504205, 9686073390, ತಿಕೋಟಾ ತಹಶೀಲ್ದಾರ್ ಮೊ.87624 80811, 94805 32696,…
ಬೆಂಗಳೂರು: ಎಸ್ಐಟಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರವಾಗಿ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಐಟಿ ನಡೆಸುವ ಪಿನ್ ಟು ಪಿನ್ ತನಿಖೆಯ ಮಾಹಿತಿ ಕಾಂಗ್ರೆಸ್ ಗೆ ಹೋಗ್ತಿದೆ. ಅದಕ್ಕಾಗಿಯೇ ಬಿಜೆಪಿ ಕಡೆ ತಿರುಗಿಸ್ತಿದ್ದಾರೆ. ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕಾದರೆ ಸಿಬಿಐಗೆ ತನಿಖೆ ವಹಿಸಲಿ ಎಂದು ಆಗ್ರಹಿಸಿದರು. ಹಾಸನದಲ್ಲಿ ಹಲವು ಕಡೆ ಎಸ್ಐಟಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್ ನವ್ರಿಗೆ ತಮ್ಮ ಮೇಲೆ ಬಂದ ಆಪಾದನೆಯಿಂದ ಇರಿಸುಮುರಿಸು ಆಗಿದೆ. ಎಸ್ಐಟಿ ಅಧಿಕಾರಿಗಳು ಪಕ್ಷಪಾತಿ ಧೋರಣೆ ತೋರಿಸ್ತಿದ್ದಾರೆ. ಇದರ ಹಿಂದೆ ದೊಡ್ಡ ತಿಮಿಂಗಿಲ ಇದೆ ಅಂತ ಹೆಚ್ಡಿಕೆ ಆರೋಪ ಮಾಡಿದ್ದಾರೆ. ಎಲ್ಲೋ ಒಂದು ಕಡೆ ಇದನ್ನು ಬಿಜೆಪಿ ಕಡೆ ತಿರುಗಿಸಲು ಸಂಚು ನಡೆದಿದೆ ಎಂದರು. ಒಕ್ಕಲಿಗ ಸಮುದಾಯ ತಮ್ಮ ವಿರುದ್ಧ ತಿರುಗಿ ಬೀಳುವ ಭೀತಿಯಿಂದ ಕಾಂಗ್ರೆಸ್ ನಾಯಕರು ಬಿಜೆಪಿ ಮೇಲೆ ಆರೋಪ ಮಾಡ್ತಿದೆ. ಪೆನ್ಡ್ರೈವ್ ಹಂಚಿದವರೇ ಕಾಂಗ್ರೆಸ್ ನವ್ರು, ಇದರಲ್ಲಿ ಎರಡು ಮಾತಿಲ್ಲ. ಈಗ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು 62ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಶುಭ ಹಾರೈಸಿದರು. “ನನ್ನ ಆತ್ಮೀಯ ಸ್ನೇಹಿತ ಮತ್ತು ಸಹೋದ್ಯೋಗಿಗೆ ಜನ್ಮದಿನದ ಶುಭಾಶಯಗಳು. ನಿಮ್ಮ ಸಮರ್ಪಣೆ, ಕೌಶಲ್ಯಗಳು ಮತ್ತು ನಮ್ಮ ಅಚಲವಾದ ಬದ್ಧತೆ ಯಾವಾಗಲೂ ಎದ್ದು ಕಾಣುತ್ತದೆ. ನೀವು ಅದೇ ಉತ್ಸಾಹ ಮತ್ತು ಶಕ್ತಿಯೊಂದಿಗೆ ಮುನ್ನಡೆಸುವುದನ್ನು ಮುಂದುವರಿಸಲಿ. ನಿಮಗೆ ಯಶಸ್ಸು ಮತ್ತು ಸಂತೋಷದಿಂದ ತುಂಬಿದ ವರ್ಷವನ್ನು ಹಾರೈಸುತ್ತೇನೆ” ಎಂದು ಸಾಮಾಜಿಕ ಜಾಲತಾಣದಲ್ಲಿ ಸಿದ್ದರಾಮಯ್ಯ ಅವರು ಡಿಕೆಶಿ ಹೆಗಲ ಮೇಲೆ ಕೈ ಹಾಕಿರುವ ಫೋಟೋವನ್ನು ಅಪ್ಲೋಡ್ ಮಾಡಿ ಶುಭಾಶಯ ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಪಾವಗಡ: ಪ್ರಸಕ್ತ ಸಾಲಿಗೆ ಎಸ್ ಎಸ್ ಎಲ್ ಸಿ, ಸಿಬಿಎಸ್ ಸಿ ಪರೀಕ್ಷೆ ಫಲಿಶಾಂಶ ಪ್ರಕಟವಾಗಿದ್ದು ಸತತ ಮೂರನೇ ಭಾರಿಗೆ ಪಟ್ಡಣದ ಪ್ರತಿಷ್ಟಿತ ಶ್ರೀ ಶಾಲಾ ಇಂಟರ್ ನ್ಯಾಷನಲ್ ಸ್ಕೂಲ್ ಗೆ ಶೇ. ನೂರರಷ್ಟು ಫಲಿತಾಂಶ ಲಭ್ಯವಾಗಿದೆ. ಪಟ್ಟಣದ ಚಳ್ಳಕೆರೆ ರಸ್ತೆ ಮಾರ್ಗದ ಪಕ್ಕದಲ್ಲಿರುವ ಶ್ರೀ ಶಾಲಾ ಇಂಟರ್ ನ್ಯಾಷನಲ್ ಸ್ಕೂಲ್ ಗೆ ಈ ಭಾರಿಯು ಶೇ. 100ರಷ್ಟು ಫಲಿತಾಂಶ ಲಭಿಸಿದೆ. ಜೆ.ಆಕರ್ಷಣಿ ಶೇ.90, ಹಾಗೂ ದ್ವಿತೀಯ ಸ್ಥಾನ ಶಾಲಿನಿ ಶೇ.86.6 ಹಾಗೂ ತೃತೀಯ ಸ್ಥಾನ ದೀಕ್ಷಿತ್ ಶೇ.88.2ರಷ್ಟು ಅಂಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ನಗರದ ಪ್ರತಿಷ್ಟಿತ ಶಾಲೆಯಾದ ಶ್ರೀ ಶಾಲಾ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಪ್ರಸಕ್ತ ಸಾಲಿಗೆ 36 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 8ಮಂದಿ ಡಿಸ್ಟೆಂಕ್ಷನ್ 20ಮಂದಿ ಪ್ರಥಮ ಶ್ರೇಣಿ ಹಾಗೂ 8ಮಂದಿ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಮೂರನೇ ಭಾರಿಗೂ ಸಿಬಿಎಸ್ ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಶಾಲೆಗೆ ಲಭಿಸಿದೆ. ತಾಲೂಕಿನಲ್ಲಿಯೇ…
ತಮಿಳುನಾಡು: ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯಲ್ಲಿ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರು ಅಪ್ರಾಪ್ತರು ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ. ಇಬ್ಬರು ಬಾಲಕಿಯರು 13 ಮತ್ತು 17 ವರ್ಷ ವಯಸ್ಸಿನವರಾಗಿದ್ದು, 17 ವರ್ಷದ ಬಾಲಕಿ ಗರ್ಭಿಣಿಯಾಗಿದ್ದು, ಆಕೆಯ ಸಂಬಂಧಿಕರಿಗೆ ಮಾಹಿತಿ ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಬಾಲಕಿ ಶಾಲೆಯನ್ನು ತೊರೆದು ಕೆಲಸಕ್ಕಾಗಿ ಹುಡುಕುತ್ತಿದ್ದಾಗ 15 ವರ್ಷದ ಬಾಲಕ ಅವಳೊಂದಿಗೆ ಸ್ನೇಹ ಬೆಳೆಸಿದ್ದಾನೆ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದ್ದು, ಆಕೆಗೆ ಕೆಲಸ ಕೊಡಿಸುವ ನೆಪದಲ್ಲಿ, 15 ವರ್ಷದ ಬಾಲಕ ಆಕೆಯನ್ನು ತನ್ನ ಇಬ್ಬರು ಸ್ನೇಹಿತರ ಬಳಿ ಕರೆದೊಯ್ದಿದ್ದಾನೆ, ಅವರು ಜನವರಿಯಿಂದ ಅನೇಕ ಬಾರಿ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ. ಬಾಲಕರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಸಾಲ ತೀರಿಸಲು ಮನೆ ಮಾಲಕಿಯನ್ನೇ ಹತ್ಯೆ ಮಾಡಿದ್ದ ಯುವತಿಯನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಮೋನಿಕಾ (24) ಬಂಧಿತ ಆರೋಪಿಯಾಗಿದ್ದಾರೆ. ಘಟನೆಯ ಹಿನ್ನಲೆ: ಮೇ 10 ರಂದು ಕೆಂಗೇರಿ ಠಾಣಾ ವ್ಯಾಪ್ತಿಯ ಕೋನಸಂದ್ರದಲ್ಲಿ ಒಂಟಿ ಮಹಿಳೆಯ ಕೊಲೆ ನಡೆದಿತ್ತು. ಕಂಪನಿಯೊಂದರಲ್ಲಿ ಕಳೆದ ಒಂದು ವರ್ಷದಿಂದ ಡೇಟಾ ಎಂಟ್ರಿ ಕೆಲಸ ಮಾಡಿದ್ದ ಮೋನಿಕಾ ಮೂಲತಃ ಕೋಲಾರ ಜಿಲ್ಲೆಯವಳಾಗಿದ್ದು, ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದಳು. ಗುರುಮೂರ್ತಿ ಎಂಬುವರ ಮನೆಯಲ್ಲಿ ಮೂರು ತಿಂಗಳ ಹಿಂದಷ್ಟೇ ಬಾಡಿಗೆಗೆ ಬಂದಿದ್ದಳು. ಈ ವೇಳೆ ಆಕೆ ಪ್ರಿಯಕರನನ್ನೇ ತನ್ನ ಗಂಡ ಎಂದು ಹೇಳಿ ಬಾಡಿಗೆ ಮನೆ ಗಿಟ್ಟಿಸಿದ್ದಳು. ಆದರೆ ಒಬ್ಬಂಟಿಯಾಗಿ ವಾಸವಿದ್ದ ಮೋನಿಕಾ ಮನೆಗೆ ಪ್ರಿಯಕರ ಆಗಾಗ ಬಂದು ಹೋಗುತ್ತಿದ್ದ. ಇತ್ತ ಮೋನಿಕಾ ಶೋಕಿಗಾಗಿ ವಿಪರೀತ ಕೈಸಾಲ ಮಾಡಿಕೊಂಡಿದ್ದಳು. ಜೊತೆ ಪ್ರಿಯಕರನಿಗೆ ಟಾಟಾ ಏಸ್ ವಾಹನ ಖರೀದಿಸಲು ಹಣ ಬೇಕಾಗಿತ್ತು. ಹೀಗಾಗಿ ಮನೆ ಮಾಲಕಿ ದಿವ್ಯಾ ಮೈಮೇಲಿದ್ದ ಚಿನ್ನದ ಒಡವೆ ಮೇಲೆ ಮೋನಿಕಾ ಕಣ್ಣು ಬಿದ್ದಿತ್ತು. ದಿವ್ಯ ಪತಿ ಗುರುಮೂರ್ತಿ…
ನವದೆಹಲಿ: 370 ನೇ ವಿಧಿಯನ್ನ ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಮತದಾನದ ಶೇಕಡಾವಾರು ಫಲಿತಾಂಶಗಳನ್ನ ತೋರಿಸುತ್ತಿದೆ ಮತ್ತು ಪ್ರಜಾಪ್ರಭುತ್ವದಲ್ಲಿ ಜನರ ನಂಬಿಕೆಯನ್ನ ಹೆಚ್ಚಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸಾರ್ವತ್ರಿಕ ಚುನಾವಣೆಯ 4ನೇ ಹಂತದ ಮತದಾನ ನಡೆದ ಶ್ರೀನಗರ ಲೋಕಸಭಾ ಕ್ಷೇತ್ರದಲ್ಲಿ ಸುಮಾರು 38 ಪ್ರತಿಶತದಷ್ಟು ಮತದಾನ ದಾಖಲಾದ ಒಂದು ದಿನದ ನಂತರ ಗೃಹ ಸಚಿವರ ಹೇಳಿಕೆ ಬಂದಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಶ್ರೀನಗರದಲ್ಲಿ ಶೇ.14.43, 2014ರಲ್ಲಿ ಶೇ.25.86, 2009ರಲ್ಲಿ ಶೇ.25.55 ಹಾಗೂ 2004ರಲ್ಲಿ ಶೇ.18.57ರಷ್ಟು ಮತದಾನವಾಗಿತ್ತು. “370 ನೇ ವಿಧಿಯನ್ನು ರದ್ದುಗೊಳಿಸುವ ಮೋದಿ ಸರ್ಕಾರದ ನಿರ್ಧಾರವು ಮತದಾನದ ಶೇಕಡಾವಾರು ಫಲಿತಾಂಶಗಳನ್ನ ತೋರಿಸುತ್ತಿದೆ. ಇದು ಪ್ರಜಾಪ್ರಭುತ್ವದಲ್ಲಿ ಜನರ ನಂಬಿಕೆಯನ್ನ ಹೆಚ್ಚಿಸಿದೆ ಮತ್ತು ಅದರ ಬೇರುಗಳು ಜಮ್ಮು ಮತ್ತು ಕಾಶ್ಮೀರದಲ್ಲಿ ಆಳವಾಗಿವೆ” ಎಂದು ಅವರು ಬರೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…