Subscribe to Updates
Get the latest creative news from FooBar about art, design and business.
- ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
- ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್ ಸೆಟ್ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
- ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
- ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
- ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ: ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
- ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
- ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
Author: admin
ವಾರಣಾಸಿ: ನಾಮಪತ್ರ ಸಲ್ಲಿಸಲು ಅವಕಾಶ ನೀಡುತ್ತಿಲ್ಲ. ಸುಮ್ಮನೆ ಕಾಯುವಂತೆ ಹೇಳಿ, ಬಳಿಕ ಸಮಯ ಮುಗಿದಿದೆ ಇನ್ನು ಹೊರಡಿ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ಕತ್ತು ಹಿಸುಕುವ ಕೆಲಸ ಎಂದು ಕಾಮಿಡಿಯನ್ ಶ್ಯಾಮ್ ರಂಗೀಲಾ ಆರೋಪಿಸಿದ್ದಾರೆ. ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಫರ್ಧಿಸಲು ಇಚ್ಛಿಸಿರುವ ಅವರು ನಾಮಪತ್ರ ಸಲ್ಲಿಸಲು ತಮಗೆ ಅವಕಾಶ ಸಿಗದಿರುವ ಕುರಿತು ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ತಮ್ಮ ಯೂಟ್ಯೂಬ್ ಚಾನೆಲ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ವೀಡಿಯೊ ಹಂಚಿಕೊಂಡಿರುವ ಅವರು, “ಯಾರ ನಾಮಪತ್ರ ಪಡೆಯಬೇಕು, ಯಾರದ್ದು ಪಡೆಯಬಾರದು ಎಂದು ಮೊದಲೇ ತೀರ್ಮಾನವಾದ ಹಾಗಿದೆ. ಕೆಲವು ಅಭ್ಯರ್ಥಿಗಳಂತೂ ಕಾದೂ ಕಾದು ಸುಸ್ತಾಗಿ ಕಣ್ಣೀರು ಹಾಕುತಿದ್ದರು. ಯಾರೇ ಏನೇ ಪ್ರತಿಕ್ರಿಯೆ ನೀಡಿದರೂ, ಅಧಿಕಾರಿಗಳು ಸುಮ್ಮನೆ ಮುಗುಳ್ನಗುತ್ತಿದ್ದರು” ಎಂದು ಹೇಳಿದರು. ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಲು ಅವಕಾಶ ಸಿಕ್ಕಿದರೆ ಅದೇ ನನ್ನ ಗೆಲುವು. ಮೋದಿ ಭಕ್ತರ ಮತಗಳು ನಮಗೆ ಬೇಡ. ಮತ ಯಂತ್ರದಲ್ಲಿ ಹೆಸರು ಬಂದರೆ ಸಾಕು. ಅದರೆ ಅದಕ್ಕೇ ಇಲ್ಲಿ ಅವಕಾಶ…
ಮನೆಮುಂದೆ ಆಟವಾಡುತ್ತಿದ್ದ ಮಕ್ಕಳು ಇದ್ದಕ್ಕಿದಂತೆ ಕಾಣೆಯಾಗಿದ್ದು, ೩ ಮಕ್ಕಳ ಮೃತದೇಹ ಪತ್ತೆಯಾಗಿರುವ ಘಟನೆ ವಿಜಯಪುರದಲ್ಲಿ ವರದಿಯಾಗಿದೆ. ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದ ನೀರಿನಲ್ಲಿ ಮುಳುಗಿ ಮೂವರು ಮಕ್ಕಳ ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಮೂವರು ಮಕ್ಕಳು ವಿಜಯಪುರ ನಗರದ ಚಾಬಕಸಾಬ್ ದರ್ಗಾ ಬಳಿಯ ಮನೆಯಿಂದ ಕಾಣೆಯಾಗಿದ್ದರು. ಮೂವರು ಮಕ್ಕಳು ಬೇಸಿಗೆ ರಜೆಗೆಂದು ಮಾವನ ಮನೆಗೆ ಬಂದಿದ್ದರು. ಇದೀಗ ದುರಂತದಲ್ಲಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಗದಗ ಮೂಲದ ಅನುಷ್ಕಾ ಅನಿಲ್ ದಹಿಂಡೆ(9), ವಿಜಯ್ ಅನಿಲ್ ದಹಿಂಡೆ( 7), ಹಾಗೂ ವಿಜಯಪುರದ ಮಿಹಿರ್ ಶ್ರೀಕಾಂತ ಜಾನಗೌಳಿ(7) ಮೃತ ಮಕ್ಕಳು ಎಮದು ಗುರುತಿಸಲಾಗಿದೆ. ಮಕ್ಕಳು ಬಹಳ ಸಮಯವಾದರೂ ಮನೆಗೆ ಬಾರದ ಕಾರಣ ಮನೆಯವರು ಹುಡುಕಾಟ ನಡೆಸಿದ್ದಾರೆ. ಸಾಯಂಕಾಲ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲು ಮಾಡಿದ್ದರು. ನಿನ್ನೆಯಿಂದಲೇ ಕುಟುಂಬಸ್ಥರು ಪೊಲೀಸರು ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದರು. ಆದರೆ ನೆನ್ನೆ ಮದ್ಯಾಹ್ನದ ವೇಳೆ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದ ನೀರಲ್ಲಿ ಮೂವರು ಮೃತರಾಗಿ ಪತ್ತೆಯಾಗಿದ್ದಾರೆ. ಮಹಾನಗರ…
ಪಾವಗಡ: ತಾಲ್ಲೂಕಿನ ಭೂಪುರು ತಾಂಡದಲ್ಲಿ ಸಂತ ಶ್ರೀ ಸೇವಾಲಾಲ್ ಮಹರಾಜ್ ರವರ 285ನೇ ಜಯಂತೋತ್ಸವವನ್ನು ಲಂಬಾಣಿ ಜನಾಂಗದಿಂದ ಸೋಮವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಿಗ್ಗೆ ವಿಶೇಷ ಪೂಜೆ ನೆರವೇರಿಸಿದ ನಂತರ ಸಮುದಾಯದ ಹಿರಿಯರು ಸೇರಿ, ಅಗ್ನಿಗುಂಡಕ್ಕೆ ವಿವಿದ ವಸ್ತುಗಳನ್ನು ಸಮರ್ಪಿಸುವ ಮೂಲಕ ಬೋಗ್ ಆಚರಣೆ ನೆರವೇರಿಸಿದರು. ನಂತರ ಸಂಜೆ ಸಂತ ಸೇವಾಲಾಲ್ ರ ಭಾವಚಿತ್ರ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಲಂಬಾಣಿ ಮಹಿಳೆಯರು ಸಾಂಪ್ರದಾಯಿಕ ನೃತ್ಯ ಮಾಡಿದರೆ, ಯುವಜನತೆ ವಾದ್ಯಗಳ ತಾಳಕ್ಕೆ ತಕ್ಕಂತೆ ಕುಣಿದು ಸಂತಸ ಹಂಚಿಕೊಂಡರು. ವರದಿ: ನಂದೀಶ್ ನಾಯ್ಕ ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ತುಮಕೂರು: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ಸುರಿಯುತ್ತಿರುವ ಮಳೆಯಿಂದ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಕಲ್ಪತರುನಾಡಲ್ಲಿ ತಡರಾತ್ರಿ ಗಾಳಿ ಸಹಿತ ವರುಣನ ಅಬ್ಬರಕ್ಕೆ ಹೈ ಟೆನ್ಶನ್ ವೈರ್ ಕಡಿದು ಬಿದ್ದು, ಕೆಲಕಾಲ ಜನರಲ್ಲಿ ಗಾಬರಿ ಹುಟ್ಟಿಸಿತ್ತು. ನಂತರ ಯಾವುದೇ ರೀತಿಯ ಪ್ರಾಣಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಲಕ್ಲಿಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದಲ್ಲಿ ಹಾದುಹೋಗಿರುವ ವಿದ್ಯುತ್ ಲೈನ್ ಮನೆಗಳ ಮೇಲೆ ತುಂಡಾಗಿ ಬಿದ್ದಿದೆ. ವಿದ್ಯುತ್ ನಿಂತುಹೋಗಿತ್ತು. ಅದೃಷ್ಟವಶಾತ್ ಯಾವುದೇ ಹಾನಿಯಾಗಿಲ್ಲ. ತುಮಕೂರು ಜಿಲ್ಲೆಯಲ್ಲಿ ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ, ಮರಗಳು ಧರೆಗುರುಳಿದ್ದು, ಕಟ್ಟಡಗಳ ಮೇಲೆ ಹಾನಿ ಉಂಟು ಮಾಡಿವೆ. ತುಮಕೂರು ನಗರದ ಕುವೆಂಪು ನಗರದಲ್ಲಿ ಮನೆಯ ಮೇಲೆ ಬಿದ್ದ ತೆಂಗಿನ ಮರದಿಂದ ಕಟ್ಟಡದ ಒಂದು ಭಾಗ ಜಖಂಗೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಕುವೆಂಪು ನಗರದ ಫಸ್ಟ್ ಬ್ಲಾಕ್, 5 ನೇ ಮುಖ್ಯ ರಸ್ತೆಯಲ್ಲಿ ಇರುವ ನಿರಂಜನ ಎನ್ನುವವರಿಗೆ ಸೇರಿದ ಮನೆ…
ಮೈಸೂರು: ನಮ್ಮಲ್ಲಿ ಒಳಜಗಳ ಇಲ್ಲ. ಹಾಗಿದ್ದಿದ್ದರೆ ಲೋಕಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಲು ಸಾಧ್ಯವಾಗುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿ ಜಗಳವಾಗಿ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ನಾಯಕರು ಹೇಳಿಕೆ ನೀಡಿರುವ ಬಗ್ಗೆ, ಪ್ರತಿಕ್ರಿಯೆ ನೀಡಿದ ಅವರು, “ರಾಜಕೀಯವಾಗಿ ಹೇಳಿಕೆ ನೀಡುತ್ತಿದ್ದಾರೆ” ಎಂದರು. ಉತ್ತಮ ವಾತಾವರಣ: ಪರಿಷತ್ ಚುನಾವಣೆಯ ವಾತಾವರಣ ಉತ್ತಮವಾಗಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದೆ. ಅದಕ್ಕಾಗಿ ಅಭ್ಯರ್ಥಿಗಳನ್ನು ಆರು ತಿಂಗಳು ಮುಂಚಿತವಾಗಿಯೇ ಆಯ್ಕೆ ಮಾಡಲಾಗಿತ್ತು. ಅಭ್ಯರ್ಥಿಗಳಿಗೆ ಸಮಯ ಸಿಕ್ಕು, ಮತದಾರರನ್ನು ಭೇಟಿಯಾಗಲು ಅವಕಾಶ ದೊರೆಯಿತು ಎಂದರು. ಪರಿಣಾಮ ಬೀರುವುದಿಲ್ಲ: ಮೈತ್ರಿ ಪರಿಣಾಮ ಚುನಾವಣೆಯ ಮೇಲೆ ಆಗಲಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಲೋಕಸಭೆ ಚುನಾವಣೆಯಲ್ಲಿಯೂ ಕೆಡಿಎಎ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು. ಸಾಧನೆಗಳ ತುಲನೆ ಮಾಡುವ ಶಕ್ತಿ ಮತದಾರರಿಗಿದೆ: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಚುನಾವಣೆಯ ಮೇಲೆ…
ತುರುವೇಕೆರೆ: ತುರುವೇಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಸಿ.ಎಸ್.ಪುರ ಹೋಬಳಿಯ ಡಿ ರಾಂಪುರದಲ್ಲಿ ನಡೆಸುತ್ತಿರುವ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಯನ್ನು ವಿರೋಧಿಸಿ, ಇದೇ ಮೇ 16 ರಂದು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಹೋರಾಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ರೈತರು, ನಾಗರೀಕರು, ವಿಚಾರವಂತರು, ಚಿಂತಕರು, ಬುದ್ಧಿಜೀವಿಗಳು ಭಾಗವಹಿಸಬೇಕು ಎಂದು, ತುರುವೇಕೆರೆ ಕ್ಷೇತ್ರದ ಶಾಸಕ ಎಂ.ಟಿ.ಕೃಷ್ಣಪ್ಪ ಮನವಿ ಮಾಡಿದರು. ತಮ್ಮ ಗೃಹ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಎಂ.ಟಿ. ಕೃಷ್ಣಪ್ಪ, ಟಿ ಬಿ ಸಿ ನಾಲೆಯಿಂದ ಏಳರಿಂದ ಎಂಟು ಅಡಿ ಆಳದಲ್ಲಿ ಕೊಳವೆಗಳ ಮುಖಾಂತರ ರಾಮನಗರಕ್ಕೆ ನೀರನ್ನು ಕೊಂಡೊಯ್ಯುತ್ತಿದ್ದು, ಸಹಜವಾಗಿ ಎಲ್ಲಾ ನೀರು ಗ್ರಾವಿಟಿಯ ಮೂಲಕ ಹರಿದರೆ ಮುಖ್ಯವಾಗಿ ತುರುವೇಕೆರೆ ತಾಲೂಕಿನ ಕಸಬಾ, ದಂಡಿನ ಶಿವರ, ಸಂಪಿಗೆ, ಗುಬ್ಬಿ ತಾಲೂಕಿನ ಸಿಎಸ್ ಪುರ ಹೋಬಳಿಯ ಭಾಗದ ಜನರಿಗೆ ಒಂದು ಹನಿ ನೀರು ಕೂಡ ಸಿಗುವುದಿಲ್ಲ. ಇದರಿಂದ ತಾಲೂಕಿನ ಯಾವ ಕೆರೆ ಕಟ್ಟೆಗಳಾಗಲಿ ತುರುವೇಕೆರೆ ಪಟ್ಟಣದ ವಾಸಿಗಳಿಗೆ ಕುಡಿಯುವ ನೀರನ್ನು ಪೂರೈಸುವ…
ಕೊರಟಗೆರೆ: ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಕೊರಟಗೆರೆ ಪಟ್ಟಣದ ಭೋವಿ ಕಾಲೋನಿ ವಾರ್ಡ್ ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಡಿಸಿ ಶುಭ ಕಲ್ಯಾಣ್ ತಾಲ್ಲೂಕಿನ ಬುಕ್ಕಪಟ್ಟಣ ಹಾಗೂ ಕ್ಯಾಮೇನಹಳ್ಳಿ ಮೇವು ಬ್ಯಾಂಕಿಗೆ ಭೇಟಿ ನೀಡಿ ಮೇವು ತೆಗೆದುಕೊಳ್ಳುತ್ತಿರುವ ರೈತರ ಬಳಿ ಮಾಹಿತಿ ಪಡೆದರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಗತ್ಯವಿದ್ದರೆ ಕೆಲವು ಹೋಬಳಿಗಳಲ್ಲಿ ಮೇವು ಬ್ಯಾಂಕ್ ತೆರೆಯುವ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಸಾಲ ಪಡೆದವರ ಮನೆ ಬಾಗಿಲಿಗೆ ತೆರಳಿ ಚಿತ್ರಹಿಂಸೆ ನೀಡುವಂತಿಲ್ಲ ಎಂದರು. ಶುಭ ಕಲ್ಯಾಣ್ ತಾಲ್ಲೂಕಿನಲ್ಲಿ ಅನಧಿಕೃತ ಕೋಳಿ ಫಾರಂ ಇದ್ದಲ್ಲಿ ತೆರವಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಾಲೂಕಿಗೆ ಯಾವುದೇ ಅಧಿಕಾರಿಗಳಾಗಲಿ ರಾಜ್ಯ ಮಟ್ಟದ ರಾಜಕೀಯ ವ್ಯಕ್ತಿಗಳಾಗಲಿ ಭೇಟಿ ನೀಡಿದಾಗ, ಕೊರಟಗೆರೆ ತಾಲೂಕು ಪತ್ರಕರ್ತರಿಗೆ ಮಾಹಿತಿ ನೀಡುವುದಿಲ್ಲ ಎಂದು ವಾರ್ತಾ ಇಲಾಖೆ ಅಧಿಕಾರಿ ವಿರುದ್ಧ ತಾಲೂಕು ಪತ್ರಕರ್ತರಿಂದ ಜಿಲ್ಲಾಧಿಕಾರಿಗೆ ದೂರು ನೀಡಲಾಯಿತು. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಇನ್ನು ಮುಂದೆ…
ಈ ವರ್ಷದ ಬಹು ನಿರೀಕ್ಷಿತ ಮಲಯಾಳಂ ಸಿನಿಮಾಗಳಲ್ಲಿ ಒಂದಾದ ಮಮ್ಮುಟ್ಟಿ ಅಭಿನಯದ ಚಿತ್ರ ‘ಟರ್ಬೋ’ ಅದ್ದೂರಿ ಬಿಡುಗಡೆಗೆ ಸಜ್ಜಾಗುತ್ತಿದೆ. ಭಾರೀ ನಿರೀಕ್ಷೆಯ ನಡುವೆ ಇದೀಗ ಮೇ 12 ರಂದು ಚಿತ್ರದ ಟ್ರೈಲರ್ ಅನಾವರಣಗೊಂಡಿದೆ. ಆಕ್ಷನ್-ಪ್ಯಾಕ್ಟ್ ಟ್ರೈಲರ್ ಮಮ್ಮುಟ್ಟಿ ಅವರಿಗೆ ಕನ್ನಡದ ಜನಪ್ರಿಯ ನಟ ರಾಜ್ ಬಿ ಶೆಟ್ಟಿ ಅವರೊಂದಿಗೆ ಮುಖಾಮುಖಿ ಯಾಗುತ್ತಿರುವುದನ್ನು ತೋರಿಸುತ್ತದೆ. ಇನ್ನೇನು ಚಿತ್ರವು ಮೇ 23 ರಂದು ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲಿದೆ. ಮಮ್ಮೂಟಿಯವರ 2022 ರ ಚಲನಚಿತ್ರ ‘ಭೀಷ್ಮ ಪರ್ವಂ ನಂತರ ಇದು ಅವರ ಮೊದಲ ಪೂರ್ಣ ಪ್ರಮಾಣದ ಮಾಸ್ ಎಂಟರ್ ಟೈನರ್ ಆಗಿದೆ. ಟ್ರೇಲರ್ ಕುರಿತು ಹೇಳುವುದಾದರೆ, ‘ಟರ್ಬೊ” ಒಂದು ಆಕ್ಷನ್ ಕಾಮಿಡಿಯಾಗಿದ್ದು, ಇದು ಅನೇಕ ಹೈ-ಆಕ್ಷನ್ ಸೀಕ್ವೆನ್ಸ್ ಗಳನ್ನು ಹೊಂದಿದೆ. ಮೇ 12 ರಂದು, ಮಮ್ಮುಟ್ಟಿ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಟೈಲರ್ನ ಯೂಟ್ಯೂಬ್ ಲಿಂಕ್ ಅನ್ನು ಹಂಚಿಕೊಂಡಿದ್ದಾರೆ. ‘ಪುಲಿಮುರುಗನ್’ ನಿರ್ದೇಶಕ ವೈಶಾಖ್ ‘ಟರ್ಬೋ’ ಚಿತ್ರಕ್ಕಾಗಿ ಮಮ್ಮುಟ್ಟಿ ಜೊತೆ ಕೈಜೋಡಿಸಿದ್ದಾರೆ. ಈ ಚಿತ್ರದ ಕಥೆಯನ್ನು ‘ಅಂಜಮ್ ಪತಿರಾ’…
ಮುಂಬೈ: ಭಾರತದ ವಾಣಿಜ್ಯ ರಾಜಧಾನಿಯಲ್ಲಿ ಸೋಮವಾರ ಭಾರಿ ಗಾಳೀಗೆ ಜಾಹೀರಾತು ಫಲಕ ಕುಸಿದು ಬಿದ್ದು ಸಂಭವಿಸಿದ ದುರಂತದಲ್ಲಿ ಕನಿಷ್ಠ 12 ಮಂದಿ ಮೃತಪಟ್ಟು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪೂರ್ವ ಮುಂಬೈನ ಪೆಟ್ರೋಲ್ ಬಂಕ್ ಬಳಿ ಅಳವಡಿಸಿದ್ದ ಫಲಕ ಕುಸಿದು ಬಿದ್ದಾಗ 12 ಮಂದಿ ಅದರ ಅಡಿಯಲ್ಲಿ ಸಿಕ್ಕಿಹಾಕಿಕೊಂಡು ಮೃತಪಟ್ಟರು. ಅವಶೇಷಗಳಡಿ ಸಿಕ್ಕಿಹಾಕಿಕೊಂಡವರಿಗಾಗಿ ರಕ್ಷಣಾ ತಜ್ಞರು ಶೋಧಕಾರ್ಯ ಮುಂದುವರಿಸಿದ್ದಾರೆ. ಎಂಟು ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆಯಲಾಗಿದೆ ಎಂದು ರಾಷ್ಟ್ರೀಯ ವಿಪತ್ತು ಸ್ಪಂದನೆ ಪಡೆಯ ಇನ್ಸ್ಪೆಕ್ಟರ್ ಗೌರವ್ ಚೌಹಾಣ್ ಹೇಳಿದ್ದಾರೆ. ನಾಲ್ಕು ದೇಹಗಳು ಇನ್ನೂ ಅವಶೇಷಗಳಡಿ ಸಿಕ್ಕಿಹಾಕಿಕೊಂಡಿವೆ ಎಂದು ವಿವರಿಸಿದ್ದಾರೆ. ಅವರ ಮೃತದೇಹಗಳು ಪತ್ತೆಯಾಗಿವೆ. ಆದರೆ ಪೆಟ್ರೋಲ್ ಪಂಪ್ ಹಾಗೂ ಅಪಾಯಕಾರಿ ಸನ್ನಿವೇಶ ಇರುವುದರಿಂದ ಹೊರತೆಗೆಯಲು ಸಾಧ್ಯವಾಗುತ್ತಿಲ್ಲ ಎಂದು ವಿವರಿಸಿದ್ದಾರೆ. ದುರಂತಕ್ಕೆ ಸಂಬಂಧಿಸಿದಂತೆ ಪೊಲೀಸರು ಇಗೋ ಮೀಡಿಯಾ ಮಾಲೀಕ ಭವೇಶ್ ಭಿಂಡೆ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಜಾಹೀರಾತು ಫಲಕವನ್ನು ಅನುಮತಿ ಇಲ್ಲದೇ ಅಕ್ರಮವಾಗಿ ಅಳವಡಿಸಲಾಗಿತ್ತು ಎಂದು ಹೇಳಲಾಗಿದೆ. ಮುಂಬೈ ಹಾಗೂ ಮೆಟ್ರೋಪಾಲಿಟನ್…
ವಿಜಯವಾಡ: ತೆನಾಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ವೈಎಸ್ಆರ್ ಸಿಪಿ ಶಾಸಕ ಅಣ್ಣಬಟೂನಿ ಶಿವಕುಮಾರ್, ಮತದಾರರ ಸರದಿ ಸಾಲಿನಲ್ಲಿ ರಂಪಾಟ ನಡೆಸಿ, ವ್ಯಕ್ತಿಯೊಬ್ಬರ ಕೆನ್ನೆಗೆ ಹೊಡೆದು ವಾಪಾಸು ಪೆಟ್ಟು ತಿಂದ ಸ್ವಾರಸ್ಯಕರ ಪ್ರಸಂಗಕ್ಕೆ ಸೋಮವಾರ ನಡೆದ ಮತದಾನ ಸಾಕ್ಷಿಯಾಯಿತು. ಮತ ಚಲಾಯಿಸಲು ಮತಗಟ್ಟೆಗೆ ಆಗಮಿಸಿದ ಶಿವಕುಮಾರ್ ಸರದಿಯನ್ನು ಉಲ್ಲಂಘಿಸುವ ಪ್ರಯತ್ನ ಮಾಡಿದರು. ಇದಕ್ಕೆ ಗೊಟ್ಟುಮುಕ್ಕಲ ಸುಧಾಕರ್ ಎಂಬ ಮತದಾರರೊಬ್ಬರು ಆಕ್ಷೇಪಿಸಿದರು. ಆಕ್ಷೇಪಿಸಿದ ಮತದಾರನ ಕೆನ್ನೆಗೆ ಶಾಸಕರು ಹೊಡೆದಾಗ ಪ್ರತಿಯಾಗಿ ಸುಧಾಕರ್ ಕೂಡಾ ತಿರುಗೇಟು ನೀಡಿದರು. ಘಟನೆ ಅಷ್ಟಕ್ಕೇ ಮುಗಿಯದೇ ಶಿವಕುಮಾರ್ ಬೆಂಬಲಿಗರು ಆ ಬಳಿಕ ಸುಧಾಕರ್ ಮೇಲೆ ಹಲ್ಲೆ ನಡೆಸಿದರು. ಸುಧಾಕರ್ ಅವರ ಎಡಕಣ್ಣಿಗೆ ಗಾಯಗಳಾಗಿವೆ. ಈ ಸಂಘರ್ಷದ ಹಿನ್ನೆಲೆಯಲ್ಲಿ ಶಾಸಕ ಹಾಗೂ ಅವರ ಬೆಂಬಲಿಗರ ವಿರುದ್ಧ ತೆನಾಲಿ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನನ್ನು ನಿಂದಿಸಿದ್ದಕ್ಕಾಗಿ ಸುಧಾಕರ್ ಗೆ ಹೊಡೆದದ್ದಾಗಿ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. “ಸರದಿಯಲ್ಲಿದ್ದ ವ್ಯಕ್ತಿ ಮದ್ಯಪಾನ ಮಾಡಿದ್ದ. ನನ್ನನ್ನು ಹಾಗೂ ಪತ್ನಿಯನ್ನು ನಿಂದಿಸಿದ. ಕಮ್ಮಾ ಸಮುದಾಯಕ್ಕೆ ಸೇರಿದ್ದರೂ ಹಿಂದುಳಿದವರು, ಎಸ್ಸಿ,…