Subscribe to Updates
Get the latest creative news from FooBar about art, design and business.
- ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
- ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್ ಸೆಟ್ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
- ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
- ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
- ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ: ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
- ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
- ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
Author: admin
ಈತನ ಜೊತೆ ಜಸ್ಟ್ ಫೋಟೋ ಕ್ಲಿಕ್ಕಿಸಿಕೊಳ್ಳಲು ಜನ ಮುಗಿಬೀಳ್ತಾರಂತೆ. ಹೌದು, ಈತನ ಜೊತೆ ಫೋಟೋ ತೆಗೆದುಕೊಳ್ಳಲು ಮೊದಲು ಈತನಿಗೆ ಲಕ್ಷಾಂತರ ರೂಪಾಯಿ ನೀಡಬೇಕಂತೆ. ಆದರೂ ಕೆಲವು ಸ್ಟಾರ್ ಗಳು ಹಣ ಪಾವತಿಸಿ ಈತನ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಾರೆ. ಈತ ಬೇರೆ ಯಾರೂ ಅಲ್ಲ. ಬಾಲಿವುಡ್ ಸ್ಟಾರ್ ಗಳಷ್ಟೇ ಫೇಮಸ್ ಆಗಿರುವ ಓರಿ. ಓರಿ ಎಂದು ಕರೆಯಲ್ಪಡುವ ಈ ಯುವಕನ ಹೆಸರು ಓರ್ಹನ್ ಅವತ್ರಮಣಿ. ಸದ್ಯ ಗಂಟೆ ಗಂಟೆಗೂ ಲಕ್ಷಾಂತರ ರೂಪಾಯಿ ಗಳಿಸುವ ಓರಿ ತಮ್ಮ ಗಳಿಕೆಯ ಬಗ್ಗೆ ಇತ್ತೀಚಿಗೆ ಮಾತನಾಡಿದ್ದಾರೆ. ಈಗಾಗಲೇ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಫೇಮಸ್ ಆಗಿರುವ ಓರಿ (Orry) ಸೆಲೆಬ್ರೆಟಿಗಳ ಖಾಸಗಿ ಕಾರ್ಯಕ್ರಮಗಳಿಗೆ ಭಾಗಿ ಆದರೆ ಒಂದು ಇವೆಂಟ್ ಗೆ ಲಕ್ಷಾಂತರ ರೂಪಾಯಿ ಗಳಿಸುತ್ತಾರೆ. ಓರಿ ಪ್ರಕಾರ, ನಾನು ಒಂದು ಫೋಟೋ ಕೇಳಿದರೆ 25 ಲಕ್ಷ ರೂಪಾಯಿ ಚಾರ್ಜ್ ಮಾಡುತ್ತೇನೆ. ನಾನಾಗೇ ಬಂದು ಫೋಟೋ ಕ್ಲಿಕ್ಕಿಸಿಕೊಂಡರೆ ನೋ ಚಾರ್ಜ್. ಯಾರಾದರೂ ಬಂದು ಟಚ್ ಮಾಡುವಂತೆ ಕೇಳಿದರೆ 20…
ಮನೆಮುಂದೆ ಆಟವಾಡುತ್ತಿದ್ದ ಮಕ್ಕಳು ಇದ್ದಕ್ಕಿದಂತೆ ಕಾಣೆಯಾಗಿದ್ದ 3 ಮಕ್ಕಳ ಮೃತದೇಹ ಪತ್ತೆಯಾಗಿರುವ ಘಟನೆ ವಿಜಯಪುರದಲ್ಲಿ ವರದಿಯಾಗಿದೆ. ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದ ನೀರಿನಲ್ಲಿ ಮುಳುಗಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೂವರು ಮಕ್ಕಳು ವಿಜಯಪುರ ನಗರದ ಚಾಬಕಸಾಬ್ ದರ್ಗಾ ಬಳಿಯ ಮನೆಯಿಂದ ಕಾಣೆಯಾಗಿದ್ದರು. ಮೂವರು ಮಕ್ಕಳು ಬೇಸಿಗೆ ರಜೆಗೆಂದು ಮಾವನ ಮನೆಗೆ ಬಂದಿದ್ದರು. ಇದೀಗ ದುರಂತದಲ್ಲಿ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ಗದಗ ಮೂಲದ ಅನುಷ್ಕಾ ಅನಿಲ್ ದಹಿಂಡೆ (9) ವಿಜಯ್ ಅನಿಲ್ ದಹಿಂಡೆ ( 7) ಹಾಗೂ ವಿಜಯಪುರದ ಮಿಹಿರ್ ಶ್ರೀಕಾಂತ ಜಾನಗೌಳಿ (7) ಮೃತ ಮಕ್ಕಳು ಎಂದು ಗುರುತಿಸಲಾಗಿದೆ. ಮಕ್ಕಳು ಬಹಳ ಸಮಯವಾದರೂ ಮನೆಗೆ ಬಾರದ ಕಾರಣ ಮನೆಯವರು ಹುಡುಕಾಟ ನಡೆಸಿದ್ದಾರೆ. ಸಾಯಂಕಾಲ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲು ಮಾಡಿದ್ದರು. ನಿನ್ನೆಯಿಂದಲೇ ಕುಟುಂಬಸ್ಥರು ಪೊಲೀಸರು ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದರು. ಆದರೆ ನೆನ್ನೆ ಮದ್ಯಾಹ್ನದ ವೇಳೆ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದ ನೀರಲ್ಲಿ ಮೂವರ ಮೃತದೇಹ…
ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನದಲ್ಲಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿದ್ದ ಪೀಠ 5 ಲಕ್ಷ ಬಾಂಡ್, ತನಿಖೆಗೆ ಸಹಕರಿಸಬೇಕು ಎಂದು ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ ಬೆಳಗ್ಗೆಯಿಂದ ಸಂಜೆಯವರೆಗೆ ಕೋರ್ಟ್ ಸುಧೀರ್ಘವಾಗಿ ವಿಚಾರಣೆ ನಡೆಯಿತು. ರೇವಣ್ಣ ಪರ ವಕೀಲರಾದ ನಾಗೇಶ್ ಹಾಗೂ ಎಸ್ಐಟಿ ಪರ ವಕೀಲರಾದ (ಎಸ್ಪಿಪಿ) ಜಯ್ನಾ ಕೊಠಾರಿ ಹಾಗೂ ಅಶೋಕ್ ನಾಯ್ಕ್ ಸರ್ಕಾರದ ಪರವಾಗಿ ವಾದಿಸಿದರು. ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ಹಾಗೂ ಸಾಕ್ಷ್ಯಾಧಾರ ನಾಶಪಡಿಸಬಾರದು, ಮಂಡ್ಯ ಜಿಲ್ಲೆಯ ಕೆ.ಆರ್.ನಗರ ತಾಲೂಕು ಪ್ರವೇಶಿಸುವಂತಿಲ್ಲ, ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ ಷರತ್ತುಗಳೊಂದಿಗೆ ರೇವಣ್ಣಗೆ ಜಾಮೀನು ಮಂಜೂರು ಮಾಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಮೊಹಮ್ಮದಿ ಮದೀನಾ ಮಸೀದಿ ಮೌಲ್ವಿ ಮೊಹಮ್ಮದ್ ತಾಹಿರ್ನನ್ನು ವಿದ್ಯಾರ್ಥಿಗಳು ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಅಜ್ಮೀರದಲ್ಲಿ ನಡೆದಿದೆ. ಮೌಲ್ವಿ ಕಳೆದ 4 ವರ್ಷಗಳಿಂದ ತಮ್ಮ ಮೇಲೆ ನಿರಂತರ ಅತ್ಯಾಚಾರವೆಸಗುತ್ತಿದ್ದರು ಹೀಗಾಗಿ ನಾವೇ ಅವರನ್ನು ಕೊಲೆ ಮಾಡಿದ್ದೇವೆ ಎಂದು ವಿದ್ಯಾರ್ಥಿಗಳು ಪೊಲೀಸರ ಒಪ್ಪಿಕೊಂಡಿದ್ದಾರೆ. ರಾಜಸ್ಥಾನದ ಅಜ್ಮೀರ್ ನಲ್ಲಿ ಮೌಲಾನಾ ಹತ್ಯೆ ಆರೋಪದ ಮೇಲೆ ಆರು ಅಪ್ರಾಪ್ತ ಬಾಲಕರನ್ನು ಬಂಧಿಸಲಾಗಿದೆ. ಮೌಲಾನಾ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಮೌಲಾನಾ ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಅತ್ಯಾಚಾರವೆಸಗುತ್ತಿದ್ದರು ಎಂದು ಆರೋಪಿಸಲಾಗಿದೆ. ಇದರಿಂದ ಬೇಸರಗೊಂಡ ಮಕ್ಕಳು ಆತನನ್ನು ಕೊಲ್ಲುವ ಪ್ಲಾನ್ ಮಾಡಿದ್ದಾರೆ. ಈ ಘಟನೆ ಏಪ್ರಿಲ್ 26 ರ ರಾತ್ರಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೂವತ್ತು ವರ್ಷದ ಮೌಲಾನಾ ಮೊಹಮ್ಮದ್ ತಾಹಿರ್ ಎಂಬಾತನನ್ನು ವಿದ್ಯಾರ್ಥಿಗಳು ಹೊಡೆದು ಕೊಂದಿದ್ದಾರೆ. ಮೌಲಾನಾ ಮೊಬೈಲ್ ನಲ್ಲಿ ಮಕ್ಕಳಿಗೆ ಅಶ್ಲೀಲ ಚಿತ್ರಗಳನ್ನು ತೋರಿಸಿ ಬಳಿಕ ಅತ್ಯಾಚಾರ ಎಸಗುತ್ತಿದ್ದರು. ಕಳೆದ ನಾಲ್ಕು ವರ್ಷಗಳಿಂದ ಇದನ್ನೇ ಮಾಡುತ್ತಿದ್ದರು. ಇದರಿಂದ ಮನನೊಂದ…
ನದಿಗೆ ಸ್ನಾನಕ್ಕೆ ತೆರಳಿದ್ದ ವ್ಯಕ್ತಿಯನ್ನು ಕೊಂದು ಹಾಕಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದ ಬಳಿ ದೂಧಗಂಗಾ ನದಿಯಲ್ಲಿ ನಡೆದಿದೆ. ಮಹಾದೇವ ಪುನ್ನಪ್ಪ ಖುರೆ (72) ಎಂಬುವರು ಮೊಸಳೆ ಬಾಯಿಗೆ ಸಿಲುಕಿ, ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ಮಹಾದೇವ ಪುನ್ನಪ್ಪ ಖುರೆಯವರಿಗೆ ಈಜಲು ಬರುತ್ತಿರಲಿಲ್ಲ. ಹೀಗಾಗಿ ನದಿ (River) ದಡದಲ್ಲಿ ಕುಳಿತು ಸ್ನಾನ ಮಾಡುತ್ತಿದ್ದರು ಎನ್ನಲಾಗಿದೆ. ಸ್ನಾನ ಮಾಡುತ್ತಿದ್ದ ಸಂಧರ್ಭದಲ್ಲಿ ಮಹಾದೇವ ಖುರೆಯನ್ನು ಮೊಸಳೆ ಎಳೆದುಕೊಂಡು ಹೋಗಿ ತೀವ್ರವಾಗಿ ಗಾಯಮಾಡಿದೆ. ಪರಿಣಾಮ ಮಹಾದೇವ ಖುರೆ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ನದಿಯಲ್ಲಿ ಶವ ಕಂಡ ಬಳಿಕ ಸ್ಥಳೀಯರು ಶವವನ್ನ ಹೊರತೆಗೆದಿದ್ದು ಮರೋಣತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಶವ ಹಸ್ತಾಂತರಿಸಲಾಗಿದೆ.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜ್ಯುಕೇಶನ್ (CBSE) 12ನೇ ತರಗತಿ ಫಲಿತಾಂಶ ಪ್ರಕಟಗೊಂಡಿದೆ. ಇಂದು ಪ್ರಕಟಗೊಂಡಿರುವ ಫಲಿತಾಂಶದಲ್ಲಿ ಒಟ್ಟು ಶೇ. 87.98 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಒಟ್ಟು 16,33,730 ಮಂದಿ ನೋಂದಾಯಿಸಿಕೊಂಡಿದ್ದರು. ಅದರಲ್ಲಿ 16,21,224 ಮಂದಿ ಪರೀಕ್ಷೆ ಬರೆದಿದ್ದಾರೆ. 14,26,420 ಮಂದಿ ಉತ್ತೀರ್ಣರಾಗಿದ್ದಾರೆ. ಬೆಂಗಳೂರಿನಲ್ಲಿ (Bangalore CBSE 12th Results 2024) ಫಲಿತಾಂಶದ ಪ್ರಮಾಣ ಶೇ.96.95ರಷ್ಟಿದೆ ಎಂದು ವರದಿಯಾಗಿದೆ. ವಿದ್ಯಾರ್ಥಿಗಳು ತಮ್ಮ CBSE ತರಗತಿ 12 ಫಲಿತಾಂಶ 2024 ಅನ್ನು cbse.gov.in ನಲ್ಲಿ ಅಧಿಕೃತ CBSE ವೆಬ್ಸೈಟ್ ಮೂಲಕ ಪರಿಶೀಲಿಸಬಹುದು. ಹೆಚ್ಚುವರಿಯಾಗಿ, cbse.nic.in, cbseresults.nic.in ಮತ್ತು results.cbse.nic.in ನಲ್ಲಿ ಫಲಿತಾಂಶಗಳನ್ನು ಪಡೆಯಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಪ್ರಧಾನಿ ನರೆಂದ್ರ ಮೋದಿ ಪಾಟ್ನಾದಲ್ಲಿ ಚುನಾವಣಾ ಪ್ರಚಾರದ ಎರಡನೇ ದಿನವಾದ ಇಂದು (ಮೇ 13) ಗುರುದ್ವಾರ ಪಾಟ್ನಾ ಸಾಹಿಬ್ ಗೆ ಭೇಟಿ ನೀಡಿ ಗುರುದ್ವಾರದಲ್ಲಿ ಭಕ್ತರಿಗೆ ಪ್ರಸಾದ ಬಡಿಸಿದ್ದಾರೆ. ಸಾಂಪ್ರದಾಯಿಕ ಕುರ್ತಾ, ಕೇಸರಿ ಸಿಖ್ ಪೇಟ ಧರಿಸಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಗುರುದ್ವಾರಕ್ಕೆ ಬಂದಿದ್ದ ಭಕ್ತರಿಗೆ ವಿಶೇಷ ಪ್ರಸಾದ ಬಡಿಸಿದ್ದಾರೆ. ನಂತರ ಗುರುದ್ವಾರದಲ್ಲಿ `ಕರಃ ಪ್ರಸಾದ’ವನ್ನು ತೆಗೆದುಕೊಂಡರು. ಈ ವೇಳೆ ಡಿಜಿಟಲ್ ಪಾವತಿ ವಿಧಾನ ಬಳಸಿ ಹಣ ಸಂದಾಯ ಮಾಡಿದರು. ಇಂದು (ಮೆ.13) ಹಾಜಿಪುರ, ಮುಜಾಫರ್ಪುರ ಮತ್ತು ಸರನ್ ನಲ್ಲಿ ಎನ್ ಡಿಎ ಅಭ್ಯರ್ಥಿಗಳ ಪರ ಚುನಾವಣಾ ರ್ಯಾಲಿ ನಡೆಸಿ ಮೋದಿ ಮಾತನಾಡಲಿದ್ದಾರೆ. ಗುರು ಗೋಬಿಂದ್ ಸಿಂಗ್ ಅವರ ಜನ್ಮಸ್ಥಳವನ್ನು ಗುರುತಿಸಲು 18 ನೇ ಶತಮಾನದಲ್ಲಿ ಮಹಾರಾಜ ರಂಜಿತ್ ಸಿಂಗ್ ಈ ತಖತ್ ನಿರ್ಮಿಸಿದ. ಹತ್ತನೇ ಸಿಖ್ ಗುರುವಾದ ಗುರು ಗೋಬಿಂದ್ ಸಿಂಗ್ ಅವರು 1666 ರಲ್ಲಿ ಪಾಟ್ನಾದಲ್ಲಿ ಜನಿಸಿದರು. ಅವರು ಆನಂದಪುರ ಸಾಹಿಬ್ ಗೆ ತೆರಳುವ ಮೊದಲು ಕೆಲವು…
ಹಂದಿ ಮೂತ್ರಪಿಂಡ ಕಸಿ ಮಾಡಿಸಿಕೊಂಡು ಇತಿಹಾಸ ನಿರ್ಮಿಸಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಮ್ಯಾಸೆಚೂಟ್ಸ್ ನ 62 ವರ್ಷದ ರಿಚರ್ಡ್ ಸ್ಲೇಮನ್ ಅವರು ಕೆಲ ದಿನಗಳ ಹಿಂದೆ ಹಂದಿ ಮೂತ್ರಪಿಂಡ ಕಸಿ ಮಾಡಿಸಿಕೊಂಡು ಗಮನ ಸೆಳೆದಿದ್ದರು. ಇದೀಗ ಅವರು ಕೊನೆಯುಸಿರೆಳೆದಿದ್ದಾರೆ. ಮ್ಯಾಸೆಚೂಟ್ಸ್ ನ ನಿಧನಕ್ಕೆ ಹಂದಿ ಮೂತ್ರಪಿಂಡ ಕಸಿ ಮಾಡಿಸಿಕೊಂಡಿರುವುದು ಕಾರಣವಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ. ರಿಕ್ ಸ್ಲೇಮನ್ ಅವರ ಹಠಾತ್ ಮರಣದ ಬಗ್ಗೆ ಮಾಸ್ ಜನರಲ್ ಟ್ರಾನ್ಸ್ಪ್ಲಾಂಟ್ ತಂಡವು ತೀವ್ರವಾಗಿ ದುಃಖಿತವಾಗಿದೆ. ಇದು ಅವರ ಇತ್ತೀಚಿನ ಕಸಿ ಫಲಿತಾಂಶವಾಗಿದೆ ಎಂದು ನಮಗೆ ಯಾವುದೇ ಸೂಚನೆ ಇಲ್ಲ ಎಂದು ಮ್ಯಾಸಚೂಸೆಟ್ಸ ಜನರಲ್ ಆಸ್ಪತ್ರೆ ಹೇಳಿಕೆಯಲ್ಲಿ ತಿಳಿಸಿದೆ. ರಿಚರ್ಡ್ ಸ್ಲೇಮನ್ ಮ್ಯಾಸಚೂಸೆಟ್ಸ್ ನ ವೇಮೌತ್ನ ನಿವಾಸಿಯಾಗಿದ್ದು ಹಂದಿ ಮೂತ್ರಪಿಂಡ ಕಸಿ ಮಾಡುವ ಮೊದಲು ಅವರು ಟೈಪ್ 2 ಮಧುಮೇಹ ಮತ್ತು ಅಧಿಕ ರಕ್ತದೊತ್ತಡವನ್ನು ನಿರ್ವಹಿಸುವ ಸುದೀರ್ಘ ಇತಿಹಾಸವನ್ನು ಹೊಂದಿದ್ದರು. ಅದೇ ಮ್ಯಾಸಚೂಸೆಟ್ಸ ಜನರಲ್ ಹಾಸ್ಪಿಟಲ್ ತಂಡವು ಡಿಸೆಂಬರ್ 2018 ರಲ್ಲಿ ಮಾನವ ಮೂತ್ರಪಿಂಡ ಕಸಿ ಮಾಡುವ…
ಸೋಶಿಯಲ್ ಮೀಡಿಯಾ ಪ್ಲಾಟ್ ಫಾರ್ಮ್ ನಲ್ಲಿ ಹೃದಯ ವಿದ್ರಾವಕ ವಿಡಿಯೋವೊಂದು ಹರಿದಾಡುತ್ತಿದೆ. ಮನೆಯಲ್ಲಿ ತಾಯಿಯೊಬ್ರು ತನ್ನ ಮಗಳ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋ ನೋಡಿದವರ ಮನಸು ಕದಡದೇ ಇರದು. ಅತ್ಯಂತ ಕ್ರೂರವಾಗಿ ಮಹಿಳೆ ಮಗುವಿನ ಮೇಲೆ ತನ್ನ ವರ್ತನೆ ತೋರಿದ್ದಾಳೆ. ಗುಜರಾತ್ ಮೂಲದ ತಾಯಿಯೊಬ್ಬರು ಮನೆಯಲ್ಲಿ ಅಡುಗೆ ಮಾಡುವಾಗ ಮಗು ಏನೋ ಕೀಟಲೆ ಮಾಡಿದೆ. ಇಷ್ಟಕ್ಕೆ ಸುಮ್ಮನಾಗದ ತಾಯಿ ಮಗಳನ್ನು ಚಪಾತಿ ಎತ್ತಿ ಹಾಕುವ ಸೌಟ್ನಿಂದ ಮನಬಂದಂತೆ ಥಳಿಸಿದ್ದಾಳೆ. ಬಾಲಕಿಯ ಕತ್ತು ಅನ್ನು ಜೋರಾಗಿ ಹಿಸುಕಿ ಮೇಲೆ ಕುಳಿತ್ತಿದ್ದಾಳೆ. ತನ್ನ ಶಕ್ತಿ ಎಷ್ಟಿದಿಯೋ ಅಷ್ಟನ್ನು ಮಗುವಿನ ಮೇಲೆ ಪ್ರಯೋಗಿಸಿದ್ದಾಳೆ. ಮಗುವಿನ ಬಟ್ಟೆ ಹಿಡಿದು ಮೇಲೆ ಎತ್ತಿ ಎಳೆದಾಡಿದ್ದಾಳೆ. ನೆಲಕ್ಕೆ ಹಾಕಿ ಹೊಡೆದಿದ್ದಾಳೆ. ಈ ವೇಳೆ ತಾಯಿಯಿಂದ ಮಗುವಿಗೆ ನರಕ ಸದೃಶ್ಯವಾಗಿದ್ದು ಕಿರುಚಾಡಿದೆ. ಪ್ರಾಣ ಉಳಿದರೆ ಸಾಕು ಎನ್ನುವಂತೆ ಮಗು ಭಯದಲ್ಲಿ ಒದ್ದಾಡಿದೆ ಎನ್ನಲಾಗಿದೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ನೆಟ್ಟಿಗರು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು ವಿಡಿಯೋ…
ಮಂಡ್ಯ: ಸರ್ಕಾರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೂಲಂಕಷವಾಗಿ ತನಿಖೆ ನಡೆಸಬೇಕು. ತಪ್ಪು ಯಾರೇ ಮಾಡಿದ್ದರೂ ಶಿಕ್ಷೆ ಅನುಭವಿಸಲೇಬೇಕು ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ. ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೂಲಂಕಷವಾಗಿ ತನಿಖೆ ನಡೆಸಬೇಕು. ತಪ್ಪು ಯಾರೇ ಮಾಡಿದ್ದರೂ ಶಿಕ್ಷೆ ಅನುಭವಿಸಲೇಬೇಕು. ಸರ್ಕಾರ ಈಗಾಗಲೇ ಎಲ್ಲೋ ಒಂದು ಕಡೆ ಎಡವಿದೆ. ಹೆಣ್ಣು ಮಕ್ಕಳ ಮುಖವನ್ನು ಬ್ಲರ್ ಮಾಡದೇ ವಿಡಿಯೋ ಹರಿಬಿಟ್ಟಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕಿತ್ತು. ಈಗ ಸಂತ್ರಸ್ಥ ಮಹಿಳೆಯರಿಗೆ ಪೊಲೀಸರಿಂದ ತೊಂದರೆಯಾಗುತ್ತಿದೆ. ಸರ್ಕಾರ ಈ ಪ್ರಕರಣವನ್ನು ಸಿಬಿಐಗೆ ವಹಿಸಿದ್ದಲ್ಲಿ ಸೂಕ್ತ ತನಿಖೆಯಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಪೆನ್ ಡ್ರೈವ್ ಹಂಚಿಕೆ ಹೆಚ್ ಡಿಕೆ ಕೈವಾಡ ಇದೆ ಎಂಬ ಸಚಿವ ಚಲುವರಾಯಸ್ವಾಮಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಜವಾಬ್ದಾರಿಯುತವಾದ ಮಂತ್ರಿಯಾಗಿ ಚಲುವಣ್ಣ ಕೆಲಸ ಮಾಡ್ತಿದ್ದಾರೆ. ಈ ರೀತಿ ಅಪಪ್ರಚಾರ, ಆರೋಪ ಮಾಡ್ಕೊಂಡು ಹೋಗುವುದು ಸೂಕ್ತ ಅಲ್ಲ. ಎಸ್ ಐಟಿ ಮೇಲೆ ನಂಬಿಕೆ…