Subscribe to Updates
Get the latest creative news from FooBar about art, design and business.
- ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
- ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್ ಸೆಟ್ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
- ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
- ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
- ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ: ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
- ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
- ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
Author: admin
ತುಮಕೂರು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮುಖ್ಯ ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟು ಇನ್ನಿಬ್ಬರು ಶಿಕ್ಷಕರಿಗೆ ತೀವ್ರ ಗಾಯಗಳಾಗಿರುವ ಘಟನೆ ಪಟ್ಟಣದ ಪಾವಗಡ ತಾಲೂಕಿನ ತುಮಕೂರು ರಸ್ತೆಯ ಕಣಿವೆನಹಳ್ಳಿ ಗೇಟ್ ಬಳಿ ಭಾನುವಾರ ಬೆಳಗ್ಗೆ ನಡೆದಿದೆ. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ (ಪ್ರೌಢಶಾಲಾ ವಿಭಾಗ) ಉಪ ಪ್ರಾಂಶುಪಾಲರಾದ ಓ ಧನಂಜಯ್ಯ(58) ಮತ್ತು ಗೌಡೇಟಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಶ್ರೀ ಕೃಷ್ಣ(49) ಮೃತರಾಗಿದ್ದಾರೆ. ತುಮಕೂರಿನಲ್ಲಿ ಶಿಕ್ಷಕರೊಬ್ಬರ ಮಗಳ ಆರತಕ್ಷತೆ ಮುಗಿಸಿ, ಮರಳಿ ಪಾವಗಡಕ್ಕೆ ಬರುವಂತಹ ಸಮಯದಲ್ಲಿ, ಪಾವಗಡ ತುಮಕೂರು ಮಾರ್ಗದ ಕಣಿವೆನಹಳ್ಳಿ ಗೇಟ್ ಬಳಿ ಇರುವ ನಯಾರ ಪೆಟ್ರೋಲ್ ಬಂಕ್ ಸಮೀಪದಲ್ಲಿ ಕಾರು ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಶ್ರೀ ಕೃಷ್ಣ ಮತ್ತು ಓ.ಧನಂಜಯ್ಯ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತಿಬ್ಬರು ಶಿಕ್ಷಕರಗಳಾದ ಆರ್ ಎಂ ನರಸಿಂಹ ಮತ್ತು ವೆಂಕಟಾಚಲಪತಿ ಅವರಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ.…
ಧಾರಾಕಾರ ಮಳೆ ಹಾಗೂ ಪ್ರವಾಹಕ್ಕೆ ಅಫ್ಘಾನಿಸ್ತಾನ ದೇಶದ ಜನರು ತತ್ತರಿಸಿ ಹೋಗಿದ್ದಾರೆ. ಘಟನೆಯಲ್ಲಿ ಇದುವರೆಗೂ ಸುಮಾರು 200ಕ್ಕೂ ಅಧಿಕ ಜನರು ಸಾವನ್ನಪ್ಪಿರುವುದಾಗಿ ವಿಶ್ವಸಂಸ್ಥೆ ತಿಳಿಸಿದೆ. ರಾತ್ರಿ ಆರಂಭವಾದ ಮಳೆಗೆ ಪ್ರವಾಹ ನುಗ್ಗಿದ ಪರಿಣಾಮ ಮಹಿಳೆಯರು, ಮಕ್ಕಳು ಸೇರಿದಂತೆ ನೂರಾರು ಮಂದಿ ಕೊನೆಯುಸಿರೆಳೆದಿದ್ದಾರೆ. ಹವಾಮಾನ ವೈಪರೀತ್ಯದಿಂದಾಗಿ ಅಫ್ಘಾನಿಸ್ತಾನದಲ್ಲಿ ಭಾರೀ ಮಳೆಯಾಗಿರುವುದಾಗಿ ವರದಿ ವಿವರಿಸಿದೆ. ಪ್ರವಾಹದಿಂದ ಸಾವನ್ನಪ್ಪಿರುವವರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಇದ್ದಿರುವುದಾಗಿ ವಿಪತ್ತು ನಿರ್ವಹಣಾ ಮಂಡಳಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸಲು ಶೋಧ ಕಾರ್ಯ ನಡೆಯುತ್ತಿರುವುದಾಗಿ ವರದಿಯಲ್ಲಿ ತಿಳಿಸಲಾಗಿದೆ. ಮಳೆ, ಪ್ರವಾಹದಿಂದ ನೂರಾರು ಜನರು ಮನೆ ಕಳೆದುಕೊಂಡಿದ್ದು, ಅವರಿಗಾಗಿ ತಾತ್ಕಾಲಿಕ ಟೆಂಟ್ಸ್, ಬ್ಲ್ಯಾಂಕೆಟ್, ಆಹಾರ ಒದಗಿಸಲಾಗಿದೆ. ಧಾರಾಕಾರ ಮಳೆ, ಪ್ರವಾಹದಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಪ್ರವಾಹದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪ್ರವಾಹದಿಂದಾಗಿ ಹಲವಾರು ಪ್ರದೇಶಗಳಲ್ಲಿ ಭಾರೀ ಆರ್ಥಿಕ ನಷ್ಟಕ್ಕೆ ಕಾರಣವಾಗಿದೆ ಎಂದು ವಿಪತ್ತು ನಿರ್ವಹಣಾ ಮಂಡಳಿಯ ಪ್ರಾಂತೀಯ ನಿರ್ದೇಶಕ ಮೊಹಮ್ಮದ್ ಅಕ್ರಮ್ ಅಕ್ಬರಿ ತಿಳಿಸಿರುವುದಾಗಿ ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ…
ಬೆಂಗಳೂರು: ನಗರದ ರಮಾಬಾಯಿ SC ST ಲೇಡಿಸ್ ಹಾಸ್ಟೆಲ್ ನಲ್ಲಿ ಬೆಳ್ಳಂಬೆಳಗ್ಗೆ ಹನಿ ನೀರು ಇಲ್ಲದೇ ಬೇಸತ್ತ ವಿದ್ಯಾರ್ಥಿನಿಯರು, ಏಕಾಏಕಿ ರಸ್ತೆಗೆ ಬಂದು ರೋಡ್ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ಲೇಡಿಸ್ ಹಾಸ್ಟೆಲ್ ಅವ್ಯವಸ್ಥೆಗಳ ಆಗರ ಆಗಿದೆ ಅಂತ ಬೆಂಗಳೂರು ವಿವಿ ಹಾಗೂ ವಾರ್ಡನ್ ವಿರುದ್ಧ ನಿಗಿನಿಗಿ ಕೆಂಡ ಕಾರಿದರು. ವಿವಿ ಅಧಿಕಾರಿಗಳು ಎಷ್ಟೇ ಸಮಾಧಾನ ಮಾಡಿದರೂ ರಸ್ತೆಯಿಂದ ಮೇಲೇಳಲು ವಿದ್ಯಾರ್ಥಿನಿಯರು ಸುತಾರಾಂ ಒಪ್ಪಲಿಲ್ಲ. ಕುಲಪತಿ, ಕುಲಸಚಿವ ಸ್ಥಳಕ್ಕೆ ಧಾವಿಸಬೇಕು ಅಂತ ಪಟ್ಟು ಹಿಡಿದರು. ತಾತ್ಕಾಲಿಕ ನೀರಿನ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿದ ಬಳಿಕ ಹಾಸ್ಟೆಲ್ ನತ್ತ ತೆರಳಿದರು. ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿದ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಸಮಿತಿ ನಿರ್ದೇಶಕ ಚಂದ್ರಶೇಖರ್, ನಿನ್ನೆ ರಾತ್ರಿ ಸುರಿದ ಮಳೆಯಿಂದಾಗಿ ವಿದ್ಯುತ್ ವ್ಯತ್ಯಯ ಆಗಿ ನೀರನ್ನು ಪಂಪ್ ಮಾಡೋಕೆ ಆಗಿರಲಿಲ್ಲ. ಸದ್ಯಕ್ಕೆ ಟ್ಯಾಂಕರ್ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿದ್ರು. ಅಲ್ಲದೆ ಹಾಸ್ಟೆಲ್ ನಲ್ಲಿರುವ ಉಳಿದ ಎಲ್ಲಾ ಸಮಸ್ಯೆಗಳನ್ನೂ ಬಗೆಹರಿಸುವುದಾಗಿ ಹೇಳಿದ್ರು. ಒಟ್ಟಾರೆ ನೀರಿನ ಸಮಸ್ಯೆ ಮಾತ್ರವಲ್ಲದೆ…
ಸಮಾಜವಾದಿ ಪಕ್ಷದವರು ಕ್ರಿಮಿನಲ್ ಗಳು ಮತ್ತು ಭಯೋತ್ಪಾದಕರ ಜೊತೆ ಇದ್ದಾರೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿ ಮಾತನಾಡಿ, ಸಮಾಜವಾದಿ ಪಕ್ಷದ ಆಡಳಿತದಲ್ಲಿ ಅರಾಜಕತೆ ಇತ್ತು. ನಮ್ಮ ಹೆಣ್ಣುಮಕ್ಕಳು ಸುರಕ್ಷಿತವಾಗಿರಲಿಲ್ಲ, ಗೂಂಡಾಗಳ ಗುಂಪಿತ್ತು. ಆದರೆ ಈಗ ಇದು ಹೊಸ ಭಾರತ, ಹೊಸ ಉತ್ತರ ಪ್ರದೇಶವಾಗಿದೆ ಎಂದರು. ಈ ವೇಳೆ ಸಮಾಜವಾದಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಯೋಗಿ ಆದಿತ್ಯನಾಥ್, ಅಖಿಲೇಶ್ ಯಾದವ್ ಅವರು ಕಲ್ಯಾಣ್ ಸಿಂಗ್ ಅವರ ನಿಧನಕ್ಕೆ ಸಂತಾಪ ಸೂಚಿಸಲಿಲ್ಲ. ಆದರೆ ಅವರು ತಮ್ಮ ದುಃಖ ಮತ್ತು ದುಃಖವನ್ನು ವ್ಯಕ್ತಪಡಿಸಲು ಮುಖ್ತಾರ್ ಅನ್ಸಾರಿ ಅವರ ಮನೆಗೆ ತೆರಳಿದರು. ಸಮಾಜವಾದಿ ಪಕ್ಷದವರು ಕ್ರಿಮಿನಲ್ಗಳು ಮತ್ತು ಭಯೋತ್ಪಾದಕರ ಜೊತೆ ಇದ್ದಾರೆ ಎಂಬುದಕ್ಕೆ ಇದೇ ಸಾಕ್ಷಿ ಎಂದು ಸಿಎಂ ಯೋಗಿ ಹೇಳಿದ್ದಾರೆ. ದೆಹಲಿ ಮತ್ತು ಲಕ್ನೋ ಎರಡರಲ್ಲೂ ಸರ್ಕಾರ ರಚನೆಗೆ ನೀವು ಕೊಡುಗೆ ನೀಡಿದ್ದೀರಿ. ಅದಕ್ಕಾಗಿಯೇ ಈಗ ಅಯೋಧ್ಯೆಯ ಭವ್ಯ ಮಂದಿರದಲ್ಲಿ ಭಗವಾನ್ ರಾಮನು ಕುಳಿತಿದ್ದಾನೆ. ಇದು…
ಉತ್ತರ ಕೊರಿಯಾ: ಇಲ್ಲಿನ ಸರ್ವೋಚ್ಚ ನಾಯಕ ಕಿಮ್ ಜಾಂಗ್-ಉನ್ ಅವರು ಈ ಬಣ್ಣದ ಲಿಪ್ ಸ್ಟಿಕ್ ಗೆ ನಿಷೇಧವಿದೆ. ಉತ್ತರ ಕೊರಿಯಾದಲ್ಲಿ ಸುಮಾರಷ್ಟು ಪಾಲಿಸಬೇಕಾದ ಮತ್ತು ವಿಚಿತ್ರ ನಿಯಮಗಳಿವೆ. ಅದರಲ್ಲಿ ಕೆಂಪು ಬಣ್ಣದ ಲಿಪ್ ಸ್ಟಿಕ್ ಮೇಲಿನ ಬ್ಯಾನ್ ಕೂಡ ಒಂದು. ಉತ್ತರ ಕೊರಿಯಾದಲ್ಲಿ ವೈಯಕ್ತಿಕ ಫ್ಯಾಷನ್ ಮತ್ತು ಸೌಂದರ್ಯದ ಆಯ್ಕೆಗಳು ಕೇವಲ ವೈಯಕ್ತಿಕ ಅಭಿವ್ಯಕ್ತಿಯ ವಿಷಯಗಳಾಗಿ ಮಾತ್ರ ಉಳಿದಿಲ್ಲ. ಇಲ್ಲಿ ಒಬ್ಬರ ವೈಯಕ್ತಿಕ ಆಯ್ಕೆಗಳನ್ನು ಸರ್ಕಾರವು ತುಂಬಾ ಬಿಗಿಯಾಗಿ ನಿಯಂತ್ರಿಸುತ್ತದೆ. ಈ ನಿಯಂತ್ರಣದಲ್ಲಿ ಅಚ್ಚರಿ ವಿಚಾರ ಎಂದರೆ ಕೆಂಪು ಲಿಪ್ಸ್ಟಿಕ್ ಮೇಲಿನ ನಿಷೇಧ. ಕಿಮ್ ಜಾಂಗ್-ಉನ್ ಅವರ ನಾಯಕತ್ವದಲ್ಲಿ, ಉತ್ತರ ಕೊರಿಯಾ ಮಹಿಳೆಯರು ಹೇಗೆ ಬಟ್ಟೆ ಧರಿಸುತ್ತಾರೆ ಮತ್ತು ತಮ್ಮನ್ನು ತಾವು ಹೇಗೆ ಪ್ರಸ್ತುತಪಡಿಸುತ್ತಾರೆ ಎಂಬ ಎಲ್ಲಾ ವಿಚಾರಗಳಿಗೆ ಕೆಲ ಕಟ್ಟುನಿಟ್ಟಾದ ನಿಯಮಗಳನ್ನು ಕಾಯ್ದಿರಿಸಲಾಗಿದೆ. ಉತ್ತರ ಕೊರಿಯಾದಲ್ಲಿ ಕೆಂಪು ಲಿಪ್ ಸ್ಟಿಕ್ ಮೇಲಿನ ನಿಷೇಧವು ಕೇವಲ ಸೌಂದರ್ಯ ನಿಯಂತ್ರಣವಾಗಿರದೇ, ಇದು ದೇಶದ ಸೈದ್ಧಾಂತಿಕ ಮತ್ತು ಸಾಂಸ್ಕೃತಿಕ ಹೋರಾಟಗಳೊಂದಿಗೆ ಆಳವಾಗಿ ಸಂಬಂಧ…
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆಯ ನೀರೆಲ್ಲಾ ಅಪಾರ್ಟ್ಮೆಂಟ್ ಗೆ ಪ್ರವೇಶವಾಗಿದೆ. ಅನ್ನಪೂರ್ಣೇಶ್ವರಿನಗರದ ಚಂದನ ಅಪಾರ್ಟ್ಮೆಂಟ್ ಗೆ ನುಗ್ಗಿ ಭಾರೀ ಅವಾಂತರ ಸೃಷ್ಟಿ ಆಗಿದೆ. ಮೂರಡಿ ನಿಂತ ಮಳೆನೀರಿನಿಂದ ಅಪಾರ್ಟ್ಮೆಂಟ್ ನಿವಾಸಿಗಳ ಪರದಾಟ ಹಿನ್ನೆಲೆ. ನೀರು ತಂಬಿ 12 ಗಂಟೆ ಬಳಿಕ ರಕ್ಷಣಾ ತಂಡ ಆಗಮಿಸಿದೆ. ಫೈರ್ ಸ್ಟೇಷನ್ ಸಿಬ್ಬಂದಿಗಳಿಂದ ತುಂಬಿದ್ದ ನೀರು ತೆರವು ಮಾಡಲಾಗಿದೆ. ಅಗ್ನಿ ಶಾಮಕದಳದ ಎಂಟು ಜನರ ಸಿಬ್ಬಂದಿಯಿಂದ ನೀರು ತೆರವು ಮಾಡಲಾಗಿದೆ. ಚಂದನ ಅಪಾರ್ಟ್ಮೆಂಟ್ ನ ಬೇಸ್ಮೆಂಟ್ ನಲ್ಲಿದ್ದ ವಾಹನಗಳು ಮುಳುಗಡೆ ಆಗಿದ್ದವು. ಮೂಡರಡಿ ನಿಂತ ಮಳೆ ನೀರಿನಿಂದ ವಾಹನಗಳು ಮುಳುಗಡೆ ಆಗಿದ್ದವು. ನೀರು ತೆರವು ಮಾಡುವಂತೆ ಬಿಬಿಎಂಪಿಗೆ ಕರೆ ಮಾಡಿದ್ರೂ ರೆಸ್ಪಾನ್ಸ್ ಮಾಡಿರಲಿಲ್ಲ. ನಾಗರಬಾವಿ ಬಳಿ ಇರುವ ಹೆಲ್ತ್ ಲೇಔಟ್ ನ ಚಂದನಾ ಅಪಾರ್ಟ್ಮೆಂಟ್ ನಡೆದಿರುವ ಘಟನೆ ಇದಾಗಿದೆ. ಕಳೆದ ಒಂದು ಗಂಟೆಯಿಂದ ಬೇಸ್ಮೆಮೆಂಟ್ ನಲ್ಲಿ ತೆರವು ಕಾರ್ಯಾಚರಣೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಜರುಗಿದೆ. ಇದಕ್ಕೆ ಅವರು ಕೂಡ ಆಗಮಿಸಿದ್ದರು. ಈ ವೇಳೆ ದೇವಸ್ಥಾನದ ಸಮಿತಿಯ ವತಿಯಿಂದ ಗೌರವಿಸಲಾಗಿದೆ. ಇತ್ತೀಚೆಗೆ ನಟಿ ಶಿಲ್ಪಾ ಶೆಟ್ಟಿ ಅವರು ಕರ್ನಾಟಕಕ್ಕೆ ಆಗಮಿಸಿ ಕೋಲವನ್ನು ವೀಕ್ಷಿಸಿದ್ದರು. ಈ ಫೋಟೋಗಳು ವೈರಲ್ ಆಗಿದ್ದವು. ಈಗ ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಣಜಾರುಗೆ ಭೇಟಿ ನೀಡಿದ್ದಾರೆ. ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಜರುಗಿದೆ. ಇದಕ್ಕೆ ಅವರು ಕೂಡ ಆಗಮಿಸಿದ್ದರು. ಈ ವೇಳೆ ಅವರು ಬ್ರಹ್ಮಕಲಶೋತ್ಸವ ಸಭಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಪೂಜಾ ಹೆಗ್ಡೆಯನ್ನು ದೇವಸ್ಥಾನದ ಸಮಿತಿಯ ಸದಸ್ಯರು ಗೌರವಿಸಿದ್ದಾರೆ. ಅಭಿಮಾನಿಯೊರ್ವ ಪೂಜಾ ಹೆಗ್ಡೆಯ ಭಾವಚಿತ್ರವನ್ನು ರಚಿಸಿದ್ದ. ಇದನ್ನು ಸನ್ಮಾನ ಸಂದರ್ಭದಲ್ಲಿ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಸಕಾಲಕ್ಕೆ ಮಳೆ ಬಾರದ ಹಿನ್ನೆಲೆ ಇಳುವರಿ ಕಡಿಮೆ ಆಗಿ ಮೆಣಸಿನಕಾಯಿ ಬೆಲೆ ಗಗನಕ್ಕೇರಿದೆ. ಈ ಮೂಲಕ ಗ್ರಾಹಕರು ಕಂಗಾಲಾಗಿದ್ದಾರೆ. ಬಿಸಿಲಿನ ತೀವ್ರತೆಯಿಂದ ತರಕಾರಿ ದರವೂ ಹೆಚ್ಚಳವಾಗತೊಡಗಿದೆ. ತರಕಾರಿ ಬೆಳೆಯ ಮೇಲೆ ಗರಿಷ್ಠ ತಾಪಮಾನ ವ್ಯತಿರಿಕ್ತ ಪರಿಣಾಮ ಬೀರುತ್ತಿರುವ ಹಿನ್ನೆಲೆ ಪೂರೈಕೆ ಕಡಿಮೆಯಾಗಿದೆ. ಇದರಿಂದಾಗಿ ಸಹಜವಾಗಿ ತರಕಾರಿ ಬೆಲೆ ಏರಿಕೆ ಕಂಡಿದೆ. ಇನ್ನು ಬೀನ್ಸ್, ಗೆಡ್ಡೆಕೋಸು, ಬೀಟ್ರೂಟ್, ಹೀರೇಕಾಯಿ ಎಲ್ಲದರ ದರವೂ ಏರಿಕೆ ಆಗಿದೆ. ಅದರ ಜೊತೆ ಹಸಿ ಮೆಣಸಿನಕಾಯಿ ರೇಟ್ ಸಹ ಹೆಚ್ಚಳವಾಗಿದೆ. ಕಳೆದ ವಾರ 60 ರಿಂ 80 ರೂಪಾಯಿ ಇದ್ದ ಮೆಣಸಿನಕಾಯಿ ಬೆಲೆ, ಈ ವಾರ ದುಬಾರಿಯಾಗಿದೆ. 120 ರೂಪಾಯಿ ತಲುಪಿದೆ. ಕೊಳ್ಳುವಾಗಲೇ ಗ್ರಾಹಕರಿಗೆ ಖಾರವಾಗಿದೆ. ಇದೇ ರೀತಿ ರಾಜ್ಯದಲ್ಲಿ ಬಿಸಿಲು ಮುಂದುವರೆದರೆ ತರಕಾರಿ ರೇಟ್ ಇನ್ನೂ ಹೆಚ್ಚಳವಾಗಲಿದೆ. ಸದ್ಯ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಬೀನ್ಸ್ ಬೆಲೆಯು ಕೆಜಿಗೆ 250 ರೂಪಾಯಿಯ ಗಡಿ ದಾಟಿದೆ. ಉಳಿದ ತರಕಾರಿಗಳ ಬೆಲೆಯೂ ಹೆಚ್ಚಾಗಿದೆ. ಇನ್ನು ಬೆಂಗಳೂರಲ್ಲಿ ಸದ್ಯ…
ಭಾರತೀಯ ಸಮೂಹ ಮಾಧ್ಯಮ ಮತ್ತು ಸಂಶೋಧನಾ ಸಂಸ್ಥೆ (ಐಎಂಎಸ್ಆರ್) ನೀಡುವ ‘ರೋಹಿತ್ ರಾಜಣ್ಣ ಪತ್ರಿಕೋದ್ಯಮ ಪ್ರಶಸ್ತಿ’ಗೆ ‘ಪ್ರಜಾವಾಣಿ’ಯ ಚಿಕ್ಕಮಗಳೂರು ಜಿಲ್ಲಾ ವರದಿಗಾರ ಎಸ್.ಕೆ. ವಿಜಯಕುಮಾರ್ ಆಯ್ಕೆ ಆಗಿದ್ದಾರೆ. ಇವರು ಹಾಸನ ಜಿಲ್ಲೆಯವರು. ‘ಬೂದಿಯಾಗದ ಕೆಂಡ’ ಇವರ ಪ್ರಕಟಿತ ಕೃತಿಯಾಗಿದ್ದು, ಇದರಲ್ಲಿನ ‘ಅನ್ನಕ್ಕಾಗಿ ರಾತ್ರಿಯಿಡೀ ಕಾದದ್ದು’ ಲೇಖನವು ಮೈಸೂರು ವಿಶ್ವವಿದ್ಯಾಲಯದ ಬಿ.ಎ. ನಾಲ್ಕನೆ ಸೆಮಿಸ್ಟರ್ ಪಠ್ಯವಾಗಿದೆ. ರೋಹಿತ್ ರಾಜಣ್ಣ ಅವರು ‘ವಿಜಯ ಟೈಮ್ಸ್’ ಮತ್ತು ಟೈಮ್ಸ್ ಆಫ್ ಇಂಡಿಯಾ’ದಲ್ಲಿ ವರದಿಗಾರರಾಗಿ ಕಾರ್ಯನಿರ್ವಹಿಸಿದ್ದರು. ಅಕಾಲಿಕವಾಗಿ ನಿಧನರಾದ ಮಗನ ಸ್ಮರಣಾರ್ಥ ಅವರ ತಂದೆ ರಾಜಣ್ಣ ಅವರು ರೋಹಿತ್ ಹೆಸರಿನಲ್ಲಿ ಪ್ರಶಸ್ತಿ ಸ್ಥಾಪಿಸಿದ್ದಾರೆ ಎಂದು ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಎಚ್.ಆರ್. ಶ್ರೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ನರೇಂದ್ರ ಮೋದಿ ನಮ್ಮ ಪಕ್ಷವನ್ನ ಮುಗಿಸಲು ನಿಂತಿದ್ದಾರೆ. ಈ ಚುನಾವಣೆಯಲ್ಲಿ ಮೋದಿ ಗೆದ್ದರೇ ಎಲ್ಲಾ ವಿಪಕ್ಷಗಳ ನಾಯಕರನ್ನ ಜೈಲಿಗೆ ಕಳುಹಿಸ್ತಾರೆ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಆರೋಪಿಸಿದರು. ಮಾಧ್ಯಮಗಳ ಜೊತೆ ಮಾತನಾಡಿದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಅಮ್ ಆದ್ಮಿ ಪಕ್ಷವನ್ನ ನಿರ್ನಾಮ ಮಾಡಲು ಬಿಜೆಪಿ ಯತ್ನಿಸುತ್ತಿದೆ. ಮೋದಿ ಅವರ ಉದ್ದೇಶ ಒನ್ ನೇಷನ್ ಒನ್ ಲೀಡರ್. ಅವರೊಬ್ಬರೇ ಲೀಡರ್ ಆಗಿ ಇರಬೇಕೆಂಬುದು ಅವರ ಉದ್ದೇಶ. ವಿಪಕ್ಷ ನಾಯಕರನ್ನ ಜೈಲಿಗೆ ಕಳುಹಿಸುವುದು ಮೋದಿ ಉದ್ದೇಶ. ನಮ್ಮ ಪಕ್ಷವನ್ನ ಮುಗಿಸಲು ಬಿಜೆಪಿಗರು ನಿಂತಿದ್ದಾರೆ. ಈ ಚುನಾವಣೆಯಲ್ಲಿ ಮೋದಿ ಗೆದ್ದರೇ ಎಲ್ಲಾ ವಿಪಕ್ಷನಾಯಕರನ್ನೂ ಜೈಲಿಗೆ ಕಳಿಸುತ್ತಾರೆ. ಈಗಾಗಲೇ ನಮ್ಮ ಪಕ್ಷದ ನಾಲ್ವರನ್ನ ಜೈಲಿಗೆ ಕಳುಹಿಸಿದ್ದಾರೆ ಮೋದಿಗೆ ನಮ್ಮ ಪಕ್ಷ ಎಂದ್ರೆ ಕ್ರಶ್. ನಾನು ಹೊರಬರುತ್ತೇನೆ ಎಂದು ಊಹಿಸಿರಲಿಲ್ಲ. ನನಗೆ ಜಾಮೀನು ಸಿಗುವ ನಿರೀಕ್ಷೆ ಇರಲಿಲ್ಲ ಎಂದು ಅರವಿಂದ ಕೇಜ್ರಿವಾಲ್ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…