Subscribe to Updates
Get the latest creative news from FooBar about art, design and business.
- ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು
- ಅಕ್ರಮ ಸಂಬಂಧಕ್ಕೆ ಬಲಿಯಾದ ವಿವಾಹಿತೆ; 4 ತಿಂಗಳ ಬಳಿಕ ಸುಟ್ಟ ಶವದ ನಿಗೂಢತೆ ಭೇದಿಸಿದ ತುರುವೇಕೆರೆ ಪೊಲೀಸ್!
- ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!
- ಮುಳ್ಳಯ್ಯನಗಿರಿಯಲ್ಲಿ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಟಿಟಿ: 13 ಪ್ರವಾಸಿಗರು ಅದೃಷ್ಟವಶಾತ್ ಪಾರು!
- ಥಿಯೇಟರ್ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ
- ರಾಜ್ಯದಲ್ಲಿ ಸಿಎಂ ಬದಲಾವಣೆ ಇಲ್ಲ: ಸ್ಪಷ್ಟನೆ ನೀಡಿದ ಆರ್.ವಿ.ದೇಶಪಾಂಡೆ
- ಇಂಧನ ದರ ಏರಿಕೆ: ರಾಜಕೀಯ ಮಾಡದೆ ವ್ಯಾಟ್ ಕಡಿಮೆ ಮಾಡಿ; ಸಿಎಂ ಸಿದ್ದರಾಮಯ್ಯಗೆ ಆರ್.ಅಶೋಕ್ ಒತ್ತಾಯ
- ಸಂಸ್ಕರಿಸದೆ ನದಿಗೆ ತ್ಯಾಜ್ಯ ಹರಿಸಿದರೆ ಕ್ರಿಮಿನಲ್ ಮೊಕದ್ದಮೆ: ಅರಣ್ಯ ಸಚಿವ ಈಶ್ವರ ಖಂಡ್ರೆ ಖಡಕ್ ಎಚ್ಚರಿಕೆ!
Author: admin
ಮಧುಗಿರಿ: ಕೆ ಎಸ್ ಆರ್ ಟಿ ಸಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಪಟ್ಟು ಇನ್ನಿಬ್ಬರ ಸ್ಥಿತಿ ಚಿಂತಾಜನಕವಾಗಿರುವ ಘಟನೆ, ಮಧುಗಿರಿ ತಾಲ್ಲೂಕು ಕೊಡಿಗೇನಹಳ್ಳಿ ಹೋಬಳಿ ದಂಡಿಪುರದ ವಿಜಯಾನಂದಿ ಕ್ರಾಸ್ ಬಳಿ ನಡೆದಿದೆ. ಅಪಘಾತಕ್ಕೆ ಬಲಿಯಾದವರು ವಾಟದ ಹೊಸಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ. ಮಹೇಂದ್ರ 36 ಮೃತಪಟ್ಟವರೆಂದು ಗುರುತಿಸಲಾಗಿದೆ. ಚರಣ್ ಹಾಗೂ ಅನಿಲ್ ಗಾಯಗೊಂಡವರಾಗಿದ್ದಾರೆ. ವಿಷಯ ತಿಳಿದ ಕೂಡಲೇ ಕೊಡಿಗೇನಹಳ್ಳಿ P S I ಶ್ರೀನಿವಾಸ್ ಪ್ರಸಾದ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ನಂತರ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಮದುವೆ ಹಿಂದಿನ ದಿನ ಸಿಹಿ ತಿಂಡಿ ನೀಡಿಲ್ಲ ಎಂದು ಮದುವೆಯನ್ನೇ ರದ್ದುಗೊಳಿಸಿದ ವಿಲಕ್ಷಣ ಘಟನೆಯೊಂದು ಮಡಿಕೇರಿಯ ಕಲ್ಯಾಣಮಂಟಪದಲ್ಲಿ ನಡೆದಿದೆ. ಹಾನಗಲ್ಲು ಗ್ರಾಮದ ಸಿದ್ಧಾರ್ಥ ಬಡಾವಣೆಯ ಯುವತಿಯ ವಿವಾಹವು ತುಮಕೂರು ಜಿಲ್ಲೆಯ ಯುವಕನೋರ್ವನೊಂದಿಗೆ ನಿಶ್ಚಯವಾಗಿತ್ತು. ಮೇ.5 ರಂದು ಜಾನಕಿ ಕನ್ವೆನ್ಶನ್ ಹಾಲ್ ನಲ್ಲಿ ವಿವಾಹ ನಿಗದಿಯಾಗಿತ್ತು. ತುಮಕೂರಿನಿಂದ ವರನ ಕಡೆಯವರು ಶನಿವಾರ ಸಂಜೆ ಮಂಟಪಕ್ಕೆ ಬಂದಿದ್ದರು. ಆದರೆ ರಾತ್ರಿಯ ಊಟದಲ್ಲಿ ಸಿಹಿತಿಂಡಿ ಇಲ್ಲ ಎಂಬ ಕಾರಣಕ್ಕೆ ತಗಾದೆ ತೆಗೆಯಲಾಗಿದ್ದು, ಗಲಾಟೆ ಶುರುವಾಗಿದೆ. ಮಂಟಪದಲ್ಲಿಯೇ ತಳ್ಳಾಟ, ನೂಕಾಟ ನಡೆದಿದೆ. ಮರುದಿನ ಬೆಳಗ್ಗೆ ಅಂದರೆ ರವಿವಾರ ಪ್ರಕರಣ ಪೊಲೀಸ್ ಠಾಣೆಗೆ ಹೋಗಿದೆ. ಶನಿವಾರ ಮದುವೆ ಬೇಡ ಎಂದು ಉಂಗುರ ಕಳಚಿಟ್ಟಿದ್ದ ವರ, ರವಿವಾರ ನಾನು ಮದುವೆಯಾಗುತ್ತೇನೆ ಎಂದು ಹೊಸ ವರಸೆ ಪ್ರಾರಂಭಿಸಿದ್ದ. ಆದರೆ ಈ ದಿಢೀರ್ ಘಟನೆಯಿಂದ ವಧು ಮದುವೆಯೇ ಬೇಡ ಎಂದು ಪೊಲೀಸರಲ್ಲಿ ಹೇಳಿಕೆ ನೀಡಿದ್ದಾಳೆ. ಮದುವೆಗೆ ಖರ್ಚು ಮಾಡಿದ ಹಣವನ್ನು ವರನ ಕಡೆಯವರು ನೀಡಬೇಕೆಂದು ವಧುವಿನ ಕಡೆಯವರು ಪೊಲೀಸ್ ಠಾಣೆ ಮುಂದೆ ಹೇಳಿದ್ದಾರೆ.…
ಇಷ್ಟು ದಿನ ಐಪಿಎಲ್ ನಲ್ಲಿ ಮಾತ್ರ ಬೆಟ್ಟಿಂಗ್ ನಡೆಯುತ್ತಿತ್ತು. ಆದರೆ ಈಗ ವಕೀಲರಿಬ್ಬರು ಲೋಕಸಭಾ ಚುನಾವಣೆಯ ಅಖಾಡದಲ್ಲಿರುವ ತಮ್ಮ ನೆಚ್ಚಿನ ಅಭ್ಯರ್ಥಿಗಳ ಪರ ಲಕ್ಷ ಲಕ್ಷ ಹಣ ಬೆಟ್ಟಿಂಗ್ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಮೇ 7ರಂದು 3ನೇ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಚುನಾವಣೆಯಲ್ಲಿ ಉತ್ತರ ಪ್ರದೇಶದ ಬದೌನ್ ಕ್ಷೇತ್ರದಿಂದ ಸ್ಪರ್ಧಿಸಿರುವ ಇಬ್ಬರು ನೆಚ್ಚಿನ ಅಭ್ಯರ್ಥಿಗಳ ಮೇಲೆ ವಕೀಲರಿಬ್ಬರು ತಲಾ 2 ಲಕ್ಷ ರೂ. ಬಾಜಿ ಕಟ್ಟಿದ್ದಾರೆ. ಉತ್ತರ ಪ್ರದೇಶದ ಬದೌನ್ ಕ್ಷೇತ್ರದಲ್ಲಿ ವಕೀಲ ಸತ್ಯೇಂದ್ರ ಪಾಲ್ ಮತ್ತು ವಕೀಲ ದಿವಾಕರ್ ವರ್ಮಾ ಬೆಟ್ಟಿಂಗ್ ದಾರರಾಗಿದ್ದಾರೆ ಎನ್ನಲಾಗಿದೆ. ಸತ್ಯೇಂದ್ರ ಪಾಲ್ ಸಮಾಜವಾದಿ ಪಕ್ಷದ ಅಭ್ಯರ್ಥಿ ಆದಿತ್ಯ ಯಾದವ್ ಮೇಲೆ, ದಿವಾಕರ್ ವರ್ಮಾ ಅವರು ಬಿಜೆಪಿಯ ದಿಗ್ವಿಜಯ್ ಸಿಂಗ್ ಶಾಕ್ಯಾ ಅವರು ಲೀಡ್ ನಲ್ಲಿ ಗೆಲ್ಲುತ್ತಾರೆ ಎಂದು ಬೆಟ್ಟಿಂಗ್ ಕಟ್ಟಿದ್ದಾರೆ. ಇದರಲ್ಲಿ ಸೋತವರು ಮತ್ತೊಬ್ಬ ವಕೀಲರಿಗೆ 2 ಲಕ್ಷ ರೂ. ನೀಡುವುದಾಗಿ ಬೆಟ್ಟಿಂಗ್ ಕಟ್ಟಿದ್ದಾರೆ. ಇದನ್ನೂ ಲೀಗಲ್ ಮಾಡಿದ್ದು, ನಾಲ್ವರು ಸಾಕ್ಷಿಗಳ ಸಹಿಯೊಂದಿಗೆ…
ವೀಡಿಯೋಗಳನ್ನು ಯಾರು ವೈರಲ್ ಮಾಡಿದ್ದಾರೆ ಎನ್ನುವುದಕ್ಕಿಂತ, ಸಾರ್ವಜನಿಕ ಜೀವನದಲ್ಲಿ ಹೇಗೆ ವರ್ತಿಸುತ್ತೇವೆ ಎಂಬುದು ಮುಖ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದು, ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ಹಾಗೂ ರೇವಣ್ಣ ಬಂಧನದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಪ್ರಕರಣದ ತನಿಖೆಯನ್ನು ಎಸ್ಐಟಿ ನಡೆಸುತ್ತಿದೆ. ಗಂಭೀರ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿರುವುದರಿಂದ ರೇವಣ್ಣ ಬಂಧನವಾಗಿದೆ. ಈ ರೀತಿ ಆಗಬಾರದಿತ್ತು ಎಂದಿದ್ದಾರೆ. ಹಲವಾರು ಮಹಿಳೆಯರು ದೂರು ಕೊಟ್ಟಿದ್ದಾರೆ. ಪ್ರಜ್ವಲ್ ರೇವಣ್ಣ ಸಹ ಅರೆಸ್ಟ್ ಆಗಲೇಬೇಕು. ಪ್ರಕರಣದ ತನಿಖೆ ಸೂಕ್ತ ರೀತಿಯಲ್ಲಿ ಆಗಬೇಕು. ಈ ವಿಚಾರದಲ್ಲಿ ನಮ್ಮ ಪಕ್ಷದ ನಿಲವು ಸ್ಪಷ್ಟವಾಗಿದೆ ಎಂದಿದ್ದಾರೆ. ರೇವಣ್ಣರಿಗೆ ಸಾಕಷ್ಟು ವಯಸ್ಸಾಗಿದೆ ಇದು ದುರ್ದೈವ. ಸಾರ್ವಜನಿಕ ಜೀವನದಲ್ಲಿ ಹೇಗೆ ವರ್ತನೆ ಮಾಡುತ್ತೇವೆ ಎಂಬುದು ಬಹಳ ಮುಖ್ಯ. ವೀಡಿಯೋ ರಿಲೀಸ್ ಆಗಿರುವುದು ಬೇಸರದ ವಿಚಾರ. ಈ ರೀತಿಯ ಘಟನೆ ಆಗಬಾರದಿತ್ತು. ವೀಡಿಯೋ ನನ್ನದಲ್ಲಾ ಎಂದರೆ ನಾವು ಎಫ್ಎಸ್ಎಲ್ ಗೆ ಕಳುಹಿಸುತ್ತವೆ. ವೀಡಿಯೋ ಯಾರು ರಿಲೀಸ್ ಮಾಡಿದರು ಅನ್ನೋದು…
ಸಂಗೀತ ಕಾರ್ಯಕ್ರಮವೊಂದರಲ್ಲಿ ಬಾಲಿವುಡ್ ನ ಖ್ಯಾತ ಗಾಯಕಿ ಮೇಲೆ ಅಭಿಮಾನಿಯೊಬ್ಬ ಬಾಟಲಿ ಎಸೆದ ಘಟನೆ ಡೆಹ್ರಾಡೋನ್ ನಲ್ಲಿ ನಡೆದಿದೆ. ಸುನಿಧಿ ಚೌಹಾಣ್ ಬಿಟೌನ್ ಖ್ಯಾತ ಗಾಯಕಿಯರಲ್ಲಿ ಒಬ್ಬರು. ಇತ್ತೀಚಿನ ದಿನಗಳಲ್ಲಿ ಅನೇಕ ಮ್ಯೂಸಿಕ್ ಕಾನ್ಸಾರ್ಟ್ ಗಳನ್ನು ನೀಡುತ್ತಿದ್ದಾರೆ. ಅವರ ಕಾರ್ಯಕ್ರಮ ನೋಡಲು ಅಪಾರ ಮಂದಿ ಬರುತ್ತಾರೆ. ಡೆಹ್ರಾಡೋನ್ ನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಸುನಿಧಿ ಹಾಡುತ್ತಿದ್ದಾಗ ಅವರತ್ತ ಅಭಿಮಾನಿಯೊಬ್ಬ ಪ್ಲ್ಯಾಸ್ಟಿಕ್ ಬಾಟಲಿಯನ್ನು ಎಸೆದಿದ್ದಾನೆ. ಆದರೆ ಇದರಿಂದ ವಿಚಲಿತರಾಗದ ಸುನಿಧಿ, “ಬಾಟಲಿಗಳನ್ನು ಎಸೆಯುವುದರಿಂದ ಏನಾಗುತ್ತದೆ? ಏನೂ ಇಲ್ಲ. ಇದು ಶೋಗೆ ಅಡ್ಡಿ ಆಗುತ್ತದೆ. ನಿಮಗೆ ಅದು ಬೇಕೇ?” ಎಂದು ಕೇಳಿದ್ದಾರೆ. ಇದಕ್ಕೆ ಎಲ್ಲರೂ ಒಟ್ಟಾಗಿ ಒಂದೇ ಧ್ವನಿಯಲ್ಲಿ “ಇಲ್ಲ” ಎಂದು ಹೇಳಿದ್ದಾರೆ. ಕಾರ್ಯಕ್ರಮದ ಬಳಿ ಸುನಿಧಿ ಕಾನ್ಸಾರ್ಟ್ ಹಲವು ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಬಾಲಿವುಡ್ ನಲ್ಲಿ ‘ಶೀಲಾ ಕಿ ಜವಾನಿ’, ‘ಕಮ್ಲಿ’, ‘ಕ್ರೇಜಿ ಕಿಯಾ ರೇ’, ‘ಆಜಾ ನಾಚ್ಲೆ’, ‘ಬೀಡಿ, ‘ದೇಸಿ ಗರ್ಲ್’, ‘ಧೂಮ್ ಮಚಾಲೆ’, ಹೀಗೆ ಹತ್ತಾರು ಸೂಪರ್ ಹಿಟ್…
ಲೋಕಸಭೆ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಟಿ ಕಂಗನಾ ರಣಾವತ್, ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಬದಲು ತಮ್ಮದೇ ಪಕ್ಷದ ತೇಜಸ್ವಿ ಸೂರ್ಯರನ್ನು ಟೀಕಿಸಿ ಪೇಚಿಗೆ ಸಿಲುಕಿದ್ದಾರೆ. ತೇಜಸ್ವಿ ಮತ್ತು ತೇಜಸ್ವಿ ಎಂಬ ಹೆಸರಿನಲ್ಲಿರುವ ಸಾಮ್ಯತೆಯಿಂದಾಗಿ ಕಂಗನಾ ರಣಾವತ್ ಈ ಯಡವಟ್ಟು ಮಾಡಿಕೊಂಡಿದ್ದಾರೆ. “ಹಾಳಾದ ರಾಜಕುಮಾರರ ಪಕ್ಷವೊಂದಿದೆ… ಚಂದ್ರನ ಮೇಲೆ ಆಲೂಗಡ್ಡೆ ಬೆಳೆಯಲು ಬಯಸುವ ರಾಹುಲ್ ಗಾಂಧಿ ಇರಬಹುದು ಅಥವಾ ಗೂಂಡಾಗಿರಿ ಮಾಡುವ ಮತ್ತು ಮೀನು ತಿನ್ನುವ ತೇಜಸ್ವಿ ಸೂರ್ಯ ಇರಬಹುದು” ಎಂದು ಕಂಗನಾ ಹೇಳಿದ್ದಾರೆ. ವಾಸ್ತವವಾಗಿ ಆರ್ ಜೆಡಿ ನಾಯಕ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಕಂಗನಾ ವಾಗ್ದಾಳಿಯಲ್ಲಿ ಟಾರ್ಗೆಟ್ ಆಗಬೇಕಿತ್ತು. ತೇಜಸ್ವಿ ಯಾದವ್ ನವರಾತ್ರಿ ವೇಳೆ ಮೀನು ತಿನ್ನುತ್ತಿರುವ ವೀಡಿಯೋ ಇತ್ತೀಚೆಗೆ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವೆ ಪ್ರಮುಖ ಸಂಘರ್ಷದ ವಿಷಯವಾಗಿ ಪರಿಣಮಿಸಿತ್ತು. ಇದನ್ನೇ ಮುಂದಿಟ್ಟುಕೊಂಡು ಕಂಗನಾ ರಣಾವತ್ ಟೀಕಾಪ್ರಹಾರ ನಡೆಸಲು ಮುಂದಾಗಿದ್ದರು. ಆದರೆ ತೇಜಸ್ವಿ ಯಾದವ್ ಬದಲು, ಬೆಂಗಳೂರು…
ಖಡಕ್ ಪೊಲೀಸ್ ಅಧಿಕಾರಿಯೆಂದೇ ಕರ್ನಾಟಕದಾದ್ಯಂತ ಜನಪ್ರಿಯರಾಗಿದ್ದ ಕೆ. ಅಣ್ಣಾಮಲೈ ಈಗ ರಾಜಕೀಯರಂಗದಲ್ಲಿ ಬ್ಯುಸಿಯಾಗಿದ್ದಾರೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಆಗಿ ಕೊನೆಯದಾಗಿ ಸೇವೆ ಸಲ್ಲಿಸಿದ್ದ ಅವರು 4 ವರ್ಷಗಳ ಹಿಂದೆ ರಾಜೀನಾಮೆ ನೀಡಿದ್ದರು. ಇದೀಗ ಅಣ್ಣಾಮಲೈ ಬಯೋಪಿಕ್ ವಿಚಾರ ಚರ್ಚೆಗೆ ಬಂದಿದೆ. ಕೆ ಅಣ್ಣಾಮಲೈ ರಾಜೀನಾಮೆ ವಿಚಾರ ಭಾರೀ ಅಚ್ಚರಿಗೆ ಕಾರಣವಾಗಿತ್ತು. ರಾಜಕೀಯರಂಗ ಸೇರಲು ಅವರು ಈ ನಿರ್ಧಾರ ಕೈಗೊಂಡಿದ್ದಾಗ ಆಗ ಸುದ್ದಿಯಾಗಿತ್ತು. ಬಳಿಕ ಅದು ನಿಜವೂ ಆಗಿತ್ತು. ಸದ್ಯ ತಮಿಳುನಾಡಿನ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭೆ ಚುನಾವಣೆಯ ಕಣದಲ್ಲಿದ್ದಾರೆ. 9 ವರ್ಷಗಳ ಕಾಲ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ತಮ್ಮ ಖಡಕ್ ಕಾರ್ಯವೈಖರಿಯಿಂದ ಅಣ್ಣಾಮಲೈ ಕರ್ನಾಟಕ ಪೊಲೀಸ್ನ ಸಿಂಗಂ ಎಂದೇ ಖ್ಯಾತರಾಗಿದ್ದರು. 1984ರ ಜೂ.4ರಂದು ಹುಟ್ಟಿದ ಅಣ್ಣಾಮಲೈ ಮೂಲತಃ ತಮಿಳುನಾಡಿನ ಕೊಯಮತ್ತೂರಿನವರು. ಬಿಇ ಎಂಜಿನಿಯರಿಂಗ್ ಮಾಡಿ ಎಂಬಿಎ ಪೂರ್ಣಗೊಳಿಸಿದ ಅಣ್ಣಾಮಲೈ 2011ರ ಬ್ಯಾಚ್ ನ ಐಪಿಎಸ್ ಅಧಿಕಾರಿ ಆಗಿದ್ದರು. ಕಾರ್ಕಳ ಉಪವಿಭಾಗದ ಎಎಸ್ಪಿಯಾಗಿ 2011ರಲ್ಲಿ ವೃತ್ತಿ ಆರಂಭಿಸಿ ಅಣ್ಣಾಮಲೈ 2013ರಲ್ಲಿ ಉಡುಪಿ…
ತುಮಕೂರು: ತುಮಕೂರು ಜಿಲ್ಲೆ ತಿಪಟೂರು ನಗರದ ಕೋಡಿ ಸರ್ಕಲ್ ನಲ್ಲಿ ಸರ್ಕಾರದ ಯಾವುದೇ ಪೂರ್ವಾನುಮತಿ ಪಡೆಯದೆ ಪ್ರತಿಮೆ ಸ್ಥಾಪನೆ ಮಾಡಿರುವುದರಿಂದ ತಾಲ್ಲೂಕು ಆಡಳಿತ ಪ್ರತಿಮೆ ತೆರವಿಗೆ ಮುಂದಾಗಿದೆ. ಪ್ರತಿಮೆ ತೆರವುಗೊಳಿಸಲು ತಾಲ್ಲೂಕು ಆಡಳಿತ ಮುಂದಾದ ಹಿನ್ನೆಲೆ, ಕೋಡಿಸರ್ಕಲ್ ವೃತ್ತದಲ್ಲಿ ಸಾವಿರಾರು ಜನ ಜಮಾವಣೆಗೊಂಡು ಪ್ರತಿಭಟನೆಗೆ ಮುಂದಾದರು. ಸರ್ಕಲ್ ನಲ್ಲಿ ಅನಧಿಕೃತವಾಗಿ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಸ್ಥಾಪನೆಯ ಪ್ರತಿಮೆ ತೆರವುಗೊಳಿಸಲು ಮುಂದಾದ ತಾಲೂಕು ಆಡಳಿತದ ಕ್ರಮ ಖಂಡಿಸಿ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಕೋಡಿ ಸರ್ಕಲ್ ನಲ್ಲಿ ನಗರಸಭೆ ವತಿಯಿಂದ ಅಭಿವೃದ್ಧಿಪಡಿಸಿ ಸರ್ಕಲ್ ನಲ್ಲಿ ಸ್ಥಾಪಿಸಲಾಗಿದ್ದ ಮಂಟಪದ ಒಳಗೆ, ರಾತ್ರೋರಾತ್ರಿ ಕೆಲ ವ್ಯಕ್ತಿಗಳು ಜಗಜ್ಯೋತಿ ಬಸವೇಶ್ವರರ ಪುತ್ತಳಿಯನ್ನ ತಂದಿಟ್ಟು ಪೂಜೆ ಸಲ್ಲಿಸಲಾಗಿದ್ದು, ಪ್ರತಿಮೆಯನ್ನ ಯಾವುದೇ ಅಧಿಕೃತ ಅನುಮತಿ ಪಡೆಯದೆ ಏಕಾಏಕಿ ಸ್ಥಾಪನೆ ಮಾಡಿರುವುದು ಕಾನೂನುಬಾಹಿರವಾಗಿದೆ ಎಂದು ಆರೋಪಿಸಲಾಯಿತು. ಸಾರ್ವಜನಿಕ ಸ್ಥಳದಲ್ಲಿ ಪ್ರತಿಮೆ ಸ್ಥಾಪನೆಗೆ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅವಕಾಶ ಇರುವುದಿಲ್ಲ. ಯಾವುದೇ ಅನುಮತಿ ಪಡೆಯದೆ ಪ್ರತಿಮೆ ಸ್ಥಾಪನೆ ಮಾಡಿರುವುದು ಕಾನೂನುಬಾಹಿರವಾಗಿದೆ ಎಂದು ತಿಪಟೂರು…
ಮಾಲೀಕನ ಜೋಕ್ ಅನ್ನು ಗಂಭೀರವಾಗಿ ಪರಿಗಣಿಸಿದ ಹೋಟೆಲ್ ಸಹಾಯಕನೊಬ್ಬ ಅದೇ ಜೋಕ್ ಅನ್ನು ರಿಯಲ್ ಆಗಿ ಮಾಡಲು ಹೋಗಿ ಜೈಲು ಪಾಲಾಗಿದ್ದಾನೆ. ಆತ ಕೆಲಸಕ್ಕಿದ್ದ ಅದೇ ಹೋಟೆಲ್ ಮುಂದೆ ನಿಲ್ಲಿಸಿದ್ದ ಬೈಕ್ ನ್ನು ಕದ್ದು, ಇದೀಗ ಜೈಲು ಪಾಲಾಗಿರುವ ವಿಚಿತ್ರ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ಕೇರಳದ ತಲಶ್ಶೇರಿ ಮೂಲದ ಶಹೀಮ್ ಸಿ ಅಲಿಯಾಸ್ ಶಾಜ್ ಎಂಬ ಹುಡುಗನೊಬ್ಬ ಮಡಿವಾಳದ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ. ಅದ್ಯಾಕೋ ಆತನಿಗೆ ತನ್ನ ಕೇರಳದ ಮನೆಯನ್ನು ಒಮ್ಮೆ ಭೇಟಿ ಮಾಡಿ ಬರಬೇಕೆಂದು ಅನ್ನಿಸಿದೆ. ಹಾಗಾಗಿ ತನ್ನ ಮಾಲೀಕನಿಂದ ತನಗೆ ಬರಬೇಕಾಗಿದ್ದ ಹಣವನ್ನು ಪಾವತಿಸುವಂತೆ ಆತ ಮಾಲೀಕನನ್ನು ಕೇಳಿಕೊಂಡಿದ್ದಾನೆ. ತನ್ನ ಸಂಬಳವನ್ನು ಪಾವತಿಸುವಂತೆ ಶಹೀಮ್ ಮಾಲೀಕರನ್ನು ಕೇಳಿದ್ದಾನೆ. ಬಾಕಿ ಸಂಬಳ ನೀಡಿದರೆ ತಾನು ಕೇರಳಕ್ಕೆ ಭೇಟಿ ನೀಡುವುದಾಗಿ ಹೇಳಿದರೂ ಮಾಲೀಕರು ಆತನಿಗೆ ಸಂಬಳ ನೀಡಲು ನಿರಾಕರಿಸಿದ್ದಾರೆ. ಸಂಬಳ ಕೊಡುವ ಬದಲು ಆ ಮಾಲಿಕ ನೌಕರನಿಗೆ ಒಂದು ಜೋಕ್ ಮಿಶ್ರಿತ ಸಲಹೆ ನೀಡಿದ್ದಾನೆ. ಇದೇ ಹೋಟೆಲ್ ಮುಂದೆ ನಿಲ್ಲಿಸಿದ್ದ ಬೈಕಿನ…
ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನೆಯನ್ನು ಗುರಿಯಾಗಿಸಿ ಮತ್ತೊಂದು ಭೀಕರ ಭಯೋತ್ಪಾದನಾ ದಾಳಿ ನಡೆದಿದೆ. ಭಾರತೀಯ ವಾಯು ಪಡೆಯ ಒಬ್ಬ ಯೋಧ ಮೃತಪಟ್ಟಿದ್ದು, ಇನ್ನೂ ಐವರು ಗಾಯಗೊಂಡ ಘಟನೆ ನೆನ್ನೆ ವರದಿಯಾಗಿದೆ. ಐಎಎಫ್ ನ ಒಂದು ವಾಹನ ಸೇರಿದಂತೆ ಎರಡು ವಾಹನಗಳ ಮೇಲೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಸುರಾನ್ ಕೋಟ್ ಪ್ರದೇಶದಲ್ಲಿ ಉಗ್ರರು ಭೀಕರ ಸ್ವರೂಪದ ಗುಂಡಿನ ದಾಳಿ ನಡೆಸಿದ್ದಾರೆ. ಗಾಯಗೊಂಡಿರುವ ಐವರಲ್ಲಿ, ವಾಯು ಸೇನೆಯ ಒಬ್ಬ ಯೋಧನ ಸ್ಥಿತಿ ಗಂಭೀರವಾಗಿದೆ. ಅವರೆಲ್ಲರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಉಧಾಂಪುರದ ಕಮಾಂಡ್ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಗಳನ್ನು ರವಾನಿಸಲಾಗಿದೆ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಸ್ಥಳೀಯ ರಾಷ್ಟ್ರೀಯ ರೈಫಲ್ಸ್ ಘಟಕವು ಇಡೀ ಪ್ರದೇಶವನ್ನು ನಿರ್ಬಂಧಿಸಿದ್ದು, ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಭದ್ರತಾ ಪಡೆಗಳ ಮೂಲಗಳು ತಿಳಿಸಿವೆ. ಐಎಎಫ್ ನ ಗರುಡ ವಿಶೇಷ ಪಡೆಗಳು ಇಲ್ಲಿ ಕಾರ್ಯಾಚರಣೆಗೆ ಸನ್ನದ್ಧವಾಗಿದ್ದು, ಸೇನೆಯ ಹೆಚ್ಚುವರಿ…