Subscribe to Updates
Get the latest creative news from FooBar about art, design and business.
- ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
- ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್ ಸೆಟ್ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
- ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
- ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
- ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ: ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
- ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
- ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
Author: admin
ಸತತ 5 ಗೆಲುವಿನ ಹಿಂದಿರುವ ಗುಟ್ಟನ್ನು ಆರ್ ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ಬಿಚ್ಚಿಟ್ಟಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸತತ 5 ಗೆಲುವು ದಾಖಲಿಸುವ ಮೂಲಕ ಪ್ಲೇ–ಆಫ್ಸ್ ಆಸೆಯನ್ನು ಜೀವಂತವಾಗಿ ಉಳಿಸಿಕೊಂಡಿದೆ. ಇದು ಅದ್ಭುತ ಗೆಲುವು. ಈ ಸಲುವಾಗಿ ನಾವು ಅಮೋಘ ಆಟವಾಡಬೇಕಿತ್ತು. ಇದು ಕೇವಲ ಆತ್ಮವಿಶ್ವಾಸವಷ್ಟೆ. ಟೂರ್ನಿಯ ಮೊದಲಾರ್ಧದಲ್ಲಿ ನಾವು ಹೋರಾಡುತ್ತಿದ್ದೆವು. ಮೊದಲ 5-6 ಪಂದ್ಯಗಳಲ್ಲಿ ನಮ್ಮಿಂದ ಹೆಚ್ಚು ವಿಕೆಟ್ ಗಳನ್ನು ಪಡೆಯಲು ಸಾಧ್ಯವಾಗಲಿಲ್ಲ. ಈಗ ಮೂರಕ್ಕೂ ಹೆಚ್ಚು ಬಾರಿ ಎದುರಾಳಿ ತಂಡಗಳನ್ನು ಆಲ್ ಔಟ್ ಮಾಡಿದ್ದೇವೆ,” ಎಂದು ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಫಾಫ್ ಡು ಪ್ಲೆಸಿಸ್ ಆರ್ ಸಿಬಿ ಯಶಸ್ಸಿನ ಗುಟ್ಟನ್ನು ಬಿಚ್ಚಿಟ್ಟಿದ್ದಾರೆ. ತವರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ 47 ರನ್ ಗಳಿಂದ ಗೆದ್ದ ಆರ್ ಸಿಬಿ, ಈಗ ಅಂಕಪಟ್ಟಿಯಲ್ಲಿ ಒಟ್ಟು 12 ಅಂಕಗಳನ್ನು ಕಲೆಹಾಕಿದೆ. ಆರ್…
ಸ್ಯಾಂಡಲ್ ವುಡ್ ನಟ ಚೇತನ್ ಚಂದ್ರ ಮೇಲೆ ಕಿಡಿಗೇಡಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಬೆಂಗಳೂರಿನ ಕಗ್ಗಲಿಪುರದಲ್ಲಿ ಘಟನೆ ನಡೆದಿದ್ದು ಚೇತನ್ ಚಂದ್ರ ಮೇಲೆ ಹಲ್ಲೆ ಮಾಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇವತ್ತು ಒಂದು ಕೆಟ್ಟ ಘಟನೆಯಲ್ಲಿ ಸಿಕ್ಕಿ ಹಾಕಿಕೊಂಡೆ. ನನ್ನ ಗಾಡಿ ಅಡ್ಡ ಹಾಕಿ ಹೊಡೆದರು. ಚೆನ್ನಾಗಿ ಕುಡಿದು ನನ್ನ ಗಾಡಿ ಅಡ್ಡ ಹಾಕಿದ್ದಾರೆ. ಏನಿಲ್ಲ ಅಂದರೂ 20 ಜನರು ಸೇರಿಕೊಂಡು ನನಗೆ ಹೊಡೆದಿದ್ದಾರೆ. ಅದರ ವಿಡಿಯೋ ಇದೆ. ಮೂಗು ಮುರಿದು ಹಾಕಿದ್ದಾರೆ. ಕಗ್ಗಲಿಪುರ ಪೊಲೀಸ್ ಠಾಣೆ ಪಕ್ಕದಲ್ಲಿ ಪ್ರಥಮ ಚಿಕಿತ್ಸೆ ಪಡೆಯಲು ಬಂದಿದ್ದೇನೆ. ಈಗ ಮತ್ತೆ ಬಂದು ಕಾರು ಒಡೆದು ಹಾಕಿದ್ದಾರೆ. ತುಂಬ ಕೆಟ್ಟ ಜನರು’ ಎಂದು ಚೇತನ್ ಚಂದ್ರ ಹೇಳಿದ್ದಾರೆ. ಈ ಬಗ್ಗೆ ಚೇತನ್ ಚಂದ್ರ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೇವಸ್ಥಾನಕ್ಕೆ ಹೋಗಿ ಬರುವ ವೇಳೆ ಘಟನೆ ನಡೆದಿದ್ದು, ಈ ಬಗ್ಗೆ ನಟ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಚೇತನ್ ಚಂದ್ರ ಅವರನ್ನು ಬೈಕ್ ನಲ್ಲಿ…
ಭಾರತವು ವಿಶ್ವದ ಎರಡನೇ ಅತಿ ದೊಡ್ಡ ಶೇಂಗಾ ಉತ್ಪಾದಿಸುವ ದೇಶವಾಗಿದೆ. ಮುಂಗಾರು ಹಂಗಾಮಿನ ಆರಂಭದ ನಂತರ ಖಾರಿಫ್ ಬೆಳೆಗಳ ಬಿತ್ತನೆಯನ್ನು ದೊಡ್ಡ ಪ್ರಮಾಣದಲ್ಲಿ ಮಾಡಲಾಗುತ್ತದೆ. ಈ ಋತುವಿನಲ್ಲಿ ಅನೇಕ ರೈತರು ಶೇಂಗಾ ಬೇಸಾಯವನ್ನೂ ಮಾಡುತ್ತಾರೆ. ಕೆಲವು ಪ್ರದೇಶಗಳಲ್ಲಿ ಇದನ್ನು ಬಾದಾಮಿ ಎಂದೂ ಕರೆಯುತ್ತಾರೆ. ಶೇಂಗಾ ಕೃಷಿ ರೈತರಲ್ಲಿ ಜನಪ್ರಿಯವಾಗುತ್ತಿದೆ. ಪ್ರಮುಖ ಖಾರಿಫ್ ಬೆಳೆ ಎಂದು ಕರೆಯಲ್ಪಡುವ ಶೇಂಗಾವನ್ನು ‘ಬಡವರ ಬಾದಾಮಿ’ ಎಂದೂ ಕರೆಯಲಾಗುತ್ತದೆ. ಶೇಂಗಾ ಬೆಳೆಯುವ ರೈತರು ಕೆಲವೇ ತಿಂಗಳಲ್ಲಿ ಲಕ್ಷಾಂತರ ರೂಪಾಯಿ ಆದಾಯ ಗಳಿಸುತ್ತಾರೆ. ನಾಲ್ಕು ತಿಂಗಳಲ್ಲಿ ಬದಲಾಗಲಿದೆ ರೈತರ ಭವಿಷ್ಯ. ಬೇಸಾಯವನ್ನು ಅರ್ಥಮಾಡಿಕೊಂಡ ಜನರ ಪ್ರಕಾರ, ಶೇಂಗಾ ಬೆಳೆಯುವ ಬಡ ರೈತರ ಭವಿಷ್ಯ 4 ತಿಂಗಳಲ್ಲಿ ಬದಲಾಗಬಹುದು. ಆದಾಗ್ಯೂ, ನೆಲಗಡಲೆ ಕೃಷಿಯು ಸರಿಯಾದ ತಂತ್ರಜ್ಞಾನದ ಮೇಲೆ ಅವಲಂಬಿತವಾಗಿದೆ. ಆದ್ದರಿಂದ, ಶೇಂಗಾ ಬೆಳೆಯುವ ರೈತರು ಖಾರಿಫ್ ಋತುವಿನಲ್ಲಿ ಬಿತ್ತನೆ ಸಮಯ, ಮಣ್ಣಿನಲ್ಲಿ ಗೊಬ್ಬರದ ಅವಶ್ಯಕತೆ, ನೀರಾವರಿ ಮತ್ತು ಕೀಟ ನಿರ್ವಹಣೆಯಂತಹ ಕೆಲವು ಪ್ರಮುಖ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಬೇಕು. ಈ ರಾಜ್ಯಗಳಲ್ಲಿ ಶೇಂಗಾ…
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗ್ರೂಪ್ ಡಿ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಒಟ್ಟು 11,307 ಹುದ್ದೆಗಳಿಗೆ ನೇಮಕಾತಿಯನ್ನು ಕರೆದಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ. ಇಲಾಖೆಯ ಹೆಸರು: BBMP ಹುದ್ದೆಯ ಹೆಸರು: ಪೌರಕಾರ್ಮಿಕರು ಸ್ಥಳ: ಬೆಂಗಳೂರು (ಕರ್ನಾಟಕ) ಖಾಲಿ ಇರುವ ಹುದ್ದೆಗಳು: 11,307 ಅಧಿಸೂಚನೆ ಹೊರಡಿಸಿದ ದಿನಾಂಕ: 15-04-2024 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-11-2024 ಅರ್ಜಿ ಸಲ್ಲಿಸುವ ವಿಧಾನ: ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಶೈಕಣಿಕ ಅರ್ಹತೆ: ಬಿಬಿಎಂಪಿ ನಿಯಮಾವಳಿಯನ್ನು ಹೊಂದಿದೆ. ಹುದ್ದೆಗಳವಿವರ ಮತ್ತುವಿದ್ಯಾರ್ಹತೆ: ಸ್ಥಳೀಯ ವೃಂದದ-ಹುದ್ದೆಗಳು, ಕಲ್ಯಾಣ ಕರ್ನಾಟಕ (KK)-905 ಮತ್ತು ಉಳಿಕೆ ಮೂಲ ವೃಂದ (RPC)-10,402 ಹುದ್ದೆಗಳಿವೆ. ಈ ಹುದ್ದೆಗೆ ಯಾವುದೇ ಶೈಕ್ಷಣಿಕ ವಿದ್ಯಾರ್ಹತೆ ಅಗತ್ಯವಿಲ್ಲ. ಕನ್ನಡ ಮಾತನಾಡಲು ತಿಳಿದಿರುವವರು ಅರ್ಜಿ ಸಲ್ಲಿಸಬಹುದು. ವಯೋಮಿತಿ: ಅಭ್ಯರ್ಥಿಗಳ ಗರಿಷ್ಠ ವಯಸ್ಸು 55 ವರ್ಷ. ಅಭ್ಯರ್ಥಿಗಳು ಭಾರತೀಯ ನಾಗರೀಕರಾಗಿರಬೇಕು. ಬಿಬಿಎಂಪಿ ಯಲ್ಲಿ ನೇರ ಪಾವತಿ / ಕ್ಷೇಮಾಭಿವೃದ್ಧಿ / ದಿನಗೂಲಿ ಆಧಾರದಲ್ಲಿ ಎರಡು ವರ್ಷ ಕಡಿಮೆ…
ದಿನದಿಂದ ದಿನಕ್ಕೆ ಏರುತ್ತಿದ್ದ ಬಿಸಿಲಿನ ತಾಪಮಾನಕ್ಕೆ ಜನ ರೋಸಿ ಹೋಗಿದ್ದರು. ಈ ಬಿರುಬಿಸಿಲಿನ ಶಾಖಕ್ಕೆ ಜನ ಹೈರಾಣಾಗಿರಬೇಕಾದ್ರೇನೇ ವರುಣ ಎರಡು ದಿನಗಳ ಗ್ಯಾಪ್ ನಂತ್ರ ಮತ್ತೆ ಬೆಂಗಳೂರಿನಲ್ಲಿ ಮಳೆರಾಯನ ಅಬ್ಬರ ಶುರುವಾಗಿದೆ. ರಾಜ್ಯಲ್ಲೂ ಮಳೆರಾಯನ ಅಬ್ಬರ ಕಮ್ಮಿ ಏನ್ ಇಲ್ಲ. ರಾಜ್ಯದಲ್ಲಿ ಎಲ್ಲೆಲ್ಲಿ ಏನೇನು ಆಗಿದೆ ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಬೆಂಗಳೂರು: ಎರಡು ದಿನಗಳ ಗ್ಯಾಪ್ ನಂತರ ಮತ್ತೆ ಬೆಂಗಳೂರಿನಲ್ಲಿ ಮಳೆರಾಯನ ಅಬ್ಬರ ಶುರುವಾಗಿದೆ. ಟೌನ್ ಹಾಲ್, ವಿಲ್ಸನ್ ಗಾರ್ಡನ್, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನ ಹೊರ ವಲಯದಲ್ಲೂ ಕೂಡ ಭಾರೀ ಮಳೆಯಾಗಿದೆ. ಪದ್ಮನಾಭನಗರ ಸುತ್ತ-ಮುತ್ತ, ವೈಟ್ ಫೀಲ್ಡ್, ಎಲೆಕ್ಟ್ರಾನಿಕ್ ಸಿಟಿ, ಚಂದಾಪುರ, ಜೆಪಿನಗರ, ನೈಸ್ ರಸ್ತೆ ಸೇರಿದಂತೆ ಹಲವೆಡೆ ಮಳೆಯಾಗಿದೆ. ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಯ ಅಬ್ಬರಕ್ಕೆ ಗಿಡಗಂಟಿಗಳು ನೆಲಸಮವಾಗಿವೆ. ರಾಜ್ಯದ 13 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಜಿಲ್ಲೆಯ ಜನ ಎಚ್ಚರದಿಂದ ಇರುವಂತೆ ತಿಳಿಸಿದೆ. ದಕ್ಷಿಣ ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ…
ಕಲ್ಯಾಣ ಮಂಟಪ ಸಿನಿಮಾ ಮೂಲಕ ಕನ್ನಡಿಗರಿಗೆ ಪರಿಚಿತರಾದವರು ನಟಿ ಮೋಹಿನಿ ಶ್ರೀನಿವಾಸನ್. ಈಕೆ ಮೂಲತಃ ತಮಿಳಿನವರಾದರೂ, ಕನ್ನಡತಿಯಂತೆ ನಮ್ಮೊಂದಿಗೆ ಬೆರೆತು ಹೋಗಿದ್ದರು. ಅಲ್ಲದೇ ಕನ್ನಡದಲ್ಲಿ ಜ್ವಾಲಾ, ಸಿಡಿದೆದ್ದ ಪಾಂಡವರು, ಗಡಿಬಿಡಿ ಅಳಿಯ, ರೌಡಿ, ಲಾಲಿ, ನಿಶ್ಯಬ್ಧ ಸಿನಿಮಾಗಳಲ್ಲೂ ನಟಿಸಿದ ಮೋಹಿನಿ, ಉತ್ತಮ ನಟಿಯಾಗಿ ಹೊರಹೊಮ್ಮಿದರು. ಜೊತೆಗೆ ದಕ್ಷಿಣ ಭಾರತದ ಇನ್ನುಳಿದ ತೆಲುಗು, ತಮಿಳು, ಮಲಯಾಳಂ ಚಿತ್ರಗಳಲ್ಲಿಯೂ ಮೋಹಿನಿ ಸಕ್ರಿಯರಾಗಿ ಸಿನಿಮಾಗಳಲ್ಲಿ ನಟಿಸುತ್ತಲೇ ಇದ್ದರು. ಈ ಸಿನಿಮಾ ನಡುವೆ 2006ರಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ 2011ರಲ್ಲಿ ಮಲಯಾಳಂನಲ್ಲಿ ಬಂದ ಕಲೆಕ್ಟರ್ ಚಿತ್ರವೇ ಅಂತಿಮ ಚಿತ್ರ ಆಗಿದ್ದು, ಅದಾದ ಮೇಲೆ ಮೋಹಿನಿ ಸಿನಿಮಾರಂಗದಿಂದ ದೂರ ಉಳಿದರು. ಈ ನಿರ್ಧಾರದ ಹಿಂದಿನ ಸತ್ಯವನ್ನು ತಮಿಳಿನ ಯೂಟ್ಯೂಬ್ ಚಾನೆಲ್ಗೆ ನೀಡಿದ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ ಮೋಹಿನಿ ಕ್ರಿಸ್ಟೀನಾ. ಹೌದು, ಮತಾಂತರವಾಗದಿದ್ದರೆ, ನಾನು ಬದುಕುತ್ತಲಿರಲಿಲ್ಲ. ಆತ್ಮಹತ್ಯೆ ಮಾಡಿಕೊಂಡಿರುತ್ತಿದ್ದೆ ಎಂದು ಒಂದಷ್ಟು ವಿಚಾರಗಳನ್ನು ಹೇಳಿಕೊಂಡಿದ್ದಾರೆ. ಕೆಲವೊಮ್ಮೆ ನಾನೇಕೆ ಬದುಕಬೇಕು? ಈ ಜೀವನ ಏಕೆ ಬೇಕು ಎಂಬ…
ಮಲ್ಲಿಕಾರ್ಜುನ ಖರ್ಗೆ ಹೆಲಿಕಾಪ್ಟರ್ ಅನ್ನು ತಡೆದು ತಪಾಸಣೆ ನಡೆಸಲಾಗಿದ ಘಟನೆ ಬಿಹಾರದ ಸಮಷ್ಟಿಪುರದಲ್ಲಿ ಭಾನುವಾರ ನಡೆದಿದೆ. ಬಿಜೆಪಿ–NDA ಸದಸ್ಯರಿಗೆ ಮುಕ್ತವಾಗಿ ತಿರುಗಾಡಲು ಅವಕಾಶ ನೀಡಿರುವ ಚುನಾವಣಾಧಿಕಾರಿಗಳು, ವಿರೋಧ ಪಕ್ಷಗಳ ನಾಯಕರನ್ನು ಮಾತ್ರ ಗುರಿಯಾಗಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಟೀಕಿಸಿದ್ದಾರೆ. ಪೊಲೀಸರನ್ನೊಳಗೊಂಡಂತೆ ಕೆಲವು ಅಧಿಕಾರಿಗಳು ಹೆಲಿಕಾಪ್ಟರ್ ಅನ್ನು ಸುತ್ತುವರಿದಿರುವುದು ಹೆಲಿಕಾಪ್ಟರನ್ನು ಪರಿಶೀಲಿಸಿದ್ದಾರೆ. ಈ ಕುರಿತು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ ರಾಜೇಶ್ ರಾಥೋರ್, “ಕೇರಳದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೆಲಿಕಾಪ್ಟರ್ ಅನ್ನು ತಪಾಸಣೆಗೊಳಪಡಿಸಿದ ನಂತರ, ಇದೀಗ ರಾಜ್ಯದಲ್ಲಿ ಒಂದರ ಹಿಂದೆ ಒಂದು ಸಮಾವೇಶವನ್ನುದ್ದೇಶಿಸಿ ಮಾತನಾಡಿದ್ದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಲಿಕಾಪ್ಟರ್ ಅನ್ನು ಬಿಹಾರದ ಸಮಷ್ಟಿಪುರದಲ್ಲಿ ತಪಾಸಣೆಗೊಳಪಡಿಸಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಚಿಕ್ಕಮಗಳೂರು: ಖಾಸಗಿ ಕಾಫಿ ತೋಟದಲ್ಲಿ ಒಂಟಿ ಸಲಗ ಸಾವಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಕಂಚಿನ ಕಲ್ಲು ದುರ್ಗದ ಬಳಿ ನಡೆದಿದೆ. ವಿದ್ಯುತ್ ಹರಿಸಿ ಆನೆಯನ್ನು ಕೊಲ್ಲಲಾಗಿದೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಆನೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ತಯಾರಿ ನಡೆಸಿತ್ತು ಎನ್ನಲಾಗಿದೆ. ಇಲಾಖೆ ಸಿಬ್ಬಂದಿ ಮತ್ತು ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ತನಿಖೆ ಮಾಡಿ ಪ್ರಕರಣ ದಾಖಲು ಮಾಡಬೇಕು ಒತ್ತಾಯ ಕೇಳಿಬಂದಿದೆ. ಇತ್ತೀಚೆಗೆ ಮೂಡಿಗೆರೆ,ಆಲ್ದೂರು ಸುತ್ತಮುತ್ತ ಆನೆ ಊರಿಗೆ ಬಂದು ಸಂಘರ್ಷ ಜೋರಾಗಿತ್ತು ಮತ್ತು ಅಧಿಕಾರಿಗಳು ಇದು ಅನಿರೀಕ್ಷಿತ ಸಾವಲ್ಲ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296 ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA
ಆಂಧ್ರ ಪ್ರದೇಶದ ಕರ್ನೂಲಿನ ಬಳಿ ಕಾರು ಅಪಘಾತದಲ್ಲಿ ಕರ್ನಾಟಕ ಮೂಲದ ನಟಿ ಪವಿತ್ರ ಜಯರಾಂ ನಿಧನರಾಗಿದ್ದು, ಇಂದು ಬೆಳಿಗ್ಗೆ ನಟಿ ಪವಿತ್ರಾ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಪವಿತ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಂದು ಮುಂಜಾನೆ ಪವಿತ್ರಾ ಜಯರಾಮ್ ಅವರು ಕರ್ನಾಟಕದಿಂದ ಹೈದರಾಬಾದ್ ಗೆ ವಾಪಸ್ ಆಗುತ್ತಿದ್ದರು. ಮಾರ್ಗ ಮಧ್ಯೆ ಮಹೆಬೂಬ್ ನಗರ ಜಿಲ್ಲೆ ಭೂತ್ ಪುರ ಪುರಸಭೆ ವ್ಯಾಪ್ತಿಯ ಶೇರಿಪಲ್ಲಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಪವಿತ್ರಾ ಜಯರಾಮ್ ಅವರು ಕುಟುಂಬ ಸಮೇತ ಕಾರಿನಲ್ಲಿ ಹೈದರಾಬಾದ್ ಗೆ ಹೋಗುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಜೊತೆಗೆ ಹೈದರಾಬಾದ್ ನಿಂದ ವನಪರ್ತಿಗೆ ಬರುತ್ತಿದ್ದ RTC ಬಸ್ ಗೂ ಡಿಕ್ಕಿಯಾಗಿದೆ. ರಸ್ತೆ ಅಪಘಾತದಲ್ಲಿ ಪವಿತ್ರ ಜಯರಾಮ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ವೇಳೆ ಪವಿತ್ರ ಅವರ ಕುಟುಂಸ್ಥರು ಹಾಗೂ ಆಕೆಯ ಸಹ ನಟರು ಇದ್ದರು ಎಂದು ಹೇಳಲಾಗಿದೆ. ಮೂಲತಃ ಮಂಡ್ಯ ತಾಲೂಕಿನ ಹನಕೆರೆಯ ಪವಿತ್ರಾ ಜಯರಾಂ ಕನ್ನಡ ರೋಬೋ ಫ್ಯಾಮಿಲಿ’…
ಬೆಂಗಳೂರು: ರಸ್ತೆ ಅಪಘಾತದಲ್ಲಿ ಖ್ಯಾತ ಕಿರುತೆರೆ ನಟಿಯೊಬ್ಬರು ಸಾವಿಗೀಡಾದ ಘಟನೆ ನಡೆದಿರುವುದು ವರದಿಯಾಗಿದೆ. ಕಿರುತೆರೆ ನಟಿ ಪವಿತ್ರಾ ಜಯರಾಂ(35) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಕರ್ನೂಲು ಸಮೀಪ ನಡೆದ ಕಾರು ಅಪಘಾತದಲ್ಲಿ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ನಟಿ ಪವಿತ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಮೂಲತಃ ಕನ್ನಡಿಗರಾದ ಪವಿತ್ರ ತೆಲುಗಿನ ʼತ್ರಿನಯನಿʼ ಧಾರವಾಹಿಯಲ್ಲಿ ನಟಿಸಿ ಅಪಾರ ಮನೆ ಮಂದಿಯ ಮನಗೆದ್ದಿದ್ದರು. ಕನ್ನಡದ ‘ರೋಬೋ ಫ್ಯಾಮಿಲಿ’ ಮೂಲಕ ಕಿರುತೆರೆಗೆ ಪ್ರವೇಶ ಪಡೆದಿದ್ದ ಅವರು, ಮೂಲತಃ ಮಂಡ್ಯ ತಾಲೂಕಿನ ಹನಕೆರೆಯವರು. ಕನ್ನಡದಲ್ಲಿ ಅವರು ʼರೋಬೋ ಫ್ಯಾಮಿಲಿʼ ಸೇರಿ ʼಜೋಕಾಲಿʼ, ʼನೀಲಿʼ, ʼರಾಧಾರಮಣʼ ಧಾರವಾಹಿಯಲ್ಲಿ ನಟಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296