Subscribe to Updates
Get the latest creative news from FooBar about art, design and business.
- ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
- ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್ ಸೆಟ್ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
- ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
- ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
- ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ: ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
- ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
- ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
Author: admin
ಬೆಂಗಳೂರು: ಪರೀಕ್ಷೆಗೆ ತಡವಾಗಿ ಬಂದಿದ್ದಕ್ಕೆ ಪೇಪರ್ ಬರೆಯಲು ಅನುಮತಿ ಸಿಗದ ಕಾರಣ ಮನನೊಂದ ಇಂಜಿನಿಯರಿಂಗ್ ವಿದ್ಯಾರ್ಥಿ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕರಸಾಲ ರಾಹುಲ್(21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದಾನೆ. ಎಲೆಕ್ಟ್ರಾನಿಕ್ ಸಿಟಿಯ ಪಿಇಎಸ್ ಕಾಲೇಜಿನಲ್ಲಿ ಇಂಜಿನಿಯರಿಂಗ್ 5ನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿದ್ದ ಈತನಿಗೆ ತಡವಾಗಿ ಬಂದ ಹಿನ್ನೆಲೆ ಪರೀಕ್ಷಗೆ ಕೂರಲು ಅನುಮತಿ ನೀಡದೇ ನಿಂದಿಸಿದ್ದು ಕಾಲೇಜಿನಿಂದ ಹೊರಹಾಕಿದ್ದಾರೆ ಎನ್ನಲಾಗಿದೆ. ಇದರಿಂದ ಮನನೊಂದ ಯುವಕ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆಗೆ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಕಾಲೇಜು ಆಡಳಿತ ಮಂಡಳಿ ಅವರ ವಿರುದ್ಧ ಪೋಷಕರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಾಲಿವುಡ್ನ ಖ್ಯಾತ ನಟ ಟೊವಿನೋ ಥಾಮಸ್ ಮತ್ತು ನಿರ್ದೇಶಕ ಸನಲ್ ಕುಮಾರ್ ಶಶಿಧರನ್ ನಡುವಿನ ಜಗಳ ದಿನಕ್ಕೊಂದು ರೀತಿಯಲ್ಲಿ ತಿರುವು ಪಡೆದುಕೊಳ್ಳುತ್ತಿದೆ. ಸನಲ್ ಕುಮಾರ್ ಶಶಿಧರನ್ ನಿರ್ದೇಶನದಲ್ಲಿ ‘ವಳಕ್ಕು’ ಸಿನಿಮಾ ಮೂಡಿಬಂದಿದ್ದು, ಚಿತ್ರದ ಪ್ರಮುಖ ಪಾತ್ರದಲ್ಲಿ ಟೊವಿನೋ ಥಾಮಸ್ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಟೊವಿನೋ ಬಂಡವಾಳ ಕೂಡ ಹೂಡಿದ್ದಾರೆ. ಸಿನಿಮಾದ ಬಿಡುಗಡೆಗೆ ಸಂಬಂಧಿಸಿದಂತೆ ಟೊವಿನೋ ಥಾಮಸ್ ಮೂಗು ತೂರಿಸುತ್ತಿದ್ದಾರೆ ಎಂದು ಈ ಮೊದಲು ಸನಲ್ ಕುಮಾರ್ ಶಶಿಧರನ್ ಆರೋಪಿಸಿದ್ದರು. ಈ ಸಿನಿಮಾ ಸಿದ್ಧವಾಗಿ ಬಹಳ ಸಮಯ ಕಳೆದಿದೆ. ಆದರೆ ಹೀರೋ ಮತ್ತು ನಿರ್ದೇಶಕನ ನಡುವೆ ಕೆಲವು ವಿಚಾರಗಳು ಇತ್ಯರ್ಥ ಆಗದ ಕಾರಣ ಇದರ ಬಿಡುಗಡೆ ತಡವಾಗಿದೆ. ಇದರಿಂದ ನಿರ್ದೇಶಕ ಸನಲ್ ಕುಮಾರ್ ಶಶಿಧರನ್ ರೋಸಿ ಹೋಗಿದ್ದಾರೆ. ಆದರೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗುವುದಕ್ಕೂ ಮುನ್ನವೇ ಆನ್ ಲೈನ್ ನಲ್ಲಿ ಈ ಸಿನಿಮಾವನ್ನು ಸನಲ್ ಕುಮಾರ್ ಶಶಿಧರನ್ ಲೀಕ್ ಮಾಡಿದ್ದಾರೆ. ‘ವಳಕ್ಕು’ ಸಿನಿಮಾದ ಬಿಡುಗಡೆ ವಿಚಾರವಾಗಿ ಟೊವಿನೋ ಥಾಮಸ್ ಮತ್ತು ಸನಲ್ ಕುಮಾರ್ ಶಶಿಧರನ್ ನಡುವೆ…
ಚಿಕ್ಕಮಗಳೂರು ಹದಿನೈದು ಮೆಟ್ರಿಕ್ ಟನ್ ಗಿಂತ ಅಧಿಕ ಬಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ಜಿಲ್ಲೆಯಲ್ಲಿ ನಿಷೇಧಿಸುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಶಾಸಕ ಎಚ್ ಡಿ ತಮ್ಮಯ್ಯ ಅವರನ್ನು ಒತ್ತಾಯಿಸಿದೆ. ಶಾಸಕರನ್ನು ನಗರದಲ್ಲಿ ಮಂಗಳವಾರ ಭೇಟಿ ಮಾಡಿದ ಸಂಘಟನೆಯ ಪದಾಧಿಕಾರಿಗಳು ಈ ಸಂಬಂಧ ಮನವಿ ಸಲ್ಲಿಸಿದರು. ೧೫ ಮೆಟ್ರಿ ಟನ್ ಗಿಂತ ಅಧಿಕ ಭಾರ ಹೊತ್ತ ವಾಹನಗಳು ಹಲವಾರು ವರ್ಷಗಳಿಂದ ಜಿಲ್ಲೆಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ಸಂಚರಿಸುತ್ತಿವೆ ಇದರಿಂದಾಗಿ ರಸ್ತೆಗಳು ಗುಂಡಿ ಬಿದ್ದು ಸಾರ್ವಜನಿಕರು ಮತ್ತು ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿದೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಆರೋಪಿಸಿದರು. ಅಧಿಕ ಭಾರ ಹೊತ್ತು ಸಾಗುವ ವಾಹನಗಳ ಸಂಚಾರವನ್ನು ತಡೆಗಟ್ಟುವಂತೆ ಹಲವು ಬಾರಿ ಸಂಬಂಧಪಟ್ಟ ಇಲಾಖೆಗಳಿಗೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ ಈ ಸಂಬಂಧ ಜಿಲ್ಲಾಧಿಕಾರಿಗಳೂ ಸಹ ವಾಹನ ತಡೆಗಟ್ಟುವಂತೆ ಆದೇಶ ನೀಡಿದ್ದಾರೆ ಎಂದು ತಿಳಿಸಿದರು. ರಾಜ್ಯ ಉಚ್ಚ ನ್ಯಾಯಾಲಯ ಸಹ ೧೫ ಮೆಟ್ರಿಕ್ ಟನ್ ಗಿಂತ ಅಧಿಕ ಭಾರ ಹೊತ್ತು…
ಬೆಂಗಳೂರು: ವಾಹನ ಚಾಲಕರಿಗೆ ಟ್ರಾಫಿಕ್ ಪೊಲೀಸರು ಮಹತ್ವದ ಸೂಚನೆಯೊಂದನ್ನು ನೀಡಿದ್ದಾರೆ. ಆ ಮೂಲಕ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೆಚ್ಚಾಗುತ್ತಿರುವ ಅಪಘಾತ ಪ್ರಕರಣಗಳಿಗೆ ಬ್ರೇಕ್ ಹಾಕಲು ಮುಂದಾಗಿದೆ. ಇನ್ನು ಮುಂದೆ ಪ್ರತಿ ಗಂಟೆಗೆ 80 ಕಿಲೋಮೀಟರ್ ವೇಗದಲ್ಲಿ ಮಾತ್ರ ವಿಮಾನ ನಿಲ್ದಾಣ ರಸ್ತೆಯಲ್ಲಿ ವಾಹನ ಚಾಲನೆ ಮಾಡಬೇಕು. ಒಂದು ವೇಳೆ ಮೀತಿ ಮೀರಿದರೆ ಓವರ್ ಸ್ಪೀಡ್. ಕಳೆದ ಆರು ತಿಂಗಳಿಂದ ಹೆಚ್ಚಾಗಿ ಈ ರಸ್ತೆಯಲ್ಲಿ ಅಪಘಾತ ಪ್ರಕರಣಗಳು ಓವರ್ ಸ್ಪೀಡ್ ನಿಂದ ದಾಖಲಾಗಿರುತ್ತದೆ. ಅತಿ ವೇಗವಾಗಿ ಚಾಲನೆ ಮಾಡುತ್ತಿರುವ ವಾಹನಗಳಿಂದ ಹೆಚ್ಚಿನ ಅಪಘಾತಗಳು ಸಂಭವಿಸುತ್ತಿದೆ ಎಂದು ತಿಳಿದುಬಂದಿದೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಸ್ವಯಂ ಚಾಲಿತವಾಗಿ ಪತ್ತೆ ಚ್ಚುವ 8 ಸ್ಪೀಡೋ ಕ್ಯಾಮೆರಾವನ್ನು ಅಳವಡಿಸಲಾಗಿದೆ. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ ಕೆಆರ್ ಪುರದ ಹೆಬ್ಬಾಳ ಮೇಲ್ಸೇತುವೆಯ ರ್ಯಾಂಪ್ ಅಪ್ ಮುಚ್ಚುವ ಕಾಮಗಾರಿ ನಡೆಸಲಿದ್ದು, ಈ ಹಿನ್ನೆಲೆಯಲ್ಲಿ ಮೇ 14ರಿಂದ ಹೆಬ್ಬಾಳ ಫ್ಲೈಓವರ್ ಮೇಲೆ ಪ್ರಯಾಣಿಕರ ಸಂಚಾರವನ್ನು ನಿರ್ಬಂಧಿಸಲಾಗಿದೆ. ಹೆಬ್ಬಾಳ ಮೇಲ್ಸೇತುವೆಯನ್ನು…
ಇತ್ತೀಚಿನ ದಿನಗಳಲ್ಲಿ ವೃತ್ತಿಜೀವನ, ತಡವಾಗಿ ಮದುವೆ ಮತ್ತು ಲೇಟ್ ಬೇಬಿ ಪ್ಲಾನಿಂಗ್ ಸಾಮಾನ್ಯವಾಗುತ್ತಿದೆ, ಅಂತಹ ಪರಿಸ್ಥಿತಿಯಲ್ಲಿ, ಮಹಿಳೆಯರು ತುಂಬಾ ವಯಸ್ಸಾದಾಗ ಮಗುವನ್ನು ಯೋಜಿಸುತ್ತಾರೆ. ಇದರಿಂದಾಗಿ ಗರ್ಭಪಾತದ ಪ್ರಕರಣಗಳು ಮೊದಲಿಗಿಂತ ಹೆಚ್ಚಾಗಿ ಮಹಿಳೆಯರಲ್ಲಿ ಕಂಡುಬರುತ್ತವೆ . ಇದಲ್ಲದೆ, ಮಹಿಳೆಯರಲ್ಲಿ ಗರ್ಭಪಾತದ ಅಪಾಯವು ಹೆಚ್ಚಾಗಲು ಹಲವು ಕಾರಣಗಳಿವೆ. ವಯಸ್ಸು ಹೆಚ್ಚಾದಂತೆ ಮಹಿಳೆಯರಲ್ಲಿ ಅನೇಕ ಸಮಸ್ಯೆಗಳು ಉದ್ಭವಿಸಲು ಪ್ರಾರಂಭಿಸುತ್ತವೆ. ಅದರಲ್ಲಿ ಗರ್ಭಾಶಯದಲ್ಲಿ ಕಡಿಮೆ ಮೊಟ್ಟೆಗಳು ಮತ್ತು ಕಳಪೆ ಗುಣಮಟ್ಟದ ಮೊಟ್ಟೆಗಳು ಉತ್ಪತ್ತಿಯಾಗುತ್ತವೆ. ನೀವು 30-35 ವರ್ಷ ವಯಸ್ಸಿನ ನಂತರ ಮಗುವನ್ನು ಹೊಂದುವ ಬಗ್ಗೆ ಯೋಚಿಸಿದಾಗ, ನೀವು ಮಗುವನ್ನು ಹೊಂದುವಲ್ಲಿ ಅನೇಕ ಸಮಸ್ಯೆಗಳನ್ನು ಎದುರಿಸುತ್ತೀರಿ, ಅವುಗಳಲ್ಲಿ ಒಂದು ಸಾಮಾನ್ಯವಾಗಿದೆ ಗರ್ಭಧರಿಸುವಲ್ಲಿ ತೊಂದರೆ ಮತ್ತು ನೀವು ಗರ್ಭಧರಿಸಿದರೆ ಗರ್ಭಪಾತದ ಸಮಸ್ಯೆ ಕಂಡುಬರುತ್ತದೆ. ಆದ್ದರಿಂದ, 25 ರಿಂದ 30 ವರ್ಷ ವಯಸ್ಸಿನವರು ಮಕ್ಕಳನ್ನು ಹೊಂದಲು ಉತ್ತಮ ವಯಸ್ಸು ಎಂದು ಪರಿಗಣಿಸಲಾಗುತ್ತದೆ. ಅನೇಕ ಹಾರ್ಮೋನುಗಳ ಸಮಸ್ಯೆಗಳು ಗರ್ಭಪಾತದ ಅಪಾಯವನ್ನು ಹೆಚ್ಚಿಸುತ್ತವೆ. ಅನೇಕ ರೀತಿಯ ಹಾರ್ಮೋನುಗಳು ಗರ್ಭಧಾರಣೆಯ ಮೇಲೆ ಪರಿಣಾಮ ಬೀರುತ್ತವೆ, ಆದ್ದರಿಂದ…
ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಅವರ ವಿಚ್ಛೇದಿತ ಪತ್ನಿ ಮೆಲಿಂದಾ ಫ್ರೆಂಚ್ ಗೇಟ್ಸ್ ಅವರು ಗೇಟ್ಸ್ ಫೌಂಡೇಶನ್ ಗೆ ರಾಜೀನಾಮೆ ನೀಡಿದ್ದಾರೆ. ಬಿಲ್ ಗೇಟ್ಸ್ ಜೊತೆ ವಿಚ್ಛೇದನ ಪಡೆದ ಮೂರು ವರ್ಷದ ಬಳಿಕ ಮಿಲಿಂಡಾ ಫ್ರೆಂಚ್ ಗೇಟ್ಸ್ ಅವರು ಬಿಲ್ ಆ್ಯಂಡ್ ಮಿಲಿಂಡಾ ಗೇಟ್ಸ್ ಫೌಂಡೇಷನ್ ನ ಸಹ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಿದ್ದಾರೆ. ವಿಶ್ವದ ಬಿಲಿಯನೇರ್ ಉದ್ಯಮಿ ಬಿಲ್ ಗೇಟ್ಸ್ 20 ವರ್ಷಗಳ ಹಿಂದೆ ಪತ್ನಿ ಮಿಲಿಂಡಾ ಜೊತೆ ಸೇರಿ ವಿಶ್ವದ ಅತೀ ದೊಡ್ಡ ಸಾಮಾಜಿಕ ಸೇವಾ ಸಂಸ್ಥೆ ಸ್ಥಾಪಿಸಿದ್ದರು. ಈ ಮೂಲಕ ವಿವಿಧ ದೇಶಗಳಲ್ಲಿ ಸಾಮಾಜಿಕ ಕಾರ್ಯ ನಿರ್ವಹಿಸಿದ್ದಾರೆ. “ಬಿಲ್ ಮತ್ತು ನಾನು ಒಟ್ಟಾಗಿ ನಿರ್ಮಿಸಿದ ಸಂಸ್ಥೆಯ ಬಗ್ಗೆ ನನಗೆ ಹೆಮ್ಮೆ ಇದೆ. ಇದರೊಂದಿಗೆ ನಾವು ಜಗತ್ತಿನೆಲ್ಲೆಡೆ ಅಸಾಮಾನತೆ ಪರಿಹಾರ ಸೇರಿದಂತೆ ಹಲವು ಅದ್ಭುತ ಕೆಲಸಗಳನ್ನು ಮಾಡಿದ್ದೇವೆ” ಎಂದು ಮಿಲಿಂಡಾ ತಿಳಿಸಿದ್ದಾರೆ. ಇದೇ ವೇಳೆ, ಫೌಂಡೇಷನ್ ಸಿಇಒ ಮಾರ್ಕ್ ಸುಜಾಮ್ಯಾನ್ ಅವರನ್ನು ಶ್ಲಾಘಿಸಿದ್ದಾರೆ. ಮಿಲಿಂಡಾ ರಾಜೀನಾಮೆಗೆ ಪ್ರತಿಕ್ರಿಯಿಸಿರುವ ಬಿಲ್ ಗೇಟ್ಸ್,…
ಇಸ್ರೇಲ್-ಹಮಾಸ್ ಸಂಘರ್ಷಕ್ಕೆ ವಿಶ್ವಸಂಸ್ಥೆಯಲ್ಲಿ ಕೆಲಸ ಮಾಡುವ ಭಾರತೀಯ ಅಧಿಕಾರಿಯೊಬ್ಬರು ಬಲಿಯಾಗಿದ್ದಾರೆ. ಇಸ್ರೇಲ್-ಹಮಾಸ್ ಸಂಘರ್ಷ ಆರಂಭಗೊಂಡ ನಂತರ ವಿಶ್ವ ಸಂಸ್ಥೆಯ ಅಂತರರಾಷ್ಟ್ರೀಯ ಸಿಬ್ಬಂದಿಯೊಬ್ಬರು ಬಲಿಯಾದ ಮೊದಲ ಘಟನೆ ಇದಾಗಿದೆ. ಮೃತ ವ್ಯಕ್ತಿ ವಿಶ್ವಸಂಸ್ಥೆಯ ಸುರಕ್ಷತೆ ಮತ್ತು ಭದ್ರತಾ ವಿಭಾಗದ ಸದಸ್ಯರಾಗಿದ್ದರು. ಜೊತೆಗೆ ಭಾರತೀಯ ಸೇನೆಯ ಮಾಜಿ ಸಿಬ್ಬಂದಿಯಾಗಿದ್ದರು ಎಂದು ತಿಳಿದುಬಂದಿದ್ದರೂ, ಅವರ ಗುರುತನ್ನು ಇನ್ನೂ ಬಹಿರಂಗಪಡಿಸಲಾಗಿಲ್ಲ ಎಂದು ಮೂಲಗಳು ತಿಳಿಸಿವೆ. ರಫಾದಲ್ಲಿ ಭಾರತೀಯ ವ್ಯಕ್ತಿಯ ಜೊತೆಗಿದ್ದ ಇನ್ನೊಬ್ಬ ವಿಶ್ವ ಸಂಸ್ಥೆಯ ಸಿಬ್ಬಂದಿ ಗಾಯಗೊಂಡಿದ್ದರು. ಅವರು ರಫಾದಲ್ಲಿರುವ ಯುರೋಪಿಯನ್ ಆಸ್ಪತ್ರೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿತ್ತು. ವಿಶ್ವಸಂಸ್ಥೆ ಸಿಬ್ಬಂದಿ ಮೇಲಿನ ಎಲ್ಲಾ ದಾಳಿಗಳನ್ನು ಗುಟೆರಸ್ ಖಂಡಿಸಿದ್ದಾರೆ ಮತ್ತು ಸಂಪೂರ್ಣ ತನಿಖೆಗೆ ಕರೆ ನೀಡಿದ್ದಾರೆ ಎಂದು ಪ್ರಧಾನ ಕಾರ್ಯದರ್ಶಿಯ ಉಪ ವಕ್ತಾರ ಫರ್ಹಾನ್ ಹಕ್ ಅವರು ಹೇಳಿಕೆ ನೀಡಿದ್ದಾರೆ. ವಿಶ್ವಸಂಸ್ಥೆ ವಾಹನವನ್ನು ಗಾಜಾದಲ್ಲಿ ಹೊಡೆದುರುಳಿಸಲಾಯಿತು, ನಮ ಸಹೋದ್ಯೋಗಿಗಳಲ್ಲಿ ಒಬ್ಬರು ಸಾವನ್ನಪ್ಪಿ ಮತ್ತೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಎಕ್ಸ್ ನಲ್ಲಿ ಗುಟೆರೆಸ್ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ತೋಟಗಾರಿಕೆ ಇಲಾಖೆಯಿಂದ ಮೇ 13ರಿಂದ ಮೇ 21ರ ವರೆಗೆ ಕೊಪ್ಪಳ ನಗರದ ಎಲ್.ಐ.ಸಿ ಆಫೀಸ್ ಹತ್ತಿರವಿರುವ ತೋಟಗಾರಿಕೆ ಇಲಾಖೆ ಉಪನಿರ್ದೇಶಕರ ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾವು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಉಪವಿಭಾಗಾಧಿಕಾರಿಗಳಾದ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಕೃಷ್ಣ ಸಿ.ಉಕ್ಕುಂದ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ತೋಟಗಾರಿಕೆ ಇಲಾಖೆವತಿಯಿಂದ 8ನೇ ವರ್ಷದ ಮಾವು ಮೇಳವನ್ನು ಮೇ 13 ರಿಂದ ಮೇ 21ರ ವರೆಗೆ ತೋಟಗಾರಿಕೆ ಇಲಾಖೆ (ಜಿಪಂ) ಕೊಪ್ಪಳ ಕಛೇರಿಯ ಆವರಣದಲ್ಲಿ ಆಯೋಜಿಸಲಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಈಗಾಗಲೇ 5000 ಹೆಕ್ಟೇರ್ ಪ್ರದೇಶದಲ್ಲಿ ವಿವಿಧ ತಳಿಯ ಮಾವಿನ ಹಣ್ಣಿನ ಬೆಳೆಗಳನ್ನು ಬೆಳೆಯುತ್ತಿದ್ದು, ಇವುಗಳಲ್ಲಿ ಮುಖ್ಯವಾಗಿ ಕೇಸರ್ ತಳಿಯು…
ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಹಾಗೂ ದ್ವಿತೀಯ ರ್ಯಾಂಕ್ ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ. ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸನ್ಮಾನಿಸಿದರು. ಮಂಗಳವಾರ ತಮ್ಮ ಸರಕಾರಿ ನಿವಾಸ ಕಾವೇರಿಗೆ ಇಬ್ಬರೂ ವಿದ್ಯಾರ್ಥಿಗಳನ್ನು ಆಹ್ವಾನಿಸಿ ಸನ್ಮಾನಿಸಿದ ಮುಖ್ಯಮಂತ್ರಿ, ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿ ಮುಂದಿನ ವಿದ್ಯಾಭ್ಯಾಸ ಯಶಸ್ವಿಯಾಗಿ ಸಾಗಲಿ ಎಂದು ಹಾರೈಸಿದರು. ಅಲ್ಲದೆ, ವಿದ್ಯಾರ್ಥಿಗಳ ಪೋಷಕರನ್ನು ಅಭಿನಂದಿಸಿದರು. ಮುಂದಿನ ವಿದ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ಗೆ 3 ಲಕ್ಷ ರೂ.ಗಳ ನೆರವನ್ನು ಘೋಷಿಸಿದ ಮುಖ್ಯಮಂತ್ರಿ, ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆ ನನ್ನ ಕಲ್ಪನೆ. 1994ರಲ್ಲಿ ಉಪ…
ಬೆಂಗಳೂರು: ಸರಕಾರಿ ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ಹಣ ಪಡೆದು ವಂಚಿಸುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ಇಲ್ಲಿನ ವಿಜಯನಗರ ಠಾಣಾ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಬೆಂಗಳೂರಿನ ಸಿಐಡಿ ಘಟಕದಲ್ಲಿ ಸೆಕ್ಷನ್ ಸೂಪರಿಂಟೆಂಡೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಅನಿತಾ ಬಿ.ಎಸ್. ಹಾಗೂ ರಾಮಚಂದ್ರ ಭಟ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಚಿಕ್ಕಮಗಳೂರಿನ ಕಲ್ಯಾಣನಗರದ ನಿವಾಸಿ ಸುನಿಲ್ ಎಂಬುವವರು ವಿಜಯನಗರ ಠಾಣೆಗೆ ದೂರು ನೀಡಿದ್ದರು. 2021ರಲ್ಲಿ ಸ್ನೇಹಿತರೊಬ್ಬರ ಮೂಲಕ ಸುನಿಲ್ ಅವರಿಗೆ ರಾಮಚಂದ್ರ ಭಟ್ ಪರಿಚಯವಾಗಿತ್ತು. ‘ತನಗೆ ಬೆಂಗಳೂರಿನ ಸಿಐಡಿ ಘಟಕ ಸೆಕ್ಷನ್ ಸೂಪರಿಂಟೆಂಡೆಂಟ್ ಆಗಿರುವ ಅನಿತಾ ಎಂಬುವವರ ಪರಿಚಯವಿದೆ. ಅವರಿಗೆ ಕೆಪಿಎಸ್ ಸಿ ಹಾಗೂ ಸರಕಾರದ ಉನ್ನತ ಹುದ್ದೆಯಲ್ಲಿರುವ ಹಲವು ಪ್ರಭಾವಿ ವ್ಯಕ್ತಿಗಳ ಸಂಪರ್ಕವಿದ್ದು, ನಿಮಗೆ ಸರಕಾರಿ ಕೆಲಸ ಕೊಡಿಸುತ್ತೇನೆ’ ಎಂದು ರಾಮಚಂದ್ರ ಭಟ್ ನಂಬಿಸಿದ್ದ. ಪ್ರತಿಯಾಗಿ ಅನಿತಾ ಅವರು ಕೇಳಿದಷ್ಟು ಹಣ ಹೊಂದಿಸಿ ಕೊಡಬೇಕೆಂದು ತಿಳಿಸಿದ್ದ ಎನ್ನಲಾಗಿದೆ. ಬಳಿಕ ಅನಿತಾಳನ್ನು ಸಿಐಡಿ ಕಚೇರಿಯಲ್ಲೇ ಸುನಿಲ್ ಗೆ ಭೇಟಿ…