Subscribe to Updates
Get the latest creative news from FooBar about art, design and business.
- ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು
- ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!
- ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
- ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್ ಪಾರು!
- ಥಿಯೇಟರ್ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
- ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
- ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
- ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
Author: admin
ಗದಗ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ದಾರುಣವಾಗಿ ಸಾವನಪ್ಪಿರುವ ಘಟನೆ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. 5 ವರ್ಷದ ಬಾಲಕ ಮನೋಜ್ ಹಾಗೂ 34 ವರ್ಷದ ಗೀತಾ ಹೆಸರೂರು ಮೃತ ದುರ್ದೈವಿಗಳಾಗಿದ್ದಾರೆ. ತಂಗಿಯ ಮಗನೊಂದಿಗೆ ಕೃಷಿ ಹೊಂಡದಲ್ಲಿ ಜಲಸಮಾಧಿ ಆಗಿದ್ದಾರೆ ಮಹಿಳೆ. ಕೃಷಿ ಹೊಂಡದಿಂದ ನೀರು ತರಲು ಹೋದಾಗ ಕಾಲು ಜಾರಿ ಮನೋಜ್ ಮೊದಲು ಕೃಷಿ ಹೊಂಡಕ್ಕೆ ಬಿದ್ದಿದ್ದಾನೆ. ಬಾಲಕ ಮನೋಜ್ ರಕ್ಷಣೆಗೆ ಹೋದಾಗ ಗೀತಾ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಆದರೆ, ನೀರಿನ ಅಭಾವದಿಂದ ಈ ಘಟನೆ ನಡೆದಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಬಹುಭಾಷಾ ನಟಿ ಸಮಂತಾ ಇತ್ತೀಚೆಗೆ ತನ್ನ ಅನಾರೋಗ್ಯ, ಸೆಕ್ಸಿ ಡ್ರೆಸ್ ನ ಫೋಟೋಗಳಿಂದ, ತನ್ನ ವಿಚ್ಛೇದನದ ವಿಷಯದಿಂದಲೇ ಬಹು ಪ್ರಚಲಿತದಲ್ಲಿದ್ದಾರೆ. ತನ್ನ ಪ್ರವಾಸ-ಹವ್ಯಾಸದೊಂದಿಗೆ ದಿನ ಕಳೆಯುತ್ತಿರುವ ಸಮಂತಾ ಅವರು, ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬೆತ್ತಲಾಗಿರುವ ದೇಹದ ಫೋಟೋವನ್ನು ಹಂಚಿಕೊಂಡಿದ್ದು, ಕೂಡಲೇ ಅದನ್ನು ಡಿಲೀಟ್ ಮಾಡಿದ್ದಾರೆ ಎನ್ನುವ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಸಮಂತಾ ಅವರು ಇದನ್ನು ಪೋಸ್ಟ್ ಮಾಡಿದ ಕೂಡಲೇ ಟ್ರೆಂಡಿಂಗ್ ಸ್ಥಾನ ಪಡೆದುಕೊಂಡಿದ್ದಾರೆ. ಸಮಂತಾ ಅವರೇ ತಮ್ಮ ಬೆತ್ತಲೆ ಫೋಟೋವನ್ನು ಶೇರ್ ಮಾಡಿ ಡಿಲೀಟ್ ಮಾಡಿದ್ದಾರೆ ಎಂದು ಅನೇಕ ನೆಟ್ಟಿಗರು ಕಮೆಂಟ್ ಮಾಡಿದ್ದಾರೆ. ಇನ್ನೊಂದೆಡೆ ಇದೊಂದು ಫೇಕ್ ಫೊಟೋವೆಂದು ಸಮಂತಾ ಅಭಿಮಾನಿಗಳು ಹೇಳುತ್ತಿದ್ದಾರೆ. ಬಾತ್ ಟಬ್ ನಲ್ಲಿ ಬೆತ್ತಲಾಗಿ ಕೂತಿರುವ ಯುವತಿಯ ಫೋಟೋ ವೈರಲ್ ಆಗಿದ್ದು, ಮುಖ ಕಾಣುತ್ತಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುರುವೇಕೆರೆ: ತಾಲೂಕಿನ ಮಾದಪಟ್ಟಣದ ಗ್ರಾಮದೇವತೆ ಶ್ರೀಕೆಂಪಮ್ಮದೇವಿ ಜಾತ್ರಾ ಮಹೋತ್ಸವ ಶುಕ್ರವಾರದಿಂದ ಭಾನುವಾರದವರೆಗೂ ಮೂರು ದಿನಗಳ ಕಾಲ ಬಹಳ ವಿಜೃಂಭಣೆಯಿಂದ ನಡೆಯಿತು. ಶುಕ್ರವಾರ ರಾತ್ರಿ ಗ್ರಾಮದೇವತೆ ಶ್ರೀಕೆಂಪಮ್ಮ ದೇವಿಯ ಜೊತೆ ಪುಟ್ಟ ಬಾಲಕಿಯರು ಸೇರಿ ನೂರಾರು ಮಹಿಳೆಯರು ಆರತಿ ಹೊತ್ತು ಸಾಗಿದರು. ಸೋಮನ ಕುಣಿತ, ಡೊಳ್ಳು ಕುಣಿತ, ಚಿಟ್ಟೇ ಮೇಳ ಸೇರಿದಂತೆ ಅನೇಕ ಜನಪದ ಕಲಾಪ್ರಕಾರಗಳೊಂದಿಗೆ ಮದ್ದು ಗುಂಡುಗಳ ಚಮಾತ್ಕಾರದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಿತು. ಶನಿವಾರ ಸಂಜೆ ಬಾಯಿ ಬೀಗ ಉತ್ಸವದಲ್ಲಿ ಹರಕೆ ಹೊತ್ತ ಹೆಣ್ಣು ಮಕ್ಕಳು ಬಾಯಿಗೆ ತಂತಿ ಮಾಡಿದ ಸೂಜಿಯನ್ನು ಚುಚ್ಚಿಸಿಕೊಂಡು ಹರಕೆ ತೀರಿಸಿದರು. ಮೆರವಣಿಗೆಯಲ್ಲಿ ಬಸವನ ಮೇಲೆ ನಗಾರಿವಾದ್ಯ, ದೊಳ್ಳುವಾದ್ಯ ಜಾನಪದ ಕಲಾ ಪ್ರಕಾರದೊಂದಿಗೆ ರಸ್ತೆಯಲ್ಲಿ ಸಾಗಿತು. ಭಾನುವಾರ ಬೆಳಗ್ಗೆ ಕೆಂಪಮ್ಮದೇವಿ ಮತ್ತೆ ಮೂಲ ದೇವಸ್ಥಾನದಿಂದ ಮೆರವಣಿಗೆಯೊಂದಿಗೆ ಗ್ರಾಮಕ್ಕೆ ಪ್ರವೇಶ ಮಾಡಲಾಗುತ್ತದೆ. ನಂತರ ಭಕ್ತರು ತಮ್ಮ ಹರಕೆ ಹಾಗೂ ಕುರುಹುಗಳನ್ನು ಕೇಳುತ್ತಾರೆ. ದೇವಿಗೆ ಹಲಸಿನ ಹಣ್ಣು, ಬಾಳೆಹಣ್ಣು ಮಾಡಿದ ಪಲಹಾರವನ್ನು ದೇವಿಗೆ, ಸೋಮಗಳಿಗೆ ಮಣೇವು ಹಾಕಿ.…
ತುರುವೇಕೆರೆ: ತಾಲೂಕಿನ ದಬ್ಬೇಘಟ್ಟ ಹೋಬಳಿ ವ್ಯಾಪ್ತಿಗೆ ಬರುವ ಗಾಂಧಿ ಗ್ರಾಮದಲ್ಲಿ, ಕೆಲ ದಿನಗಳಿಂದ ನೆಪೆಡ್ ಮೂಲಕ ಕೊಬ್ಬರಿ ಖರೀದಿ ಮಾಡುವ ಕೇಂದ್ರಗಳನ್ನು ತೆರೆದಿದ್ದು, ಕೊಬ್ಬರಿ ಖರೀದಿಯಲ್ಲಿ ಅಧಿಕಾರಿಗಳು ಮತ್ತು ಕೆಲ ಸಿಬ್ಬಂದಿಗಳು ರೈತರ ಬಳಿ ಹಣ ವಸೂಲಿ ಮಾಡಲು ನಿಂತಿದ್ದಾರೆ ಎಂಬ ಮಾಹಿತಿಯನ್ನು, ನೊಂದ ರೈತನೊಬ್ಬ ಮಾಧ್ಯಮಕ್ಕೆ ದೂರವಾಣಿ ಮೂಲಕ ಕರೆ ಮಾಡಿ, ಆಗುತ್ತಿರುವ ಅನ್ಯಾಯವನ್ನು ಹಂಚಿಕೊಂಡಿದ್ದಾರೆ. ಇನ್ನು ಹಣ ವಸೂಲಿ ಮಾಡುವ ದರೋಡೆಕೋರ ಅಧಿಕಾರಿಗಳ ವಿರುದ್ಧ, ಈಗಾಗಲೇ ಸ್ವರ್ಣ ಭೂಮಿ ರೈತ ಉತ್ಪಾದಕರ ಕಂಪನಿಯ ಉಪಾಧ್ಯಕ್ಷರಾದ ಕುಮಾರಸ್ವಾಮಿಯವರಿಗೆ, ರೈತ ತನ್ನ ಅಳಲನ್ನು ತೋಡಿಕೊಂಡಿದ್ದಾನೆ. ಹೀಗೆ ಮುಂದುವರೆದರೆ ದೊಡ್ಡ ಮಟ್ಟದ ಉಗ್ರ ಹೋರಾಟ ಮಾಡಲಾಗುವುದು ಎಂದು ಉಪಾಧ್ಯಕ್ಷರಾದ ಕುಮಾರಸ್ವಾಮಿಯವರು ಕೂಡ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಹಾಗಾದರೆ, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು, ಹಣ ವಸೂಲಿ ಮಾಡುತ್ತಿರುವ ಅಧಿಕಾರಿ ಮತ್ತು ಕೆಲ ಸಿಬ್ಬಂದಿಗಳ ವಿರುದ್ಧ ಯಾವ ರೀತಿ ಕಾನೂನು ಕ್ರಮ ಜರುಗಿಸುತ್ತಾರೆ ಕಾದು ನೋಡಬೇಕಾಗಿದೆ. ಬರಗಾಲದಲ್ಲೂ ಕೂಡ ರೈತರಿಂದ ಹಣ ವಸೂಲಿಗೆ ನಿಂತ ಕೆಲ…
ಪಾವಗಡ: ತಾಲ್ಲೂಕಿನಲ್ಲಿ ಸಾರ್ವಜನಿಕರಿಗೆ, ಸಿಬ್ಬಂದಿ ಕೊರತೆಯಿಂದಾಗಿ ಆರೋಗ್ಯ ಸೇವೆ ಸಿಗುತ್ತಿಲ್ಲ ಎಂದು ಆರೋಪಿಸಿ, ತಾಲ್ಲೂಕು ಕಛೇರಿ ಬಳಿ ಸೋಮವಾರ ಪ್ರತಿಭಟನೆ ನಡೆಸಿ, ಅಗತ್ಯ ಸಿಬ್ಬಂದಿ ಒದಗಿಸಬೇಕೆಂದು ರೈತ ಸಂಘದ ಮುಖಂಡರು ಆಗ್ರಹಿಸಿದರು. ತಾಲ್ಲೂಕು ರೈತ ಸಂಘದ ಅಧ್ಯಕ್ಷ ಪೂಜಾರಪ್ಪ ನವರ ನೇತೃತ್ವದಲ್ಲಿ ತಹಶೀಲ್ದಾರ್ ರವರಿಗೆ ಮನವಿ ಪತ್ರ ನೀಡಿ ಒತ್ತಾಯಿಸಿದರು. ಇದೇ ವೇಳೆ ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ ಮಾತನಾಡಿ, ಪಾವಗಡದಲ್ಲಿ ಘನ ಸರ್ಕಾರದ ಸರ್ಕಾರಿ ಆಸ್ಪತ್ರೆ ನೂತನವಾಗಿ ಕಟ್ಟಡ ನಿರ್ಮಾಣವಾಗಿದ್ದು, ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ 3 ಜನ ಡಾಕ್ಟರ್ ಗಳು ಇದ್ದು, ಸಾರ್ವಜನಿಕರಿಗೆ ಸರಿಯಾದ ರೀತಿಯಲ್ಲಿ ಚಿಕಿತ್ಸೆ ಇಲ್ಲದೆ ಜನ ಪರದಾಡುವಂತೆ ಆಗಿದೆ. ಪಾವಗಡ ಸರ್ಕಾರಿ ಆಸ್ಪತ್ರೆಗೆ ಬೇಕಾಗಿರುವ ತಜ್ಞ ವೈದ್ಯರುಗಳ ಸಂಖ್ಯೆ ಮಂಜೂರು 10 ಹುದ್ದೆ, ಈಗ ಹಾಲಿ ಕೆಲಸ ಮಾಡುತ್ತಿರುವವರು ಸಂಖ್ಯೆ 3 ಜನರಿದ್ದಾರೆ. ತುರ್ತು ಚಿಕಿತ್ಸೆ ವೈದ್ಯಾಧಿಕಾರಿ 3 ಜನರು ಇರುವ ಕಡೆ ಒಬ್ಬರೂ ಇಲ್ಲ, ದಂತ ವೈದ್ಯರುಗಳಿಲ್ಲ, ಸಹಾಯಕ ಆಡಳಿತಾಧಿಕಾರಿ ಇಲ್ಲ, ಕಚೇರಿ ಅಧೀಕ್ಷಕರಿಲ್ಲ.…
ಉತ್ತರ ಪ್ರದೇಶ: ಮುಸ್ಲಿಂ ಮಹಿಳೆಯೊಬ್ಬಳು ತನ್ನ ಗಂಡನಿಗೆ ಚಿತ್ರಹಿಂಸೆ ನೀಡಿ, ಆತನ ಖಾಸಗಿ ಭಾಗಗಳಿಗೆ ಹಾನಿ ಮಾಡಿದ ಘಟನೆ ಬಿಜ್ನೋರ್ ದಲ್ಲಿ ನಡೆದಿದೆ. ಪತಿಯನ್ನು ಬೆತ್ತಲೆ ಮಾಡಿ, ಮಂಚದ ಮೇಲೆ ಮಲಗಿಸಿ, ಕೈ-ಕಾಲುಗಳನ್ನು ಕಟ್ಟಿ ಹಾಕಿ ಕ್ರೂರವಾಗಿ ಚಿತ್ರಹಿಂಸೆ ನೀಡಿದ್ದಾಳೆ. ಏಳು ತಿಂಗಳ ಹಿಂದೆ ಇಬ್ಬರ ಕುಟುಂಬ ಒಪ್ಪಿಗೆಯ ನಂತರ ಮುಸ್ಲಿಂ ಪದ್ಧತಿಯಂತೆ ಪ್ರೇಮ ವಿವಾಹ ಆಗಿದ್ದರು ಎನ್ನಲಾಗಿದೆ. ಪತಿಯನ್ನು ಮಂಚಕ್ಕೆ ಕಟ್ಟಿ ಹಾಕಿ, ಮಂಚದಲ್ಲಿ ಅವನ ಜತೆಗೆ ಮಲಗುವುದು, ಸಿಗರೇಟ್ ಸೇದುತ್ತಿದ್ದಳು, ಮದ್ಯಪಾನ ಕೂಡ ಮಾಡುತ್ತಿದ್ದಳು, ಇದರ ಮಧ್ಯೆ ಪತಿಗೆ ಚಿತ್ರಹಿಂಸೆ ಕೂಡ ನೀಡುತ್ತಿದ್ದಳು ಎಂದು ಹೇಳಲಾಗಿದೆ. ಇದರಿಂದ ನೊಂದು ಮಗ ಮಲಗುವ ಕೋಣೆಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ, ಸೊಸೆಯ ದುಷ್ಕೃತ್ಯ ಬಯಲಿಗೆಳೆದಿದ್ದಾರೆ ಅತ್ತೆ. ಆಕೆ ಹಿಂಸೆ ನೀಡಿದ್ದಳು ಎಂಬುದಕ್ಕೆ ಸಿಸಿಟಿವಿ ಕೂಡ ಸಾಕ್ಷಿಯಾಗಿದೆ. ಪತಿ ಹಾಗೂ ಸಿಸಿ ಟಿವಿ ವಿಡಿಯೋ ಆಧಾರದ ಮೇಲೆ ಮಹಿಳೆಯ ವಿರುದ್ಧ ದೂರು ದಾಖಲಿಸಿಕೊಂಡಿದ್ದು, ಇದೀಗ ಆಕೆ ಮಾಡಿದ ಕೃತ್ಯಕ್ಕೆ ಅವಳನ್ನು ಬಂಧಿಸಲಾಗಿದ್ದು, ಗಂಡನನ್ನು…
ಬಿಗ್ ಬಾಸ್ ಮರಾಠಿಯ ವಿನ್ನರ್, ನಟಿ ಮೇಘಾ ಧಾಡೆ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜೊತೆಗೆ ರಾಹುಲ್ ಬೆಂಬಲಿಸಿದವರಿಗೂ ಕೂಡಾ ಅವರು, “ನೀವೆಲ್ಲರೂ ನರಕಕ್ಕೆ ಹೋಗಿ” ಅಂದಿದ್ದಾರೆ. ಚುನಾವಣಾ ಪ್ರಚಾರದ ವೇಳೆ ರಾಹುಲ್ ಅವರಿಗೆ ಶಿವಾಜಿ ಮಹರಾಜರ ಪ್ರತಿಮೆಯನ್ನು ನೀಡಲಾಗಿದೆ. ಫೋಟೋಗಾಗಿ ಅದನ್ನು ಸ್ವೀಕರಿಸಿ, ನಂತರ ಅಲ್ಲಿಯೇ ಪ್ರತಿಮೆಯನ್ನು ಬಿಟ್ಟು ಹೋಗಿದ್ದಾರಂತೆ. ಮೇಘಾ ಮಾತುಗಳು ಇದೀಗ ವೈರಲ್ ಆಗಿದ್ದು, ಅದರಲ್ಲೂ ಶಿವಾಜಿ ಪ್ರತಿಮೆ ಇಟ್ಟುಕೊಂಡು ರಾಹುಲ್ ಗಾಂಧಿ ಅವರನ್ನು ಅನೇಕರು ಟೀಕಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ರಾಮನಗರ: ಚನ್ನಪಟ್ಟಣ ಟಿಪ್ಪುನಗರದ ಮಿಲನ್ ಶಾದಿಮಹಲ್ ನಲ್ಲಿ ಅವಧಿ ಮುಗಿದ ಐಸ್ ಕ್ರೀಂ ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ಮಿಲನ್ ಶಾದಿಮಹಲ್ ನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ 80ಕ್ಕೂ ಹೆಚ್ಚು ಮಂದಿ ಐಸ್ ಕ್ರೀಂ ಸೇವಿಸಿದ್ದು, ಈ ಪೈಕಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಸಂತ್ರರನ್ನು ಚಿಕಿತ್ಸೆಗಾಗಿ ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದ ಸ್ಥಳೀಯರು ಗಾಬರಿಗೊಂಡಿದ್ದು, ಸ್ಥಳಕ್ಕೆ ಚನ್ನಪಟ್ಟಣ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಹಾಲಿವುಡ್ ನ ಅತ್ಯಂತ ಜನಪ್ರಿಯ ಸಿನಿಮಾ ಟೈಟಾನಿಕ್ ನ ಕ್ಯಾಪ್ಟನ್ ನಟ ಬರ್ನಾರ್ಡ್ ಹಿಲ್ ನಿಧನರಾಗಿದ್ದಾರೆ. 79ರ ವಯಸ್ಸಿನ ಈ ನಟ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗುತ್ತಿದೆ. ಕೇಟ್ ವಿನ್ಸ್ ಲೆಟ್ ಸೇರಿದಂತೆ ಸಾಕಷ್ಟು ಚಿತ್ರಗಳಲ್ಲಿ ನಟಿಸಿರುವ ಬರ್ನಾರ್ಡ್ ಈವರೆಗೂ ಸುಮಾರು 11 ಬಾರಿ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಬರ್ನಾರ್ಡ್ ನಿಧನಕ್ಕೆ ಕೇವಲ ಹಾಲಿವುಡ್ ಮಾತ್ರವಲ್ಲ, ಜಗತ್ತಿನ ಅನೇಕ ತಂತ್ರಜ್ಞರು ಹಾಗೂ ಕಲಾವಿದರು ಮತ್ತು ಅಭಿಮಾನಿಗಳ ಕಂಬನಿ ಮಿಡಿದಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ತುಮಕೂರು: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ವಿಚಾರದಲ್ಲಿ ಸತ್ಯನೋ- ಸುಳ್ಳೋ ಸಾಬೀತು ಆಗಲಿ, ಪ್ರಜ್ವಲ್ ರೇವಣ್ಣ ನನಗೆ ಆತ್ಮೀಯ ಸ್ನೇಹಿತ ಎಂದು ತುಮಕೂರಿನಲ್ಲಿ ಸಂಸದ ಜಿ.ಎಸ್. ಬಸವರಾಜು ತಿಳಿಸಿದ್ದಾರೆ. ತುಮಕೂರಿನಲ್ಲಿ ನಡೆದ ಪತ್ರಿಕಾಘೋಷ್ಠಿಯಲ್ಲಿ ಮಾತನಾಡಿದ ಅವರು, “ಆ ನೇಚರ್ ಇರುವಂತಹ ಹುಡುಗ ಅಲ್ಲ ಆತ. ಏನು ಗ್ರಹಚಾರವೋ, ಯಾರ ಕೈವಾಡವೋ ಗೊತ್ತಿಲ್ಲ” ಎಂದು ಹೇಳಿದರು. ಇತ್ತೀಚೆಗೆ ಈ ರೀತಿ ತೇಜೋವಧೆ ಮಾಡುವುದು ಹೆಚ್ಚಾಗಿದೆ. ಜಾರಕಿಹೊಳಿಗೂ ಕೂಡ ಪಿತೂರಿ ಮಾಡಿ, ಮನೆ ಹಾಳು ಮಾಡಿ, ಮಾನ -ಮರ್ಯಾದೆ ಹರಾಜು ಹಾಕಿದ್ದಾರೆ. ಜಾರಕಿಹೊಳಿಗೆ ವಿರೋಧ ಪಕ್ಷದವರೇ ಪಿತೂರಿ ಮಾಡಿದರು ಎಂದರು. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿಯೂ ಅನುಮಾನ ಹೊರ ಹಾಕಿದ ಜಿ.ಎಸ್. ಬಸವರಾಜು. ಈಗಲೂ ಕೂಡ ವಿರೋಧ ಪಕ್ಷದವರೇ ಪಿತೂರಿ ಮಾಡಿರಬಹುದು. ಒಂದು ವೇಳೆ ಮಹಿಳೆಯರಿಗೆ ಅನ್ಯಾಯ ಆಗಿದ್ದರೆ ಶಿಕ್ಷೆ ಆಗಲೇಬೇಕು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…