Subscribe to Updates
Get the latest creative news from FooBar about art, design and business.
- ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
- ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್ ಸೆಟ್ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
- ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
- ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
- ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ: ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
- ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
- ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
Author: admin
ಬಿರ್ಬೂಮ್: ಲೋಕಸಭೆ ಚುನಾವಣೆಗೆ ಸೋಮವಾರ ನಡೆದ ನಾಲ್ಕನೇ ಹಂತದ ಮತದಾನದ ಸಂದರ್ಭ ಪಶ್ಚಿಮಬಂಗಾಳದ ಹಲವು ಭಾಗಗಳಲ್ಲಿ ಹಿಂಸಾಚಾರದ ಘಟನೆಗಳು ವರದಿಯಾಗಿವೆ. ದುರ್ಗಾಪುರದಲ್ಲಿ ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಬಿರ್ಬೂಮ್ನಲ್ಲಿ ಮತಗಟ್ಟೆಯ ಹೊರಗಿದ್ದ ತಮ್ಮ ಸ್ಟಾಲ್ ಅನ್ನು ಆಡಳಿತಾರೂಢ ಟಿಎಂಸಿ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ. ಟಿಎಂಸಿ ನಾಯಕ ರಾಮ್ ಪ್ರಸಾದ್ ಹಲ್ದಾರ್, ‘‘ಬೆಳಗ್ಗೆ 6 ಗಂಟೆಗೆ ಈ (ಬಿಜೆಪಿ) ಜನರು ಕೇಂದ್ರದ ಪಡೆಗಳೊಂದಿಗೆ ಆಗಮಿಸಿದರು ಹಾಗೂ ಮತದಾರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದರು. ನಾವು ಇದರ ವಿರುದ್ಧ ಪ್ರತಿಭಟನೆ ನಡೆಸಿದೆವು. ಮತದಾರರು ಕೂಡ ಪ್ರತಿಭಟನೆ ನಡೆಸಿದರು. ಅವರು ಹೊರಗಿನಿಂದ ಮತದಾನದ ಏಜೆಂಟರನ್ನು ಕರೆ ತರಲು ಪ್ರಯತ್ನಿಸಿದರು. ಕೇಂದ್ರ ಪಡೆಗಳು ಜನರಿಗೆ ಬೆದರಿಕೆ ಒಡ್ಡಿದವು ಹಾಗೂ ಅವರ ಮೇಲೆ ಪ್ರಭಾವ ಬೀರಿದವು. ಜನರು ಇದನ್ನು ವಿರೋಧಿಸಿದರು’’ ಎಂದಿದ್ದಾರೆ. ಬಿಜೆಪಿ ಶಾಸಕ ಲಕ್ಷ್ಮಣ್ ಗೌರಿ, ದುರ್ಗಾಪುರದ ಶಾಲೆಯಲ್ಲಿರುವ ಮತಗಟ್ಟೆಯಿಂದ ನಮ್ಮ ಮತದಾನದ ಏಜೆಂಟ್ ನನ್ನು ಹೊರಗೆ ಹಾಕಲಾಯಿತು…
ಬೆಂಗಳೂರು: ಸಿಲಿಕಾನ್ ಸಿಟಿಗೆ ಮಳೆಯ ಎಂಟ್ರಿಯೇನೋ ಆಗಿದೆ. ಆದ್ರೆ ಕಳೆದ ಮೂರು ನಾಲ್ಕು ತಿಂಗಳಿನಿಂದ ಬೆಂದ ಕಾವಲಿಯಂತಿದ್ದ ವಾತವರಣ ತರಕಾರಿ ಬೆಲೆಯನ್ನ ಮತ್ತಷ್ಟು ದುಪ್ಪಟ್ಟು ಮಾಡ್ಬಿಟ್ಟಿದೆ. ಸೊಪ್ಪು, ತರಕಾರಿ ಬೆಲೆ ಗ್ರಾಹಕರ ಜೇಬಿಗೆ ಕತ್ತರಿ ಹಾಕಿದೆ. ಮದುವೆ ಸೀಸನ್ ನಿಂದಾಗಿ ಬೇಡಿಕೆ ಹೆಚ್ಚಿದೆ, ಕಳೆದ ವಾರದಿಂದಲೇ ಬೆಲೆ ಏರಿ ಕೆಜಿ 100ರೂ ನಂತೆ ಮಾರಾಟವಾಗ್ತಿದೆ ಬೀನ್ಸ್, ಹಸಿಮೆಣಸು, ಹಿರೇಕಾಯಿ ನಿಂಬೆ ಹಣ್ಣು. ಇತ್ತ, ಬಿಸಿ ಎಫೆಕ್ಟ್ ಹೂವಿನ ಮೇಲೂ ಬಿದ್ದಿದ್ದು, ಉದುರಿ ಬೀಳ್ತಿದೆ. ಇಳುವರಿ ಕಡಿಮೆಯಾಗಿದೆ. ಹೀಗಾಗಿ ಹೂವಿನ ರೇಟ್ ಕೂಡ ದುಪ್ಪಟ್ಟಾಗಿದೆ. ಕಳೆದ ತಿಂಗಳು ಕೆಜಿಗೆ 30 ರೂಪಾಯಿ ಇರುವ ತರಕಾರಿ, ಈ ತಿಂಗಳು 60 ರೂಪಾಯಿ ಆಗಿದ್ದು ಗ್ರಾಹಕರು ಕಂಗಾಲಾಗಿದ್ದಾರೆ. ಸಬ್ಬಸಿಗೆ ಸೊಪ್ಪು ಪ್ರತಿ ಕಟ್ಟಿಗೆ 20ರೂಪಾಯಿ ಆಗಿದೆ. ಕೊತ್ತಂಬರಿ ಸೊಪ್ಪು 15ರಿಂದ 20 ರೂಪಾಯಿ ಆದ್ರೆ, ಮೆಂತ್ಯೆ ಸೊಪ್ಪು ಪ್ರತಿ ಕಟ್ಟಿಗೆ 10 ರಿಂದ 20 ರೂಪಾಯಿ ಆಗಿದೆ. ಪುದೀನಾ ಮತ್ತು ಪಾಲಕ್ ಸೊಪ್ಪು 10ಕ್ಕೆ ಏರಿದ್ದು…
ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು, ಲಾರಿ ಪಲ್ಟಿಯಾಗಿ, ಲಾರಿ ಚಾಲಕನಿಗೆ ಗಂಭೀರ ಗಾಯವಾಗಿರೋ ಘಟನೆ ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುಲಿಯೂರುದುರ್ಗ ಬಳಿ ನಡೆದಿದೆ. ಲಾರಿ ಸಂಪೂರ್ಣ ಜಖಂ ಗೊಂಡಿದೆ. ವಾಟರ್ ಬಾಟಲ್ ತುಂಬಿಕೊಂಡು ಮೈಸೂರು ಕಡೆಗೆ ತೆರಳುವಾಗ ಘಟನೆ ನಡೆದಿದೆ. ಗಾಯಗೊಂಡಿದ್ದ ಚಾಲಕನಿಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಅಹ್ಮದಾಬಾದ್: ಭಾರತೀಯ ಕ್ರಿಕೆಟ್ ತಂಡದ ನೂತನ ಟಿ20 ವಿಶ್ವಕಪ್ ಜರ್ಸಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಕಾರ್ಯದರ್ಶಿ ಜಯ ಶಾ ಮತ್ತು ತಂಡದ ನಾಯಕ ರೋಹಿತ್ ಶರ್ಮ ಸೋಮವಾರ ಜಂಟಿಯಾಗಿ ಅಹ್ಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಮ್ ನಲ್ಲಿ ಪ್ರದರ್ಶಿಸಿದ್ದಾರೆ. ‘ಇದು ನಮ್ಮ ತಂಡವನ್ನು ಹೊಸ ಬಣ್ಙಗಳಲ್ಲಿ ಸ್ವಾಗತಿಸುವ ಸಮಯ’ ಎಂದು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಹಾಕಿದ ವೀಡಿಯೊವೊಂದರಲ್ಲಿ ಬಿಸಿಸಿಐ ಹೇಳಿದೆ. ಪ್ರಖರ ಬಣ್ಣಗಳಿಂದ ಕೂಡಿದ ಜರ್ಸಿಯನ್ನು ನರೇಂದ್ರ ಮೋದಿ ಸ್ಟೇಡಿಯಮ್ ನಲ್ಲಿ ಜಯ ಶಾ ಮತ್ತು ರೋಹಿತ್ ಶರ್ಮ ಅನಾವರಣಗೊಳಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ‘ನಮ್ಮ ಗೌರವ ಕಾರ್ಯದರ್ಶಿ ಜಯ ಶಾ, ನಾಯಕ ರೋಹಿತ್ ಶರ್ಮ ಮತ್ತು ಅಧಿಕೃತ ಕಿಟ್ ಭಾಗೀದಾರ ಅಡಿಡಸ್ ಜೊತೆಗೆ ನೂತನ ಟಿ20ಐ ಟೀಮ್ ಇಂಡಿಯಾ ಜರ್ಸಿಯನ್ನು ಸಾದರಪಡಿಸುತ್ತಿದ್ದೇವೆ’ ಎಂದು ಬಿಸಿಸಿಐ ಬರೆದಿದೆ. ಜರ್ಸಿಯ ಅನಾವರಣವು ಮೇ 6ರಂದು ನಡೆದಿತ್ತು. ರೋಹಿತ್ ಶರ್ಮ, ಆಲ್ರೌಂಡರ್ ರವೀಂದ್ರ ಜಡೇಜ ಮತ್ತು ಹಿರಿಯ ಸ್ಪಿನ್ನರ್ ಕುಲದೀಪ್ ಯಾದವ್ ರನ್ನು…
ಹೋಟೆಲ್ ನ ರೂಮಿನಲ್ಲಿ ತನ್ನ ಇಬ್ಬರು ಪ್ರೇಮಿಗಳೊಂದಿಗೆ ಸರಸವಾಡುತ್ತಿದ್ದ ಪತ್ನಿ, ಪತಿ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿರುವ ಘಟನೆ ಉತ್ತರ ಪ್ರದೇಶದ ಕಾಸ್ ಗಂಜ್ ನಲ್ಲಿ ನಡೆದಿದೆ. ತನ್ನ ಹೆಂಡತಿಯ ಚಟುವಟಿಕೆಗಳ ಬಗ್ಗೆ ಅನುಮಾನ ಹೊಂದಿದ್ದ ವೈದ್ಯ, ಗುರುವಾರ ರಾತ್ರಿ ಹೋಟೆಲ್ ಕೊಠಡಿಗೆ ನುಗ್ಗಿದ್ದರು. ಇಬ್ಬರು ಪುರುಷರ ಜತೆ ಸರಸ ಸಲ್ಲಾಪದಲ್ಲಿ ತೊಡಗಿದ್ದಾಗ ಆಕೆಯನ್ನು ಹಿಡಿದಿದ್ದರು. ಇದರಿಂದ ಕುಪಿತರಾದ ವೈದ್ಯನ ಕುಟುಂಬದವರು ಹಾಗೂ ಇಬ್ಬರು ವ್ಯಕ್ತಿಗಳ ನಡುವೆ ಮಾರಾಮಾರಿ ನಡೆದಿದೆ. ಮಹಿಳೆ ಹಾಗೂ ಆಕೆಯ ಇಬ್ಬರು ಗೆಳೆಯರ ಮೇಲೆ ವೈದ್ಯನ ಕುಟುಂಬದವರು ಹಲ್ಲೆ ನಡೆಸಿದ್ದಾರೆ. ಈ ಕುರಿತ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ವೈದ್ಯ ಹಾಗೂ ಆತನ ಪತ್ನಿ, ಜೊತೆಗಿದ್ದ ಇಬ್ಬರು ಪುರುಷರನ್ನೂ ಬಂಧಿಸಿದ್ದಾರೆ. ಈ ವೇಳೆ ತನ್ನ ಹೆಂಡತಿ ಇಬ್ಬರು ಪುರುಷರೊಂದಿಗೆ ಅಕ್ರಮ ಸಂಬಂಧ ಹೊಂದಿರುವುದಾಗಿ ಆರೋಪಿಸಿ ದೂರು ದಾಖಲಿಸಿದ್ದಾನೆ. ಏನಿದು ಘಟನೆ?: ಪೊಲೀಸರ ಪ್ರಕಾರ, ದಂಪತಿ ಕೌಟುಂಬಿಕ ಕಲಹದಿಂದಾಗಿ…
ಅಬುಧಾಬಿ: ಅಬುಧಾಬಿಯನ್ನು ಪ್ರಮುಖ ವಿವಾಹದ ತಾಣವಾಗಿ (ಡೆಸ್ಟಿನೇಷನ್ ವೆಡ್ಡಿಂಗ್) ರೂಪಿಸಲು, ಅಬುಧಾಬಿ ಕನ್ವೆನ್ಷನ್ ಆ್ಯಂಡ್ ಎಕ್ಸಿಬಿಷನ್ ಬ್ಯೂರೊ(ಎಡಿಸಿಇಬಿ) ಎಮಿರೇಟ್ಸ್ ನಾದ್ಯಂತ ವಿವಾಹಗಳನ್ನು ಆಯೋಜಿಸುವ ಭಾರತೀಯ ಪ್ರಜೆಗಳಿಗೆ ವೀಸಾ ಬೆಂಬಲವನ್ನು ವಿಸ್ತರಿಸುವ ಉಪಕ್ರಮವನ್ನು ಘೋಷಿಸಿದೆ. ಅಬುಧಾಬಿಯನ್ನು ಪ್ರಮುಖ ವಿವಾಹದ ತಾಣವಾಗಿ ರೂಪಿಸುವ ಉದ್ದೇಶದ ಉಪಕ್ರಮ ಇದಾಗಿದೆ ಎಂದು ಅಬುಧಾಬಿಯ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಇಲಾಖೆಯ ಭಾಗವಾಗಿರುವ ಎಡಿಸಿಇಬಿ ಹೇಳಿದೆ. 2030ರ ವೇಳೆಗೆ ಅಬುಧಾಬಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯನ್ನು 39.3 ದಶಲಕ್ಷಕ್ಕೆ ಹೆಚ್ಚಿಸುವ ಪ್ರವಾಸೋದ್ಯಮ ಯೋಜನೆಗೆ ನೂತನ ವೀಸಾ ಉಪಕ್ರಮ ಪೂರಕವಾಗಲಿದೆ ಎಂದು ಹೇಳಿಕೆ ತಿಳಿಸಿದೆ. 2030ರ ಕಾರ್ಯತಂತ್ರದ ಪ್ರಕಾರ ದೇಶೀಯ ಮತ್ತು ಅಂತರಾಷ್ಟ್ರೀಯ ಪ್ರವಾಸಿಗರನ್ನು ಆಕರ್ಷಿಸಲು ಮತ್ತು ಜಿಡಿಪಿಗೆ ಡೆಸ್ಟಿನೇಷನ್ ವೆಡ್ಡಿಂಗ್ ವಲಯದ ಕೊಡುಗೆಯನ್ನು 90 ಶತಕೋಟಿ ಧಿರ್ಹಮ್ಗೆ ಹೆಚ್ಚಿಸಲು ಉದ್ದೇಶಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ವಾರಣಾಸಿ: ಪ್ರಧಾನಿ ನರೇಂದ್ರ ಮೋದಿ ಅವರು ವಾರಣಾಸಿಯಿಂದ ಸತತ ಮೂರನೇ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದು, 2014 ಮತ್ತು 2019ರಲ್ಲಿ ಇಲ್ಲಿಂದ ಸಂಸದರಾಗಿ ಆಯ್ಕೆಯಾಗಿದ್ದರು. ಇದೀಗ ಸತತ ಮೂರನೇ ಬಾರಿಗೆ ಪ್ರಧಾನಿ ಮೋದಿಯವರು ಇದೇ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದರಿಂದ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಹೀಗಾಗಿ ಮೋದಿಯವರ ನಾಮನಿರ್ದೇಶನಕ್ಕೆ ಬಿಜೆಪಿ ಭರ್ಜರಿ ತಯಾರಿ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿಯವರು ನಾಮಪತ್ರ ಸಲ್ಲಿಸುವ ವೇಳೆ ಸುಮಾರು ಹನ್ನೆರಡು ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದ್ದು, ಇದಲ್ಲದೇ ಬಿಜೆಪಿ ಮತ್ತು ಎನ್ ಡಿಎಯ ಹಲವು ನಾಯಕರು ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ಮೋದಿಯವರ ನಾಮನಿರ್ದೇಶನಕ್ಕೆ ಯಾವ ವಿವಿಐಪಿ ಸಾಕ್ಷಿಯಾಗುತ್ತಾರೆ ಅನ್ನೋದರ ವಿವರ ಇಲ್ಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನಾಮಪತ್ರ ಸಲ್ಲಿಕೆ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಹಾರ ಸಿಎಂ ನಿತೀಶ್ ಕುಮಾರ್, ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್, ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ, ರಾಜಸ್ಥಾನ ಸಿಎಂ ಭಜನ್ಲಾಲ್ ಶರ್ಮಾ, ಮಹಾರಾಷ್ಟ್ರ ಸಿಎಂ…
ಚಿಕ್ಕಮಗಳೂರು: ಇಂದು ಬೆಳಿಗ್ಗೆ ಚಾರ್ಮಡಿ ಘಾಟ್ ನಲ್ಲಿ ತೆರಳುತ್ತಿದ್ದ ಜನರಿಗೆ ಗಜರಾಜನ ದರ್ಶನವಾಗಿದೆ. ಚಾರ್ಮಡಿ ಘಾಟ್ ನ ರಸ್ತೆ ಮಧ್ಯೆದಲ್ಲಿ ಒಂಟಿ ಸಲಗ ಸೊಂಡಿಲಿನಲ್ಲಿ ಮರದ ದಿಂಬಿ ಹಿಡಿದು ನಿಂತಿದ್ದನು. ಗಜರಾಜನ ಈ ಅವತಾರ ಕಂಡು ಜನರು ವಾಹನಗಳನ್ನು ಸೈಡ್ ಅಲ್ಲಿ ಪಾರ್ಕ್ ಮಾಡಿ, ಮೊಬೈಲ್ ನಲ್ಲಿ ಆನೆಯ ಆರ್ಭಟವನ್ನು ಸೆರೆ ಹಿಡಿದಿದ್ದಾರೆ. ಈ ಒಂಟಿ ಸಲಗಕ್ಕೆ ಒಂಟಿ ಸಲಗಕ್ಕೆ ಮದವೇರಿರುವ ಶಂಕೆ ವ್ಯಕ್ತವಾಗಿದೆ. ರಸ್ತೆ ಮಧ್ಯೆದಲ್ಲಿ ಒಂಟಿ ಸಲಗ ನಿಂತಿದ್ದರಿಂದ ಚಾರ್ಮಾಡಿ ಘಾಟ್ ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇನ್ನು ಈ ಒಂಟಿ ಸಲಗ ಹಗಲು-ರಾತ್ರಿ ಎನ್ನದೆ ಉಪಟಳ ನೀಡುತ್ತಿದೆ. ಆದರೂ ಕೂಡ ಅರಣ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಶಿಡ್ಲಘಟ್ಟ: ಆಹಾರ ಅರಸಿ ಗ್ರಾಮ ದತ್ತ ಬಂದಿದ್ದ ಜಿಂಕೆಯನ್ನು ಬೀದಿ ನಾಯಿಗಳು ಕಚ್ಚಿ ಸಾಯಿಸಿವೆ. ತಾಲೂಕಿನ ಗಾಂಡ್ಲಚಿಂತೆ ಗ್ರಾಮದಲ್ಲಿ ಘಟನೆ ನಡೆದಿದ್ದು, ತಾಲ್ಲೂಕು ವಲಯ ಅರಣ್ಯಾಧಿಕಾರಿ ಸುಧಾಕರ್ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದ್ದಾರೆ. ಗುಂಪಾಗಿ ದಾಳಿ ನಡೆಸಿರುವ ಬೀದಿ ನಾಯಿಗಳ ದಾಳಿಗೆ ತುತ್ತಾಗಿರುವ ಜಿಂಕೆ ರಕ್ತ ಸ್ರಾವದಲ್ಲಿ ನರಳುತ್ತಿರುವುದನ್ನು ಕಂಡು ಗ್ರಾಮಸ್ಥರು ಬೀದಿ ನಾಯಿಗಳನ್ನು ಚದುರಿಸಿದ್ದಾರೆ. ಚಿಕಿತ್ಸೆಗಾಗಿ ದಿಬ್ಬೂರಹಳ್ಳಿಯ ಪಶು ಚಿಕಿತ್ಸಾಲಯಕ್ಕೆ ರವಾನಿಸಿದರು ಫಲಕಾರಿಯಾಗದೆ ಜಿಂಕೆ ಪ್ರಾಣ ಕಳೆದುಕೊಂಡಿದೆ. ಗಾಂಡ್ಲ ಚಿಂತೆ ಹಾಗೂ ಸುತ್ತಮುತ್ತಲ ಗ್ರಾಮಗಳ ಹೊರವಲಯದ ಬೆಟ್ಟ ಗುಡ್ಡಗಳನ್ನು ಆವಾಸಸ್ಥಾನ ಮಾಡಿಕೊಂಡಿರುವ ಜಿಂಕೆಗಳು ಆಹಾರ ನೀರು ಅರಸಿ ಆಗಾಗ್ಗೆ ಗ್ರಾಮಗಳ ಕಡೆ ಬರುವುದುಂಟು. ಈ ಸಂದರ್ಭದಲ್ಲಿ ಉಪವಲಯ ಅರಣ್ಯಾಧಿಕಾರಿ ಜಯಚಂದ್ರ ಸಿಬ್ಬಂದಿಗಳಾದ ಸಂದೀಪ್ ಲೋಕೇಶ್ ನರಸಿಂಹಪ್ಪ ನಾಗರಾಜು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಸುರಿದು ಹಲವು ಅವಾಂತರಗಳು ಸೃಷ್ಟಿಯಾಗ್ತಿದೆ. ಒಂದೆಡೆ ಮಳೆಗೆ ಮರಗಳು ಬಿದ್ದು ಸಮಸ್ಯೆಯಾದ್ರೆ ಮತ್ತೊಂದೆಡೆ ಅಂಡರ್ ಪಾಸ್, ರಸ್ತೆ ಒಂದಷ್ಟು ಕಡೆ ಮಳೆನೀರು ನುಗ್ಗಿ ಜನರು ಸಂಕಷ್ಟ ಅನುಭವಿಸಿದ್ದಾರೆ. ಬೆಂಗಳೂರಿನ ಕೆಲ ಏರಿಯಾಗಳಲ್ಲಿ ಹೆಚ್ಚು ಮಳೆಯಾಗಿದ್ದು, ಇದುವರೆಗೆ ಸುಮಾರು 150 ಕಡೆ ನೀರು ನಿಂತು ಸಮಸ್ಯೆಯಾಗಿದೆ. ಬೆಂಗಳೂರಲ್ಲಿ ಮತ್ತೆ ವರುಣ ದೇವ ಅಬ್ಬರಿಸಿದ್ದಾನೆ. ಸಂಜೆವರೆಗೆ ಸಾಮಾನ್ಯವಾಗಿದ್ದ ಬೆಂಗಳೂರಿನ ವಾತಾವರಣ ರಾತ್ರಿ ಸಂಪೂರ್ಣ ಬದಲಾಗಿದೆ. ನಗರದ ಬಹುತೇಕ ಭಾಗದಲ್ಲಿ ಮಳೆ ಅಬ್ಬರಿಸಿದೆ. ಪ್ರಮುಖ ರಸ್ತೆಗಳಲ್ಲಿ ನೀರು ನಿಂತಿದ್ದು, ಟ್ರಾಫಿಕ್ ಜಾಮ್ ಉಂಟಾಗಿ, ಬೈಕ್ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ನೃಪತುಂಗ ರಸ್ತೆಯಲ್ಲಿ ಸುಮಾರು ರಾತ್ರಿ 11:45ಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮುಂದೆ ಬೃಹತ್ ಮರದ ಕೊಂಬೆ ಧರೆಗುರುಳಿದೆ. ಪರಿಣಾಮ ಕೆಆರ್ ವೃತ್ತದಿಂದ ಸುಮಾರು 5 ಕಿಲೋ ಮೀಟರ್ ವರೆಗೂ ಟ್ರಾಫಿಕ್ ಜಾಮ್ ಆಗಿ ವಾಹನ ಸವಾರರ ಪರದಾಡಿದ್ದಾರೆ. ಇನ್ನೂ ಟ್ರಾಫಿಕ್ನಲ್ಲಿ…