Subscribe to Updates
Get the latest creative news from FooBar about art, design and business.
- ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
- ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್ ಸೆಟ್ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
- ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
- ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
- ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ: ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
- ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
- ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
Author: admin
ಒಂದು ವಾರದ ಹಿಂದೆ ದಕ್ಷಿಣ ಆಫ್ರಿಕಾದ ಕರಾವಳಿಯ ಜಾರ್ಜ್ ನಗರದಲ್ಲಿ ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಕಟ್ಟಡ ಕುಸಿದುಬಿದ್ದ ಘಟನೆಯಲ್ಲಿ, ಸಾವಿನ ಸಂಖ್ಯೆ 32ಕ್ಕೆ ಏರಿಕೆ ಆಗಿದೆ. ಅವಶೇಷಗಳಡಿ ಬದುಕುಳಿದವರನ್ನು ಹುಡುಕುವ ಪ್ರಯತ್ನ ನಿರಂತರವಾಗಿ ನಡೆಯುತ್ತಿವೆ ಎಂದು ಸಿಬ್ಬಂದಿಗಳು ತಿಳಿಸಿದ್ದಾರೆ. ಎರಡು ದಿನಗಳ ಹಿಂದೆ ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕನೊಬ್ಬನನ್ನು ರಕ್ಷಿಸಲಾಗಿದೆ. ಈತ ಆಹಾರ, ನೀರಿಲ್ಲದೆ ಆರು ದಿನಗಳ ಕಾಲ ಅವಶೇಷಗಳಡಿ ಸಿಲುಕಿದ್ದ. ರಕ್ಷಣಾ ಸಿಬ್ಬಂದಿ ಈ ಕಾರ್ಮಿಕನನ್ನು ಜೀವಂತವಾಗಿ ಹೊರತಂದಾಗ ಅಲ್ಲಿ ನೆರೆದಿದ್ದವರ ಕಣ್ಣಾಲಿಗಳು ತೇವಗೊಂಡಿದ್ದವು. ಆರು ದಿನಗಳ ಬಳಿಕ ಬದುಕುಳಿದ ವ್ಯಕ್ತಿಯ ಹೆಸರು ಗಬ್ರಿಯೇಲ್ ಗುವಾಂಬೆ (32). ಸದ್ಯ ಈತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅವಶೇಷಗಳಡಿ ಇನ್ನೂ ಹಲವರು ಬದುಕಿರುವ ಸಾಧ್ಯತೆ ಇದ್ದು, ಕಾರ್ಯಾಚರಣೆ ತೀವ್ರಗೊಂಡಿದೆ. ಸಾವಿನ ಸಂಖ್ಯೆಯೂ ಹೆಚ್ಚುತ್ತಲೇ ಇದೆ. ಸೋಮವಾರ 11 ಶವಗಳನ್ನು ಹೊರತೆಗೆಯಲಾಗಿದ್ದು, ಇನ್ನೂ 20 ಕಾರ್ಮಿಕರು ಕಾಣೆಯಾಗಿದ್ದಾರೆ. ಮೇ 6ರಂದು ಕಟ್ಟಡ ಕುಸಿದು ಬಿದ್ದಿದ್ದು, 600ಕ್ಕೂ ಹೆಚ್ಚು ತುರ್ತು…
ತಿಪಟೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಾಂತ್ರಿಕತೆ ಮತ್ತು ಆಧುನಿಕ ಯುಗದಲ್ಲಿನ ಸವಾಲುಗಳನ್ನು ಮೆಟ್ಟಿ ನಿಲ್ಲುವುದು ಅನಿವಾರ್ಯ ಎಂದು, ತಿಪಟೂರು ನಗರದ ಟ್ಯಾಗೋರ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಡಾಕ್ಟರ್ ಆರ್.ವಿ. ಅನಿಲ್ ತಿಳಿಸಿದರು. ಪ್ರಸಕ್ತ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಟ್ಯಾಗೋರ್ ಶಿಕ್ಷಣ ಸಂಸ್ಥೆಯಿಂದ ಶೇಖಡ ನೂರರಷ್ಟು ಫಲಿತಾಂಶ ಬಂದಿದ್ದು, ಸಮಸ್ಯೆ 53 ವರ್ಷಗಳಿಂದ ನಗರ ಪ್ರದೇಶದಲ್ಲಿ ತಾಲೂಕಿನ ಮಕ್ಕಳ ಮನಸ್ಥಿತಿ ಮತ್ತು ಬಾಲಕರ ಆರ್ಥಿಕ ಸ್ಥಿತಿಗತಿ ಅರಿತುಕೊಂಡು, ನಗರ ಪ್ರದೇಶದ ಮಕ್ಕಳಿಗೆ ಸರಿಸಮಾನವಾದ ಶಿಕ್ಷಣವನ್ನು ಕೊಡುವ ನಿಟ್ಟಿನಲ್ಲಿ ಟ್ಯಾಗೋರ್ ವಿದ್ಯಾಸಂಸ್ಥೆ, ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು. ಈ ಕಾರ್ಯಕ್ರಮದಲ್ಲಿ ತಾಂತ್ರಿಕ ವಿಭಾಗದ ಮುಖ್ಯಸ್ಥ ಎಂ.ಜೆ. ಶ್ರೀಕಾಂತ್, ಪ್ರಧಾನ ಕಾರ್ಯದರ್ಶಿ ಕೆ. ಶಶಿಕಲಾ ಮತ್ತಿತರರು ಭಾಗವಹಿಸಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ:…
ನವದೆಹಲಿ: ಕ್ಯಾನ್ಸರ್ ರೋಗಿಗಳಿಗೆ ಝೈಡಸ್ ಕಂಪನಿ ಭರ್ಜರಿ ಶುಭ ಸುದ್ದಿ ನೀಡಿದೆ. 72 ಲಕ್ಷ ರೂ. ತಗಲುತ್ತಿದ್ದ ಔಷಧಿ ಇನ್ನು ಕೇವಲ 3 ಲಕ್ಷ ರೂ.ಗಳಿಗೆ ಲಭ್ಯವಾಗಲಿದೆ ಎಂದು ಝೈಡಸ್ ಲೈಫ್ ಸೈನ್ಸಸ್ ಔಷಧ ಕಂಪನಿ ಮಾಹಿತಿ ನೀಡಿದೆ. ಔಷಧ ತಯಾರಿಸಿದ್ದ ಮೂಲ ಕಂಪನಿಯ ಪೇಟೆಂಟ್ ಅವಧಿ ಮುಗಿದಿರುವ ಹಿನ್ನೆಲೆಯಲ್ಲಿ ಮೂಲ ಔಷದಧ ಜೆನೆರಿಕ್ ಮಾದರಿ ಬಿಡುಗಡೆ ಮಾಡಲಾಗಿದೆ ಎಂದು ಝೈಡಸ್ ಕಂಪನಿ ನೀಡಿದೆ. ಭಾರತದಲ್ಲಿ ಪ್ರತಿ ವರ್ಷ 14 ಲಕ್ಷ ಜನರಲ್ಲಿ ಕ್ಯಾನ್ಸರ್ ಪತ್ತೆಯಾಗುತ್ತದೆ. ಈ ಪೈಕಿ 2.75 ಲಕ್ಷ ಜನರು ಸ್ತನ, ಗರ್ಭಕೋಶ, ಮೇಜೋಜೀರಕ ಗ್ರಂಥಿಯ ಕ್ಯಾನ್ಸರ್ಗೆ ತುತ್ತಾಗುತ್ತಾರೆ. ಇದನ್ನು ಗುಣಪಡಿಸಲು ಓಲಾ ಪರಿಬ್ ಅನ್ನು ಬಳಸಲಾಗುತ್ತದೆ. ಒಂದು ವರ್ಷದ ಚಿಕಿತ್ಸೆಗೆ ಇದುವರೆಗೂ 75 ಲಕ್ಷ ರೂ.ಗಳನ್ನು ಔಷಧಕ್ಕಾಗಿ ವ್ಯಯಿಸಬೇಕಿತ್ತು. ಆದರೆ ಅದೇ ಔಷಧಿ ಇನ್ನು ಕೇವಲ 3 ಲಕ್ಷ ರೂ.ಗೆ ಸಿಗಲಿದೆ ಎಂದು ಕಂಪನಿ ಮಾಹಿತಿ ನೀಡಿದೆ. ಟಾಟಾ ಇನ್ಸ್ಟಿಟ್ಯೂಟ್ ನಿಂದ 100 ರೂಪಾಯಿಯ ಮಾತ್ರೆ: ಒಮ್ಮೆ…
ತೆಲುಗು ಚಿತ್ರರಂಗದ ಸ್ಟಾರ್ ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ ಆಂಧ್ರಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಪೀಠಾಪುರಂ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದಾರೆ. ಜನಸೇನಾ ಪಕ್ಷದ ಸಂಸ್ಥಾಪಕರೂ ಆಗಿರುವ ಪವನ್ ಕಲ್ಯಾಣ್ ಕಳೆದ ಕೆಲ ವರ್ಷದಿಂದಲೂ ಆಂಧ್ರದ ಆಡಳಿತ ಪಕ್ಷ ವೈಸಿಪಿ ವಿರುದ್ಧ ಹೋರಾಟ ನಡೆಸುತ್ತಿದ್ದು, ಪಕ್ಷವನ್ನು ಅಧಿಕಾರದಿಂದ ಇಳಿಸಲೇಬೇಕೆಂಬ ಹಠ ತೊಟ್ಟಿದ್ದಾರೆ. ಅಂತೆಯೇ ಪವನ್ ಕಲ್ಯಾಣ್ ಪರವಾಗಿ ರಾಮ್ ಚರಣ್ ತೇಜ ಸೇರಿದಂತೆ ಇನ್ನೂ ಕೆಲವು ಸೆಲೆಬ್ರಿಟಿಗಳು ಪೀಠಾಪುರಂ ಗೆ ತೆರಳಿ ಪ್ರಚಾರ ಸಹ ಮಾಡಿದ್ದಾರೆ. ಆದರೆ ಮೆಗಾಸ್ಟಾರ್ ಕುಟುಂಬಕ್ಕೆ ಸೇರಿದ ಅಲ್ಲು ಅರ್ಜುನ್ ಮಾತ್ರ, ಪವನ್ ರ ಎದುರಾಳಿ ಪಕ್ಷವಾದ ವೈಸಿಪಿ ಅಭ್ಯರ್ಥಿ ಪರವಾಗಿ ಪ್ರಚಾರ ಮಾಡಿದ್ದರು. ಇದು ಮೆಗಾಸ್ಟಾರ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ತಮ್ಮ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ಎದುರಾದ ಬೆನ್ನಲ್ಲೆ ಇದೀಗ ಅಲ್ಲು ಅರ್ಜುನ್ ಸ್ಪಷ್ಟನೆ ನೀಡಿದ್ದಾರೆ. ‘ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸಂಭಂಧಿಸಿದ ವ್ಯಕ್ತಿಯಲ್ಲ. ರಾಜಕೀಯ ಪಕ್ಷಗಳ ವಿಷಯದಲ್ಲಿ ನಾನು ತಟಸ್ಥ. ಚಿಕ್ಕಪ್ಪ ಪವನ್ ಕ್ಯಲ್ಯಾಣ್…
ಚಾಮರಾಜನಗರ: ಒಂದು ಕಡೆ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದರೆ, ಮತ್ತೊಂದೆಡೆ ಮಳೆಗಾಗಿ ಮಕ್ಕಳಿಂದ ಬಸವನ ಪೂಜೆ ಮಾಡಲಾಗಿದೆ. ಮಳೆಗಾಗಿ ಪ್ರಾರ್ಥಿಸಿದ ರಾಮಸಮುದ್ರ ಗ್ರಾಮದ ಪುಟಾಣಿ ಮಕ್ಕಳಿಂದ ಬಸವನ ಮೆರವಣಿಗೆ ನಡೆದಿದೆ. ಗಡಿ ಜಿಲ್ಲೆ ಚಾಮರಾಜನಗರದ ರಾಮಸಮುದ್ರ ಬಡಾವಣೆಯಲ್ಲಿ ಮಂಗಳವಾರ ಸಂಜೆ 4 ಗಂಟೆ ವೇಳೆಯಲ್ಲಿ ಪುಟಾಣಿ ಮಕ್ಕಳಿಂದ ಬಸವನ ಪೂಜೆಗೈದು ಮಳೆಗಾಗಿ ಪ್ರಾರ್ಥಿಸಿದರು. ಚಾಮರಾಜನಗರ ಜಿಲ್ಲೆಯ ಹಲವೆಡೆ ಮಳೆ ಸುರಿದರೂಕೂಡ ರಾಮಸಮುದ್ರ, ಸುತ್ತಾಮುತ್ತಾ ಮಳೆ ಮಾಯವಾಗಿದ್ದು, ಮಳೆ ಇಲ್ಲದೆ ಬರದಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಹೀಗಾಗಿ ಮಳೆಗಾಗಿ ಜನತೆ ಬಸವಣ ಮೊರೆ ಹೋಗಿದ್ದಾರೆ. ಮಳೆಯಾಗದಿದ್ರೆ ಮಕ್ಕಳು ಬಸವನ ಮರದ ಮೂರ್ತಿಗೆ ಪೂಜೆ ಸಲ್ಲಿಸಿ ಮನೆಮನೆಗೆ ತೆರಳಿ ನೀರು ಹಾಕಿಸಿಕೊಂಡರೆ ಮಳೆ ಸುರಿಯುತ್ತೆ ಎಂಬುದು ಹಿರಿಯರ ನಂಬಿಕೆ. ಬಸವನ ಮೂರ್ತಿಗೆ ಅಲಂಕಾರ ಮಾಡಿ ರಾಮಸಮುದ್ರದ ಬಸವೇಶ್ವರ ದೇವಸ್ಥಾನದಲ್ಲಿ ಪುಟಾಣಿ ಮಕ್ಕಳು ಪೂಜೆ ಸಲ್ಲಿಸಿದ್ದಾರೆ. ನಂತರ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಮಳೆಗಾಗಿ ಪುಟಾಣಿಗಳು ಪ್ರಾರ್ಥಿಸಿದರು. ಇಡೀ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿದ್ದರೆ,…
ಬೆಂಗಳೂರು: ಬಿಟ್ ಕಾಯಿನ್ ಹಗರಣ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಹಿರಿಯ ಐಪಿಎಸ್ ಅಧಿಕಾರಿ ಸಂದೀಪ್ ಪಾಟೀಲ್ ಅವರಿಗೆ ಎರಡನೇ ಬಾರಿ ನೋಟಿಸ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿರುವುದಾಗಿ ವರದಿಯಾಗಿದೆ. ಪ್ರಕರಣದ ಈ ಹಿಂದಿನ ತನಿಖಾಧಿಕಾರಿಯಾಗಿರುವ ಸಂದೀಪ್ ಪಾಟೀಲ್ ಅವರಿಗೆ ಎರಡನೇ ಬಾರಿ ನೋಟಿಸ್ ನೀಡಲಾಗಿದ್ದು, ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ ಎಂದು ಎಸ್ಐಟಿ ಮೂಲಗಳು ತಿಳಿಸಿವೆ. ತನಿಖೆಯ ಭಾಗವಾಗಿ ಈ ಹಿಂದೆಯೂ ವಿಚಾರಣೆಗೆ ಹಾಜರಾಗುವಂತೆ ಸಂದೀಪ್ ಪಾಟೀಲ್ ಅವರಿಗೆ ನೋಟಿಸ್ ನೀಡಲಾಗಿತ್ತು. ಸಿಐಡಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಹಾಗೂ ಎಸ್ಐಟಿ ಮುಖ್ಯಸ್ಥರಾಗಿರುವ ಮನೀಶ್ ಕರ್ಬಿಕರ್ ನೇತೃತ್ವದಲ್ಲಿ ನಡೆದ ವಿಚಾರಣೆಗೆ ಹಾಜರಾಗಿದ್ದ ಸಂದೀಪ್ ಪಾಟೀಲ್ ‘ತಮ್ಮ ಅವಧಿಯಲ್ಲಿ ಬಿಟ್ಕಾಯಿನ್ ಪ್ರಕರಣದ ತನಿಖೆಯಲ್ಲಿ ಲೋಪದೋಷಗಳು, ತಾಂತ್ರಿಕ ತೊಂದರೆಗಳಾಗಿಲ್ಲ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಶ್ರೀಕೃಷ್ಣ ಯಾನೆ ಶ್ರೀಕಿಯ ಹೇಳಿಕೆ ಆಧರಿಸಿ ಬಿಟ್ ಕಾಯಿನ್ ಗಳನ್ನು ವಶಕ್ಕೆ ಪಡೆದುಕೊಂಡು, ಸರಕಾರದ ಸುಪರ್ದಿಗೆ ಅಂದೇ ನೀಡಲಾಗಿದೆ. ಆದರೆ ಪ್ರಸ್ತುತ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ, ಜಿಂದಾಲ್ ಅಲ್ಯುಮಿನಿಯಂ ಕಾರ್ಖಾನೆಯಲ್ಲಿ ಎಲ್ ಪಿಜಿ ಅನಿಲ ಸೋರಿಕೆಯಿಂದ ಬೆಂಕಿ ತಗುಲಿ ಓರ್ವ ಕಾರ್ಮಿಕ ಸಾವನ್ನಪ್ಪಿದ ಘಟನೆ ಜರುಗಿದೆ. 23 ವರ್ಷದ ಕಾರ್ಮಿಕ ತೋಸಿಫ್ ಖಾನ್ ಮೃತ ವ್ಯಕ್ತಿ ಎನ್ನಲಾಗಿದೆ. ಘಟನೆ ಹಿನ್ನಲೆ ಪ್ರೊಡಕ್ಷನ್ ಇನ್ ಚಾರ್ಜ್ ಅಮಿತ್ ಸರ್ಕಾರ್, ಸುರಕ್ಷತೆ ಅಧಿಕಾರಿ ಬಂಗಾರು ಸೇರಿದಂತೆ ಜಿಂದಾಲ್ ಫ್ಯಾಕ್ಟರಿಯ ಮುಖ್ಯಸ್ಥರು ಮತ್ತು ಆಡಳಿತ ವರ್ಗದವರು, ಜವಾಬ್ದಾರಿಯುತ ಅಧಿಕಾರಿಯನ್ನು ನೇಮಿಸದೇ ಕಾರ್ಮಿಕರಿಗೆ ಸುರಕ್ಷತಾ ಉಪಕರಣಗಳನ್ನು ನೀಡದೇ ನಿರ್ಲಕ್ಷ ತೋರಿದ್ದು, ಇದರಿಂದ ಇವರ ವಿರುದ್ಧ ಕಲಂ 304(ಎ) ಐಪಿಸಿ ಅಡಿ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಗ್ರಾಮ ಪಂಚಾಯತಿ ಸಿಬ್ಬಂದಿಯ ಕಿಸ್ಸಿಂಗ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಘಟನೆ ಕೋಲಾರ ಜಿಲ್ಲೆ ಕೆಜಿಎಫ್ ತಾಲೂಕಿನ ರಾಮಸಾಗರದಲ್ಲಿ ನಡೆದಿದೆ. ಪಂಚಾಯಿತಿ ಕಾರ್ಯಾಲಯದಲ್ಲಿಯೇ ಕಿಸ್ ಮಾಡುತ್ತಾ ಫೋಟೋಗಳನ್ನು ತೆಗೆದುಕೊಂಡಿದ್ದಾರೆ. ಈಗ ಈ ಫೋಟೋಗಳು ವೈರಲ್ ಆಗಿದ್ದು, ಮಹಿಳೆಯಿಂದ ಲೈಂಗಿಕ ಕಿರುಕುಳದ ಕೇಸ್ ದಾಖಲಾಗಿದೆ. ಬಿಲ್ ಕಲೆಕ್ಟರ್ ಅರ್ಜುನ್ ಹರಿಕೃಷ್ಣ ವಿರುದ್ಧ ಲೈಂಗಿಕ ಕಿರುಕುಳ, ಕೆಲಸ ಮಾಡುವ ಸ್ಥಳದಲ್ಲಿ ಮಹಿಳೆಗೆ ಮುಜುಗರ, ಖಾಸಗಿ ಕ್ಷಣಗಳ ಫೋಟೋ ಹಂಚಿಕೆ ಹಾಗೂ ಬೆದರಿಕೆ ಒಡ್ಡಿದ್ದಾರೆಂದು ಕೋಲಾರ ಜಿಲ್ಲೆ ಬೇತಮಂಗಲ ಪೊಲೀಸ್ ಠಾಣೆಗೆ ಸಂತ್ರಸ್ತ ಮಹಿಳೆ ದೂರು ದಾಖಲಿಸಿದ್ದಾರೆ. ಅರ್ಜುನ್ ಹರಿಕೃಷ್ಣ ಗ್ರಾಮ ಪಂಚಾಯಿತಿ ಕಾರ್ಯಾಲಯದ ಮೊದಲ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಯ ಬಳಿ ಹೋಗಿ ಕಾಮದಾಟವಾಡಿದ್ದಾನೆ. ಅದನ್ನು ವಿರೋಧ ಮಾಡಿದ್ದಕ್ಕೆ ನಿನ್ನ ಗಂಡನಿಗೆ ಗ್ರಾಮ ಪಂಚಾಯಿತಿಯಲ್ಲಿ ಜಲಗಾರ ಕೆಲಸ ಕೊಡಿಸುತ್ತೇನೆ. ಜೊತೆಗೆ, ನಿಮಗೆ ವಾಸಕ್ಕೆಂದು ಪಂಚಾಯಿತಿಯಿಂದ ಉಚಿತ ಸರ್ಕಾರಿ ಮನೆ ಕಟ್ಟಿಸಿಕೊಡುತ್ತೇನೆ ಎಂದು ಆಮಿಷ ಒಡ್ಡಿದ್ದಾನೆ ಎನ್ನಲಾಗಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ…
ನಾಯಿಯೊಂದು 5 ತಿಂಗಳ ಮಗುವನ್ನು ಕಚ್ಚಿ ಕೊಂದಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಾಂಡೂರಿನಲ್ಲಿ ಮೇ.14 ರಂದು ನಡೆದಿದೆ. ಬಾಬುಸಾಯಿ ಎಂಬ ಮಗುವನ್ನು ಪೋಷಕರು ಕೆಲಸಕ್ಕೆ ಹೋಗುವ ವೇಳೆ ಮನೆಯಲ್ಲಿ ಮಲಗಿಸಿದ್ದರು. ಯಾರ ಗಮನಕ್ಕೂ ಬಾರದಂತೆ ಒಳ ಪ್ರವೇಶಿಸಿದ ನಾಯಿ ದಾಳಿ ಮಾಡಿ ಕೊಲೆ ಮಾಡಿದೆ. ಮಗುವಿನ ತಂದೆ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ. ಕೆಲಸದ ಸ್ಥಳದಲ್ಲಿದ್ದ ಸಾಕು ನಾಯಿ ಅದು ಎಂದು ಸ್ಥಳೀಯ ನಿವಾಸಿಗಳು ಹೇಳಿದರೆ, ಜಾಗದ ಮಾಲೀಕರು ಬೀದಿ ನಾಯಿ ಎಂದು ಹೇಳಿದ್ದಾರೆ. ಕಳೆದ ತಿಂಗಳು ಬೀದಿ ನಾಯಿಗಳ ದಾಳಿಯಲ್ಲಿ ಕನಿಷ್ಠ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರು. 2022 ರಿಂದ 2023 ರವರೆಗೆ ನಾಯಿ ಕಡಿತದ ಘಟನೆಗಳು ವರ್ಷದಿಂದ ವರ್ಷಕ್ಕೆ ಶೇಕಡಾ 26.5 ರಷ್ಟು ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಳೆದ ಡಿಸೆಂಬರ್ ನಲ್ಲಿ ವರದಿ ಮಾಡಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಬೆಳಗಾವಿ: ಬೆಂಕಿಯ ಕೆನ್ನಾಲಿಗೆಗೆ ಸುಮಾರು 1 ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿದೆ ಎನ್ನಲಾಗಿದ್ದು , ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಮುಂಜಾನೆಯ ವೇಳೆ ಎಲ್ಲರೂ ಕೆಲಸಕ್ಕೆಂದು ಹೊರಗಡೆ ಹೋದ ಸಂದರ್ಭದಲ್ಲಿ ನಿನ್ನೆ ಮದ್ಯಾಹ್ನ12.30ರಿಂದ ೧ಘಂಟೆ ನಡುವೆ ಗುಡಿಸಲಿಗೆ ಬೆಂಕಿ ಬಿದ್ದಿದ್ದು, ಮನೆಯಲ್ಲಿ ಯಾರೂ ಇಲ್ಲದೆ ಈದ್ದ ಪರಿಣಾಮ ಯಾವುದೇ ರೀತಿಯ ಜೀವ ಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಬೆಂಕಿ ಕೆನ್ನಾಲಿಗೆಗೆ ಸಿಲುಕಿ 5 ಆಡು, 8 ಕೋಳಿ, 2 ಮೋಟಾರ್ ಸೈಕಲ್, ಒಡವೆಗಳು, ಬಂಗಾರ, ಬೆಳ್ಳಿ, ವಸ್ತ್ರಗಳು ಹೀಗೆ ಹಲವಾರು ದಿನ ಬಳಕೆಯ ವಸ್ತುಗಳು ಸುಟ್ಟಿರುವದರಿಂದ ಇಡಿ ಕುಟುಂಬ ತೊಟ್ಟ ಬಟ್ಟೆಯಲ್ಲೇ ಬೀದಿಪಾಲಾದಂತೆ ಆಗಿದೆ. ಬೆಂಕಿ ಅವಘಡದಲ್ಲಿ 20 ಲಕ್ಷಕ್ಕೂ ಅಧಿಕ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಹಮ್ಜಾಅಲಿ ಆದಮಸಾಬ ಬಾಳೊಬಾ ಇವರಿಗೆ ಸೇರಿದ ಗುಡಿಸಲಿಗೆ ಬೆಂಕಿ ತಗುಲಿರುವ ಕಾರಣ ಏನೆಂಬುದು ನಿಖರವಾಗಿ ತಿಳಿದು ಬಂದಿಲ್ಲ. ಇನ್ನು ಪ್ರಕರಣ ಕುರಿತು ಅಥಣಿ ಪೊಲೀಸ್…