Author: admin

ಚಿಕ್ಕೋಡಿ: ಆಸ್ತಿ ವಿಚಾರಕ್ಕೆ ಚಿಕ್ಕಪ್ಪ ಹಾಗೂ ಮಗನ ಮಧ್ಯೆ ನಡೆದ ಜಗಳ, ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ನಡೆದಿದೆ. ಕೇಶವ ಬೊಸಲೆ(47) ಕೊಲೆಯಾದ ದುರ್ದೈವಿಯಾಗಿದ್ದಾರೆ. ಖಂಡೊಬಾ ಬೊಸಲೆ(27)ಕೊಲೆ ಆರೋಪಿಯಾಗಿದ್ದಾರೆ. ಕಳೆದ 20 ವರ್ಷಗಳಿಂದ ಜಮೀನಿನ ವಿಚಾರಕ್ಕೆ ಚಿಕ್ಕಪ್ಪ ಹಾಗೂ ಮಗನ ನಡುವೆ ಜಗಳ ನಡೆಯುತ್ತಲ್ಲೇ ಇದ್ದು, ನಿನ್ನೆ ಇಬ್ಬರು ಜೊತೆಗೂಡಿ ಮದ್ಯ ಸೇವನೆ ಮಾಡಿದ್ದಾರೆ. ಈ ವೇಳೆ ಜಗಳ ನಡೆದಿದ್ದು, ಕೋಪ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ. ಸದ್ಯ ಕೊಲೆ ಮಾಡಿದ ಆರೋಪಿ ಖಂಡೊಬಾ ಬೊಸಲೆಯನ್ನು ಐಗಳಿ ಪೋಲಿಸರು ಬಂಧಿಸಿದ್ದು, ಈ ಸಂಬಂಧ ಐಗಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

Read More

ಶಾಲೆಗೆ ದಿನಾ ಕರೆದುಕೊಂಡು ಹೋಗುತ್ತಿದ್ದ ಆಟೋ ಚಾಲಕನಿಂದಲೇ 10ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ನಡೆಸುತ್ತಿದ್ದ ನಡೆದ ಘಟನೆ ನಾಗ್ಪುರದ ಓಂಕಾರ್ ನಗರ ಪ್ರದೇಶದಲ್ಲಿ ವರದಿಯಾಗಿದೆ. ಶಾಲೆಯಿಂದ ಮನೆಗೆ ಕರೆದುಕೊಂಡು ಬರುತ್ತಿರುವ ಸಮಯದಲ್ಲಿ ಬಾಲಕಿಯನ್ನು ಏಕಾಂತ ಸ್ಥಳಕ್ಕೆ ಕರೆದುಕೊಂಡು ಹೋಗಿ ಕಿರುಕುಳ ನೀಡುತ್ತಿದ್ದ ಚಾಲಕ, ಈ ಘಟನೆಗೆ ಸಂಬಂಧಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದೀಗ ಆಕೆಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆಟೋ ಚಾಲಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ. ವೈರಲ್​ ಆಗಿರುವ ವಿಡಿಯೋದಲ್ಲಿ ಆಟೋ ರಿಕ್ಷಾದ ಹೊರಗೆ ನಿಂತಿರುವ ಚಾಲಕ ಮತ್ತು ಅಪ್ರಾಪ್ತ ಬಾಲಕಿ ಕುಳಿತಿದ್ದ ಹಿಂದಿನ ಸೀಟಿನಲ್ಲಿ ನುಸುಳುತ್ತಿರುವ ದೃಶ್ಯವು ಸೆರೆಯಾಗಿದೆ. ಆಟೋ ಚಾಲಕನ ಹೀನಾ ಕೃತ್ಯವನ್ನು ದೂರದಿಂದ ಮೊಬೈಲ್​ ನಲ್ಲಿ ಸೆರೆಹಿಡಿಯಲಾಗಿದೆ. ವೀಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ಪೊಲೀಸರು ಚಾಲಕನನ್ನು ಹುಡುಕಿ ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ರೈತ ಹುಡುಗನನ್ನು ಮದುವೆಯಾಗುವ ಯುವತಿಗೆ ಸರಕಾರದಿಂದ 5 ಲಕ್ಷ ರೂ. ಪ್ರೋತ್ಸಾಹಧನ ನೀಡಬೇಕು ಎಂದು ರೈತ ಸಂಘಟನೆಗಳ ಪ್ರತಿನಿಧಿಗಳು ಸಿಎಂ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಬಜೆಟ್ ಸಿದ್ಧತೆ ಸಂಬಂಧ ರೈತ ಸಂಘಟನೆಗಳ ಸುಮಾರು 218 ಪ್ರತಿನಿಧಿಗಳು, ಮುಖಂಡರೊಂದಿಗೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಸಭೆ ನಡೆಸಿದರು. ”ಕೃಷಿಕರ ಮಕ್ಕಳಿಗೆ ಹೆಣ್ಣುಸಿಗುತ್ತಿಲ್ಲ. 45 ವರ್ಷವಾದರೂ ಮದುವೆಯಾಗುತ್ತಿಲ್ಲ. ಇದರಿಂದಾಗಿ ಕೃಷಿಗೂ ಆದ್ಯತೆ ಸಿಗುತ್ತಿಲ್ಲ. ಹಾಗಾಗಿ, ರೈತನನ್ನು ವಿವಾಹವಾಗುವ ಹುಡುಗಿಗೆ ಪ್ರೋತ್ಸಾಹ ಧನ ನೀಡಬೇಕು,” ಎಂದು ಬಡಗಲಪುರ ನಾಗೇಂದ್ರ ಈ ವೇಳೆ ಒತ್ತಾಯಿಸಿದರು. ರೈತರ ಸಾಲ ಮನ್ನಾಕ್ಕೂ ಆಗ್ರಹಿಸಲಾಗಿದೆ. ಕೃಷಿಗೆ ಹೆಚ್ಚಿನ ಉತ್ತೇಜನ ಕೊಡಬೇಕು. ರೈತಪರ ಬಜೆಟ್ ಮಂಡಿಸಬೇಕು ಎಂದು ಕೇಳಿಕೊಳ್ಳಲಾಗಿದೆ ಎಂದು ರೈತ ಪ್ರತಿನಿಧಿಗಳು ತಿಳಿಸಿದರು. ಗ್ಯಾರಂಟಿ ಯೋಜನೆ ಬಗ್ಗೆಯೂ ರೈತ ಮುಖಂಡರು ಮೆಚ್ಚುಗೆ ವ್ಯಕ್ತಪಡಿಸಿದರು. ರೈತಪರ ಸಂಘಟನೆಗಳ ಚುಕ್ಕಿ ನಂಜುಂಡಸ್ವಾಮಿ, ಎಚ್.ಆರ್. ಬಸವರಾಜಪ್ಪ ಪಾಲ್ಗೊಂಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಅರಸೀಕೆರೆ: 2023-24 ನೇ ಸಾಲಿನ ಎಸ್.ಎಸ್.ಎಲ್. ಸಿ. ಪರೀಕ್ಷೆ–1ರಲ್ಲಿ ಸರ್ಕಾರಿ ಪ್ರೌಢಶಾಲೆ, ಅರಸೀಕೆರೆಗೆ 89.79% ಫಲಿತಾಂಶ ಬಂದಿದ್ದು, ಪರೀಕ್ಷೆ ಬರೆದ 49 ವಿದ್ಯಾರ್ಥಿಗಳಲ್ಲಿ A–2 B+–8 B–10 C+:14 ಮತ್ತು C– 10 ಶ್ರೇಣಿಯನ್ನು ಪಡೆದಿದ್ದಾರೆ. ಇದರಲ್ಲಿ 20 ಪ್ರಥಮ ದರ್ಜೆ, 14 ದ್ವಿತೀಯ ದರ್ಜೆ ಮತ್ತು ಉಳಿದ 10 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.  ಎಲ್ಲಾ ವಿದ್ಯಾರ್ಥಿಗಳಿಗೆ ಹಾಗೂ ಶೇಕಡಾ 89.79% ಶಾಲಾ ಫಲಿತಾಂಶಕ್ಕೆ ಕಾರಣೀಕರ್ತರಾದ ಶಾಲೆಯ ಮುಖ್ಯಶಿಕ್ಷಕರು, ಎಲ್ಲಾ ಸಹಶಿಕ್ಷಕರು ಮತ್ತು ಸಿಬ್ಬಂದಿ ವರ್ಗದವರಿಗೆ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಸರ್ವ ಸದಸ್ಯರು ಮತ್ತು ಊರಿನ ಸಮಸ್ತ ಗ್ರಾಮಸ್ಥರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಗರಿಷ್ಟ ಅಂಕ ಪಡೆದವರು: ಪ್ರಥಮ: ಕೀರ್ತನ ಇ:  527 ದ್ವಿತೀಯ: ಕೃಪ ವಿ:  511 ತೃತೀಯ: ಹೇಮಂತ್ ಕೆ – 495 ಗಾನವಿ ವಿ: 484 ನಿತಿನ್ ಎನ್: 466 ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಪಾವಗಡ: ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಪಾವಗಡ ತಾಲ್ಲೂಕಿಗೆ 55.19% ಫಲಿತಾಂಶ ಬಂದಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ಶಿರಾ ಪ್ರಥಮ ಸ್ಥಾನ ಗಳಿಸಿದ್ದು, ಮಧುಗಿರಿ ಎರಡನೇ ಸ್ಥಾನ, ಕೊರಟಗೆರೆ ಮೂರನೇ ಸ್ಥಾನ ಮತ್ತು ಪಾವಗಡ ನಾಲ್ಕನೇ ಸ್ಥಾನಗಳಿಸಿದೆ. ಪಟ್ಟಣದ ಗುರುಕುಲ ಶಾಲೆಯ ನೇಹಾ ಎಸ್ ಎನ್ 614 ಅಂಕಗಳನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಗಳಿಸಿದ್ದು.  ಪಟ್ಟಣದ ಸರ್ಕಾರಿ ಆದರ್ಶ ಶಾಲೆಯ ಗಂಗೋತ್ರಿ ಮತ್ತು ಗುರುಕುಲ ಶಾಲೆಯ ಯಶಸ್ ತಲಾ 613 ಅಂಕಗಳಿಸಿದ್ದು ತಾಲ್ಲೂಕಿಗೆ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ. ಪಟ್ಟಣದ ಶ್ರೀ ವೆಂಕಟೇಶ್ವರ ಆಂಗ್ಲ ಪ್ರೌಢಶಾಲೆಯ ಸಾಯಿ ಸಂತೋಷ್ ರೆಡ್ಡಿ ಬಿ 604 ಅಂಕಗಳನ್ನು ಗಳಿಸುವ ಮೂಲಕ ತಾಲ್ಲೂಕಿಗೆ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಶೇಕಡ 100% ಫಲಿತಾಂಶ: ಕೋಟೆಗುಡ್ಡ ಸಹನಾ ಆಂಗ್ಲ ಪ್ರೌಢಶಾಲೆ ಮತ್ತು ಮುರಾರ್ಜಿ ದೇಸಾಯಿ ವಸತಿ ಶಾಲೆ ಕೊಡುಗೆಹಳ್ಳಿ ಶೇಕಡ 100% ಫಲಿತಾಂಶ…

Read More

ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗ ಜಾರಿ ಕುರಿತು ಗುಡ್ ನ್ಯೂಸ್ ಹೊರಬಿದ್ದಿದ್ದು, 7ನೇ ವೇತನ ಆಯೋಗ ಜಾರಿಗೆ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಲು ಒಲವು ತೋರಿದ್ದಾರೆ ಎನ್ನಲಾಗಿದೆ. ಲೋಕಸಭಾ ಚುನಾವಣಾ ನೀತಿ ಸಂಹಿತೆ ಮುಗಿಯುತ್ತಿದ್ದಂತೆ, ಸಿಎಂ ಸಿದ್ಧರಾಮಯ್ಯ 7ನೇ ವೇತನ ಆಯೋಗ ಜಾರಿಗೆ ಒಲವು ತೋರಿದ್ದಾರೆ ಎನ್ನಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಕೆಗೆ ಕ್ಷಣಗಣನೆ ಶುರುವಾಗಿದೆ. ಒಟ್ಟಿನಲ್ಲಿ ಸತತ ಹೋರಾಟ, ಪ್ರತಿಭಟನೆ ಹಾಗೂ ವರ್ಷಗಳ ಕಾಯುವಿಕೆಯಿಂದ ರಾಜ್ಯ ಸರ್ಕಾರಿ ನೌಕರರಿಗೆ ವೇತನ ಪರಿಷ್ಕರಣೆ ಸಂಬಂಧದ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಇಷ್ಟೇ ಅಲ್ಲದೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಹಣಕಾಸು) ಎಲ್‌ ಕೆ ಅತೀಕ್ ಮಾತನಾಡಿ “ಸರ್ಕಾರದ ಎಲ್ಲಾ ಆದೇಶಗಳನ್ನು ಸಿದ್ಧಪಡಿಸುವಂತೆ ನಾವು ತಿಳಿಸಿದ್ದೇವೆ. ಜೂನ್ 15 ರ ಮೊದಲು ಎಲ್ಲಾ ಆದೇಶಗಳನ್ನು ಹೊರಡಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಅಯೋಧ್ಯೆಗೆ ತೆರಳಿ ಅಯೋಧ್ಯಾಪತಿ ಶ್ರೀರಾಮನಿಗೆ ಮಂಡಿಯೂರಿ ನಮಿಸಿದ್ದಾರೆ. ಈ ಕುರಿತ ಫೋಟೋಗಳು, ವೀಡಿಯೋಗಳು ಸೋಷಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿವೆ. ಅಯೋಧ್ಯೆಗೆ ಭೇಟಿ ನೀಡಿ ಪ್ರಭು ಶ್ರೀರಾಮನಿಗೆ ವಂದಿಸಿದ ವಿಚಾರವನ್ನು ಸ್ವತಃ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರೇ ಎಕ್ಸ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದಾರೆ. ಅವರು ಅಯೋಧ್ಯಾ ಶ್ರೀರಾಮ ಮಂದಿರವನ್ನು ‘ಶಾಂತಿಯ ಸ್ಥಳ’ ಎಂದು ಬಣ್ಣಿಸಿದ್ದಾರೆ. ಅಪ್ಲೋಡ್ ಮಾಡಿದ ವೀಡಿಯೋದಲ್ಲಿ ಅವರು ಅಯೋಧ್ಯೆಯ ಶ್ರೀ ರಾಮ ಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಈ ಆ ವೀಡಿಯೋದಲ್ಲಿ ಅಯೋಧ್ಯೆಯ ರಾಮ್ ಲಲ್ಲಾ ವಿಗ್ರಹದ ಮುಂದೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ನಮಸ್ಕರಿಸುತ್ತಿರುವುದನ್ನು ಕಾಣಬಹುದು. ಅವರು ನಮಸ್ಕರಿಸಿದ ವೇಳೆ ಹಿನ್ನಲೆಯಲ್ಲಿ ‘ಜೈ ಶ್ರೀ ರಾಮ್’ ಘೋಷಣೆಗಳು ಕೇಳಿಬಂದಿದೆ. ತಮ್ಮ ಅಯೋಧ್ಯೆಯ ಭೇಟಿ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ‘ನಾನು ಅಯೋಧ್ಯೆಗೆ ಭೇಟಿ ನೀಡುತ್ತಲೇ ಇದ್ದೇನೆ. ಜನವರಿ ತಿಂಗಳಲ್ಲಿ ಪ್ರಾಣ…

Read More

ಕಿರುತೆರೆ ನಟಿ ಜ್ಯೋತಿ ರೈ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತಾಗಿ ನಟಿ ಸೈಬರ್ ಕ್ರೈಂ ವಿಭಾಗಕ್ಕೆ ದೂರು ನೀಡಿದ್ದಾರೆ. ಮಾರ್ಫಿಂಗ್ ಮಾಡಿರುವವರ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಮಾರ್ಫಿಂಗ್ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ನಟಿ ಜ್ಯೋತಿ ರೈ ಮನವಿ ಮಾಡಿದ್ದಾರೆ. ನನ್ನ ಮಾನ ಹಾಗೂ ಕುಟುಂಬದ ಗೌರವ ಅಪಾಯದಲ್ಲಿದೆ. ಸರಿಯಾದ ಕ್ರಮ ತೆಗೆದುಕೊಳ್ಳದಿದ್ದರೆ ನನ್ನ ಜೀವನದಲ್ಲಿ ಸರಿಪಡಿಸಲಾಗದ ಹಾನಿ ಉಂಟಾಗುತ್ತದೆ ಎಂದು ದೂರಿನಲ್ಲಿ ನಟಿ ಕಳವಳ ವ್ಯಕ್ತಪಡಿಸಿದ್ದಾರೆ.‌ ನಾನು ಇಂಟರ್‌ ನೆಟ್ ಮತ್ತು ಸಾಮಾಜಿಕ ಜಾಲತಾಣಗಳನ್ನು ನಿತ್ಯ ಬಳಕೆ ಮಾಡುತ್ತೇನೆ. ಇತ್ತೀಚಿನ ದಿನಗಳಲ್ಲಿ ಫೇಕ್ ಅಕೌಂಟ್ ‌ಗಳ ಮೂಲಕ ನನಗೆ ಮೆಸೇಜ್‌ ಗಳು ಬರುತ್ತಿವೆ. ನನ್ನ ಫೋಟೋಗಳ ಜೊತೆಗೆ ಇಂಟರ್‌ ನೆಟ್ ಡೌನ್‌ ಲೋಡ್ ಮಾಡಲಾದ ನಗ್ನ ಹಾಗೂ ಅಶ್ಲೀಲ ಚಿತ್ರಗಳನ್ನು ಮಾರ್ಫಿಂಗ್ ಮಾಡಿ ನನ್ನ ಇನ್‌ ಬಾಕ್ಸ್‌ಗೆ ಕಳುಹಿಸುತ್ತಿದ್ದಾರೆ. ನನ್ನ ಇನ್ಸ್ಟಾಗ್ರಾಂ ಸ್ಟೋರಿಗಳಲ್ಲಿ ಹಾಕಲಾದ ಫೋಟೋಗಳನ್ನು ಬಳಸಿ…

Read More

ಎಲ್ಲಾ ಶೋರೂಂಗಳಲ್ಲಿ ಅಕ್ಷಯ ತೃತೀಯ ಸಂಭ್ರಮ ಶುರುವಾಗಿದೆ. ಅಕ್ಷಯ ತೃತೀಯದಲ್ಲಿ ಚಿನ್ನವನ್ನು ಖರೀದಿಸುವ ಅಭ್ಯಾಸವು ಭಾರತೀಯ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದೆ. ಇದು ಹಲವು ತಲೆಮಾರುಗಳಿಂದ ನಡೆದುಬಂದಿದೆ. ಚಿನ್ನವನ್ನು ಯಾವಾಗಲೂ ಭಾರತದಲ್ಲಿ ಸಂಪತ್ತು, ಸಮೃದ್ಧಿ ಮತ್ತು ಭದ್ರತೆಯ ಸಂಕೇತವೆಂದು ಪೂಜಿಸಲಾಗುತ್ತದೆ. ಒಟ್ಟಾರೆಯಾಗಿ ಅಕ್ಷಯ ತೃತೀಯ ಒಂದು ಮಂಗಳಕರ ದಿನ. ಹಿಂದೂ ಸಂಪ್ರದಾಯದ ಪ್ರಕಾರ, ಈ ದಿನದ 24 ಗಂಟೆಗಳ ಪ್ರತಿ ಕ್ಷಣವೂ ಪ್ರತಿಯೊಂದು ಕೆಲಸಕ್ಕೂ ಒಳ್ಳೆಯದು. ಆದ್ದರಿಂದ, ಚಿನ್ನದ ನಾಣ್ಯಗಳನ್ನು ಖರೀದಿಸುವುದು ಅಥವಾ ಒಂದು ಸಣ್ಣ ಚಿನ್ನವನ್ನು ಖರೀದಿಸುವುದು ಒಳ್ಳೆಯ ಸಮಯವನ್ನು ತರುತ್ತದೆ. ಇಂದು ಚಿನ್ನದ ಬೆಲೆ ಎಷ್ಟಿದೆ ನೋಡೋಣ?: 22 ಕ್ಯಾರೆಟ್ ​ನ ಚಿನ್ನದ ಬೆಲೆ: ಬೆಂಗಳೂರಿನಲ್ಲಿ ಇವತ್ತು 22 ಕ್ಯಾರೆಟ್​ ನ 1 ಗ್ರಾಂ ಚಿನ್ನದ ಬೆಲೆ ₹ 6,614 ಇದೆ. 22 ಕ್ಯಾರೆಟ್ ​ನ 10 ಗ್ರಾಂ ಚಿನ್ನದ ಬೆಲೆ ₹ 64,140 ಇದೆ. 24 ಕ್ಯಾರೆಟ್ ​ನ ಚಿನ್ನದ ಬೆಲೆ: ಬೆಂಗಳೂರಿನಲ್ಲಿ ಇವತ್ತು 24 ಕ್ಯಾರೆಟ್​ ನ…

Read More

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಇಳಿಕೆಯಾಗಿದೆ. ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್ಖರ ಜನಸಂಖ್ಯೆ ಭಾರೀ ಏರಿಕೆ ಕಂಡಿದೆ. ಪ್ರಧಾನಮಂತ್ರಿ ಆರ್ಥಿಕ ಸಲಹಾ ಮಂಡಳಿ ಈ ಬಗ್ಗೆ ಮಹತ್ವದ ಅಧ್ಯಯನ ನಡೆಸಿದ್ದು, ಸ್ಫೋಟಕ ವರದಿ ಬಹಿರಂಗವಾಗಿದೆ. ಪ್ರಧಾನ ಮಂತ್ರಿ ಆರ್ಥಿಕ ಸಲಹಾ ಮಂಡಳಿ (EAC-PM) 1950 ಮತ್ತು 2015ರ ನಡುವೆ ಅಧ್ಯಯನ ಮಾಡಿದ್ದು, ಜನಸಂಖ್ಯೆಯಲ್ಲಿ ಭಾರೀ ಏರಿಳಿತ ಆಗಿದೆ ಎನ್ನಲಾಗಿದೆ. ಪ್ರಮುಖವಾಗಿ ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಶೇಕಡಾ 7.8ರಷ್ಟು ಇಳಿಕೆಯಾಗಿದೆ ಅನ್ನೋ ಮಾಹಿತಿ ಬಯಲಾಗಿದೆ. 1950 ಮತ್ತು 2015ರ ನಡುವೆ ಹಿಂದೂಗಳ ಜನಸಂಖ್ಯೆ 7.8% ಕುಸಿತ ಕಂಡಿದೆ. 1950 ಮತ್ತು 2015ರ ನಡುವೆ ಮುಸ್ಲಿಮರ ಸಂಖ್ಯೆ ಶೇಕಡಾ 43.15ರಷ್ಟು ಹೆಚ್ಚಳವಾಗಿದೆ. ಕ್ರಿಶ್ಚಿಯನ್ನರ ಸಂಖ್ಯೆ ಶೇಕಡಾ 5.38ರಷ್ಟು ಏರಿಕೆಯಾಗಿದೆ. ಸಿಖ್ಖರ ಜನಸಂಖ್ಯೆ ಕೂಡ ಶೇಕಡಾ 6.58 ಹೆಚ್ಚಳವಾಗಿದೆ ಎನ್ನಲಾಗಿದೆ. 1950ರಲ್ಲಿ ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಶೇಕಡಾ 84 ರಷ್ಟಿತ್ತು. ಆದ್ರೆ 2015ರಲ್ಲಿ ಹಿಂದೂಗಳ ಜನಸಂಖ್ಯೆ ಶೇಕಡಾ 78ಕ್ಕೆ ಕುಸಿತ ಕಂಡಿದೆ. 1950ರಲ್ಲಿ…

Read More