Subscribe to Updates
Get the latest creative news from FooBar about art, design and business.
- ಬೀದರ್: ಪಶು ವೈದ್ಯಕೀಯ ವಿವಿಯಲ್ಲಿ ₹45 ಕೋಟಿ ಹಗರಣ; ವಿಶ್ರಾಂತ ಕುಲಪತಿ ಸೇರಿ ಆರು ಜನರ ಬಂಧನ!
- ಚಿಕ್ಕನಾಯಕನಹಳ್ಳಿ: 35ಕ್ಕೂ ಹೆಚ್ಚು ಲಂಬಾಣಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸನ್ಮಾನ
- ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು
- ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!
- ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
- ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್ ಪಾರು!
- ಥಿಯೇಟರ್ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
- ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
Author: admin
ಬೆಂಗಳೂರು: ವೈಟ್ ಫೀಲ್ಡ್ ಭಾಗದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲು ಸಿದ್ಧವಾಗಿರುವ ರಾಧಾಕೃಷ್ಣ ದೇವರ ಕಲ್ಲಿನ ವಿಗ್ರಹ ಕೆತ್ತನೆ ಕಾರ್ಯವನ್ನು ರಾಮಲಲ್ಲಾ ಕೆತ್ತನೆಯ ಶಿಲ್ಪಿ ಅರುಣ್ ಯೋಗಿರಾಜ್ ಕೈಗೆತ್ತಿಗೊಂಡಿದ್ದಾರೆ. ಮಹದೇವಪುರ ಕ್ಷೇತ್ರದ ವೈಟ್ ಫೀಲ್ಡ್ ನ ನಲ್ಲೂರುಹಳ್ಳಿ ಬೋರ್ ವೇಲ್ ರಸ್ತೆಯಲ್ಲಿ ಇ ಎಲ್ ವಿ ಗ್ರೂಪ್ ವತಿಯಿಂದ ನಿರ್ಮಿಸಿರುವ ರಾಧಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿದರು. ನಂತರ ಮಾತನಾಡಿದ ಅವರು. ಹೊಯ್ಸಳ ಮತ್ತು ಮೈಸೂರು ಶೈಲಿಯಲ್ಲಿ ರಾಧಕೃಷ್ಣನ ವಿಗ್ರಹ ಕೆತ್ತನೆ ಕಾರ್ಯವನ್ನು ಪ್ರಾರಂಭಿಸುವ ಮೊದಲು ಶಿಲೆ ನಿರ್ಮಾಣಕ್ಕೆ ಬೇಕಾದ ಅಳತೆ ಪಡೆಯಲು ಬಂದಿರುವುದಾಗಿ ತಿಳಿಸಿದರು. ಅಳತೆ ಪಡೆದ ನಂತರ, ಚಿತ್ರ ರಚಿಸಿ, ವಿಗ್ರಹ ನಿರ್ಮಾಣದ ಕೆಲಸ ಪ್ರಾರಂಭ ಮಾಡಲಾಗುವುದು, ಕೃಷ್ಣ ಜನ್ಮಾಷ್ಟಮಿಗೆ ವಿಗ್ರಹದ ಬೇಡಿಕೆಯಿದ್ದು, ಬಹಳಷ್ಟು ಕೆಲಸದ ಒತ್ತಡ ಇರುವುದರಿಂದ ಆದಷ್ಟು ಬೇಗನೇ ಶಿಲೆ ಕೆಲಸ ಪೂರ್ಣಗೊಳಿಸುವುದಾಗಿ ಹೇಳಿದರು. ಇನ್ನೂ ಇ.ಎಲ್.ವಿ. ಭಾಸ್ಕರ್ ಅವರು ಮಾತನಾಡಿ ಅಯೋಧ್ಯೆಯ ರಾಮ ನಿರ್ಮಾಣದಂತಹ ಸುಂದರ ದೇವರ ಶಿಲೆ ಕೆತ್ತನೆ ಮಾಡಿದಂತೆ, ನಮ್ಮ ಭಾಗದಲ್ಲಿಯೂ ಸಹ ರಾಧಕೃಷ್ಣನ ಮೂರ್ತಿಯ…
ನವದೆಹಲಿ: ನೋಯ್ಡಾದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾಹ್ ಖಾನ್ ಪುತ್ರ ಪೆಟ್ರೋಲ್ ಪಂಪ್ ಒಂದರ ಕಾರ್ಮಿಕರ ಮೇಲೆ ವಿನಾಕಾರಣ ಹಲ್ಲೆಗೈದಿರುವ ಘಟನೆ ನಡೆದಿದೆ. ಶಾಸಕನ ಪುತ್ರ ಕ್ಷುಲ್ಲಕ ಕಾರಣಕ್ಕಾಗಿ ಪೆಟ್ರೋಲ್ ಪಂಪ್ ಸಿಬ್ಬಂದಿಯೊಡನೆ ಜಗಳ ತೆಗೆದು ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಶಾಸಕನ ಪುತ್ರನನ್ನು ತಡೆಯಲು ಬಂದವರ ಮೇಲೂ ಸಹ ಹಲ್ಲೆ ನಡೆಸಲಾಗಿದೆ. ನೋಯ್ಡಾದ ಎಡಿಸಿಪಿ ಮಣೀಶ್ ಮಿಶ್ರಾ ಘಟನೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ್ದು, ಆರೋಪಿಗಳ ವಿರುದ್ದ ದೂರು ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮತದಾನ ಪ್ರಕ್ರಿಯೆ ಮುಗಿದ ಬಳಿಕ ರಾತ್ರಿ 11ಗಂಟೆಗೆ ವಾಪಾಸಾಗುತ್ತಿದ್ದ ವೇಳೆ ಬಸ್ಸಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಘಟನೆ ಬೀತುಲ್ ಜಿಲ್ಲೆಯಾ ಗೋಲಾ ಗ್ರಾಮದಲ್ಲಿ ನಡೆದಿದೆ. ಬಸ್ ನಲ್ಲಿ ಆರು ಜನ ಸಿಬ್ಬಂದಿ ಮತ್ತು ಆರು ಇವಿಎಂ ಯಂತ್ರಗಳು ಇದ್ದವು. ನಾಲ್ಕು ಇವಿಎಂ ಯಂತ್ರಗಳು ಹಾನಿಗೊಳಗಾಗಿದ್ದು, ಎರಡು ಇವಿಎಂಗಳು ಸುರಕ್ಷಿತವಾಗಿದೆ ಎಂದು ಜಿಲ್ಲಾಧಿಕಾರಿ ಸೂರ್ಯವಂಶಿ ಹೇಳಿದ್ದಾರೆ. ಇನ್ನು ಈ ಘಟನೆಯಿಂದ ಮತ ಎಣಿಕೆ ಮೇಲೆ ಏನಾದರೂ ಪ್ರಭಾವ ಬೀರಲಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಘಟನೆ ಬಗ್ಗೆ ಈಗಾಗಲೇ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಲಾಗಿದೆ. ಅವರು ಆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಒಂದು ವೇಳೆ ಮರು ಮತದಾನದ ಅವಶ್ಯಕತೆ ಇದ್ದಲ್ಲಿ ನಡೆಸಲಾಗುತ್ತದೆ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚಿಕ್ಕಬಳ್ಳಾಪುರ: ಕುಡಿದ ಅಮಲಿನಲ್ಲಿ ಮಹಿಳೆಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಸೀಗಲಹಳ್ಳಿ ಗ್ರಾಮದ ಆಲುವೇಲಮ್ಮ (45) ಮೃತ ದುರ್ದೈವಿಯಾಗಿದ್ದಾರೆ. ಆಲುವೇಲಮ್ಮ, ರಾಮಾಂಜಿನಮ್ಮ, ಸಂಜೀವಪ್ಪ ಎಂಬವರು ಜೊತೆಯಾಗಿ ಕೂಲಿ ಕೆಲಸಕ್ಕೆ ಹೋಗಿದ್ದಾರೆ. ಮೂವರು ಕುಡಿದು ಜಮೀನಿನಲ್ಲೇ ಜಗಳವಾಡಿಕೊಂಡಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿದ್ದು, ಆಲುವೇಲಮ್ಮಳ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲುವೇಲಮ್ಮಳ ಜೊತೆ ಇದ್ದ ರಾಮಾಂಜಿನಮ್ಮ, ಸಂಜೀವಪ್ಪ ಎಂವರನ್ನು ಪೊಲೀಸರು ಬಂಧಿಸಿದ್ದಾರೆ. ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಸಿಂಗನಲ್ಲೂರು ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಿಂಗನಲ್ಲೂರು ಗ್ರಾಮದ ಶ್ರೀಧರ್(44) ಮೃತರಾಗಿದ್ದಾರೆ. ಬಾಳೆಹಣ್ಣು ವ್ಯಾಪಾರಿಯಾಗಿದ್ದ ಮೃತ ಶ್ರೀಧರ್ ಇಂದು ಬೆಳಗ್ಗೆ ಕಾಮಗೆರೆ ಗ್ರಾಮದಿಂದ ಸ್ವಗ್ರಾಮಕ್ಕೆ ವಾಪಸಾಗುತ್ತಿದ್ದಾಗ, ಈ ವೇಳೆ ಯಮನಂತೆ ಬಂದ ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿಯಾದ ರಭಸಕ್ಕೆ ಬಸ್ ನಡಿ ಸಿಲುಕಿ ಬೈಕ್ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಹನೂರು ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರಾಯಚೂರು: ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ರಾಯಚೂರು ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ನಡೆದಿದೆ. ಜೇಗರ್ ಕಲ್ ಮಲ್ಲಾಪೂರು ಗ್ರಾಮದ ವಿನಾಯಕ(10) ಮೃತ ಬಾಲಕನಾಗಿದ್ದಾನೆ. ಮೃತ ಬಾಲಕ ಮಂಗಳವಾರ ಕುಟುಂಬಸ್ಥರೊಂದಿಗೆ ಈಜು ಕಲಿಯಲು ಪಕ್ಕದೂರು ಹೆಂಬೆರಾಳದ ಹಳ್ಳಕ್ಕೆ ಹೋಗಿದ್ದ. ನೀರಿನ ಆಳ ಹೆಚ್ಚಿದ್ದ ಕಡೆ ವಿನಾಯಕ ಈಜಲು ತೆರಳಿದ್ದು, ಈಜು ಬಾರದ ಹಿನ್ನೆಲೆ ಜಲ ಸಮಾಧಿಯಾಗಿದ್ದಾನೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬೀಜಿಂಗ್: ವ್ಯಕ್ತಿಯೊಬ್ಬ ಒಟ್ಟು 10 ಮಂದಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಚೀನಾದ ಝೆನ್ ಕ್ಸಿಯಾಂಗ್ ಕೌಂಟಿಯ ಚೆಂಗ್ನಾನ್ ಆಸ್ಪತ್ರೆಯಲ್ಲಿ ನಡೆದಿದೆ. ಏಕಾಏಕಿ ಆಸ್ಪತ್ರೆಗೆ ನುಗ್ಗಿದ ವ್ಯಕ್ತಿಯು 10 ಮಂದಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಇನ್ನು ಈ ಘಟನೆಯಲ್ಲಿ 23ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿದ ಪೊಲೀಸರು ಶಂಕಿತನನ್ನು ಬಂಧಿಸಿದ್ದಾರೆ. ಇನ್ನು, ಸದ್ಯ 10 ಮಂದಿಯನ್ನು ಕೊಲೆ ಮಾಡಿದ ಆರೋಪಿಯನ್ನು ವಶಕ್ಕೆ ಪಡೆದುಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಾಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ಕೂಡ ಚೀನಾದ ದಕ್ಷಿಣ ಚೀನಾದ ಗುವಾಂಗ್ ಡಾಂಗ್ ಪ್ರಾಂತ್ಯದಲ್ಲಿ ಶಿಶುವಿಹಾರದಲ್ಲಿ ಆರು ಮಂದಿ ಕೊಲೆಯಾಗಿದ್ದರು ಮತ್ತು ಒಬ್ಬರು ಗಾಯಗೊಂಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಕೊರಟಗೆರೆ: ಹಲಸಿನಕಾಯಿ ಕೀಳಲು ಮರ ಹತ್ತಿದ ಕೂಲಿ ಕಾರ್ಮಿಕ ಕಾಲು ಜಾರಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ಕೊರಟಗೆರೆ ತಾಲೂಕಿನ ನೀಲಗೊಂಡನಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಳಲಸಂದ್ರ ಗ್ರಾಮದ ಸಮೀಪವಿರುವ ತೋಟದಲ್ಲಿ ನಡೆದಿದೆ. ಹಲಸಿನಕಾಯಿ ಕೀಳಲು ಹೇಳಿದ ತೋಟದ ಮಾಲೀಕ ಬಸವರಾಜು. ಕೂಲಿ ಕಾರ್ಮಿಕ ಸಾವಗೀಡಾಗಿದ್ದಾರೆ ಎಂದು ತಿಳಿದ ಕೂಡಲೇ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಮಧುಸೂದನ್ ಮೃತಪಟ್ಟವರಾಗಿದ್ದಾರೆ. ಮಧುಸೂದನ್ ಪ್ರತಿದಿನವೂ ಕೆಲಸಕ್ಕೆ ಬರುವುದಿಲ್ಲ ಎಂದರೂ, ತೋಟದ ಮಾಲೀಕ ಬಲವಂತವಾಗಿ ಕರೆದುಕೊಂಡು ಹೋಗಿ ಮದ್ಯಪಾನ ಮಾಡಿಸಿ ತನ್ನ ತೋಟದ ಕೆಲಸ ಮಾಡಿಸಿಕೊಳ್ಳುತ್ತಿದ್ದರು ಎನ್ನಲಾಗಿದೆ. ಮರ ಹತ್ತಲು ಬರದಿದ್ದವನಿಗೆ, ಮದ್ಯಪಾನ ಮಾಡಿಸಿ ಮರ ಹತ್ತಲು ತೋಟದ ಮಾಲೀಕ ಹೇಳಿರುವುದಾಗಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಬೆಳಿಗ್ಗೆ 7:45ಕ್ಕೆ ಘಟನೆ ನಡೆದಿದ್ದರೂ ಮಧ್ಯಾಹ್ನದವರೆಗೂ ಯಾರಿಗೂ ಮಾಹಿತಿ ನೀಡದೆ ಊರಿನ ಪ್ರಮುಖರ ಜೊತೆ ಸೇರಿ ಪ್ರಕರಣ ಮುಚ್ಚಿ ಹಾಕುವ ಯತ್ನ ಮಾಡಿದ್ದಾರೆ. ಊರಿನ ಜನರಿಗೆ ಮಾಹಿತಿ ತಿಳಿಯುತ್ತಿದ್ದಂತೆ, ತೋಟದ ಮಾಲೀಕ ಏನು ಗೊತ್ತಿಲ್ಲದ ಹಾಗೆ ಸ್ಥಳಕ್ಕೆ ಬಂದಿದ್ದಾರೆ…
ಜೊತೆಗಾರನೇ ಚಾಕು ಇರಿದು ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಸುಂಕದಕಟ್ಟೆ ಬಳಿ ನಡೆದಿದೆ. ಬಿಡದಿ ಮೂಲದ ದಿವ್ಯಾ (30) ಕೊಲೆಯಾದ ಮಹಿಳೆ. ಈಕೆಯ ಜೊತೆಗಾರ ಶಾಂತಕುಮಾರ್ ಕೊಲೆ ಮಾಡಿದ ವ್ಯಕ್ತಿ. ಈ ಇಬ್ಬರು ಬಿಡದಿ ಮೂಲದವರು ಆಗಿದ್ದಾರೆ. 4 ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದು ವಾಸಿಸತೊಡಗಿದ್ದರು. ಆದರೆ ಮದುವೆ ಆಗಿರುವ ಬಗ್ಗೆ ಅನುಮಾನವಿದೆ. ಈ ಮೊದಲು ಕಾಮಾಕ್ಷಿಪಾಳ್ಯದಲ್ಲಿ ಇಬ್ಬರು ಮನೆ ಮಾಡಿದ್ದರು. ಆ ನಂತರ ಇಬ್ಬರ ನಡುವೆ ಜಗಳವಾಗಿದ್ದರಿಂದ ಮಹಿಳೆ ಏಕಾಂಗಿಯಾಗಿ ವಾಸಿಸತೊಡಗಿದಳು. 5 ದಿನದ ಹಿಂದೆ ಬೆಂಗಳೂರಿನ ಸುಂಕದಕಟ್ಟೆಯ ಸೊಲ್ಲಾಪುರಂ ಲೇಔಟ್ ನಲ್ಲಿ ಮಹಿಳೆ ಬಾಡಿಗೆ ಮನೆ ಮಾಡಿದ್ದಳು. ಈ ಬಗ್ಗೆ ಆರೋಪಿ ತಿಳಿದುಕೊಂಡಿದ್ದ. ರಾತ್ರಿ 9:30ಕ್ಕೆ ಬಾಡಿಗೆ ಮನೆ ಬಳಿ ಬಂದಿದ್ದು ಇಬ್ಬರು ಜೊತೆಯಲ್ಲೇ ಮನೆಯೊಳಗೆ ಹೋಗಿದ್ದಾರೆ. ಮನೆ ಒಳಗೆ ಯಾವುದೋ ವಿಷಯಕ್ಕೆ ಇಬ್ಬರ ನಡುವೆ ಗಲಾಟೆ ಶುರುವಾಗಿದೆ. ಈ ವೇಳೆ ಚಾಕು ತೆಗೆದುಕೊಂಡು ಮಹಿಳೆಗೆ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ…
ಹೊರವಲಯದ ಶ್ರೀ ಜಯಬಸವ ತಪೋವನದಲ್ಲಿ ಮೇ.೧೦ ರಂದು ನಡೆಯಲಿರುವ ಬಸವ ಜಯಂತಿ ಹಿನ್ನೆಲೆಯಲ್ಲಿ, ನಮ್ಮ ನಡಿಗೆ ಬಸವಣ್ಣನೆಡೆಗೆ ಎಂಬ ಧ್ಯೇಯವಾಕ್ಯದೊಂದಿಗೆ ನಡಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಯಬಸವ ತಪೋವನ ವಿಶ್ವ ಧರ್ಮಪೀಠದ ಶ್ರೀ ಜಯಬಸವಾನಂದ ಸ್ವಾಮೀಜಿ ತಿಳಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿರೇಮಗಳೂರು ಅಂಬೇಡ್ಕರ್ ವೃತ್ತದಿಂದ ಶ್ರೀ ಜಯಬಸವ ತಪೋವನದವರೆಗೆ, ಬೆಳಗ್ಗೆ ೬ ರಿಂದ ೧ ಗಂಟೆ ಕಾಲ ೩ ಕಿಮೀ ದೂರವನ್ನು ಬಸವಾದಿ ಶರಣರ ವಚನಗಳ ಪಠಣದೊಂದಿಗೆ, ವಾಯುವಿಹಾರ ನಡೆಸಲಾಗುವುದು. ನಗರ ಮತ್ತು ಗ್ರಾಮೀಣ ಪ್ರದೇಶದ ಬಸವಣ್ಣನ ಅಭಿಮಾನಿಗಳು, ಸರ್ವ ಜನಾಂಗದ ಬಾಂಧವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಬಸವ ತಪೋವನದಲ್ಲಿ ಬೆಳಗ್ಗೆ ೭ ಗಂಟೆಗೆ ಬಸವ ಧ್ವಜಾರೋಹಣ ನಂತರ, ೮ ಗಂಟೆವರೆಗೆ ವಚನ ಗಾಯನ ಹಾಗೂ ೫ ಮಂದಿ ಗಣ್ಯರು ಬಸವ ಜಯಂತಿ ಬಗ್ಗೆ ಶುಭ ಸಂದೇಶ ನೀಡಲಿದ್ದಾರೆ ಎಂದರು. ಬಸವ ನಡಿಗೆ ಕಾರ್ಯಕ್ರಮಕ್ಕೆ ಶಾಸಕ ಎಚ್.ಡಿ. ತಮ್ಮಯ್ಯ ಚಾಲನೆ ನೀಡುವರು. ಬಸವ ಧ್ವಜಾರೋಹಣವನ್ನು…