Subscribe to Updates
Get the latest creative news from FooBar about art, design and business.
- ವಿಶ್ವ ಪರಿಸರ ದಿನಾಚರಣೆ ಬಗ್ಗೆ ರೀಲ್ಸ್ ಸ್ಪರ್ಧೆ: ನೀವೂ ಭಾಗವಹಿಸಬಹುದು
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
- ತುಮಕೂರು: ನಿರುದ್ಯೋಗಿ ಯುವಕ/ಯುವತಿಯರಿಗೆ ರುಡ್ ಸೆಟ್ ನಿಂದ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿ; ಅರ್ಜಿ ಆಹ್ವಾನ
- ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ
- ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ
- ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ: ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ
- ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
- ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
Author: admin
ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋಗಳ ಪೆನ್ ಡ್ರೈವ್ ಪ್ರಕರಣ ರಾಷ್ಟ್ರವ್ಯಾಪ್ತಿ ಸದ್ದು ಮಾಡುತ್ತಿದ್ದಂತೆ ಇದೀಗ ರಾಜ್ಯದ ಇತರೆಡೆಗಳಲ್ಲೂ ಇರುವ ‘ಹೈ ಪ್ರೊಫೈಲ್’ ವ್ಯಕ್ತಿಗಳಿಗೆ ‘ಪೆನ್ ಡ್ರೈವ್’ ನಡುಕ ಶುರುವಾಗಿದೆ ಎಂದು ಹೇಳಲಾಗುತ್ತಿದೆ. ಕೆಲಸ, ಹಣ, ಶಿಕ್ಷಣ, ಅಧಿಕಾರದ ಆಮಿಷ ತೋರಿಸಿ ಕೆಲವರು ಯುವತಿಯರನ್ನು ದುರ್ಬಳಕ್ಕೆ ಮಾಡಿಕೊಂಡಿದ್ದಾರೆ. ಇಂತಹ ವ್ಯಕ್ತಿಗಳು ಸಮಾಜದ ಎದುರು ಮಾಮೂಲಿಗಳಂತೆ ಜೀವನ ನಡೆಸುತ್ತಿದ್ದಾರೆ. ಅಂತಹವರ ಪ್ರಕರಣಗಳು ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಗಳ ಬೆನ್ನಲ್ಲೇ ಸದ್ದು ಮಾಡುತ್ತಿದೆ. ಕೆಲವಷ್ಟು ಪೆನ್ ಡ್ರೈವ್ ಪ್ರಕರಣಗಳು ನಡೆದಿದ್ದು ಅಂತಹ ಪ್ರಕರಣಗಳು ಕೂಡ ಮುಂದಿನ ದಿನಗಳಲ್ಲಿ ಹೊರಬಂದರೂ ಅಚ್ಚರಿ ಇಲ್ಲ ಎನ್ನಲಾಗುತ್ತಿದೆ. ಸದ್ಯ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಐಟಿ ತನಿಖೆ ಬಿರುಸುಗೊಂಡಿದೆ. ಆದರೆ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ತನಿಖೆಗೆ ಸಹಕಾರ ನೀಡುತ್ತಿಲ್ಲ. ಈತನ ವಿರುದ್ಧ ಹಲವು ನೋಟಿಸ್ ಗಳನ್ನು ನೀಡಲಾಗಿದೆ. ಭಾರತಕ್ಕೆ ಕರೆತಂದು ವಿಚಾರಣೆ ನಡೆಸುವುದು ಯಾವಾಗ ಎನ್ನುವುದು ಇನ್ನೂ ಗೊಂದಲವಾಗಿಯೇ ಉಳಿದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ…
ಹುಬ್ಬಳ್ಳಿ: ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ ತೀವ್ರ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗಲೇ ಎಚ್ಚೆತ್ತುಕೊಂಡು ಪರ್ಯಾಯ ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಹಿಂದೂಗಳ ಜನಸಂಖ್ಯೆ ಕ್ಷಿಣಿಸುತ್ತಿರುವ ಬಗ್ಗೆ ತಕ್ಷಣಕ್ಕೆ ಯಾವುದೇ ನಿರ್ಧಾರಕ್ಕೆ ಬರಲಾಗುವುದಿಲ್ಲ. ಆದರೆ ಸಮಗ್ರ ಅಧ್ಯಯನ ನಡೆಸಬೇಕಿದೆ ಎಂದರು. ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾದಂತೆ ಕಾಲಕ್ರಮೇಣ ಪ್ರಜಾಪ್ರಭುತ್ವವೇ ಬದಲಾಗುವ ಸ್ಥಿತಿ ಎದುರಾಗಲಿದೆ. ಅಲ್ಲದೇ, ಜಾತ್ಯತೀತವಾಗಿ ಉಳಿಯುವುದಿಲ್ಲ ಎಂದು ಜೋಶಿ ತೀವ್ರ ಆತಂಕ ವ್ಯಕ್ತಪಡಿಸಿದರು. ಜಗತ್ತಿನಲ್ಲೇ ಏಕೈಕ ಜಾತ್ಯತೀತ ರಾಷ್ಟ್ರ ಭಾರತ. ಪಕ್ಕಾ ಜಾತ್ಯತೀತ ದೇಶವಾಗಿದೆ. ಜಾತ್ಯತೀತತೆ ಎನ್ನುವುದು ಭಾರತೀಯರ ರಕ್ತ, ಸ್ವಭಾವದಲ್ಲೇ ಬಂದಿದೆ. ಮುಂದೊಂದು ದಿನ ಇದಕ್ಕೆ ಧಕ್ಕೆ ಉಂಟಾಗಬಹುದು ಎಂದರು. ಭಾರತ ವಿವಿಧತೆಯಲ್ಲಿ ಏಕತೆ ಕಂಡ ದೇಶವಾಗಿದೆ. ನಾನಾ ಧರ್ಮ, ಸಂಸ್ಕೃತಿ ಆಚರಣೆಗೆ ಮುಕ್ತ ಅವಕಾಶ ಕೊಟ್ಟ ರಾಷ್ಟ್ರ. ಈ ಪರಂಪರೆಯೆ ಮುಂದುವರಿಯಬೇಕು ಎಂದು…
ಮೈಸೂರು: ವಿಪಕ್ಷಗಳು ನನ್ನನ್ನು ಸಮಾಧಿ ಮಾಡಲು ಮುಂದಾಗಿವೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ. ಸೋಲುವ ಭಯದಿಂದ ಮೋದಿ ಮಾತನಾಡುತ್ತಿದ್ದಾರೆ ಎಂದರು. ಮೈಸೂರಿನಲ್ಲಿ ಮಾತನಾಡಿದ ಅವರು, ಮೋದಿ 10 ವರ್ಷ ಬಡವರ ಪರ ಕೆಲಸ ಮಾಡಿಲ್ಲ. ಕೊಟ್ಟ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದರು. ದೇಶದ ಪ್ರಧಾನ ಮಂತ್ರಿಯನ್ನು ಸೋಲಿಸಬೇಕು ಎಂಬುದು ವಿರೋಧ ಪಕ್ಷಗಳ ಬಯಕೆಯಾಗಿದೆ. ಸೋಲುವ ಭಯದಿಂದಾಗಿ ಪ್ರಧಾನಿ ಹತಾಶೆಯಿಂದ ಮಾತನಾಡುತ್ತಿದ್ದಾರೆ’ ಎಂದು ಹೇಳಿದರು ‘ಈ ಪ್ರಧಾನಿ ಸುಳ್ಳಿನ ಸರದಾರ ಎಂಬುದು ಎಲ್ಲರಿಗೂ ಗೊತ್ತಿದೆ. ಅವರ ಬಣ್ಣ ದೇಶದ ಜನರ ಮುಂದೆ ಬಯಲಾಗಿದೆ. ಈ ಹತಾಶೆಯಲ್ಲಿ ಈ ರೀತಿ ಮಾತನಾಡುತ್ತಿದ್ದಾರೆ. ಅವರ ಭಾವನಾತ್ಮಕ ಮಾತುಗಳು ಜನರಿಗೆ ಗೊತ್ತಿವೆ. ಮೇಲಕ್ಕೆ ಏರಿದವರು ಕೆಳಗೆ ಇಳಿಯಲೇ ಬೇಕು’ ಎಂದರು. ‘ರೈತರ ಸಾಲ ಮನ್ನಾ ಮಾಡಬೇಕು’ ಎಂಬ ಬಿ.ಎಸ್. ಯಡಿಯೂರಪ್ಪ ಒತ್ತಾಯಕ್ಕೆ ಪ್ರತಿಕ್ರಿಯಿಸಿದ ಅವರು, ‘ಸಾಲ ಮನ್ನಾ ಮಾಡಿ ಎಂದು ಹಿಂದೆ ಕೇಳಿದಾಗ…
ದೊಡ್ಡಬಳ್ಳಾಪುರ: ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಹೇಮಂತ್ ಕುಮಾರ್( 27) ಕೊಲೆಯಾದ ದುರ್ದೈವಿಯಾಗಿದ್ದಾರೆ. ಹಣಕಾಸಿನ ವಿಚಾರಕ್ಕೆ ಕೊಲೆ ಮಾಡಲಾಗಿದೆ ಎನ್ನಲಾಗಿದೆ. ನಡುರಸ್ತೆಯಲ್ಲಿ ಮಿಟ್ಟೆ ಅಲಿಯಾಸ್ ನರಸಿಂಹಮೂರ್ತಿ ಗ್ಯಾಂಗ್ ನಿಂದ ಹೇಮಂತ್ ಮೇಲೆ ಮಾರಕಾಸ್ತ್ರಗಳಿಂದ ಕುತ್ತಿಗೆ, ಎದೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಮೃತ ಹೇಮಂತ್ ಮೇಲೆ 10ಕ್ಕೂ ಹೆಚ್ಚು ಯುವಕರಿಂದ ಈ ದಾಳಿ ನಡೆದಿದ್ದು, ಕೊಲೆ ಮಾಡಿ ರಸ್ತೆ ಬದಿಯಲ್ಲಿ ಮೃತದೇಹ ಎಸೆದು ಎಸ್ಕೇಪ್ ಆಗಿದ್ದಾರೆ. ಸ್ಥಳೀಯರು ವಾಕಿಂಗ್ ಮಾಡುವಾಗ ಮೃತದೇಹ ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ರಕ್ತಸಿಕ್ತವಾಗಿ ಬಿದ್ದಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ನಗರದ ಟಿಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾರ್ ಗೆ ನುಗ್ಗಿದ ಇಬ್ಬರು ಕಳ್ಳರು ಬಾರ್ ನಲ್ಲಿದ್ದ ಹಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಕಳೆದ ರಾತ್ರಿ 2.30ರ ಸುಮಾರಿಗೆ ಟಿಸಿಪಾಳ್ಯದ ಬಳಿ ಇರುವ ಭಾಗ್ಯ ಬಾರ್ ಗೆ ಎಂಟ್ರಿಕೊಟ್ಟು ಇಬ್ಬರು ಕಳ್ಳರು ತಮ್ಮ ಕೈಚಳಕವನ್ನು ತೋರಿದ್ದಾರೆ. ಕಳ್ಳತನಕ್ಕೂ ಮುನ್ನ ತಮ್ಮ ಗುರುತು ಪತ್ತೆಯಾಗಬಾರದು ಎಂದು ತಲೆಗೆ ಹೆಲ್ಮೆಟ್ ಧರಿಸಿ ಬಂದು ಬಾರ್ ಶೆಟರ್ ಮುರಿದು ಬಾರ್ ಕ್ಯಾಶ್ ಕೌಂಟರ್ ನಲ್ಲಿದ್ದ 60 ಸಾವಿರ ಹಣವನ್ನು ಕದ್ದಿದ್ದಾರೆ ಇದೇ ವೇಳೆ ಬಾರ್ ನಲ್ಲಿದ್ದ ಸಿಸಿಟಿವಿಯ ಡಿವಿಆರ್ ಸಮೇತ ಕಳ್ಳರು ಪರಾರಿಯಾಗಿದ್ದಾರೆ. ದೃಶ್ಯಗಳು ಸಿಸಿಟಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಕೆ ಆರ್ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮಂಡ್ಯ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ಫೇಲ್ ಆದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಿಖಿಲ್(16) ನೇಣಿಗೆ ಶರಣಾದ ವಿದ್ಯಾರ್ಥಿಯಾಗಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ನಿಖಿಲ್, ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ 3 ವಿಷಯದಲ್ಲಿ ಫೇಲ್ ಆಗಿದ್ದರು. ಇದರಿಂದ ಮನನೊಂದು ಹೊಲಕ್ಕೆ ತೆರಳಿ ಮರವೊಂದಕ್ಕೆ ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮೈಸೂರು: ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಮುಂದುವರಿಯುತ್ತೆ. ಮೈತ್ರಿಗೆ ಯಾವುದೇ ಭಂಗವಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಮೈತ್ರಿ ಇರುತ್ತದೆ. ಜೆಡಿಎಸ್ಗೆ 2 ಸ್ಥಾನ ಬಿಟ್ಟುಕೊಟ್ಟು ನಾವು 4 ಸ್ಥಾನದಲ್ಲಿ ಸ್ಪರ್ಧೆ ಮಾಡುತ್ತೇವೆ. ಎಲ್ಲಿ ಬಿಟ್ಟುಕೊಡಬೇಕು ಎಂಬುದರ ಬಗ್ಗೆ ತೀರ್ಮಾನವಾಗಿಲ್ಲ. ಇಂದು ಸಂಜೆ ನಡ್ಡಾರವರು ಬಿಡುಗಡೆ ಮಾಡಲಿದ್ದಾರೆ ಎಂದರು. ನರೇಂದ್ರ ಮೋದಿಯವರು 400ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೆ ಪ್ರಧಾನಿಯಾಗುತ್ತಾರೆ. ಸೂರ್ಯ-ಚಂದ್ರ ಇರೋದು ಎಷ್ಟು ಸತ್ಯವೋ ಇದು ಅಷ್ಟೇ ಸತ್ಯ. ಮುಂದೆ ಪ್ರಧಾನಿಯಾಗಿ ಏನು ಕೆಲಸ ಮಾಡಬೇಕು ಎಂಬುದನ್ನು ಮೋದಿಯವರು ಈಗಲೇ ಚಿಂತೆ ಮಾಡಿದ್ದಾರೆ. ನಾವು ರಾಜ್ಯದಲ್ಲಿ ಕನಿಷ್ಠ 24-25 ಸ್ಥಾನ ಗೆಲ್ಲುತ್ತೇವೆ. ಕಾಂಗ್ರೆಸ್ನವರು ಏನೇ ಹೇಳಿದರೂ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಕಾಂಗ್ರೆಸ್ ನಲ್ಲಿ ಪ್ರಧಾನಿಯಾಗುವ ಯೋಗ್ಯತೆ ಯಾರಿಗಿದೆ? ವಿಧಾನಸಭಾ ಚುನಾವಣೆಯಲ್ಲಿ ಬೇರೆ ಚರ್ಚೆಯಾಗಬಹುದು. ಆದರೆ ಮೋದಿಯವರು ಪ್ರಧಾನಿಯಾಗಬೇಕು ಎಂಬುದು ಎಲ್ಲರ ಅಭಿಪ್ರಾಯ ಎಂದು ಹೇಳಿದರು. ರಾಜ್ಯದಲ್ಲಿ ಭೀಕರ…
ಕೋಲಾರ: ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಎಳೆಸಂದ್ರ ಬಳಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಗುಲ್ಲಹಳ್ಳಿ ಗ್ರಾನದ (25) ಮಧು ಮೃತ ದುರ್ದೈವಿಯಾಗಿದ್ದಾರೆ. ಕಾಮಸಮುದ್ರದಿಂದ ಬೂದಿಕೋಟೆ ಕಡೆ ಬರುತ್ತಿದ್ದ ಲಾರಿಯು ವೇಗವಾಗಿ ಬಂದು ಬೈಕ್ ಡಿಕ್ಕಿ ಹೊಡೆದಿದೆ. ಬಳಿಕ ಚಾಲಕ ಲಾರಿ ನಿಲ್ಲಿಸದೇ ಪರಾರಿಯಾಗಿದ್ದಾನೆ. ಬೂದಿಕೋಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು ಗ್ರಾಮಾಂತರ: ಹೆದ್ದಾರಿಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಯನಗುಂಟೆ ಗ್ರಾಮದ ಕೃಷ್ಣಪ್ಪ(70) ಮೃತ ಬೈಕ್ ಸವಾರ. ಹೊಸಕೋಟೆಯಿಂದ ಗ್ರಾಮದ ಕಡೆ ಬೈಕ್ ಸವಾರ ಬರುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಕಾರು ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ನಜ್ಜು ಗುಜ್ಜಾಗಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೂಲಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೆಂಗಳೂರು: ಸಂಜಯ್ ನಗರದ ನಿವಾಸದಲ್ಲಿ ಕೆಎಎಸ್ ಅಧಿಕಾರಿಯ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಚೈತ್ರಾಗೌಡ ಮೃತ ಮಹಿಳೆಯಾಗಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿದ್ದರು. ಮನೆಯಲ್ಲಿ ಫ್ಯಾನ್ ಗೆ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ ಆಗಿದ್ದು, ಮನೆಯಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ. ಇನ್ನು ಸಾವಿಗೆ ಕಾರಣ ಏನು ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ಸಂಜಯ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296